Darshan Thoogudeepa
ನಟ ದರ್ಶನ್ ಅವರ ಪೂರ್ಣ ಹೆಸರು ದರ್ಶನ್ ತೂಗುದೀಪ. ಇವರು ಕನ್ನಡ ಚಿತ್ರರಂಗದ ಜನಪ್ರಿಯ ನಟ. 1977ರ ಫೆಬ್ರವರಿ 16ರಂದು ಕರ್ನಾಟಕದ ಮೈಸೂರಿನಲ್ಲಿ ಜನಿಸಿದ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ದರ್ಶನ್ ಅವರ ಚೊಚ್ಚಲ ಸಿನಿಮಾ ‘ಮೆಜೆಸ್ಟಿಕ್’ 2001ರಲ್ಲಿ ಬಿಡುಗಡೆಯಾಗಿತು. ಆ ಮೂಲಕ ಹೀರೋ ಆಗಿ ಅವರು ವೃತ್ತಿಜೀವನ ಆರಂಭಿಸಿದರು. ತಮ್ಮ ಅಭಿನಯದಿಂದ ವ್ಯಾಪಕವಾಗಿ ಮೆಚ್ಚುಗೆ ಪಡೆದ ದರ್ಶನ್ ಅವರು ವಿಶೇಷವಾಗಿ ಆ್ಯಕ್ಷನ್ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರ ಕೆಲವು ಗಮನಾರ್ಹ ಚಲನಚಿತ್ರಗಳಲ್ಲಿ ‘ಕರಿಯ’, ‘ನಮ್ಮ ಪ್ರೀತಿಯ ರಾಮು’, ‘ಸಂಗೊಳ್ಳಿ ರಾಯಣ್ಣ’, ‘ಕಲಾಸಿಪಾಳ್ಯ’, ‘ಅಯ್ಯ’, ‘ನವಗ್ರಹ’, ‘ಯಜಮಾನ’, ‘ರಾಬರ್ಟ್’, ‘ಕಾಟೇರ’ ಮುಂತಾದ ಸಿನಿಮಾಗಳಿವೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ದರ್ಶನ್ ಅವರು ಸಿನಿಮಾ ಮಾತ್ರವಲ್ಲದೇ ಪರೋಪಕಾರಿ, ಸಮಾಜಮುಖಿ ಚಟುವಟಿಕೆಗಳಿಂದಲೂ ಫೇಮಸ್ ಆಗಿದ್ದಾರೆ. ದರ್ಶನ್ ಅವರದ್ದು ಕಲಾವಿದರ ಕುಟುಂಬ. ಅವರ ತಂದೆ ತೂಗುದೀಪ ಶ್ರೀನಿವಾಸ್ ಅವರು ಕನ್ನಡ ಚಿತ್ರರಂಗದಲ್ಲಿ ಖ್ಯಾತ ಖಳನಟ ಆಗಿದ್ದರು. ಅವರ ಸಹೋದರ ದಿನಕರ್ ತೂಗುದೀಪ ನಿರ್ದೇಶಕನಾಗಿ, ನಟನಾಗಿ ಗುರುತಿಸಿಕೊಂಡಿದ್ದಾರೆ.
ಮಲ್ಲಿಕಾರ್ಜುನ್ ನಂಬಿ ಮೋಸ ಹೋಗಬೇಡಿ: ಎಚ್ಚರಿಕೆ ನೀಡಿದ ದಿನಕರ್ ತೂಗುದೀಪ
ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಮೇಲೆ ದಿನಕರ್ ತೂಗುದೀಪ ಹಲವು ಆರೋಪ ಮಾಡಿದ್ದಾರೆ. ‘ನಮ್ಮ ನಂಬಿಕೆಗೆ ದ್ರೋಹ ಮಾಡಿರುವ ಮೋಸಗಾರ ಇವನು’ ಎಂದು ಅವರು ಖಾರವಾಗಿ ಹೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ದಿನಕರ್ ತೂಗುದೀಪ ಅವರು ಹಂಚಿಕೊಂಡಿರುವ ಪೋಸ್ಟ್ ವೈರಲ್ ಆಗಿದೆ.
- Madan Kumar
- Updated on: Apr 21, 2026
- 8:09 pm
ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯಿಸಿದ್ದು ಹೇಗೆ ನೋಡಿ..
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಜೈಲಿನಲ್ಲಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಇರುವ ಅವರನ್ನು ನೋಡಲು ಇಂದು (ಏ.16) ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದರು. ಅವರ ಜತೆ ನಟ ಧನ್ವೀರ್ ಸಹ ಬಂದಿದ್ದಾರೆ. ಜೈಲಿನ ಆವರಣದಲ್ಲಿ ನಡೆದು ಬರುವಾಗ ಮಾಧ್ಯಮಗಳ ಕ್ಯಾಮೆರಾ ನೋಡಿ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.
- Ramu Ram
- Updated on: Apr 16, 2026
- 9:51 pm
ದರ್ಶನ್ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಎಲ್ಲವನ್ನೂ ಹೇಳಿದ ಮಲ್ಲಿಕಾರ್ಜುನ್
ನಟ ದರ್ಶನ್ ಅವರಿಗೆ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ್ ಹಲವು ವರ್ಷಗಳಿಂದ ನಾಪತ್ತೆ ಆಗಿದ್ದರು. ಅವರು ಬದುಕಿಲ್ಲ ಎಂಬ ಅಭಿಪ್ರಾಯ ಕೆಲವರಿಗೆ ಇತ್ತು. ಆದರೆ ಈಗ ಮಲ್ಲಿಕಾರ್ಜುನ್ ಏಕಾಏಕಿ ಪ್ರತ್ಯಕ್ಷ ಆಗಿದ್ದಾರೆ. ತಾವು ಊರು ಬಿಟ್ಟು ಹೋಗಿ ಕಣ್ಮರೆ ಆಗಲು ಕಾರಣ ಏನು ಎಂಬುದನ್ನು ಈಗ ವಿವರಿಸಿದ್ದಾರೆ.
- Malatesh Jaggin
- Updated on: Apr 16, 2026
- 5:31 pm
ತಲೆಮರಿಸಿಕೊಳ್ಳುವಷ್ಟು ಸಾಲ ಆಗಿದ್ದೇಕೆ? ವಿವರಿಸಿದ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ
ಕನ್ನಡದ ಸ್ಟಾರ್ ನಟ ದರ್ಶನ್ ಅವರು 7-8 ವರ್ಷಗಳಿಂದ ತಲೆಮರಿಸಿಕೊಂಡಿದ್ದರು. ಚಿತ್ರರಂಗದಲ್ಲಿ ಹೆಸರು ಮಾಡಿದ ಬೆನ್ನಲ್ಲೇ ಅವರು ಸಾಕಷ್ಟು ಸಾಲ ಮಾಡಿಕೊಳ್ಳುವ ಪರಿಸ್ಥಿತಿ ಬಂತು. ದರ್ಶನ್ ಮ್ಯಾನೇಜರ್ ಕೂಡ ಆಗಿದ್ದರು ಅವರು. ಅವರು ತಲೆಮರಿಸಿಕೊಂಡ ಬಗ್ಗೆ ಮಾತನಾಡಿದ್ದಾರೆ. ಇದರ ಹಿಂದಿನ ಕಾರಣವನ್ನು ಅವರು ವಿವರಿಸಿದ್ದಾರೆ.
- Rajesh Duggumane
- Updated on: Apr 16, 2026
- 3:12 pm
‘ದರ್ಶನ್ ಮೇಲಿನ ಗೌರವಕ್ಕೆ ನಾನು ಊರು ಬಿಟ್ಟೆ’; ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಶಾಕಿಂಗ್ ಹೇಳಿಕೆ
ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಹಲವು ವರ್ಷಗಳ ನಂತರ ಮರಳಿ ಪತ್ತೆಯಾಗಿ, ತಾವು ನಾಪತ್ತೆಯಾಗಿದ್ದರ ಹಿಂದಿನ ಕಾರಣ ವಿವರಿಸಿದ್ದಾರೆ. ಸಾಲಬಾಧೆ, ವ್ಯವಹಾರದಲ್ಲಿ ನಷ್ಟ ಅನುಭವಿಸಿ ಹಲವು ನಗರಗಳಲ್ಲಿ ಕೆಲಸ ಮಾಡಿದ್ದರು. ಡಿ ಬಾಸ್ ದರ್ಶನ್ ಅವರಿಂದ 1 ಕೋಟಿ ಹಣ ಪಡೆದಿದ್ದರು. ತಮ್ಮ ಕಷ್ಟದ ದಿನಗಳ ಸತ್ಯ ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡಿದ್ದಕ್ಕೆ ಕ್ಷಮೆ ಕೇಳಿದ್ದಾರೆ.
- Rajesh Duggumane
- Updated on: Apr 16, 2026
- 12:16 pm
ನಾಪತ್ತೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ದಿಢೀರ್ ಪತ್ತೆ; ಹೇಳಿದ್ದೇನು?
ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಸಂಕನಗೌಡರ ನಾಪತ್ತೆ ರಹಸ್ಯ ರಿವೀಲ್ ಆಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಹೆಸರು ಚರ್ಚೆಗೆ ಬಂದಿತ್ತು. ತಮ್ಮ ವೈಯಕ್ತಿಕ ಸಮಸ್ಯೆಗಳು ಮತ್ತು ಉದ್ಯಮದಲ್ಲಿ ಆದ ನಷ್ಟದಿಂದ ತಾತ್ಕಾಲಿಕವಾಗಿ ಬೆಂಗಳೂರು ತೊರೆದಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ. ಮುಂದಿನ ಯೋಜನೆಗಳು ಬಗ್ಗೆ ಮಾತನಾಡಲು ಪತ್ರಿಕಾಗೋಷ್ಠಿ ಕರೆದಿದ್ದಾರೆ.
- Rajesh Duggumane
- Updated on: Apr 16, 2026
- 8:57 am
ಇದು ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ನಿರ್ದೇಶಕರ ಸ್ಪಷ್ಟನೆ
ಸತ್ಯ ಘಟನೆಗಳನ್ನು ಆಧರಿಸಿ ‘ಬಾಸ್’ ಸಿನಿಮಾ ನಿರ್ಮಾಣ ಆಗಿದೆ. ಈ ಚಿತ್ರಕ್ಕೆ ಲವ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕಥೆಗೂ ನಟ ದರ್ಶನ್ ಅವರ ಜೀವನದ ಘಟನೆಗಳಿಗೂ ಸಾಮ್ಯತೆ ಕಾಣಿಸಿದೆ ಎಂಬ ಆರೋಪ ಇದೆ. ಆ ಬಗ್ಗೆ ನಿರ್ದೇಶಕರು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
- Madan Kumar
- Updated on: Apr 2, 2026
- 10:47 pm
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ರಿಲೀಸ್ ಆಗಲಿಲ್ಲ: ಅಸಲಿ ಕಾರಣ ತಿಳಿಸಿದ ಪ್ರಥಮ್
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಎದುರೇ ತಮ್ಮ ‘ಕರ್ನಾಟಕದ ಅಳಿಯ’ ಚಿತ್ರವನ್ನು ರಿಲೀಸ್ ಮಾಡುವುದಾಗಿ ನಟ ಪ್ರಥಮ್ ಈ ಮೊದಲು ಸವಾಲು ಹಾಕಿದ್ದರು. ಆದರೆ ಆ ಸಿನಿಮಾ ರಿಲೀಸ್ ಆಗಲೇ ಇಲ್ಲ. ಯಾಕೆ ಎಂಬ ಪ್ರಶ್ನೆ ಇದೆ. ಅದಕ್ಕೆ ಪ್ರಥಮ್ ಅವರು ಉತ್ತರ ನೀಡಿದ್ದಾರೆ.
- Mangala RR
- Updated on: Mar 26, 2026
- 10:37 pm
ವಿವಾದಗಳ ಬೆನ್ನಲ್ಲೇ ಸೆನ್ಸಾರ್ ಪಾಸ್ ಆದ ‘ಬಾಸ್’: ಶೀಘ್ರವೇ ರಿಲೀಸ್ ಆಗಲಿದೆ ಸಿನಿಮಾ
ದರ್ಶನ್ ಅವರ ಜೀವನದ ಘಟನೆಗಳಿಗೂ ಬಾಸ್ ಸಿನಿಮಾದ ಕಥೆಗೂ ಸಾಮ್ಯತೆ ಇದೆ ಎಂಬ ಆರೋಪವಿದೆ. ಅದರ ನಡುವೆಯೂ ಈ ಸಿನಿಮಾಗೆ ಸೆನ್ಸಾರ್ ಮಂಡಳಿಯಿಂದ ‘ಯು/ಎ’ ಪ್ರಮಾಣ ಪತ್ರ ನೀಡಲಾಗಿದೆ. ಎಲ್ಲವೂ ಚಿತ್ರತಂಡದ ಪ್ಲ್ಯಾನ್ ಪ್ರಕಾರ ನಡೆದರೆ ಏಪ್ರಿಲ್ ತಿಂಗಳಲ್ಲಿ ‘ಬಾಸ್’ ಸಿನಿಮಾ ಬಿಡುಗಡೆ ಆಗಲಿದೆ.
- Mangala RR
- Updated on: Mar 24, 2026
- 5:25 pm
ರೇಣುಕಾಸ್ವಾಮಿ ಕೊಲೆ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ದರ್ಶನ್ ಪರ ವಕೀಲರು ‘ಬಾಸ್’ ಸಿನಿಮಾಗೆ ಪ್ರಮಾಣಪತ್ರ ನೀಡಬಾರದು ಎಂದು ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಿದ್ದಾರೆ. ಈ ಬಗ್ಗೆ ಬಾಸ್ ಚಿತ್ರದ ನಟ ತನುಷ್ ಶಿವಣ್ಣ ಅವರು ಮಾತನಾಡಿದ್ದಾರೆ. ಸಿನಿಮಾದ ಪ್ರಚಾರಕ್ಕಾಗಿ ನಾವು ಈ ರೀತಿ ಮಾಡಿಲ್ಲ. ಇದು ರೇಣುಕಾಸ್ವಾಮಿ ಕಥೆ ಅಲ್ಲ ಎಂದು ತನುಷ್ ಶಿವಣ್ಣ ಹೇಳಿದ್ದಾರೆ.
- Mangala RR
- Updated on: Mar 16, 2026
- 10:58 pm
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ತನುಷ್ ಶಿವಣ್ಣ ನಟನೆಯ ‘ಬಾಸ್’ ಚಿತ್ರಕ್ಕೆ ವಿ. ಲವ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕಥೆಗೂ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ಸಾಮ್ಯತೆ ಇದೆ ಎಂಬ ಆರೋಪ ಕೇಳಿಬಂದಿದೆ. ಈ ಚಿತ್ರಕ್ಕೆ ಸೆನ್ಸಾರ್ ನೀಡಬಾರದು ಎಂದು ದರ್ಶನ್ ಪರ ವಕೀಲರು ನೋಟಿಸ್ ನೀಡಿದ್ದಾರೆ. ಆ ಬಗ್ಗೆ ನಿರ್ದೇಶಕರು ಪ್ರತಿಕ್ರಿಯೆ ನೀಡಿದ್ದಾರೆ.
- Mangala RR
- Updated on: Mar 16, 2026
- 8:10 pm
‘ಬಾಸ್’ ಸಿನಿಮಾಗೆ ಸಂಕಷ್ಟ; ನೋಟಿಸ್ ಕೊಟ್ಟ ದರ್ಶನ್ ಲಾಯರ್
ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವಾಗಲೇ, ‘ಬಾಸ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದ ಟೀಸರ್ ರೇಣುಕಾಸ್ವಾಮಿ ಪ್ರಕರಣವನ್ನು ಹೋಲುತ್ತದೆ ಮತ್ತು "ನೈಜ ಘಟನೆ ಆಧಾರಿತ" ಎಂದು ಹೇಳಿಕೊಳ್ಳುವುದರಿಂದ ವಿವಾದ ಸೃಷ್ಟಿಯಾಗಿದೆ. ಪ್ರಕರಣ ಇನ್ನೂ ನ್ಯಾಯಾಲಯದಲ್ಲಿರುವುದರಿಂದ, ದರ್ಶನ್ ಪರ ವಕೀಲರು ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಿ, ಚಿತ್ರಕ್ಕೆ ಪ್ರಮಾಣೀಕರಣ ನೀಡದಂತೆ ಕೋರಿದ್ದಾರೆ.
- Mangala RR
- Updated on: Mar 16, 2026
- 3:12 pm