AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM of Karnataka

CM of Karnataka

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ರಾಜ್ಯದ ಸರಕಾರದ ಮುಖ್ಯಸ್ಥರಾಗಿರುತ್ತಾರೆ. ಅಲ್ಲದೇ ಮುಖ್ಯಮಂತ್ರಿಯು ರಾಜ್ಯದ ಕಾರ್ಯಾಂಗದ ಮುಖ್ಯಸ್ಥರು ಹೌದು. ಮುಖ್ಯಮಂತ್ರಿಯನ್ನು ರಾಜ್ಯದ ವಿಧಾನ ಸಭೆಯಲ್ಲಿ ಬಹುಮತ ಪಡೆದ ಪಕ್ಷ ಅಥವಾ ಪಕ್ಷಗಳ ಒಕ್ಕೂಟದ ಶಾಸಕರು ಆರಿಸುತ್ತಾರೆ. ಇವರ ಅಧಿಕಾರಾವಧಿ ಐದು ವರ್ಷ, ಪುನರಾಯ್ಕೆಯಾಗುವ ಅವಕಾಶವಿರುತ್ತದೆ.

ಮುಖ್ಯಮಂತ್ರಿಯ ಸಲಹೆಯ ಮೇರೆಗೆ ರಾಜ್ಯಪಾಲರು ಇತರ ಸಚಿವರನ್ನು ನೇಮಿಸುತ್ತಾರೆ. ಮುಖ್ಯಮಂತ್ರಿಗಳು ತಮ್ಮ ಸಹೋದ್ಯೋಗಿಗಳ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ಮುಕ್ತ ಹಸ್ತವನ್ನು ಹೊಂದಿದ್ದಾರೆ. ರಾಜ್ಯಪಾಲರು ಸಚಿವಾಲಯಕ್ಕೆ ಸೇರಿಸಬೇಕಾದ ಶಾಸಕರ ಹೆಸರನ್ನು ಸೂಚಿಸಬಹುದು, ಆದರೆ ಅವರು ಯಾವುದೇ ಶಾಸಕರನ್ನು ಸಚಿವಾಲಯಕ್ಕೆ ಸೇರಿಸಿಕೊಳ್ಳಲು ಒತ್ತಾಯಿಸುವಂತಿಲ್ಲ. ಮುಖ್ಯಮಂತ್ರಿಗಳ ಸಲಹೆಯ ಮೇರೆಗೆ ರಾಜ್ಯಪಾಲರು ಮಂತ್ರಿಗಳಿಗೆ ಇಲಾಖೆಗಳು ಅಥವಾ ಖಾತೆಗಳನ್ನು ನಿಯೋಜಿಸುತ್ತಾರೆ.

ಸರ್ಕಾರ ವಾಸ್ತವವಾಗಿ ಮುಖ್ಯಮಂತ್ರಿಯ ಮೇಲೆ ಅವಲಂಬಿತವಾಗಿದೆ. ಆದ್ದರಿಂದ, ಮುಖ್ಯಮಂತ್ರಿಗಳು ತಮ್ಮ ಸಚಿವ ಸಂಪುಟಕ್ಕೆ ತಮಗೆ ಬೇಕಾದ ಪಕ್ಷದ ಶಾಸಕರುಗಳನ್ನು ಸೇರಿಸಿಕೊಳ್ಳಬಹುದು. ಅಲ್ಲದೇ ಸಚಿವರ ಸಭೆ, ಸಚಿವ ಸಂಪುಟ ಪುನರ್​ ರಚನೆ ಮಾಡಿಕೊಳ್ಳಬಹುದು. ಅಲ್ಲದೇ ಸಚಿವರ ರಾಜೀನಾಮೆ ಪಡೆಯುವ ಅಧಿಕಾರ ಸಿಎಂ ಹೊಂದಿರುತ್ತಾರೆ. ಒಂದು ವೇಳೆ ಮಂತ್ರಿ ರಾಜೀನಾಮೆ ನೀಡಲು ನಿರಾಕರಿಸಿದರೆ ಸಿಎಂ, ರಾಜ್ಯಪಾಲರಿಂದ ವಜಾಗೊಳಿಸಬಹುದು.

ಇನ್ನೂ ಹೆಚ್ಚು ಓದಿ

ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಿದ ಡಿಕೆ ಶಿವಕುಮಾರ್, ರೌಡಿ ನಿಗ್ರಹ ತಂಡ ರಚನೆಗೆ ಆದೇಶ

ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಆರೋಪಗಳು ಕೇಳಿಬರುತ್ತಿವೆ. ಪುಡಿ ರೌಡಿಗಳ ಅಟ್ಟಹಾಸ, ಡ್ರಗ್ಸ್, ಗಾಂಜಾ, ಜೂಜಾಟ, ಅಕ್ರಮ ಮರಳು ದಂಧೆ, ಮಟ್ಕಾ ಸೇರಿದಂತೆ ಅಪರಾಧ ಪ್ರಕರಣಗಳು ಹೆಚ್ಚಿತ್ತಿವೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರಿನಲ್ಲಿ ಕೊಲೆ, ಸುಲಿಗೆ, ಡ್ರಗ್ಸ್ ದಂಧೆ ಎಗ್ಗಿಲ್ಲದೇ ನಡೆಯುತ್ತಿದ್ದು, ಇದೀಗ ಇವುಗಳಿಗೆ ಕಡಿವಾಣ ಹಾಕಲು ನೂತನ ಸಿಎಂ ಡಿಕೆ ಶಿವಕುಮಾರ್  (DK Shivakumar) ಸಮರ ಸಾರಿದ್ದಾರೆ.

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆಶಿ, ಅಧಿಕಾರಿಗಳಿಗೆ ಕೊಟ್ಟ ಖಡಕ್ ಸೂಚನೆಗಳೇನು?

ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಮರುದಿನವೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿದ್ದಾರೆ. ಇಂದು (ಜೂನ್ 04) ವಿಧಾನಸೌಧದಲ್ಲಿ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳ ಸಭೆ ನಡೆಸಿದ ಡಿಕೆ ಶಿವಕುಮಾರ್, ತಮ್ಮ ಆಡಳಿತದ ವೈಖರಿ ಮತ್ತು ನೀತಿಗಳನ್ನು ಅಧಿಕಾರಿಗಳ ಮುಂದೆ ಎಳೆ ಎಳೆಯಾಗಿ ಬಿಚ್ಚಿಡುವ ಮೂಲಕ ಅದಕ್ಕೆ ತಕ್ಕಂತೆ ಜನಪರವಾದ ಕೆಲಸ ಮಾಡಬೇಕೆಂದು ತಮ್ಮದೇ ಶೈಲಿಯಲ್ಲಿ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನ ನೀಡಿದ್ದಾರೆ.

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು (ಜೂನ್ 03) ಪ್ರಮಾಣವಚನ ಸ್ವೀಕರಿಸಿದ್ದು, ಇವರ ಜೊತೆ ಓರ್ವ ಡಿಸಿಎಂ ಹಾಗೂ 12 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬಳಿಕ ಡಿಕೆ ಶಿವಕುಮಾರ್ ಅವರು ತಮ್ಮ ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದು, ವೇಳೆ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಸಿಎಂ ಆದ ಬಳಿಕ ವಿದ್ಯಾರ್ಥಿಗಗಳಿಗೆ ಸೇರಿದಂತೆ ಆರು ಬಂಪರ್ ಕೊಡುಗೆ ಘೋಷಣೆ ಮಾಡಿದ್ದಾರೆ.

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್ ಅರವಿಂದ್

ಕರ್ನಾಟಕದ ಹೊಸ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ನಟ, ನಿರ್ದೇಶಕ, ನಿರೂಪಕ ರಮೇಶ್ ಅರವಿಂದ್ ಕೂಡ ಸಾಕ್ಷಿಯಾದರು. ಬಳಿಕ ಅವರು ಟಿವಿ9 ಜೊತೆ ಮಾತನಾಡಿದರು. ಡಿಕೆ ಶಿವಕುಮಾರ್ ಮತ್ತು ತಮ್ಮ ನಡುವಿನ ಒಡನಾಟವನ್ನು ರಮೇಶ್ ಅರವಿಂದ್ ಮೆಲುಕು ಹಾಕಿದರು.

  • Sunil MH
  • Updated on: Jun 3, 2026
  • 7:20 pm

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಕುಟುಂಬದವರು ಮತ್ತು ಆಪ್ತರು ಈ ಕ್ಷಣಕ್ಕೆ ಸಾಕ್ಷಿ ಆಗಿದ್ದಾರೆ. ಮಾಜಿ ಸಂಸದೆ, ನಟಿ ರಮ್ಯಾ ದಿವ್ಯ ಸ್ಪಂದನಾ ಕೂಡ ಬಂದು ಪ್ರಮಾಣವಚನವನ್ನು ವೀಕ್ಷಿಸಿದ್ದಾರೆ. ಈ ವೇಳೆ ಅವರು ನೀಡಿದ ಪ್ರತಿಕ್ರಿಯೆ ಇಲ್ಲಿದೆ.

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್!

ಡಿ ಕೆ. ಶಿವಕುಮಾರ್ (DK Shivakumar) ಅವರು ಕೈಯಲ್ಲಿ ಸಂವಿಧಾನ ಹಿಡಿದುಕೊಂಡು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಡಿಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇನ್ನು ಡಿಕೆ ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವಿಶೇಷ ಅಂದ್ರೆ ಡಿಕೆಶಿ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆ ತೊಟ್ಟು ಗಮನಸೆಳೆದ ಡಿಕೆಶಿ, ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ದೀರ್ಘದಂಡ ನಾಮಸ್ಕಾರ ಮಾಡಿದರು. ಬಳಿಕ ಬಳಿಕ ವೇದಿಕೆ ಮೇಲೆಯೇ ಇರಿಸಿದ್ದ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬಳಿಕ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.

ಸಿಎಂ ಆಗುವ ಮುನ್ನವೇ ಡಿಕೆಶಿ ತಂತ್ರಗಾರಿಕೆ: ರಾಜಕೀಯ ಬದ್ಧವೈರಿಗಳ ಭೇಟಿ ಹಿಂದಿನ ಲೆಕ್ಕಾಚಾರವೇನು?

ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದ್ರೆ, ಅಧಿಕಾರ ಸ್ವೀಕಾರ ಮುನ್ನ ಡಿಕೆ ಶಿವಕುಮಾರ್ ಅವರು ರಾಜ್ಯದ ಇಬ್ಬರು ಪ್ರಭಾವಿ ಜಾತಿ ಸಮುದಾಯಗಳ ಪ್ರಶ್ನಾತೀತ ನಾಯಕರನ್ನು ಭೇಟಿ ಮಾಡಿದ್ದಾರೆ. ಈ ಮೂಲಕ ಇಡೀ ರಾಜ್ಯಕ್ಕೆ ಅತ್ಯಂತ ಸ್ಪಷ್ಟ ಹಾಗೂ ಪ್ರಬಲ ಸಂದೇಶ ರವಾನಿಸಿದ್ದಾರೆ. ಜೊತೆಗೆ ಇಬ್ಬರು ನಾಯಕರಿಗೆ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ.

  • Sunil MH
  • Updated on: Jun 3, 2026
  • 2:59 pm

ಡಿಕೆ ಶಿವಕುಮಾರ್ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್

ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಶುರುವಾಗಿದ್ದು, ಅವರೊಂದಿಗೆ ಇನ್ನುಳಿದ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಡಾ. ಜಿ.ಪರಮೇಶ್ವರ್ ಅವರು ಏಕೈಕ ಉಪಮುಖ್ಯಮಂತ್ರಿಯಾಗಿ ಪ್ರದಗ್ರಹ ಮಾಡಲಿದ್ದಾರೆ. ಮೂರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ರಾಜ್ಯ ನಾಯಕರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೈಕಮಾಂಡ್ ಇದಕ್ಕೆ ಬ್ರೇಕ್ ಹಾಕಿದ್ದು, ದಲಿತ ಪರಮೇಶ್ವರ್ ಅವರನ್ನು ಮಾತ್ರ ಡಿಸಿಎಂ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ. ಇನ್ನುಳಿಂದತೆ 12 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

DKS Oath Ceremony: ಡಿಕೆ ಶಿವಕುಮಾರ್ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು

ಚಿತ್ರದುರ್ಗ ತಾಲೂಕಿನ ಮಾಡನಾಯಕನಹಳ್ಳಿಯಲ್ಲಿ ನೊಣವಿನಕೆರೆ ಶ್ರೀಗಳು, ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭದ ಕುರಿತು ಮಾತನಾಡಿದ್ದಾರೆ. ಗುರು ನುಡಿದ ಮುಹೂರ್ತವು ರಾಜಯೋಗವಾಗಿದ್ದು, ಪರಿಪೂರ್ಣವಾಗಿದೆ ಎಂದು ಶ್ರೀಗಳು ಬಣ್ಣಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಶ್ರೀಮಠದ ಆಶೀರ್ವಾದ ಪಡೆದಿದ್ದಾರೆ ಮತ್ತು ಜಯಶೀಲರಾಗಿದ್ದಾರೆ ಎಂದು ಹೇಳಿದ್ದಾರೆ. ಸದಾ ಧರ್ಮದ ಧ್ವಜವನ್ನು ಹಿಡಿದು, ಆತಂಕವಿಲ್ಲದೆ ಜನರ ಸೇವೆ ಮಾಡಬೇಕು ಎಂಬುದು ತಮ್ಮ ಹಾರೈಕೆ ಎಂದು ಶ್ರೀಗಳು ತಿಳಿಸಿದ್ದಾರೆ. ಗುರುಗಳ ಆಶೀರ್ವಾದದಿಂದ ಸೇವೆ ಸಲ್ಲಿಸುವ ಶಕ್ತಿ ಸಾಮರ್ಥ್ಯ ಡಿ.ಕೆ. ಶಿವಕುಮಾರ್ ಅವರಿಗೆ ದೊರೆತಿದೆ ಎಂದು ಅವರು ನುಡಿದಿದ್ದಾರೆ.

DK Shivakumar Oath Taking Highlights: ಡಿಕೆ ಶಿವಕುಮಾರ್​ ಯುಗಾರಂಭ: ಇಂದಿನ ಪದಗ್ರಹಣದ ಬೆಳವಣಿಗೆಗಳ ಹೈಲೈಟ್ಸ್​​ ​​​

ಡಿಕೆ ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮ Highlights: ಸಿದ್ದರಾಮಯ್ಯ ರಾಜೀನಾಮೆ ನಂತರ ಕರ್ನಾಟಕದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್​ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 4 ಗಂಟೆ 05 ನಿಮಿಷಕ್ಕೆ ಲೋಕಭವನದಲ್ಲಿ ಪದಗ್ರಹಣ ನೆರವೇರಿತು. ಡಿಕೆ ಶಿವಕುಮಾರ್ ಜೊತೆಗೆ 13 ಜನರು ಸಚಿವ ಸ್ಥಾನವನ್ನು ಅಲಂಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಸೇರಿದಂತೆ ದೇಶದ ಪ್ರಮುಖ ಗಣ್ಯರು ಹಾಗೂ ಸರ್ವಧರ್ಮದ 55 ಧರ್ಮಗುರುಗಳು ಭಾಗಿಯಾಗಿದ್ದರು.

ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಪೂರ್ವಾಭಿಮುಖವಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿಕೆಶಿ

ಕರ್ನಾಟಕ ರಾಜಕಾರಣದಲ್ಲಿ(Karnataka Politics) ಡಿ.ಕೆ.ಶಿವಕುಮಾರ್ ಅಚಲ ದೈವಭಕ್ತಿ ಇಟ್ಟುಕೊಂಡವರು. ಹೀಗಾಗಿ ಅವರು ನಾಳೆ (ಜೂನ್ 03) ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸಮಾರಂಭಕ್ಕೆ 55 ಸ್ವಾಮೀಜಿಗಳು, ಫಾದರ್ ಹಾಗೂ ಮೌಲ್ವಿಗಳಿಗೆ ಆಹ್ವಾನ ನೀಡಲಾಗಿದ್ದು, ಪಟ್ಟಿ ಈ ಕೆಳಗಿನಂತಿದೆ.

‘ಅಂದೇ ಹೇಳಿದ್ವಿ ಡಿ. ಕೆ ಶಿವಕುಮಾರ್ ಸಿಎಂ ಆಗ್ತಾರೆ ಅಂತಾ’: ಪಂಚಮುಖಿ ಆಂಜನೇಯ ದೇವಸ್ಥಾನದ ಅರ್ಚಕರ ಸಂತಸ

ರಾಯಚೂರಿನ ಪ್ರಸಿದ್ಧ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಈ ಹಿಂದೆ ವಿಶೇಷ ಪೂಜೆ ಸಲ್ಲಿಸಿದ್ದ ನಾಲ್ವರು ನಾಯಕರು ಸಿಎಂ ಆಗಿದ್ದರು. ಇದೀಗ ಅಕ್ಟೋಬರ್ 2025 ರಲ್ಲಿ ಇಲ್ಲಿಗೆ ಭೇಟಿ ನೀಡಿ ಮಧು ಅಭಿಷೇಕ ಮಾಡಿಸಿದ್ದ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ೫ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಅವ್ರು ಸಿಎಂ ಆಗೇ ಆಗ್ತಾರೆ ಎಂದು ಅಂದೇ ಭವಿಷ್ಯ ನುಡಿದಿದ್ದ ಅರ್ಚಕ ಶಾಮಾಚಾರ್ಯರು ಸಂತಸ ಹಂಚಿಕೊಂಡಿದ್ದಾರೆ.

ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ