AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress

Congress

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಸಾಮಾನ್ಯವಾಗಿ ಕಾಂಗ್ರೆಸ್ ಪಕ್ಷ ಎಂದು ಕರೆಯಲಾಗುತ್ತದೆ. ಇದು ಭಾರತದ ಅತ್ಯಂತ ಪುರಾತನ ಮತ್ತು ಪ್ರಮುಖ ರಾಜಕೀಯ ಸಂಸ್ಥೆಗಳಲ್ಲಿ ಒಂದಾಗಿದೆ. 1885 ರಲ್ಲಿ ಸ್ಥಾಪಿತವಾದ ಇದು ಬ್ರಿಟಿಷರ ಆಳ್ವಿಕೆಯಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ. ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರಂತಹ ನಾಯಕರು ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದವರು.

1947 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ಪ್ರಬಲ ರಾಜಕೀಯ ಶಕ್ತಿಯಾಯಿತು ಮತ್ತು ಸ್ವಾತಂತ್ರ್ಯದ ನಂತರದ ದಶಕಗಳ ಕಾಲ ಕೇಂದ್ರದಲ್ಲಿ ಸರ್ಕಾರವನ್ನು ರಚಿಸಿತು. ಆದರೆ ಇತ್ತೀಚೆಗೆ ಅಧಿಕಾರದಿಂದ ದೂರ ಉಳಿದಿದೆ. ಪಕ್ಷದ ಸಿದ್ಧಾಂತವು ಕಾಲಕಾಲಕ್ಕೆ ವಿಕಸನಗೊಳ್ಳುತ್ತಾ ಬಂದಿದೆ. ಸಮಾಜವಾದ, ಜಾತ್ಯತೀತ ಆಡಳಿತದ ಅಂಶಗಳನ್ನು ಒಳಗೊಂಡಿದೆ. ಇದು ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿವಿ ನರಸಿಂಹರಾವ್​, ಮನಮೋಹನ್ ಸಿಂಗ್ ಸೇರಿದಂತೆ ಹಲವಾರು ಪ್ರಧಾನ ಮಂತ್ರಿಗಳನ್ನು ನಿರ್ಮಿಸಿದೆ.

ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮತ್ತು ನಾನಾ ರಾಜ್ಯಗಳ ರಾಜಕೀಯದಲ್ಲಿ ತೊಡಗಿಸಿಕೊಂಡಿದೆ. ವಿವಿಧ ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳನ್ನು ಪ್ರತಿಪಾದಿಸುತ್ತದೆ. ಕಾಂಗ್ರೆಸ್ ಪಕ್ಷವು ದೇಶದ ಅನೇಕ ರಾಜ್ಯಗಳಲ್ಲಿಯೂ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಾ ಬಂದಿತ್ತು. ಆದಾಗ್ಯೂ, ಇತ್ತೀಚಿನ ವರ್ಷಗಳಲ್ಲಿ ಅದು ಕೆಲವು ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಇತರ ಪ್ರಾದೇಶಿಕ ಪಕ್ಷಗಳಿಂದ ಸವಾಲುಗಳನ್ನು ಎದುರಿಸುತ್ತಿದೆ. 

ಇನ್ನೂ ಹೆಚ್ಚು ಓದಿ

ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ ಕಿಡಿ

ಡಿಕೆ ಶಿವಕುಮಾರ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮುನ್ನ ಕಾಂಗ್ರೆಸ್​​​​ನಲ್ಲಿ ಉದ್ಭವಿಸಿದ ಕೆಲ ಗೊಂದಲಗಳು ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು...ಹೈಕಮಾಂಡ್ ನಿಂದ ಬಂದ ಪಟ್ಟಿಯನ್ನು ಬೆಂಗಳೂರಿನಲ್ಲಿ ಬದಲಾವಣೆ ಮಾಡಲಾಗಿತ್ತು. ಎಂಎಲ್​​ಸಿ ಗಾಯತ್ರಿ ಅವರನ್ನು ಹೊರಗಿಡಲಾಯ್ತು. ಇನ್ನು ಪಟ್ಟಿಯಲ್ಲಿ ಮಂಕಾಳ ವೈದ್ಯರನ್ನು ಕೈಬಿಟ್ಟು ಏಕಾಏಕಿ ಎಸ್​​ಎಸ್​​ ಮಲ್ಲಿಕಾರ್ಜುನ ಅವರನ್ನು ಸಚಿವರನ್ನಾಗಿ ಆಯ್ಕೆ ಮಾಡಲಾಯ್ತು. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಕೆಎನ್ ರಾಜಣ್ಣ, ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು. ಪಟ್ಟಿ ಬದಲಿಸಿದ್ದನ್ನು ಹಿಂದೆಂದೂ ನೋಡಿಲ್ಲ, ಕೇಳಿಯೂ ಇಲ್ಲ ಎಂದಿದ್ದಾರೆ.

ಸಚಿವ ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಸಚಿವ ಯತೀಂದ್ರ ಅವರಿಗೆ ಮತ್ತೊಂದು ಪ್ರಮುಖ ಜವಾಬ್ದಾರಿ ಸಿಗುವುದು ಬಹುತೇಕ ಖಚಿತವಾಗಿದೆ. ಖಾಲಿ ಇರುವ ವಿಧಾನ ಪರಿಷತ್​​ ಸಭಾ ನಾಯಕನ ಹೊಣೆ ಯತೀಂದ್ರ ಸಿದ್ದರಾಮಯ್ಯನವರ ಹೆಗಲಿಗೆ ಬೀಳುವ ಸಾಧ್ಯತೆ ಇದ್ದು, ಪರಿಷತ್​​ನಿಂದ ಯತೀಂದ್ರ ಸಿದ್ದರಾಮಯ್ಯ ಮಾತ್ರ ಏಕೈಕ ಸಚಿವರಾಗಿರೋದೆ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಎನ್​​​ಎಸ್ ಬೋಸರಾಜ್ ಅವರು ಸಚಿವರಾಗಿದ್ದರು. ಜೊತೆಗೆ ವಿಧಾನಪರಿಷತ್ ಸಭಾನಾಯಕರಾಗಿದ್ದರು. ಅದರಂತೆ ಇದೀಗ ಯತೀಂದ್ರ ಸಿದ್ದರಾಮಯ್ಯನವರಿಗೆ ಸಭಾನಾಯಕ ಸ್ಥಾನ ಒಲಿಯಲಿದೆ.

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಪ್ರತಿಭಟನೆ: ವಿಪಕ್ಷಗಳಿಗೆ ಡಿಕೆ ಶಿವಕುಮಾರ್ ಮೆಗಾ ಕೌಂಟರ್

ಬಿಡದಿ ಟೌನ್​ಶಿಪ್ ಸಮರ ತಾರಕಕ್ಕೇರಿದೆ. ಯೋಜನೆ ವಿರೋಧಿಸಿ ಇಂದು ಜೆಡಿಎಸ್​​ ಪಾದಯಾತ್ರೆ ನಡೆಸಿದೆ. ಹೀಗಿರುವಾಗ ಯೋಜನೆ ಕುರಿತು ಸಿಎಂ ಡಿಕೆ ಶಿವಕುಮಾರ್​​ ವಿಡಿಯೋ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಕೌಂಟರ್​​ ನೀಡಿದ್ದಾರೆ. ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಬಿಡದಿ ಟೌನ್​​ಶಿಪ್ ಯೋಜನೆಗೆ ಮರುಜೀವ ನೀಡಲಾಗುತ್ತಿದೆ. ಈ ಯೋಜನೆಯಿಂದ ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ ಎಂದಿದ್ದಾರೆ.

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್​​ ಪಾದಯಾತ್ರೆಗೆ ಚಾಲನೆ: ಯಾರೆಲ್ಲ ಭಾಗಿ?

ರಾಜ್ಯ ಸರ್ಕಾರದ ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ 'ನಮ್ಮ ಭೂಮಿ ನಮ್ಮ ಹಕ್ಕು' ಎಂಬ ಘೋಷಣೆಯಡಿ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಬೃಹತ್ ಪಾದಯಾತ್ರೆಗೆ ರಾಮನಗರ ಜಿಲ್ಲೆಯ ಬೈರಮಂಗಲ ಗ್ರಾಮದಲ್ಲಿ ಚಾಲನೆ ನೀಡಲಾಗಿದೆ. ಕೇಂದ್ರ ಸಚಿವ ಹೆಚ್​​.ಡಿ.ಕುಮಾರಸ್ವಾಮಿ ಮತ್ತು ಆರ್​. ಅಶೋಕ್​​​​​ ಪಾದಯಾತ್ರೆಗೆ ಹಸುರು ನಿಶಾನೆ ತೋರಿದ್ದು, ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂಪಾರ್ಕ್​ವರೆಗೂ ಪಾದಯಾತ್ರೆ ನಡೆಯಲಿದೆ.

ಯತೀಂದ್ರ ಸಿದ್ದರಾಮಯ್ಯಗೆ ಮತ್ತೊಂದು ಮಹತ್ವದ ಸ್ಥಾನ?: ಸಿಗಲಿದ್ಯಾ ವಿಧಾನ ಪರಿಷತ್​​ ಸಭಾ ನಾಯಕನ ಹೊಣೆ?

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮಯತ್ತು ಸಚಿವ ಯತೀಂದ್ರ ಅವರಿಗೆ ಮತ್ತೊಂದು ಪ್ರಮುಖ ಜವಾಬ್ದಾರಿ ಸಿಗುವುದು ಬಹುತೇಕ ಕನ್ಫರ್ನ್​​ ಆಗಿದೆ. ಖಾಲಿ ಇರುವ ವಿಧಾನ ಪರಿಷತ್​​ ಸಭಾ ನಾಯಕನ ಹೊಣೆ ಅವರ ಹೆಗಲಿಗೆ ಬೀಳುವ ಸಾಧ್ಯತೆ ಇದ್ದು, ಪರಿಷತ್​​ನಿಂದ ಯತೀಂದ್ರ ಸಿದ್ದರಾಮಯ್ಯ ಮಾತ್ರ ಏಕೈಕ ಸಚಿವರಾಗಿರೋದೆ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಆಗಸ್ಟ್ 13 ರಿಂದ ಆಗಸ್ಟ್ 27ರವರೆಗೆ ವಿಧಾನಮಂಡಲದ ಮುಂಗಾರು ಅಧಿವೇಶನ ನಿಗದಿಯಾಗಿದೆ.

ಕರ್ನಾಟಕ ಸಂಪುಟದಲ್ಲಿ ಮಹಿಳಾ ಸಚಿವರಿಲ್ಲ ಎಂದ ಕಿರಣ್ ರಿಜಿಜುಗೆ ಸಿಎಂ ಡಿಕೆ ಶಿವಕುಮಾರ್ ತಿರುಗೇಟು

ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರಿಲ್ಲದಿರುವುದನ್ನು ಟೀಕಿಸಿದ್ದ ಕೇಂದ್ರ ಸಚಿವ ಕಿರಣ್ ರಿಜಿಜು, ಮಹಿಳಾ ಪ್ರಾತಿನಿಧ್ಯದ ಕುರಿತು ಕಾಂಗ್ರೆಸ್ ಹೊಂದಿರುವ ಬದ್ಧತೆಯನ್ನು ಪ್ರಶ್ನಿಸಿದ್ದರು. ಮಹಿಳಾ ಸ್ವಾತಂತ್ರ್ಯ ಮತ್ತು ಸಬಲೀಕರಣದ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿಡಿಯೋ ಪೋಸ್ಟ್ ಮಾಡಿದ್ದರು. ಆ ಪೋಸ್ಟ್​ಗೆ ಕಾಮೆಂಟ್ ಮಾಡಿದ್ದ ಸಚಿವ ಕಿರಣ್ ರಿಜಿಜು ಮಹಿಳಾ ಮೀಸಲಾತಿ ವಿಧೇಯಕಕ್ಕೆ ವಿರೋಧಿಸುವ ಕಾಂಗ್ರೆಸ್ ಇದೀಗ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಿದೆ ಎಂದು ಟೀಕಿಸಿದ್ದರು. ಆಗ ಕರ್ನಾಟಕದ ಸಚಿವ ಸಂಪುಟದ ವಿಚಾರವಾಗಿಯೂ ಅವರು ಪ್ರಸ್ತಾಪಿಸಿದ್ದರು.

ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಮತ್ತೊಂದು ತಿರುವು: ಅಭಿಪ್ರಾಯಗಳ ಸಮಗ್ರ ಪರಿಶೀಲನೆಗೆ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚನೆ

ಬಿಡದಿ ಟೌನ್‌ಶಿಪ್‌ ಬಗ್ಗೆ ಪರ ವಿರೋದಗಳು ವ್ಯಕ್ತವಾಗಿದ್ದು, ಇದು ರಾಜಕಿಯ ಸ್ವರೂಪ ಪಡೆದುಕೊಂಡಿದೆ. ಒಂದೆಡೆ ಡಿಕೆ ಶಿವಕುಮಾರ್ ಸರ್ಕಾರ ಮಾಡಿಯೇ ತೀರಬೇಕೆಂದು ಹಠಕ್ಕೆ ಬಿದ್ದಿದ್ದರೆ, ಇನ್ನೊಂದೆಡೆ ವಿಪಕ್ಷಗಳು ಜೆಡಿಎಸ್ ಮತ್ತು ಬಿಜೆಪಿ ಟೌನ್​​ಶಿಪ್ ಮಾಡದಂತೆ ಪಟ್ಟು ಹಿಡಿದಿವೆ. ಹೀಗೆ ಈ ಯೋಜನೆ ಜಿದ್ದಾಜಿದ್ದಿಗೆ ಕಾರಣವಾಗಿದೆ. ಇದರ ಮಧ್ಯೆ ಇದಿಗ ಸರ್ಕಾರ, ಈ ಸಂಬಂಧ ಅಭಿಪ್ರಾಯಗಳ ಸಮಗ್ರ ಪರಿಶೀಲನೆಗೆ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚನೆ ಮಾಡಿದೆ.

ಸಮಸ್ಯೆಯಲ್ಲಿದ್ದವರಿಗೆ ಪರಿಹಾರ: ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್!

ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಬೆನ್ನಲ್ಲೇ ಕಾಂಗ್ರೆಸ್​​​​ನಲ್ಲಿ ಅಸಮಧಾನ ಸ್ಫೋಟಗೊಂಡಿದೆ. ಮಂತ್ರಿ ಸ್ಥಾನ ಸಿಗದ ಶಾಸಕರು ಪಕ್ಷದ ನಡೆಗೆ ಬೇಸರಗೊಂಡಿದ್ದು, ಇದೀಗ ಅವರನ್ನು ಸಮಾಧಾನಪಡಿಸಲು ಸಿಎಂ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಮನೆ ಮನೆಗೆ ತೆರಳಿ ಮಾತುಕತೆ ಮೂಲಕ ಮನವೊಲಿಸುವ ಯತ್ನ ನಡೆಸಿದ್ದಾರೆ. ಇದರ ಮಧ್ಯೆ ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಸಮಧಾನಿತ ಶಾಸಕರಿಗೆ ಜೆಡಿಎಸ್​​​​​​ಗೆ ಬರುವಂತೆ ಓಪನ್ ಆಫರ್ ನೀಡಿದ್ದಾರೆ.

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ: ಶಾರ್ಪ್​​​​ ಶೂಟರ್ಸ್​​​​​​ಗಳ ಭಯಾನಕ​​​ ಕ್ರೈಂ ಡೈರಿ ತೆರೆದಿಟ್ಟ ಎಸ್ಪಿ

ಉಡುಪಿಯ ಮುದರಂಗಡಿಯಲ್ಲಿ ಹಾಡಹಗಲೇ ನಡೆದ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಇಡೀ ಕರಾವಳಿಯನ್ನು ಬೆಚ್ಚಿಬೀಳಿಸಿದೆ. ಮಾಜಿ ಪಂಚಾಯತ್ ಅಧ್ಯಕ್ಷನಾಗಿದ್ದ ಡೇವಿಡ್, ತನ್ನ ಕಚೇರಿ ಎದುರೇ ಗುಂಡೇಟಿಗೆ ಬಲಿಯಾಗಿದ್ದ. ಸದ್ಯ ಪೊಲೀಸರು ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಹಂತಕರ ಕ್ರೈಂ ಡೈರಿಯನ್ನು ಸಹ ಉಡುಪಿ ಎಸ್ಪಿ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಮಹಿಳಾ ಮೀಸಲಾತಿ ವಿಧೇಯಕದ ಕುರಿತು ರಾಹುಲ್ ಗಾಂಧಿ- ಸಚಿವ ಕಿರಣ್ ರಿಜಿಜು ನಡುವೆ ತೀವ್ರ ವಾಕ್ಸಮರ

ಕ್ಷೇತ್ರ ಪುನರ್ ವಿಂಗಡಣೆ (Delimitation) ಪ್ರಕ್ರಿಯೆಯೊಂದಿಗೆ ಮಹಿಳಾ ಮೀಸಲಾತಿ ವಿಧೇಯಕವನ್ನು ಜೋಡಿಸುವ ಕೇಂದ್ರ ಸರ್ಕಾರದ ನಿರ್ಧಾರದಿಂದ ಉಂಟಾಗಿರುವ ಗೊಂದಲಗಳ ನಡುವೆ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಕೇಂದ್ರ ಸಚಿವ ಕಿರಣ್ ರಿಜಿಜು ಮಧ್ಯೆ ಇಂದು ತೀವ್ರ ವಾಕ್ಸಮರ ನಡೆದಿದೆ. ಮಹಿಳೆಯರ ಅಭಿವ್ಯಕ್ತಿ ಸ್ವಾತಂತ್ರ್ಯದ ಕುರಿತು ರಾಹುಲ್ ಗಾಂಧಿ ಮಾತನಾಡಿದ್ದ ವಿಡಿಯೋಗೆ ಕೇಂದ್ರ ಸಚಿವ ಕಿರಣ್ ರಿಜಿಜು ಕಾಮೆಂಟ್ ಮಾಡಿದ್ದು, ಈಗಲಾದರೂ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಬೆಂಬಲ ನೀಡುವಂತೆ ಸವಾಲು ಹಾಕಿದರು. ಇದಾದ ನಂತರ ಇಬ್ಬರು ನಡುವೆ ಪರಸ್ಪರ ಕಾಮೆಂಟ್​​ಗಳ ದಾಳಿ ಆರಂಭವಾಯಿತು.

HM ರೇವಣ್ಣ ಬದಲು HD ರೇವಣ್ಣ ಎಂದು ಹೇಳಿದ ಕಾಂಗ್ರೆಸ್ ಮುಖಂಡ, ಮುಂದೇನಾಯ್ತು?

ಸಚಿವ ಸ್ಥಾನ ಸಿಕ್ಕ ಬಳಿಕ ಎಚ್​​​​ಸಿ ಬಾಲಕೃಷ್ಣ ಅವರು ಮೊದಲ ಬಾರಿಗೆ ಸ್ವಕ್ಷೇತ್ರ ಮಾಗಡಿಗೆ ಆಗಮಿಸಿದ್ದು, ಈ ವೇಳೆ ಅವರ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಕೋರಿದ್ದಾರೆ. ಈ ವೇಳೆ ಕಾಂಗ್ರೆಸ್ ಮುಖಂಡರೊಬ್ಬರು H.M.ರೇವಣ್ಣ ಅನ್ನೋ ಬದಲು H.D.ರೇವಣ್ಣ ಎಂದು ಕರೆದಿದ್ದಾರೆ. ಇದರಿಂದ ಸಿಡಿಮಿಡಿಗೊಂಡ ಹೆಚ್​​​​ಎಂ ರೇವಣ್ಣ, ಅವನ‌ ಹೆಸರು ಯಾಕೆ ಹೇಳುತ್ತೀಯಾ? ನಾನು ಮಾಗಡಿಯ ರೇವಣ್ಣ, ಹಾಗೆ ಇರುತ್ತೇನೆ ಎಂದಿದ್ದಾರೆ. ರೇವಣ್ಣನವರ ಮಾತಿಗೆ ಕಾರ್ಯಕ್ರಮದಲ್ಲಿ ನೆರೆದಿದ್ದ ಜನ ನಗೆಗಡಲಲ್ಲಿ ತೇಲಾಡಿದರು.

‘ಸಚಿವ ಸ್ಥಾನ ತ್ಯಾಗ ಮಾಡುವುದಕ್ಕೆ 30 ಜನರು ರೆಡಿ ಇರಬೇಕು’: ಸಂಚಲನ ಮೂಡಿಸಿದ ಬಾಲಕೃಷ್ಣ ಹೇಳಿಕೆ

ಕರ್ನಾಟಕ ಸಚಿವ ಸಂಪುಟ ರಚನೆಯಾದಾಗಿನಿಂದಲೂ (New Cabinet) ಕೆಲವು ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಂತ್ರಿಗಿರಿ (Minister Post) ಕೈತಪ್ಪಿದ್ದಕ್ಕೆ ಕೆಲವರು ಬೇಸರಗೊಂಡಿದ್ದು, ನಾಯಕರ ಭೇಟಿಗೆ ಮುಂದಾಗಿದ್ದಾರೆ. ಇನ್ನು ಸಂಪುಟದಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ಶಾಸಕರ ವಿಚಾರದ ಬಗ್ಗೆ ಮಾತನಾಡಿದ ಸಚಿವ ಬಾಲಕೃಷ್ಣ (HC Balakrishna) 30 ಸಚಿವರು ತ್ಯಾಗಕ್ಕೆ ಸಿದ್ಧವಿರಬೇಕು ಎಂದಿದ್ದಾರೆ. ಯಾವ ಸಂದರ್ಭದಲ್ಲಿ ಏನಾಗಿತ್ತೋ ಗೊತ್ತಿಲ್ಲ ಎಂದು ಹೇಳಿದ್ದಾರೆ. ನೂತನ ಸಚಿವ ಬಾಲಕೃಷ್ಣ ಕೊಟ್ಟಿರುವ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ.

ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ