Congress

Congress

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಸಾಮಾನ್ಯವಾಗಿ ಕಾಂಗ್ರೆಸ್ ಪಕ್ಷ ಎಂದು ಕರೆಯಲಾಗುತ್ತದೆ. ಇದು ಭಾರತದ ಅತ್ಯಂತ ಪುರಾತನ ಮತ್ತು ಪ್ರಮುಖ ರಾಜಕೀಯ ಸಂಸ್ಥೆಗಳಲ್ಲಿ ಒಂದಾಗಿದೆ. 1885 ರಲ್ಲಿ ಸ್ಥಾಪಿತವಾದ ಇದು ಬ್ರಿಟಿಷರ ಆಳ್ವಿಕೆಯಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ. ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರಂತಹ ನಾಯಕರು ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದವರು.

1947 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ಪ್ರಬಲ ರಾಜಕೀಯ ಶಕ್ತಿಯಾಯಿತು ಮತ್ತು ಸ್ವಾತಂತ್ರ್ಯದ ನಂತರದ ದಶಕಗಳ ಕಾಲ ಕೇಂದ್ರದಲ್ಲಿ ಸರ್ಕಾರವನ್ನು ರಚಿಸಿತು. ಆದರೆ ಇತ್ತೀಚೆಗೆ ಅಧಿಕಾರದಿಂದ ದೂರ ಉಳಿದಿದೆ. ಪಕ್ಷದ ಸಿದ್ಧಾಂತವು ಕಾಲಕಾಲಕ್ಕೆ ವಿಕಸನಗೊಳ್ಳುತ್ತಾ ಬಂದಿದೆ. ಸಮಾಜವಾದ, ಜಾತ್ಯತೀತ ಆಡಳಿತದ ಅಂಶಗಳನ್ನು ಒಳಗೊಂಡಿದೆ. ಇದು ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿವಿ ನರಸಿಂಹರಾವ್​, ಮನಮೋಹನ್ ಸಿಂಗ್ ಸೇರಿದಂತೆ ಹಲವಾರು ಪ್ರಧಾನ ಮಂತ್ರಿಗಳನ್ನು ನಿರ್ಮಿಸಿದೆ.

ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮತ್ತು ನಾನಾ ರಾಜ್ಯಗಳ ರಾಜಕೀಯದಲ್ಲಿ ತೊಡಗಿಸಿಕೊಂಡಿದೆ. ವಿವಿಧ ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳನ್ನು ಪ್ರತಿಪಾದಿಸುತ್ತದೆ. ಕಾಂಗ್ರೆಸ್ ಪಕ್ಷವು ದೇಶದ ಅನೇಕ ರಾಜ್ಯಗಳಲ್ಲಿಯೂ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಾ ಬಂದಿತ್ತು. ಆದಾಗ್ಯೂ, ಇತ್ತೀಚಿನ ವರ್ಷಗಳಲ್ಲಿ ಅದು ಕೆಲವು ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಇತರ ಪ್ರಾದೇಶಿಕ ಪಕ್ಷಗಳಿಂದ ಸವಾಲುಗಳನ್ನು ಎದುರಿಸುತ್ತಿದೆ. 

ಇನ್ನೂ ಹೆಚ್ಚು ಓದಿ

ಮಂಗಳೂರಿನಲ್ಲಿ ಕುಣಿತ ಭಜನೆ ವಾರ್: ಹಿಂದುಳಿದ ವರ್ಗದ ಹೆಣ್ಮಕ್ಕಳನ್ನು ಬೀದಿಯಲ್ಲಿ ಕುಣಿಸಲಾಗುತ್ತಿದೆ ಎಂದ ಕಾಂಗ್ರೆಸ್ ನಾಯಕಿ

ಕರ್ನಾಟಕ ಕರಾವಳಿಯಲ್ಲಿ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಹೆಚ್ಚಿನ ಕಡೆಗಳಲ್ಲಿ ಕುಣಿತ ಭಜನೆ ಸಾಮಾನ್ಯವಾಗಿ ನಡೆಯುತ್ತದೆ. ಆದರೆ, ಈ ಭಜನೆಗಳಲ್ಲಿ ಭಾಗವಹಿಸುವ ಹಿಂದೂ ಹೆಣ್ಮಕ್ಕಳ ಬಗ್ಗೆ ಅರಣ್ಯಾಧಿಕಾರಿಯೊಬ್ಬರು ನೀಡಿದ್ದ ವಿವಾದಾದ್ಮತಕ ಹೇಳಿಕೆ ಬಳಿಕ ಮಂಗಳೂರಿನಲ್ಲಿ ಕುಣಿತ ಭಜನೆಯ ವಾರ್ ಆರಂಭವಾಗಿದೆ. ಈ ಪ್ರಕರಣ ಬೆನ್ನಲ್ಲೇ ಕಾಂಗ್ರೆಸ್ ನಾಯಕಿಯೊಬ್ಬರು ನೀಡಿರುವ ಹೇಳಿಕೆ ಹೊಸ ಚರ್ಚೆಗೆ ಎಡೆಮಾಡಿ ಕೊಟ್ಟಿದೆ. ವಿವರ ಇಲ್ಲಿದೆ.

  • Ashok
  • Updated on: Oct 22, 2024
  • 2:58 pm

ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್​​​ನಿಂದ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಸ್ಫೋಟಕ ಹೇಳಿಕೆ

ಚನ್ನಪಟ್ಟಣ ಉಪಚುನಾವಣೆ ಅಖಾಡ ರಂಗೇರುತ್ತಿದೆ. ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿರುವ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದೇ ಹೇಳುತ್ತಿದ್ದಾರೆ. ಈ ಮಧ್ಯೆ, ಕಾಂಗ್ರೆಸ್ ಸೇರ್ಪಡೆ ವದಂತಿಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಚನ್ನಪಟ್ಟಣ ಅಖಾಡದಲ್ಲಿ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: ‘ಕೈ’ ತಂತ್ರಗಳು ಹೀಗಿವೆ ನೋಡಿ

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಕಣ ರಂಗೇರುತ್ತಿದೆ. ಅದರಲ್ಲೂ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣದಲ್ಲಿ ರಣತಂತ್ರಗಳು ಜೋರಾಗುತ್ತಿವೆ. ಅತ್ತ ಬಿಜೆಪಿ, ಎನ್​ಡಿಎಯಲ್ಲಿ ಟಿಕೆಟ್ ಗೊಂದಲ ಹೆಚ್ಚಾಗಿರುವ ಬೆನ್ನಲ್ಲೇ ಅದರ ಲಾಭ ಪಡೆಯಲು ಕಾಂಗ್ರೆಸ್ ತಂತ್ರಗಾರಿಕೆ ರೂಪಿಸುತ್ತಿವೆ. ಆ ಕುರಿತ ವಿವರ ಇಲ್ಲಿದೆ.

ವಿಜಯಪುರದಲ್ಲಿ ರೈತರ ಜಮೀನು ವಕ್ಫ್​ ಬೋರ್ಡ್​ಗೆ ಸೇರಿಸುವ ಹುನ್ನಾರ: ಆತಂಕಗೊಂಡ ಅನ್ನದಾತರು

ವಿಜಯಪುರ ಜಿಲ್ಲೆಯಲ್ಲಿ ವಕ್ಪ್ ಕಾಯ್ದೆ ಬಗ್ಗೆ ಚರ್ಚೆ ತೀವ್ರಗೊಂಡಿದ್ದು, ಕೆಲ ರೈತರ ಜಮೀನುಗಳ ಆರ್​ಟಿಸಿಯಲ್ಲಿ ವಕ್ಫ್ ಸೇರಿಸಲು ಅಧಿಕಾರಿಗಳು ಮುಂದಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಅಲ್ಲದೇ ಕೆಲ ರೈತರಿಗೆ ನೋಟಿಸ್​ ಸಹ ನೀಡಲಾಗಿದೆ. ಇದರಿಂದ ಆತಂಕಗೊಂಡ ರೈತರು ಸಚಿವ ಎಂಪಿ ಪಾಟೀಲ್​ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಇನ್ನು ಇದಕ್ಕೆ ಬಿಜೆಪಿ ಸಹ ಸರ್ಕಾರದ ವಿರುದ್ಧ ಕಿಡಿಕಾರಿದೆ.

ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆ: ಶೇಕಡಾ 97.91ರಷ್ಟು ಮತದಾನ

ಉಡುಪಿ-ಚಿಕ್ಕಮಗಳೂರು ಸಂಸದರಾಗಿ ಶ್ರೀನಿವಾಸ ಪೂಜಾರಿ ಆಯ್ಕೆಯಾಗಿದ್ದಾರೆ. ಅವರ ರಾಜೀನಾಮೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ವ್ಯಾಪ್ತಿಯನ್ನು ಒಳಗೊಂಡಿರುವ ಪರಿಷತ್ ಸ್ಥಾನ  ತೆರವಾಗಿತ್ತು. ಹೀಗಾಗಿ ಇಂದು ಉಪ ಚುನಾವಣೆ ನಡೆದಿದ್ದು, ಶೇಕಡಾ 97.91ರಷ್ಟು ಮತದಾನವಾಗಿದೆ. ಆ ಮೂಲಕ ಗೆಲುವು ಯಾರಿಗೆ ಎಂದು ಪ್ರಶ್ನೆ ಮೂಡಿದೆ.

  • Ashok
  • Updated on: Oct 21, 2024
  • 8:08 pm

ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ನಿಖಿಲ್ ಹಿಂಜರಿಯುತ್ತಿರುವುದೇಕೆ?ಇಲ್ಲಿವೆ ಪ್ರಮುಖ ಕಾರಣಗಳು

ಚನ್ನಪಟ್ಟಣದ ಚದುರಂಗದಾಟ ಮತ್ತಷ್ಟು ರಂಗೇರಿದೆ. ಅದಕ್ಕೆ ಕಾರಣ ಟಿಕೆಟ್​ಗಾಗಿ ಪಟ್ಟು ಹಿಡಿದಿದ್ದ ಸಿ.ಪಿ.ಯೋಗೇಶ್ವರ್ ಇದೀಗ ಬಿಜೆಪಿಯ ವಿಧಾಮಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಮೂರು ಕ್ಷೇತ್ರಗಳ ಪೈಕಿ ಹೈವೋಲ್ಟೇಜ್ ಎನಿಸಿರುವ ಚನ್ನಪಟ್ಟಣದ ಕದನ ಮೆಗಾವೋಲ್ಟೇಜ್​ಗೆ ತಿರುಗಿದೆ. ಸಿಪಿ ಯೋಗೇಶ್ವರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಜೆಡಿಎಸ್​ನಲ್ಲಿ ಮಹತ್ವದ ರಾಜಕೀಯ ಬೆಳವಣಿಗಳು ನಡೆದಿದ್ದು, ಅಂದರ್ ಬಾಹರ್ ಅಸಲಿ ಆಟ ಈಗ ಶುರುವಾಗಿದೆ.

ತೀವ್ರ ವಿವಾದಕ್ಕೆ ಕಾರಣವಾಗಿದ್ದ 545 PSI ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬಿಜೆಪಿ ಸರ್ಕಾರದ ಅವಧಿಯಲ್ಲಿ 545 ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಇದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸಾಕಷ್ಟು ಜನರನ್ನು ಬಂಧಿಸಲಾಗಿತ್ತು. ಹೈಕೋರ್ಟ್ ಮರು ಪರೀಕ್ಷೆಗೆ ಸೂಚನೆ ಮೇರಿಗೆ ಪರೀಕ್ಷೆ ನಡೆಸಿದ್ದು, ಇದೀಗ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಗೃಹ ಇಲಾಖೆ ಪ್ರಕಟಿಸಿದೆ.

ಅನ್ನಭಾಗ್ಯ ಯೋಜನೆಯಲ್ಲಿ ಮಹತ್ವ ಬದಲಾವಣೆ: ಸರ್ಕಾರದ ಹೊಸ ಪ್ಲ್ಯಾನ್ ಏನು?

ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿ ವಿತರಿಸುವುದಾಗಿ ಕಾಂಗ್ರೆಸ್ ಹೇಳಿತ್ತು. ಇದೀಗ ಕೇಂದ್ರದಿಂದ ರಾಜ್ಯಕ್ಕೆ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ವಿತರಿಸಿದರೆ, ರಾಜ್ಯ ಸರ್ಕಾರ ಫಲಾನುಭವಿಗಳಿಗೆ ಆಹಾರ ಕಿಟ್ ವಿತರಣೆಗೆ ಚಿಂತನೆ ನಡೆಸಿದೆ. ಆ ಮೂಲಕ ಆಹಾರ ಕಿಟ್​ ವಿತರಣೆಗೆ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಒಲವು ತೋರಿಸಿದ್ದಾರೆ.

ಬಿಜೆಪಿ-ಜೆಡಿಎಸ್​ ಮೈತ್ರಿಯಲ್ಲಿ ಬಿರುಕು: ಪರಿಷತ್ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ

CP Yogeshwar resigns ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ವೇಳೆಯಲ್ಲೇ ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿದ್ದು, ಜೆಡಿಎಸ್​ ಬಿಜೆಪಿ ನಡುವೆ ಬಿರುಕು ಕಾಣಿಸಿಕೊಂಡಿದೆ. ಇದಕ್ಕೆ ಪೂರಕವೆಂಬಂತೆ ಬಿಜೆಪಿಯ ಸಿಪಿ ಯೋಗೇಶ್ವರ್​ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಕ್ರಮ‌ಕ್ಕೆ ಕೋರಿದ್ದ ಪಿಐಎಲ್ ವಜಾ: ಅರ್ಜಿದಾರರಿಗೆ 25 ಸಾವಿರ ದಂಡ

ಪ್ರಜ್ವಲ್ ರೇವಣ್ಣ ಟೀಕಿಸುವ ಭರದಲ್ಲಿ ಮಹಿಳೆಯರ ಮಾನಹಾನಿ ಮಾಡಿದ್ದಾರೆ ಎನ್ನುವ ಆರೋಪ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ರಾಹುಲ್ ಗಾಂಧಿ ವಿರುದ್ಧ ಕ್ರಮ‌ ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಕರ್ನಾಟಕ ಹೈಕೋರ್ಟ್​ ವಜಾಗೊಳಿಸಿ ದಂಡ ವಿಧಿಸಿದೆ.

ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ