
Coronavirus
2019ರ ಡಿಸೆಂಬರ್ನಲ್ಲಿ ಮೊದಲ ಬಾರಿಗೆ ಚೀನಾದ ವುಹಾನ್ನಲ್ಲಿ ಪತ್ತೆಯಾಗುವ ಮೂಲಕ ಈ ವೈರಸ್ ಇಡೀ ವಿಶ್ವವನ್ನೇ ಆವರಿಸಿಕೊಂಡಿತ್ತು. ಇಡೀ ವಿಶ್ವವೇ ಲಾಕ್ ಡೌನ್ನಿಂದಾಗಿ ಆರ್ಥಿಕ ಸಂಕಷ್ಟ ಎದುರಿಸಬೇಕಾಯಿತು. ಇಷ್ಟೆಲ್ಲ ಭೀಕರತೆಯ ನಡುವೆ ಕೊರೊನಾ ವೈರಸ್ ಅನ್ನು ಸಾಂಕ್ರಾಮಿಕ ರೋಗವೆಂದು 2020ರ ಮಾರ್ಚ್ ತಿಂಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿತು.ವಿಶ್ವದಲ್ಲೇ ಇದುವರೆಗೆ 70 ಕೋಟಿ ಪ್ರಕರಣ ದಾಖಲಾಗಿದ್ದು, ಸುಮಾರು 70ಲಕ್ಷ ಜನರನ್ನು ಬಲಿಪಡೆದುಕೊಂಡಿದೆ. ಭಾರತದಲ್ಲಿ ನಾಲ್ಕೂವರೆ ಕೋಟಿ ಪ್ರಕರಣಗಳು ದಾಖಲಾಗಿದೆ. 5.33 ಲಕ್ಷ ಮಂದಿ ಅಸುನೀಗಿದ್ದಾರೆ. ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ. ಇದು ಸಾಮಾನ್ಯ ಶೀತದಿಂದ ಪ್ರಾರಂಭವಾಗಿ ಶ್ವಾಸಕೋಶದ ಸೋಂಕನ್ನು ಉಂಟು ಮಾಡಿ ಪ್ರಾಣಕ್ಕೆ ಕಂಟಕವಾಗುತ್ತದೆ. ಇದೀಗಾ ಮತ್ತೆ ಇದರ ಹಾವಳಿ ಪ್ರಾರಂಭವಾಗಿದ್ದು, ಜನಸಾಮಾನ್ಯರಲ್ಲಿ ತಲ್ಲಣ ಉಂಟುಮಾಡಿದೆ.
HMPV vs Covid-19: ಎಚ್ಎಂಪಿವಿ ಹಾಗೂ ಕೋವಿಡ್ 19 ಹೋಲಿಕೆಗಳು ಹಾಗೂ ರೋಗಲಕ್ಷಣದಲ್ಲಿನ ವ್ಯತ್ಯಾಸಗಳೇನು? ಈ ಬಗ್ಗೆ ತಜ್ಞರು ಹೇಳುವುದೇನು?
ಚೀನಾದಲ್ಲಿ ಅಬ್ಬರಿಸುತ್ತಿರುವ ಹ್ಯೂಮನ್ ಮೆಟಾನ್ಯುಮೊವೈರಸ್ (ಎಚ್ಎಂಪಿವಿ) ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟು ಜನರಲ್ಲಿ ಆತಂಕ ಮೂಡಿಸಿದೆ. ಎಚ್ಎಂಪಿವಿ ವೈರಸ್ ಅಷ್ಟು ಮಾರಾಣಾಂತಿಕವಲ್ಲ ಎನಿಸಿದರೂ ದುರ್ಬಲ ರೋಗ ನಿರೋಧಕ ಶಕ್ತಿಯಿರುವವರಿಗೆ ಅಪಾಯಕಾರಿಯಾಗಿದೆ. ಹಾಗಾದ್ರೆ ಎಚ್ಎಂಪಿವಿ ವೈರಸ್ ಹಾಗೂ ಕೋವಿಡ್ 19 ನಡುವಿನ ಹೋಲಿಕೆಗಳು ಹಾಗೂ ರೋಗಲಕ್ಷಣದಲ್ಲಿನ ವ್ಯತ್ಯಾಸಗಳೇನು? ಈ ಬಗ್ಗೆ ವೈದ್ಯರು ಹೇಳುವುದೇನು? ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
- Sainandha P
- Updated on: Jan 7, 2025
- 2:40 pm
ಚೀನಾದಲ್ಲಿ ಹೊಸ ವೈರಸ್ ಆತಂಕ: ಕರ್ನಾಟಕಕ್ಕೆ ಕೇಂದ್ರ ಆರೋಗ್ಯ ಇಲಾಖೆ ನೀಡಿದ ಸೂಚನೆ ಏನು?
ಚೀನಾದಲ್ಲಿ ಹೊಸ ವೈರಸ್ ಪತ್ತೆಯಾಗಿರುವುದರಿಂದ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಎಚ್ಚರಿಕೆ ವಹಿಸಲಾಗಿದೆ. ಕೇಂದ್ರ ಸರ್ಕಾರ ಐಎಲ್ಐ ಮತ್ತು ಸಾರಿ ಪ್ರಕರಣಗಳಿಗೆ ಪರೀಕ್ಷೆ ನಡೆಸುವಂತೆ ಸೂಚಿಸಿದೆ. ಆರೋಗ್ಯ ಇಲಾಖೆ ಜ್ವರ, ಕೆಮ್ಮು ಇರುವವರು ಮಾಸ್ಕ್ ಧರಿಸುವಂತೆ ಸಲಹೆ ನೀಡಿದೆ. ಹೊಸ ವೈರಸ್ನಿಂದ ಆತಂಕ ಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- Vinay Kashappanavar
- Updated on: Jan 4, 2025
- 4:35 pm
COVID mRNA Vaccine: ಕೋವಿಡ್ ಎಂಆರ್ಎನ್ಎ ಲಸಿಕೆ ಪಡೆದ ಮಕ್ಕಳಿಗೆ ಹೃದಯಾಘಾತದ ಅಪಾಯ ಹೆಚ್ಚು : ಅಧ್ಯಯನದಿಂದ ಬಹಿರಂಗ
ಇತ್ತೀಚೆಗೆ ಮಕ್ಕಳಲ್ಲಿ ಹೃದಯಾಘಾತದ ಸಮಸ್ಯೆ ಹೆಚ್ಚುತ್ತಿದ್ದು, ಸಣ್ಣ ವಯಸ್ಸಿನ ಮಕ್ಕಳು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಕೋವಿಡ್ ಲಸಿಕೆ ಪಡೆದುಕೊಂಡ ಬಳಿಕ ಮಕ್ಕಳಲ್ಲಿ ಹೃದಯಾಘಾತದ ಅಪಾಯವು ಹೆಚ್ಚಾಗುತ್ತಿದೆ ಎನ್ನಲಾಗುತ್ತಿದೆ. ಆದರೆ ಇದೀಗ ಕೋವಿಡ್ ಎಂಆರ್ಎನ್ಎ ಲಸಿಕೆಯೂ ಮಕ್ಕಳ ಹೃದಯದ ಆರೋಗ್ಯದ ಮೇಲೆ ಮಾತ್ರ ಪರಿಣಾಮ ಬೀರುತ್ತದೆ. ಕೋವಿಡ್ ಎಂಆರ್ಎನ್ಎ ಲಸಿಕೆ ಪಡೆದ ಮಕ್ಕಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ ಎಂದು ಬಾಂಬ್ ಶೆಲ್ ಅಧ್ಯಯನವು ದೃಢಪಡಿಸಿದೆ.
- Sainandha P
- Updated on: Dec 16, 2024
- 5:23 pm
ಕೋವಿಡ್ ಪ್ರಕರಣದಲ್ಲಿ ಮೊದಲ ಎಫ್ಐಆರ್, ಸೇಡಿನ ರಾಜಕಾರಣವಲ್ಲದೆ ಮತ್ತೇನೂ ಅಲ್ಲ: ಜಗದೀಶ್ ಶೆಟ್ಟರ್
ಮುಡಾ ಹಗರಣ ಮತ್ತು ವಾಲ್ಮೀಕಿ ಹಗರಣ ಬೆಳಕಿಗೆ ಬಂದ ಮೇಲೆ ಸರ್ಕಾರ ಕೋವಿಡ್ ಹಗರಣದ ಬಗ್ಗೆ ಮಾತಾಡುತ್ತಿದೆ, ಎಪ್ಐಅರ್ ಗಳು ದಾಖಲಾಗುತ್ತಿವೆ, ಬಿಜೆಪಿ ಇಂಥಕ್ಕೆಲ್ಲ ಹೆದರಲ್ಲ ಮತ್ತು ಗಂಭೀರವಾಗಿ ಪರಿಗಣಿಸಲ್ಲ, ಎಫ್ಅರ್ಐಗಳನ್ನು ಎದುರಿಸಲು ಪಕ್ಷದ ನಾಯಕರು ಸಿದ್ಧವಾಗಿದ್ದಾರೆ ಎಂದು ಸಂಸದ್ ಜಗದೀಶ್ ಶೆಟ್ಟರ್ ಹೇಳಿದರು.
- Arun Belly
- Updated on: Dec 14, 2024
- 12:19 pm
ಒಂಬತ್ತಲ್ಲ, 38 ಲಕ್ಷ ಕೋಟಿ ರೂ ನಷ್ಟ ಕಂಡ ಷೇರುಪೇಟೆ; ಮಾರುಕಟ್ಟೆ ನಡುಗಿದ ನಾಲ್ಕು ಸಂದರ್ಭಗಳಿವು
Stock market crashes from Harshad Mehta to Covid crisis: ಇವತ್ತು ಷೇರು ಮಾರುಕಟ್ಟೆ ಗಡಗಡ ನಡುಗಿ ಹೋಗಿದೆ. ಇಂಟ್ರಾಡೇ ಟ್ರೇಡಿಂಗ್ನಲ್ಲಿ 38 ಲಕ್ಷ ಕೋಟಿ ರೂ ನಷ್ಟವಾಗಿರುವ ಅಂದಾಜು ಇದೆ. ಭಾರತದ ಷೇರು ಮಾರುಕಟ್ಟೆ ಕಂಡ ದೊಡ್ಡ ಮಟ್ಟದ ಕುಸಿತಗಳಲ್ಲಿ ಇದೂ ಒಂದು. ಈ ಹಿಂದೆ ಐದಾರು ಬಾರಿ ಈ ರೀತಿ ವಿಪ್ಲವಗಳಾಗಿವೆ. ಹರ್ಷದ್ ಮೆಹ್ತಾ ಹಗರಣದಿಂದ ಹಿಡಿದು ಕೋವಿಡ್ವರೆಗೂ ವಿವಿಧ ಸಂದರ್ಭಗಳಲ್ಲಿ ಮಾರುಕಟ್ಟೆ ಕುಸಿತ ಕಂಡಿದೆ.
- Vijaya Sarathy SN
- Updated on: Jun 4, 2024
- 3:02 pm
Covaxin: ಕೊವ್ಯಾಕ್ಸಿನ್ ಅಡ್ಡಪರಿಣಾಮದ ಅಧ್ಯಯನದ ವಿರುದ್ಧ ಅಸಮಾಧಾನ; ಕ್ಷಮೆಗೆ ಆಗ್ರಹಿಸಿದ ಐಸಿಎಂಆರ್
ಕೊವ್ಯಾಕ್ಸಿನ್ ಅಡ್ಡಪರಿಣಾಮ ಅಧ್ಯಯನದ ಬಗ್ಗೆ ಅಧ್ಯಯನ ನಡೆಸಿದ ಬನಾರಸ್ ಹಿಂದೂ ಯುನಿವರ್ಸಿಟಿ (BHU) ವಿರುದ್ಧ ಐಸಿಎಂಆರ್ ಅಸಮಾಧಾನ ವ್ಯಕ್ತಪಡಿಸಿದೆ. ಇದೊಂದು ಕಳಪೆ ಅಧ್ಯಯನ ಎಂದಿರುವ ಐಸಿಎಂಆರ್ ಬನಾರಸ್ ಹಿಂದೂ ವಿಶ್ವವಿದ್ಯಾಲಯ ಕ್ಷಮೆ ಕೋರಬೇಕೆಂದು ಆಗ್ರಹಿಸಿದೆ.
- Sushma Chakre
- Updated on: May 20, 2024
- 5:42 pm
ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ; ವಾರಕ್ಕೆ 26 ಸಾವಿರ ಕೇಸ್ ಪತ್ತೆ
ಸಿಂಗಾಪುರದಲ್ಲಿ ಮಹಾಮಾರಿ ಕೊರೊನಾ ಮತ್ತೆ ಆತಂಕ ಸೃಷ್ಟಿಸಿದೆ. ಕೇವಲ ಒಂದು ವಾರದಲ್ಲಿ 26 ಸಾವಿರ ಕೊರೊನಾ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು ಮಾಸ್ಕ್ ಧರಿಸುವಂತೆ ಆದೇಶ ನೀಡಿದೆ. ಜೊತೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದೆ.
- Harish GR
- Updated on: May 19, 2024
- 7:50 am
Coronavirus: ಭಾರತದಲ್ಲಿ ಮತ್ತೆ ಕೊರೊನಾ ಆತಂಕ, ಮಹಾರಾಷ್ಟ್ರದಲ್ಲಿ 19 ಪ್ರಕರಣಗಳು ಪತ್ತೆ
ಭಾರತದಲ್ಲಿ ಮತ್ತೆ ಈಗ ಕೊರೊನಾ ಭಯ ಶುರುವಾಗಿದೆ. ಮಹಾರಾಷ್ಟ್ರದಲ್ಲಿ 19 ಹೊಸ ಪ್ರಕರಣಗಳು ಪತ್ತೆಯಾಗಿವೆ. ಅಮೆರಿಕದಲ್ಲಿ ಹೆಚ್ಚು ವೇಗವನ್ನು ಪಡೆದುಕೊಳ್ಳುತ್ತಿರುವ ಕೆಪಿ2 ಮಹಾರಾಷ್ಟ್ರದಲ್ಲೂ ಹೆಚ್ಚು ವೇಗದಲ್ಲಿ ಸೋಂಕು ಹರಡಲು ಕಾರಣವಾಗುತ್ತಿದೆ.
- Nayana Rajeev
- Updated on: May 13, 2024
- 8:14 am
ಅಡ್ಡಪರಿಣಾಮ ಆರೋಪ: ಕೋವಿಶೀಲ್ಡ್ ಲಸಿಕೆಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು ಮುಂದಾದ ಅಸ್ಟ್ರಾಜೆನೆಕಾ
AstraZeneca withdraws COVID vaccine: ಅಸ್ಟ್ರಾಜೆನೆಕಾ ವಿಶ್ವದಾದ್ಯಂತ ಇರುವ ಔಷಧೀಯ ಮಾರುಕಟ್ಟೆಗಳಿಂದ ಕೋವಿಶೀಲ್ಡ್ ಕೋವಿಡ್ ಲಸಿಕೆಯನ್ನು ಹಿಂಪಡೆಯಲು ಮುಮದಾಗಿದೆ. ಈ ಕೋವಿಡ್ ಲಸಿಕೆಯು ಅಪಾಯಕಾರಿ ಅಡ್ಡಪರಿಣಾಮವನ್ನು ಉಂಟು ಮಾಡಬಹುದು ಎಂದು ನ್ಯಾಯಾಲಯದ ದಾಖಲೆಗಳಲ್ಲಿ ಕಂಪನಿಯು ಒಪ್ಪಿಕೊಂಡ ಬಳಿಕ ಜಾಗತಿಕವಾಗಿ ಲಸಿಕೆಯನ್ನು ಹಿಂಪಡೆದಿದೆ.
- Nayana Rajeev
- Updated on: May 8, 2024
- 9:19 am
ಕೊವಿಡ್ ಲಸಿಕೆಯಿಂದ ಶ್ರೇಯಸ್ ತಲ್ಪಡೆಗೆ ಹೃದಯಾಘಾತ ಆಯ್ತಾ? ನಟನಿಗೂ ಇದೆ ಅನುಮಾನ
ಎಲ್ಲ ವಿಚಾರದಲ್ಲಿಯೂ ನಟ ಶ್ರೇಯಸ್ ತಲ್ಪಡೆ ಫಿಟ್ನೆಸ್ ಕಾಪಾಡಿಕೊಂಡಿದ್ದಾರೆ. ಆದರೂ ಕೂಡ ತಮಗೆ ಹೃದಯಾಘಾತ ಆಗಿದ್ದರ ಬಗ್ಗೆ ಅವರಿಗೆ ಅನುಮಾನ ಶುರುವಾಗಿದೆ. ಕೊವಿಡ್-19 ಲಸಿಕೆಯ ಬಗ್ಗೆ ಅವರು ಕೆಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಮಾಧ್ಯಮವೊಂದಕ್ಕೆ ಅವರು ಸಂದರ್ಶನ ನೀಡಿದ್ದು, ಒಂದಷ್ಟು ಪ್ರಮುಖ ಪ್ರಶ್ನೆಗಳನ್ನು ಎತ್ತಿದ್ದಾರೆ.
- Madan Kumar
- Updated on: May 5, 2024
- 10:44 am