Congress
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಸಾಮಾನ್ಯವಾಗಿ ಕಾಂಗ್ರೆಸ್ ಪಕ್ಷ ಎಂದು ಕರೆಯಲಾಗುತ್ತದೆ. ಇದು ಭಾರತದ ಅತ್ಯಂತ ಪುರಾತನ ಮತ್ತು ಪ್ರಮುಖ ರಾಜಕೀಯ ಸಂಸ್ಥೆಗಳಲ್ಲಿ ಒಂದಾಗಿದೆ. 1885 ರಲ್ಲಿ ಸ್ಥಾಪಿತವಾದ ಇದು ಬ್ರಿಟಿಷರ ಆಳ್ವಿಕೆಯಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ. ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರಂತಹ ನಾಯಕರು ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದವರು.
1947 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ಪ್ರಬಲ ರಾಜಕೀಯ ಶಕ್ತಿಯಾಯಿತು ಮತ್ತು ಸ್ವಾತಂತ್ರ್ಯದ ನಂತರದ ದಶಕಗಳ ಕಾಲ ಕೇಂದ್ರದಲ್ಲಿ ಸರ್ಕಾರವನ್ನು ರಚಿಸಿತು. ಆದರೆ ಇತ್ತೀಚೆಗೆ ಅಧಿಕಾರದಿಂದ ದೂರ ಉಳಿದಿದೆ. ಪಕ್ಷದ ಸಿದ್ಧಾಂತವು ಕಾಲಕಾಲಕ್ಕೆ ವಿಕಸನಗೊಳ್ಳುತ್ತಾ ಬಂದಿದೆ. ಸಮಾಜವಾದ, ಜಾತ್ಯತೀತ ಆಡಳಿತದ ಅಂಶಗಳನ್ನು ಒಳಗೊಂಡಿದೆ. ಇದು ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿವಿ ನರಸಿಂಹರಾವ್, ಮನಮೋಹನ್ ಸಿಂಗ್ ಸೇರಿದಂತೆ ಹಲವಾರು ಪ್ರಧಾನ ಮಂತ್ರಿಗಳನ್ನು ನಿರ್ಮಿಸಿದೆ.
ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮತ್ತು ನಾನಾ ರಾಜ್ಯಗಳ ರಾಜಕೀಯದಲ್ಲಿ ತೊಡಗಿಸಿಕೊಂಡಿದೆ. ವಿವಿಧ ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳನ್ನು ಪ್ರತಿಪಾದಿಸುತ್ತದೆ. ಕಾಂಗ್ರೆಸ್ ಪಕ್ಷವು ದೇಶದ ಅನೇಕ ರಾಜ್ಯಗಳಲ್ಲಿಯೂ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಾ ಬಂದಿತ್ತು. ಆದಾಗ್ಯೂ, ಇತ್ತೀಚಿನ ವರ್ಷಗಳಲ್ಲಿ ಅದು ಕೆಲವು ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಇತರ ಪ್ರಾದೇಶಿಕ ಪಕ್ಷಗಳಿಂದ ಸವಾಲುಗಳನ್ನು ಎದುರಿಸುತ್ತಿದೆ.
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ರಫೀಕುಲ್ ಇಸ್ಲಾಂ ಪ್ರತಿಕ್ರಿಯೆ
ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಗಳನ್ನು ರಾಹುಲ್ ಗಾಂಧಿ ಎಷ್ಟು ಗಂಭೀರವಾಗಿ ಪರಿಗಣಿಸುತ್ತಾರೆಂದು ನನಗೆ ತಿಳಿದಿಲ್ಲ. ಅವರು ತುಂಬಾ ಪ್ರಬುದ್ಧರಾಗಿದ್ದಾರೆ. ರಾಹುಲ್ ಗಾಂಧಿ ಇಂಡಿಯ ಬ್ಲಾಕ್ನ ಅಧ್ಯಕ್ಷರಾಗಿದ್ದರೆ ಮತ್ತು ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಿದರೆ ಇತರೆ ಮಿತ್ರಪಕ್ಷಗಳು ಅವರನ್ನು ಬೆಂಬಲಿಸುತ್ತಾರೆಯೇ? ಈಗ ವರ್ಷಗಳೇ ಕಳೆದಿವೆ. ನಿಧಾನವಾಗಿ, ಇಂಡಿಯ ಬ್ಲಾಕ್ ಮೂಲೆಗುಂಪಾಗಿ ಬಿಜೆಪಿ ಆಡಳಿತವನ್ನು ಮುಂದುವರಿಸುತ್ತದೆ. ಆದ್ದರಿಂದ, ಮಣಿಶಂಕರ್ ಅಯ್ಯರ್ ಹೇಳಿದ್ದು ಸರಿ. ಕಾಂಗ್ರೆಸ್ ಅದರಲ್ಲೂ ವಿಶೇಷವಾಗಿ ರಾಹುಲ್ ಗಾಂಧಿ ಇತರರನ್ನು ಮುಂದಕ್ಕೆ ಬಿಟ್ಟು ಬಿಜೆಪಿಯನ್ನು ಅಳಿಸಿ ಹಾಕಬೇಕು ಎಂದು AIUDF ನಾಯಕ ರಫೀಕುಲ್ ಇಸ್ಲಾಂ ಹೇಳಿದ್ದಾರೆ.
- Sushma Chakre
- Updated on: Feb 23, 2026
- 9:53 pm
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ವಿಡಿಯೋ ನೋಡಿ
ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಕಾಂಗ್ರೆಸ್ನ ಮನ್ರೇಗಾ ಬಚಾವ್ ಆಂದೋಲನ ಸಮಾವೇಶ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ತಲೆ ಮೇಲೆ ಮಣ್ಣಿನ ಬುಟ್ಟಿ ಹೊತ್ತು ಸಮಾವೇಶಕ್ಕೆ ಚಾಲನೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ವೇದಿಕೆ ಮೇಲೆನೆ ಮಣ್ಣನ್ನು ತೋಡಿ ಪುಟ್ಟಿಗೆ ಹಾಕಿದ್ದು, ಇದನ್ನು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ತಲೆಗೆ ಟವೆಲ್ ಸುತ್ತಿಕೊಂಡು ಮಣ್ಣಿನ ಪುಟ್ಟಿ ಹೊತ್ತು ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.
- Bheemappa Patil
- Updated on: Feb 23, 2026
- 4:05 pm
ಅಧಿಕಾರ ಹಂಚಿಕೆ ಬಿಕ್ಕಟ್ಟು ನಡುವೆ ಕರ್ನಾಟಕ ಕಾಂಗ್ರೆಸ್ನಲ್ಲಿ ಪತ್ರ ಸ್ಫೋಟ, ಅದರಲ್ಲೇನಿದೆ?
ಕರ್ನಾಟಕ ಕಾಂಗ್ರೆಸ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಅಧಿಕಾರ ಹಂಚಿಕೆ ಬಿಕ್ಕಟ್ಟು ಜೋರಾಗಿದೆ. ಈ ಅಧಿಕಾರ ಹಸ್ತಾಂತರದ ನಡುವೆ ಸಂಪುಟ ಪುನಾರಚನೆ ಕೂಗು ಕೇಳಿಬಂದಿದೆ. ಈ ಸಂಬಂಧ ಕೆಲ ಶಾಸಕರು ಒಂದು ಹೆಜ್ಜೆ ಮುಂದಿಟ್ಟಿದ್ದು, ಸದ್ದಿಲ್ಲದೇ ಕಾಂಗ್ರೆಸ್ ಮನೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
- Ramesh B Jawalagera
- Updated on: Feb 23, 2026
- 4:01 pm
ರಾಹುಲ್ ಗಾಂಧಿ ಇಂಡಿಯ ಬ್ಲಾಕ್ ನಾಯಕನ ಸ್ಥಾನದಿಂದ ಕೆಳಗಿಳಿಯಬೇಕು; ಮಣಿಶಂಕರ್ ಅಯ್ಯರ್ ಒತ್ತಾಯ
ಕಾಂಗ್ರೆಸ್ ಹೈಕಮಾಂಡ್ ಪಾಲಿಗೆ ಕಾಂಗ್ರೆಸ್ನಲ್ಲಿರುವ ಕೆಲವು ಹಿರಿಯ ನಾಯಕರೇ ನುಂಗಲಾರದ ತುಪ್ಪವಾಗಿದ್ದಾರೆ. ಶಶಿ ತರೂರ್, ಮಣಿಶಂಕರ್ ಅಯ್ಯರ್ ರೀತಿಯ ಹಿರಿಯ ಕಾಂಗ್ರೆಸ್ ನಾಯಕರು ಈಗಿನ ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಆಗಾಗ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುವ ಮೂಲಕ ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡುತ್ತಲೇ ಇರುತ್ತಾರೆ. ಅತ್ತ ಶಶಿ ತರೂರ್ ಪ್ರಧಾನಿ ಮೋದಿಯನ್ನು ಹೊಗಳಿ ಹೊಗಳಿ ಕಾಂಗ್ರೆಸ್ ನಾಯಕರ ಹೊಟ್ಟೆ ಉರಿಸಿದರೆ ಇತ್ತ ಮಣಿಶಂಕರ್ ಅಯ್ಯರ್ ನೇರವಾಗಿಯೇ ಗಾಂಧಿ ಕುಟುಂಬದ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ.
- Sushma Chakre
- Updated on: Feb 23, 2026
- 3:28 pm
ಎಐ ಸಮ್ಮಿಟ್ನಲ್ಲಿ ಅರೆಬೆತ್ತಲೆ ಪ್ರತಿಭಟನೆ: ಯುವ ಕಾಂಗ್ರೆಸ್ ನಾಯಕರಿಗೆ ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠ
ದೆಹಲಿಯಲ್ಲಿ ನಡೆದ ಎಐ ಶೃಂಗಸಭೆ ವೇಳೆ ಯುವ ಕಾಂಗ್ರೆಸ್ ನಾಯಕರ ಶರ್ಟ್ ಬಿಚ್ಚಿದ ಪ್ರತಿಭಟನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಅಖಿಲೇಶ್ ಯಾದವ್ ಬಳಿಕ ಇದೀಗ ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೇಟ್ ಆಳ್ವಾ ಕೂಡ ಆ ಬಗ್ಗೆ ಪ್ರತಿಕ್ರಿಯಿಸಿದ್ದು, ಅಂತರರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಶಿಸ್ತು, ಸಭ್ಯತೆ ಮತ್ತು ಘನತೆ ಮುಖ್ಯ ಎಂದು ಯುವ ಕಾಂಗ್ರೆಸ್ ನಾಯಕರಿಗೆ ಶಿಸ್ತಿನ ಪಾಠ ಮಾಡಿದ್ದಾರೆ.
- Ganapathi Sharma
- Updated on: Feb 23, 2026
- 12:08 pm
ಅಧಿಕಾರ ಹಂಚಿಕೆ ಬಿಕ್ಕಟ್ಟು: ಕಾಂಗ್ರೆಸ್ನಲ್ಲಿ ರೂಪುಗೊಳ್ಳುತ್ತಿದೆಯಾ ಮತ್ತೊಂದು ಪವರ್ ಸೆಂಟರ್!
ಕರ್ನಾಟಕ ಕಾಂಗ್ರೆಸ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಅಧಿಕಾರ ಹಂಚಿಕೆ ಬಿಕ್ಕಟ್ಟು ಮುಂದುವರಿದಿರುವ ಮಧ್ಯೆಯೇ, ಸಚಿವ ಸತೀಶ್ ಜಾರಕಿಹೊಳಿ ಹೊಸ ಪವರ್ ಸೆಂಟರ್ ಆಗಿ ಹೊರಹೊಮ್ಮುವ ಸೂಚನೆಗಳು ಕಾಣಿಸಿವೆ. ಅವರು ಹೈಕಮಾಂಡ್ ಮಟ್ಟದಲ್ಲಿ ಪ್ರಬಲವಾಗಿ ಕಾಣಿಸಿಕೊಳ್ಳುತ್ತಿದ್ದು, ಇದು ಹೊಸ ಸಂದೇಶ ನೀಡುತ್ತಿದೆ ಎಂಬ ವಿಶ್ಲೇಷಣೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
- Prasanna Gaonkar
- Updated on: Feb 23, 2026
- 10:54 am
ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ: ಕಾಂಗ್ರೆಸ್ನಿಂದ ಮಾತ್ರ ಸಾಧ್ಯ ಎಂದು ಬಾಣ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ‘ದಲಿತ ಸಿಎಂ ಕಾಂಗ್ರೆಸ್ನಿಂದ ಮಾತ್ರ’ ಎಂಬ ಸಂದೇಶ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ವಿಪಕ್ಷಗಳ ಟೀಕೆ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಹೇಳಿಕೆ ಎಂಬ ವಾದಗಳ ನಡುವೆ, ಸಿದ್ದರಾಮಯ್ಯ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಈ ಹೇಳಿಕೆಯು ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವ ಬದಲಾವಣೆ ಮತ್ತು ಅಧಿಕಾರದ ಕದನಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.
- Prasanna Gaonkar
- Updated on: Feb 23, 2026
- 6:43 am
‘ನೀವೀಗಾಗಲೇ ಬೆತ್ತಲಾಗಿದ್ದೀರಿ, ಬಟ್ಟೆ ಬಿಚ್ಚಿದ್ಯಾಕೆ?’ – ಕಾಂಗ್ರೆಸ್ಗೆ ಪ್ರಧಾನಿ ಮೋದಿ ತರಾಟೆ
PM Narendra Modi slams congress party's shirtless protest: ಇಂಡಿಯಾ ಎಐ ಸಮಿಟ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್ಸಿಗರು ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಘಟನೆಗೆ ಪ್ರಧಾನಿ ಮೋದಿ ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ. ನೀವೀಗಾಗಲೇ ಬೆತ್ತಲೆಗೊಂಡಿದ್ದೀರಿ, ಮತ್ಯಾಕೆ ಬಟ್ಟೆ ಬಿಚ್ಚಲು ಹೋದಿರಿ ಎಂದು ಪ್ರಧಾನಿಗಳು ವ್ಯಂಗ್ಯ ಮಾಡಿದ್ದಾರೆ. ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್ ಬಹಳ ನೀಚ ಮಟ್ಟಕ್ಕೆ ಇಳಿದಿದೆ ಎಂದು ಟೀಕಿಸಿದ್ದಾರೆ.
- Vijaya Sarathy SN
- Updated on: Feb 22, 2026
- 4:45 pm
ಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರ ಇದ್ದಾರೆ? ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಸಹಾಯಕರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಚೆಕ್ ಡ್ಯಾಂ ಕಾಮಗಾರಿಗೆ ಸಂಬಂಧಿಸಿದಂತೆ ಕಮಿಷನ್ ಪಡೆಯುವಾಗ ಇವರು ಸಿಕ್ಕಿಬಿದ್ದಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ವಿಪಕ್ಷ ಬಿಜೆಪಿಗೆ ಮುಜುಗರ ಉಂಟು ಮಾಡಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಹಿರಿಯ ಶಾಸಕ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಸಿ, ನಾವು ಆತನ ಬಗ್ಗೆ ಮರುಕ ವ್ಯಕ್ತಪಡಿಸಬೇಕು ಅಷ್ಟೇ. ಸತ್ಯಹರಿಶ್ಚಂದ್ರನ ಮಕ್ಕಳು ಯಾರು ಇದ್ದಾರೆ ಹೇಳಿ ನೋಡೋಣ. ಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರ ಇದ್ದಾರೆ. ಇವನ್ಯಾರೋ ಬಡಪಾಯಿ ಸಿಕ್ಕಿ ಹಾಕಿಕೊಂಡಿದ್ದಾನೆ ಅಷ್ಟೇ ಎಂದು ಲಂಚ ಸ್ವೀಕರಿಸಿದ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ.
- Ramesh B Jawalagera
- Updated on: Feb 22, 2026
- 2:58 pm
ವಿವಾದದ ಬೆನ್ನಲ್ಲೇ ಸರಣಿ ಎಕ್ಸ್ ಪೋಸ್ಟ್ ಬಗ್ಗೆ ಸಿಎಂ ಸ್ಪಷ್ಟನೆ: ಹೆಚ್ಡಿಕೆಗೂ ತಿವಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ನ್ಯಾಯದ ಕುರಿತ ಲೇಖನದ ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಸಮಾಜದ ಚಲನಶೀಲತೆಗೆ ಒತ್ತು ನೀಡುವ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಅವರ ಟೀಕೆಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ ಸಿದ್ದರಾಮಯ್ಯ, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಜಾತಿ ರಾಜಕಾರಣದಲ್ಲಿ ತೊಡಗಿವೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಮಾತ್ರ ಎಲ್ಲ ಸಮುದಾಯದ ನಾಯಕರಿಗೆ ಸಮಾನ ಅವಕಾಶ ನೀಡುತ್ತದೆ ಎಂದೂ ಪ್ರತಿಪಾದಿಸಿದ್ದಾರೆ.
- Prasanna Hegde
- Updated on: Feb 22, 2026
- 2:57 pm
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ: ಇಲ್ಲಿದೆ ಮಾಹಿತಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿದ್ಯಾಲಯಗಳಲ್ಲಿನ ಶಿಕ್ಷಕರ ಕೊರತೆಯ ಬಗ್ಗೆ ಮಾತನಾಡಿದ್ದಾರೆ. ಹಾಲಿ ಶೇ.65ರಷ್ಟು ಬೋಧಕ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ ಎಂದು ಹೇಳಿದ ಅವರು, ಹಂತ ಹಂತವಾಗಿ ನೇಮಕಾತಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅನಿವಾರ್ಯವಾಗಿ ಅತಿಥಿ ಉಪನ್ಯಾಸಕರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
- Prasanna Gaonkar
- Updated on: Feb 22, 2026
- 12:45 pm
ಎಐ ಶೃಂಗಸಭೆಯ ಪ್ರತಿಭಟನೆಗೆ ಆಕ್ರೋಶ; ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ದೆಹಲಿಯ AI ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಂಗಿ ಬಿಚ್ಚಿ ಪ್ರತಿಭಟನೆ ನಡೆಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. 2014ರ RSS ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಿವಂಡಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಮುಂದೆ ಹಾಜರಾಗಲು ಲೋಕಸಭೆಯ ವಿರೋಧ ಪಕ್ಷದ ನಾಯಕ ಇಂದು ಮುಂಬೈಗೆ ತೆರಳಿದ್ದರು.
- Sushma Chakre
- Updated on: Feb 21, 2026
- 7:44 pm