Dam Water Level
Reservoir Level and Storage Bulletin – ಕರ್ನಾಟಕದ ಪ್ರಮುಖ ಜಲಾಶಯಗಳು ಕೃಷಿ, ಕುಡಿಯುವ ನೀರು ಮತ್ತು ವಿದ್ಯುತ್ ಉತ್ಪಾದನೆಯ ಜೀವನಾಡಿಯಾಗಿವೆ. ರಾಜ್ಯದಲ್ಲಿ ಸುಮಾರು 230ಕ್ಕೂ ಹೆಚ್ಚು ಸಣ್ಣ ಮತ್ತು ದೊಡ್ಡ ಅಣೆಕಟ್ಟುಗಳಿವೆ. ಇವುಗಳಲ್ಲಿ 20ಕ್ಕೂ ಹೆಚ್ಚು ಪ್ರಮುಖ ಜಲಾಶಯಗಳಾಗಿವೆ. ಮಂಡ್ಯದ ಐತಿಹಾಸಿಕ ಕೆಆರ್ಎಸ್ (ಕಾವೇರಿ), ಉತ್ತರ ಕರ್ನಾಟಕದ ಆಸರೆಯಾದ ತುಂಗಭದ್ರಾ ಮತ್ತು ಅಲ್ಮಟ್ಟಿ (ಕೃಷ್ಣಾ) ಹಾಗೂ ರಾಜ್ಯದಲ್ಲೇ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಶಿವಮೊಗ್ಗದ ಲಿಂಗನಮಕ್ಕಿ (ಶರಾವತಿ) ಜಲಾಶಯಗಳು ರಾಜ್ಯದ ಅಭಿವೃದ್ಧಿಗೆ ಮತ್ತು ಪ್ರವಾಸೋದ್ಯಮಕ್ಕೆ ಪ್ರಮುಖ ಕೊಡುಗೆ ನೀಡಿವೆ. ಬೆಂಗಳೂರಿನ ಜನರಿಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ (KRS) ಜಲಾಶಯವೇ ಜೀವಾಳವಾಗಿದೆ.
ಇನ್ನೂ ಹೆಚ್ಚು ಓದಿKarnataka Dam Water Level: ಕೆಆರ್ಎಸ್, ಆಲಮಟ್ಟಿ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ
ಕರ್ನಾಟಕದ ಜಲಾಶಯಗಳ (ಆಗಸ್ಟ್ 22) ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಾದ ಕೆಆರ್ಎಸ್, ಆಲಮಟ್ಟಿ, ತುಂಗಭದ್ರಾ, ಬಸವಸಾಗರ, ಲಿಂಗನಮಕ್ಕಿ ಹಾಗೂ ಭದ್ರಾ ಡ್ಯಾಂಗಳ ಇಂದಿನ ನೀರಿನ ಮಟ್ಟ, ಒಳಹರಿವು ಮತ್ತು ಹೊರಹರಿವಿನ ಸಂಪೂರ್ಣ ಅಂಕಿ-ಅಂಶಗಳು ಇಲ್ಲಿವೆ. ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳ ಪ್ರಸ್ತುತ ನೀರು ಸಂಗ್ರಹದ ವರದಿ ಪರಿಶೀಲಿಸಿ.
- Bhavana Hegde
- Updated on: Aug 22, 2026
- 12:01 pm
Karnataka Dam Water Level: ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ; ಆಲಮಟ್ಟಿ, ಬಸವಸಾಗರ ಭರ್ತಿ
ಕರ್ನಾಟಕದ ಜಲಾಶಯಗಳ (ಆಗಸ್ಟ್ 21) ನೀರಿನ ಮಟ್ಟ: ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಸಂಪೂರ್ಣ ವಿವರ ಇಲ್ಲಿದೆ. ಕೃಷ್ಣಾ, ಕಾವೇರಿ ಹಾಗೂ ತುಂಗಭದ್ರಾ ನದಿ ಪಾತ್ರದ ಆಲಮಟ್ಟಿ, ಬಸವಸಾಗರ, ಕೆಆರ್ಎಸ್, ತುಂಗಭದ್ರಾ ಹಾಗೂ ಭದ್ರಾ ಜಲಾಶಯಗಳ ಇಂದಿನ ಒಳಹರಿವು, ಹೊರಹರಿವು ಮತ್ತು ಒಟ್ಟು ನೀರಿನ ಸಂಗ್ರಹದ ವರದಿ ಓದಿ.
- Bhavana Hegde
- Updated on: Aug 21, 2026
- 11:56 am
Karnataka Dam Water Level: ಆಲಮಟ್ಟಿ ಭರ್ತಿ, ಕಾವೇರಿ ಕೊಳ್ಳದಲ್ಲಿ ಇಳಿಕೆ ಕಂಡ ಒಳಹರಿವು!
ಕರ್ನಾಟಕದ ಜಲಾಶಯಗಳ (ಆಗಸ್ಟ್ 19) ನೀರಿನ ಮಟ್ಟ: ಆಲಮಟ್ಟಿ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು ಭಾರಿ ಹೊರಹರಿವು ದಾಖಲಾಗಿದೆ. ಕೆಆರ್ಎಸ್ನಲ್ಲಿ ಒಳಹರಿವು ತಗ್ಗಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಕಬಿನಿ, ಭದ್ರಾ ಹಾಗೂ ಲಿಂಗನಮಕ್ಕಿ ಜಲಾಶಯಗಳ ಇಂದಿನ ನೀರು ಸಂಗ್ರಹ, ಒಳಹರಿವು ಮತ್ತು ಹೊರಹರಿವಿನ ಸಂಪೂರ್ಣ ಮಾಹಿತಿ ಓದಿ.
- Bhavana Hegde
- Updated on: Aug 19, 2026
- 11:33 am
Karnataka Dam Water Level: ಭರ್ತಿಯಾಗುವ ಹಂತದಲ್ಲಿದೆ ಆಲಮಟ್ಟಿ; ಕಬಿನಿ, ಭದ್ರಾ, ಲಿಂಗನಮಕ್ಕಿಯಲ್ಲಿ ಎಷ್ಟಿದೆ ನೀರು?
ಕರ್ನಾಟಕದ ಜಲಾಶಯಗಳ (ಆಗಸ್ಟ್ 17) ನೀರಿನ ಮಟ್ಟ: ಆಗಸ್ಟ್ 17ರ ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ. ವಿಜಯಪುರದ ಆಲಮಟ್ಟಿ ಜಲಾಶಯವು ಭರ್ತಿಯಾಗುವ ಹಂತ ತಲುಪಿದ್ದು, ನದಿಗೆ ಭಾರಿ ಪ್ರಮಾಣದ ನೀರು ಹರಿಸಲಾಗುತ್ತಿದೆ. ಮೈಸೂರಿನ ಕಬಿನಿ, ಶಿವಮೊಗ್ಗದ ಭದ್ರಾ ಹಾಗೂ ಲಿಂಗನಮಕ್ಕಿ ಡ್ಯಾಂಗಳಲ್ಲಿನ ಇಂದಿನ ನೀರಿನ ಸಂಗ್ರಹ, ಒಳಹರಿವು ಮತ್ತು ಹೊರಹರಿವಿನ ಸಂಪೂರ್ಣ ವರದಿ ಇಲ್ಲಿದೆ.
- Bhavana Hegde
- Updated on: Aug 17, 2026
- 12:24 pm
Karnataka Dam Water Level: ರಾಜ್ಯದ ಪ್ರಮುಖ ಡ್ಯಾಂಗಳಿಗೆ ಹರಿದುಬರುತ್ತಿದೆ ಭಾರಿ ಒಳಹರಿವು!
ಕರ್ನಾಟಕದ ಜಲಾಶಯಗಳ (ಆಗಸ್ಟ್ 16) ನೀರಿನ ಮಟ್ಟ: ರಾಜ್ಯದಾದ್ಯಂತ ಮುಂಗಾರು ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಆಲಮಟ್ಟಿ, ಕಬಿನಿ, ಲಿಂಗನಮಕ್ಕಿ, ಹೇಮಾವತಿ ಹಾಗೂ ಭದ್ರಾ ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಏರಿಕೆಯಾಗಿದೆ. ಆಲಮಟ್ಟಿ ಡ್ಯಾಂ ಬಹುತೇಕ ಭರ್ತಿಯಾಗಿದ್ದು ನದಿಗೆ ಅಪಾರ ಪ್ರಮಾಣದ ನೀರು ಹರಿಬಿಡಲಾಗುತ್ತಿದೆ. ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ, ಒಳಹರಿವು ಮತ್ತು ಹೊರಹರಿವಿನ ಸಂಪೂರ್ಣ ವರದಿ ಇಲ್ಲಿದೆ.
- Bhavana Hegde
- Updated on: Aug 16, 2026
- 12:07 pm
Karnataka Dam Water Level: ಆಲಮಟ್ಟಿ ಭರ್ತಿ, ರಾಜ್ಯದ ಪ್ರಮುಖ ಡ್ಯಾಂಗಳ ಇಂದಿನ ನೀರಿನ ಮಟ್ಟ ಹೀಗಿದೆ
ಕರ್ನಾಟಕದ ಜಲಾಶಯಗಳ (ಆಗಸ್ಟ್ 15) ನೀರಿನ ಮಟ್ಟ: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಸಂಪೂರ್ಣ ವಿವರ ಇಲ್ಲಿದೆ. ಆಲಮಟ್ಟಿ ಡ್ಯಾಂಗೆ ಒಳಹರಿವು ಹೆಚ್ಚಾಗಿದ್ದು, ಕಬಿನಿಯಿಂದ ಹೆಚ್ಚಿನ ನೀರು ಹೊರಗೆ ಹರಿಯುತ್ತಿದೆ. ಕೆಆರ್ಎಸ್ ಡ್ಯಾಂ ಹೊರಹರಿವಿನ ಮಾಹಿತಿ ಮುಚ್ಚಿಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರೊಂದಿಗೆ ಭದ್ರಾ ಹಾಗೂ ಲಿಂಗನಮಕ್ಕಿ ಜಲಾಶಯಗಳ ಇಂದಿನ ಇನ್ಫ್ಲೋ ಮತ್ತು ಔಟ್ಫ್ಲೋ ವಿವರ ಇಲ್ಲಿದೆ.
- Bhavana Hegde
- Updated on: Aug 15, 2026
- 11:21 am
ಮುಂಗಾರು ಮಳೆ ಮತ್ತೆ ದುರ್ಬಲ: ಕರ್ನಾಟಕದ ಡ್ಯಾಂಗಳ ಇಂದಿನ ಸ್ಥಿತಿ ಹೇಗಿದೆ?
ಕರ್ನಾಟಕದಲ್ಲಿ ಮುಂಗಾರು ಮಳೆ ಕ್ಷೀಣಿಸಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ ಕಂಡುಬಂದಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ (KSNDMC) ದಿನನಿತ್ಯದ ವರದಿಯಂತೆ ಮಲೆನಾಡು ಭಾಗಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುತ್ತಿದ್ದರೆ, ಬಹುತೇಕ ಭಾಗಗಳಲ್ಲಿ ಮಳೆಯ ಅಭಾವ ಮುಂದುವರಿದಿದೆ.
- Prasanna Hegde
- Updated on: Aug 13, 2026
- 11:50 am
Karnataka Dam Water Level: ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಏರಿಕೆ, ಇಲ್ಲಿದೆ ವಿವರ
ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ ಆಗಸ್ಟ್ 11: ರಾಜ್ಯದ ಪ್ರಮುಖ ಜಲಾಶಯಗಳಿಗೆ ಉತ್ತಮ ಪ್ರಮಾಣದಲ್ಲಿ ನೀರಿನ ಒಳಹರಿವು ಮುಂದುವರಿದಿದೆ. ಕೆಆರ್ಎಸ್ನಲ್ಲಿ 30.905 ಟಿಎಂಸಿ, ಕಬಿನಿಯಲ್ಲಿ 18.71 ಟಿಎಂಸಿ ಹಾಗೂ ಹೇಮಾವತಿಯಲ್ಲಿ 31.53 ಟಿಎಂಸಿ ನೀರು ಸಂಗ್ರಹವಾಗಿದೆ. ಆಲಮಟ್ಟಿ ಮತ್ತು ಬಸವಸಾಗರ ಜಲಾಶಯಗಳ ನೀರಿನ ಮಟ್ಟವೂ ಗರಿಷ್ಠ ಮಟ್ಟದ ಸಮೀಪದಲ್ಲಿದೆ.
- Ganapathi Sharma
- Updated on: Aug 11, 2026
- 10:34 am
Karnataka Dam Water Level: ರಾಜ್ಯದ ಪ್ರಮುಖ ಜಲಾಶಯಗಳಿಗೆ ಹೆಚ್ಚಿದ ಒಳಹರಿವು: ಭರ್ತಿಯ ಹಾದಿಯಲ್ಲಿ ಕಬಿನಿ, ಆಲಮಟ್ಟಿ ಡ್ಯಾಂ!
ಕರ್ನಾಟಕದ ಜಲಾಶಯಗಳ (ಆಗಸ್ಟ್ 10) ನೀರಿನ ಮಟ್ಟ: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ವಿಜಯಪುರದ ಆಲಮಟ್ಟಿ ಡ್ಯಾಂಗೆ 89 ಸಾವಿರ ಕ್ಯೂಸೆಕ್ ಒಳಹರಿವಿದ್ದು, ಮೈಸೂರಿನ ಕಬಿನಿ ಜಲಾಶಯ ಭರ್ತಿಗೆ ಕೇವಲ ಒಂದು ಅಡಿ ಬಾಕಿಯಿದೆ. ಇತ್ತ ಕಾವೇರಿ ಕೊಳ್ಳದ ಕೆಆರ್ಎಸ್ ಜಲಾಶಯದ ಇಂದಿನ ನೀರಿನ ಮಟ್ಟ ಹಾಗೂ ಸಂಪೂರ್ಣ ಮಾಹಿತಿ ಇಲ್ಲಿದೆ.
- Bhavana Hegde
- Updated on: Aug 10, 2026
- 11:38 am
Karnataka Dam Water Level: ಆಲಮಟ್ಟಿ ಮತ್ತು ಬಸವಸಾಗರ ಜಲಾಶಯಗಳಿಗೆ ಭಾರಿ ಪ್ರಮಾಣದ ಒಳಹರಿವು
ಕರ್ನಾಟಕದ ಜಲಾಶಯಗಳ (ಆಗಸ್ಟ್ 08) ನೀರಿನ ಮಟ್ಟ: ವಿಜಯಪುರ ಜಿಲ್ಲೆಯಲ್ಲಿ ಭೀಕರ ಬರಗಾಲವಿದ್ದರೂ ಆಲಮಟ್ಟಿ ಡ್ಯಾಂ ಭರ್ತಿಯಾಗಿದೆ. ಆದರೆ ಕೆರೆಗಳಿಗೆ ಹರಿಯಬೇಕಿದ್ದ ನೀರನ್ನು ಪ್ರಭಾವಿಗಳು ಮುಳವಾಡ ಏತ ನೀರಾವರಿ ಯೋಜನೆಯ ಉಪ ಕಾಲುವೆ ಒಡೆದು ಕಲ್ಲಿನ ಕ್ವಾರಿಗಳಿಗೆ ಅಕ್ರಮವಾಗಿ ಸಾಗಿಸುತ್ತಿದ್ದಾರೆ. ಇದರೊಂದಿಗೆ ಇಂದಿನ ಆಲಮಟ್ಟಿ, ಕೆಆರ್ಎಸ್ ಮತ್ತು ಯಾದಗಿರಿಯ ಬಸವಸಾಗರ ಜಲಾಶಯಗಳ ನೀರಿನ ಮಟ್ಟ ಹಾಗೂ ಒಳಹರಿವಿನ ಸಂಪೂರ್ಣ ವರದಿ ಇಲ್ಲಿದೆ.
- Bhavana Hegde
- Updated on: Aug 8, 2026
- 12:18 pm
Karnataka Dam Water Level: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಇಳಿಕೆ: KRS, ಕಬಿನಿ ಸೇರಿ ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ
ಕರ್ನಾಟಕದ ಜಲಾಶಯಗಳ ಆಗಸ್ಟ್ 6 ರ ನೀರಿನ ಮಟ್ಟ: ಕಳೆದ ಕೆಲವು ದಿನಗಳಿಂದ ಮುಂಗಾರು ಮಳೆಯ ಅಬ್ಬರದಿಂದ ಕಾವೇರಿ ಜಲಾನಯನ ಪ್ರದೇಶದ ಡ್ಯಾಂಗಳಿಗೆ ಒಳಹರಿವು ಹೆಚ್ಚಾಗಿತ್ತು. ಪರಿಣಾಮವಾಗಿ ಕೆಆರ್ಎಸ್ ಡ್ಯಾಂ ನೀರಿನ ಮಟ್ಟ 100 ಅಡಿ ದಾಟಿತ್ತು. ಇದೀಗ ಮಳೆ ತುಸು ಕಡಿಮೆ ಆಗಿದ್ದು, ಒಳಹರಿವು ಕಡಿಮೆಯಾಗಿದೆ.
- Ganapathi Sharma
- Updated on: Aug 6, 2026
- 11:38 am
Karnataka Dam Water Level: ತುಂಗಭದ್ರಾ, ಆಲಮಟ್ಟಿಗೆ ಕಳೆ ತಂದ ಮುಂಗಾರು, ರೈತರಲ್ಲಿ ಹರ್ಷ!
ಕರ್ನಾಟಕದ ಜಲಾಶಯಗಳ (ಆಗಸ್ಟ್ 05) ನೀರಿನ ಮಟ್ಟ: ಕಾವೇರಿ ಜಲಾನಯನ ಮತ್ತು ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಕೆಆರ್ಎಸ್ ಹಾಗೂ ತುಂಗಭದ್ರಾ ಸೇರಿದಂತೆ ಪ್ರಮುಖ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ವೇಗವಾಗಿ ಏರಿಕೆಯಾಗುತ್ತಿದ್ದು, ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಬೆಂಬಲ ಸಿಕ್ಕಂತಾಗಿದೆ. ಇದರಿಂದ ರಾಜ್ಯದ ರೈತರಲ್ಲಿ ಸಂತಸದ ವಾತಾವರಣ ಮೂಡಿದ್ದು, ಕಾವೇರಿ ಮತ್ತು ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳ ಜಲಸಂಪನ್ಮೂಲ ಸ್ಥಿತಿ ಉತ್ತಮಗೊಂಡಿದೆ.
- Bhavana Hegde
- Updated on: Aug 5, 2026
- 10:38 am