CM of Karnataka
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ರಾಜ್ಯದ ಸರಕಾರದ ಮುಖ್ಯಸ್ಥರಾಗಿರುತ್ತಾರೆ. ಅಲ್ಲದೇ ಮುಖ್ಯಮಂತ್ರಿಯು ರಾಜ್ಯದ ಕಾರ್ಯಾಂಗದ ಮುಖ್ಯಸ್ಥರು ಹೌದು. ಮುಖ್ಯಮಂತ್ರಿಯನ್ನು ರಾಜ್ಯದ ವಿಧಾನ ಸಭೆಯಲ್ಲಿ ಬಹುಮತ ಪಡೆದ ಪಕ್ಷ ಅಥವಾ ಪಕ್ಷಗಳ ಒಕ್ಕೂಟದ ಶಾಸಕರು ಆರಿಸುತ್ತಾರೆ. ಇವರ ಅಧಿಕಾರಾವಧಿ ಐದು ವರ್ಷ, ಪುನರಾಯ್ಕೆಯಾಗುವ ಅವಕಾಶವಿರುತ್ತದೆ.
ಮುಖ್ಯಮಂತ್ರಿಯ ಸಲಹೆಯ ಮೇರೆಗೆ ರಾಜ್ಯಪಾಲರು ಇತರ ಸಚಿವರನ್ನು ನೇಮಿಸುತ್ತಾರೆ. ಮುಖ್ಯಮಂತ್ರಿಗಳು ತಮ್ಮ ಸಹೋದ್ಯೋಗಿಗಳ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ಮುಕ್ತ ಹಸ್ತವನ್ನು ಹೊಂದಿದ್ದಾರೆ. ರಾಜ್ಯಪಾಲರು ಸಚಿವಾಲಯಕ್ಕೆ ಸೇರಿಸಬೇಕಾದ ಶಾಸಕರ ಹೆಸರನ್ನು ಸೂಚಿಸಬಹುದು, ಆದರೆ ಅವರು ಯಾವುದೇ ಶಾಸಕರನ್ನು ಸಚಿವಾಲಯಕ್ಕೆ ಸೇರಿಸಿಕೊಳ್ಳಲು ಒತ್ತಾಯಿಸುವಂತಿಲ್ಲ. ಮುಖ್ಯಮಂತ್ರಿಗಳ ಸಲಹೆಯ ಮೇರೆಗೆ ರಾಜ್ಯಪಾಲರು ಮಂತ್ರಿಗಳಿಗೆ ಇಲಾಖೆಗಳು ಅಥವಾ ಖಾತೆಗಳನ್ನು ನಿಯೋಜಿಸುತ್ತಾರೆ.
ಸರ್ಕಾರ ವಾಸ್ತವವಾಗಿ ಮುಖ್ಯಮಂತ್ರಿಯ ಮೇಲೆ ಅವಲಂಬಿತವಾಗಿದೆ. ಆದ್ದರಿಂದ, ಮುಖ್ಯಮಂತ್ರಿಗಳು ತಮ್ಮ ಸಚಿವ ಸಂಪುಟಕ್ಕೆ ತಮಗೆ ಬೇಕಾದ ಪಕ್ಷದ ಶಾಸಕರುಗಳನ್ನು ಸೇರಿಸಿಕೊಳ್ಳಬಹುದು. ಅಲ್ಲದೇ ಸಚಿವರ ಸಭೆ, ಸಚಿವ ಸಂಪುಟ ಪುನರ್ ರಚನೆ ಮಾಡಿಕೊಳ್ಳಬಹುದು. ಅಲ್ಲದೇ ಸಚಿವರ ರಾಜೀನಾಮೆ ಪಡೆಯುವ ಅಧಿಕಾರ ಸಿಎಂ ಹೊಂದಿರುತ್ತಾರೆ. ಒಂದು ವೇಳೆ ಮಂತ್ರಿ ರಾಜೀನಾಮೆ ನೀಡಲು ನಿರಾಕರಿಸಿದರೆ ಸಿಎಂ, ರಾಜ್ಯಪಾಲರಿಂದ ವಜಾಗೊಳಿಸಬಹುದು.
ಇನ್ನೂ ಹೆಚ್ಚು ಓದಿಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಘಟನೆ ಇನ್ಸೈಡ್ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯಿಂದ ನಡೆದ ಶೂಟೌಟ್ನಲ್ಲಿ ಮೂವರು ಹತ್ಯೆಯಾಗಿದ್ದಾರೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಿದ್ದಾರೆ. ಮೃತರು ಪ್ರಾಣಿಗಳ ಬೇಟೆಗೆ ಬಂದಿದ್ದು, ಈ ದಾಳಿ ನಡೆಸಿದ್ದಕ್ಕೆ ಆತ್ಮ ರಕ್ಷಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಸಹ ಪ್ರತಿ ದಾಳಿ ನಡೆಸಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇನ್ನೊಂದೆಡೆ ಘಟನೆಯಿಂದ ಎಸ್ಕೇಪ್ ಆಗಿ ಬಂದಿರುವ ಮತ್ತೋರ್ವ, ಇದನ್ನು ಅಲ್ಲಗಳೆದಿದ್ದು, ಹೀಗಾಗಿ ಅಸಲಿಗೆ ಆಗಿದ್ದೇನು ಎನ್ನುವುದೇ ನಿಗೂಢವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ನೀಡಲಾಗಿದೆ.
- Gopal AS
- Updated on: Aug 16, 2026
- 4:15 pm
ಕದ್ದು ಮುಚ್ಚಿ ರಾತ್ರೋರಾತ್ರಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಸರ್ಕಾರ
Cauvery Water Dispute: ರಾತ್ರೋರಾತ್ರಿ ಕೆಆರ್ಎಸ್ನಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಬಿಡಲಾಗಿದೆ. ಕಬಿನಿ ಒಳಹರಿವು ಇಳಿದ ಕಾರಣ ಹಾಗೂ CWMA ನಿರ್ದೇಶನದಂತೆ ನೀರು ಹರಿಸಲಾಗಿದೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೆ ರಾಜ್ಯ ಸರ್ಕಾರ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.
- Dileep CP
- Updated on: Aug 15, 2026
- 3:19 pm
“ನಮ್ಮ ಹೊಸ ಹೀರೋ. ನಿಮ್ಮ ಲೀಡರ್”: ಯತೀಂದ್ರ ಸಿದ್ದರಾಮಯ್ಯನವರನ್ನ ವಿಶೇಷವಾಗಿ ಪರಿಚಯಿಸಿದ ಡಿಕೆಶಿ
ಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಆಗಸ್ಟ್ 14) ವಿಧಾನಪರಿಷತ್ ಕಲಾಪದಲ್ಲಿ ನೂತನ ಸಚಿವರನ್ನು ಪರಿಚಯ ಮಾಡಿಕೊಟ್ಟರು. ಈ ವೇಳೆ ಮೊದಲ ಬಾರಿ ಸಚಿವರಾಗಿ ವಿಧಾನ ವಿಧಾನ ಪರಿಷತ್ನ ಸಭಾನಾಯಕರಾಗಿರುವ ಯತೀಂದ್ರ ಸಿದ್ದರಾಮಯ್ಯವರನ್ನು ವಿಶೇಷ ರೀತಿಯಲ್ಲಿ ಪರಿಚಯ ಮಾಡಿಕೊಟ್ಟರು. ಸಚಿವ ಸಂಪುಟದ ಸಹೋದ್ಯೋಗಿಗಳನ್ನು ಪರಿಚಯಿಸುವಾಗ ಯತೀಂದ್ರ ಅವರ ಹೆಸರನ್ನು ಹೇಳಿ, "ನಮ್ಮ ಹೊಸ ಹೀರೋ. ನಮ್ಮ ನಾಯಕ" ಎಂದು ಬೆನ್ನುತಟ್ಟಿ ಪರಿಚಯ ಮಾಡಿಕೊಟ್ಟಿರುವುದು ವಿಶೇಷವಾಗಿತ್ತು.
- Ramesh B Jawalagera
- Updated on: Aug 14, 2026
- 6:48 pm
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಆರೋಗ್ಯ ಸಚಿವ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಮಸಾಲಾ ಜೊತೆಯಲ್ಲಿ ನಿಕೋಟಿನ್ ಇರಬಾರದು. ಆದರೂ ಮಸಾಲಾ ಜೊತೆ ಮಿಕ್ಸ್ ಮಾಡಿ ನಿಕೋಟಿನ್ ಮಾರಾಟ ಮಾಡಲಾಗುತ್ತಿದೆ. ಇದು ನಮ್ಮ ಗಮನಕ್ಕೆ ಬಂದಿದೆ, ಹೀಗಾಗಿ ನಿಷೇಧಕ್ಕೆ ಆದೇಶ ನೀಡಿದ್ದು, ಮುಂದೆ ಯಾವ ರೀತಿ ನಿಯಮ ರೂಪಿಸಬೇಕೆಂದು ನಿರ್ಧರಿಸ್ತೇವೆ. ಇನ್ನು ಅಡಕೆ ಮಾರಾಟಗಾರರಿಗೆ ತೊಂದರೆ ಆಗದ ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
- Ramesh B Jawalagera
- Updated on: Aug 13, 2026
- 10:41 pm
ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಸಿಎಂ ಭೇಟಿಯಾದ ಆರಗ ಜ್ಞಾನೇಂದ್ರ ನೇತೃತ್ವದ ನಿಯೋಗ
Araga Jnanendra on Gutkha Ban: ಕರ್ನಾಟಕದಲ್ಲಿ ತಂಬಾಕು ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಮಾರಾಟಕ್ಕೆ ನಿಷೇಧ (Gutkha, Pan masala Ban) ಹೇರಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸಾರ್ವಜನಿಕರು ಸೇರಿ ಹಲವು ರಾಜಕಾರಣಿಗಳು ಸ್ವಾಗತಿಸಿದ್ದಾರೆ. ಆದರೆ, ಮತ್ತೊಂದೆಡೆ ಇದಕ್ಕೆ ಅಡಿಕೆ ಬೆಳೆಗಾರರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ (Araga jnanendra) ನೇತೃತ್ವದ ನಿಯೋಗ ಇಂದು (ಆಗಸ್ಟ್ 13) ಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿ ಬ್ಯಾನ್ ಆದೇಶ ವಾಪಸ್ ಪಡೆಯುವಂತೆ ಮನವಿ ಮಾಡಿದೆ.
- Ramesh B Jawalagera
- Updated on: Aug 13, 2026
- 5:52 pm
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ, ದೇಶಪಾಂಡೆಗೆ ಸಂಪುಟ ದರ್ಜೆ ಸ್ಥಾನಮಾನ
: ಡಿಕೆ ಶಿವಕುಮಾರ್ ಸರ್ಕಾರ ಬರುತ್ತಿದ್ದಂತೆಯೇ ಪಕ್ಷದಲ್ಲಿ ಒಂದಲ್ಲ ಒಂದು ಗೊಂದಲಗಳು ಉದ್ಭವಿಸುತ್ತಲೇ ಇವೆ. ಮೊನ್ನೆ ಅಷ್ಟೇ ಸಚಿವ ಸಂಪುಟ ಪುನಾರಚನೆಯಲ್ಲಿ ಹೈಕಮಾಂಡ್ ಕಳುಹಿಸಿದ್ದ ಪಟ್ಟಿ ಬೆಂಗಳೂರಿನಲ್ಲಿ ಬದಲಾಗಿತ್ತು. ಹೌದು...ಇನ್ನೇನು ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಬೇಕೆನ್ನುವಷ್ಟರಲ್ಲೇ ಪಟ್ಟಿಯಲ್ಲಿದ್ದ ಮಾಂಕಾಳ ವೈದ್ಯ ಹೆಸರನ್ನು ಕೈಬಿಟ್ಟು ಎಸ್ಎಸ್ ಮಲ್ಲಿಕಾರ್ಜುನ ಹೆಸರು ಸೇರ್ಪಡೆ ಮಾಡಲಾಗಿತ್ತು. ಇನ್ನು ಹೈಕಮಾಂಡ್ ಪಟ್ಟಿಯಲ್ಲಿ ಎಂಎಲ್ಸಿ ಗಾಯತ್ರಿ ಹೆಸರು ಸಹ ಇತ್ತು. ಅವರಿಗೂ ಸಹ ಬ್ರೇಕ್ ಹಾಕಲಾಗಿತ್ತು. ಇದೀಗ ಡೆಪ್ಯೂಟಿ ಸ್ಪೀಕರ್ಗೆ ಶಿಫಾರಸ್ಸು ಮಾಡಲಾಗಿದ್ದ ಹೆಸರನ್ನು ಸಹ ಬಲಾವಣೆ ಮಾಡಲಾಗಿದೆ.
- Ramesh B Jawalagera
- Updated on: Aug 12, 2026
- 7:39 pm
ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಅಧಿಕೃತ ಪಟ್ಟಿ
ministers portfolio List: ಸಚಿವ ಸಂಪುಟ ವಿಸ್ತರಣೆ ಬಳಿಕ ಅಸಮಾಧಾನಿತರ ಬಂಡಾಯ ನಡುವೆ ಇದೀಗ ಕೊನೆಗೂ ಕಾಂಗ್ರೆಸ್ ಸರ್ಕಾರದ ಮಂತ್ರಿಗಳಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಸಾಕಷ್ಟು ವಿಳಂಬದ ನಡುವೆ ಇದೀಗ ಆ.12ರಂದು(ಬುಧವಾರ) ಮಂತ್ರಿಗಳಿಗ ವಿವಿಧ ಇಲಾಖೆಯ ಜವಾಬ್ದಾರಿ ನೀಡಲಾಗಿದೆ. ಹಾಗಾದ್ರೆ, ಯಾವ ಸಚಿವರಿಗೆ ಯಾವ ಖಾತೆ ನೀಡಲಾಗಿದೆ ಎಂಬ ಪಟ್ಟಿ ಇಲ್ಲಿದೆ.
- Ramesh B Jawalagera
- Updated on: Aug 12, 2026
- 8:09 pm
ನೂತನ ಸಚಿವರ ಖಾತೆ ಕ್ಯಾತೆಗೆ ತೆರೆ ಎಳೆದ ಡಿಕೆ ಶಿವಕುಮಾರ್, ಯಾರಿಗೆ ಯಾವ ಇಲಾಖೆ?
ತೀವ್ರ ಕುತೂಹಲ ಮೂಡಿಸಿರುವ ನೂತನ ಸಚಿವರಿಗೆ ಖಾತೆ ಹಂಚಿಕೆ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಸಂಜೆಯೊಳಗೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಪಟ್ಟಿ ಬಿಡುಗಡೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಹೊಸ ಸಚಿವರಿಗೆ ಖಾತ ಹಂಚಿಕೆ ಯಾವಾಗ? ಯಾರಿಗೆ ಯಾವ ಖಾತೆ? ಅದು ಬೇರೆ ಮಳೆಗಾಲದ ಅಧಿವೇಶನ ಶುರುವಾಗುತ್ತೆ ಎನ್ನುವ ಬಗ್ಗೆ ಭಾರೀ ಚರ್ಚೆಗಳು ಆಗುತ್ತಿದ್ದವು. ಇದರ ಬೆನ್ನಲ್ಲೇ ಇದೀಗ ಸ್ವತಃ ಸಿಎಂ ಡಿಕೆ ಶಿವಕುಮಾರ್ ಖಾತೆ ಕ್ಯಾತೆ ಬಗ್ಗೆ ಸ್ಪಷ್ಟನೆ ನೀಡಿದ್ದು, ಇಂದು( ಆಗಸ್ಟ್ 11) ಯಾವುದೇ ಸಂದರ್ಭದಲ್ಲಿ ಖಾತೆ ಪಟ್ಟಿ ಬಿಡುಗಡೆಯಾಗಲಿದೆ. ಹೀಗಾಗಿ ಯಾರಿಗೆ ಯಾವ ಖಾತೆ ಸಿಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.
- Ramesh B Jawalagera
- Updated on: Aug 11, 2026
- 3:49 pm
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಸಚಿವ ಸಂಪುಟ ಪುನಾರಚನೆ ಬಳಿಕ ಕರ್ನಾಟಕ ಕಾಂಗ್ರೆಸ್ನಲ್ಲಿ ಅಸಮಧಾನ ಸ್ಫೋಟಗೊಂಡಿದೆ. ಹೀಗಾಗಿ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಅಸಮಧಾನಿತರನ್ನು ಸಮಧಾನ ಮಾಡುವ ಯತ್ನ ನಡೆಸಿದ್ದಾರೆ. ಇದರ ಮಧ್ಯೆ ನೂತನ ಸಚಿವರಿಗೆ ಖಾತೆ ಹಂಚಿಕೆ ಸವಾಲು ಎದುರಾಗಿದ್ದು, ಈ ಸಂಬಂಧ ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಆಗಸ್ಟ್ 09) ದೆಹಲಿಗೆ ತೆರಳಿದ್ದಾರೆ.
- Ramesh B Jawalagera
- Updated on: Aug 9, 2026
- 7:01 pm
ಹೆಸರಘಟ್ಟದಲ್ಲಿ ಭಾರತದ ಮೊದಲ ‘ಕ್ವಾಂಟಮ್ ಸಿಟಿ ನಿರ್ಮಾಣ: ಸಿಎಂ ಡಿಕೆ ಶಿವಕುಮಾರ್
ಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಆಗಸ್ಟ್ 07) ಬೆಂಗಳೂರಿನ ಸೈನ್ಸ್ ಗ್ಯಾಲರಿಯಲ್ಲಿ ‘ಕ್ವಾಂಟಮ್’ ಪ್ರದರ್ಶನ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು. ಕ್ವಾಂಟಮ್’ ಪ್ರದರ್ಶನವನ್ನು ಬೆಂಗಳೂರಿನ ಜನರು, ಕರ್ನಾಟಕದ ಜನರು ಹಾಗೂ ನಗರಕ್ಕೆ ಭೇಟಿ ನೀಡುವ ಎಲ್ಲರಿಗಾಗಿ ಮುಕ್ತಗೊಳಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ಅವರು ಘೋಷಿಸಿದರು.
- Ramesh B Jawalagera
- Updated on: Aug 7, 2026
- 11:22 pm
TV9 Kannada News Live: ಕಾಮನ್ವೆಲ್ತ್ ನಲ್ಲಿ ಕಂಚು ಗೆದ್ದ ಕನ್ನಡತಿಗೆ ಸರ್ಕಾರಿ ಹುದ್ದೆ, 15 ಲಕ್ಷ ರೂ. ಬಹುಮಾನ
Karnataka News Today Live Updates: ದರ್ಶನ್ ಪ್ರಕರಣದಲ್ಲಿ A-14 ಪ್ರದೋಷ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿ ಮಹತ್ವದ ತಿರುವು ನೀಡಿದ್ದಾರೆ. ಹೊಸಕೋಟೆಯಲ್ಲಿ ಬಡ ಮಹಿಳೆಯರಿಗೆ ಲಕ್ಷಾಂತರ ರೂಪಾಯಿ ಲೋನ್ ವಂಚನೆ ನಡೆದಿದೆ. ಗದಗದಲ್ಲಿ ಉಪಲೋಕಾಯುಕ್ತರು ಕಸ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಯಚೂರು ಜೈಲಿನಲ್ಲಿ ಕೈದಿ ಮರಣ ಮತ್ತು ಬೀದರ್ ರಸ್ತೆ ಕಾಮಗಾರಿ ಸ್ಥಗಿತದಂತಹ ಪ್ರಮುಖ ಸುದ್ದಿಗಳು ಇಲ್ಲಿದೆ ನೋಡಿ
- Akshay Pallamajalu
- Updated on: Aug 6, 2026
- 10:35 pm
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ಸಚಿವ ಸಂಪುಟ ಪುನಾರಚನೆ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕರು ಬೇಸರಗೊಂಡಿದ್ದು, ಪಕ್ಷದ ನಡೆಗೆ ಆಕ್ರೋಶಗೊಂಡಿದ್ದಾರೆ. ಈ ಸಾಲಿನಲ್ಲಿ ಗುಬ್ಬಿ ಶಾಸಕ ಎಸ್ಆರ್ ಶ್ರೀನಿವಾಸ್ ಸಹ ಒಬ್ಬರಾಗಿದ್ದು, ಸಚಿವ ಸ್ಥಾನ ಸಿಗದಿದ್ದಕ್ಕೆ ಕೆಎಸ್ಆರ್ಟಿಸಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಸಿಎಂ ಡಿಕೆ ಶಿವಕುಮಾರ್, ಶ್ರೀನಿವಾಸ್ ಅವರಿಗೆ ಕರೆ ಮಾಡಿ ಮನವೊಲಿಸಿದ್ದು, ಇದೀಗ ಶ್ರೀನಿವಾಸ್ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಹೌದು...ಸಿಎಂ ಡಿಕೆ ಶಿವಕುಮಾರ್ ಕರೆ ಬಳಿಕ ಮಾತನಾಡಿದ ಶ್ರೀನಿವಾಸ್, ಕೆಎಸ್ಆರ್ಟಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟ್ಟಿದ್ದೆ. ಆದ್ರೆ, ಎಲ್ಲಾ ನಿಗಮ ಮಂಡಳಿಗಳನ್ನ ವಾಪಸ್ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ. ಇನ್ನು ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ಉಲ್ಟಾ ಹೊಡಿದಿದ್ದಾರೆ.
- Ramesh B Jawalagera
- Updated on: Aug 5, 2026
- 2:59 pm