AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Thoogudeepa

Darshan Thoogudeepa

ನಟ ದರ್ಶನ್ ಅವರ ಪೂರ್ಣ ಹೆಸರು ದರ್ಶನ್ ತೂಗುದೀಪ. ಇವರು ಕನ್ನಡ ಚಿತ್ರರಂಗದ ಜನಪ್ರಿಯ ನಟ. 1977ರ ಫೆಬ್ರವರಿ 16ರಂದು ಕರ್ನಾಟಕದ ಮೈಸೂರಿನಲ್ಲಿ ಜನಿಸಿದ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ದರ್ಶನ್ ಅವರ ಚೊಚ್ಚಲ ಸಿನಿಮಾ ‘ಮೆಜೆಸ್ಟಿಕ್’ 2001ರಲ್ಲಿ ಬಿಡುಗಡೆಯಾಗಿತು. ಆ ಮೂಲಕ ಹೀರೋ ಆಗಿ ಅವರು ವೃತ್ತಿಜೀವನ ಆರಂಭಿಸಿದರು. ತಮ್ಮ ಅಭಿನಯದಿಂದ ವ್ಯಾಪಕವಾಗಿ ಮೆಚ್ಚುಗೆ ಪಡೆದ ದರ್ಶನ್​ ಅವರು ವಿಶೇಷವಾಗಿ ಆ್ಯಕ್ಷನ್ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರ ಕೆಲವು ಗಮನಾರ್ಹ ಚಲನಚಿತ್ರಗಳಲ್ಲಿ ‘ಕರಿಯ’, ‘ನಮ್ಮ ಪ್ರೀತಿಯ ರಾಮು’, ‘ಸಂಗೊಳ್ಳಿ ರಾಯಣ್ಣ’, ‘ಕಲಾಸಿಪಾಳ್ಯ’, ‘ಅಯ್ಯ’, ‘ನವಗ್ರಹ’, ‘ಯಜಮಾನ’, ‘ರಾಬರ್ಟ್​’, ‘ಕಾಟೇರ’ ಮುಂತಾದ ಸಿನಿಮಾಗಳಿವೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ದರ್ಶನ್ ಅವರು ಸಿನಿಮಾ ಮಾತ್ರವಲ್ಲದೇ ಪರೋಪಕಾರಿ, ಸಮಾಜಮುಖಿ ಚಟುವಟಿಕೆಗಳಿಂದಲೂ ಫೇಮಸ್​ ಆಗಿದ್ದಾರೆ. ದರ್ಶನ್​ ಅವರದ್ದು ಕಲಾವಿದರ ಕುಟುಂಬ. ಅವರ ತಂದೆ ತೂಗುದೀಪ ಶ್ರೀನಿವಾಸ್​ ಅವರು ಕನ್ನಡ ಚಿತ್ರರಂಗದಲ್ಲಿ ಖ್ಯಾತ ಖಳನಟ ಆಗಿದ್ದರು. ಅವರ ಸಹೋದರ ದಿನಕರ್​ ತೂಗುದೀಪ ನಿರ್ದೇಶಕನಾಗಿ, ನಟನಾಗಿ ಗುರುತಿಸಿಕೊಂಡಿದ್ದಾರೆ.

ಇನ್ನೂ ಹೆಚ್ಚು ಓದಿ

‘ಧುರಂಧರ್’ ಎದುರು ಮಂಕಾದ ‘ದಿ ಡೆವಿಲ್’: ದರ್ಶನ್ ಸಿನಿಮಾ ಕಲೆಕ್ಷನ್ ಕಡಿಮೆ ಆಗಿದ್ದು ಯಾಕೆ?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ಮೊದಲ ದಿನ 10 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತ್ತು. ವಾರಾಂತ್ಯದಲ್ಲಿ ಇನ್ನೂ ಹೆಚ್ಚಾಗುವ ನಿರೀಕ್ಷೆ ಇತ್ತು. ಆದರೆ ಆ ರೀತಿ ಆಗಿಲ್ಲ. ‘ದಿ ಡೆವಿಲ್’ ಗಳಿಕೆ ಕಡಿಮೆ ಆಗಿದೆ. ‘ಧುರಂಧರ್’ ಸಿನಿಮಾದ ಪೈಪೋಟಿ, ಪೈರಸಿ ಕಾಟ ಸೇರಿದಂತೆ ಹಲವು ಕಾರಣಗಳಿಂದ ‘ದಿ ಡೆವಿಲ್’ ಹಿನ್ನಡೆ ಆಗಿದೆ.

ಮಹಿಳೆಯರಿಗೆ ಗೌರವ ಕೊಡೋದು ದರ್ಶನ್ ಅಭಿಮಾನಿಗಳಿಗೆ ಗೊತ್ತು: ವಿಜಯಲಕ್ಷ್ಮಿ

‘ದಿ ಡೆವಿಲ್’ ಸಿನಿಮಾದ ನಟಿ ರಚನಾ ರೈ ಅವರು ವಿಜಯಲಕ್ಷ್ಮಿ ದರ್ಶನ್ ಅವರ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನದಲ್ಲಿ ಕೆಲವು ಪ್ರಮುಖ ಪ್ರಶ್ನೆಗಳಿಗೆ ವಿಜಯಲಕ್ಷ್ಮಿ ದರ್ಶನ್ ಅವರು ನೇರವಾಗಿ ಉತ್ತರ ನೀಡಿದ್ದಾರೆ. ಅಭಿಮಾನಿಗಳ ಬಗ್ಗೆ ಎದುರಾದ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ಸಂದರ್ಶನದ ಪ್ರೋಮೋ ಬಹಳ ವೈರಲ್ ಆಗಿದೆ.

ಎರಡನೇ ದಿನವೂ ಕೋಟಿಗಳಲ್ಲಿ ಗಳಿಸಿದ ‘ಡೆವಿಲ್’; ಮುಂದುವರಿದ ದರ್ಶನ್ ಅಬ್ಬರ

ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದೆ. ಅಭಿಮಾನಿಗಳ ಬೆಂಬಲದಿಂದ ಚಿತ್ರ ಮೊದಲ ದಿನ 13.5 ಕೋಟಿ ಗಳಿಸಿತ್ತು. ಎರಡನೇ ದಿನವೂ ಸಿನಿಮಾ ಅಬ್ಬರಿಸಿದೆ. ವಾರದ ದಿನವೂ ಸಿನಿಮಾ ಉತ್ತಮ ಪ್ರದರ್ಶನ ನೀಡಿದೆ. ಇಂದು ಹಾಗೂ ನಾಳೆ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡೋ ನಿರೀಕ್ಷೆ ಇದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ದಿ ಡೆವಿಲ್ ಚಿತ್ರ ಎಲ್ಲ ಕಡೆಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಆಗುತ್ತಿದೆ. ಫ್ಯಾನ್ಸ್ ಅಷ್ಟೇ ಅಲ್ಲದೇ ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಸಹ ಬಂದು ಸಿನಿಮಾ ವೀಕ್ಷಿಸಿದ್ದಾರೆ. ನಟಿ ಪೂಜಾ ಗಾಂಧಿ ‘ದಿ ಡೆವಿಲ್’ ವೀಕ್ಷಿಸಿದ ನಂತರ ಮಾಧ್ಯಮಗಳ ಜೊತೆ ಅನಿಸಿಕೆ ಹಂಚಿಕೊಂಡರು.

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

‘ನಾವು ಅಂದುಕೊಂಡಿದ್ದಕ್ಕಿಂತ ಡಬಲ್ ಚೆನ್ನಾಗಿದೆ. ಈ ಸಿನಿಮಾ 100 ದಿನಗಳ ಕಾಲ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತದೆ. ಒಂದೊಂದು ದೃಶ್ಯ ಕೂಡ ರೋಚಕವಾಗಿ ಇದೆ. ಸಾರಥಿ ಸಿನಿಮಾದ ಇತಿಹಾಸ ರಿಪೀಟ್ ಆಗುತ್ತದೆ’ ಎಂದು ‘ದಿ ಡೆವಿಲ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಮೈಸೂರಿನಲ್ಲಿ ಹೇಳಿದ್ದಾರೆ.

  • Ram
  • Updated on: Dec 12, 2025
  • 7:31 pm

ದಿ ಡೆವಿಲ್, ಅಖಂಡ 2, ಧುರಂಧರ್ ಸಿನಿಮಾಗಳ ನಡುವೆ ಕ್ಲ್ಯಾಶ್: ಯಾರಿಗೆ ಲಾಭ?

ಗಲ್ಲಾಪೆಟ್ಟಿಗೆಯಲ್ಲಿ ‘ದಿ ಡೆವಿಲ್’, ‘ಧುರಂಧರ್’ ಹಾಗೂ ‘ಅಖಂಡ 2’ ಸಿನಿಮಾಗಳು ಪರಸ್ಪರ ಫೈಟ್ ನೀಡುತ್ತಿವೆ. ‘ಧುರಂಧರ್’ ಸಿನಿಮಾವನ್ನು 2ನೇ ವಾರ ಕೂಡ ಜನರು ಮುಗಿಬಿದ್ದು ನೋಡುತ್ತಿದ್ದಾರೆ. ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಬಾಲಯ್ಯ ಅಭಿನಯದ ‘ಅಖಂಡ 2’ ಸಿನಿಮಾಗೆ ಬಹುತೇಕ ನೆಗೆಟಿವ್ ಪ್ರತಿಕ್ರಿಯೆ ಸಿಗುತ್ತಿದೆ. ಈ ಬಗ್ಗೆ ಇಲ್ಲಿದೆ ವಿವರ..

ಒಂದಲ್ಲ, ಎರಡಲ್ಲ 20 ಹಿಟ್; ದರ್ಶನ್ ವೃತ್ತಿ ಜೀವನದ ಯಶಸ್ವಿ ಸಿನಿಮಾಗಳಿವು

ನಟ ದರ್ಶನ್ 'ಬಾಕ್ಸ್ ಆಫೀಸ್ ಸುಲ್ತಾನ್' ಎಂದೇ ಖ್ಯಾತರು. ಯಾವುದೇ ಪ್ರಭಾವವಿಲ್ಲದೆ ಚಿತ್ರರಂಗದಲ್ಲಿ ತಮ್ಮನ್ನು ತಾವು ಸಾಬೀತುಪಡಿಸಿಕೊಂಡ ಅವರು, 'ಮೆಜೆಸ್ಟಿಕ್' ಮೂಲಕ 'ದಾಸ'ನಾಗಿ ಹೊರಹೊಮ್ಮಿದರು. 'ಕರಿಯ', 'ಕಲಾಸಿಪಾಳ್ಯ', 'ರಾಬರ್ಟ್', 'ಕಾಟೇರ' ಸೇರಿ 20ಕ್ಕೂ ಹೆಚ್ಚು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅಪಾರ ಅಭಿಮಾನಿ ಬಳಗ ಹೊಂದಿರುವ ದರ್ಶನ್, ನಿರ್ಮಾಪಕರಿಗೆ ಲಾಭ ತಂದುಕೊಡುವ ಗ್ಯಾರಂಟಿ ಸ್ಟಾರ್.

ಸಾವಿರದಿಂದ ಹಿಡಿದು 10 ಕೋಟಿ ರೂ. ಶ್ವಾನದವರೆಗೆ; ಡೆವಿಲ್ ನಾಯಕಿ ರಚನಾ ರೈ ಬರೆದ ಪುಸ್ತಕದ ವಿಶೇಷತೆ

Rachana Rai: ದರ್ಶನ್ ತೂಗುದೀಪ ಅವರ 'ಡೆವಿಲ್' ಚಿತ್ರದ ನಾಯಕಿ ರಚನಾ ರೈ ಶ್ವಾನಪ್ರಿಯೆ. ನಾಯಿಗಳ ಬಗ್ಗೆ ಅಪಾರ ತಿಳುವಳಿಕೆ ಹೊಂದಿರುವ ಇವರು 'ಓ ಮೈ ಡಾಗ್' ಅಂಕಣ ಮತ್ತು ಪುಸ್ತಕ ಬರೆದಿದ್ದಾರೆ. ವಿವಿಧ ತಳಿಗಳ ನಾಯಿಗಳ ಆರೈಕೆ, ಗುಣಲಕ್ಷಣಗಳ ಬಗ್ಗೆ ಮಾಹಿತಿ ನೀಡುವ ಈ ಕೃತಿ ಕನ್ನಡದಲ್ಲಿ ವಿಶಿಷ್ಟ. ಶ್ವಾನ ಪ್ರಿಯರಿಗೆ ಮಾರ್ಗದರ್ಶಿ. ಅನಾಥ ನಾಯಿಗಳ ಆರೈಕೆ ಕೇಂದ್ರ ತೆರೆಯುವ ಕನಸು ಅವರದ್ದು.

ದರ್ಶನ್ ವಿಷಯದಲ್ಲಿ ಗೊತ್ತಿದ್ದೂ ಕಣ್ಮುಚ್ಚಿ ಕೂತಿದ್ದಾರಾ ಪೊಲೀಸರು? ನಡೆದಿದೆ ದೊಡ್ಡ ಎಡವಟ್ಟು

ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದು, ಅವರ ಪಿಸ್ತೂಲ್ ಲೈಸೆನ್ಸ್ ರದ್ದುಗೊಂಡಿದೆ. ಆದರೆ, .22 ಎಂಎಂ ರೈಫಲ್ ಹಾಗೂ ಬುಲೆಟ್‌ಗಳು ಇನ್ನೂ ವಶಕ್ಕೆ ಪಡೆದಿಲ್ಲ. ಕೊಲೆ ಆರೋಪಿ ಬಳಿ ಶಸ್ತ್ರಾಸ್ತ್ರ ಇರುವುದು ಕಾನೂನು ಉಲ್ಲಂಘನೆ. ಮೈಸೂರು ಗ್ರಾಮಾಂತರ ಪೊಲೀಸರ ಈ ನಿರ್ಲಕ್ಷ್ಯ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

  • Kiran HV
  • Updated on: Dec 12, 2025
  • 9:31 am

ಅಪ್ಪ-ಅಮ್ಮ ಸತ್ರೂ ಓಕೆ, ದರ್ಶನ್ ಜೈಲಲ್ಲಿರೋದನ್ನ ನೋಡೋಕಾಕ್ತಿಲ್ಲ; ಫ್ಯಾನ್ಸ್ ಅಂಧಾಭಿಮಾನ

ನಟ ದರ್ಶನ್ ಅವರ ‘ಡೆವಿಲ್’ ಸಿನಿಮಾ 10 ಕೋಟಿ ಗಳಿಸಿ ಉತ್ತಮ ಆರಂಭ ಕಂಡಿದೆ. ಆದರೆ, ದರ್ಶನ್ ಜೈಲಿನಲ್ಲಿರುವಾಗ ಸಿನಿಮಾ ಬಿಡುಗಡೆಯಾದದ್ದು ಅಭಿಮಾನಿಗಳಲ್ಲಿ ತೀವ್ರ ಬೇಸರ ಮೂಡಿಸಿದೆ. ಕೆಲವರು "ತಂದೆ-ತಾಯಿ ಸತ್ತರೂ ಇಷ್ಟು ಬೇಸರವಾಗುವುದಿಲ್ಲ" ಎಂದು ಹೇಳಿದ್ದು ವೈರಲ್ ಆಗಿದೆ. ಇದು ಅಭಿಮಾನವಲ್ಲ, ಅಂಧಾಭಿಮಾನ ಎಂದು ಹಲವರು ಟೀಕಿಸಿದ್ದಾರೆ.

ಮೊದಲ ದಿನ ‘ಡೆವಿಲ್’ ಸಿಡಿಲಬ್ಬರದ ಕಲೆಕ್ಷನ್; ದರ್ಶನ್ ಫ್ಯಾನ್ಸ್ ಫುಲ್ ಖುಷ್

The Devil First Day Collection: ನಟ ದರ್ಶನ್ ಜೈಲಿನಲ್ಲಿದ್ದರೂ 'ಡೆವಿಲ್' ಸಿನಿಮಾ ಮೊದಲ ದಿನ ಭರ್ಜರಿ ಕಲೆಕ್ಷನ್ ಮಾಡಿದೆ. ಸಿನಿಮಾ ಭರ್ಜರಿ ಗಳಿಸಿದೆ. ಪ್ರಚಾರದ ಕೊರತೆ ಇದ್ದರೂ, ಅಭಿಮಾನಿಗಳು ಸಕ್ರಿಯವಾಗಿ ಪ್ರಚಾರ ಮಾಡಿ ಚಿತ್ರವನ್ನು ಯಶಸ್ವಿಗೊಳಿಸಿದ್ದಾರೆ. 'ಕಾಂತಾರ: ಚಾಪ್ಟರ್ 1' ನಂತರ ಇಷ್ಟು ದೊಡ್ಡ ಗಳಿಕೆ ಕಂಡ ಮೊದಲ ಕನ್ನಡ ಚಿತ್ರವಿದು. ಅಧಿಕ ಟಿಕೆಟ್ ದರವೂ ಕಲೆಕ್ಷನ್‌ಗೆ ನೆರವಾಗಿದೆ.

‘ದಿ ಡೆವಿಲ್’ ಸಿನಿಮಾ: 15 ದಿನಗಳಿಂದ ಮನೆಗೆ ಹೋಗಿಲ್ಲ ದರ್ಶನ್ ಫ್ಯಾನ್ಸ್

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರಕ್ಕೆ ದರ್ಶನ್ ಅಭಿಮಾನಿಗಳಿಂದ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಈ ಸಿನಿಮಾಗಾಗಿ ಅಭಿಮಾನಿಗಳು ಬಹಳ ದಿನಗಳಿಂದ ಕಾದಿದ್ದರು. ಚಿತ್ರದ ಬಿಡುಗಡೆಗೂ ಮುನ್ನವೇ ಅನೇಕ ದಿನಗಳಿಂದ ತಯಾರಿ ನಡೆಸಿದ್ದರು. ಈಗ ರಾಜ್ಯಾದ್ಯಂತ ದರ್ಶನ್ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ