Congress
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಸಾಮಾನ್ಯವಾಗಿ ಕಾಂಗ್ರೆಸ್ ಪಕ್ಷ ಎಂದು ಕರೆಯಲಾಗುತ್ತದೆ. ಇದು ಭಾರತದ ಅತ್ಯಂತ ಪುರಾತನ ಮತ್ತು ಪ್ರಮುಖ ರಾಜಕೀಯ ಸಂಸ್ಥೆಗಳಲ್ಲಿ ಒಂದಾಗಿದೆ. 1885 ರಲ್ಲಿ ಸ್ಥಾಪಿತವಾದ ಇದು ಬ್ರಿಟಿಷರ ಆಳ್ವಿಕೆಯಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ. ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರಂತಹ ನಾಯಕರು ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದವರು.
1947 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ಪ್ರಬಲ ರಾಜಕೀಯ ಶಕ್ತಿಯಾಯಿತು ಮತ್ತು ಸ್ವಾತಂತ್ರ್ಯದ ನಂತರದ ದಶಕಗಳ ಕಾಲ ಕೇಂದ್ರದಲ್ಲಿ ಸರ್ಕಾರವನ್ನು ರಚಿಸಿತು. ಆದರೆ ಇತ್ತೀಚೆಗೆ ಅಧಿಕಾರದಿಂದ ದೂರ ಉಳಿದಿದೆ. ಪಕ್ಷದ ಸಿದ್ಧಾಂತವು ಕಾಲಕಾಲಕ್ಕೆ ವಿಕಸನಗೊಳ್ಳುತ್ತಾ ಬಂದಿದೆ. ಸಮಾಜವಾದ, ಜಾತ್ಯತೀತ ಆಡಳಿತದ ಅಂಶಗಳನ್ನು ಒಳಗೊಂಡಿದೆ. ಇದು ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿವಿ ನರಸಿಂಹರಾವ್, ಮನಮೋಹನ್ ಸಿಂಗ್ ಸೇರಿದಂತೆ ಹಲವಾರು ಪ್ರಧಾನ ಮಂತ್ರಿಗಳನ್ನು ನಿರ್ಮಿಸಿದೆ.
ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮತ್ತು ನಾನಾ ರಾಜ್ಯಗಳ ರಾಜಕೀಯದಲ್ಲಿ ತೊಡಗಿಸಿಕೊಂಡಿದೆ. ವಿವಿಧ ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳನ್ನು ಪ್ರತಿಪಾದಿಸುತ್ತದೆ. ಕಾಂಗ್ರೆಸ್ ಪಕ್ಷವು ದೇಶದ ಅನೇಕ ರಾಜ್ಯಗಳಲ್ಲಿಯೂ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಾ ಬಂದಿತ್ತು. ಆದಾಗ್ಯೂ, ಇತ್ತೀಚಿನ ವರ್ಷಗಳಲ್ಲಿ ಅದು ಕೆಲವು ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಇತರ ಪ್ರಾದೇಶಿಕ ಪಕ್ಷಗಳಿಂದ ಸವಾಲುಗಳನ್ನು ಎದುರಿಸುತ್ತಿದೆ.
ಕೆಎಎಸ್ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ: ಆದಷ್ಟು ಬೇಗ ಪ್ರಮೋಷನ್ ಎಂದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿರುವ ಕೆಎಎಸ್ ಅಧಿಕಾರಿಗಳ ಸಂಘದ ನವೀಕೃತ ಕಟ್ಟಡವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಸನ್ಮಾನ ಪತ್ರ ಬಿಡುಗಡೆ ಮಾಡಲಾಯಿತು. 28 ವರ್ಷಗಳ ನಂತರ ನವೀಕರಣಗೊಂಡ ಈ ಕಟ್ಟಡ ಕೆಎಎಸ್ ಅಧಿಕಾರಿಗಳ ಸೇವೆಯನ್ನು ಸ್ಮರಿಸುತ್ತದೆ.
- Gangadhar Saboji
- Updated on: Apr 27, 2026
- 10:06 pm
ಮೇ 2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಕಲ ಸಿದ್ಧತೆ
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ನಡೆಯಲಿದೆ. ಹೈಕೋರ್ಟ್ ಆದೇಶದಂತೆ ಸಿದ್ಧತೆ ಪೂರ್ಣಗೊಂಡಿದ್ದು, 279 ತಿರಸ್ಕೃತ ಮತಗಳ ಮರುಪರಿಶೀಲನೆ ಐಡಿಎಸ್ಜಿ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ನಡೆಯಲಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 201 ಮತಗಳ ಅಂತರದಿಂದ ಸೋತಿದ್ದರು. ಒಟ್ಟು 2,811 ಅಂಚೆ ಮತಗಳಲ್ಲಿ 279 ಮತಗಳು ತಿರಸ್ಕೃತವಾಗಿದ್ದವು.
- Prasanna Hegde
- Updated on: Apr 26, 2026
- 11:56 am
ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಅಚ್ಚರಿಯ ಹೇಳಿಕೆ ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್, ಇದು ಸಾಮಾನ್ಯ ಭೇಟಿ ಎಂದು ಸ್ಪಷ್ಟಪಡಿಸಿದ್ದಾರೆ. ವಿವಿಧ ರಾಜ್ಯಗಳ ಚುನಾವಣಾ ವರದಿ ಸಲ್ಲಿಸುವುದು ತಮ್ಮ ಕರ್ತವ್ಯ ಎಂದಿದ್ದಾರೆ. ಮತ್ತೊಂದೆಡೆ ಶಾಸಕ ಹೆಚ್.ಡಿ. ರಂಗನಾಥ್ ಡಿ.ಕೆ. ಶಿವಕುಮಾರ್ಗೆ ಮುಖ್ಯಮಂತ್ರಿ ಸ್ಥಾನದ ಒಡಂಬಡಿಕೆ ಪೂರ್ಣಗೊಳ್ಳುವ ಕುರಿತು ಮಾತನಾಡಿದ್ದು, ಹೈಕಮಾಂಡ್ನಿಂದ ದೊಡ್ಡ ಉಡುಗೊರೆ ನಿರೀಕ್ಷೆಯಿದೆ ಎಂದಿದ್ದಾರೆ.
- Harish GR
- Updated on: Apr 26, 2026
- 6:21 am
ಆಸ್ಪತ್ರೆಯಿಂದಲೇ ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಯೋಜನೆ ಮತ್ತು ಸಾಂಖಿತ ಇಲಾಖೆ ಸಚಿವ ಡಿ ಸುಧಾಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸದ್ಯ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಸುಧಾಕರ್ ಅವರ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಏಪ್ರಿಲ್ 25) ಕಿಮ್ಸ್ ಆಸ್ಪತ್ರಗೆ ಭೇಟಿ ನೀಡಿ ಸುಧಾಕರ್ ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು.
- Ramu Ram
- Updated on: Apr 25, 2026
- 6:10 pm
ದೆಹಲಿಯಲ್ಲಿ ಡಿಕೆ ಸಹೋದರರ ಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ಕರ್ನಾಟಕ ರಾಜಕಾರಣದಲ್ಲಿ ಮೇ ಮೊದಲ ವಾರದಲ್ಲಿ ದೊಡ್ಡ ಹೈಡ್ರಾಮಾ ನಡೆಯುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ದೆಹಲಿಗೆ ಭೇಟಿ ನೀಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ನಾಯಕರೊಂದಿಗೆ ಒಂದುವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಮುಖ್ಯಮಂತ್ರಿ ಬಣ ಕೂಡ ಸಕ್ರಿಯವಾಗಿದ್ದು, ಮುಂದಿನ ನಡೆ ಕುರಿತು ಚರ್ಚೆ ನಡೆಯುತ್ತಿದೆ.
- Pramod Shastri G
- Updated on: Apr 25, 2026
- 11:34 am
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ (SC Internal Reservation) ಕುರಿತು ಸಿದ್ದರಾಮಯ್ಯ ಸರ್ಕಾರ ನಿರ್ಣಾಯಕ ತೀರ್ಮಾನ ಕೈಗೊಂಡಿದೆ. ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ದಲಿತ ಎಡಗೈ ಸಮುದಾಯಕ್ಕೆ ಶೇ. 5.25, ಬಲಗೈ ಸಮುದಾಯಕ್ಕೆ ಶೇ. 5.25 ಮತ್ತು ಇತರರಿಗೆ ಶೇ. 4.5ರಷ್ಟು ಹಂಚಿಕೆಗೆ ನಿರ್ಧರಿಸಲಾಗಿದೆ. ಇನ್ನು ಒಳಮೀಸಲಾತಿ ಹೇಗೆ ಜಾತಿಯಾಗುತ್ತೆ ಎನ್ನುವುದನ್ನು ಸ್ವತಃ ಸಮಾಜ ಕಲ್ಯಾಣ ಸಚಿವ ಎಚ್ಸಿ ಮಹದೇವಪ್ಪ ವಿವರಿಸಿದ್ದಾರೆ.
- Ramesh B Jawalagera
- Updated on: Apr 24, 2026
- 9:02 pm
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಉದ್ಯೋಗಾಕಾಂಕ್ಷಿಗಳಿಗೆ ಈ ಸುದ್ದಿಯ ಜೊತೆಗೆ ಮತ್ತೊಂದು ಬಂಪರ್ ಕೊಡುಗೆಯನ್ನು ಸಿಎಂ ನೀಡಿದ್ದಾರೆ. ಬಜೆಟ್ನಲ್ಲಿ ಘೋಷಿಸಿದಂತೆ 56,400 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ತಕ್ಷಣವೇ ಆರಂಭವಾಗಲಿದೆ. ಈ ಎಲ್ಲಾ ನೇಮಕಾತಿಗಳಲ್ಲಿ ಈಗ ಘೋಷಿಸಲಾದ ಹೊಸ ಒಳ ಮೀಸಲಾತಿ ಪದ್ಧತಿಯನ್ನೇ ಅನುಸರಿಸಲಾಗುವುದು ಎಂದು ತಿಳಿಸಿದ್ದಾರೆ.
- Ramesh B Jawalagera
- Updated on: Apr 24, 2026
- 6:14 pm
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ, ಸಂಪುಟ ತೀರ್ಮಾನದ ಬಗ್ಗೆ ಸಿಎಂ ಹೇಳಿದ್ದಿಷ್ಟು
ಒಳ ಮೀಸಲಾತಿ (Internal Reservation) ಗೊಂದಲಕ್ಕೆ ಕೊನೆಗೂ ರಾಜ್ಯ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದೆ. ಶೇ.15 ಮೀಸಲಾತಿಯಲ್ಲೇ ವರ್ಗೀಕರಣಕ್ಕೆ ಸರ್ಕಾರ ತೀರ್ಮಾನ ಮಾಡಿದ್ದು, ಅದರಂತೆ ಎಡಗೈ ಸಮುದಾಯ ಶೇ. 5.25, ಬಲಗೈ ಸಮುದಾಯ ಶೇ. 5.25 ಹಾಗೂ ಇತರ ಪರಿಶಿಷ್ಟ ಜಾತಿಗಳಿಗೆ ಶೇ. 4.5 ಒಳ ಮೀಸಲಾತಿ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವರವಾಗಿ ಹೇಳಿದ್ದಾರೆ ನೋಡಿ.
- Ramesh B Jawalagera
- Updated on: Apr 24, 2026
- 5:57 pm
ವಿಶೇಷ ಸಂಪುಟ ಸಭೆ ಅಂತ್ಯ: ಒಳ ಮೀಸಲಾತಿ ಹಂಚಿಕೆಗೆ ಕ್ರಾಂತಿಕಾರಿ ನಿರ್ಣಯ, ಯಾರಿಗೆ ಎಷ್ಟು?
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಏಪ್ರಿಲ್ 24) ನಡೆದ ವಿಶೇಷ ಸಂಪುಟ ಸಭೆ ಅಂತ್ಯವಾಗಿದ್ದು, ಬಿಸಿ ತುಪ್ಪವಾಗಿದ್ದ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದರೊಂದಿಗೆ ಹಲವು ವರ್ಷಗಳಿಂದ ಇದ್ದ ಗೊಂದಲಕ್ಕೆ ಸಿದ್ದರಾಮಯ್ಯ ಸರ್ಕಾರ ತೆರೆ ಎಳೆದಿದೆ. ಹಾಗಾದ್ರೆ, ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ಯಾರಿಗೆ ಎಷ್ಟು ಹಂಚಿಕೆ ಮಾಡಲಾಗಿದೆ ಎನ್ನುವ ಡಿಟೇಲ್ಸ್ ಈ ಕೆಳಗಿನಂತಿದೆ.
- Prasanna Gaonkar
- Updated on: Apr 24, 2026
- 8:39 pm
ಡಿಕೆ ಹೇಳಿಕೆ, ಸಿಎಂ ನಡೆ ನೋಡಿದ್ರೆ ಕಾಂತ್ರಿ ಆಗುತ್ತೆ, ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಸಂಬಂಧ ಕರ್ನಾಟಕ ಕಾಂಗ್ರೆಸ್ನಲ್ಲಿ ರಾಜಕೀಯ ಪ್ರಹಸನಗಳು ನಡೆಯುತ್ತಿವೆ. ಇದರ ಮಧ್ಯೆ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಮಾತನಾಡಿ, ಡಿಕೆ ಹೇಳಿಕೆ, ಸಿಎಂ ನಡೆ ನೋಡಿದರೆ ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ ಆಗುತ್ತದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದ್ದು, ಡಿಕೆ ಹೇಳಿಕೆ, ಸಿಎಂ ನಡೆ ನೋಡಿದರೆ ಪಂಚರಾಜ್ಯ ಚುನಾವಣೆ ನಂತರ ರಾಜಕೀಯ ಬದಲಾವಣೆ ಆಗುತ್ತೆ. ಮುಖ್ಯಮಂತ್ರಿ ಆಗಬೇಕು ಅಂತ ಜಿ.ಪರಮೇಶ್ವರ್ ರೇಸ್ನಲ್ಲಿದ್ದಾರೆ. ಸತೀಶ್ ಜಾರಕಿಹೊಳಿ ಕೂಡ ಮುಖ್ಯಮಂತ್ರಿ ರೇಸ್ನಲ್ಲಿ ಇದ್ದಾರೆ. ಅತ್ತ ಎಂ.ಬಿ.ಪಾಟೀಲ್ ಸಹ ಮುಖ್ಯಮಂತ್ರಿ ಆಗಬೇಕು ಅಂತಿದ್ದಾರೆ. ಡಿ.ಕೆ.ಶಿವಕುಮಾರ್ ಈಗಾಗಲೇ ಮುಖ್ಯಮಂತ್ರಿ ಆಗೋಗಿದ್ದಾರೆ. ಮೇ 10ಕ್ಕೆ ಡೇಟ್ ಕೂಡ ಫಿಕ್ಸ್ ಆಗಿದೆ ಎಂದು ಹೇಳಿದರು.
- Jagadisha B
- Updated on: Apr 24, 2026
- 4:10 pm
ಸಿದ್ದರಾಮಯ್ಯ ಆಪ್ತರಿಂದ ಸಭೆ, ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ: ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ದಾವಣಗೆರೆ ದಂಗಲ್ ಬಳಿಕ ಕರ್ನಾಟಕ ಕಾಂಗ್ರೆಸ್ನಲ್ಲಿ ಆಂತರಿಕ ಅಸಮಾಧಾನ ಭುಗಿಲೆದ್ದಿದೆ. ಏಕಪಕ್ಷೀಯ ನಿರ್ಧಾರಗಳು ಮತ್ತು ಮುಖ್ಯಮಂತ್ರಿಗಳ ಮೌನದ ಬಗ್ಗೆ ಸಿಎಂ ಆಪ್ತ ಸಚಿವರು ಸಭೆ ನಡೆಸಿ ಚರ್ಚಿಸಿದ್ದಾರೆ. ಈ ನಡುವೆ ಡಿಕೆ ಸಹೋದರರು ದೆಹಲಿಗೆ ತೆರಳಿದ್ದು ತೀವ್ರ ಕುತೂಹಲ ಮೂಡಿಸಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಸಿಎಂ ಆಪ್ತರ ಸಭೆ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಾರೆ.
- Prasanna Gaonkar
- Updated on: Apr 24, 2026
- 11:38 am
Breaking: ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ, ಆಗಿದ್ದೇನು?
ಕರ್ನಾಟಕ ಸಾಂಖ್ಯಿಕ ಮತ್ತು ಅಂಕಿ ಸಂಖ್ಯೆ ಖಾತೆ ಸಚಿವ ಡಿ ಸುಧಾಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಘಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ, ಇದೀಗ ಬಂದ ಮಾಹಿತಿ ಪ್ರಕಾರ ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಎಂದು ತಿಳಿದುಬಂದಿದೆ. ಅಷ್ಟಕ್ಕೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಆಗಿದ್ದೇನು ಎನ್ನುವ ಡಿಟೇಲ್ಸ್ ಇಲ್ಲಿದೆ.
- Basavaraj Mudnur
- Updated on: Apr 23, 2026
- 11:11 pm