Congress
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಸಾಮಾನ್ಯವಾಗಿ ಕಾಂಗ್ರೆಸ್ ಪಕ್ಷ ಎಂದು ಕರೆಯಲಾಗುತ್ತದೆ. ಇದು ಭಾರತದ ಅತ್ಯಂತ ಪುರಾತನ ಮತ್ತು ಪ್ರಮುಖ ರಾಜಕೀಯ ಸಂಸ್ಥೆಗಳಲ್ಲಿ ಒಂದಾಗಿದೆ. 1885 ರಲ್ಲಿ ಸ್ಥಾಪಿತವಾದ ಇದು ಬ್ರಿಟಿಷರ ಆಳ್ವಿಕೆಯಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ. ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರಂತಹ ನಾಯಕರು ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದವರು.
1947 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ಪ್ರಬಲ ರಾಜಕೀಯ ಶಕ್ತಿಯಾಯಿತು ಮತ್ತು ಸ್ವಾತಂತ್ರ್ಯದ ನಂತರದ ದಶಕಗಳ ಕಾಲ ಕೇಂದ್ರದಲ್ಲಿ ಸರ್ಕಾರವನ್ನು ರಚಿಸಿತು. ಆದರೆ ಇತ್ತೀಚೆಗೆ ಅಧಿಕಾರದಿಂದ ದೂರ ಉಳಿದಿದೆ. ಪಕ್ಷದ ಸಿದ್ಧಾಂತವು ಕಾಲಕಾಲಕ್ಕೆ ವಿಕಸನಗೊಳ್ಳುತ್ತಾ ಬಂದಿದೆ. ಸಮಾಜವಾದ, ಜಾತ್ಯತೀತ ಆಡಳಿತದ ಅಂಶಗಳನ್ನು ಒಳಗೊಂಡಿದೆ. ಇದು ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿವಿ ನರಸಿಂಹರಾವ್, ಮನಮೋಹನ್ ಸಿಂಗ್ ಸೇರಿದಂತೆ ಹಲವಾರು ಪ್ರಧಾನ ಮಂತ್ರಿಗಳನ್ನು ನಿರ್ಮಿಸಿದೆ.
ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮತ್ತು ನಾನಾ ರಾಜ್ಯಗಳ ರಾಜಕೀಯದಲ್ಲಿ ತೊಡಗಿಸಿಕೊಂಡಿದೆ. ವಿವಿಧ ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳನ್ನು ಪ್ರತಿಪಾದಿಸುತ್ತದೆ. ಕಾಂಗ್ರೆಸ್ ಪಕ್ಷವು ದೇಶದ ಅನೇಕ ರಾಜ್ಯಗಳಲ್ಲಿಯೂ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಾ ಬಂದಿತ್ತು. ಆದಾಗ್ಯೂ, ಇತ್ತೀಚಿನ ವರ್ಷಗಳಲ್ಲಿ ಅದು ಕೆಲವು ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಇತರ ಪ್ರಾದೇಶಿಕ ಪಕ್ಷಗಳಿಂದ ಸವಾಲುಗಳನ್ನು ಎದುರಿಸುತ್ತಿದೆ.
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ದೆಹಲಿ ಭೇಟಿ ಬಗ್ಗೆ ಡಿಕೆಶಿ ಅಚ್ಚರಿಯ ಹೇಳಿಕೆ
ಸಿಎಂ ಸಿದ್ದರಾಮಯ್ಯ ಅಧಿಕಾರ ಹಂಚಿಕೆ ಮಾತನ್ನು ವಿಧಾನಸಭೆಯೊಳಗೆ ನಿಂತು ಶುಕ್ರವಾರ ಅಲ್ಲಗಳೆದಿದ್ದರು. ಎರಡೂವರೆ ವರ್ಷದ ತೀರ್ಮಾನ ಆಗಿಲ್ಲ. ಐದು ವರ್ಷವೂ ನಾನೇ ಸಿಎಂ ಎಂದಿದ್ದರು. ಈ ಬೆನ್ನಲ್ಲೇ ಹೈಕಮಾಂಡ್ ಕಡೆಗೆ ಕಾಂಗ್ರೆಸ್ನ ಗಮನ ಹೋಗಿದೆ. ಈ ನಡುವೆ ಡಿಕೆಶಿ ದೆಹಲಿಗೆ ಪ್ರಯಾಣ ಬೆಳೆಸಲು ಸಜ್ಜಾಗಿದ್ದಾರೆ.
- Ganapathi Sharma
- Updated on: Dec 20, 2025
- 1:45 pm
ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ: ಕಾಂಗ್ರೆಸ್ ಮುಖಂಡನ ವಿರುದ್ಧ ಪ್ರಕರಣ ದಾಖಲು
ಬಡವರ ಹೊಟ್ಟೆ ತುಂಬಲಿ ಎಂದು ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆ ಸುಮಾರು ಕಡೆಗಳಲ್ಲಿ ದಾರಿ ತಪ್ಪುತ್ತಿದೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡನೊಬ್ಬ ಅನ್ನಭಾಗ್ಯ ಅಕ್ಕಿಯನ್ನು ಫಲಾನುಭವಿಗಳಿಂದ ಅಕ್ಕಿ ಖರೀದಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಸದ್ಯ ಈ ವಿಚಾರವಾಗಿ ಪ್ರಕರಣ ಕೂಡ ದಾಖಲಾಗಿದೆ.
- Ganapathi Sharma
- Updated on: Dec 20, 2025
- 6:43 am
ಡಿಕೆ ಶಿವಕುಮಾರ್ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಆಂದ್ಲೆ ಜಗದೀಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಿ ಅವರಿಗೆ ಮುನ್ಸೂಚನೆಗಳನ್ನು ನೀಡಿದ್ದು, ಅವರ ಇಷ್ಟಾರ್ಥಗಳು ಈಡೇರಲಿವೆ ಎಂದು ಅರ್ಚಕ ಗಣೇಶ್ ನಾಯಕ್ ತಿಳಿಸಿದ್ದಾರೆ. ವಿಡಿಯೋ ನೋಡಿ.
- Suraj Mahaveer Utture
- Updated on: Dec 19, 2025
- 9:30 pm
ಅದು ನನಗೆ ಗೊತ್ತಿದೆ: ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಅಧಿವೇಶನ ಮುಗಿಯುತ್ತಿದ್ದಂತೆಯೇ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿದ್ದು, 2024ರ ಫೆಬ್ರವರಿ, ಮಾರ್ಚ್ ತಿಂಗಳ ಹಣ ಹಾಕಿಲ್ಲ. ಅದು ನಿಜ ನನಗೆ ಗೊತ್ತಿದೆ. ಆದ್ರೆ ಮಾಹಿತಿ ಕೊರತೆಯಿಂದ ಕಣ್ತಪ್ಪಿನಿಂದ ಸಚಿವರು ಕೊಟ್ಬಿದ್ದೇವೆ ಎಂದು ಸಚಿವರು ಹೇಳಿದ್ದಾರೆ. ಅದನ್ನ ಸಚಿವರು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸೌಜನ್ಯಯುತವಾಗಿ ಒಪ್ಪಿಕೊಂಡೊದ್ದಾರೆ. ಅದನ್ನು ವಿರೋಧ ಪಕ್ಷದವರು ಅರ್ಥ ಮಾಡಿಕೊಳ್ಳಬೇಕು ಎಂದರು.
- Ramesh B Jawalagera
- Updated on: Dec 19, 2025
- 8:35 pm
ಶಕ್ತಿ ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ನಗುತ್ತಾ ಕೊಟ್ಟ ಸಂದೇಶ
ರಾಜ್ಯ ಕಾಂಗ್ರೆಸ್ನಲ್ಲಿ ಕುರ್ಚಿ ಕಾಳಗ ದಿನೇ ದಿನೇ ತಾರಕಕ್ಕೇರ್ತಿದೆ. ಸಿಎಂ ಸಿದ್ದರಾಮಯ್ಯ ಬಣ ತಂತ್ರ ಹೆಣೆಯುತ್ತಿದ್ರೆ, ಡಿಕೆ ಬಣ ಕೂಡ ಪ್ರತಿತಂತ್ರ ರೂಪಿಸ್ತಿದೆ. ನಾಯಕರು ಒಂದ್ಕಡೆ ಡಿನ್ನರ್ ಮೀಟಿಂಗ್ ಮಾಡಿದ್ರೆ, ಮತ್ತೊಂದ್ಕಡೆ ಟೆಂಪಲ್ ರನ್ ಮಾಡ್ತಿದ್ದಾರೆ.. ಡಿಸಿಎಂ ಡಿಕೆ ಶಿವಕುಮಾರ್ ದೇವರ ಮೊರೆ ಹೋಗಿದ್ದಾರೆ. ಇವತ್ತು ಉತ್ತರ ಕನ್ನಡ ಜಿಲ್ಲೆಯ ಶಕ್ತಿಕೇಂದ್ರಗಳಿಗೆ ಭೇಟಿ ನೀಡಿದ್ರು. ಅಂಕೋಲಾ ತಾಲೂಕಿನ ಆಂದ್ಲೆಯಲ್ಲಿರೋ ಕರಾವಳಿ ಶಕ್ತಿದೇವಿ ಜಗದೀಶ್ವರಿ ಸನ್ನಿಧದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು.
- Ramesh B Jawalagera
- Updated on: Dec 19, 2025
- 4:06 pm
ಸಿಎಂ ಸಿದ್ದರಾಮಯ್ಯ ಬಣದ ಡಿನ್ನರ್ ಮೀಟಿಂಗ್ ವೇಳೆ ಏನೆಲ್ಲ ಚರ್ಚೆ?: ಇಲ್ಲಿದೆ ಇನ್ಸೈಡ್ ಮಾಹಿತಿ
ಬೆಳಗಾವಿ ಚಳಿಗಾಲದ ಅಧಿವೇಶನದ ನಡುವೆ ಸಿದ್ದರಾಮಯ್ಯ ಆಪ್ತವಲಯದ ಡಿನ್ನರ್ ಮೀಟಿಂಗ್ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಬಗ್ಗೆ, ಅಹಿಂದಾ ಮತಗಳ ಪ್ರಾಮುಖ್ಯತೆ, ಡಿಸಿಎಂ ಡಿಕೆಶಿಗೆ ಕೌಂಟರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ತಮ್ಮ ಬಣಕ್ಕೆ ಪಡೆಯುವ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ದೆಹಲಿಯಿಂದ ವರಿಷ್ಠರ ಬುಲಾವ್ ಸಾಧ್ಯತೆ ಹಿನ್ನೆಲೆಯಲ್ಲಿ ಮುಂದಿನ ರಾಜಕೀಯ ತಂತ್ರಗಳ ಕುರಿತು ಚರ್ಚೆ ನಡೆಸಲಾಗಿದೆ.
- Sahadev Mane
- Updated on: Dec 19, 2025
- 9:21 am
ಕಾಂಗ್ರೆಸ್ನಲ್ಲಿ ಮುಂದುವರಿದ ಡಿನ್ನರ್ ಮೀಟಿಂಗ್: ಅನಾರೋಗ್ಯದ ನಡುವೆಯೂ ಸಿಎಂ ಭಾಗಿ
ಕರ್ನಾಟಕ ಕಾಂಗ್ರೆಸ್ನಲ್ಲಿನ ಬಣ ರಾಜಕೀಯ ಬ್ರೇಕ್ ಫಾಸ್ಟ್ನಿಂದ ಡಿನ್ನರ್ ವರೆಗೂ ಬಂದು ನಿಂತಿದೆ. ಹೌದು.. ಸಿಎಂ ಕುರ್ಚಿಗಾಗಿ ಸಿಎಂ -ಡಿಸಿಎಂ ನಡುವೆ ಮುಸುಕಿನ ಗುದ್ದಾಟ ನಡೆದಿದ್ದು, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಣದ ಡಿನ್ನರ್ ಪಾಲಿಟಿಕ್ಸ್ ಮುಂದುವರೆದಿದೆ. ಬೆಳಗಾವಿ ಅಧಿವೇಶದ ಸಂದರ್ಭದಲ್ಲೂ ಸಹ ಜಿದ್ದಿಗೆ ಬಿದ್ದವರಂತೆ ಉಭಯ ನಾಯಕರ ಬಣದಿಂದ ಒಬ್ಬರಾದ ಮೇಲೆ ಒಬ್ಬರಿಂದ ಡಿನ್ನರ್ ಮೀಟಿಂಗ್ ಆಯೋಜನೆಗೊಳ್ಳುತ್ತಿವೆ. ಇದಕ್ಕೆ ಪೂರಕವೆಂಬಂತೆ ಇಂದು (ಡಿಸೆಂಬರ್ 18) ಸಚಿವ ಸತೀಶ್ ಜಾರಕಿಹೊಳಿ ತಮ್ಮ ಬೆಳಗಾವಿ ನಿವಾಸದಲ್ಲಿ ಸಿಎಂ ಸೇರಿದಂತೆ ಇತರೆ ತಮ್ಮ ಬಣದ ನಾಯಕರಿಗೆ ಔತಣಕೂಟ ಏರ್ಪಡಿಸಲಾಗಿದೆ.
- Ramesh B Jawalagera
- Updated on: Dec 18, 2025
- 11:13 pm
ಕರಾವಳಿಗರು ಬೆಂಕಿ ಹಚ್ಚೋರು ಎಂದ ಸಚಿವ ಭೈರತಿ ಸುರೇಶ್ ವಿರುದ್ಧ ಭುಗಿಲೆದ್ದ ಆಕ್ರೋಶ
ಬಿಜೆಪಿ ಸದಸ್ಯರ ತೀವ್ರ ವಿರೋಧ ಮತ್ತು ಪ್ರತಿಭಟನೆ ನಡುವೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ವಿಧಾನಸಭೆಯಲ್ಲಿ ಇಂದು ಅಂಗೀಕಾರಗೊಂಡಿತು. ಇದರ ನಡುವೆ ಸಚಿವ ಭೈರತಿ ಸುರೇಶ್ 'ನೀವು ಕರಾವಳಿಯವರು ಬೆಂಕಿ ಹಚ್ಚುವವರು' ಎಂಬ ಹೇಳಿಕೆ ನೀಡುವ ಮೂಲಕ ಹೊಸ ವಿವಾದವನ್ನು ಸೃಷ್ಟಿಸಿದ್ದು, ಕರಾವಳಿ ಭಾಗದ ಶಾಸಕರ ಆಕ್ರೋಶಕ್ಕೆ ಕಾರಣವಾಗಿದೆ.
- Ramesh B Jawalagera
- Updated on: Dec 18, 2025
- 10:29 pm
ಕಾಂಗ್ರೆಸ್ ಮುಖಂಡನಿಂದಲೇ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ: ಮಾಲು ಸಮೇತ ಸಿಕ್ಕಿಬಿದ್ದ
ಕಾಂಗ್ರೆಸ್ ಮುಖಂಡ ವಿರುದ್ಧ ಬಿಪಿಎಲ್ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಕರ್ನಾಟಕ ರಾಷ್ಟ್ರ ಸಮಿತಿ ಈ ಅಕ್ರಮ ದಂಧೆಯನ್ನು ಬಯಲಿಗೆಳೆದಿದ್ದು, ಎರಡೂ ಗುಂಪುಗಳ ನಡುವೆ ಗಲಾಟೆ ಉಂಟಾಗಿದೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದು, ಪ್ರಕರಣವನ್ನು ಸೂಕ್ತ ತನಿಖೆಗೆ ಒತ್ತಾಯಿಸಲಾಗಿದೆ.
- Gangadhar Saboji
- Updated on: Dec 18, 2025
- 9:59 pm
ಸಚಿವ ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಭೂಮಿ ಎಲ್ಲಿ? ಹೇಗಿದೆ ನೋಡಿ
ಬೆಂಗಳೂರಿನ ಬ್ಯಾಟರಾಯನಪುರ ಕಾಂಗ್ರೆಸ್ ಶಾಸಕ, ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಈವರೆಗೂ ಯಾವ ಹಗರಣದಲ್ಲೂ ಸಿಲುಕದ ಕ್ಲೀನ್ ಇಮೇಜ್ ರಾಜಕಾರಣಿ. ಆದ್ರೆ, ಇದೇ ಮೊದಲ ಬಾರಿಗೆ ಭೂಕಬಳಿಕೆ ಆರೋಪ ಇವರನ್ನೀಗ ಸುತ್ತಿಕೊಂಡಿದೆ.ಹೌದು..ಕೋಲಾರ ತಾಲೂಕಿನ ಗರುಡಪಾಳ್ಯ ಸಚಿವ ಕೃಷ್ಣಭೈರೇಗೌಡರ ಹುಟ್ಟೂರು. ನರಸುಪುರ ಹೋಬಳಿಯ ಗರುಡಪಾಳ್ಯದಲ್ಲಿ 200ಎಕರೆಗೂ ಹೆಚ್ಚು ಜಾಗವಿದೆ. ಇಲ್ಲಿನ ಸರ್ವೆ ನಂಬರ್ 46 ಮತ್ತು 47ರಲ್ಲಿ . ಇದೇ ಸರ್ವೇ ನಂಬರ್ನಲ್ಲೇ ಸಚಿವರ ಹೆಸರಿನಲ್ಲಿ 21 ಎಕರೆ ಜಮೀನಿದೆ. ಆದ್ರೆ, ಇದು ಸ್ಮಶಾನ ಮತ್ತು ಕೆರೆ ಭೂಮಿಯಾಗಿದ್ದು, ನಕಲಿ ದಾಖಲೆಗಳನ್ನ ಸೃಷ್ಟಿಸಿ ಸಚಿವರು ಅದನ್ನ ಕಬಳಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
- Ramesh B Jawalagera
- Updated on: Dec 18, 2025
- 9:43 pm
ಮೊದಲ ಬಾರಿಗೆ ಡಿಕೆಶಿ ವಿರುದ್ಧ ಅಬ್ಬರಿಸಿ ತೊಡೆ ತಟ್ಟಿದ ವಿಜಯೇಂದ್ರ, ಡಿಸಿಎಂ ತಾಕತ್ತಿಗೆ ಸವಾಲ್
ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಕದನಕ್ಕೆ ಅಲ್ಪವಿರಾಮದ ಹೊತ್ತಿನಲ್ಲೇ ಸಿಎಂ ಸಿದ್ದರಾಮಯ್ಯಗೆ ಔಟ್ಗೋಯಿಂಗ್ ಸಿಎಂ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ನೀಡಿದ್ದು, ಸಿಎಂ ಆಪ್ತರನ್ನ ಕೆರಳಿಸುವಂತೆ ಮಾಡಿದೆ. ಇದರ ನಡುವೆ ವಿಜಯೇಂದ್ರ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಆರೋಪ ಪ್ರತ್ಯಾರೋಪ ತಾರಕಕ್ಕೇರಿದ್ದು, ಉಭಯ ನಾಯಕರು ವೈಯಕ್ತಿಕ ದಾಳಿಗೆ ಇಳಿದಿದ್ದಾರೆ.
- Ramesh B Jawalagera
- Updated on: Dec 18, 2025
- 4:31 pm
ಸದನದಲ್ಲಿ ಚರ್ಚೆ ಬೆನ್ನಲ್ಲೇ ಶಕ್ತಿ ಯೋಜನೆ ಹಣ ಬಾಕಿ ರಿಲೀಸ್: ಯಾವ ನಿಗಮಕ್ಕೆ ಎಷ್ಟು?
ಶಕ್ತಿ ಯೋಜನೆ ಮೂಲಕ ಲಕ್ಷಾಂತರ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದರೂ, ಇದು ರಾಜ್ಯ ಸಾರಿಗೆ ನಿಗಮಗಳಿಗೆ ಆರ್ಥಿಕ ಸಂಕಷ್ಟ ತಂದಿದೆ. ಈ ಬಗ್ಗೆ ಸದನದಲ್ಲೂ ಚರ್ಚೆ ಬೆನ್ನಲ್ಲೇ ಇದೀಗ ನವೆಂಬರ್ ತಿಂಗಳ ಅನುದಾನವಾಗಿ 441 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ ಶಕ್ತಿ ಯೋಜನೆಯ ಬಾಕಿ 4006 ಕೋಟಿ ರೂ. ಹಣ ಹಾಗೆಯೇ ಉಳಿದಿದೆ.
- Prasanna Gaonkar
- Updated on: Dec 18, 2025
- 4:15 pm