Darshan Thoogudeepa
ನಟ ದರ್ಶನ್ ಅವರ ಪೂರ್ಣ ಹೆಸರು ದರ್ಶನ್ ತೂಗುದೀಪ. ಇವರು ಕನ್ನಡ ಚಿತ್ರರಂಗದ ಜನಪ್ರಿಯ ನಟ. 1977ರ ಫೆಬ್ರವರಿ 16ರಂದು ಕರ್ನಾಟಕದ ಮೈಸೂರಿನಲ್ಲಿ ಜನಿಸಿದ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ದರ್ಶನ್ ಅವರ ಚೊಚ್ಚಲ ಸಿನಿಮಾ ‘ಮೆಜೆಸ್ಟಿಕ್’ 2001ರಲ್ಲಿ ಬಿಡುಗಡೆಯಾಗಿತು. ಆ ಮೂಲಕ ಹೀರೋ ಆಗಿ ಅವರು ವೃತ್ತಿಜೀವನ ಆರಂಭಿಸಿದರು. ತಮ್ಮ ಅಭಿನಯದಿಂದ ವ್ಯಾಪಕವಾಗಿ ಮೆಚ್ಚುಗೆ ಪಡೆದ ದರ್ಶನ್ ಅವರು ವಿಶೇಷವಾಗಿ ಆ್ಯಕ್ಷನ್ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರ ಕೆಲವು ಗಮನಾರ್ಹ ಚಲನಚಿತ್ರಗಳಲ್ಲಿ ‘ಕರಿಯ’, ‘ನಮ್ಮ ಪ್ರೀತಿಯ ರಾಮು’, ‘ಸಂಗೊಳ್ಳಿ ರಾಯಣ್ಣ’, ‘ಕಲಾಸಿಪಾಳ್ಯ’, ‘ಅಯ್ಯ’, ‘ನವಗ್ರಹ’, ‘ಯಜಮಾನ’, ‘ರಾಬರ್ಟ್’, ‘ಕಾಟೇರ’ ಮುಂತಾದ ಸಿನಿಮಾಗಳಿವೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ದರ್ಶನ್ ಅವರು ಸಿನಿಮಾ ಮಾತ್ರವಲ್ಲದೇ ಪರೋಪಕಾರಿ, ಸಮಾಜಮುಖಿ ಚಟುವಟಿಕೆಗಳಿಂದಲೂ ಫೇಮಸ್ ಆಗಿದ್ದಾರೆ. ದರ್ಶನ್ ಅವರದ್ದು ಕಲಾವಿದರ ಕುಟುಂಬ. ಅವರ ತಂದೆ ತೂಗುದೀಪ ಶ್ರೀನಿವಾಸ್ ಅವರು ಕನ್ನಡ ಚಿತ್ರರಂಗದಲ್ಲಿ ಖ್ಯಾತ ಖಳನಟ ಆಗಿದ್ದರು. ಅವರ ಸಹೋದರ ದಿನಕರ್ ತೂಗುದೀಪ ನಿರ್ದೇಶಕನಾಗಿ, ನಟನಾಗಿ ಗುರುತಿಸಿಕೊಂಡಿದ್ದಾರೆ.
ಇನ್ನೂ ಹೆಚ್ಚು ಓದಿಹೈಕೋರ್ಟ್ನಲ್ಲಿ ದರ್ಶನ್ ಅರ್ಜಿ ತುರ್ತು ವಿಚಾರಣೆ; ಸೆ.2ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ
ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಾಗ ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ದರ್ಶನ್ ಪರ ವಕೀಲರು ವಾದ ಮಾಡಿದ್ದಾರೆ. ಇಂದು (ಸೆಪ್ಟೆಂಬರ್ 1) ಹೈಕೋರ್ಟ್ನಲ್ಲಿ ಈ ಅರ್ಜಿಯ ವಿಚಾರಣೆ ನಡೆದಿದೆ. ಬುಧವಾರ (ಸೆ.2) ಆದೇಶ ಪ್ರಕಟ ಆಗಲಿದೆ. ಆ ಆದೇಶದ ಮೇಲೆ ಮಾಫಿ ಸಾಕ್ಷಿಯ ಮುಂದಿನ ಪ್ರಕ್ರಿಯೆ ನಿರ್ಧಾರ ಆಗಲಿದೆ.
- Ramesha M
- Updated on: Sep 1, 2026
- 7:51 pm
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
Darshan Thoogudeepa in Jail: ವಿಜಯಲಕ್ಷ್ಮಿ ಅವರ ಜೊತೆಗೆ ಝೈದ್ ಖಾನ್ ಜೈಲಿಗೆ ಬಂದಿದ್ದರು. ಅವರು ಮಾತ್ರವೇ ಅಲ್ಲದೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಹ ಜೈಲಿಗೆ ಭೇಟಿ ನೀಡಿದ್ದರು. ವಿಜಯಲಕ್ಷ್ಮಿ ಮತ್ತು ಧನ್ವೀರ್ ಗೌಡ ನಡುವೆ ಭಿನ್ನಾಭಿಪ್ರಾಯಗಳು ಮೂಡಿವೆ ಎಂದು ಕೆಲ ದಿನಗಳ ಹಿಂದೆ ಸುದ್ದಿ ಹರಡಿತ್ತು. ಅದರ ಬೆನ್ನಲ್ಲೆ ಇದೀಗ ವಿಜಯಲಕ್ಷ್ಮಿ ಅವರು ಝೈದ್ ಖಾನ್ ಅವರನ್ನು ಜೊತೆಗೆ ಕರೆದುಕೊಂಡು ಬಂದಿರುವುದು ಕುತೂಹಲ ಮೂಡಿಸಿದೆ. ಝೈದ್ ಖಾನ್, ಸಚಿವ ಜಮೀರ್ ಅಹ್ಮದ್ ಪುತ್ರ ಆಗಿದ್ದು, ಕೆಲವು ಕನ್ನಡ ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದಾರೆ. ವಿಡಿಯೋ ನೋಡಿ...
- Manjunatha C
- Updated on: Sep 1, 2026
- 5:43 pm
ಪ್ರದೋಷ್ ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಸೆಪ್ಟೆಂಬರ್ 2ರಂದು ಮಾಫಿ ಸಾಕ್ಷಿಯಾಗಿ ಪ್ರದೋಷ್ ವಿಚಾರಣೆ ಇರುವುದರಿಂದ ಇಂದು (ಸೆಪ್ಟೆಂಬರ್ 1) ತುರ್ತಾಗಿ ತಮ್ಮ ಅರ್ಜಿ ವಿಚಾರಣೆ ಮಾಡಬೇಕು ಎಂದು ದರ್ಶನ್ ಪರ ವಕೀಲರು ಮಾಡಿದ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ಇಂದೇ ವಿಚಾರಣೆ ನಡೆಸಲು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಮ್ಮತಿಸಿದೆ.
- Ramesha M
- Updated on: Sep 1, 2026
- 5:10 pm
ಭಾನುವಾರ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ ದರ್ಶನ್ ನಟನೆಯ ‘ದಿ ಡೆವಿಲ್’
The Devil Movie: ಚಾಲೆಂಜಿಂಗ್ ಸ್ಟಾರ್ ದರ್ಶನ್ ದ್ವಿಪಾತ್ರದಲ್ಲಿ ನಟಿಸಿರುವ 'ದಿ ಡೆವಿಲ್' ಸಿನಿಮಾ ಕಿರುತೆರೆಗೆ ಆಗಮಿಸುತ್ತಿದೆ. ಪ್ರಕಾಶ್ ವೀರ್ ನಿರ್ದೇಶನದ ಈ ರಾಜಕೀಯ ಕಥಾಹಂದರದ ಚಿತ್ರವು ಆಗಸ್ಟ್ 30ರಂದು ಸಂಜೆ 7 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಆಗಿ ಪ್ರಸಾರವಾಗಲಿದೆ.
- Rajesh Duggumane
- Updated on: Aug 29, 2026
- 1:17 pm
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ನೇರವಾಗಿ ಕಾರಣ ತಿಳಿಸಿದ ಚಿಕ್ಕಣ್ಣ
ಪಾವನಾ ಜೊತೆ ಚಿಕ್ಕಣ್ಣ ಅವರು ಹಸೆಮಣೆ ಏರಲಿದ್ದಾರೆ. ಚಿತ್ರರಂಗದ ಬಹುತೇಕರಿಗೆ ಈಗಾಗಲೇ ಅವರು ಆಮಂತ್ರಣ ಪತ್ರಿಕೆ ನೀಡಿದ್ದಾರೆ. ನಟ ದರ್ಶನ್ ಅವರ ಆಪ್ತ ಬಳಗದಲ್ಲಿ ಚಿಕ್ಕಣ್ಣ ಗುರುತಿಸಿಕೊಂಡಿದ್ದರು. ಆದರೆ ಈಗ ದರ್ಶನ್ ಅವರಿಗೆ ಚಿಕ್ಕಣ್ಣ ಮದುವೆ ಆಹ್ವಾನ ನೀಡುತ್ತಿಲ್ಲ. ಆ ಬಗ್ಗೆ ಅವರು ಮಾತನಾಡಿದ್ದಾರೆ.
- Madan Kumar
- Updated on: Aug 25, 2026
- 6:33 pm
ದರ್ಶನ್ ಕೇಸ್: ಮಾಫಿ ಸಾಕ್ಷಿಯಾಗಿ ಪ್ರದೋಷ್ ಅರ್ಜಿ ಅಂಗೀಕರಿಸಿದ ಕೋರ್ಟ್
ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳಿಗೆ ಈಗ ಢವಢವ ಹೆಚ್ಚಾಗಿದೆ. ಘಟನೆ ನಡೆದ ದಿನ ಏನೆಲ್ಲ ಆಯಿತು ಎಂಬುದನ್ನು ವಿವರಿಸಲು 14ನೇ ಆರೋಪಿ ಪ್ರದೋಷ್ ಮುಂದಾಗಿದ್ದಾರೆ. ಮಾಫಿ ಸಾಕ್ಷಿ ಆಗಲು ಪ್ರದೋಷ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಅಂಗೀಕರಿಸಿದೆ.
- Ramesha M
- Updated on: Aug 25, 2026
- 4:36 pm
ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ವ್ಯಕ್ತಿ, ವಿಜಯಲಕ್ಷ್ಮಿ ದರ್ಶನ್ ಜೊತೆ ಪ್ರತ್ಯಕ್ಷ
Vijayalakshmi Darshan: ವಿಜಯಲಕ್ಷ್ಮಿ ಅವರು ಇತ್ತೀಚೆಗಷ್ಟೆ ಮಂಗಳೂರಿಗೆ ತೆರಳು ದೈವಾರಾಧನೆಯಲ್ಲಿ ಭಾಗಿ ಆಗಿದ್ದರು. ಈ ವೇಳೆ ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬ ಮಂಗಳೂರಿನಲ್ಲಿ ವಿಜಯಲಕ್ಷ್ಮಿ ಅವರನ್ನು ಸ್ವಾಗತಿಸಿದ್ದು, ಈ ಕುರಿತಾದ ವಿಡಿಯೋ ಹರಿದಾಡುತ್ತಿದೆ. ಗೌರವ್ ಶೆಟ್ಟಿ ಹಾಗೂ ಕಿರಣ್ ರೆಡ್ಡಿಗೆ ನೊಟೀಸ್ ನೀಡಲು ಪೊಲೀಸರು ಹುಡುಕಾಟ ನಡೆಸಿದ್ದರು.
- Manjunatha C
- Updated on: Aug 23, 2026
- 7:23 pm
ದರ್ಶನ್ ಕೇಸ್: ಸಾಕ್ಷಿಗೆ ಬೆದರಿಕೆ ಹಾಕಿದ ಗೌರವ್ ಶೆಟ್ಟಿ, ಕಿರಣ್ ರೆಡ್ಡಿ ಜತೆ ಪ್ರಭಾವಿ ಮಹಿಳೆ ನಂಟು
ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಪುನೀತ್, ವೇಣು, ಸುಹಾಸ್ನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಪುನೀತ್ ಜೊತೆ ಇನ್ನಿಬ್ಬರು ಆರೋಪಿಗಳಾದ ಗೌರವ್ ಶೆಟ್ಟಿ, ಕಿರಣ್ ರೆಡ್ಡಿ ಸಂಪರ್ಕದಲ್ಲಿ ಇರುವುದು ದೃಢಪಟ್ಟಿದೆ. ಅಲ್ಲದೇ ಪ್ರಭಾವಿ ಮಹಿಳೆಯೊಬ್ಬರ ನಂಟು ಇರುವ ಶಂಕೆ ಕೂಡ ಮೂಡಿದೆ.
- Vikas bm
- Updated on: Aug 23, 2026
- 11:52 am
ದರ್ಶನ್ಗೆ ಮಾಫಿ ಸಾಕ್ಷಿ ಸಂಕಷ್ಟ, ದೈವದ ಮೊರೆ ಹೋದ ವಿಜಯಲಕ್ಷ್ಮಿ
Darshan Thoogudeepa: ದರ್ಶನ್ಗೆ ಮಾಫಿ ಸಾಕ್ಷಿ ಸಂಕಷ್ಟ ಎದುರಾಗಿದೆ. ದರ್ಶನ್, ಆಪ್ತನಾಗಿದ್ದ, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯೂ ಆಗಿರುವ ಪ್ರದೋಶ್, ಮಾಫಿ ಸಾಕ್ಷಿಯಾಗಿ ಬದಲಾಗಿದ್ದು, ಇದು ದರ್ಶನ್ಗೆ ತೀವ್ರ ಸಂಕಷ್ಟ ತಂದಿದೆ. ಪ್ರಕರಣದಲ್ಲಿ ದರ್ಶನ್ಗೆ ಪದೇ ಪದೇ ಹಿನ್ನಡೆ ಉಂಟಾಗುತ್ತಿರುವ ಕಾರಣ ಇದೀಗ ವಿಜಯಲಕ್ಷ್ಮಿ ದರ್ಶನ್ ಅವರು ದೈವದ ಮೊರೆ ಹೋಗಿದ್ದಾರೆ.
- Manjunatha C
- Updated on: Aug 22, 2026
- 9:02 pm
ದರ್ಶನ್ ಅಭಿಮಾನಿಯಾಗಿ ಡಿ ಬಾಸ್ ಕಟೌಟ್ ಮುಂದೆ ‘ದೇವಿ’ ಹೀರೋ ಚೇತನ್ ಸಾಹಸ
‘ದೇವಿ’ ಚಿತ್ರದಲ್ಲಿ ಚೇತನ್ ಗೌಡ ಅವರು ದರ್ಶನ್ ಅಭಿಮಾನಿಯಾಗಿ ನಟಿಸುತ್ತಿದ್ದಾರೆ. ಯಶ್ ಶೆಟ್ಟಿ, ಹುಲಿ ಕಾರ್ತಿಕ್, ಜಗ್ಗ ಮಮ್ಮಿ, ಕಾಕ್ರೋಚ್ ಸುಧಿ, ಶ್ರೇಯಾ, ಶರತ್ ಬಾಬು ಮುಂತಾದವರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಅಜಿತ್ ಕುಮಾರ್ ಅವರ ಛಾಯಾಗ್ರಹಣ, ಶ್ರೀಧರ್ ವಿ. ಸಂಭ್ರಮ್ ಅವರ ಸಂಗೀತ ನಿರ್ದೇಶನ, ಮಾಸ್ತಿ ಅವರ ಸಂಭಾಷಣೆ ಈ ಚಿತ್ರಕ್ಕಿದೆ.
- Madan Kumar
- Updated on: Aug 20, 2026
- 6:17 pm
‘ನಾನು ನೂರಕ್ಕೆ ನೂರು ಸತ್ಯ ಹೇಳುತ್ತೇನೆ’; ಕೋರ್ಟ್ನಲ್ಲಿ ಒಪ್ಪಿಕೊಂಡ ಪ್ರದೋಷ್
Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ14 ಆರೋಪಿ ಪ್ರದೋಷ್ ಅಪ್ರೂವರ್ ಆಗಲು 59ನೇ ಸಿಸಿಹೆಚ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾನೆ. ಯಾವುದೇ ಒತ್ತಡವಿಲ್ಲದೆ ಸತ್ಯ ಬಹಿರಂಗಪಡಿಸುವುದಾಗಿ ಜಡ್ಜ್ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರ ಮುಂದೆ ಹೇಳಿಕೆ ನೀಡಿದ್ದು, ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಲಾಗಿದೆ.
- Ramesha M
- Updated on: Aug 20, 2026
- 2:33 pm
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ಜೈಲಿನಲ್ಲಿರುವ ದರ್ಶನ್ ಅವರನ್ನು ಭೇಟಿ ಮಾಡಲು ಧನ್ವೀರ್ ಗೌಡ, ಮೀನಾ ತೂಗುದೀಪ ಮತ್ತು ವಿಜಯಲಕ್ಷ್ಮಿ ದರ್ಶನ್ ಅವರು ಒಟ್ಟಿಗೆ ಬಂದಿದ್ದಾರೆ. ಭೇಟಿ ಮಾಡಿದ ಬಳಿಕ ಧನ್ವೀರ್ ಗೌಡ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಿಮ್ಮ ನಡುವೆ ಮನಸ್ತಾಪ ಇದೆಯಾ ಎಂಬ ಪ್ರಶ್ನೆಗೆ ಅವರು ಉತ್ತರ ನೀಡಿದರು.
- Ramu Ram
- Updated on: Aug 18, 2026
- 7:31 pm