Congress
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಸಾಮಾನ್ಯವಾಗಿ ಕಾಂಗ್ರೆಸ್ ಪಕ್ಷ ಎಂದು ಕರೆಯಲಾಗುತ್ತದೆ. ಇದು ಭಾರತದ ಅತ್ಯಂತ ಪುರಾತನ ಮತ್ತು ಪ್ರಮುಖ ರಾಜಕೀಯ ಸಂಸ್ಥೆಗಳಲ್ಲಿ ಒಂದಾಗಿದೆ. 1885 ರಲ್ಲಿ ಸ್ಥಾಪಿತವಾದ ಇದು ಬ್ರಿಟಿಷರ ಆಳ್ವಿಕೆಯಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ. ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರಂತಹ ನಾಯಕರು ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದವರು.
1947 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ಪ್ರಬಲ ರಾಜಕೀಯ ಶಕ್ತಿಯಾಯಿತು ಮತ್ತು ಸ್ವಾತಂತ್ರ್ಯದ ನಂತರದ ದಶಕಗಳ ಕಾಲ ಕೇಂದ್ರದಲ್ಲಿ ಸರ್ಕಾರವನ್ನು ರಚಿಸಿತು. ಆದರೆ ಇತ್ತೀಚೆಗೆ ಅಧಿಕಾರದಿಂದ ದೂರ ಉಳಿದಿದೆ. ಪಕ್ಷದ ಸಿದ್ಧಾಂತವು ಕಾಲಕಾಲಕ್ಕೆ ವಿಕಸನಗೊಳ್ಳುತ್ತಾ ಬಂದಿದೆ. ಸಮಾಜವಾದ, ಜಾತ್ಯತೀತ ಆಡಳಿತದ ಅಂಶಗಳನ್ನು ಒಳಗೊಂಡಿದೆ. ಇದು ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿವಿ ನರಸಿಂಹರಾವ್, ಮನಮೋಹನ್ ಸಿಂಗ್ ಸೇರಿದಂತೆ ಹಲವಾರು ಪ್ರಧಾನ ಮಂತ್ರಿಗಳನ್ನು ನಿರ್ಮಿಸಿದೆ.
ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮತ್ತು ನಾನಾ ರಾಜ್ಯಗಳ ರಾಜಕೀಯದಲ್ಲಿ ತೊಡಗಿಸಿಕೊಂಡಿದೆ. ವಿವಿಧ ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳನ್ನು ಪ್ರತಿಪಾದಿಸುತ್ತದೆ. ಕಾಂಗ್ರೆಸ್ ಪಕ್ಷವು ದೇಶದ ಅನೇಕ ರಾಜ್ಯಗಳಲ್ಲಿಯೂ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಾ ಬಂದಿತ್ತು. ಆದಾಗ್ಯೂ, ಇತ್ತೀಚಿನ ವರ್ಷಗಳಲ್ಲಿ ಅದು ಕೆಲವು ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಇತರ ಪ್ರಾದೇಶಿಕ ಪಕ್ಷಗಳಿಂದ ಸವಾಲುಗಳನ್ನು ಎದುರಿಸುತ್ತಿದೆ.
ಆರ್ಎಸ್ಎಸ್ ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಬಿಜೆಪಿ ಮತ್ತು ಆರ್ಎಸ್ಎಸ್ನ ಸಂಘಟನಾ ಬಲದ ಬಗ್ಗೆ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರ ಹೇಳಿಕೆಗಳು ಪಕ್ಷದೊಳಗೆ ಮತ್ತು ಅದರಾಚೆಗೂ ಬಿರುಗಾಳಿಯನ್ನು ಸೃಷ್ಟಿಸುತ್ತಲೇ ಇವೆ. ನಾಯಕರನ್ನು ನಿರ್ಮಿಸುವ ಸಾಮರ್ಥ್ಯಕ್ಕಾಗಿ ಆರ್ಎಸ್ಎಸ್ ಅನ್ನು ಹೊಗಳಿದ ದಿಗ್ವಿಜಯ ಸಿಂಗ್ ಅವರ ಹೇಳಿಕೆಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಕೆಲವು ಕಾಂಗ್ರೆಸ್ ನಾಯಕರು ಅವರ ಅಭಿಪ್ರಾಯವನ್ನು ಬೆಂಬಲಿಸಿದರೆ, ಮಾಣಿಕ್ಕಂ ಟ್ಯಾಗೋರ್ನಂತಹ ಇತರ ಕಾಂಗ್ರೆಸ್ ನಾಯಕರು ಆರ್ಎಸ್ಎಸ್ ಅನ್ನು ತೀವ್ರವಾಗಿ ಟೀಕಿಸಿದ್ದಾರೆ.
- Sushma Chakre
- Updated on: Dec 28, 2025
- 10:32 pm
ಕುರ್ಚಿ ಕದನಕ್ಕೆ ತಾತ್ಕಾಲಿಕ ಬ್ರೇಕ್! ಜನವರಿ 9ರ ಬಳಿಕವೇ ಅಂತಿಮ ತೀರ್ಮಾನ?
ಕರ್ನಾಟಕದಲ್ಲಿ ಕುರ್ಚಿ ಕದನ ಮುಂದುವರೆದಿದ್ದು, ಶಾಸಕರು ಮಂತ್ರಿ ಪಟ್ಟಕ್ಕೆ ನಾ ಮುಂದು ತಾ ಮುಂದು ಎಂದು ಮುಗಿಬೀಳುತ್ತಿದ್ದಾರೆ. ಆದರೆ ಸಂಪುಟ ಪುನಾರಚನೆ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದ್ದು, ಜನವರಿ 9ರ ಬಳಿಕವಷ್ಟೇ ಅಧಿಕಾರ ಹಂಚಿಕೆ ಕುರಿತು ಚರ್ಚೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ದೆಹಲಿಗೆ ತೆರಳಿ CWC ಸಭೆಯಲ್ಲಿ ಭಾಗವಹಿಸಿದ್ದರು.ಈ ವೇಳೆ ರಾಜ್ಯದ ಅಧಿಕಾರ ಹಂಚಿಕೆ ಅಥವಾ ಸಚಿವ ಸಂಪುಟ ಪುನರ್ರಚನೆ ಕುರಿತು ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಲು ಅವರಿಗೆ ಅವಕಾಶ ಸಿಕ್ಕಿಲ್ಲ.
- Bhavana Hegde
- Updated on: Dec 28, 2025
- 10:52 am
ರಾಹುಲ್ ಗಾಂಧಿ ಬತ್ತಳಿಕೆಯಲ್ಲಿ ಸಿಎಂ ಕುರ್ಚಿ ತೀರ್ಮಾನ: ಸಂಕ್ರಾಂತಿ ಬಳಿಕ ರಾಜಕೀಯ ಕ್ರಾಂತಿ?
ರಾಷ್ಟ್ರ ರಾಜಕಾರಣದ ಹೆಡ್ ಕ್ವಾಟ್ರಸ್ ದೆಹಲಿ ಇಂದು (ಡಿಸೆಂಬರ್ 27) ರಾಜ್ಯದ ಸಿಎಂ ಕುರ್ಚಿ ಬೆಳವಣಿಗೆಗೆ ಏನಾದ್ರು ಸಾಕ್ಷಿ ಆಗಲಿದ್ಯಾ ಎಂಬ ಕುತೂಹಲ ಮೂಡಿತ್ತು. ಯಾಕಂದ್ರೆ ಸಿಎಂ ಸಿದ್ದರಾಮಯ್ಯ CWC ಸಭೆಯಲ್ಲಿ ಭಾಗವಹಿಸಿದ್ದರು. ಸಭೆ ಬಳಿಕ ರಾಜ್ಯದ ಬಗ್ಗೆ ಏನಾದರೂ ಮಾತನಾಡುತ್ತಾರಾ ಎನ್ನುವುದು ಕೈ ಪಾಳಯದಲ್ಲಿಕುತೂಹಲ ಮೂಡಿಸಿತ್ತು. ಆದ್ರೆ ಇದ್ಯಾವುದು ಆಗದೇ ಸಿಎಂ ಭೇಟಿ ಬರೀ CWC ಸಭೆಗೆ ಸೀಮಿತವಾಗಿದೆ. ಸಿಎಂ ಕಸರತ್ತು ಮಾಡಿದ್ದರಾದರೂ ಅದು ಸಾಧ್ಯವಾಗಿಲ್ಲ. ಅಷ್ಟಕ್ಕೂ ದಿಲ್ಲಿಯಲ್ಲಿ ಆಗಿದ್ದೇನು? ಸಂಕ್ರಾಂತಿ ಬಳಿಕ ರಾಜಕೀಯ ಕ್ರಾಂತಿ ಆಗುತ್ತಾ?
- Ramesh B Jawalagera
- Updated on: Dec 27, 2025
- 7:33 pm
ಭಾರತ ವಿರೋಧಿ ಶಕ್ತಿಗಳೊಂದಿಗೆ ರಾಹುಲ್ ಗಾಂಧಿ? ಜರ್ಮನಿಗೆ ಹೋಗಿದ್ದು ಯಾಕೆ? ಬಿಜೆಪಿ ಟೀಕೆ
BJP MP Sudhanshu Trivedi alleges that congress is part of Global Progressive Alliance that has anti-India narrative: ಜಾರ್ಜ್ ಸೋರೋಸ್ ಬೆಂಬಲಿತ ಗ್ಲೋಬಲ್ ಪ್ರೋಗ್ರೆಸ್ಸಿವ್ ಅಲಾಯನ್ಸ್ ಜೊತೆ ಕಾಂಗ್ರೆಸ್ ಸಂಬಂಧವೇನು ಎಂದು ಬಿಜೆಪಿ ಪ್ರಶ್ನಿಸಿದೆ. ರಾಹುಲ್ ಗಾಂಧಿ ಜರ್ಮನಿಗೆ ಹೋಗಿದ್ದು ಯಾಕೆ? ಈ ಭಾರತ ವಿರೋಧಿ ನಿಲುವಿನ ಸಂಘಟನೆಯ ಸಭೆಯಲ್ಲಿ ಪಾಲ್ಗೊಂಡಿದ್ಯಾಕೆ ಎಂದು ಸುಧಾಂಶು ತ್ರಿವೇದಿ ಕೇಳಿದ್ದಾರೆ.
- Vijaya Sarathy SN
- Updated on: Dec 27, 2025
- 6:44 pm
ಆರೆಸ್ಸೆಸ್, ಬಿಜೆಪಿಯ ಸಂಘಟನಾ ಶಕ್ತಿ ಶ್ಲಾಘಿಸಿದ ಮಾಜಿ ಸಿಎಂ ದಿಗ್ವಿಜಯ ಸಿಂಗ್; ಕಾಂಗ್ರೆಸ್ಸನ್ನು ಕಿಚಾಯಿಸಿದ ಬಿಜೆಪಿ
Digvijaya Singh shares Narendra Modi's old photo, praises organizational power of RSS: ಆರೆಸ್ಸೆಸ್ ಸಂಘಟನೆಯ ಶಕ್ತಿಯನ್ನು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಹೊಗಳಿದ್ದಾರೆ. ತೊಂಬತ್ತರ ದಶಕದಲ್ಲಿ ಎಲ್.ಕೆ. ಆಡ್ವಾಣಿ ಕಾಲ ಕೆಳಗೆ ಮುಂಭಾಗದಲ್ಲಿ ನರೇಂದ್ರ ಮೋದಿ ಕುಳಿತು ಭಾಷಣ ಕೇಳುತ್ತಿರುವ ಚಿತ್ರವೊಂದನ್ನು ಅವರು ಹಂಚಿಕೊಂಡಿದ್ದಾರೆ. ಸಾಮಾನ್ಯ ಕಾರ್ಯಕರ್ತರಾದವರು ಸಿಎಂ ಮತ್ತು ಪಿಎಂ ಆಗುತ್ತಾರೆ. ಅದು ಸಂಘಟನೆಯ ಶಕ್ತಿ ಎಂದು ದಿಗ್ವಿಜಯ ಸಿಂಗ್ ಹೊಗಳಿದ್ದಾರೆ.
- Vijaya Sarathy SN
- Updated on: Dec 27, 2025
- 5:34 pm
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಸಿಎಂ ಕುರ್ಚಿಗಾಗಿ ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇನ್ನೂ ಇದೀಗ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಿಎಂ ಕುರ್ಚಿ ಕಾದಾಟದ ವಿಚಾರವಾಗಿ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯವೊಂದನ್ನು ನುಡಿದಿದ್ದಾರೆ.
- Ramesh B Jawalagera
- Updated on: Dec 27, 2025
- 5:17 pm
ಅವರೇ ಮೇಳದಲ್ಲಿ ಮಹಿಳೆಯೊಬ್ಬರು ಡಿಕೆಶಿಗೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಸಿಎಂ ಕುರ್ಚಿಗಾಗಿ ಡಿಕೆ ಶಿವಕುಮಾರ್ (DK Shivakumar) ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನೂ ಸ್ವಲ್ಪ ದಿನದಲ್ಲಿ ಡಿಕೆಶಿ ಸಿಎಂ ಆಗುವುದು ಗ್ಯಾರಂಟಿ ಎಂದು ಅವರ ಅಭಿಮಾನಿಗಳು ವಿಶ್ವಾದ ಮಾತುಗಳನ್ನಾಡುತ್ತಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯನವರೇ ಐದು ವರ್ಷ ಪೂರ್ಣಗೊಳಿಸಲಿದ್ದಾರೆ ಎನ್ನುತ್ತಿದ್ದಾರೆ. ಇದರ ನಡುವೆ ಮಹಿಳೆಯೊಬ್ಬರು, ಡಿಸಿಎಂ ಸರ್ ಯಾವಾಗ ಸಿಎಂ ಆಗ್ತೀರಾ ಎಂದು ಡಿಕೆಶಿಗೆ ಪ್ರಶ್ನಿಸಿದ್ದಾರೆ. ಬೆಂಗಳೂರಿನ ಬಸವನಗುಡಿಯ ಅವರೇಬೇಳೆ ಮೇಳದಲ್ಲಿ ಈ ಪ್ರಸಂಗ ನಡೆದಿದೆ.
- Ramesh B Jawalagera
- Updated on: Dec 27, 2025
- 4:57 pm
ಬಿಜೆಪಿಯೊಂದಿಗೆ ಮೈತ್ರಿ ಕಡಿತದ ಹಿಂದಿದೆ ದೇವೇಗೌಡ್ರ ರಾಜಕೀಯ ಲೆಕ್ಕಾಚಾರ, ವಿಜಯೇಂದ್ರ ಹೇಳಿದ್ದೇನು?
ಹೆಚ್ಡಿಡಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (B.Y.Vijayendra), ಸ್ವಂತ ಬಲದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಒಳಜಗಳ ನೋಡಿದರೆ 2028ಕ್ಕೂ ಮುನ್ನವೇ ವಿಧಾನಸಭಾ ಚುನಾವಣೆ ಬರಬಹುದು. 130-140 ಸ್ಥಾನಗಳೊಂದಿಗೆ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಅಂತೇಳುವ ಮೂಲಕ ವಿಧಾನಸಭೆ ಮೈತ್ರಿಯನ್ನ ತಳ್ಳಿಹಾಕಿದ್ದಾರೆ. ಇದು ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ.
- Ramesh B Jawalagera
- Updated on: Dec 27, 2025
- 3:30 pm
ಅಕ್ರಮವಾಗಿ ವಾಸಿಸುತ್ತಿದ್ದವರು ಮುಸ್ಲಿಮರೆಂಬ ಪ್ರಶ್ನೆ ಬರಲ್ಲ: ಪಿಣರಾಯಿಗೆ ಡಿಕೆ ಶಿವಕುಮಾರ್ ಖಡಕ್ ತಿರುಗೇಟು
ಬೆಂಗಳೂರಿನ ಕೋಗಿಲು ಲೇಔಟ್ನಲ್ಲಿ ನಡೆದ ಮನೆಗಳ ತೆರವು ಕಾನೂನುಬದ್ಧವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪಿಣರಾಯಿ ವಿಜಯನ್ ಅವರ 'ಬುಲ್ಡೋಜರ್ ರಾಜ್' ಆರೋಪ ತಳ್ಳಿಹಾಕಿದ ಡಿಕೆಶಿ, ಮನೆ ಇಲ್ಲದವರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಮನೆ ಹಂಚಿಕೆ ಮಾಡಲಾಗುತ್ತಿದೆ ಎಂದಿದ್ದಾರೆ. ಅಕ್ರಮವಾಗಿ ವಾಸಿಸುತ್ತಿದ್ದವರು ಮುಸ್ಲಿಮರೆಂಬ ಪ್ರಶ್ನೆ ಬರಲ್ಲ ಎಂದೂ ಹೇಳಿದ್ದಾರೆ.
- Ganapathi Sharma
- Updated on: Dec 27, 2025
- 12:55 pm
ಸಚಿವ ಸೋಮಣ್ಣ ಎದುರೇ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ರಾಮನಗರ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಹಾಗೂ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ನಡುವೆ ಕೇಂದ್ರ ಸಚಿವ ವಿ ಸೋಮಣ್ಣ ಎದುರಲ್ಲೇ ತೀವ್ರ ಮಾತಿನ ಜಟಾಪಟಿ ನಡೆದಿದ್ದು, ಘಟನೆಯ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ಸಚಿವರ ಮಧ್ಯಪ್ರವೇಶದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ನಂತರ ರೈಲ್ವೆ ಕಾಮಗಾರಿಗಳ ವೀಕ್ಷಣೆ ಮುಂದುವರಿದಿದೆ.
- Prashantha B
- Updated on: Dec 26, 2025
- 2:41 pm
ದಾವಣಗೆರೆ: ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಅಧಿಕಾರ ಹಂಚಿಕೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಸೇರಿ ಅವರ ಬಣಗಳ ನಡುವೆ ತಿಕ್ಕಾಟ ನಡೆಯುತ್ತಿದ್ದು, ವಿಷಯ ಹೈಕಮಾಂಡ್ ಮಟ್ಟದಲ್ಲೂ ಚರ್ಚೆಯಲ್ಲಿದೆ. ಈ ನಡುವೆಯೂ ಸಿದ್ದರಾಮಯ್ಯ ಮತ್ತು ಡಿಕೆಶಿ ದಾವಣಗೆರೆಗೆ ಒಂದೇ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸಿದ್ದಾರೆ.
- Basavaraj Doddamani
- Updated on: Dec 26, 2025
- 2:21 pm
ಪಕ್ಷದ ನಿರ್ದೇಶನ ಪಾಲಿಸುವುದು ಕಾರ್ಯಕರ್ತರ ಕರ್ತವ್ಯ: ಡಿಕೆಶಿಗೆ ಟಾಂಗ್ ಕೊಟ್ರಾ ಯತೀಂದ್ರ ಸಿದ್ದರಾಮಯ್ಯ?
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಯಾರಿಗೂ ಅಧಿಕಾರ ಶಾಶ್ವತವಲ್ಲ. ಪಕ್ಷ ಸಂಘಟನೆ ಮತ್ತು ಪಕ್ಷದ ನಿರ್ದೇಶನಗಳನ್ನು ಪಾಲಿಸುವುದು ಎಲ್ಲ ಕಾರ್ಯಕರ್ತರ ಕರ್ತವ್ಯ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಹೇಳಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಡಿಸಿಎಂ ಡಿಕೆ ಶಿವಕುಮಾರ್ ತಾವು ಸಾಮಾನ್ಯ ಕಾರ್ಯಕರ್ತ ಎಂದಿದ್ದಕ್ಕೆ ಯತೀಂದ್ರ ಟಾಂಗ್ ಕೊಟ್ಟರೇ ಎಂಬ ಅನುಮಾನ ವ್ಯಕ್ತವಾಗಿದೆ.
- Ganapathi Sharma
- Updated on: Dec 26, 2025
- 9:37 am