Congress
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಸಾಮಾನ್ಯವಾಗಿ ಕಾಂಗ್ರೆಸ್ ಪಕ್ಷ ಎಂದು ಕರೆಯಲಾಗುತ್ತದೆ. ಇದು ಭಾರತದ ಅತ್ಯಂತ ಪುರಾತನ ಮತ್ತು ಪ್ರಮುಖ ರಾಜಕೀಯ ಸಂಸ್ಥೆಗಳಲ್ಲಿ ಒಂದಾಗಿದೆ. 1885 ರಲ್ಲಿ ಸ್ಥಾಪಿತವಾದ ಇದು ಬ್ರಿಟಿಷರ ಆಳ್ವಿಕೆಯಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ. ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರಂತಹ ನಾಯಕರು ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದವರು.
1947 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ಪ್ರಬಲ ರಾಜಕೀಯ ಶಕ್ತಿಯಾಯಿತು ಮತ್ತು ಸ್ವಾತಂತ್ರ್ಯದ ನಂತರದ ದಶಕಗಳ ಕಾಲ ಕೇಂದ್ರದಲ್ಲಿ ಸರ್ಕಾರವನ್ನು ರಚಿಸಿತು. ಆದರೆ ಇತ್ತೀಚೆಗೆ ಅಧಿಕಾರದಿಂದ ದೂರ ಉಳಿದಿದೆ. ಪಕ್ಷದ ಸಿದ್ಧಾಂತವು ಕಾಲಕಾಲಕ್ಕೆ ವಿಕಸನಗೊಳ್ಳುತ್ತಾ ಬಂದಿದೆ. ಸಮಾಜವಾದ, ಜಾತ್ಯತೀತ ಆಡಳಿತದ ಅಂಶಗಳನ್ನು ಒಳಗೊಂಡಿದೆ. ಇದು ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿವಿ ನರಸಿಂಹರಾವ್, ಮನಮೋಹನ್ ಸಿಂಗ್ ಸೇರಿದಂತೆ ಹಲವಾರು ಪ್ರಧಾನ ಮಂತ್ರಿಗಳನ್ನು ನಿರ್ಮಿಸಿದೆ.
ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮತ್ತು ನಾನಾ ರಾಜ್ಯಗಳ ರಾಜಕೀಯದಲ್ಲಿ ತೊಡಗಿಸಿಕೊಂಡಿದೆ. ವಿವಿಧ ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳನ್ನು ಪ್ರತಿಪಾದಿಸುತ್ತದೆ. ಕಾಂಗ್ರೆಸ್ ಪಕ್ಷವು ದೇಶದ ಅನೇಕ ರಾಜ್ಯಗಳಲ್ಲಿಯೂ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಾ ಬಂದಿತ್ತು. ಆದಾಗ್ಯೂ, ಇತ್ತೀಚಿನ ವರ್ಷಗಳಲ್ಲಿ ಅದು ಕೆಲವು ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಇತರ ಪ್ರಾದೇಶಿಕ ಪಕ್ಷಗಳಿಂದ ಸವಾಲುಗಳನ್ನು ಎದುರಿಸುತ್ತಿದೆ.
ಕರ್ನಾಟಕದಲ್ಲಿ ಶೇ 63ರಷ್ಟು ಭ್ರಷ್ಟಾಚಾರ: ಬಿಜೆಪಿ ಕಡೆಗೇ ಬಾಣ ತಿರುಗಿಸಿದ ಸಿಎಂ ಸಿದ್ದರಾಮಯ್ಯ!
ಉಪಲೋಕಾಯುಕ್ತರ 63% ಭ್ರಷ್ಟಾಚಾರ ಹೇಳಿಕೆ ಆಧರಿಸಿ ಬಿಜೆಪಿ ಕಾಂಗ್ರೆಸ್ಗೆ ಸಿಬಿಐ ತನಿಖೆಯ ಸವಾಲು ಹಾಕಿತ್ತು. ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಬಿ.ವೀರಪ್ಪ ಹೇಳಿಕೆ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಆಡಳಿತದ ಅವಧಿಗೇ ಸೇರಿದ್ದು ಎಂದಿದ್ದಾರೆ. 40% ಕಮಿಷನ್, ಪಿಎಸ್ಐ ಹಗರಣ ಸೇರಿ ಹಲವು ಭ್ರಷ್ಟಾಚಾರ ಪ್ರಕರಣಗಳನ್ನು ಉಲ್ಲೇಖಿಸಿ, ತಮ್ಮ ಸರ್ಕಾರ ಪಾರದರ್ಶಕತೆಗಾಗಿ ಶ್ರಮಿಸುತ್ತಿದೆ ಎಂದಿದ್ದಾರೆ.
- Ganapathi Sharma
- Updated on: Dec 5, 2025
- 7:42 am
ಮಂಗಳೂರಿನಲ್ಲಿ ವೇಣುಗೋಪಾಲ್ ಎದುರು ಡಿಕೆ ಡಿಕೆ ಘೋಷಣೆ: ಡಿಕೆಶಿ ಆಪ್ತನಿಗೆ ಹೈಕಮಾಂಡ್ ಬಿಗ್ ಶಾಕ್
ಸಿದ್ದರಾಮಯ್ಯ ಸರ್ಕಾರ ಮೊನ್ನೆ ಎರಡುವರೆ ವರ್ಷ ಪೂರೈಸುತ್ತಿದ್ದಂತೆಯೇ ಅಧಿಕಾರ ಹಂಚಿಕೆ ಕದನ ಜೋರಾಗಿತ್ತು. ಡಿಕೆ ಶಿವಕುಮಾರ್ ಹಾಗೂ ಅವರ ಬಣ ಸಿಎಂ ಕುರ್ಚಿ ಬೇಕೇಬೇಕೆಂದು ಪಟ್ಟು ಹಿಡಿದು ನಾನಾ ಕಸರತ್ತು ನಡೆಸಿತ್ತು. ಕೊನೆಗೆ ಹೈಕಮಾಂಡ್ ಮಧ್ಯೆಪ್ರವೇಶಿಸಿ ಸಿಎಂ ಮತ್ತು ಡಿಸಿಎಂಗೆ ಕರೆ ಮಾಡಿ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿ ಗೊಂದಲ ಬಗೆಹರಿಸುವಂತೆ ಸೂಚಿಸಿತ್ತು. ಅದರಂತೆ ಎಲ್ಲಾ ಆಗಿ ಶಾಂತವಾಗಿತ್ತು. ಆದ್ರೆ, ಎಐಸಿಸಿ ಪ್ರಧಾನಿ ಕಾರ್ಯದರ್ಶಿ ವೇಣುಗೋಪಾಲ್ ಮಂಗಳೂರಿಗೆ ಆಗಮಿಸಿದ್ದ ವೇಳೆ ಡಿಕೆ ಡಿಕೆ ಘೋಷಣೆ ಮೊಳಗಿತ್ತು. ಈ ಸಂಬಂಧ ಇದೀಗ ಡಿಕೆಶಿ ಆಪ್ತನಿಗೆ ಹೈಕಮಾಂಡ್ ಶಾಕ್ ಕೊಟ್ಟಿದೆ.
- Pruthviraj
- Updated on: Dec 4, 2025
- 10:33 pm
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ಲ್ಯಾಪ್ಟಾಪ್ನಲ್ಲಿ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್
ಕರ್ನಾಟಕದಲ್ಲಿ ಭ್ರಷ್ಟಾಚಾರ ಹೆಚ್ಚಳದ ಬಗ್ಗೆ ಉಪಲೋಕಾಯುಕ್ತರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಮುಗಿಬಿದ್ದಿದೆ. ಈ ಹಿಂದೆ ಇದ್ದ ತಮ್ಮ ಸರ್ಕಾರದ ಮೇಲೆ ಶೇ.40 ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ಗೆ ವಿಪಕ್ಷ ನಾಯಕ ಆರ್. ಅಶೋಕ್ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಆರ್ ಅಶೋಕ್ ಅವರು, ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡಿರುವುದನ್ನು ಲ್ಯಾಪ್ಟಾಲ್ನಲ್ಲಿ ತೋರಿಸಿದರು.
- Ramesh B Jawalagera
- Updated on: Dec 4, 2025
- 5:27 pm
ಕರ್ನಾಟಕದಲ್ಲಿ ಭ್ರಷ್ಟಾಚಾರ: ನಿಮಗೆ ಧೈರ್ಯ ಇದ್ರೆ ಸಿಬಿಐ ತನಿಖೆ ಮಾಡಿಸಿ; ಆರ್ ಅಶೋಕ್ ಸವಾಲು
ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರವಿದೆ ಎಂಬ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ಹೇಳಿಕೆಯನ್ನೇ ಬಿಜೆಪಿ ಅಸ್ತ್ರಮಾಡಿಕೊಂಡಿದ್ದು, ಸರ್ಕಾರದ ಮೇಲೆ ಮುಗಿಬಿದ್ದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಅಶೋಕ್, ಪೇ ಸಿಎಂ ಅಂತಾ ರೋಡ್ನಲ್ಲಿ ಪೋಸ್ಟರ್ ಅಂಟಿಸಿದ್ರಲ್ಲಾ, ಅದನ್ನ ಈಗ ನಿಮ್ಮ ಮುಖದ ಮೇಲೆ ಅಂಟಿಸಬೇಕು ಎಂದು ವಾಗ್ದಾಳಿ ಮಾಡಿದ್ದಾರೆ.
- Kiran Haniyadka
- Updated on: Dec 4, 2025
- 4:46 pm
ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರ: ಉಪಲೋಕಾಯುಕ್ತರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಮೇಲೆ ಮುಗಿಬಿದ್ದ ಬಿಜೆಪಿ
ಕರ್ನಾಟಕದಲ್ಲಿ ಭ್ರಷ್ಟಾಚಾರ ಹೆಚ್ಚಳದ ಬಗ್ಗೆ ಉಪಲೋಕಾಯುಕ್ತರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಮುಗಿಬಿದ್ದಿದೆ. ಈ ಹಿಂದೆ ಇದ್ದ ತಮ್ಮ ಸರ್ಕಾರದ ಮೇಲೆ ಶೇ.40 ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ಗೆ ವಿಪಕ್ಷ ನಾಯಕ ಆರ್. ಅಶೋಕ್ ತಿರುಗೇಟು ನೀಡಿದ್ದಾರೆ.
- Prasanna Hegde
- Updated on: Dec 4, 2025
- 12:35 pm
ಬೆಳಗಾವಿ ಅಧಿವೇಶನಕ್ಕೆ ಸುವರ್ಣಸೌಧ ಸಜ್ಜು: 12 ಸಾವಿರ ಸಿಬ್ಬಂದಿ, 3 ಸಾವಿರ ರೂಮ್ಗಳು ಬುಕ್
ಡಿಸೆಂಬರ್ 8ರಿಂದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಇಡೀ ಸರ್ಕಾರವೇ ಬೆಳಗಾವಿಯಲ್ಲಿರಲಿದ್ದು, ಅಚ್ಚುಕಟ್ಟಾಗಿ ಅಧಿವೇಶನ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ. ದೆಹಲಿ ಬಾಂಬ್ ಬ್ಲಾಸ್ಟ್ ಹಿನ್ನೆಲೆ ಹೈ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಬಿಗಿ ಬಂದೋಬಸ್ತ್ ಸಹ ಮಾಡಲಾಗಿದೆ.
- Sahadev Mane
- Updated on: Dec 4, 2025
- 6:23 am
ಡಿ.8ರ ಸಭೆ ಬರಲಾಗಲ್ಲ: ಕಾರಣ ಸಮೇತ ಸಿದ್ದರಾಮಯ್ಯಗೆ ಮರುಪತ್ರ ಬರೆದ ಸಚಿವ ಜೋಶಿ
ಕರ್ನಾಟಕದ ಅಭಿವೃದ್ಧಿ ಮತ್ತು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರದ ಗಮನ ಸೆಳೆಯಲೆಂದು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಡಿಸೆಂಬರ್ 8ರಂದು ರಾಜ್ಯವನ್ನು ಪ್ರತಿನಿಧಿಸುವ ಸಂಸದರ ಸಭೆ ಕರೆದಿದ್ದರು. ಆದ್ರೆ, ಸಂಸತ್ ಅಧಿವೇಶನ ನಡೆಯುತ್ತಿರುವುದರಿಂದ ಸಭೆಗೆ ಬರಲಾಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಿಎಂಗೆ ಮರುಪತ್ರ ಬರೆದಿದ್ದಾರೆ. ಹಾಗಾದ್ರೆ, ಪತ್ರದಲ್ಲೇನಿದೆ ಎನ್ನುವ ವಿವರ ಈ ಕೆಳಗಿನಂತಿದೆ.
- Ramesh B Jawalagera
- Updated on: Dec 3, 2025
- 10:13 pm
ನೆಹರು ಬಗ್ಗೆ ಸುಳ್ಳು ಆರೋಪ; ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಆಕ್ರೋಶ
ಕೇಂದ್ರ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಗುಜರಾತಿನಲ್ಲಿ ಮಾತನಾಡುವಾಗ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ವಿರುದ್ಧ ಗಂಭೀರ ಆರೋಪ ಮಾಡಿದ್ದರು. 'ನೆಹರು ಸಾರ್ವಜನಿಕ ದುಡ್ಡಿನಲ್ಲಿ ಬಾಬ್ರಿ ಮಸೀದಿಯನ್ನು ಪುನರ್ನಿರ್ಮಿಸಲು ಬಯಸಿದ್ದರು' ಎಂಬ ರಾಜನಾಥ್ ಸಿಂಗ್ ಆರೋಪಕ್ಕೆ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, ಅದನ್ನು 'ಸುಳ್ಳು' ಎಂದು ಹೇಳಿದೆ.
- Sushma Chakre
- Updated on: Dec 3, 2025
- 6:35 pm
ಕಾಂಗ್ರೆಸ್ನಲ್ಲಿ ಸಹಿ ಸಂಗ್ರಹ: ನಾಟಿ ಕೋಳಿ ರುಚಿ ಸವಿದರೂ ಕುರ್ಚಿ ಕಾಳಗ ಶಾಂತವಾಗಿಲ್ವಾ?
ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ನಡೆದ ಮುಸುಕಿನ ಗುದ್ದಾಟ ಸದ್ಯಕ್ಕೆ ಶಾಂತವಾದಂತಿದೆ. ಪರಸ್ಪರ ಒಬ್ಬರ ಮನೆಗೆ ಒಬ್ಬರು ಹೋಗಿ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುವ ಮೂಲಕ ಗೊಂದಲ ಬಗೆರಿಸಿಕೊಂಡಿದ್ದಾರೆ. ಆದರೂ ಬೂದಿಮುಚ್ಚಿದ ಕೆಂಡದಂತಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಹಿ ಸಂಗ್ರಹದ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.
- Ramesh B Jawalagera
- Updated on: Dec 3, 2025
- 5:39 pm
ಸಿಕ್ಕಿದ್ದೇ ಚಾನ್ಸ್ ಅಂತ ವೇದಿಕೆ ಮೇಲೆಯೇ ವೇಣುಗೋಪಾಲ್ ಜತೆ ಸಿಎಂ ಗುಸು ಗುಸು ಮಾತು
ಮಂಗಳೂರು, (ಡಿಸೆಂಬರ್ 03): ಬ್ರೇಕ್ ಫಾಸ್ಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕದನ ಕೊಂಚ ತಣ್ಣಗಾದಂತಿದೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯನವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಜೊತೆ ಇಂದು (ಡಿಸೆಂಬರ್ 03) ಉಳ್ಳಾಲದಲ್ಲಿ ನಡೆದ ಗುರು-ಗಾಂಧಿ ಸಂವಾದ ಶತಮಾನೋತ್ಸವದಲ್ಲಿ ವೇದಿಕೆ ಹಂಚಿಕೊಂಡಿದ್ದು, ಈ ವೇಳೆ ಸಿದ್ದರಾಮಯ್ಯ ಹಾಗೂ ವೇಣುಗೋಪಾಲ್ ಅಕ್ಕಪಕ್ಕದಲ್ಲೇ ಕುಳಿತುಕೊಂಡು ಗುಸು ಗುಸು ಮಾತುಕತೆ ನಡೆಸಿರುವುದು ಕಂಡುಬಂದಿದ್ದು, ಸಿದ್ದರಾಮಯ್ಯನವರ ಮಾತಿಗೆ ವೇಣುಗೋಪಾಲ ತಲೆ ಆಡಿಸಿರುವುದು ದೃಶ್ಯದಲ್ಲಿ ಸೆರೆಯಾಗಿದೆ.
- Ramesh B Jawalagera
- Updated on: Dec 3, 2025
- 3:00 pm