
CM of Karnataka
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ರಾಜ್ಯದ ಸರಕಾರದ ಮುಖ್ಯಸ್ಥರಾಗಿರುತ್ತಾರೆ. ಅಲ್ಲದೇ ಮುಖ್ಯಮಂತ್ರಿಯು ರಾಜ್ಯದ ಕಾರ್ಯಾಂಗದ ಮುಖ್ಯಸ್ಥರು ಹೌದು. ಮುಖ್ಯಮಂತ್ರಿಯನ್ನು ರಾಜ್ಯದ ವಿಧಾನ ಸಭೆಯಲ್ಲಿ ಬಹುಮತ ಪಡೆದ ಪಕ್ಷ ಅಥವಾ ಪಕ್ಷಗಳ ಒಕ್ಕೂಟದ ಶಾಸಕರು ಆರಿಸುತ್ತಾರೆ. ಇವರ ಅಧಿಕಾರಾವಧಿ ಐದು ವರ್ಷ, ಪುನರಾಯ್ಕೆಯಾಗುವ ಅವಕಾಶವಿರುತ್ತದೆ.
ಮುಖ್ಯಮಂತ್ರಿಯ ಸಲಹೆಯ ಮೇರೆಗೆ ರಾಜ್ಯಪಾಲರು ಇತರ ಸಚಿವರನ್ನು ನೇಮಿಸುತ್ತಾರೆ. ಮುಖ್ಯಮಂತ್ರಿಗಳು ತಮ್ಮ ಸಹೋದ್ಯೋಗಿಗಳ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ಮುಕ್ತ ಹಸ್ತವನ್ನು ಹೊಂದಿದ್ದಾರೆ. ರಾಜ್ಯಪಾಲರು ಸಚಿವಾಲಯಕ್ಕೆ ಸೇರಿಸಬೇಕಾದ ಶಾಸಕರ ಹೆಸರನ್ನು ಸೂಚಿಸಬಹುದು, ಆದರೆ ಅವರು ಯಾವುದೇ ಶಾಸಕರನ್ನು ಸಚಿವಾಲಯಕ್ಕೆ ಸೇರಿಸಿಕೊಳ್ಳಲು ಒತ್ತಾಯಿಸುವಂತಿಲ್ಲ. ಮುಖ್ಯಮಂತ್ರಿಗಳ ಸಲಹೆಯ ಮೇರೆಗೆ ರಾಜ್ಯಪಾಲರು ಮಂತ್ರಿಗಳಿಗೆ ಇಲಾಖೆಗಳು ಅಥವಾ ಖಾತೆಗಳನ್ನು ನಿಯೋಜಿಸುತ್ತಾರೆ.
ಸರ್ಕಾರ ವಾಸ್ತವವಾಗಿ ಮುಖ್ಯಮಂತ್ರಿಯ ಮೇಲೆ ಅವಲಂಬಿತವಾಗಿದೆ. ಆದ್ದರಿಂದ, ಮುಖ್ಯಮಂತ್ರಿಗಳು ತಮ್ಮ ಸಚಿವ ಸಂಪುಟಕ್ಕೆ ತಮಗೆ ಬೇಕಾದ ಪಕ್ಷದ ಶಾಸಕರುಗಳನ್ನು ಸೇರಿಸಿಕೊಳ್ಳಬಹುದು. ಅಲ್ಲದೇ ಸಚಿವರ ಸಭೆ, ಸಚಿವ ಸಂಪುಟ ಪುನರ್ ರಚನೆ ಮಾಡಿಕೊಳ್ಳಬಹುದು. ಅಲ್ಲದೇ ಸಚಿವರ ರಾಜೀನಾಮೆ ಪಡೆಯುವ ಅಧಿಕಾರ ಸಿಎಂ ಹೊಂದಿರುತ್ತಾರೆ. ಒಂದು ವೇಳೆ ಮಂತ್ರಿ ರಾಜೀನಾಮೆ ನೀಡಲು ನಿರಾಕರಿಸಿದರೆ ಸಿಎಂ, ರಾಜ್ಯಪಾಲರಿಂದ ವಜಾಗೊಳಿಸಬಹುದು.
ಹನಿ ಟ್ರ್ಯಾಪ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ ಖಡಕ್ ಮಾತು
ಸಚಿವರು ಮತ್ತು ಶಾಸಕರ ಮೇಲಿನ ಹನಿಟ್ರ್ಯಾಪ್ ಪ್ರಯತ್ನದ ಆರೋಪಗಳು ಕರ್ನಾಟಕ ವಿಧಾನಸಭೆಯಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿದೆ. ಪ್ರಕರಣವು ಕರ್ನಾಟಕದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಪ್ರತಿಪಕ್ಷ ನಾಯಕರು ಸಿಎಂ ಉತ್ತರಕ್ಕೆ ಆಗ್ರಹಿಸಿದ್ದರು. ಇದೀಗ, ಪ್ರಕರಣದಲ್ಲಿ ಯಾರೇ ಇದ್ದರೂ ರಕ್ಷಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
- Ganapathi Sharma
- Updated on: Mar 21, 2025
- 10:29 am
Bengaluru Second Airport: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ 3 ಸ್ಥಳ ಗುರುತು, ಎಲ್ಲೆಲ್ಲಿ?
Bengaluru’s Second Airport: ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಸದ್ಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಭಾರೀ ಪ್ರಮಾಣದಲ್ಲಿ ಹೆಚ್ಚಿದ್ದು, ವಿಮಾನಗಳ ಹಾರಾಟದ ನಿರ್ವಹಣೆಯೇ ಸವಾಲಾಗಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಸಂಬಂಧ ಇದೀಗ ಅಂತಿಮವಾಗಿ ಮೂರು ಸ್ಥಳಗಳನ್ನು ಗುರುತಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಹಾಗಾದ್ರೆ, ಯಾವುವು ಮೂರು ಸ್ಥಳಗಳು ಎನ್ನುವ ವಿವರ ಇಲ್ಲಿದೆ.
- Ramesh B Jawalagera
- Updated on: Mar 20, 2025
- 3:28 pm
RSSನಿಂದಲೇ ಅಪರಾಧ ಪ್ರಕರಣಗಳು ಹೆಚ್ಚಳ ಎಂದ ಸಿದ್ದರಾಮಯ್ಯ ವಿರುದ್ಧ ಕೋರ್ಟ್ನಲ್ಲಿ ಖಾಸಗಿ ದೂರು
‘ಆರ್ಎಸ್ಎಸ್ನಿಂದಲೇ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಆರ್ಎಸ್ಎಸ್ನವರ ದ್ವೇಷ ರಾಜಕಾರಣ, ಹಿಂಸಾ ರಾಜಕಾರಣವೇ ಗಲಭೆ ಹಾಗೂ ಅಪರಾಧಗಳಿಗೆ ಕಾರಣ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮೇಲಿನ ಚರ್ಚೆ ವೇಳೆ ಸದನದೊಳಗೆ ಗಂಭೀರ ಆರೋಪ ಮಾಡಿದ್ದರು. ಇದೀಗ ಇದು ಅವರಿಗೆ ಸಂಕಷ್ಟ ತಂದಿಟ್ಟಿದೆ.
- Ramesha M
- Updated on: Mar 19, 2025
- 7:21 pm
ಆರ್ಎಸ್ಎಸ್ ಶಾಂತಿಯುತವಾಗಿ ದೇಶ ಕಟ್ಟುವ ಕೆಲಸ ಮಾಡ್ತಿದೆ: ಸಿದ್ದರಾಮಯ್ಯಗೆ ಸುನೀಲ್ ಅಂಬೇಕರ್ ತಿರುಗೇಟು
ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನೀಲ್ ಅಂಬೇಕರ್ ಅವರು ಆರ್ಎಸ್ಎಸ್ ಶಾಂತಿಯುತವಾಗಿ ದೇಶ ನಿರ್ಮಾಣದಲ್ಲಿ ತೊಡಗಿದೆ ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಹಿಂಸಾಚಾರದ ಆರೋಪಗಳಿಗೆ ಪ್ರತಿಕ್ರಿಯಿಸಿ ಅವರು ಆರ್ಎಸ್ಎಸ್ ಕೆಲಸದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮಾರ್ಚ್ 21-23 ರ ವರೆಗೆ ಚನ್ನೇನಹಳ್ಳಿಯಲ್ಲಿ ನಡೆಯಲಿರುವ ಆರ್ಎಸ್ಎಸ್ ಸಭೆಯಲ್ಲಿ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಮತ್ತು ಸಂಘಟನೆಯ ಭವಿಷ್ಯದ ಯೋಜನೆಗಳನ್ನು ಚರ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
- Web contact
- Updated on: Mar 19, 2025
- 2:10 pm
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಜಾ: ಸರ್ಕಾರಕ್ಕೆ ಮೇಲುಗೈ
ಸಾಲ ಪಡೆದವರ ಮೇಲೆ ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ವ್ಯಕ್ತಿಗಳಿಂದ ನಡೆಯುತ್ತಿರುವ ಕಿರುಕುಳ ತಪ್ಪಿಸಲು ರಾಜ್ಯ ಸರ್ಕಾರ ಕಳುಹಿಸಿದ್ದ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ಸುಗ್ರೀವಾಜ್ಞೆ-2025 ಹೊರಡಿಸಲಾಗಿತ್ತು. ಆದ್ರೆ, ಇದನ್ನು ಪ್ರಶ್ನಿಸಿ ಕರ್ನಾಟಕ ಹೈಯರ್ ಪರ್ಚೇಸಿಂಗ್ ಅಸೋಸಿಯೇಷನ್ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.
- Ramesha M
- Updated on: Mar 17, 2025
- 7:27 pm
ಎಸ್ಸಿಎಸ್ಪಿ-ಟಿಎಸ್ಪಿಯ 9 ಸಾವಿರ ಕೋಟಿ ರೂ. ಹಣ ಗ್ಯಾರಂಟಿಗೆ ಬಳಸಿಕೊಂಡ ಸರ್ಕಾರ
ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನವನ್ನು ಬಳಸಿಕೊಂಡಿರುವುದಾಗಿ ವಿಧಾನ ಪರಿಷತ್ ನಲ್ಲಿ ಒಪ್ಪಿಕೊಂಡಿದೆ. ಇದಕ್ಕೆ ಬಿಜೆಪಿ ಮತ್ತು ಜೆಡಿಎಸ್ ವ್ಯಾಪಕ ವಿರೋಧ ವ್ಯಕ್ತಪಡಿಸಿವೆ. ವಿಪಕ್ಷಗಳು ಸರ್ಕಾರದ ವಿರುದ್ಧ ದಲಿತ ವಿರೋಧಿ ನೀತಿ ಎಂದು ಆರೋಪಿಸಿದವು. ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನ ವಿಚಾರವಾಗಿ ವಿಧಾನ ಪರಿಷತ್ನಲ್ಲಿ ಸರ್ಕಾರ ಮತ್ತು ವಿಪಕ್ಷ ನಾಯಕರ ನಡುವೆ ವಾಗ್ವಾದ ನಡೆಯಿತು.
- Prasanna Gaonkar
- Updated on: Mar 14, 2025
- 1:12 pm
BJP ಅವಧಿಯಲ್ಲಿನ 40% ಕಮಿಷನ್ ಆರೋಪ: 20 ಸಾವಿರ ಪುಟದ ವರದಿಯಲ್ಲೇನಿದೆ?
ಪೇ ಸಿಎಂ ಎಂದು ಅಬ್ಬರಿಸಿ 40 ಪರ್ಸೆಂಟ್ ಕಮಿಷನ್ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಲಿಗಳು ಮುಗಿಬಿದ್ದಿದ್ದರು. ಇದನ್ನೇ ಅಸ್ತ್ರವಾಗಿಸಿಕೊಂಡ ಕಾಂಗ್ರೆಸ್ ಇದೀಗ ಅಧಿಕಾರದ ಗದ್ದುಗೆ ಹಿಡಿದಿದೆ. ಇದರ ಬೆನ್ನಲ್ಲೇ ಈಗ ಕಮಿಷನ್ ಆರೋಪದ ವರದಿ ಸಿಎಂ ಸಿದ್ದರಾಮಯ್ಯನವರ ‘ಕೈ’ ಸೇರಿದ್ದು, ಬಿಜೆಪಿ ಅವಧಿಯಲ್ಲಿ ನಡೆದ ಹಗರಣ ಮುಂದಿಟ್ಟು ಹೂಂಕರಿಸೋದಕ್ಕೆ ಸಜ್ಜಾಗಿದೆ. ಇನ್ನು ಆಯೋಗದ ವರದಿಯಲ್ಲಿ ಏನಿದೆ?
- Ramesh B Jawalagera
- Updated on: Mar 13, 2025
- 5:36 pm
ಮುಸ್ಲಿಮರಿಗೆ ಸಿದ್ದರಾಮಯ್ಯ ಭರ್ಜರಿ ಕೊಡುಗೆ? ಮೀಸಲಾತಿ ಶೇ 10ಕ್ಕೆ ಏರಿಕೆ ಮನವಿ ಬಗ್ಗೆ ಪರಿಶೀಲನೆಗೆ ಜಮೀರ್ ಸೂಚನೆ
ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇಕಡ 4 ರ ಮೀಸಲಾತಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದ್ದರು. ಇದೀಗ ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಒಟ್ಟು ಮೀಸಲಾತಿಯನ್ನು ಶೇಕಡ 10ಕ್ಕೆ ಹೆಚ್ಚಿಸುವ ಸುಳಿವು ದೊರೆತಿದೆ. ಈ ಕುರಿತಾದ ಬೇಡಿಕೆ ಸಂಬಂಧ ಕ್ರಮ ಕೈಗೊಳ್ಳುವಂತೆ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ.
- Prasanna Gaonkar
- Updated on: Mar 13, 2025
- 1:57 pm
ನಟಿ ರನ್ಯಾ ರಾವ್ ಕೇಸ್: ಸಿಐಡಿ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರ, ಚರ್ಚೆಗೆ ಗ್ರಾಸ
ಸೊಂಟದಲ್ಲೂ ಚಿನ್ನ. ಕಾಲಿನಲ್ಲೂ ಬಂಗಾರ. ಶೂನಲ್ಲೂ ಗೋಲ್ಡ್. ಪಟಾಕಿ ಬೆಡಗಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕಳ್ಳಾಟ ದಿನಕ್ಕೊಂದು ತಿರುವುಪಡೆದುಕೊಳ್ಳುತ್ತಿದೆ. ಕ್ಷಣಕ್ಕೊಂದು ರೋಚಕ ಸಂಗತಿ ಬಯಲಾಗುತ್ತಿದೆ. ಈ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ರನ್ಯಾ ರಾವ್ ತಂದೆ ಡಿಜಿಪಿ ಕೆ ರಾಮಚಂದ್ರ ರಾವ್ ಮತ್ತು ಪೊಲೀಸ್ ಸಿಬ್ಬಂದಿಯ ಪಾತ್ರದ ಕುರಿತು ಅನುಮಾನ ವ್ಯಕ್ತವಾಗಿದ್ದು, ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಆದ್ರೆ, ಇದೀಗ ಅದೇನಾಯ್ತೋ ಏನೋ ಏಕಾಏಕಿ ಸಿಐಡಿ ತನಿಖೆ ಆದೇಶವನ್ನು ವಾಪಸ್ ಪಡೆದುಕೊಂಡಿದೆ
- Web contact
- Updated on: Mar 12, 2025
- 10:13 pm
ಎಂಪಿ ಕ್ಷೇತ್ರ ಮರುವಿಂಡಣೆ ವಿರುದ್ಧ ಬೆಂಬಲ ಕೋರಿ ಕರ್ನಾಟಕಕ್ಕೆ ತಮಿಳುನಾಡು ಸಿಎಂ ಪತ್ರ
ಲೋಕಸಭಾ ಕ್ಷೇತ್ರ ಮರುವಿಂಗಡಣೆಯನ್ನು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರು ತೀವ್ರವಾಗಿ ವಿರೋಧಿಸಿದ್ದಾರೆ. ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಆಡಳಿತದಲ್ಲಿರುವ ಮಿತ್ರ ಪಕ್ಷಗಳ ಬೆಂಬಲ ಕೋರಿದ್ದಾರೆ. ಈ ಸಂಬಂಧ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ಹಾಗಾದ್ರೆ, ಪತ್ರದಲ್ಲೇನಿದೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.
- Web contact
- Updated on: Mar 12, 2025
- 2:49 pm