Congress
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಸಾಮಾನ್ಯವಾಗಿ ಕಾಂಗ್ರೆಸ್ ಪಕ್ಷ ಎಂದು ಕರೆಯಲಾಗುತ್ತದೆ. ಇದು ಭಾರತದ ಅತ್ಯಂತ ಪುರಾತನ ಮತ್ತು ಪ್ರಮುಖ ರಾಜಕೀಯ ಸಂಸ್ಥೆಗಳಲ್ಲಿ ಒಂದಾಗಿದೆ. 1885 ರಲ್ಲಿ ಸ್ಥಾಪಿತವಾದ ಇದು ಬ್ರಿಟಿಷರ ಆಳ್ವಿಕೆಯಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ. ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರಂತಹ ನಾಯಕರು ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದವರು.
1947 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ಪ್ರಬಲ ರಾಜಕೀಯ ಶಕ್ತಿಯಾಯಿತು ಮತ್ತು ಸ್ವಾತಂತ್ರ್ಯದ ನಂತರದ ದಶಕಗಳ ಕಾಲ ಕೇಂದ್ರದಲ್ಲಿ ಸರ್ಕಾರವನ್ನು ರಚಿಸಿತು. ಆದರೆ ಇತ್ತೀಚೆಗೆ ಅಧಿಕಾರದಿಂದ ದೂರ ಉಳಿದಿದೆ. ಪಕ್ಷದ ಸಿದ್ಧಾಂತವು ಕಾಲಕಾಲಕ್ಕೆ ವಿಕಸನಗೊಳ್ಳುತ್ತಾ ಬಂದಿದೆ. ಸಮಾಜವಾದ, ಜಾತ್ಯತೀತ ಆಡಳಿತದ ಅಂಶಗಳನ್ನು ಒಳಗೊಂಡಿದೆ. ಇದು ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿವಿ ನರಸಿಂಹರಾವ್, ಮನಮೋಹನ್ ಸಿಂಗ್ ಸೇರಿದಂತೆ ಹಲವಾರು ಪ್ರಧಾನ ಮಂತ್ರಿಗಳನ್ನು ನಿರ್ಮಿಸಿದೆ.
ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮತ್ತು ನಾನಾ ರಾಜ್ಯಗಳ ರಾಜಕೀಯದಲ್ಲಿ ತೊಡಗಿಸಿಕೊಂಡಿದೆ. ವಿವಿಧ ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳನ್ನು ಪ್ರತಿಪಾದಿಸುತ್ತದೆ. ಕಾಂಗ್ರೆಸ್ ಪಕ್ಷವು ದೇಶದ ಅನೇಕ ರಾಜ್ಯಗಳಲ್ಲಿಯೂ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಾ ಬಂದಿತ್ತು. ಆದಾಗ್ಯೂ, ಇತ್ತೀಚಿನ ವರ್ಷಗಳಲ್ಲಿ ಅದು ಕೆಲವು ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಇತರ ಪ್ರಾದೇಶಿಕ ಪಕ್ಷಗಳಿಂದ ಸವಾಲುಗಳನ್ನು ಎದುರಿಸುತ್ತಿದೆ.
ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ವೇಳೆ ಗಲಾಟೆ: ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಚಿಕ್ಕಬಳ್ಳಾಪುರ ಘಟನೆ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ. ಕುಮಾರಸ್ವಾಮಿ, ಕಾರ್ಯಕರ್ತರು ಪ್ರಚೋದನಾಕಾರಿ ಹೇಳಿಕೆಗಳಿಗೆ ಉದ್ರೇಕಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ. ಚಪ್ಪಲಿ ತೂರುವಿಕೆ ನಮ್ಮ ಸಂಸ್ಕೃತಿಯಲ್ಲ, ಶಾಂತಚಿತ್ತರಾಗಿರಬೇಕು. ಸಮಾಜದಲ್ಲಿ ಅಶಾಂತಿಗೆ ಅವಕಾಶ ನೀಡಬೇಡಿ ಎಂದ ಅವರು, ಚರ್ಚೆಗೆ ಸಿದ್ಧ ಎಂದು ಪತ್ರ ಬರೆದಿರುವುದಾಗಿ ತಿಳಿಸಿದರು.
- Sunil MH
- Updated on: Jun 28, 2026
- 3:58 pm
ರಾಜ್ಯದ ರೈತರ ಆರ್ಟಿಸಿಗಳಲ್ಲಿ ವಕ್ಫ್ ಉಲ್ಲೇಖ: ರಾಜ್ಯ ಸರ್ಕಾರದ ಮೇಲೆ ಮುಗಿಬಿದ್ದ ವಿಪಕ್ಷ ನಾಯಕ ಅಶೋಕ್
Waqf Row: ರಾಜ್ಯದಲ್ಲಿ 1.80 ಲಕ್ಷಕ್ಕೂ ಹೆಚ್ಚು ರೈತರ ಆರ್ಟಿಸಿಗಳಲ್ಲಿ (RTC) ವಕ್ಫ್ ಹೆಸರು ಉಲ್ಲೇಖವಾಗಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ಓಲೈಕೆ ಮತ್ತು ತುಷ್ಟೀಕರಣದ ರಾಜಕಾರಣ ಈಗ ನಾಡಿನ ರೈತರ ಅಸ್ತಿತ್ವಕ್ಕೇ ಕುತ್ತು ತರುವ ಹಂತಕ್ಕೆ ತಲುಪಿದೆ. ಅನ್ನ ನೀಡುವ ರೈತನನ್ನು ತನ್ನದೇ ಭೂಮಿಯ ಹಕ್ಕಿಗಾಗಿ ಸರ್ಕಾರಿ ಕಚೇರಿಗಳ ಮುಂದೆ ನಿಲ್ಲಿಸಿದರೆ ಅವರ ಶಾಪ ತಟ್ಟದೇ ಇರದು ಎಂದೂ ಅವರು ಎಚ್ಚರಿಸಿದ್ದಾರೆ.
- Prasanna Hegde
- Updated on: Jun 28, 2026
- 10:45 am
ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯಸಿಂಹಾಸನ ಶಾಶ್ವತ: ಮಾಜಿ ಸಿಎಂ ಸಿದ್ದರಾಮಯ್ಯ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆ ಮೈಸೂರಿಗೆ ಭೇಟಿ ನೀಡಿದ ಬಳಿಕ 'ಮುಖ್ಯಮಂತ್ರಿ ಸಿಂಹಾಸನ ನಶ್ವರ, ಜನತೆಯ ಹೃದಯ ಸಿಂಹಾಸನ ಶಾಶ್ವತ' ಎಂದು ಸಿದ್ದರಾಮಯ್ಯ ಭಾವುಕ ಎಕ್ಸ್ ಪೋಸ್ಟ್ ಹಂಚಿಕೊಂಡಿದ್ದಾರೆ. ಅಧಿಕಾರ, ಸಂಪತ್ತು ಕಾಲ ಬದಲಾದಂತೆ ಕಳೆದು ಹೋಗಬಹುದು, ಜನರ ಪ್ರೀತಿ ನಿರಂತರ. ನನ್ನ ಸಾರ್ವಜನಿಕ ಬದುಕಿನಲ್ಲಿ ನನ್ನನ್ನು ಪ್ರೀತಿಸುವ ದೊಡ್ಡ ಜನಸಮೂಹವನ್ನೇ ಸಂಪಾದಿಸಿದ್ದೇನೆ ಎನ್ನುವ ಹೆಮ್ಮೆ ನನ್ನದು ಎಂದವರು ತಿಳಿಸಿದ್ದಾರೆ.
- Pramod Shastri G
- Updated on: Jun 28, 2026
- 7:06 am
RSS ನೋಂದಾಣಿ ಮಾಡಿಸಿದ್ರೆ ಒಳ್ಳೆದು ಅಂತ ಪೇಜಾವರಶ್ರೀಗಳೇ ಹೇಳಿದ್ದಾರೆ: ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆಯನ್ನು (ಆರ್ಎಸ್ಎಸ್) ನೋಂದಣಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪ ಜೋರಾಗಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ ಆರ್ಎಸ್ಎಸ್ ನೋಂದಣಿ ವಿಚಾರಕ್ಕೆ ಬಿಜೆಪಿ ನಾಯಕರು ಸಹ ತಿರುಗೇಟು ನೀಡುತ್ತಿದ್ದಾರೆ. ಇನ್ನು ಆರೆಸ್ಸೆಸ್ ಅನ್ನು ಕಾನೂನು ಪ್ರಕಾರ ನೋಂದಣಿ ಮಾಡಬೇಕು ಎಂಬ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಆಗ್ರಹದ ಬಗ್ಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ (Pejawar Shree) ಪ್ರವೇಶಿಸಿ, ನೋಂದಣಿ ಮಾಡಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ ಎಂದಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಪೇಜಾವರಶ್ರೀಗಳ ಹೇಳಿಕೆ ಪ್ರಸ್ತಾಪಿಸಿ, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
- Ramesh B Jawalagera
- Updated on: Jun 27, 2026
- 8:41 pm
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ, ಸ್ವಾಗತ ಹೇಗಿತ್ತು ನೋಡಿ
ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಇದೆ ಮೊದಲ ಬಾರಿಗೆ ಇಂದು (ಜೂನ್ 27) ತವರು ಜಿಲ್ಲೆ ಮೈಸೂರಿಗೆ ಭೇಟಿ ನೀಡಿದ್ದಾರೆ.ಈ ವೇಳೆಮೈಸೂರಿನ ಹೈವೇ ಸರ್ಕಲ್ನಲ್ಲಿ ಅಭಿಮಾನಿಗಳು ಬೃಹತ್ ಸೇಬಿನ ಹಾರದೊಂದಿಗೆ ಪಟಾಕಿ ಸಿಡಿಸಿ ಅದ್ಧೂರಿ ಸ್ವಾಗತ ಕೋರಿದ್ದಾರೆ. ಇನ್ನು ಶಾಸಕರಾದ ಸ್ವಾಗತಿಸಿದ ತನ್ವೀರ್ ಸೇಠ್, ಹರೀಶ್ ಗೌಡ ಸೇರಿ ಹಲವರು ಸಿದ್ದರಾಮಯ್ಯನವರನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಇಂದು ರಾತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದು, ನಾಳೆ (ಜೂನ್ 28) ನಡೆಯಲಿರುವ ಎಸ್ಐಆರ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
- Ram
- Updated on: Jun 27, 2026
- 7:57 pm
ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ
ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ನಡೆಯುತ್ತಿದ್ದ ಕೆಂಪೇಗೌಡ ಕಾರ್ಯಕ್ರಮದಲ್ಲಿ ನುಗ್ಗಿದ ಜೆಡಿಎಸ್ ಕಾರ್ಯಕರ್ತರು, ಪ್ರದೀಪ್ ಈಶ್ವರ್ ಅವರನ್ನ ವೇದಿಕೆಯಿಂದ ಕೆಳಗಿಳಸಬೇಕೆಂದು ಗಲಾಟೆ ಮಾಡಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದು, ಬಳಿಕ ಸ್ವಾಮೀಜಿ ಮಧ್ಯೆ ಪ್ರವೇಶಿಸಿ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟರು. ಇದಾದ ನಂತರ ಪ್ರದೀಪ್ ಈಶ್ವರ್, ತಮ್ಮ ವಿರುದ್ಧ ಘೋಷಣೆ ಕೂಗಿದ ಜೆಡಿಎಸ್ ಕಾರ್ಯಕರ್ತರಿಗೆ ಮೀಸೆ ತಿರುವಿ ತೋಳು ತಟ್ಟಿ ತಿರುಗೇಟು ನೀಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಜೆಡಿಎಸ್ ಕಾರ್ಯಕರ್ತರು ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದಿದ್ದಾರೆ. ಪ್ರದೀಪ್ ಈಶ್ವರ್ ಕಾರಿನ ಸನ್ ರೂಫ್ ಮೂಲಕ ಮೆರವಣಿಗೆ ತೆರಳುತ್ತಿದ್ದ ವೇಳೆ ಕೆಲವರು ಚಪ್ಪಲಿ ಎಸೆದಿದ್ದು, ಕೂಡಲೇ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
- Bheemappa Patil
- Updated on: Jun 27, 2026
- 4:55 pm
ಟೌನ್ಶಿಪ್ ವಿವಾದ: ಕುಮಾರಸ್ವಾಮಿ ಹಣ ಕೊಟ್ಟ ಹೊರಗಿನವರನ್ನ ಕರೆಸಿದ್ರಾ? ಭುಗಿಲೆದ್ದ ಆಕ್ರೋಶ
ಬಿಡದಿ ಟೌನ್ಶಿಪ್ ಯೋಜನೆ ಪರ, ವಿರುದ್ಧ ರೈತರು ರಣಕಹಳೆ ಮೊಳಗಿಸಿದ್ದಾರೆ. ರಾಜಕೀಯ ತಿರುವು ಕೂಡ ಪಡೆದುಕೊಂಡಿದೆ. ಅದರಲ್ಲೂ ಹೆಚ್ಡಿ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ಮಧ್ಯೆ ಜಟಾಪಟಿ ಜೋರಾಗಿದೆ. ರೈತರ ಜೊತೆ ಚರ್ಚಿಸೋಣ ಎಂದು ಸವಾಲು ಹಾಕಿದ್ದ ಕುಮಾರಸ್ವಾಮಿ ಇಂದು ಬೈರಮಂಗಲಕ್ಕೆ ಎಂಟ್ರಿ ಕೊಟ್ಟಿದ್ದರು. ಈ ವೇಳೆ ಯೋಜನೆ ಪರ ಪ್ರತಿಭಟನಾನಿರತ ರೈತರಿಂದ ಹೈಡ್ರಾಮವೇ ನಡೆದಿದೆ.
- Dileep CP
- Updated on: Jun 27, 2026
- 3:39 pm
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ, ಪೊಲೀಸರಿಂದ ಲಘು ಲಾಠಿ ಚಾರ್ಜ್
ರಾಜ್ಯಾದೆಲ್ಲೆಡೆ ಇಂದು (ಜೂನ್ 27) ಕೆಂಪೇಗೌಡ ಜಯಂತಿ (Kempegowda Jayanti) ಕಾರ್ಯಕ್ರಮ ಆಚರಣೆ ಮಾಡಲಾಯ್ತು. ಆದ್ರೆ, ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ದೊಡ್ಡ ಹೈಡ್ರಾಮವೇ ನಡೆದಿದೆ. ಹೌದು...ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಅವಹೇಳನ ಹೇಳಿಕೆ ನೀಡಿದ ಸಂಬಂಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಾರದು. ಕಾರ್ಯಕ್ರಮ ವೇದಿಕೆಯಿಂದ ಅವರನ್ನು ಹೊರಕಳಿಸುವಂತೆ ಯುವಕರ ಗುಂಪು ಲ್ಲಿ ಗಲಾಟೆ ಮಾಡಿದ್ದು, ಈ ವೇಳೆ ಮಾತಿನ ಚಕಮಕಿ, ನೂಕಾಟ-ತಳ್ಳಾಟ ನಡೆಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸಹ ಹರಸಾಹಸಪಟ್ಟಿದ್ದು, ಆದರೂ ಗಲಾಟೆ ಕಂಟ್ರೋಲ್ ತಪ್ಪುತ್ತಿದ್ದಂತೆಯೇ ಪೊಲೀಸರು ಕೊನೆಗೆ ಲಘು ಲಾಠಿ ಪ್ರಹಾರ ನಡೆಸಿದರು.
- Bheemappa Patil
- Updated on: Jun 27, 2026
- 2:52 pm
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಬಗ್ಗೆ ವಿಜಯೇಂದ್ರಗೆ ವರದಿ ಸಲ್ಲಿಸಿ ಸಿ.ಟಿ ರವಿ ಹೇಳಿದ್ದೇನು?
ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನಕ್ಕೆ (Cross Voting) ಸಂಬಂಧಿಸಿದಂತೆ ಸಿ.ಟಿ. ರವಿ ನೇತೃತ್ವದ ಸಮಿತಿಯು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಆಂತರಿಕ ವರದಿ ಸಲ್ಲಿಸಿದೆ. ನ್ಡಿಎ ಮೈತ್ರಿಕೂಟದ ಒಟ್ಟು 12 ಸದಸ್ಯರು ಕ್ರಾಸ್ ವೋಟಿಂಗ್ ಮಾಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಸೇರಿ ಈ ಅಡ್ಡಮತದಾನ ನಡೆದಿದೆ ಎಂದು ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ.
- Bhavana Hegde
- Updated on: Jun 27, 2026
- 12:32 pm
ಸರ್ಕಾರದ ಬೊಕ್ಕಸ ತುಂಬಿಸುವ ಇಲಾಖೆಗಳಿಗೆ ಬಿಸಿ ಮುಟ್ಟಿಸಿದ ಡಿಕೆಶಿ: ಅಧಿಕಾರಿಗಳಿಗೆ ನೀಡಿದ ಸೂಚನೆಗಳೇನು?
ಹಲವು ಪ್ರಮುಖ ಖಾತೆಗಳನ್ನು ನಿರ್ವಹಿಸಿರುವ ಡಿಕೆ ಶಿವಕುಮಾರ್ ಇದೀಗ ಹಣಕಾಸು, ವಾಣಿಜ್ಯ ತೆರಿಗೆ ಇಲಾಖೆಗಳ ಕಾರ್ಯವೈಖರಿ ಅರ್ಥ ಮಾಡಿಕೊಳ್ಳಲು ಪ್ರಯತ್ನದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಇಂದು ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ ಮಾಡಿದರು. ಸಭೆಯಲ್ಲಿ ಹಿರಿಯ ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.
- Gangadhar Saboji
- Updated on: Jun 26, 2026
- 6:08 pm
ಸರ್ಕಾರಿ ನಿವಾಸ ಹಂಚಿಕೆ: 3 ವರ್ಷ ಬಳಿಕ ಮನೆ ಕೊಟ್ಟರೂ ಅಶೋಕ್ ಬಯಸಿದ್ದು ಸಿಗಲೇ ಇಲ್ಲ!
Karnataka Political News: ಮೊನ್ನೇ ಅಷ್ಟೇ ಸಚಿವರಿಗೆ ಕಚೇರಿ ಕೊಠಡಿಗಳನ್ನ ಹಂಚಿಕೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಸಚಿವಾಲಯವು ಸರ್ಕಾರಿ ಸರಕಾರಿ ವಸತಿ ಗೃಹಗಳನ್ನು ಸಹ ಹಂಚಿಕೆ ಮಾಡಿದೆ. ಮೂರು ವರ್ಷಗಳ ಬಳಿಕ ವಿಪಕ್ಷ ನಾಯಕ ಆರ್ ಅಶೋಕ್ ಅವರಿಗೆ ನಿವಾಸ ನೀಡಲಾಗಿದೆ. ಆದ್ರೆ, ಅವರು ಬಯಸಿದ್ದು ಮಾತ್ರ ಸಿಕ್ಕಿಲ್ಲ. ಬದಲಾಗಿ ಬೇರೆ ನಿವಾಸವನ್ನು ನೀಡಲಾಗಿದೆ. ಹಾಗಾದ್ರೆ, ಯಾರು ಯಾವುದು ಕೇಳಿದ್ರು, ಯಾವುದು ಸಿಕ್ಕಿದೆ ಎನ್ನುವ ವಿವರ ಇಲ್ಲಿದೆ.
- Kiran Haniyadka
- Updated on: Jun 25, 2026
- 8:38 pm
ಸಿಎಜಿ ವರದಿಯಲ್ಲಿ ಗೃಹಲಕ್ಷ್ಮೀ ಯೋಜನೆ ಕಳ್ಳಾಟ ಬಯಲು: ಲೋಪಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಇಲಾಖೆ ಸ್ಪಷ್ಟನೆ
ಸಿಎಜಿ ವರದಿ ಬಹಿರಂಗಪಡಿಸಿದ ಗೃಹಲಕ್ಷ್ಮೀ ಯೋಜನೆಯ ಬ್ಯಾಂಕ್ ಖಾತೆ ಲೋಪಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸ್ಪಷ್ಟೀಕರಣ ನೀಡಿದೆ. ಒಂದೇ ಖಾತೆಗೆ ಬಹು ಫಲಾನುಭವಿಗಳ ಪಾವತಿ ಮತ್ತು ಒಂದೇ ಫಲಾನುಭವಿಗೆ ಬಹು ಖಾತೆಗಳಿಗೆ ಪಾವತಿಯಾದ ಬಗ್ಗೆ ಇಲಾಖೆ ವಿವರಣೆ ನೀಡಿದೆ.
- Prasanna Gaonkar
- Updated on: Jun 25, 2026
- 8:02 pm