
Darshan Thoogudeepa
ನಟ ದರ್ಶನ್ ಅವರ ಪೂರ್ಣ ಹೆಸರು ದರ್ಶನ್ ತೂಗುದೀಪ. ಇವರು ಕನ್ನಡ ಚಿತ್ರರಂಗದ ಜನಪ್ರಿಯ ನಟ. 1977ರ ಫೆಬ್ರವರಿ 16ರಂದು ಕರ್ನಾಟಕದ ಮೈಸೂರಿನಲ್ಲಿ ಜನಿಸಿದ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ದರ್ಶನ್ ಅವರ ಚೊಚ್ಚಲ ಸಿನಿಮಾ ‘ಮೆಜೆಸ್ಟಿಕ್’ 2001ರಲ್ಲಿ ಬಿಡುಗಡೆಯಾಗಿತು. ಆ ಮೂಲಕ ಹೀರೋ ಆಗಿ ಅವರು ವೃತ್ತಿಜೀವನ ಆರಂಭಿಸಿದರು. ತಮ್ಮ ಅಭಿನಯದಿಂದ ವ್ಯಾಪಕವಾಗಿ ಮೆಚ್ಚುಗೆ ಪಡೆದ ದರ್ಶನ್ ಅವರು ವಿಶೇಷವಾಗಿ ಆ್ಯಕ್ಷನ್ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರ ಕೆಲವು ಗಮನಾರ್ಹ ಚಲನಚಿತ್ರಗಳಲ್ಲಿ ‘ಕರಿಯ’, ‘ನಮ್ಮ ಪ್ರೀತಿಯ ರಾಮು’, ‘ಸಂಗೊಳ್ಳಿ ರಾಯಣ್ಣ’, ‘ಕಲಾಸಿಪಾಳ್ಯ’, ‘ಅಯ್ಯ’, ‘ನವಗ್ರಹ’, ‘ಯಜಮಾನ’, ‘ರಾಬರ್ಟ್’, ‘ಕಾಟೇರ’ ಮುಂತಾದ ಸಿನಿಮಾಗಳಿವೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ದರ್ಶನ್ ಅವರು ಸಿನಿಮಾ ಮಾತ್ರವಲ್ಲದೇ ಪರೋಪಕಾರಿ, ಸಮಾಜಮುಖಿ ಚಟುವಟಿಕೆಗಳಿಂದಲೂ ಫೇಮಸ್ ಆಗಿದ್ದಾರೆ. ದರ್ಶನ್ ಅವರದ್ದು ಕಲಾವಿದರ ಕುಟುಂಬ. ಅವರ ತಂದೆ ತೂಗುದೀಪ ಶ್ರೀನಿವಾಸ್ ಅವರು ಕನ್ನಡ ಚಿತ್ರರಂಗದಲ್ಲಿ ಖ್ಯಾತ ಖಳನಟ ಆಗಿದ್ದರು. ಅವರ ಸಹೋದರ ದಿನಕರ್ ತೂಗುದೀಪ ನಿರ್ದೇಶಕನಾಗಿ, ನಟನಾಗಿ ಗುರುತಿಸಿಕೊಂಡಿದ್ದಾರೆ.
‘ವಾಮನ’ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್ ಗೌಡ
ಧನ್ವೀರ್ ಗೌಡ ಮತ್ತು ದರ್ಶನ್ ಅವರು ಆಪ್ತರಾಗಿದ್ದಾರೆ. ಎರಡೂ ಕುಟುಂಬದ ನಡುವೆ ಒಡನಾಟ ಹೆಚ್ಚಾಗಿದೆ. ಧನ್ವೀರ್ ಗೌಡ ಅಭಿನಯಿಸಿದ ‘ವಾಮನ’ ಸಿನಿಮಾದ ಪ್ರೀಮಿಯರ್ ಶೋಗೆ ದರ್ಶನ್ ಬಂದಿದ್ದಾರೆ. ಆದರೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಸಿನಿಮಾ ನೋಡಲು ಬಂದಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಧನ್ವೀರ್ ಗೌಡ ತಿಳಿದ್ದಾರೆ.
- Mangala RR
- Updated on: Apr 10, 2025
- 9:14 pm
‘ವಾಮನ’ ಸಿನಿಮಾನಲ್ಲಿ ದರ್ಶನ್ಗೆ ಇಷ್ಟವಾದ ಅಂಶಗಳೇನು?
Darshan Thoogudeepa: ಧನ್ವೀರ್ ಗೌಡ ನಟನೆಯ ‘ವಾಮನ’ ಸಿನಿಮಾ ಇಂದು (ಏಪ್ರಿಲ್ 10) ಬಿಡುಗಡೆ ಆಗಿದೆ. ನಿನ್ನೆ ಆಯೋಜಿಸಿದ್ದ ಪ್ರೀಮಿಯರ್ ಶೋನಲ್ಲಿ ದರ್ಶನ್, ‘ವಾಮನ’ ಸಿನಿಮಾ ನೋಡಿದರು. ಇಂದು ಮಾಧ್ಯಮಗಳ ಬಳಿ ಮಾತನಾಡಿದ ನಟ ಧನ್ವೀರ್ ಗೌಡ, ‘ವಾಮನ’ ಸಿನಿಮಾನಲ್ಲಿ ಧನ್ವೀರ್ ಗೌಡಗೆ ಇಷ್ಟವಾದ ಕೆಲವು ವಿಷಯಗಳ ಬಗ್ಗೆ ಹೇಳಿದರು. ದರ್ಶನ್ ಅವರಿಗೆ ತಾಯಿ-ತಂದೆ ಸೆಂಟಿಮೆಂಟ್, ಗೆಳೆತನದ ಸೆಂಟಿಮೆಂಟ್ ಇಷ್ಟವಾಯ್ತೆಂದು ಹೇಳಿದರು, ವಿಡಿಯೋ ಇಲ್ಲಿದೆ...
- Manjunatha C
- Updated on: Apr 10, 2025
- 7:14 pm
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾದರು. ಈಗ ಅವರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಮಧ್ಯೆ ಅವರು ಸಿನಿಮಾಗೆ ಬಂದಿದ್ದಾರೆ. ಧನ್ವೀರ್ ನಟನೆಯ ‘ವಾಮನ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಪ್ರೀಮಿಯರ್ ಶೋ ವೇಳೆ ಒಂದು ಘಟನೆ ನಡೆದಿದೆ.
- Rajesh Duggumane
- Updated on: Apr 10, 2025
- 1:02 pm
ಧನ್ವೀರ್ ಮದುವೆಗೆ ಯಾವ ಬಟ್ಟೆ ಹಾಕಿಕೊಳ್ಳಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದರ್ಶನ್
ಧನ್ವೀರ್ ಹಾಗೂ ದರ್ಶನ್ ಅವರು ಒಟ್ಟಾಗಿ ‘ವಾಮನ’ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಈ ಸಿನಿಮಾ ವೀಕ್ಷಣೆ ವೇಳೆ ನಟ ಧನ್ವೀರ್ ವಿವಾಹದ ಪ್ಲ್ಯಾನ್ ರಿವೀಲ್ ಮಾಡಿದ್ದಾರೆ. ಯಾವಾಗ ಯಾವ ಬಟ್ಟೆ ಧರಿಸಬೇಕು ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನು ಕೇಳಿ ಅಚ್ಚರಿ ಆಗಿದೆ.
- Rajesh Duggumane
- Updated on: Apr 10, 2025
- 9:14 am
ದರ್ಶನ್ಗೆ ಸಂಕಷ್ಟ? ರೇಣುಕಾಸ್ವಾಮಿ ಕೊಲೆ ಕೇಸ್ ಸಾಕ್ಷಿ ಜೊತೆಯೇ ಸಿನಿಮಾ ವೀಕ್ಷಿಸಿದ ದಾಸ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್, ಸಾಕ್ಷಿ ಜೊತೆ 'ವಾಮನ' ಸಿನಿಮಾ ವೀಕ್ಷಿಸಿದ್ದಾರೆ. ಇದು ದೊಡ್ಡ ವಿವಾದಕ್ಕೆ ಕಾರಣವಾಗಬಹುದು. ಜಾಮೀನಿನ ನಿಯಮಗಳ ಉಲ್ಲಂಘನೆ ಎಂದು ಪರಿಗಣಿಸಬಹುದು. ಪೊಲೀಸರು ಈ ಘಟನೆಯನ್ನು ದರ್ಶನ್ ವಿರುದ್ಧ ಬಳಸುವ ಸಾಧ್ಯತೆಯಿದೆ. ಈ ವಿಚಾರದಲ್ಲಿ ಮತ್ತೆ ಇವರು ಸಮಸ್ಯೆ ಎದುರಿಸೋ ಸಾಧ್ಯತೆ ಹೆಚ್ಚಿದೆ.
- Shivaprasad
- Updated on: Apr 10, 2025
- 9:11 am
Darshan on PAN India Cinema: ನಾವು ಕರ್ನಾಟಕ ಜನತೆಗಾಗಿ ಸಿನಿಮಾ ಮಾಡೋದು, ಪ್ಯಾನ್ ಇಂಡಿಯಾಗಾಗಿ ಅಲ್ಲ; ದರ್ಶನ್ ಟಾಂಗ್ ಕೊಟ್ರಾ?
ದರ್ಶನ್ ಅವರು ತಮ್ಮ ಆಪ್ತ ಧನ್ವೀರ್ ನಟನೆಯ ‘ವಾಮನ’ ಚಿತ್ರವನ್ನು ವೀಕ್ಷಿಸಿ ಪ್ರಶಂಸಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡುತ್ತಾ, ‘ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವುದಿಲ್ಲ, ಕರ್ನಾಟಕದ ಜನರಿಗಾಗಿ ಸಿನಿಮಾ ಮಾಡುತ್ತೇವೆ’ ಎಂದು ಹೇಳಿದ್ದಾರೆ. ಈ ಹೇಳಿಕೆಯು ಕನ್ನಡ ಚಿತ್ರರಂಗದಲ್ಲಿ ಚರ್ಚೆಗೆ ಕಾರಣವಾಗಿದೆ .
- Rajesh Duggumane
- Updated on: Apr 10, 2025
- 9:12 am
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಧನ್ವೀರ್ ಗೌಡ ಅವರು ನಟಿಸಿದ ‘ವಾಮನ’ ಸಿನಿಮಾದ ವಿಶೇಷ ಪ್ರದರ್ಶನ ಬೆಂಗಳೂರಿನ ಜಿಟಿ ಮಾಲ್ನಲ್ಲಿ ನಡೆದಿದೆ. ಸೆಲೆಬ್ರಿಟಿಗಳಗಾಗಿ ಆಯೋಜಿಸಿದ್ದ ಪ್ರೀಮಿಯರ್ ಶೋನಲ್ಲಿ ದರ್ಶನ್ ಕೂಡ ಭಾಗಿ ಆಗಿದ್ದಾರೆ. ಅವರು ಬಂದು ಕಾರಿನಿಂದ ಇಳಿದ ಕೂಡಲೇ ಅಭಿಮಾನಿಗಳು ಮುತ್ತಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ.
- Madan Kumar
- Updated on: Apr 9, 2025
- 10:49 pm
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ಏಪ್ರಿಲ್ 10ರಂದು ‘ವಾಮನ’ ಸಿನಿಮಾ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ ನಡೆದ ಪ್ರೀಮಿಯರ್ ಶೋನಲ್ಲಿ ದರ್ಶನ್ ಅವರು ಭಾಗಿಯಾಗಿದ್ದಾರೆ. ಸಿನಿಮಾ ನೋಡಲು ಬಂದ ಅವರು ಚಿಕ್ಕಣ್ಣ ಜೊತೆ ಮಾತನಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಕೆಲವೇ ದಿನಗಳ ಹಿಂದೆ ‘ವಾಮನ’ ಟ್ರೇಲರ್ ಅನ್ನು ದರ್ಶನ್ ರಿಲೀಸ್ ಮಾಡಿದ್ದರು.
- Madan Kumar
- Updated on: Apr 9, 2025
- 8:51 pm
‘ವಾಮನ’ ಸಿನಿಮಾ ನೋಡಲು ಬರಲಿರುವ ದರ್ಶನ್, ಎಲ್ಲಿ? ಯಾವಾಗ?
Darshan Thoogudeepa: ನಟ ದರ್ಶನ್, ಇತ್ತೀಚೆಗಷ್ಟೆ ‘ಡೆವಿಲ್’ ಸಿನಿಮಾ ಚಿತ್ರೀಕರಣ ರಾಜಸ್ಥಾನದಲ್ಲಿ ಮುಗಿಸಿ ವಾಪಸ್ಸಾಗಿದ್ದಾರೆ. ಸತತ ಚಿತ್ರೀಕರಣದಿಂದ ಬಳಲಿ, ಬೆನ್ನು ನೋವು ಹೆಚ್ಚಾಗಿರುವ ಕಾರಣ ನೀಡಿ ಕೋರ್ಟ್ ವಿಚಾರಣೆಗೂ ಹಾಜರಾಗಿರಲಿಲ್ಲ. ಆದರೆ ದರ್ಶನ್ ‘ವಾಮನ’ ಸಿನಿಮಾದ ಪ್ರೀಮಿಯರ್ ಶೋನಲ್ಲಿ ಭಾಗಿ ಆಗಲಿದ್ದಾರೆ. ಎಲ್ಲಿ? ಯಾವಾಗ? ಇಲ್ಲಿ ತಿಳಿಯಿರಿ...
- Manjunatha C
- Updated on: Apr 9, 2025
- 2:07 pm
ಎಡಬಿಡದೆ 28 ಗಂಟೆ ಶೂಟ್; ದರ್ಶನ್ಗೆ ಮತ್ತೆ ಶುರುವಾಯ್ತು ಬೆನ್ನು ನೋವು
ದರ್ಶನ್ ಅವರು ‘ಡೆವಿಲ್’ ಸಿನಿಮಾದ 28 ಗಂಟೆಗಳ ನಿರಂತರ ಶೂಟಿಂಗ್ ನಂತರ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಈ ಮೊದಲು ಇದ್ದ ಬೆನ್ನು ನೋವು ಮತ್ತೆ ಹೆಚ್ಚಾಗಿದ್ದು, ಕೋರ್ಟ್ ಹಾಜರಾತಿಯಿಂದಲೂ ಅವರು ದೂರ ಉಳಿದಿದ್ದಾರೆ. ಚಿತ್ರೀಕರಣದ ವೇಳಾಪಟ್ಟಿಯನ್ನು ಪೂರ್ಣಗೊಳಿಸುವ ಒತ್ತಡದಿಂದಾಗಿ ಈ ಘಟನೆ ನಡೆದಿದೆ.
- Malatesh Jaggin
- Updated on: Apr 8, 2025
- 1:02 pm