Congress
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಸಾಮಾನ್ಯವಾಗಿ ಕಾಂಗ್ರೆಸ್ ಪಕ್ಷ ಎಂದು ಕರೆಯಲಾಗುತ್ತದೆ. ಇದು ಭಾರತದ ಅತ್ಯಂತ ಪುರಾತನ ಮತ್ತು ಪ್ರಮುಖ ರಾಜಕೀಯ ಸಂಸ್ಥೆಗಳಲ್ಲಿ ಒಂದಾಗಿದೆ. 1885 ರಲ್ಲಿ ಸ್ಥಾಪಿತವಾದ ಇದು ಬ್ರಿಟಿಷರ ಆಳ್ವಿಕೆಯಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ. ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರಂತಹ ನಾಯಕರು ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದವರು.
1947 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ಪ್ರಬಲ ರಾಜಕೀಯ ಶಕ್ತಿಯಾಯಿತು ಮತ್ತು ಸ್ವಾತಂತ್ರ್ಯದ ನಂತರದ ದಶಕಗಳ ಕಾಲ ಕೇಂದ್ರದಲ್ಲಿ ಸರ್ಕಾರವನ್ನು ರಚಿಸಿತು. ಆದರೆ ಇತ್ತೀಚೆಗೆ ಅಧಿಕಾರದಿಂದ ದೂರ ಉಳಿದಿದೆ. ಪಕ್ಷದ ಸಿದ್ಧಾಂತವು ಕಾಲಕಾಲಕ್ಕೆ ವಿಕಸನಗೊಳ್ಳುತ್ತಾ ಬಂದಿದೆ. ಸಮಾಜವಾದ, ಜಾತ್ಯತೀತ ಆಡಳಿತದ ಅಂಶಗಳನ್ನು ಒಳಗೊಂಡಿದೆ. ಇದು ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿವಿ ನರಸಿಂಹರಾವ್, ಮನಮೋಹನ್ ಸಿಂಗ್ ಸೇರಿದಂತೆ ಹಲವಾರು ಪ್ರಧಾನ ಮಂತ್ರಿಗಳನ್ನು ನಿರ್ಮಿಸಿದೆ.
ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮತ್ತು ನಾನಾ ರಾಜ್ಯಗಳ ರಾಜಕೀಯದಲ್ಲಿ ತೊಡಗಿಸಿಕೊಂಡಿದೆ. ವಿವಿಧ ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳನ್ನು ಪ್ರತಿಪಾದಿಸುತ್ತದೆ. ಕಾಂಗ್ರೆಸ್ ಪಕ್ಷವು ದೇಶದ ಅನೇಕ ರಾಜ್ಯಗಳಲ್ಲಿಯೂ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಾ ಬಂದಿತ್ತು. ಆದಾಗ್ಯೂ, ಇತ್ತೀಚಿನ ವರ್ಷಗಳಲ್ಲಿ ಅದು ಕೆಲವು ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಇತರ ಪ್ರಾದೇಶಿಕ ಪಕ್ಷಗಳಿಂದ ಸವಾಲುಗಳನ್ನು ಎದುರಿಸುತ್ತಿದೆ.
ಇನ್ನೂ ಹೆಚ್ಚು ಓದಿಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಅವರ 9 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಿದ್ದರು. ವಿಷಯ ತಿಳಿದ ತಕ್ಷಣ ಎಚ್ಚೆತ್ತ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ಬೆಳಗಿನ ಜಾವವೇ ಪ್ರತಿಮೆಯನ್ನು ತೆರವುಗೊಳಿಸಿದ್ದು, ರಾಜ್ಯ ರಾಜಕಾರಣದಲ್ಲಿ ಬೇರೆ ಬೇರೆ ರೀತಿಯ ಚರ್ಚೆಗೆ ಗ್ರಾಸವಾಗಿದೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಿದ್ದರಾಮ್ಯಯನವರ ಪ್ರತಿಮೆ ತೆರವುಗೊಳಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.
- Ramesh B Jawalagera
- Updated on: Sep 19, 2026
- 7:04 pm
ಕರಾವಳಿ ಬೆನ್ನಲ್ಲೇ ಮಲೆನಾಡು ಪ್ರವಾಸೋದ್ಯಮಕ್ಕೆ ವಿಶೇಷ ಪ್ಯಾಕೇಜ್: ಸಿಎಂ ಘೋಷಣೆ
ಮಂಗಳೂರಿನಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ 32,611 ಕೋಟಿ ರೂ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಕರಾವಳಿ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ನೀಡಿದೆ. ಇದೀಗ ಮಲೆನಾಡು ಪ್ರವಾಸೋದ್ಯಮಕ್ಕೆ ವಿಶೇಷ ಪ್ಯಾಕೇಜ್ ನೀಡಲು ಸಿಎಂ ಡಿಕೆ ಶಿವಕುಮಾರ್ ನಿರ್ಧರಿಸಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.
- Basavaraj Yaraganavi
- Updated on: Sep 19, 2026
- 4:16 pm
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಸಿಎಂ ಇದ್ದ ವೇದಿಕೆ ಮೇಲೆಯೇ ಬಿಜೆಪಿ ಅಸಮಾಧಾನ: ಕೆಲಕಾಲ ಗೊಂದಲ
ತೀರ್ಥಹಳ್ಳಿಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ವಂದೇ ಮಾತರಂ ಹಾಡನ್ನು ಎರಡು ಚರಣ ಹಾಡಲಾಗಿದೆ. ಇದಕ್ಕೆ ಬಿಜೆಪಿ ಶಾಸಕ ಚನ್ನಬಸಪ್ಪ ಆಕ್ಷೇಪ ವ್ಯಕ್ತಪಡಿಸಿದ್ದು, ಪೂರ್ಣ ಹಾಡು ಅವಕಾಶ ಮಾಡಿಕೊಡಿ ಎಂದು ವೇದಿಕೆ ಮೇಲೆಯೇ ಮೈಕ್ನಲ್ಲೇ ಸಿಎಂ ಡಿಕೆ ಶಿವಕುಮಾರ್ ಬಳಿ ಮನವಿ ಮಾಡಿಕೊಂಡಿರುವ ಪ್ರಸಂಗ ನಡೆಯಿತು. ಈ ವೇಳೆ ಕಾರ್ಯಕ್ರಮದಲ್ಲಿ ಕೆಲಕಾಲ ಗೊಂದಲ ನಿರ್ಮಾಣವಾಗಿತ್ತು. ಬಳಿಕ ಮುಖಂಡರು ಬಂದು ಚನ್ನಬಸಪ್ಪ ಅವರನ್ನು ಮನವೊಲಿಸಿ ಕರೆದುಕೊಂಡು ಹೋದರು. ಈ ವೇಳೆ ವೇದಿಕೆ ಮುಂಭಾಗದಲ್ಲಿ ಕುಳಿತ್ತಿದ್ದ ಜನರು, ಯಾಕೆ ರಾಜಕೀಯ ಮಾಡ್ತೀರಾ ಎಂದು ಡಿಕೆ ಡಿಕೆ ಎಂದು ಕೂಗಿದರು.
- Basavaraj Yaraganavi
- Updated on: Sep 19, 2026
- 2:44 pm
ರಾಜಣ್ಣ ನಿವಾಸದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭೋಜನಕೂಟ: ಮತ್ತೆ ಅಹಿಂದ ಸಂಘಟನೆಯ ಸುಳಿವು!
ತುಮಕೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾಜಿ ಸಚಿವ ರಾಜಣ್ಣ ನಿವಾಸದಲ್ಲಿ ಭೋಜನ ಕೂಟದಲ್ಲಿ ಪಾಲ್ಗೊಂಡಿರುವುದು ಈಗ ರಾಜಕೀಯ ವಲಯದಲ್ಲಿ ಗುಸುಗುಸು ಹರಡಲು ಕಾರಣವಾಗಿದೆ. ಈ ಸಂದರ್ಭದಲ್ಲಿ ಅಹಿಂದ ಸಂಘಟನೆ, ರಾಜಣ್ಣನವರ ಸಚಿವ ಸ್ಥಾನ ಹಾಗೂ ಅಪೆಕ್ಸ್ ಅಧ್ಯಕ್ಷ ಸ್ಥಾನ ಕುರಿತು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಗಹನ ಚರ್ಚೆ ನಡೆದಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
- Jagadisha B
- Updated on: Sep 19, 2026
- 2:28 pm
ನಾನು ಈಗ ವೆಜ್ಟೇರಿಯನ್, ಅಶೋಕಣ್ಣಂಗೆ ಇಲ್ಲಿಂದಲೇ ಫ್ರೆಶ್ ಮೀನು ಕಳಿಸ್ತೀನಿ: ಅಶೋಕ್ ಟೀಕೆಗೆ ಸಿಎಂ ಡಿಕೆಶಿ ತಿರುಗೇಟು
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರಿನ ಮೀನುಗಾರಿಕೆ ದಕ್ಕೆಗೆ ಬೆಳಿಗ್ಗೆ ಭೇಟಿ ನೀಡಿ, ಡ್ರೆಡ್ಜಿಂಗ್ ಸಮಸ್ಯೆಗಳನ್ನು ಪರಿಶೀಲಿಸಿದರು. ಹೂಳೆತ್ತುವಿಕೆ ಮತ್ತು ಮೂಲಸೌಕರ್ಯಗಳ ಸುಧಾರಣೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೆ, ವಿಪಕ್ಷ ನಾಯಕ ಆರ್ ಅಶೋಕ ಅವರ ಮೀನು ಊಟ ಟೀಕೆಗೆ ತಿರುಗೇಟು ನೀಡಿದರು.
- Pruthviraj
- Updated on: Sep 19, 2026
- 10:48 am
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆ ಶಿವಕುಮಾರ್
ಮಂಗಳೂರಿನ ಬಂದರು ಪ್ರದೇಶಕ್ಕೆ ಬೆಳ್ಳಂಬೆಳಗ್ಗೆ ಭೇಟಿ ನೀಡಿದ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಏಕಾಏಕಿ ಮೀನುಗಾರಿಕಾ ಬೋಟ್ ಹತ್ತಿ ಅಳಿವೆಬಾಗಿಲು ಪ್ರದೇಶದಲ್ಲಿ ಸಂಚರಿಸಿದರು. ಮೀನುಗಾರರ ಸಮಸ್ಯೆಗಳನ್ನು ಆಲಿಸಿದ ಬಳಿಕ ತಾಜ್ ಹೋಟೆಲ್ನಲ್ಲಿ ಉಪಾಹಾರ ಸೇವಿಸಿದರು. ಡಿಕೆ ಶಿವಕುಮಾರ್ ಬೋಟ್ ಹತ್ತಿ ಸಂಚರಿಸಿದ ವಿಡಿಯೋ ಇಲ್ಲಿದೆ ನೋಡಿ.
- Pruthviraj
- Updated on: Sep 19, 2026
- 9:54 am
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ: ಧಕ್ಕೆ ಬಂದ್ ಮಾಡಿಸಿದವರ ಅಮಾನತಿಗೆ ಸೂಚನೆ
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರು ಮೀನುಗಾರಿಕೆ ಬಂದರು (ಧಕ್ಕೆ) ಪ್ರದೇಶಕ್ಕೆ ಬೆಳ್ಳಂಬೆಳಗ್ಗೆ ದಿಢೀರ್ ಭೇಟಿ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ಅವರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು. ಸಮುದ್ರದಿಂದ ಬಂದ ತಾಜಾ ಮೀನು ಹಾಗೂ ಮೀನುಗಾರಿಕೆ ಬೋಟ್ಗಳನ್ನು ವೀಕ್ಷಿಸಿದ ಸಿಎಂ, ಮೀನುಗಾರರ ಸಮಸ್ಯೆಗಳನ್ನು ಆಲಿಸಿ, ಇಲಾಖೆಯ ಮುಂದಿನ ಯೋಜನೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
- Pruthviraj
- Updated on: Sep 19, 2026
- 8:42 am
‘ಪ್ರಜಾಪ್ರಭುತ್ವದ ಕೊಲೆ’; ನಂದಿಗ್ರಾಮದ ಅಭ್ಯರ್ಥಿ ಬಂಧನಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಪಶ್ಚಿಮ ಬಂಗಾಳದ ಹೈಪ್ರೊಫೈಲ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆ ಅಖಾಡದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರ ದಿಢೀರ್ ಬಂಧನವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿಯ ಈ ನಡೆಯನ್ನು "ರಾಜಕೀಯ ಸೇಡಿನ ಕೃತ್ಯ ಮತ್ತು ಪ್ರಜಾಪ್ರಭುತ್ವದ ಕೊಲೆ" ಎಂದು ಟೀಕಿಸಿದ್ದಾರೆ. ಇಂದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಬಣವು ನಂದಿಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರಿಗೆ ಪೂರ್ಣ ಬೆಂಬಲ ಘೋಷಿಸಿತ್ತು. ಆದರೆ, ಈ ಪ್ರಕಟಣೆ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಮಿಲನ್ ಪ್ರಧಾನ್ ಅವರನ್ನು ಬಂಧಿಸಿದ್ದಾರೆ.
- Sushma Chakre
- Updated on: Sep 18, 2026
- 11:08 pm
ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್: EVM ಬದಲು ಮತಪೆಟ್ಟಿಗೆ ಬಳಕೆಗೆ ಸಂಪುಟ ತೀರ್ಮಾನ
ಅವಧಿ ಮುಕ್ತಾಯಗೊಂಡಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ತಡವಾಗುತ್ತಿದೆ ಎಂದು ಕರ್ನಾಟಕ ಚುನಾವಣೆ ಆಯೋಗವು ಹೈಕೋರ್ಟ್ ಮೊರೆ ಹೋಗಿದೆ. ಇದಕ್ಕೆ ಹೈಕೋರ್ಟ್ ಸಹ ಚುನಾವಣೆ ನಡೆಸಲು ಅನುವಾಗುವಂತೆ ಮೀಸಲು ನಿಗದಿ ಪ್ರಕ್ರಿಯೆಗೆ ವೇಗ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಮಹತ್ವದ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಇದೀಗ ಪಂಚಾಯಿತಿ ಚುನಾವಣೆ ನಡೆಸಲು ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ.
- Ramesh B Jawalagera
- Updated on: Sep 18, 2026
- 9:29 pm
ಕಸ್ತೂರಿರಂಗನ್ ವರದಿ: ಜನರ ಸಮಸ್ಯೆ ಆಲಿಸಿದ ಸಿಎಂ; ಪಕ್ಷಭೇದ ಮರೆತು ಬೆಂಬಲ ಎಂದ ವಿಪಕ್ಷ ನಾಯಕರು!
ಉಡುಪಿ ಜಿಲ್ಲೆಯ ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಕಸ್ತೂರಿರಂಗನ್ ವರದಿಗೆ ಸಂಬಂಧಪಟ್ಟಂತೆ ಸಿಎಂ ಡಿಕೆ ಶಿವಕುಮಾರ್ ಸಾರ್ವಜನಿಕರೊಂದಿಗೆ ನೇರವಾಗಿ ಸಭೆ ಮಾಡಿದರು. ಈ ವೇಳೆ ಕಸ್ತೂರಿ ರಂಗನ್ ವರದಿಯ ಕುರಿತು ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಿದರು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
- Prajwal Amin
- Updated on: Sep 18, 2026
- 8:41 pm
ನಂದಿಗ್ರಾಮ ಉಪಚುನಾವಣೆ; ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಬಂಧನ!
ಪಶ್ಚಿಮ ಬಂಗಾಳದ ಹೈಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮದ ಉಪಚುನಾವಣೆ ಕಣದಲ್ಲಿ ಇಂದು ಒಂದರ ಮೇಲೊಂದರಂತೆ ಅಚ್ಚರಿಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಟಿಎಂಸಿ ಮಮತಾ ಬ್ಯಾನರ್ಜಿ ಬಣದ ಅಭ್ಯರ್ಥಿ ಸಂಚಿತಾ ಪ್ರಧಾನ್ ಡೇ ತಮ್ಮ ನಾಮಪತ್ರ ಹಿಂಪಡೆದ ಬೆನ್ನಲ್ಲೇ, 'ಇಂಡಿಯಾ' ಮೈತ್ರಿಕೂಟದ ಭಾಗವಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಮಮತಾ ಬ್ಯಾನರ್ಜಿ ಘೋಷಿಸಿದ್ದರು. ಆದರೆ ಈ ಬೆಂಬಲ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದು ತೀವ್ರ ಚರ್ಚೆಗೆ ಕಾರಣವಾಗಿದ್ದು, ಈ ಬೆಳವಣಿಗೆಯ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ವಿಪಕ್ಷಗಳು ಆರೋಪಿಸಿವೆ.
- Sushma Chakre
- Updated on: Sep 18, 2026
- 8:02 pm
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ: ಡಿಕೆಶಿ ಮಹತ್ವದ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಸಂಬಂಧ ಇಂದಿನ ಸಚಿವ ಸಂಪುಟದಲ್ಲಿ ಚರ್ಚೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಹೆಸರು ಬದಲಾವಣೆ ಮಾಡಲು ಮುಂದೆ ಯಾವುದೇ ತಂಟೆ ತಕರಾರು ಬರಬಾರದು ಎಂದು ಜನರ ಅಭಿಪ್ರಾಯ ಸಂಗ್ರಹಿಸಲು ಒಂದು ತಿಂಗಳ ಸಮಯ ಕೊಟ್ಟಿದೆ. ಇನ್ನು ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ಜಿಲ್ಲೆಗೆ ಮಂಗಳೂರು ಹೆಸರಿಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆಯನ್ನ ಮಂಗಳೂರು ಜಿಲ್ಲೆಯಾಗಿ ಘೋಷಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ. ಆದರೆ ಜನರ ಅಭಿಪ್ರಾಯ ಸಂಗ್ರಹಿಸಲು ಒಂದು ತಿಂಗಳ ಅವಕಾಶ ನೀಡುತ್ತೇವೆ ಎಂದರು.
- Ramesh B Jawalagera
- Updated on: Sep 18, 2026
- 6:53 pm