AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Thoogudeepa

Darshan Thoogudeepa

ನಟ ದರ್ಶನ್ ಅವರ ಪೂರ್ಣ ಹೆಸರು ದರ್ಶನ್ ತೂಗುದೀಪ. ಇವರು ಕನ್ನಡ ಚಿತ್ರರಂಗದ ಜನಪ್ರಿಯ ನಟ. 1977ರ ಫೆಬ್ರವರಿ 16ರಂದು ಕರ್ನಾಟಕದ ಮೈಸೂರಿನಲ್ಲಿ ಜನಿಸಿದ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ದರ್ಶನ್ ಅವರ ಚೊಚ್ಚಲ ಸಿನಿಮಾ ‘ಮೆಜೆಸ್ಟಿಕ್’ 2001ರಲ್ಲಿ ಬಿಡುಗಡೆಯಾಗಿತು. ಆ ಮೂಲಕ ಹೀರೋ ಆಗಿ ಅವರು ವೃತ್ತಿಜೀವನ ಆರಂಭಿಸಿದರು. ತಮ್ಮ ಅಭಿನಯದಿಂದ ವ್ಯಾಪಕವಾಗಿ ಮೆಚ್ಚುಗೆ ಪಡೆದ ದರ್ಶನ್​ ಅವರು ವಿಶೇಷವಾಗಿ ಆ್ಯಕ್ಷನ್ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರ ಕೆಲವು ಗಮನಾರ್ಹ ಚಲನಚಿತ್ರಗಳಲ್ಲಿ ‘ಕರಿಯ’, ‘ನಮ್ಮ ಪ್ರೀತಿಯ ರಾಮು’, ‘ಸಂಗೊಳ್ಳಿ ರಾಯಣ್ಣ’, ‘ಕಲಾಸಿಪಾಳ್ಯ’, ‘ಅಯ್ಯ’, ‘ನವಗ್ರಹ’, ‘ಯಜಮಾನ’, ‘ರಾಬರ್ಟ್​’, ‘ಕಾಟೇರ’ ಮುಂತಾದ ಸಿನಿಮಾಗಳಿವೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ದರ್ಶನ್ ಅವರು ಸಿನಿಮಾ ಮಾತ್ರವಲ್ಲದೇ ಪರೋಪಕಾರಿ, ಸಮಾಜಮುಖಿ ಚಟುವಟಿಕೆಗಳಿಂದಲೂ ಫೇಮಸ್​ ಆಗಿದ್ದಾರೆ. ದರ್ಶನ್​ ಅವರದ್ದು ಕಲಾವಿದರ ಕುಟುಂಬ. ಅವರ ತಂದೆ ತೂಗುದೀಪ ಶ್ರೀನಿವಾಸ್​ ಅವರು ಕನ್ನಡ ಚಿತ್ರರಂಗದಲ್ಲಿ ಖ್ಯಾತ ಖಳನಟ ಆಗಿದ್ದರು. ಅವರ ಸಹೋದರ ದಿನಕರ್​ ತೂಗುದೀಪ ನಿರ್ದೇಶಕನಾಗಿ, ನಟನಾಗಿ ಗುರುತಿಸಿಕೊಂಡಿದ್ದಾರೆ.

ಇನ್ನೂ ಹೆಚ್ಚು ಓದಿ

ರೇಣುಕಾ ಸ್ವಾಮಿ ಪ್ರಕರಣ: ನಟ ದರ್ಶನ್ ಖುದ್ದು ಹಾಜರಿ ಕೋರಿ ವಕೀಲರ ಅರ್ಜಿ

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಆಗಿರುವ ದರ್ಶನ್ ಆಪ್ತ ಪ್ರದೋಷ್ ತಮ್ಮನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಅರ್ಜಿ ಹಾಕಿದ್ದು, ಇದು ದರ್ಶನ್​ಗೆ ಆತಂಕ ತಂದಿರುವ ಸಾಧ್ಯತೆ ಇದೆ. ಜೊತೆಗೆ ಹಲವು ಸಾಕ್ಷ್ಯಗಳ ವಿಚಾರಣೆಯೂ ನಡೆಯುತ್ತಿದೆ. ಇದೀಗ ನಾಳಿನ (ಆಗಸ್ಟ್ 12) ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಿಗೆ ಕೋರಿ ದರ್ಶನ್ ಪರ ವಕೀಲರು ಅರ್ಜಿ ಹಾಕಿದ್ದಾರೆ.

ದರ್ಶನ್​ಗೆ ದೊಡ್ಡ ಸಂಕಷ್ಟ; ಪ್ರದೋಷ್ ಅರ್ಜಿಗೆ ಆಕ್ಷೇಪಣೆ ಪರಿಗಣಿಸಲು ಕೋರ್ಟ್ ನಕಾರ

ಖ್ಯಾತ ನಟ ದರ್ಶನ್ ತೂಗುದೀಪ ಅವರ ಆಪ್ತ ಬಳಗದಲ್ಲಿ ಪ್ರದೋಷ್ ಕೂಡ ಗುರುತಿಸಿಕೊಂಡಿದ್ದ. ಆದರೆ ಈಗ ಪ್ರದೋಷ್ ಮಾಫಿ ಸಾಕ್ಷಿಯಾಗಲು ಮುಂದಾಗಿರುವುದು ಅಚ್ಚರಿ ಮೂಡಿಸಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಕೊಲೆ ನಡೆದ ದಿನ ಏನೆಲ್ಲ ಆಯಿತು ಎಂಬುದನ್ನು ವಿವರಿಸಲು ಪ್ರದೋಷ್ ಮುಂದಾಗಿದ್ದಾನೆ.

ಪ್ರದೋಷ್ ಮಾಫಿ ಸಾಕ್ಷಿ; ಕೋರ್ಟ್​​ನಲ್ಲಿ ನಡೆದ ಪ್ರಕರಣದ ವಿಚಾರಣೆ ಇಲ್ಲಿದೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ14 ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗುವ ಅರ್ಜಿ ವಿಚಾರಣೆ ವೇಳೆ ಭಾರಿ ವಾದ-ಪ್ರತಿವಾದ ನಡೆದಿದೆ. ಎಸ್​​ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರ ವಕೀಲ ಹಷ್ಮತ್ ಪಾಷಾ ನ್ಯಾಯಾಲಯದಲ್ಲಿ ಪ್ರಬಲ ವಾದ ಮಂಡಿಸಿದ್ದಾರೆ. ಅದರ ವಿವರ ಇಲ್ಲಿದೆ.

ದರ್ಶನ್​​ಗೆ ಶಾಕ್ ಮೇಲೆ ಶಾಕ್; ಪ್ರದೋಷ್ ಬಳಿಕ ಮತ್ತಿಬ್ಬರು ಮಾಫಿ ಸಾಕ್ಷಿ ಅರ್ಜಿ

Darshan Thoogudeepa News: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಾಫಿ ಸಾಕ್ಷಿಯಾಗಲು ಎ14 ಪ್ರದೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡುವೆಯೇ, ಎ8 ರವಿಶಂಕರ್ ಹಾಗೂ ಎ10 ವಿನಯ್ ಕೂಡ ಮಾಫಿ ಸಾಕ್ಷಿಯಾಗಲು ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

TV9 Kannada News Live: ಕಾಮನ್‌ವೆಲ್ತ್‌ ನಲ್ಲಿ ಕಂಚು ಗೆದ್ದ ಕನ್ನಡತಿಗೆ ಸರ್ಕಾರಿ ಹುದ್ದೆ, 15 ಲಕ್ಷ ರೂ. ಬಹುಮಾನ

Karnataka News Today Live Updates: ದರ್ಶನ್ ಪ್ರಕರಣದಲ್ಲಿ A-14 ಪ್ರದೋಷ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿ ಮಹತ್ವದ ತಿರುವು ನೀಡಿದ್ದಾರೆ. ಹೊಸಕೋಟೆಯಲ್ಲಿ ಬಡ ಮಹಿಳೆಯರಿಗೆ ಲಕ್ಷಾಂತರ ರೂಪಾಯಿ ಲೋನ್ ವಂಚನೆ ನಡೆದಿದೆ. ಗದಗದಲ್ಲಿ ಉಪಲೋಕಾಯುಕ್ತರು ಕಸ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಯಚೂರು ಜೈಲಿನಲ್ಲಿ ಕೈದಿ ಮರಣ ಮತ್ತು ಬೀದರ್ ರಸ್ತೆ ಕಾಮಗಾರಿ ಸ್ಥಗಿತದಂತಹ ಪ್ರಮುಖ ಸುದ್ದಿಗಳು ಇಲ್ಲಿದೆ ನೋಡಿ

ದರ್ಶನ್​​ಗೆ ಶಾಕ್: ರೇಣುಕಾಸ್ವಾಮಿ ಕೇಸ್​​ನಲ್ಲಿ ಮಾಫಿ ಸಾಕ್ಷಿ ಮಾಡಿ; ಕೋರ್ಟ್​​ಗೆ ಎ14 ಪ್ರದೋಶ್ ಮನವಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A14 ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸುವ ಮೂಲಕ ಬಿಗ್ ಟ್ವಿಸ್ಟ್ ನೀಡಿದ್ದಾರೆ. ಪ್ರಕರಣದಲ್ಲಿ ಸತ್ಯ ಹೇಳುವುದಾಗಿ ಕೋರಿ ಕ್ಷಮೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಈ ಬೆಳವಣಿಗೆಯು A2 ಆರೋಪಿ ದರ್ಶನ್ ಮತ್ತು A1 ಪವಿತ್ರಾ ಗೌಡಗೆ ಸಂಕಷ್ಟ ತಂದೊಡ್ಡಿದೆ.

‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ

ಬಿಡುಗಡೆಗೂ ಮುನ್ನವೇ ‘ಬಾಸ್’ ಸಿನಿಮಾ ಸಾಕಷ್ಟು ಸದ್ದು ಮಾಡಿದೆ. ಈ ಸಿನಿಮಾದ ರಿಲೀಸ್​ಗೆ ತಡೆ ನೀಡುವಂತೆ ಕೋರಿ ಈ ಮೊದಲು ವಿಜಯಲಕ್ಷ್ಮಿ ದರ್ಶನ್ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಂತಿಮವಾಗಿ ಅವರು ಈ ಚಿತ್ರದ ಬಿಡುಗಡೆಗೆ ಅನುಮತಿ ನೀಡಿದ್ದಾರೆ. ಈ ಕುರಿತು ಚಿತ್ರದ ನಾಯಕ ನಟ ತನುಷ್ ಶಿವಣ್ಣ ಅವರು ಮಾತನಾಡಿದ್ದಾರೆ.

ವಿಜಯಲಕ್ಷ್ಮಿ ದರ್ಶನ್ ಒತ್ತಾಯದಿಂದಲೇ ನಾವು ನಿರ್ಮಾಪಕರಾದೆವು: ಜಯಣ್ಣ-ಭೋಗೇಂದ್ರ

ಜಯಣ್ಣ ಹಾಗೂ ಭೋಗೇಂದ್ರ ತಾವು ನಿರ್ಮಾಪಕರಾದ ರೋಚಕ ಕಥೆಯನ್ನು ಹಂಚಿಕೊಂಡಿದ್ದಾರೆ. ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ಪ್ರೀತಿಯ ಒತ್ತಾಯವೇ ತಾವು 'ಅರ್ಜುನ್' ಸಿನಿಮಾ ನಿರ್ಮಾಣ ಮಾಡಲು ಮುಖ್ಯ ಕಾರಣ ಎಂದು ನೆನಪಿಸಿಕೊಂಡಿದ್ದಾರೆ. ಕೃತಜ್ಞತೆಯಾಗಿ 'ವಿಜಯಲಕ್ಷ್ಮಿ ದರ್ಶನ್ ಪ್ರೆಸೆಂಟ್ಸ್' ಎಂದೇ ಸಿನಿಮಾ ಶೀರ್ಷಿಕೆಯಲ್ಲಿ ಬಳಸಲಾಗಿತ್ತು.

ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ

ನಟ ಧನ್ವೀರ್ ಅವರು ಕೆಲವೇ ದಿನಗಳ ಹಿಂದೆ ಜೈಲಿಗೆ ಬಂದು ದರ್ಶನ್ ಅವರನ್ನು ಭೇಟಿ ಮಾಡಿದ್ದರು. ಈ ಮೊದಲು ವಿಜಯಲಕ್ಷ್ಮಿ ಮತ್ತು ಧನ್ವೀರ್ ಅವರು ಒಟ್ಟಿಗೆ ಬಂದು ದರ್ಶನ್ ಅವರನ್ನು ಮಾತನಾಡಿಸುತ್ತಿದ್ದರು. ಈಗ ಅವರು ಬೇರೆ ಬೇರೆ ದಿನಗಳಲ್ಲಿ ಪ್ರತ್ಯೇಕವಾಗಿ ಜೈಲಿಗೆ ಬಂದಿರುವುದು ಅಚ್ಚರಿಗೆ ಕಾರಣ ಆಗಿದೆ.

  • Ramu Ram
  • Updated on: Jul 31, 2026
  • 8:49 pm

ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಅವರ ಆಪ್ತವಲಯದಲ್ಲಿ ನಟ ಧನ್ವೀರ್ ಗುರುತಿಸಿಕೊಂಡಿದ್ದಾರೆ. ಆದರೆ ಕಳೆದ ಕೆಲವು ದಿನಗಳಿಂದ ದರ್ಶನ್ ಕುಟುಂಬದ ಜೊತೆ ಧನ್ವೀರ್ ಅವರಿಗೆ ಮನಸ್ತಾಪ ಉಂಟಾಗಿದೆ ಎಂಬ ಮಾತು ಕೇಳಿಬಂದಿತ್ತು.

ದರ್ಶನ್ ಪ್ರಕರಣ: ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಆರೋಪಿಗಳಿಗೆ ಜಾಮೀನು

Renuka Swamy case: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಬೆಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಆ ಮೂವರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಯೊಂದಕ್ಕೆ ಬೆದರಿಕೆ ಹಾಕಿದ ಆರೋಪದ ಮೇಲೆ ಸುಹಾಸ್, ವೈಭವ್ ಮತ್ತು ಪುನೀತ್ ಎಂಬುವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು.

ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ಪತ್ನಿ ವಿಜಯಲಕ್ಷ್ಮೀ

ರಕ್ಷಿತಾ ಪ್ರೇಮ್ ಮತ್ತು ವಿಜಯಲಕ್ಷ್ಮೀ 2 ಕಾರುಗಳಲ್ಲಿ ಪ್ರತ್ಯೇಕವಾಗಿ ಜೈಲಿಗೆ ಬಂದಿದ್ದಾರೆ. ದರ್ಶನ್ ನೋಡಲು ರಕ್ಷಿತಾ ಜೈಲಿಗೆ ಬಂದಿರುವುದು ಇದು 2ನೇ ಬಾರಿ. ದರ್ಶನ್-ರಕ್ಷಿತಾ ನಡುವೆ ಅನೇಕ ವರ್ಷಗಳ ಸ್ನೇಹ ಇದೆ. ಹಲವು ಸಿನಿಮಾಗಳಲ್ಲಿ ಅವರು ಜೋಡಿಯಾಗಿ ಅಭಿನಯಿಸಿದ್ದರು. ಈಗ ಜೈಲಿನಲ್ಲಿ ಭೇಟಿಯಾಗಿದ್ದಾರೆ.