AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress

Congress

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಸಾಮಾನ್ಯವಾಗಿ ಕಾಂಗ್ರೆಸ್ ಪಕ್ಷ ಎಂದು ಕರೆಯಲಾಗುತ್ತದೆ. ಇದು ಭಾರತದ ಅತ್ಯಂತ ಪುರಾತನ ಮತ್ತು ಪ್ರಮುಖ ರಾಜಕೀಯ ಸಂಸ್ಥೆಗಳಲ್ಲಿ ಒಂದಾಗಿದೆ. 1885 ರಲ್ಲಿ ಸ್ಥಾಪಿತವಾದ ಇದು ಬ್ರಿಟಿಷರ ಆಳ್ವಿಕೆಯಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ. ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರಂತಹ ನಾಯಕರು ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದವರು.

1947 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ಪ್ರಬಲ ರಾಜಕೀಯ ಶಕ್ತಿಯಾಯಿತು ಮತ್ತು ಸ್ವಾತಂತ್ರ್ಯದ ನಂತರದ ದಶಕಗಳ ಕಾಲ ಕೇಂದ್ರದಲ್ಲಿ ಸರ್ಕಾರವನ್ನು ರಚಿಸಿತು. ಆದರೆ ಇತ್ತೀಚೆಗೆ ಅಧಿಕಾರದಿಂದ ದೂರ ಉಳಿದಿದೆ. ಪಕ್ಷದ ಸಿದ್ಧಾಂತವು ಕಾಲಕಾಲಕ್ಕೆ ವಿಕಸನಗೊಳ್ಳುತ್ತಾ ಬಂದಿದೆ. ಸಮಾಜವಾದ, ಜಾತ್ಯತೀತ ಆಡಳಿತದ ಅಂಶಗಳನ್ನು ಒಳಗೊಂಡಿದೆ. ಇದು ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿವಿ ನರಸಿಂಹರಾವ್​, ಮನಮೋಹನ್ ಸಿಂಗ್ ಸೇರಿದಂತೆ ಹಲವಾರು ಪ್ರಧಾನ ಮಂತ್ರಿಗಳನ್ನು ನಿರ್ಮಿಸಿದೆ.

ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮತ್ತು ನಾನಾ ರಾಜ್ಯಗಳ ರಾಜಕೀಯದಲ್ಲಿ ತೊಡಗಿಸಿಕೊಂಡಿದೆ. ವಿವಿಧ ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳನ್ನು ಪ್ರತಿಪಾದಿಸುತ್ತದೆ. ಕಾಂಗ್ರೆಸ್ ಪಕ್ಷವು ದೇಶದ ಅನೇಕ ರಾಜ್ಯಗಳಲ್ಲಿಯೂ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಾ ಬಂದಿತ್ತು. ಆದಾಗ್ಯೂ, ಇತ್ತೀಚಿನ ವರ್ಷಗಳಲ್ಲಿ ಅದು ಕೆಲವು ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಇತರ ಪ್ರಾದೇಶಿಕ ಪಕ್ಷಗಳಿಂದ ಸವಾಲುಗಳನ್ನು ಎದುರಿಸುತ್ತಿದೆ. 

ಇನ್ನೂ ಹೆಚ್ಚು ಓದಿ

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ ಎಸ್​​ಎಸ್

ಕೊಡುಗೈ ದಾನಿ, ಶಿಕ್ಷಣ ಸಂಸ್ಥೆಗಳ ಒಡೆಯ, ಪ್ರಭಾವಿ ವೀರಶೈವ ಲಿಂಗಾಯತ ಸಮಾಜದ ಮುಖಂಡ, ಹಿರಿಯ ರಾಜಕಾರಣಿ, ಮಾಜಿ ಮಂತ್ರಿ, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. 94 ವರ್ಷದ ಶಾಮನೂರು ಶಿವಶಂಕರಪ್ಪ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ರು. ಕಳೆದ ಒಂದು ತಿಂಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಚಿಕಿತ್ಸೆ ಫಲಿಸದೇ ಇಂದು ಸಂಜೆ 6ಗಂಟೆ 45 ನಿಮಿಷಕ್ಕೆ ಕೊನೆಯುಸಿರೆಳೆದಿದ್ದಾರೆ.

ಶಾಮನೂರು ಶಿವಶಂಕರಪ್ಪ ನಿಧನ: ಡಿ 15ರಂದು ಶಾಲಾ-ಕಾಲೇಜುಗಳಿಗೆ ರಜೆ, ಅಂತ್ಯಕ್ರಿಯೆ ಎಲ್ಲಿ ಗೊತ್ತಾ?

ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ಅವರ ಅಗಲಿಕೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆ ಗೌರವಾರ್ಥವಾಗಿ ಡಿಸೆಂಬರ್​ 15ರಂದು ದಾವಣಗೆರೆ ನಗರ ವ್ಯಾಪ್ತಿಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆಯೇ ಅಂತ್ಯಕ್ರಿಯೆ ಕೂಡ ನಡೆಯಲಿದೆ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು? ಆಸ್ಪತ್ರೆ ಮುಖ್ಯಸ್ಥ ಕೊಟ್ಟ ಮಾಹಿತಿ ಹೀಗಿದೆ

ಶಾಮನೂರು ಶಿವಶಂಕರಪ್ಪ ನಿಧನದ ಬಗ್ಗೆ ಸ್ಪರ್ಶ ಆಸ್ಪತ್ರೆಯ ಮುಖ್ಯಸ್ಥ, ಅಳಿಯ ಆಗಿರುವ ಡಾ.ಶಾರಣ್ ಶಿವರಾಜ್ ಪಾಟೀಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಅಕ್ಟೋಬರ್ 23 ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಇಂದು 6:20 ಕ್ಕೆ ನಿಧನರಾಗಿದ್ದಾರೆ. ಆಸ್ಪತ್ರೆ ಕಡೆಯಿಂದ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಅವರ ಮಗ ಬಂದ ನಂತರ ಮುಂದಿನ ನಿರ್ಧಾರ ಮಾಡಲಾಗುತ್ತೆ ಎಂದು ತಮ್ಮ ಮಾವನ ಸಾವಿನ ಬಗ್ಗೆ ಮಾಹಿತಿ ನೀಡಿದರು.

ಭಾರತದಲ್ಲೇ ಹಿರಿಯ ಶಾಸಕ ಎನ್ನಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ರಾಜಕೀಯ ಹೇಗಿತ್ತು ನೋಡಿ

Shamanur Shivashankarappa passes away: ಸರಳ ಸಜ್ಜನಿಕೆಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜಕೀಯ ಧುರೀಣ ಇನ್ನಿಲ್ಲ. ಪ್ರಭಾವಿ ವೀರಶೈವ ಲಿಂಗಾಯತ ಸಮಾಜದ ಮುಖಂಡರಾಗಿದ್ದ ಶಾಮನೂರು ಶಿವಶಂಕರಪ್ಪ ಕೊಡುಗೈ ದಾನಿ, ಶಿಕ್ಷಣ ಸಂಸ್ಥೆಗಳ ಒಡೆಯರಾಗಿದ್ದರು. ಅವರು ಸಾಗಿ ಬಂದ ರಾಜಕೀಯ ಜೀವನ ಹೀಗಿತ್ತು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Shamanur Shivashankarappa Death: ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಶಾಮನೂರು ಶಿವಶಂಕರಪ್ಪ ನಿಧನ: ಕಾಂಗ್ರೆಸ್​​​ನ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ವೋಟ್ ಚೋರಿ ವಿರುದ್ಧ ಕಾಂಗ್ರೆಸ್​​ ಹೋರಾಟ: ದೆಹಲಿಯಲ್ಲಿ ಪ್ರತಿಧ್ವನಿಸಿದ ಆಳಂದ ಕ್ಷೇತ್ರದ ಮತಗಳ್ಳತನ

ಮತಗಳ್ಳತನ ಬಾಂಬ್ ಕರ್ನಾಟಕದಿಂದಲೇ ಸಿಡಿದಿತ್ತು. ಕಲಬುರಗಿಯ ಆಳಂದ, ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿನ ವೋಟ್ ಚೋರಿ ಆರೋಪದ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಖುದ್ದು ರಾಹುಲ್ ಗಾಂಧಿ, ಈ ವಿಚಾರವನ್ನ ಕೈಗೆತ್ತಿಕೊಂಡು ಸಮರ ಸಾರಿದ್ದರು. ಈಗ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದು, ಆ ಮೂಲಕ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಶಿವಾಜಿಯನ್ನು ಮುಸ್ಲಿಂ ವಿರೋಧಿ ಅನ್ನಬಾರದು: ಲಾಡ್​ ಹೇಳುತ್ತಿದ್ದಂತೆಯೇ ಮೊಳಗಿತು ಜೈ ಶ್ರೀರಾಮ್​​ ಘೋಷಣೆ

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಇಂದು ಶಿವಾಜಿ ಪ್ರತಿಮೆ ಅನಾವರಣಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್​​ ಲಾಡ್​​, ನಾನು ಮರಾಠ ಸಮುದಾಯದವನು. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ. ಹೀಗಾಗಿ ಇಲ್ಲಿ ಯಾರೂ ಇತಿಹಾಸದ ಬಗ್ಗೆ ಸುಳ್ಳು ಹೇಳಬಾರದು ಎಂದಿದ್ದಾರೆ.​

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್​ ಆಹ್ವಾನ

ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಕ್ರಿಯೆಯನ್ನು ಕೆಎಸ್ಐಐಡಿಸಿ ಪ್ರಾರಂಭಿಸಿದ್ದು, ನಗರದ ಹೊರವಲಯದಲ್ಲಿರುವ ಮೂರು ಸ್ಥಳಗಳ ವಿವರವಾದ ಕಾರ್ಯತಂತ್ರ ಮತ್ತು ತಾಂತ್ರಿಕ ಕಾರ್ಯಸಾಧ್ಯತಾ ಮೌಲ್ಯಮಾಪನಕ್ಕಾಗಿ ಸಲಹೆಗಾರರನ್ನು ನೇಮಿಸಲು ಟೆಂಡರ್ ಕರೆಯಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್​ ಮಾಹಿತಿ ನೀಡಿದ್ದಾರೆ.

ಅಪಾರ್ಟ್​ಮೆಂಟ್​​ ನಿವಾಸಿಗಳೊಂದಿಗೆ ಸಂವಾದ ವೇಳೆ ಡಿಕೆ ಶಿವಕುಮಾರ್​​ ಗರಂ! ಡಿಸಿಎಂ ಮಾತಿಗೆ ಅಸಮಾಧಾನ

ಬೆಂಗಳೂರಿನ ಅಪಾರ್ಟ್​ಮೆಂಟ್ ನಿವಾಸಿಗಳ ಜೊತೆ ನಡೆದ ಸಂವಾದದ ವೇಳೆ ಡಿಸಿಎಂ ಡಿಕೆ ಶಿವಕುಮಾರ್​, ವೇದಿಕೆ ಮೇಲೆಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಲಾಕ್ ಮೇಲ್ ತಂತ್ರಕ್ಕೆ ಹೆದರಲ್ಲ, ಹುಷಾರ್ ಅಂತ ಎಚ್ಚರಿಕೆ ನೀಡಿದ್ದಾರೆ. ಸದ್ಯ ಡಿಕೆ ಶಿವಕುಮಾರ್​​​ ಮಾತಿಗೆ ಉದ್ಯಮಿ ಸೇರಿದಂತೆ ವಿಪಕ್ಷ ನಾಯಕರು ಕಿಡಿಕಾರಿದ್ದಾರೆ.

ವೋಟ್ ಚೋರಿ ವಿರುದ್ಧ ದೆಹಲಿಯಲ್ಲಿ ನಾಳೆ ಕಾಂಗ್ರೆಸ್​​ ಪ್ರತಿಭಟನೆ: ಸಿಎಂ, ಡಿಸಿಎಂ ಭಾಗಿ

ಮತಕಳವು ನಡೆದಿದೆ ಅಂತಾ ಸುದ್ದಿಗೋಷ್ಠಿ ನಡೆಸಿ, ಬಾಂಬ್ ಸಿಡಿಸಿದ್ದ ರಾಹುಲ್ ಗಾಂಧಿ, ಆಳಂದ ಕ್ಷೇತ್ರದ ಕಳ್ಳತನವನ್ನ ಬಯಲು ಮಾಡಿದ್ದರು. ಪ್ರಕರಣ ಸಂಬಂಧ ಬೆಂಗಳೂರಿನ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದೆ. ಇದೇ ಹೊತ್ತಲ್ಲಿ ನಾಳೆ ದೆಹಲಿಯಲ್ಲಿ ಕಾಂಗ್ರೆಸ್ ಪಡೆ ಅಭಿಯಾನ ಹಮ್ಮಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಭಾಗಿಯಾಗುತ್ತಿದ್ದಾರೆ.

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ

ತುಮಕೂರಿನ ಹೆಗ್ಗೆರೆ ಮೇಲ್ಸೇತುವೆ ಕಾಮಗಾರಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ, ಪರಮೇಶ್ವರ್ ಮುಖ್ಯಮಂತ್ರಿ ಆಗಬೇಕು.ಪರಮೇಶ್ವರ್ ಸಿಎಂ ಆಗಲಿ ಅನ್ನೋ ಆಸೆ ನನಗೆ ಇದೆ. ನಾನು ಮಂತ್ರಿಯಾದ ಮೇಲೆ ಮೊದಲು ಕರೆ ಮಾಡಿದ್ದು ಪರಮೇಶ್ವರ್ ಎಂದು ಗೃಹ ಸಚಿವರ ಪರ ವಿ.ಸೋಮಣ್ಣ ಬ್ಯಾಟ್​ ಬೀಸಿದ್ದಾರೆ.

ಕುರ್ಚಿ ಕದನ: ಶಾಸಕ ಇಕ್ಬಾಲ್​ ಹುಸೇನ್​ ಮಾತನ್ನು ಯಾರು ನಂಬಬೇಡಿ; ಡಿಕೆ ಶಿವಕುಮಾರ್​

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ. ಶಾಸಕ ಇಕ್ಬಾಲ್​ ಹುಸೇನ್ ನೀಡಿರುವ​ ಸ್ಫೋಟಕ ಹೇಳಿಕೆ ಸದ್ಯ ಸಂಚಲನ ಸೃಷ್ಟಿಸಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್​, ಶಾಸಕ ಇಕ್ಬಾಲ್​ ಹುಸೇನ್​ಗೆ​ ಮಾತಿನ ಚಟ. ಯಾರು ಅವನ ಮಾತನ್ನು ನಂಬಲು ಹೋಗಬೇಡಿ ಎಂದು ಹೇಳಿದ್ದಾರೆ.

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ