Darshan Thoogudeepa
ನಟ ದರ್ಶನ್ ಅವರ ಪೂರ್ಣ ಹೆಸರು ದರ್ಶನ್ ತೂಗುದೀಪ. ಇವರು ಕನ್ನಡ ಚಿತ್ರರಂಗದ ಜನಪ್ರಿಯ ನಟ. 1977ರ ಫೆಬ್ರವರಿ 16ರಂದು ಕರ್ನಾಟಕದ ಮೈಸೂರಿನಲ್ಲಿ ಜನಿಸಿದ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ದರ್ಶನ್ ಅವರ ಚೊಚ್ಚಲ ಸಿನಿಮಾ ‘ಮೆಜೆಸ್ಟಿಕ್’ 2001ರಲ್ಲಿ ಬಿಡುಗಡೆಯಾಗಿತು. ಆ ಮೂಲಕ ಹೀರೋ ಆಗಿ ಅವರು ವೃತ್ತಿಜೀವನ ಆರಂಭಿಸಿದರು. ತಮ್ಮ ಅಭಿನಯದಿಂದ ವ್ಯಾಪಕವಾಗಿ ಮೆಚ್ಚುಗೆ ಪಡೆದ ದರ್ಶನ್ ಅವರು ವಿಶೇಷವಾಗಿ ಆ್ಯಕ್ಷನ್ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರ ಕೆಲವು ಗಮನಾರ್ಹ ಚಲನಚಿತ್ರಗಳಲ್ಲಿ ‘ಕರಿಯ’, ‘ನಮ್ಮ ಪ್ರೀತಿಯ ರಾಮು’, ‘ಸಂಗೊಳ್ಳಿ ರಾಯಣ್ಣ’, ‘ಕಲಾಸಿಪಾಳ್ಯ’, ‘ಅಯ್ಯ’, ‘ನವಗ್ರಹ’, ‘ಯಜಮಾನ’, ‘ರಾಬರ್ಟ್’, ‘ಕಾಟೇರ’ ಮುಂತಾದ ಸಿನಿಮಾಗಳಿವೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ದರ್ಶನ್ ಅವರು ಸಿನಿಮಾ ಮಾತ್ರವಲ್ಲದೇ ಪರೋಪಕಾರಿ, ಸಮಾಜಮುಖಿ ಚಟುವಟಿಕೆಗಳಿಂದಲೂ ಫೇಮಸ್ ಆಗಿದ್ದಾರೆ. ದರ್ಶನ್ ಅವರದ್ದು ಕಲಾವಿದರ ಕುಟುಂಬ. ಅವರ ತಂದೆ ತೂಗುದೀಪ ಶ್ರೀನಿವಾಸ್ ಅವರು ಕನ್ನಡ ಚಿತ್ರರಂಗದಲ್ಲಿ ಖ್ಯಾತ ಖಳನಟ ಆಗಿದ್ದರು. ಅವರ ಸಹೋದರ ದಿನಕರ್ ತೂಗುದೀಪ ನಿರ್ದೇಶಕನಾಗಿ, ನಟನಾಗಿ ಗುರುತಿಸಿಕೊಂಡಿದ್ದಾರೆ.
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ನಡೆಯಲಿದೆ ಬೃಹತ್ ಪ್ರತಿಭಟನೆ
ನಟ ದರ್ಶನ್ ಅವರು ಸದ್ಯ ಜೈಲಿನಲ್ಲ ಇದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಅವರು ಸಾಕಷ್ಟು ಆರೋಪ ಕೇಳಿ ಬಂದಿದೆ. ಅದರಲ್ಲಿ ಪೊಲೀಸರು ಸುಳ್ಳು ದಾಖಲೆ ಸೃಷ್ಟಿ ಮಾಡಿದ್ದಾರೆ ಎಂಬುದು ಕೂಡ ಒಂದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೃಹತ್ ಪ್ರತಿ ಭಟನೆ ನಡೆಸಲು ಸಿದ್ಧಮಾಡಿಕೊಳ್ಳಲಾಗಿದೆ.
- Rajesh Duggumane
- Updated on: Feb 28, 2026
- 1:01 pm
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಭವಿಷ್ಯದ ಬಗ್ಗೆ ಮಾತಾಡಿದ ಕೋಡಿಮಠದ ಸ್ವಾಮೀಜಿ
ಜೈಲಿನಿಂದ ಹೊರಬಂದ ಬಳಿಕ ದರ್ಶನ್ ರಾಜಕೀಯಕ್ಕೆ ಬರುತ್ತಾರೆ ಎಂಬ ವದಂತಿ ಇದೆ. ಆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೋಡಿಶ್ರೀಗಳು, ‘ದರ್ಶನ್ ಹೊರಬಂದ ಮೇಲೆ ನೋಡೋಣ’ ಎಂದಿದ್ದಾರೆ. ದರ್ಶನ್ ವಿಷಯ ನ್ಯಾಯಾಲಯದಲ್ಲಿ ಇರುವುದರಿಂದ ಆ ಬಗ್ಗೆ ತಾವು ಮಾತನಾಡುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.
- Madan Kumar
- Updated on: Feb 26, 2026
- 5:42 pm
ದರ್ಶನ್ ಕೇಸ್: ಪೊಲೀಸರ ತನಿಖೆ ಬಗ್ಗೆ ಅನುಮಾನ; ಗೃಹ ಸಚಿವರ ಸ್ಪಷನೆ ಇಲ್ಲಿದೆ..
ರೇಣುಕಾಸ್ವಾಮಿ ಕೇಸ್ನ ಆರೋಪಿಗಳನ್ನು ಸುಳ್ಳು ಮಹಜರು ಮೂಲಕ ಸಿಕ್ಕಿಹಾಕಿಸಲು ಪೊಲೀಸರು ಪ್ರಯತ್ನಿಸಿದ್ದಾರೆ ಎಂಬ ಆರೋಪ ಎದುರಾಗಿದೆ. ಆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ವಕೀಲರ ಆಪಾದನೆಗಳಿಗೆ ಪೊಲೀಸರು ಉತ್ತರ ಕೊಡುತ್ತಾರೆ ಎಂದು ಅವರು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..
- Madan Kumar
- Updated on: Feb 24, 2026
- 3:57 pm
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್ಗೆ ಕೋರ್ಟ್ನಿಂದ ಸಿಕ್ತು ಸಣ್ಣ ರಿಲೀಫ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದು, ಅವರಿಗೆ ನ್ಯಾಯಾಲಯದಿಂದ ಸಣ್ಣ ರಿಲೀಫ್ ಸಿಕ್ಕಿದೆ. ಅಮಾನತುಗೊಂಡಿದ್ದ ಅವರ ಗನ್ ಲೈಸೆನ್ಸ್ಗೆ ಹೈಕೋರ್ಟ್ ಮಾರ್ಚ್ 6ರವರೆಗೆ ಮಧ್ಯಂತರ ತಡೆ ನೀಡಿದೆ. ದರ್ಶನ್ ಪರ ವಕೀಲರ ವಾದ ಪುರಸ್ಕರಿಸಿದ ನ್ಯಾಯಾಲಯದ ಈ ಆದೇಶದಿಂದ ನಟನಿಗೆ ತಾತ್ಕಾಲಿಕ ನಿರಾಳತೆ ಸಿಕ್ಕಂತಾಗಿದೆ, ಆದರೆ ಅವರು ಇನ್ನೂ ಜೈಲಿನಲ್ಲೇ ಇದ್ದಾರೆ.
- Ramesha M
- Updated on: Feb 23, 2026
- 3:10 pm
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಜೊತೆ ನಿರ್ದೇಶಕ ತರುಣ್ ಸುಧೀರ್ ಅವರು ‘ಕಾಟೇರ’ ಸಿನಿಮಾ ಮಾಡಿದ್ದರು. ಆ ಚಿತ್ರ ಸೂಪರ್ ಹಿಟ್ ಆಗಿತ್ತು. ಮತ್ತೆ ಅವರಿಬ್ಬರು ಒಟ್ಟಿಗೆ ಸಿನಿಮಾ ಮಾಡಲಿ ಎಂಬುದು ಫ್ಯಾನ್ಸ್ ಆಸೆ. ಆದರೆ ಸದ್ಯಕ್ಕೆ ದರ್ಶನ್ ಅವರು ಜೈಲಿನಲ್ಲಿ ಇದ್ದಾರೆ.
- Mangala RR
- Updated on: Feb 19, 2026
- 10:35 pm
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರು ಕೊಲೆ ಆರೋಪದ ಮೇಲೆ ಜೈಲಿನಲ್ಲಿ ಇದ್ದಾರೆ. ಇಂದು (ಫೆ.16) ಅವರ ಜನ್ಮದಿನ. ಅವರನ್ನು ನೋಡಲು ಕುಟುಂಬದವರು ಮತ್ತು ಆಪ್ತರು ಬಂದಿದ್ದರು. ವಾಪಸ್ ತೆರಳುವಾಗಿ ವಿಜಯಲಕ್ಷ್ಮಿ ಅವರ ಮುಖದಲ್ಲಿ ನಗು ಕಾಣಿಸಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..
- Madan Kumar
- Updated on: Feb 16, 2026
- 8:58 pm
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ನಟ ದರ್ಶನ್ ಅವರಿಗೆ ಇಂದು (ಫೆ.16) ಹುಟ್ಟುಹಬ್ಬ. ಆದರೆ ಈಗ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಆದ್ದರಿಂದ ಅಭಿಮಾನಿಗಳಿಗೆ ಹಾಗೂ ಕುಟುಂಬದವರಿಗೆ ಬೇಸರ ಇದೆ. ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್, ಸಹೋದರ ದಿನಕರ್ ತೂಗುದೀಪ ಅವರು ಜೈಲಿಗೆ ಭೇಟಿ ನೀಡಿ ವಿಶ್ ಮಾಡಿದ್ದಾರೆ.
- Madan Kumar
- Updated on: Feb 16, 2026
- 6:56 pm
ಪವಿತ್ರಾಗೆ ದೊಡ್ಡ ನಿರಾಸೆ; ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ
Pavitra Gowda Bail Plea: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರ ಮಧ್ಯಂತರ ಜಾಮೀನು ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಮಗಳ ಪರೀಕ್ಷೆ ಕಾರಣ ನೀಡಿ 25 ದಿನಗಳ ಜಾಮೀನು ಕೋರಿದ್ದರು. ಆದರೆ, ಕೋರ್ಟ್ನ ನಿರಾಕರಣೆಯಿಂದ ಅವರ ಜೈಲುವಾಸ ಮುಂದುವರಿಯಲಿದೆ.
- Ramesha M
- Updated on: Feb 16, 2026
- 1:16 pm
‘ಪ್ರತಿ ದಿನ ನಿನ್ನ ಮಿಸ್ ಮಾಡಿಕೊಳ್ತೀನಿ’; ದರ್ಶನ್ ಬರ್ತ್ಡೇಗೆ ರಕ್ಷಿತಾ ಭಾವುಕ ಪೋಸ್ಟ್
ನಟ ದರ್ಶನ್ ಈ ಬಾರಿ ಜೈಲಿನಲ್ಲೇ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ನ ಆರೋಪಿಯಾಗಿರುವ ದರ್ಶನ್ಗೆ ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿದೆ. ಕುಟುಂಬ ಮತ್ತು ಅಭಿಮಾನಿಗಳಿಗೆ ಈ ಸನ್ನಿವೇಶ ಬೇಸರ ಮೂಡಿಸಿದೆ. ಗೆಳೆಯನನ್ನು ನೆನೆದು ನಟಿ ರಕ್ಷಿತಾ ಭಾವುಕ ಪೋಸ್ಟ್ ಹಾಕಿದ್ದು, 'ನಿನ್ನನ್ನು ಪ್ರತಿ ದಿನ ಮಿಸ್ ಮಾಡಿಕೊಳ್ಳುತ್ತೇನೆ' ಎಂದಿದ್ದಾರೆ.
- Rajesh Duggumane
- Updated on: Feb 16, 2026
- 10:06 am
ದರ್ಶನ್ ಪ್ರಾಣಿ ಪ್ರಿಯನಾಗಲು ಕಾರಣವಾದ ಅಂಶವೇನು ಗೊತ್ತೇ?
ನಟ ದರ್ಶನ್ ಅವರ ಬರ್ತ್ಡೇ ಸಂಭ್ರಮದಲ್ಲಿ, ಅವರ ಪ್ರಾಣಿಪ್ರಿಯತೆ ಎದ್ದು ಕಾಣುತ್ತದೆ. ಅರ್ಜುನ ಆನೆ ನಿಧನದ ನೋವಿನಲ್ಲಿ, ದರ್ಶನ್ ಸ್ಮಾರಕಕ್ಕೆ ಕಲ್ಲುಗಳನ್ನು ನೀಡಿದ್ದರು. ಮೃಗಾಲಯದಲ್ಲಿ ಪ್ರಾಣಿಗಳನ್ನು ದತ್ತು ಪಡೆಯುವ ಮೂಲಕ, ಅಭಿಮಾನಿಗಳಿಗೂ ಪ್ರೇರಣೆ ನೀಡಿದ್ದಾರೆ. ಮೈಸೂರಿನ ಫಾರ್ಮ್ಹೌಸ್ನಲ್ಲಿ ದನ-ಕುದುರೆ ಸಾಕಾಣಿಕೆ ಮೂಲಕ ತಮ್ಮ ಪ್ರಾಣಿ ಪ್ರೀತಿಯನ್ನು ನಿರಂತರವಾಗಿ ಪೋಷಿಸುತ್ತಿದ್ದಾರೆ.
- Shreelaxmi H
- Updated on: Feb 16, 2026
- 7:52 am
‘ಪ್ರತಿ ದಿನವನ್ನೂ ಸಂಭ್ರಮಿಸೋ ವ್ಯಕ್ತಿಗೆ ಜನ್ಮದಿನದ ಶುಭಾಶಯ’; ದರ್ಶನ್ಗೆ ವಿಜಯಲಕ್ಷ್ಮೀ ವಿಶ್
Darshan Thoogudeepa Birthday: ನಟ ದರ್ಶನ್ ಜೈಲಿನಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಅವರಿಗೆ ಪತ್ನಿ ವಿಜಯಲಕ್ಷ್ಮೀ ಭಾವುಕರಾಗಿ ಶುಭಾಶಯ ಕೋರಿದ್ದಾರೆ. ಅಭಿಮಾನಿಗಳು ಸಾಮಾಜಿಕ ಕಾರ್ಯಗಳ ಮೂಲಕ ಪ್ರೀತಿ ತೋರುತ್ತಿದ್ದರೂ, ನೆಚ್ಚಿನ ನಟ ಜೈಲಿನಲ್ಲಿರುವುದು ಅವರಿಗೆ ನೋವುಂಟು ಮಾಡಿದೆ. ಜನ್ಮದಿನದಂದು ದೇವಸ್ಥಾನಕ್ಕೆ ತೆರಳಿ ದರ್ಶನ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.
- Rajesh Duggumane
- Updated on: Feb 16, 2026
- 7:00 am
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಸಿಗಲಿಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಬಿಗ್ ಬಾಸ್ ಮುಗಿದ ಬಳಿಕ ದರ್ಶನ್ ಅವರನ್ನು ಗಿಲ್ಲಿ ನಟ ಭೇಟಿ ಮಾಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆ ಬಗ್ಗೆ ಸ್ವತಃ ಗಿಲ್ಲಿ ಅವರು ಈಗ ಪ್ರತಿಕ್ರಿಯೆ ನೀಡಿದ್ದಾರೆ. ಗಿಲ್ಲಿ ಅವರು ದರ್ಶನ್ ಭೇಟಿಗೆ ಪ್ರಯತ್ನ ಮಾಡಿದ್ದಾರೆ. ಆದರೆ ಭೇಟಿಗೆ ಅವಕಾಶ ಇಲ್ಲ ಎಂಬುದು ತಿಳಿದುಬಂದಿದೆ.
- Madan Kumar
- Updated on: Feb 9, 2026
- 9:40 pm