Dam Water Level
Reservoir Level and Storage Bulletin – ಕರ್ನಾಟಕದ ಪ್ರಮುಖ ಜಲಾಶಯಗಳು ಕೃಷಿ, ಕುಡಿಯುವ ನೀರು ಮತ್ತು ವಿದ್ಯುತ್ ಉತ್ಪಾದನೆಯ ಜೀವನಾಡಿಯಾಗಿವೆ. ರಾಜ್ಯದಲ್ಲಿ ಸುಮಾರು 230ಕ್ಕೂ ಹೆಚ್ಚು ಸಣ್ಣ ಮತ್ತು ದೊಡ್ಡ ಅಣೆಕಟ್ಟುಗಳಿವೆ. ಇವುಗಳಲ್ಲಿ 20ಕ್ಕೂ ಹೆಚ್ಚು ಪ್ರಮುಖ ಜಲಾಶಯಗಳಾಗಿವೆ. ಮಂಡ್ಯದ ಐತಿಹಾಸಿಕ ಕೆಆರ್ಎಸ್ (ಕಾವೇರಿ), ಉತ್ತರ ಕರ್ನಾಟಕದ ಆಸರೆಯಾದ ತುಂಗಭದ್ರಾ ಮತ್ತು ಅಲ್ಮಟ್ಟಿ (ಕೃಷ್ಣಾ) ಹಾಗೂ ರಾಜ್ಯದಲ್ಲೇ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಶಿವಮೊಗ್ಗದ ಲಿಂಗನಮಕ್ಕಿ (ಶರಾವತಿ) ಜಲಾಶಯಗಳು ರಾಜ್ಯದ ಅಭಿವೃದ್ಧಿಗೆ ಮತ್ತು ಪ್ರವಾಸೋದ್ಯಮಕ್ಕೆ ಪ್ರಮುಖ ಕೊಡುಗೆ ನೀಡಿವೆ. ಬೆಂಗಳೂರಿನ ಜನರಿಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ (KRS) ಜಲಾಶಯವೇ ಜೀವಾಳವಾಗಿದೆ.
Linganamakki Dam: ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಜಿಲ್ಲೆಯ ಲಿಂಗನಮಕ್ಕಿ ಡ್ಯಾಂ ಹಿನ್ನೀರು ಇಳಿಕೆಯಾದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಮುಪ್ಪಾನೆ ಲಾಂಚ್ ಸೇವೆ ಇಂದಿನಿಂದ ಮತ್ತೆ ಪುನರಾರಂಭಗೊಂಡಿದೆ. ಈ ನಿರ್ಧಾರದಿಂದ ಸಾಗರ ತಾಲೂಕಿನ ಮುಪ್ಪಾನೆ ಕಡವು ಸುತ್ತಮುತ್ತಲಿನ ಸಾವಿರಾರು ಗ್ರಾಮಸ್ಥರು ಹಾಗೂ ಪ್ರವಾಸಿಗರಿಗೆ ಅನುಕೂಲವಾಗಿದೆ. ಸಾಗರ ತಾಲೂಕಿನ ಮುಪ್ಪಾನೆ ಕಡವಿನಲ್ಲಿ ಕಾರ್ಯನಿರ್ವಹಿಸುವ ಈ ಲಾಂಚ್, ಜೋಗ ಹಾಗೂ ಸಿಗಂದೂರು ನಡುವೆ ಅತಿ ಪ್ರಮುಖ ಸಂಪರ್ಕ ಕೊಂಡಿಯಾಗಿದೆ. ಕರೂರು ಮತ್ತು ಬಾರಂಗಿ ಹೋಬಳಿಗಳ ಜನರಿಗೆ ಕಾಗಲ್ ಮತ್ತು ಜೋಗಕ್ಕೆ ತೆರಳಲು ಇದೇ ಹತ್ತಿರದ ಮಾರ್ಗವಾಗಿದೆ. ನೀರಿನ ಮಟ್ಟ ಕಡಿಮೆಯಾಗಿದ್ದ ಕಾರಣ ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆಯು ಲಾಂಚ್ ಸೇವೆ ನಿಲ್ಲಿಸಿತ್ತು.
- Bhavana Hegde
- Updated on: Jul 13, 2026
- 12:53 pm
Karnataka Dam Water Level: ಇನ್ನೂ 100 ಅಡಿ ತಲುಪಿಲ್ಲ ಕೆಆರ್ಎಸ್, ಕರ್ನಾಟಕದ ಡ್ಯಾಂಗಳ ಇಂದಿನ ನೀರಿನ ಮಟ್ಟದ ವಿವರ
ಕರ್ನಾಟಕದ ಜಲಾಶಯಗಳ ಜುಲೈ 13 ರ ನೀರಿನ ಮಟ್ಟ: ಕಳೆದ ವರ್ಷ ಜೂನ್ ಆರಂಭಕ್ಕೂ ಮುನ್ನವೇ ಕೆಆರ್ಎಸ್ ಡ್ಯಾಂ ನೀರಿನ ಮಟ್ಟ 100 ಅಡಿ ದಾಟಿತ್ತು. ಆದರೆ ಈ ವರ್ಷ ಜುಲೈ 13 ಆದರೂ ಇನ್ನೂ 92.15 ಅಡಿ ಸಂಗ್ರಹವಷ್ಟೇ ಇರುವುದು ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ.
- Ganapathi Sharma
- Updated on: Jul 13, 2026
- 12:24 pm
ಲಕ್ಕವಳ್ಳಿ ಭದ್ರಾ ಜಲಾಶಯದಲ್ಲಿ ಕುಸಿದ ಸಂಗ್ರಹ: ಕುಡಿಯುವ ಉದ್ದೇಶಕ್ಕೆ ಮಾತ್ರ ನೀರು ಮೀಸಲಿರಿಸಿ ಆದೇಶ; ರೈತರಿಗೆ ಸಂಕಷ್ಟ
Bhadra reservoir: ಮುಂಗಾರು ಮಳೆ ಕೊರತೆಯಿಂದ ಭದ್ರಾ ಜಲಾಶಯದ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ. ಹೀಗಾಗಿ ಜಿಲ್ಲಾಡಳಿತವು ಜಲಾಶಯದ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಮೀಸಲಿರಿಸಿ ಆದೇಶ ಹೊರಡಿಸಿದ್ದು, ರೈತರಲ್ಲಿ ಆತಂಕ ಮೂಡಿಸಿದೆ. 186 ಅಡಿ ಪೂರ್ಣ ಜಲಮಟ್ಟ ಹಾಗೂ 71.535 ಟಿಎಂಸಿ ಒಟ್ಟು ಸಂಗ್ರಹ ಸಾಮರ್ಥ್ಯ ಹೊಂದಿರುವ ಭದ್ರಾ ಜಲಾಶಯದಲ್ಲಿ ಜುಲೈ 10ರ ವೇಳೆಗೆ ಕೇವಲ 146 ಅಡಿ ನೀರಿನ ಮಟ್ಟವಿದ್ದು, 31.257 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಒಣಹವಾಮಾನ ಮುಂದುವರಿದರೆ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗುವ ಸಾಧ್ಯತೆ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
- Prasanna Hegde
- Updated on: Jul 13, 2026
- 12:25 pm
Karnataka Dam Water Level: ಒಂದೇ ದಿನದಲ್ಲಿ ಕೆಆರ್ಎಸ್ಗೆ 1 ಟಿಎಂಸಿ ನೀರು: ಲಿಂಗನಮಕ್ಕಿ, ಭದ್ರಾ, ಹೇಮಾವತಿ ಜಲಾಶಯಗಳ ಇಂದಿನ ಒಳಹರಿವು ಹೇಗಿದೆ?
ಕರ್ನಾಟಕದ ಜಲಾಶಯಗಳ ಜುಲೈ 10ರ ನೀರಿನ ಮಟ್ಟ: ಜುಲೈ 10ರಂದು ಕರ್ನಾಟಕದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್ಎಸ್, ಲಿಂಗನಮಕ್ಕಿ, ಭದ್ರಾ, ಹೇಮಾವತಿ, ಹಾರಂಗಿಯ ನೀರಿನ ಮಟ್ಟದ ಸಮಗ್ರ ವರದಿ ಇಲ್ಲಿದೆ. ಮುಂಗಾರು ಮಳೆಯಿಂದಾಗಿ ಹಲವು ಜಲಾಶಯಗಳಿಗೆ ಭಾರೀ ಒಳಹರಿವು ದಾಖಲಾಗಿದ್ದು, ವಿಶೇಷವಾಗಿ ಕೃಷ್ಣಾ ಕಣಿವೆಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿದೆ. ಪ್ರಸ್ತುತ ಜಲಾಶಯಗಳ ಸಂಗ್ರಹ ಸಾಮರ್ಥ್ಯ ಮತ್ತು ಹರಿವಿನ ವಿವರಗಳನ್ನು ತಿಳಿಯಿರಿ.
- Akshay Pallamajalu
- Updated on: Jul 13, 2026
- 12:28 pm
Karnataka Dam Water Level: ಗಾಜನೂರು ತುಂಗಾ ಡ್ಯಾಂ ಭರ್ತಿ; ಕರ್ನಾಟಕದ ಪ್ರಮುಖ ಡ್ಯಾಂಗಳ ಜುಲೈ 8ರ ನೀರಿನ ಮಟ್ಟದ ವಿವರ
ಕರ್ನಾಟಕದ ಜಲಾಶಯಗಳ ಜುಲೈ 9ರ ನೀರಿನ ಮಟ್ಟ: ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂಗಾರು ಮಳೆಯಿಂದ ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಿದೆ. ಜುಲೈ 9ರಂದು ಆಲಮಟ್ಟಿ, ಹೇಮಾವತಿ, ಲಿಂಗನಮಕ್ಕಿ, ಭದ್ರಾ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ. ಗಾಜನೂರು ತುಂಗಾ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ದೂದಗಂಗಾ ನದಿಯ ಪ್ರವಾಹದಿಂದ ನೂರಾರು ಎಕರೆ ಬೆಳೆ ಹಾನಿಯಾಗಿದೆ. ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ.
- Akshay Pallamajalu
- Updated on: Jul 13, 2026
- 12:26 pm
Karnataka Dam Water Level: ಮುಂಗಾರು ಮಳೆ ಚುರುಕು, ಕರ್ನಾಟಕದ ಪ್ರಮುಖ ಡ್ಯಾಂಗಳ ಜುಲೈ 7ರ ನೀರಿನ ಮಟ್ಟದ ವಿವರ
ಕರ್ನಾಟಕದ ಜಲಾಶಯಗಳ ಜುಲೈ 7 ರ ನೀರಿನ ಮಟ್ಟ: ಕರ್ನಾಟಕದ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಪ್ರಮುಖ ಜಲಾಶಯಗಳಿಗೆ ಭಾರಿ ಒಳಹರಿವು ಆರಂಭವಾಗಿದೆ. ಶಿವಮೊಗ್ಗದ ಗಾಜನೂರು ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಎಲ್ಲಾ 22 ಗೇಟ್ಗಳ ಮೂಲಕ ಕೃಷ್ಣಾ ನದಿಯ ಉಪನದಿಗೆ ನೀರು ಹರಿಸಲಾಗುತ್ತಿದೆ.
- Ganapathi Sharma
- Updated on: Jul 13, 2026
- 12:28 pm
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಆತಂಕಕಾರಿ ಮಟ್ಟಕ್ಕೆ ಕುಸಿದಿದ್ದು, ಕೇವಲ 9 ಟಿಎಂಸಿ ನೀರು ಸಂಗ್ರಹ ಇದೆ. ಕಳೆದ ವರ್ಷ ಇದೇ ಸಮಯದಲ್ಲಿ 24 ಟಿಎಂಸಿ ನೀರಿತ್ತು. ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಜೀವನಾಡಿಯಾದ ಈ ಜಲಾಶಯದ ಕುಸಿತದಿಂದ ಕುಡಿಯುವ ನೀರು ಹಾಗೂ ಕೃಷಿಗೆ ತೀವ್ರ ತೊಂದರೆಯಾಗಿದ್ದು, ರೈತರು ಆತಂಕದಲ್ಲಿದ್ದಾರೆ.
- Shivakumar Pattar
- Updated on: Jul 13, 2026
- 12:28 pm
ಕೆಆರ್ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು, ಬೆಂಗಳೂರು, ಮೈಸೂರು ಜನರಿಗೆ ಕುಡಿಯುವ ನೀರಿನ ಸಂಕಷ್ಟ
ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಕೊರತೆಯಿಂದ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದೆ. ಸದ್ಯ ಬಳಕೆಗೆ ಕೇವಲ 7 ಟಿಎಂಸಿ ನೀರು ಮಾತ್ರ ಲಭ್ಯವಿದ್ದು, ಜೂನ್ ಅಂತ್ಯದೊಳಗೆ ತಮಿಳುನಾಡಿಗೆ 9 ಟಿಎಂಸಿ ನೀರು ಬಿಡುಗಡೆ ಮಾಡಬೇಕಾದ ಒತ್ತಡವಿದೆ. ಬೆಂಗಳೂರು, ಮೈಸೂರು ಹಾಗೂ ಮಂಡ್ಯಕ್ಕೆ ಕುಡಿಯುವ ನೀರಿನ ಸಂಕಷ್ಟದ ಭೀತಿ ಎದುರಾಗಿದೆ.
- Nayana Rajeev
- Updated on: Jul 13, 2026
- 12:28 pm