Darshan

Darshan

ನಟ ದರ್ಶನ್ ಅವರ ಪೂರ್ಣ ಹೆಸರು ದರ್ಶನ್ ತೂಗುದೀಪ. ಇವರು ಕನ್ನಡ ಚಿತ್ರರಂಗದ ಜನಪ್ರಿಯ ನಟ. 1977ರ ಫೆಬ್ರವರಿ 16ರಂದು ಕರ್ನಾಟಕದ ಮೈಸೂರಿನಲ್ಲಿ ಜನಿಸಿದ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ದರ್ಶನ್ ಅವರ ಚೊಚ್ಚಲ ಸಿನಿಮಾ ‘ಮೆಜೆಸ್ಟಿಕ್’ 2001ರಲ್ಲಿ ಬಿಡುಗಡೆಯಾಗಿತು. ಆ ಮೂಲಕ ಹೀರೋ ಆಗಿ ಅವರು ವೃತ್ತಿಜೀವನ ಆರಂಭಿಸಿದರು. ತಮ್ಮ ಅಭಿನಯದಿಂದ ವ್ಯಾಪಕವಾಗಿ ಮೆಚ್ಚುಗೆ ಪಡೆದ ದರ್ಶನ್​ ಅವರು ವಿಶೇಷವಾಗಿ ಆ್ಯಕ್ಷನ್ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರ ಕೆಲವು ಗಮನಾರ್ಹ ಚಲನಚಿತ್ರಗಳಲ್ಲಿ ‘ಕರಿಯ’, ‘ನಮ್ಮ ಪ್ರೀತಿಯ ರಾಮು’, ‘ಸಂಗೊಳ್ಳಿ ರಾಯಣ್ಣ’, ‘ಕಲಾಸಿಪಾಳ್ಯ’, ‘ಅಯ್ಯ’, ‘ನವಗ್ರಹ’, ‘ಯಜಮಾನ’, ‘ರಾಬರ್ಟ್​’, ‘ಕಾಟೇರ’ ಮುಂತಾದ ಸಿನಿಮಾಗಳಿವೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ದರ್ಶನ್ ಅವರು ಸಿನಿಮಾ ಮಾತ್ರವಲ್ಲದೇ ಪರೋಪಕಾರಿ, ಸಮಾಜಮುಖಿ ಚಟುವಟಿಕೆಗಳಿಂದಲೂ ಫೇಮಸ್​ ಆಗಿದ್ದಾರೆ. ದರ್ಶನ್​ ಅವರದ್ದು ಕಲಾವಿದರ ಕುಟುಂಬ. ಅವರ ತಂದೆ ತೂಗುದೀಪ ಶ್ರೀನಿವಾಸ್​ ಅವರು ಕನ್ನಡ ಚಿತ್ರರಂಗದಲ್ಲಿ ಖ್ಯಾತ ಖಳನಟ ಆಗಿದ್ದರು. ಅವರ ಸಹೋದರ ದಿನಕರ್​ ತೂಗುದೀಪ ನಿರ್ದೇಶಕನಾಗಿ, ನಟನಾಗಿ ಗುರುತಿಸಿಕೊಂಡಿದ್ದಾರೆ.

ಇನ್ನೂ ಹೆಚ್ಚು ಓದಿ

ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಆಗಿ ಒಂದು ತಿಂಗಳು; ಜಾಮೀನಿಗಾಗಿ ಚಾತಕ ಪಕ್ಷಿಯಂತೆ ಕಾದ ದಾಸ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್​ಶೀಟ್​ ಕೂಡ ಸಲ್ಲಿಕೆ ಆಗಿದೆ. ಈ ಚಾರ್ಜ್​ಶೀಟ್​ನಲ್ಲಿ ಹಲವು ರೀತಿಯ ಶಾಕಿಂಗ್ ವಿಚಾರ ಇದೆ. ಈ ಪ್ರಕರಣದಲ್ಲಿ ಶರಣಾದ ಮೂವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಈಗ ದರ್ಶನ್ ಕೂಡ ಜಾಮೀನಿನ ನೀರೀಕ್ಷೆಯಲ್ಲಿ ಇದ್ದಾರೆ.

ದರ್ಶನ್ ಜೊತೆ ಕುಳಿತು ತಂಬಾಕು ಜಗಿದ ಆರೋಪ: ಶ್ರೀನಿವಾಸ್ ಅಲಿಯಾಸ್​ ಕುಳ್ಳ ಸೀನ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ

ಶ್ರೀನಿವಾಸ್​ ಅಲಿಯಾಸ್​ ಕುಳ್ಳ ಸೀನಾ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ ನೀಡಿದೆ. ಫೋಟೋ ವೈರಲ್ ಆಗಿದ್ದಕ್ಕೆ ಕರ್ನಾಟಕ ಜೈಲು ಅಧಿನಿಯಮ 2022ರ ಸೆಕ್ಷನ್ 42 ಉಲ್ಲಂಘನೆ ಕೇಸ್ ದಾಖಲಿಸಲಾಗಿತ್ತು. ಯಾವುದೇ ಶಿಕ್ಷಾರ್ಹ ಅಪರಾಧ ಮಾಡಿಲ್ಲವೆಂದು ಶ್ರೀನಿವಾಸ್ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದಾರೆ.

ಬಳ್ಳಾರಿ ಜೈಲಲ್ಲಿ ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್ ತುಂಬ ತಂದಿದ್ದೇನು?

ದರ್ಶನ್​ ಜೈಲಿಗೆ ಹೋಗುವುದಕ್ಕೂ ಮುನ್ನ ‘ಡೆವಿಲ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಆದರೆ ಅವರ ಮೇಲೆ ಕೊಲೆ ಆರೋಪ ಬಂದಿದ್ದರಿಂದ ಸಿನಿಮಾದ ಕೆಲಸಗಳು ಅರ್ಧಕ್ಕೆ ನಿಂತು ಹೋದವು. ಇಂದು (ಸೆಪ್ಟೆಂಬರ್​ 26) ‘ಡೆವಿಲ್’ ಸಿನಿಮಾದ ನಿರ್ದೇಶಕ ಪ್ರಕಾಶ್ ವೀರ್​ ಅವರು ಬಳ್ಳಾರಿ ಜೈಲಿಗೆ ಹೋಗಿ ದರ್ಶನ್​ ಭೇಟಿ ಮಾಡಿದ್ದಾರೆ.

ಹಲವು ದಿನಗಳ ಬಳಿಕ ದರ್ಶನ್ ಮುಖದಲ್ಲಿ ನಗು; ಜಾಮೀನು ಸಿಗುವ ಮುನ್ಸೂಚನೆಯೇ?

ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ದರ್ಶನ್ ಮಂಕಾಗಿದ್ದರು. ಅವರ ವಿರುದ್ಧ ಚಾರ್ಜ್​ಶೀಟ್​ನಲ್ಲಿ ಗಂಭೀರ ಆರೋಪಗಳು ಇರುವುದು ಬಹಿರಂಗ ಆಯಿತು. ಜಾಮೀನು ಅರ್ಜಿ ಅರ್ಜಿಯ ವಿಚಾರಣೆ ಮುಂದೂಡಿಕೆ ಆಯಿತು. ಈ ಎಲ್ಲ ಕಾರಣಗಳಿಂದ ಅವರು ಸೈಲೆಂಟ್​ ಆಗಿದ್ದರು. ಆದರೆ ಇಂದು (ಸೆ.25) ದರ್ಶನ್​ ನಗು ನಗುತ್ತಾ ಇರುವುದು ಕಾಣಿಸಿದೆ. ಆ ವಿಡಿಯೋ ಇಲ್ಲಿದೆ ನೋಡಿ..

ಹೊಸ ಕೇಸ್​ ಬಗ್ಗೆ ದರ್ಶನ್​ ಜತೆ ಲಾಯರ್​ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ

ನಟ ದರ್ಶನ್​ ಅವರನ್ನು ಬಳ್ಳಾರಿ ಜೈಲಿನಲ್ಲಿ ಇಂದು (ಸೆ.25) ಲಾಯರ್​ ಭೇಟಿ ಮಾಡಿದ್ದಾರೆ. ಗುರುವಾರ (ಸೆ.26) ಆರಂಭ ಆಗಲಿರುವ ಹೊಸ ಪ್ರಕರಣದ ತನಿಖೆಯ ಬಗ್ಗೆ ದರ್ಶನ್​ಗೆ ವಕೀಲರು ಕೆಲವು ಸಲಹೆ-ಸೂಚನೆಗಳನ್ನು ನೀಡಿದ್ದಾರೆ. ಅಂದಾಜು 35 ನಿಮಿಷಗಳ ಕಾಲ ದರ್ಶನ್ ಜೊತೆ ವಕೀಲರು ಮಾತುಕಥೆ ನಡೆಸಿದ್ದಾರೆ. ಇನ್ನೊಂದೆಡೆ, ದರ್ಶನ್​ಗೆ ಜಾಮೀನು ಕೊಡಿಸಲು ಪ್ರಯತ್ನ ನಡೆಯುತ್ತಿದೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಹಣದ ವ್ಯವಹಾರ; ಮತ್ತೆ ಸಂಕಷ್ಟದಲ್ಲಿ ದರ್ಶನ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್​ ಹಾಗೂ ನಟಿ ಪವಿತ್ರಾ ಗೌಡ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇದು ಗಂಭೀರ ಪ್ರಕರಣ ಆದ್ದರಿಂದ ಅಷ್ಟು ಸುಲಭಕ್ಕೆ ಜಾಮೀನು ಸಿಗುತ್ತಿಲ್ಲ. ಈ ಮಧ್ಯೆ ದರ್ಶನ್​ಗೆ ಸಂಕಷ್ಟ ಒಂದು ಎದುರಾಗಿದೆ.

ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್​ಶೀಟ್​ ಸಲ್ಲಿಕೆ ಆದ ಬಳಿಕ ಆರೋಪಿ ದರ್ಶನ್​ ಜಾಮೀನು ಪಡೆಯಲು ಪ್ರಯತ್ನ ನಡೆಸುತ್ತಿದ್ದಾರೆ. ಅವರ ಪರ ವಕೀಲರು ಆ ಬಗ್ಗೆ ಮಾತನಾಡಿದ್ದಾರೆ. ಬಳ್ಳಾರಿ ಜೈಲಿನಲ್ಲಿ ಇಂದು (ಸೆಪ್ಟೆಂಬರ್​ 24) ವಕೀಲರು ದರ್ಶನ್​ ಜೊತೆ ಮಾತನಾಡಿ ಬಂದಿದ್ದಾರೆ. ನಂತರ ಮಾಧ್ಯಮಗಳ ಎದುರು ಕೆಲವು ಮಾಹಿತಿ ಹಂಚಿಕೊಂಡಿದ್ದಾರೆ.

‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ

‘ದೇಶದಲ್ಲಿ ಇರುವ ಪ್ರತಿಯೊಬ್ಬ ಆರೋಪಿ ಮತ್ತು ಅಪರಾಧಿಗೆ ಕೆಲವು ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಹಾಸಿಗೆ, ದಿಂಬು, ಕನ್ನಡಿ, ಆರ್​ಓ ನೀರು ಮುಂತಾದ್ದನ್ನು ಪಡೆಯುವುದು ಆರೋಪಿಯ ಮೂಲಭೂತ ಹಕ್ಕು. ಅದನ್ನು ಯಾರೂ ತಿರಸ್ಕರಿಸುವಂತಿಲ್ಲ’ ಎಂದು ದರ್ಶನ್ ಪರ ವಕೀಲರು ಹೇಳಿದ್ದಾರೆ. ಈ ಕುರಿತು ಜೈಲರ್​ಗೆ ಮನವರಿಕೆ ಮಾಡಿಕೊಟ್ಟಿರುವುದಾಗಿ ತಿಳಿಸಿದ್ದಾರೆ.

ಕೋರ್ಟ್​ಗೆ ಬಂದ ದರ್ಶನ್ ಪರ ವಕೀಲರು; ನಡೆದ ಚರ್ಚೆಗಳೇನು?

ನಟ ದರ್ಶನ್​ಗೆ ಹೊಸ ಸಂಕಷ್ಟ ಶುರುವಾಗಿದೆ. ಇಷ್ಟು ದಿನಗಳ ಕಾಲ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ತೀವ್ರ ವಿಚಾರಣೆ ಎದುರಿಸಿದ್ದಾರೆ. ಬಳ್ಳಾರಿ ಕೇಂದ್ರ ಕಾರಗೃಹಕ್ಕೆ ದರ್ಶನ್ ಪರ ವಕೀಲರು ಬಂದಿದ್ದಾರೆ. ಈ ವೇಳೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಲಾಗಿದೆ.

ದರ್ಶನ್ ಮನೆ ಮೇಲೆ ನಡೆಯಲಿದೆ ಐಟಿ ದಾಳಿ; ದಾಸನಿಗೆ ಹೊಸ ಕೇಸ್ ತಲೆಬಿಸಿ ಶುರು

ರೇಣುಕಾ ಸ್ವಾಮಿಯ ಹತ್ಯೆ ಕೇಸ್​ ತನಿಖೆಯ ವೇಳೆ ಬಯಲಾದ ವಿಚಾರಗಳು ಒಂದೆರಡಲ್ಲ. ಈ ಕೃತ್ಯಕ್ಕೆ ಬಳಕೆ ಆಗಿರುವ ಅಪಾರ ಪ್ರಮಾಣದ ಹಣದ ಬಗ್ಗೆ ತನಿಖೆ ಆಗುವುದು ಬಾಕಿ ಇದೆ. ಅದಕ್ಕಾಗಿ ಐಟಿ ಅಧಿಕಾರಿಗಳು ದರ್ಶನ್ ಮನೆ ಮೇಲೆ ದಾಳಿ ನಡೆಸಲು ನಿರ್ಧರಿಸಿದ್ದಾರೆ. ಐಟಿ ದಾಳಿಗೆ ನ್ಯಾಯಾಲಯದಿಂದ ಅನುಮತಿ ಕೂಡ ಸಿಕ್ಕಿದೆ. ಇದರಿಂದ ದರ್ಶನ್​ಗೆ ಸಂಕಷ್ಟ ಇನ್ನಷ್ಟು ಹೆಚ್ಚಾಗಿದೆ.