Coronavirus
2019ರ ಡಿಸೆಂಬರ್ನಲ್ಲಿ ಮೊದಲ ಬಾರಿಗೆ ಚೀನಾದ ವುಹಾನ್ನಲ್ಲಿ ಪತ್ತೆಯಾಗುವ ಮೂಲಕ ಈ ವೈರಸ್ ಇಡೀ ವಿಶ್ವವನ್ನೇ ಆವರಿಸಿಕೊಂಡಿತ್ತು. ಇಡೀ ವಿಶ್ವವೇ ಲಾಕ್ ಡೌನ್ನಿಂದಾಗಿ ಆರ್ಥಿಕ ಸಂಕಷ್ಟ ಎದುರಿಸಬೇಕಾಯಿತು. ಇಷ್ಟೆಲ್ಲ ಭೀಕರತೆಯ ನಡುವೆ ಕೊರೊನಾ ವೈರಸ್ ಅನ್ನು ಸಾಂಕ್ರಾಮಿಕ ರೋಗವೆಂದು 2020ರ ಮಾರ್ಚ್ ತಿಂಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿತು.ವಿಶ್ವದಲ್ಲೇ ಇದುವರೆಗೆ 70 ಕೋಟಿ ಪ್ರಕರಣ ದಾಖಲಾಗಿದ್ದು, ಸುಮಾರು 70ಲಕ್ಷ ಜನರನ್ನು ಬಲಿಪಡೆದುಕೊಂಡಿದೆ. ಭಾರತದಲ್ಲಿ ನಾಲ್ಕೂವರೆ ಕೋಟಿ ಪ್ರಕರಣಗಳು ದಾಖಲಾಗಿದೆ. 5.33 ಲಕ್ಷ ಮಂದಿ ಅಸುನೀಗಿದ್ದಾರೆ. ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ. ಇದು ಸಾಮಾನ್ಯ ಶೀತದಿಂದ ಪ್ರಾರಂಭವಾಗಿ ಶ್ವಾಸಕೋಶದ ಸೋಂಕನ್ನು ಉಂಟು ಮಾಡಿ ಪ್ರಾಣಕ್ಕೆ ಕಂಟಕವಾಗುತ್ತದೆ. ಇದೀಗಾ ಮತ್ತೆ ಇದರ ಹಾವಳಿ ಪ್ರಾರಂಭವಾಗಿದ್ದು, ಜನಸಾಮಾನ್ಯರಲ್ಲಿ ತಲ್ಲಣ ಉಂಟುಮಾಡಿದೆ.
ಪಾವಗಡ – ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್ಪೋಸ್ಟ್: ತಪಾಸಣೆ ಶುರು
ಆಂಧ್ರಪ್ರದೇಶದಲ್ಲಿ ಇಬ್ಬರು ಕೋವಿಡ್ನಿಂದ ಮೃತಪಟ್ಟು, ಒಂಬತ್ತು ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಗಡಿಭಾಗದಲ್ಲಿ ಕೋವಿಡ್ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಆಂಧ್ರದಿಂದ ಪಾವಗಡಕ್ಕೆ ಆಗಮಿಸುವ ವಾಹನಗಳ ಪ್ರಯಾಣಿಕರಿಗೆ ಜ್ವರ ತಪಾಸಣೆ ನಡೆಸಲಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ರಾಜವಂತಿಗೆ ಸೇರಿದಂತೆ ಐದು ಪ್ರಮುಖ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
- Jagadisha B
- Updated on: Jul 16, 2026
- 8:40 am
TV9 Kannada News Highlights: ಬೆಂಗಳೂರು ಆಲ್-ಹಿಂದ್ ಐಸಿಸ್ ಉಗ್ರ ಮಾಡ್ಯೂಲ್ ಕೇಸ್: ಶಂಕಿತ ಹನೀಫ್ ಖಾನ್ಗೆ 7 ವರ್ಷ ಕಠಿಣ ಜೈಲು ಶಿಕ್ಷೆ
Karnataka News Today Highlights: ಆಂಧ್ರದಲ್ಲಿ ಕೋವಿಡ್ ಸಾವು ಹಾಗೂ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಆತಂಕ, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿರುವ ಟ್ರಂಪ್-ಇರಾನ್ ಸುಂಕದ ಸಮರ ಮತ್ತು ಮಂಗಳೂರಿನಲ್ಲಿ ಮುಂದುವರಿದ ಅಕ್ರಮ ಬಾಂಗ್ಲಾ ವಲಸಿಗರ ಬಂಧನ ಕಾರ್ಯಾಚರಣೆ ಸೇರಿದಂತೆ ದೇಶ, ವಿದೇಶ ಹಾಗೂ ರಾಜ್ಯದ ಇಂದಿನ ಎಲ್ಲಾ ಪ್ರಮುಖ ವಿದ್ಯಮಾನಗಳ ಕ್ಷಣಕ್ಷಣದ ಅಪ್ಡೇಟ್ ಇಲ್ಲಿ ಸಿಗಲಿದೆ
- Bhavana Hegde
- Updated on: Jul 14, 2026
- 10:57 pm
Coronavirus Returns: ಕರ್ನಾಟಕಕ್ಕೆ ಮತ್ತೆ ಒಕ್ಕರಿಸಲಿದೆಯೇ ಕೋವಿಡ್ ಮಹಾಮಾರಿ?
ನಾಲ್ಕು ವರ್ಷಗಳ ಬಳಿಕ ದೇಶದಲ್ಲಿ ಮತ್ತೆ ಕೊರೊನಾ ಹೆಮ್ಮಾರಿಯ ಆತಂಕ ಶುರುವಾಗಿದೆ. ಪಕ್ಕದ ಆಂಧ್ರಪ್ರದೇಶದಲ್ಲಿ ಕೋವಿಡ್ ಸೋಂಕಿನ ಆತಂಕ ಶುರುವಾಗಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ಜುಲೈ ತಿಂಗಳಿನಲ್ಲಿ ಪ್ರಕರಣಗಳ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಸೋಂಕಿನ ಗಂಭೀರತೆ ಹಾಗೂ ಹೊಸ ರೂಪಾಂತರದ ಶಂಕೆ ಕುರಿತು ಆರೋಗ್ಯ ಇಲಾಖೆ ಆಯುಕ್ತರು ನೀಡಿರುವ ಮಹತ್ವದ ಮಾಹಿತಿ ನೀಡಿದ್ದು, ಸದ್ಯಕ್ಕೆ ಪರಿಸ್ಥಿತಿ ಗಂಭೀರವಾಗಿಲ್ಲ ಎಂದಿದ್ದಾರೆ. ಆದರೆ ಮತ್ತೊಮ್ಮೆ ಕೊರೊನಾ ಕಂಟಕ ರಾಜ್ಯಕ್ಕೆ ತಗುಲುವ ಆತಂಕ ಸೈಷ್ಟಿಯಾಗಿದೆ.
- Vinay Kashappanavar
- Updated on: Jul 14, 2026
- 12:12 pm
ಆಂಧ್ರದಲ್ಲಿ ಮತ್ತೆ ಕೋವಿಡ್ ಆತಂಕ: 2022 ರ ನಂತರ ಮೊದಲ ಸಾವು ದಾಖಲು, ಕಡಪದಲ್ಲಿ ಇಬ್ಬರು ಬಲಿ, ನಾಲ್ವರಿಗೆ ಪಾಸಿಟಿವ್
Covid 19: ಆಂಧ್ರಪ್ರದೇಶದಲ್ಲಿ ಕೋವಿಡ್-19 ಮತ್ತೆ ಆತಂಕ ಮೂಡಿಸಿದೆ. ಕಡಪ ಜಿಲ್ಲೆಯಲ್ಲಿ 2022ರ ನಂತರ ಮೊದಲ ಬಾರಿಗೆ ಇಬ್ಬರು ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ. ಅಲ್ಲದೆ, ನಾಲ್ಕು ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಹೊಸ ರೂಪಾಂತರದ ಶಂಕೆಯಿದ್ದು, ಮಾದರಿಗಳನ್ನು ಪುಣೆಗೆ ಕಳುಹಿಸಲಾಗಿದೆ. ಸಾರ್ವಜನಿಕರು ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಆರೋಗ್ಯ ಇಲಾಖೆ ಸಲಹೆ ನೀಡಿದೆ.
- Nayana Rajeev
- Updated on: Jul 12, 2026
- 11:44 am
ಹೆಚ್ಚುತ್ತಿರುವ ಹೃದಯಾಘಾತಗಳು; ಮೈಸೂರು ಜಯದೇವ ಹೃದ್ರೋಗ ಕೇಂದ್ರದಲ್ಲಿ ತಪಾಸಣೆಗೆ ನೂಕುನುಗ್ಗಲು!
ಕಡಿಮೆ ವಯಸ್ಸಿನವರಲ್ಲಿ ಹೃದಯಾಘಾತಗಳು ಸಂಭವಿಸಿರುವುದಕ್ಕೆ ಕೋವಿಡ್ ಲಸಿಕೆಗಳೂ ಕಾರಣವಾಗಿರಬಹುದೆಂದು ಕೆಲ ವೈದ್ಯರು ಹೇಳುತ್ತಾರೆ, ಅದರೆ ಆ ಸಂಗತಿ ಅಧ್ಯಯನಗಳಿಂದ ದೃಢಪಟ್ಟಿಲ್ಲ. ತಜ್ಞರ ಪ್ರಕಾರ ಮಧುಮೇಹ, ಅಧಿಕ ರಕ್ತದೊತ್ತಡ, ಮಾನಸಿಕ ಒತ್ತಡ, ಖಿನ್ನತೆ ಮೊದಲಾದವು ಹೃದಯದ ಕಾಯಿಲೆಗಳನ್ನು ತಂದೊಡ್ಡುತ್ತವೆ. ಜೀವನಶೈಲಿಯಲ್ಲಿ ಭಾರೀ ಬದಲಾವಣೆಯಾಗಿರುವುದು ಕೂಡ ಹೃದ್ರೋಗ ಮತ್ತು ಹೃದಯಾಘಾತಗಳಿಗೆ ಕಾರಣವಾಗುತ್ತಿದೆ.
- Arun Belly
- Updated on: Jul 10, 2025
- 12:27 pm
ಕೊರೊನಾ ಲಸಿಕೆ ಬಳಿಕ ಹೃದಯಾಘಾತದ ಭಯ? ಮಾತ್ರೆ ತೆಗೆದುಕೊಳ್ಳುವ ನಟ ಕೋಮಲ್
ಹಾಸನದಲ್ಲಿ ಹೃದಯಾಘಾತದ ಸುದ್ದಿ ಮತ್ತೆ ಮತ್ತೆ ಕೇಳಿಬರುತ್ತಿದೆ. ಆ ಬಗ್ಗೆ ನಟ ಕೋಮಲ್ ಕುಮಾರ್ ಮಾತನಾಡಿದ್ದಾರೆ. ‘ವ್ಯಾಕ್ಸಿನೇಷನ್ ಆದ ನಂತರ ಬಹಳಷ್ಟು ಜನರಿಗೆ ಏರುಪೇರು ಆಗಿದೆ. ಕೊರೊನಾದಿಂದ ನಾನು 24 ದಿನಗಳ ಕಾಲ ಐಸಿಯುನಲ್ಲಿ ಇದ್ದೆ. ಇಂದಿಗೂ ನಾನು ಬ್ಲಡ್ ಥಿನ್ನರ್ ಮಾತ್ರೆ ತೆಗೆದುಕೊಳ್ಳುತ್ತೇನೆ’ ಎಂದು ಅವರು ಹೇಳಿದ್ದಾರೆ.
- Mangala RR
- Updated on: Jul 1, 2025
- 8:05 pm
ಹಾಸನ ಹೃದಯಾಘಾತ ಪ್ರಕರಣಗಳಿಗೆ ಕೋವಿಡ್ ಲಸಿಕೆ ಕಾರಣವಾ? ಐಸಿಎಂಆರ್ ಅಧ್ಯಯನ ಏನು ಹೇಳುತ್ತೆ?
Will covid-19 vaccine increase heart attack? ICMR study clarifies: ಹಾಸನ ಜಿಲ್ಲೆಯಲ್ಲಿ ಒಂದೇ ದಿನ 4 ಮಂದಿ ಹೃದಯಾಘಾತಗೊಂಡಿದ್ದಾರೆ. ಕಳೆದ 40 ದಿನದಲ್ಲಿ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿದೆ. ಕೋವಿಡ್ ಲಸಿಕೆಯೂ ಈ ಅಸಹಜ ಸಾವಿಗೆ ಕಾರಣ ಇರಬಹುದು ಎಂದು ಕೆಲವರು ಆರೋಪಿಸುತ್ತಿದ್ದಾರೆ. ಆದರೆ, ಐಸಿಎಂಆರ್ ಈ ಹಿಂದೆಯೇ ಅಧ್ಯಯನ ನಡೆಸಿ ವರದಿ ನೀಡಿತ್ತು. ಅದರ ಪ್ರಕಾರ....
- Vijaya Sarathy SN
- Updated on: Jun 30, 2025
- 3:41 pm
ಹೆಚ್ಚುತ್ತಿದೆ ಕೊವಿಡ್ ರೂಪಾಂತರಿ; ಒಮಿಕ್ರಾನ್ ಬಗ್ಗೆ ಇರಲಿ ಎಚ್ಚರ!
ಕೊವಿಡ್ ಬಗ್ಗೆ ತೆಗೆದುಕೊಳ್ಳಬೇಕಾದ ಮಾರ್ಗಸೂಚಿಗಳನ್ನು ಸರ್ಕಾರ ಈಗಾಗಲೇ ಹೊರಡಿಸಿದ್ದು, ಹಿರಿಯರು, ಗರ್ಭಿಣಿಯರು ಮತ್ತು ಮಕ್ಕಳು ಮಾಸ್ಕ್ ಧರಿಸುವುದು ಮತ್ತು ಸ್ಯಾನಿಟೈಸರ್ ಬಳಕೆ ಮಾಡುವುದನ್ನು ಪಾಲಿಸುವುದು ಒಳಿತು. ಪ್ರಸ್ತುತ ಕೊವಿಡ್ ರೂಪಾಂತರಿ ಪ್ರಕರಣಗಳು ಗಂಭೀರವಾಗಿಲ್ಲದಿದ್ದರೂ ಸಹ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದು ಅಗತ್ಯ ಎಂಬುದು ತಜ್ಞರ ಅಭಿಪ್ರಾಯ.
- Sushma Chakre
- Updated on: Jun 21, 2025
- 10:52 pm
10 ಜನರ ಡೆತ್ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ರೂಪಾಂತರಿ ವೈರಸ್ ಸೌಮ್ಯ ಸ್ವಭಾವದ್ದು ಎಂದ ಸಚಿವ
ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಸರ್ಕಾರವು ಕೊರೊನಾ ಸಾವುಗಳ ಬಗ್ಗೆ ಸ್ಪಷ್ಟನೆ ನೀಡಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಇತರ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಇತ್ತೀಚಿನ ಕೊರೊನಾ ರೂಪಾಂತರಿ ಸೌಮ್ಯವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ.
- Vinay Kashappanavar
- Updated on: Jun 11, 2025
- 9:18 pm
ಭಾರತದಲ್ಲಿ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ ನಾಲ್ವರು ಸಾವು, 391 ಹೊಸ ಪ್ರಕರಣಗಳು ಪತ್ತೆ
Covid 19 cases in India: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗಿವೆ. 391 ಪ್ರಕರಣಗಳು ಪತ್ತೆಯಾಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.ಸಕ್ರಿಯ ಸೋಂಕುಗಳ ಸಂಖ್ಯೆ 5,755 ಕ್ಕೆ ಏರಿದೆ. ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ.
- Nayana Rajeev
- Updated on: Jun 8, 2025
- 12:28 pm
ಭಾರತದಲ್ಲಿ 5000 ದಾಟಿದ ಕೊವಿಡ್ ಪ್ರಕರಣಗಳು; ಅತಿ ಹೆಚ್ಚು ಸೋಂಕಿರುವ ಕೇರಳದಲ್ಲಿ ಹೈ ಅಲರ್ಟ್
ಭಾರತ ದೇಶದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ 5000 ದಾಟಿದೆ. ಕೇರಳದಲ್ಲಿ ಅತಿ ಹೆಚ್ಚು ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ 498 ಹೊಸ ಪ್ರಕರಣಗಳು ವರದಿಯಾಗುವುದರೊಂದಿಗೆ ಭಾರತದಲ್ಲಿ ಕೋವಿಡ್ ಪ್ರಕರಣಗಳು 5000 ದಾಟಿವೆ. ಸುಮಾರು 500 ಹೊಸ ಪ್ರಕರಣಗಳು ಸೇರ್ಪಡೆಯಾಗಿದ್ದರೆ, ಕಳೆದ 24 ಗಂಟೆಗಳಲ್ಲಿ 64 ರೋಗಿಗಳನ್ನು ಗುಣಪಡಿಸಲಾಗಿದೆ ಅಥವಾ ಡಿಸ್ಚಾರ್ಜ್ ಮಾಡಲಾಗಿದೆ ಎಂದು ದಾಖಲೆಗಳು ತಿಳಿಸಿವೆ.
- Sushma Chakre
- Updated on: Jun 6, 2025
- 4:56 pm
Coronavirus: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 276 ಕೊರೊನಾ ಹೊಸ ಪ್ರಕರಣಗಳು ಪತ್ತೆ, 7 ಮಂದಿ ಸಾವು
ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ದೊಡ್ಡ ಏರಿಕೆ ಕಂಡುಬಂದಿದ್ದು, 276 ಹೊಸ ಪ್ರಕರಣಗಳು ಪತ್ತೆಯಾಗಿವೆ. ದೇಶಾದ್ಯಂತ ಸಕ್ರಿಯ ಪ್ರಕರಣಗಳ ಸಂಖ್ಯೆ 4,302 ಕ್ಕೆ ಏರಿದೆ ಮತ್ತು ಏಳು ಹೊಸ ಸಾವುಗಳು ಸಂಭವಿಸಿವೆ. ಆರೋಗ್ಯ ಸಚಿವಾಲಯ ಬುಧವಾರ ಬೆಳಗ್ಗೆ ಇತ್ತೀಚಿನ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ಅದೇ ಸಮಯದಲ್ಲಿ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಆರೋಗ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ.
- Nayana Rajeev
- Updated on: Jun 4, 2025
- 12:04 pm