Congress
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಸಾಮಾನ್ಯವಾಗಿ ಕಾಂಗ್ರೆಸ್ ಪಕ್ಷ ಎಂದು ಕರೆಯಲಾಗುತ್ತದೆ. ಇದು ಭಾರತದ ಅತ್ಯಂತ ಪುರಾತನ ಮತ್ತು ಪ್ರಮುಖ ರಾಜಕೀಯ ಸಂಸ್ಥೆಗಳಲ್ಲಿ ಒಂದಾಗಿದೆ. 1885 ರಲ್ಲಿ ಸ್ಥಾಪಿತವಾದ ಇದು ಬ್ರಿಟಿಷರ ಆಳ್ವಿಕೆಯಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ. ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರಂತಹ ನಾಯಕರು ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದವರು.
1947 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ಪ್ರಬಲ ರಾಜಕೀಯ ಶಕ್ತಿಯಾಯಿತು ಮತ್ತು ಸ್ವಾತಂತ್ರ್ಯದ ನಂತರದ ದಶಕಗಳ ಕಾಲ ಕೇಂದ್ರದಲ್ಲಿ ಸರ್ಕಾರವನ್ನು ರಚಿಸಿತು. ಆದರೆ ಇತ್ತೀಚೆಗೆ ಅಧಿಕಾರದಿಂದ ದೂರ ಉಳಿದಿದೆ. ಪಕ್ಷದ ಸಿದ್ಧಾಂತವು ಕಾಲಕಾಲಕ್ಕೆ ವಿಕಸನಗೊಳ್ಳುತ್ತಾ ಬಂದಿದೆ. ಸಮಾಜವಾದ, ಜಾತ್ಯತೀತ ಆಡಳಿತದ ಅಂಶಗಳನ್ನು ಒಳಗೊಂಡಿದೆ. ಇದು ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿವಿ ನರಸಿಂಹರಾವ್, ಮನಮೋಹನ್ ಸಿಂಗ್ ಸೇರಿದಂತೆ ಹಲವಾರು ಪ್ರಧಾನ ಮಂತ್ರಿಗಳನ್ನು ನಿರ್ಮಿಸಿದೆ.
ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮತ್ತು ನಾನಾ ರಾಜ್ಯಗಳ ರಾಜಕೀಯದಲ್ಲಿ ತೊಡಗಿಸಿಕೊಂಡಿದೆ. ವಿವಿಧ ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳನ್ನು ಪ್ರತಿಪಾದಿಸುತ್ತದೆ. ಕಾಂಗ್ರೆಸ್ ಪಕ್ಷವು ದೇಶದ ಅನೇಕ ರಾಜ್ಯಗಳಲ್ಲಿಯೂ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಾ ಬಂದಿತ್ತು. ಆದಾಗ್ಯೂ, ಇತ್ತೀಚಿನ ವರ್ಷಗಳಲ್ಲಿ ಅದು ಕೆಲವು ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಇತರ ಪ್ರಾದೇಶಿಕ ಪಕ್ಷಗಳಿಂದ ಸವಾಲುಗಳನ್ನು ಎದುರಿಸುತ್ತಿದೆ.
ಮತ್ತೊಂದು ಸ್ವರೂಪ ಪಡೆದ ಬಿಡದಿ ಟೌನ್ಶಿಪ್ ವಿವಾದ: ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ
ಬಿಡದಿ ಟೌನ್ ಶಿಪ್ ಯೋಜನೆ ಪರ ವಿರೋಧದ ರಾಜಕೀಯ ಹೋರಾಟ ಮತ್ತೊಂದು ಹಂತ ತಲುಪಿದ್ದು, ಇದೀಗ ರಾಜಕೀಯ ನಾಯಕರು ಪರಸ್ಪರ ವೈಯಕ್ತಿಯಕವಾಗಿ ಆರೋಪ ಪ್ರತ್ಯಾರೋಪಕ್ಕಿಳಿದಿದ್ದಾರೆ. ಹೌದು...ಸಿಎಂ ಡಿಕೆ ಶಿವಕುಮಾರ್ ವಿರುದ್ಧ ಭಷ್ಟ್ರಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕಾಂಗ್ರೆಸ್ ಶಾಸಕ ಹೆಚ್ಸಿ ಬಾಲಕೃಷ್ಣ, ಡಿಎಲ್ಎಫ್ ಗೆ ಟೆಂಡರ್ ಡೀಲ್ ಬಗ್ಗೆ ಪ್ರಸ್ತಾಪಿಸಿ ಕೌಂಟರ್ ಕೊಟ್ಟಿದ್ದಾರೆ.
- Ramesh B Jawalagera
- Updated on: Jul 18, 2026
- 4:13 pm
ದೋಸ್ತಿಯಲ್ಲಿ ಕುಸ್ತಿ: ಬಿಜೆಪಿ ನಾಯಕರ ಚರ್ಚೆಗೂ ಮುನ್ನವೇ ಪ್ರತ್ಯೇಕ ಪಾದಯಾತ್ರೆ ಘೋಷಿಸಿದ ಜೆಡಿಎಸ್
ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಗಟ್ಟಿಗೊಳಿಸಲು ಕಮಲ ವರಿಷ್ಠರು ಪ್ಲ್ಯಾನ್ ಮಾಡುತ್ತಿದ್ದಾರೆ. ಮೈತ್ರಿ ಗೊಂದಲದ ಹಿನ್ನೆಲೆಯಲ್ಲಿ ಸರಿದಾರಿಗೆ ತರಲು ದೆಹಲಿ ನಾಯಕರೇ ಎಂಟ್ರಿ ಕೊಟ್ಟಿದ್ದು, ಶೀಘ್ರದಲ್ಲಿ ಬಿಜೆಪಿ- ಜೆಡಿಎಸ್ ಸಮನ್ವಯ ಸಮಿತಿಯನ್ನು ರಚನೆ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ.ಇದರ ಮಧ್ಯೆ ಉಭಯ ಪಕ್ಷಗಳ ನಾಯಕರ ನಡುವೆ ಸಮನ್ವಯತೆಯ ಕೊರತೆ ಇದೆ. ಇದೀಗ ಬಿಡದಿ ಟೌನ್ಶಿಪ್ ವಿರೋಧಿ ಪಾದಯಾತ್ರೆಯಲ್ಲೂ ಸಹ ದೋಸ್ತಿಗಳ ನಡುವೆ ಗೊಂದಲ ಏರ್ಪಟ್ಟಿದೆ
- Ramesh B Jawalagera
- Updated on: Jul 18, 2026
- 3:05 pm
Government Free Milk Powder Scam: ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ಮಕ್ಕಳ ಪೌಷ್ಟಿಕತೆಗಾಗಿ ಜಾರಿಗೆ ತಂದ ಕ್ಷೀರಭಾಗ್ಯ ಯೋಜನೆಗೆ ದೊಡ್ಡ ಹಿನ್ನಡೆಯಾಗಿದ್ದು, ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಅಕ್ರಮವಾಗಿ ಸಂಗ್ರಹವಾಗಿರುವುದು ಪತ್ತೆಯಾಗಿದೆ. ದೇವದುರ್ಗ ಮಾರ್ಗದಲ್ಲಿರುವ ಶೆಡ್ ಒಂದರಲ್ಲಿ 38 ಚೀಲಗಳಷ್ಟು ಹಾಲಿನ ಪುಡಿ ಸಿಕ್ಕಿದ್ದು, ಸ್ಥಳೀಯ ಗ್ರಾಮೀಣ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
- Bhavana Hegde
- Updated on: Jul 18, 2026
- 12:00 pm
ಸಂಸತ್ ಬಜೆಟ್ ಅಧಿವೇಶನದಲ್ಲಿ ಕರ್ನಾಟಕದ ಇಬ್ಬರು ಸಂಸದರ ಕಳಪೆ ಹಾಜರಾತಿ: ಒಬ್ಬರದ್ದು ಶೂನ್ಯ ಸಾಧನೆ!
ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಕರ್ನಾಟಕದ ಬಹುತೇಕ ಸಂಸದರು ಉತ್ತಮ ಹಾಜರಾತಿ ದಾಖಲಿಸಿದ್ದರೂ, ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಶೂನ್ಯ ಹಾಜರಾತಿ ಮತ್ತು ಬೆಳಗಾವಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ 41.9% ಹಾಜರಾತಿಯೊಂದಿಗೆ ಅತ್ಯಂತ ಕಳಪೆ ಹಾಜರಾತಿ ಹಾಕಿದ ಸಂಸದರ ಪಟ್ಟಿಯಲ್ಲಿ ಗಮನ ಸೆಳೆದಿದ್ದಾರೆ.
- Ganapathi Sharma
- Updated on: Jul 18, 2026
- 9:27 am
ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದಕ್ಕೆ? ಮುಂದಿನ ವಾರ ದೆಹಲಿಯಲ್ಲಿ ನಿರ್ಣಾಯಕ ಸಭೆ ಸಾಧ್ಯತೆ
Karnataka cabinet expansion: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆದ ಸಭೆಗಳಲ್ಲಿ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ಮರಳಿದ ಬಳಿಕ ಮುಂದಿನ ವಾರ ಮತ್ತೊಮ್ಮೆ ಸಭೆ ನಡೆಸಿ ಸಚಿವರ ಪಟ್ಟಿಗೆ ಅಂತಿಮ ರೂಪ ನೀಡುವ ಸಾಧ್ಯತೆ ಇದೆ.
- Prasanna Gaonkar
- Updated on: Jul 18, 2026
- 7:34 am
ರಾಜಕೀಯವಾಗಿ ನಾವು ಸಿದ್ಧರಿದ್ದೇವೆ: SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಸೆಂಬರ್ 31ರೊಳಗೆ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಗಡುವು ನೀಡಿದ್ದರೂ, ಸರ್ಕಾರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಿಂದಾಗಿ ವಿಳಂಬವನ್ನು ಎದುರಿಸುತ್ತಿದೆ. ಹೊಸ ಮತದಾರರ ಪಟ್ಟಿ ಸಿದ್ಧಗೊಳ್ಳುವವರೆಗೆ ಚುನಾವಣೆ ನಡೆಸುವುದು ಮತದಾರರಿಗೆ ಗೊಂದಲ ಸೃಷ್ಟಿಸಬಹುದು. ಇದೊಂದು ರಾಜಕೀಯ ಉದ್ದೇಶವಿಲ್ಲದ ಕಾನೂನಾತ್ಮಕ ಸಮಸ್ಯೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
- Mahesha E
- Updated on: Jul 17, 2026
- 4:30 pm
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಶೇ.60ರಷ್ಟು ಹೊಸ ಮುಖಗಳಿಗೆ ಮಣೆಹಾಕಲು ಹೈಕಮಾಂಡ್ ನಿರ್ಧಾರ
Karnataka Politics: ಮುಂದಿನ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಕರ್ನಾಟಕ ಸಂಪುಟ ವಿಸ್ತರಣೆಯಲ್ಲಿ ಶೇ.60ರಷ್ಟು ಹೊಸ ಮುಖಗಳಿಗೆ ಅವಕಾಶ ನೀಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಜಾತಿ, ಸಮಾಜದ ಸ್ಥಿತಿಗತಿಗಳು, ಶಿಕ್ಷಣ ಮತ್ತು ಹಿನ್ನಲೆಯನ್ನು ಆಧರಿಸಿ ಆಯ್ಕೆ ನಡೆಯಲಿದ್ದು, ಹೊಸ ನಾಯಕತ್ವವು ಪಕ್ಷಕ್ಕೆ ಆಸ್ತಿಯಾಗಲಿದೆ ಎಂಬ ಅಭಿಪ್ರಾಯ ವರಿಷ್ಠರದ್ದು ಎನ್ನಲಾಗಿದೆ.
- Prasanna Hegde
- Updated on: Jul 17, 2026
- 3:18 pm
ಡಿಕೆ ಶಿವಕುಮಾರ್ ಸಂಪುಟದ ಸಚಿವರ ಪಟ್ಟಿ ಫೈನಲ್: ಅಳೆದು ತೂಗಿ ಲಿಸ್ಟ್ ಅಂತಿಮಗೊಳಿಸಿದ ರಾಹುಲ್ ಗಾಂಧಿ
ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತ ತಲುಪಿರುವ ಲಕ್ಷಣಗಳು ಕಂಡುಬಂದಿವೆ. ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಡಿಕೆಶಿ, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಸಚಿವರ ಪಟ್ಟಿ ಅಂತಿಮಗೊಳಿಸಿದ್ದಾರೆ ಎಂಬುದು ತಿಳಿದುಬಂದಿದೆ.
- Prasanna Gaonkar
- Updated on: Jul 17, 2026
- 7:42 am
ಕರ್ನಾಟಕದ ಕಿಂಗ್ಮೇಕರ್: ರಶೀದ್ ಪುಸ್ತಕದಲ್ಲಿ ಡಿಕೆ ಶಿವಕುಮಾರ್ ರಾಜಕೀಯ ಪಯಣ,ಬೈಕ್ ಪ್ರೇಮ ಅನಾವರಣ
ಪತ್ರಕರ್ತ ರಶೀದ್ ಕಿದ್ವಾಯಿ ಅವರು 'ಡಿ.ಕೆ. ಶಿವಕುಮಾರ್ – ಕಾಂಗ್ರೆಸ್ ಕ್ರೈಸಿಸ್ ಮ್ಯಾನೇಜರ್, ಕರ್ನಾಟಕದ ಕಿಂಗ್ಮೇಕರ್'ಎನ್ನುವ ಪುಸ್ತಕ ಬರೆದಿದ್ದು, ಇಂದು (ಜುಲೈ 16) ರಶೀದ್ ಕಿದ್ವಾಯಿ ಬರೆದ ಪುಸ್ತಕವನ್ನು ಡಿಕೆ ಶಿವಕುಮಾರ್ ಅವರಿಗೆ ಹಸ್ತಾಂತರಿಸಿದ್ದು, ಯೆಜ್ಡಿ ರೋಡ್ಕಿಂಗ್ ಬೈಕ್ ಜತೆಗಿನ ಅವರ ಒಡನಾಟದ ಬಗ್ಗೆ ಪುಸ್ತಕದಲ್ಲಿ ಬರೆಯಲಾಗಿದೆ.
- Ramesh B Jawalagera
- Updated on: Jul 16, 2026
- 10:51 pm
ಸಂಪುಟ ವಿಸ್ತರಣೆ ಸರ್ಕಸ್: ಹೈಕಮಾಂಡ್ಗೆ ಒಪ್ಪಿಗೆಯಾಗದ ರಾಜ್ಯ ನಾಯಕರ ಪಟ್ಟಿ, ತಮ್ಮದೇ ಪಟ್ಟಿ ಸಿದ್ಧಪಡಿಸಿಕೊಂಡಿರೋ ರಾಹುಲ್
ಸಂಪುಟ ವಿಸ್ತರಣೆ ಸರ್ಕಸ್ ತೀವ್ರಗೊಂಡಿದ್ದು, ಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಜುಲೈ 16) ದೆಹಲಿಯಲ್ಲಿ ವರಿಷ್ಠರ ಜೊತೆಗೆ ಮಹತ್ವದ ಚರ್ಚೆ ಮಾಡಿದ್ದಾರೆ. ಮೊದಲ ಹಂತದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಪಸ್ಥಿತಿಯಲ್ಲಿ ರಾಹುಲ್ ಗಾಂಧಿ, ವೇಣುಗೋಪಾಲ್, ಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದ ಬಗ್ಗೆ ಮಾತುಕತೆ ನಡೆಸಿದ್ದು, ಈ ವೇಳೆ ರಾಜ್ಯ ನಾಯಕರು ನೀಡಿದ ಪಟ್ಟಿಯನ್ನು ರಾಹುಲ್ ಗಾಂಧಿ ಒಪ್ಪಿಲ್ಲ. ಹಾಗಾದ್ರೆ, ಸಭೆಯಲ್ಲಿ ಏನೇನಾಯ್ತು? ರಾಜ್ಯ ನಾಯಕರಿಗೆ ರಾಹುಲ್ ಕೊಟ್ಟ ಸಲಹೆ ಏನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
- Pramod Shastri G
- Updated on: Jul 16, 2026
- 8:58 pm
ಹೆಚ್ಎಂಟಿ ಕಾರ್ಖಾನೆ ಜಾಗ ವಿವಾದ: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಗಂಭೀರ ಆರೋಪ
HMT Factory Land Row: ಹೆಚ್ಎಂಟಿ ಕಾರ್ಖಾನೆ ಜಾಗದ ವಿವಾದ ಸದ್ಯ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮಾತನಾಡಿದ್ದು, ಹೆಚ್ಎಂಟಿ ಕಾರ್ಖಾನೆಗೆ ಹೊಸ ರೂಪ ನೀಡಲು ನಿರ್ಧರಿಸಿದ್ದೇವೆ, ಆದರೆ ರಾಜ್ಯ ಸರ್ಕಾರ ಕಾರ್ಖಾನೆ ಮೇಲೆ ದಾಳಿ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
- Gangadhar Saboji
- Updated on: Jul 16, 2026
- 4:04 pm
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ ಸರ್ಕಸ್ ತೀವ್ರಗೊಂಡಿದ್ದು, ಈ ಸಂಬಂಧ ದೆಹಲಿಯಲ್ಲಿ ಸುರ್ಜೆವಾಲಾ ನಿವಾಸದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ವರಿಷ್ಠರ ಜೊತೆಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಮಂತ್ರಿ ಸ್ಥಾನ ಪಡೆದುಕೊಳ್ಳಲು ಅನೇಕ ಮಂದಿ ಪ್ರಯತ್ನ ನಡೆಸುತ್ತಿದ್ದಾರೆ. ಇಪ್ಪತ್ತು ಸ್ಥಾನಗಳ ಪೈಕಿ ಐವತ್ತು ಮಂದಿ ಲಾಬಿ ನಡೆಸುತ್ತಿದ್ದಾರೆ. ಆದರೆ ಎಷ್ಟು ಜನರಿಗೆ ಈ ಬಾರಿ ಅವಕಾಶ ಸಿಗುತ್ತದೆ? ಯಾರಿಗೆಲ್ಲಾ ಮಂತ್ರಿ ಸ್ಥಾನ? ಸಿಗಲಿದೆ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ವರಿಷ್ಠರ ಜೊತೆಗೆ ಚರ್ಚೆ ನಡೆಸುತ್ತಿದ್ದಾರೆ.
- Ramesh B Jawalagera
- Updated on: Jul 16, 2026
- 4:35 pm