AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus

Coronavirus

2019ರ ಡಿಸೆಂಬರ್‌ನಲ್ಲಿ ಮೊದಲ ಬಾರಿಗೆ ಚೀನಾದ ವುಹಾನ್‌ನಲ್ಲಿ ಪತ್ತೆಯಾಗುವ ಮೂಲಕ ಈ ವೈರಸ್​ ಇಡೀ ವಿಶ್ವವನ್ನೇ ಆವರಿಸಿಕೊಂಡಿತ್ತು. ಇಡೀ ವಿಶ್ವವೇ ಲಾಕ್ ಡೌನ್​​ನಿಂದಾಗಿ ಆರ್ಥಿಕ ಸಂಕಷ್ಟ ಎದುರಿಸಬೇಕಾಯಿತು. ಇಷ್ಟೆಲ್ಲ ಭೀಕರತೆಯ ನಡುವೆ ಕೊರೊನಾ ವೈರಸ್ ಅನ್ನು ಸಾಂಕ್ರಾಮಿಕ ರೋಗವೆಂದು 2020ರ ಮಾರ್ಚ್ ತಿಂಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿತು.ವಿಶ್ವದಲ್ಲೇ ಇದುವರೆಗೆ 70 ಕೋಟಿ ಪ್ರಕರಣ ದಾಖಲಾಗಿದ್ದು, ಸುಮಾರು 70ಲಕ್ಷ ಜನರನ್ನು ಬಲಿಪಡೆದುಕೊಂಡಿದೆ. ಭಾರತದಲ್ಲಿ ನಾಲ್ಕೂವರೆ ಕೋಟಿ ಪ್ರಕರಣಗಳು ದಾಖಲಾಗಿದೆ. 5.33 ಲಕ್ಷ ಮಂದಿ ಅಸುನೀಗಿದ್ದಾರೆ. ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ. ಇದು ಸಾಮಾನ್ಯ ಶೀತದಿಂದ ಪ್ರಾರಂಭವಾಗಿ ಶ್ವಾಸಕೋಶದ ಸೋಂಕನ್ನು ಉಂಟು ಮಾಡಿ ಪ್ರಾಣಕ್ಕೆ ಕಂಟಕವಾಗುತ್ತದೆ. ಇದೀಗಾ ಮತ್ತೆ ಇದರ ಹಾವಳಿ ಪ್ರಾರಂಭವಾಗಿದ್ದು, ಜನಸಾಮಾನ್ಯರಲ್ಲಿ ತಲ್ಲಣ ಉಂಟುಮಾಡಿದೆ.

ಇನ್ನೂ ಹೆಚ್ಚು ಓದಿ

ಹೆಚ್ಚುತ್ತಿರುವ ಹೃದಯಾಘಾತಗಳು; ಮೈಸೂರು ಜಯದೇವ ಹೃದ್ರೋಗ ಕೇಂದ್ರದಲ್ಲಿ ತಪಾಸಣೆಗೆ ನೂಕುನುಗ್ಗಲು!

ಕಡಿಮೆ ವಯಸ್ಸಿನವರಲ್ಲಿ ಹೃದಯಾಘಾತಗಳು ಸಂಭವಿಸಿರುವುದಕ್ಕೆ ಕೋವಿಡ್ ಲಸಿಕೆಗಳೂ ಕಾರಣವಾಗಿರಬಹುದೆಂದು ಕೆಲ ವೈದ್ಯರು ಹೇಳುತ್ತಾರೆ, ಅದರೆ ಆ ಸಂಗತಿ ಅಧ್ಯಯನಗಳಿಂದ ದೃಢಪಟ್ಟಿಲ್ಲ. ತಜ್ಞರ ಪ್ರಕಾರ ಮಧುಮೇಹ, ಅಧಿಕ ರಕ್ತದೊತ್ತಡ, ಮಾನಸಿಕ ಒತ್ತಡ, ಖಿನ್ನತೆ ಮೊದಲಾದವು ಹೃದಯದ ಕಾಯಿಲೆಗಳನ್ನು ತಂದೊಡ್ಡುತ್ತವೆ. ಜೀವನಶೈಲಿಯಲ್ಲಿ ಭಾರೀ ಬದಲಾವಣೆಯಾಗಿರುವುದು ಕೂಡ ಹೃದ್ರೋಗ ಮತ್ತು ಹೃದಯಾಘಾತಗಳಿಗೆ ಕಾರಣವಾಗುತ್ತಿದೆ.

ಕೊರೊನಾ ಲಸಿಕೆ ಬಳಿಕ ಹೃದಯಾಘಾತದ ಭಯ? ಮಾತ್ರೆ ತೆಗೆದುಕೊಳ್ಳುವ ನಟ ಕೋಮಲ್

ಹಾಸನದಲ್ಲಿ ಹೃದಯಾಘಾತದ ಸುದ್ದಿ ಮತ್ತೆ ಮತ್ತೆ ಕೇಳಿಬರುತ್ತಿದೆ. ಆ ಬಗ್ಗೆ ನಟ ಕೋಮಲ್ ಕುಮಾರ್ ಮಾತನಾಡಿದ್ದಾರೆ. ‘ವ್ಯಾಕ್ಸಿನೇಷನ್ ಆದ ನಂತರ ಬಹಳಷ್ಟು ಜನರಿಗೆ ಏರುಪೇರು ಆಗಿದೆ. ಕೊರೊನಾದಿಂದ ನಾನು 24 ದಿನಗಳ ಕಾಲ ಐಸಿಯುನಲ್ಲಿ ಇದ್ದೆ. ಇಂದಿಗೂ ನಾನು ಬ್ಲಡ್ ಥಿನ್ನರ್ ಮಾತ್ರೆ ತೆಗೆದುಕೊಳ್ಳುತ್ತೇನೆ’ ಎಂದು ಅವರು ಹೇಳಿದ್ದಾರೆ.

ಹಾಸನ ಹೃದಯಾಘಾತ ಪ್ರಕರಣಗಳಿಗೆ ಕೋವಿಡ್ ಲಸಿಕೆ ಕಾರಣವಾ? ಐಸಿಎಂಆರ್ ಅಧ್ಯಯನ ಏನು ಹೇಳುತ್ತೆ?

Will covid-19 vaccine increase heart attack? ICMR study clarifies: ಹಾಸನ ಜಿಲ್ಲೆಯಲ್ಲಿ ಒಂದೇ ದಿನ 4 ಮಂದಿ ಹೃದಯಾಘಾತಗೊಂಡಿದ್ದಾರೆ. ಕಳೆದ 40 ದಿನದಲ್ಲಿ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿದೆ. ಕೋವಿಡ್ ಲಸಿಕೆಯೂ ಈ ಅಸಹಜ ಸಾವಿಗೆ ಕಾರಣ ಇರಬಹುದು ಎಂದು ಕೆಲವರು ಆರೋಪಿಸುತ್ತಿದ್ದಾರೆ. ಆದರೆ, ಐಸಿಎಂಆರ್ ಈ ಹಿಂದೆಯೇ ಅಧ್ಯಯನ ನಡೆಸಿ ವರದಿ ನೀಡಿತ್ತು. ಅದರ ಪ್ರಕಾರ....

ಹೆಚ್ಚುತ್ತಿದೆ ಕೊವಿಡ್‌ ರೂಪಾಂತರಿ; ಒಮಿಕ್ರಾನ್ ಬಗ್ಗೆ ಇರಲಿ ಎಚ್ಚರ!

ಕೊವಿಡ್‌ ಬಗ್ಗೆ ತೆಗೆದುಕೊಳ್ಳಬೇಕಾದ ಮಾರ್ಗಸೂಚಿಗಳನ್ನು ಸರ್ಕಾರ ಈಗಾಗಲೇ ಹೊರಡಿಸಿದ್ದು, ಹಿರಿಯರು, ಗರ್ಭಿಣಿಯರು ಮತ್ತು ಮಕ್ಕಳು ಮಾಸ್ಕ್‌ ಧರಿಸುವುದು ಮತ್ತು ಸ್ಯಾನಿಟೈಸರ್‌ ಬಳಕೆ ಮಾಡುವುದನ್ನು ಪಾಲಿಸುವುದು ಒಳಿತು. ಪ್ರಸ್ತುತ ಕೊವಿಡ್ ರೂಪಾಂತರಿ ಪ್ರಕರಣಗಳು ಗಂಭೀರವಾಗಿಲ್ಲದಿದ್ದರೂ ಸಹ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದು ಅಗತ್ಯ ಎಂಬುದು ತಜ್ಞರ ಅಭಿಪ್ರಾಯ.

10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ರೂಪಾಂತರಿ ವೈರಸ್ ಸೌಮ್ಯ ಸ್ವಭಾವದ್ದು ಎಂದ ಸಚಿವ

ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಸರ್ಕಾರವು ಕೊರೊನಾ ಸಾವುಗಳ ಬಗ್ಗೆ ಸ್ಪಷ್ಟನೆ ನೀಡಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಇತರ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಇತ್ತೀಚಿನ ಕೊರೊನಾ ರೂಪಾಂತರಿ ಸೌಮ್ಯವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ.

ಭಾರತದಲ್ಲಿ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ ನಾಲ್ವರು ಸಾವು, 391 ಹೊಸ ಪ್ರಕರಣಗಳು ಪತ್ತೆ

Covid 19 cases in India: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗಿವೆ. 391 ಪ್ರಕರಣಗಳು ಪತ್ತೆಯಾಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.ಸಕ್ರಿಯ ಸೋಂಕುಗಳ ಸಂಖ್ಯೆ 5,755 ಕ್ಕೆ ಏರಿದೆ. ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ.

ಭಾರತದಲ್ಲಿ 5000 ದಾಟಿದ ಕೊವಿಡ್ ಪ್ರಕರಣಗಳು; ಅತಿ ಹೆಚ್ಚು ಸೋಂಕಿರುವ ಕೇರಳದಲ್ಲಿ ಹೈ ಅಲರ್ಟ್​

ಭಾರತ ದೇಶದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ 5000 ದಾಟಿದೆ. ಕೇರಳದಲ್ಲಿ ಅತಿ ಹೆಚ್ಚು ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ 498 ಹೊಸ ಪ್ರಕರಣಗಳು ವರದಿಯಾಗುವುದರೊಂದಿಗೆ ಭಾರತದಲ್ಲಿ ಕೋವಿಡ್ ಪ್ರಕರಣಗಳು 5000 ದಾಟಿವೆ. ಸುಮಾರು 500 ಹೊಸ ಪ್ರಕರಣಗಳು ಸೇರ್ಪಡೆಯಾಗಿದ್ದರೆ, ಕಳೆದ 24 ಗಂಟೆಗಳಲ್ಲಿ 64 ರೋಗಿಗಳನ್ನು ಗುಣಪಡಿಸಲಾಗಿದೆ ಅಥವಾ ಡಿಸ್ಚಾರ್ಜ್ ಮಾಡಲಾಗಿದೆ ಎಂದು ದಾಖಲೆಗಳು ತಿಳಿಸಿವೆ.

Coronavirus: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 276 ಕೊರೊನಾ ಹೊಸ ಪ್ರಕರಣಗಳು ಪತ್ತೆ, 7 ಮಂದಿ ಸಾವು

ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ದೊಡ್ಡ ಏರಿಕೆ ಕಂಡುಬಂದಿದ್ದು, 276 ಹೊಸ ಪ್ರಕರಣಗಳು ಪತ್ತೆಯಾಗಿವೆ. ದೇಶಾದ್ಯಂತ ಸಕ್ರಿಯ ಪ್ರಕರಣಗಳ ಸಂಖ್ಯೆ 4,302 ಕ್ಕೆ ಏರಿದೆ ಮತ್ತು ಏಳು ಹೊಸ ಸಾವುಗಳು ಸಂಭವಿಸಿವೆ. ಆರೋಗ್ಯ ಸಚಿವಾಲಯ ಬುಧವಾರ ಬೆಳಗ್ಗೆ ಇತ್ತೀಚಿನ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ಅದೇ ಸಮಯದಲ್ಲಿ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಆರೋಗ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ.

ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ? ಇಲ್ಲಿದೆ ನೋಡಿ ಡಾ. ಭರತ್ ಸಲಹೆ

ಮಳೆಗಾಲದಲ್ಲಿ ಮಕ್ಕಳ ಆರೋಗ್ಯ ಕಾಪಾಡುವುದು ಬಹಳ ಮುಖ್ಯ. ಅದರಲ್ಲಿಯೂ ಈಗ ಕೊರೊನಾ ಸೇರಿದಂತೆ ನಾನಾ ರೀತಿಯ ಗಂಭೀರ ಕಾಯಿಲೆಗಳು ಹೆಚ್ಚಾಗುತ್ತಿರುವುದರಿಂದ ಸೋಂಕು ಹರಡುವುದು ಅಂದುಕೊಂಡಿದ್ದಕ್ಕಿಂತ ಹೆಚ್ಚಾಗಿಯೇ ಇರುತ್ತದೆ. ಹಾಗಾಗಿ ಪೋಷಕರು ತಮ್ಮ ಮಕ್ಕಳ ಆರೋಗ್ಯ ಕಾಪಾಡಿಕೊಳ್ಳಲು ಕೆಲವು ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅದಕ್ಕಾಗಿಯೇ ಡಾ. ಎಸ್ ಆರ್ ಭರತ್ ಕುಮಾರ್ ಅವರು ಈ ವಿಷಯದ ಕುರಿತಾಗಿ ಟಿವಿ9 ಕನ್ನಡ ಜೊತೆ ಮಾತನಾಡಿದ್ದಾರೆ. ಅವರು ತಿಳಿಸಿರುವ ಮತ್ತಷ್ಟು ಮಾಹಿತಿ ಇಲ್ಲಿದೆ.

Dengue: ಡೆಂಘಿ ಸೊಳ್ಳೆಗಳು ಹೆಚ್ಚಾಗಿ ಯಾವ ಸಮಯದಲ್ಲಿ ಕಚ್ಚುತ್ತೆ ಗೊತ್ತಾ?

ಕರ್ನಾಟಕದಲ್ಲಿ ಡೆಂಘಿ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಸೈಲೆಂಟ್ ಆಗಿ ಹೆಚ್ಚಾಗುತ್ತಿದೆ. ಜನರು ಈ ಬಗ್ಗೆ ನಿರ್ಲಕ್ಷ್ಯ ಮಾಡದೆಯೇ, ಹೆಚ್ಚಿನ ನಿಗಾ ವಹಿಸಬೇಕಾದ ಅವಶ್ಯಕತೆ ಇದೆ. ಅದರಲ್ಲಿಯೂ ಡೆಂಗ್ಯೂ ಹರಡುವ ಸೊಳ್ಳೆಗಳು ಕೆಲವು ಸಮಯದಲ್ಲಿ ಹೆಚ್ಚಾಗಿ ಕಂಡು ಬರುವುದರಿಂದ ಆ ಸಮಯದಲ್ಲಿ ಹೆಚ್ಚಿನ ನಿಗಾ ವಹಿಸುವುದು ಅವಶ್ಯವಾಗಿದೆ. ಹಾಗಾದರೆ ಈ ಡೆಂಗ್ಯೂ ಹರಡುವ ಈಡಿಸ್​ ಈಜಿಪ್ಟಿ ಹೆಣ್ಣು ಸೊಳ್ಳೆಗಳು ಯಾವ ಟೈಮ್ ನಲ್ಲಿ ಹೆಚ್ಚಾಗಿ ಕಂಡು ಬರುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ