Darshan Thoogudeepa
ನಟ ದರ್ಶನ್ ಅವರ ಪೂರ್ಣ ಹೆಸರು ದರ್ಶನ್ ತೂಗುದೀಪ. ಇವರು ಕನ್ನಡ ಚಿತ್ರರಂಗದ ಜನಪ್ರಿಯ ನಟ. 1977ರ ಫೆಬ್ರವರಿ 16ರಂದು ಕರ್ನಾಟಕದ ಮೈಸೂರಿನಲ್ಲಿ ಜನಿಸಿದ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ದರ್ಶನ್ ಅವರ ಚೊಚ್ಚಲ ಸಿನಿಮಾ ‘ಮೆಜೆಸ್ಟಿಕ್’ 2001ರಲ್ಲಿ ಬಿಡುಗಡೆಯಾಗಿತು. ಆ ಮೂಲಕ ಹೀರೋ ಆಗಿ ಅವರು ವೃತ್ತಿಜೀವನ ಆರಂಭಿಸಿದರು. ತಮ್ಮ ಅಭಿನಯದಿಂದ ವ್ಯಾಪಕವಾಗಿ ಮೆಚ್ಚುಗೆ ಪಡೆದ ದರ್ಶನ್ ಅವರು ವಿಶೇಷವಾಗಿ ಆ್ಯಕ್ಷನ್ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರ ಕೆಲವು ಗಮನಾರ್ಹ ಚಲನಚಿತ್ರಗಳಲ್ಲಿ ‘ಕರಿಯ’, ‘ನಮ್ಮ ಪ್ರೀತಿಯ ರಾಮು’, ‘ಸಂಗೊಳ್ಳಿ ರಾಯಣ್ಣ’, ‘ಕಲಾಸಿಪಾಳ್ಯ’, ‘ಅಯ್ಯ’, ‘ನವಗ್ರಹ’, ‘ಯಜಮಾನ’, ‘ರಾಬರ್ಟ್’, ‘ಕಾಟೇರ’ ಮುಂತಾದ ಸಿನಿಮಾಗಳಿವೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ದರ್ಶನ್ ಅವರು ಸಿನಿಮಾ ಮಾತ್ರವಲ್ಲದೇ ಪರೋಪಕಾರಿ, ಸಮಾಜಮುಖಿ ಚಟುವಟಿಕೆಗಳಿಂದಲೂ ಫೇಮಸ್ ಆಗಿದ್ದಾರೆ. ದರ್ಶನ್ ಅವರದ್ದು ಕಲಾವಿದರ ಕುಟುಂಬ. ಅವರ ತಂದೆ ತೂಗುದೀಪ ಶ್ರೀನಿವಾಸ್ ಅವರು ಕನ್ನಡ ಚಿತ್ರರಂಗದಲ್ಲಿ ಖ್ಯಾತ ಖಳನಟ ಆಗಿದ್ದರು. ಅವರ ಸಹೋದರ ದಿನಕರ್ ತೂಗುದೀಪ ನಿರ್ದೇಶಕನಾಗಿ, ನಟನಾಗಿ ಗುರುತಿಸಿಕೊಂಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ದರ್ಶನ್ ಪರ ವಕೀಲರು ‘ಬಾಸ್’ ಸಿನಿಮಾಗೆ ಪ್ರಮಾಣಪತ್ರ ನೀಡಬಾರದು ಎಂದು ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಿದ್ದಾರೆ. ಈ ಬಗ್ಗೆ ಬಾಸ್ ಚಿತ್ರದ ನಟ ತನುಷ್ ಶಿವಣ್ಣ ಅವರು ಮಾತನಾಡಿದ್ದಾರೆ. ಸಿನಿಮಾದ ಪ್ರಚಾರಕ್ಕಾಗಿ ನಾವು ಈ ರೀತಿ ಮಾಡಿಲ್ಲ. ಇದು ರೇಣುಕಾಸ್ವಾಮಿ ಕಥೆ ಅಲ್ಲ ಎಂದು ತನುಷ್ ಶಿವಣ್ಣ ಹೇಳಿದ್ದಾರೆ.
- Mangala RR
- Updated on: Mar 16, 2026
- 10:58 pm
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ತನುಷ್ ಶಿವಣ್ಣ ನಟನೆಯ ‘ಬಾಸ್’ ಚಿತ್ರಕ್ಕೆ ವಿ. ಲವ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕಥೆಗೂ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ಸಾಮ್ಯತೆ ಇದೆ ಎಂಬ ಆರೋಪ ಕೇಳಿಬಂದಿದೆ. ಈ ಚಿತ್ರಕ್ಕೆ ಸೆನ್ಸಾರ್ ನೀಡಬಾರದು ಎಂದು ದರ್ಶನ್ ಪರ ವಕೀಲರು ನೋಟಿಸ್ ನೀಡಿದ್ದಾರೆ. ಆ ಬಗ್ಗೆ ನಿರ್ದೇಶಕರು ಪ್ರತಿಕ್ರಿಯೆ ನೀಡಿದ್ದಾರೆ.
- Mangala RR
- Updated on: Mar 16, 2026
- 8:10 pm
‘ಬಾಸ್’ ಸಿನಿಮಾಗೆ ಸಂಕಷ್ಟ; ನೋಟಿಸ್ ಕೊಟ್ಟ ದರ್ಶನ್ ಲಾಯರ್
ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವಾಗಲೇ, ‘ಬಾಸ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದ ಟೀಸರ್ ರೇಣುಕಾಸ್ವಾಮಿ ಪ್ರಕರಣವನ್ನು ಹೋಲುತ್ತದೆ ಮತ್ತು "ನೈಜ ಘಟನೆ ಆಧಾರಿತ" ಎಂದು ಹೇಳಿಕೊಳ್ಳುವುದರಿಂದ ವಿವಾದ ಸೃಷ್ಟಿಯಾಗಿದೆ. ಪ್ರಕರಣ ಇನ್ನೂ ನ್ಯಾಯಾಲಯದಲ್ಲಿರುವುದರಿಂದ, ದರ್ಶನ್ ಪರ ವಕೀಲರು ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಿ, ಚಿತ್ರಕ್ಕೆ ಪ್ರಮಾಣೀಕರಣ ನೀಡದಂತೆ ಕೋರಿದ್ದಾರೆ.
- Mangala RR
- Updated on: Mar 16, 2026
- 3:12 pm
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್; ‘ಹಯಗ್ರೀವ’ ಬಗ್ಗೆ ಚರ್ಚೆ?
ಕನ್ನಡದ ನಟ ಧನ್ವೀರ್ ಅವರು ದರ್ಶನ್ ಬಗ್ಗೆ ಅಪಾರ ಪ್ರೀತಿ ಹೊಂದಿದ್ದಾರೆ. ಈ ಕಾರಣಕ್ಕೆ ಆಗಾಗ ದರ್ಶನ್ ಬಳಿ ತೆರಳಿ ಅವರನ್ನು ಭೇಟಿ ಮಾಡುತ್ತಾ ಇರುತ್ತಾರೆ. ಈ ವೇಳೆ ದರ್ಶನ್ ಬಳಿ ಧನ್ವೀರ್ ಮಾತನಾಡಿದ್ದಾರೆ. ಆ ಬಳಿಕದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಗಮನ ಸೆಳೆದಿದೆ. ಧನ್ವೀರ್ ಅವರ ನಿಯತ್ತಿಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.
- Web contact
- Updated on: Mar 14, 2026
- 8:34 am
ಮದುವೆ ಮಾಡಿಕೊಂಡು ನೇರವಾಗಿ ದರ್ಶನ್ ಮನೆ ಮುಂದೆ ಬಂದ ನವ ಜೋಡಿ
ದರ್ಶನ್ ಬಗ್ಗೆ ಜನರಿಗೆ ಯಾವ ರೀತಿ ಕ್ರೇಜ್ ಇದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ದರ್ಶನ್ ಫೋಟೋ ಎದುರು ಈ ಜೋಡಿ ಮದುವೆ ಆಗಿದೆ. ಮದುವೆ ಬಳಿಕ ನವ ದಂಪತಿ ರಾಜರಾಜೇಶ್ವರಿ ನಗರದ ದರ್ಶನ್ ಮನೆ ಮುಂದೆ ಬಂದಿದ್ದಾರೆ. ದರ್ಶನ್ ಅವರ ಆಶೀರ್ವಾದ ಪಡೆಯಬೇಕು ಎಂಬುದು ಈ ಜೋಡಿಯ ಆಸೆ ಆಗಿತ್ತು.
- Mangala RR
- Updated on: Mar 9, 2026
- 6:49 pm
‘ಬಾಸ್’ ಸಿನಿಮಾದಲ್ಲಿ ರೇಣುಕಾಸ್ವಾಮಿ ಸಾವಿನ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ
‘ಬಾಸ್’ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ತನುಶ್ ಶಿವಣ್ಣ ಅಭಿನಯದ ಈ ಸಿನಿಮಾಗೆ ವಿ. ಲವ ನಿರ್ದೇಶನ ಮಾಡಿದ್ದಾರೆ. ಟೀಸರ್ ನೋಡಿದ ಎಲ್ಲರಿಗೂ ಅಚ್ಚರಿ ಆಗಿದೆ. ಯಾಕೆಂದರೆ, ಕಥೆಯ ಎಳೆ ನೋಡಿದರೆ ರೇಣುಕಾಸ್ವಾಮಿ ಕೊಲೆ ಪ್ರಕರಣ ನೆನಪಿಗೆ ಬರುತ್ತದೆ. ಆ ನಿರ್ದೇಶಕರು ಲವ ಪ್ರತಿಕ್ರಿಯೆ ನೀಡಿದ್ದಾರೆ.
- Mangala RR
- Updated on: Mar 9, 2026
- 4:48 pm
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಓಂ ಪ್ರಕಾಶ್ ರಾವ್, ಅಣಜಿ ನಾಗರಾಜ್ ಒಟ್ಟಾಗಿ 2012ರಲ್ಲಿ ‘ಭೀಮ ತೀರದಲ್ಲಿ’ ಸಿನಿಮಾ ಮಾಡಿದ್ದರು. ಅವರ ಜತೆ ದರ್ಶನ್ ಆಪ್ತವಾಗಿದ್ದರೂ ಸಹ ಆ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದು ದುನಿಯಾ ವಿಜಯ್. ಯಾಕೆ ಎಂಬ ಪ್ರಶ್ನೆಗೆ ಓಂ ಪ್ರಕಾಶ್ ರಾವ್, ಅಣಜಿ ನಾಗರಾಜ್ ಉತ್ತರಿಸಿದ್ದಾರೆ.
- Mangala RR
- Updated on: Mar 3, 2026
- 10:14 pm
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ದರ್ಶನ್ ಜೊತೆ ಓಂ ಪ್ರಕಾಶ್ ರಾವ್ ಹಲವು ಸಿನಿಮಾ ಮಾಡಿದ್ದರು. ಈಗ ದರ್ಶನ್ ಜೈಲಿನಲ್ಲಿ ಇದ್ದಾರೆ. ಆದಷ್ಟು ಬೇಗ ರಿಲೀಸ್ ಆಗುತ್ತಾರೆ ಎಂದು ಓಂ ಪ್ರಕಾಶ್ ರಾವ್ ಹೇಳಿದ್ದಾರೆ. ‘ಭೀಮ ತೀರದಲ್ಲಿ’ ಚಿತ್ರ ಮರುಬಿಡುಗಡೆ ಆಗಲಿದ್ದು, ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
- Mangala RR
- Updated on: Mar 2, 2026
- 10:44 pm
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ನಡೆಯಲಿದೆ ಬೃಹತ್ ಪ್ರತಿಭಟನೆ
ನಟ ದರ್ಶನ್ ಅವರು ಸದ್ಯ ಜೈಲಿನಲ್ಲ ಇದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಅವರು ಸಾಕಷ್ಟು ಆರೋಪ ಕೇಳಿ ಬಂದಿದೆ. ಅದರಲ್ಲಿ ಪೊಲೀಸರು ಸುಳ್ಳು ದಾಖಲೆ ಸೃಷ್ಟಿ ಮಾಡಿದ್ದಾರೆ ಎಂಬುದು ಕೂಡ ಒಂದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೃಹತ್ ಪ್ರತಿ ಭಟನೆ ನಡೆಸಲು ಸಿದ್ಧಮಾಡಿಕೊಳ್ಳಲಾಗಿದೆ.
- Rajesh Duggumane
- Updated on: Feb 28, 2026
- 1:01 pm
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಭವಿಷ್ಯದ ಬಗ್ಗೆ ಮಾತಾಡಿದ ಕೋಡಿಮಠದ ಸ್ವಾಮೀಜಿ
ಜೈಲಿನಿಂದ ಹೊರಬಂದ ಬಳಿಕ ದರ್ಶನ್ ರಾಜಕೀಯಕ್ಕೆ ಬರುತ್ತಾರೆ ಎಂಬ ವದಂತಿ ಇದೆ. ಆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೋಡಿಶ್ರೀಗಳು, ‘ದರ್ಶನ್ ಹೊರಬಂದ ಮೇಲೆ ನೋಡೋಣ’ ಎಂದಿದ್ದಾರೆ. ದರ್ಶನ್ ವಿಷಯ ನ್ಯಾಯಾಲಯದಲ್ಲಿ ಇರುವುದರಿಂದ ಆ ಬಗ್ಗೆ ತಾವು ಮಾತನಾಡುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.
- Madan Kumar
- Updated on: Feb 26, 2026
- 5:42 pm
ದರ್ಶನ್ ಕೇಸ್: ಪೊಲೀಸರ ತನಿಖೆ ಬಗ್ಗೆ ಅನುಮಾನ; ಗೃಹ ಸಚಿವರ ಸ್ಪಷನೆ ಇಲ್ಲಿದೆ..
ರೇಣುಕಾಸ್ವಾಮಿ ಕೇಸ್ನ ಆರೋಪಿಗಳನ್ನು ಸುಳ್ಳು ಮಹಜರು ಮೂಲಕ ಸಿಕ್ಕಿಹಾಕಿಸಲು ಪೊಲೀಸರು ಪ್ರಯತ್ನಿಸಿದ್ದಾರೆ ಎಂಬ ಆರೋಪ ಎದುರಾಗಿದೆ. ಆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ವಕೀಲರ ಆಪಾದನೆಗಳಿಗೆ ಪೊಲೀಸರು ಉತ್ತರ ಕೊಡುತ್ತಾರೆ ಎಂದು ಅವರು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..
- Madan Kumar
- Updated on: Feb 24, 2026
- 3:57 pm
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್ಗೆ ಕೋರ್ಟ್ನಿಂದ ಸಿಕ್ತು ಸಣ್ಣ ರಿಲೀಫ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದು, ಅವರಿಗೆ ನ್ಯಾಯಾಲಯದಿಂದ ಸಣ್ಣ ರಿಲೀಫ್ ಸಿಕ್ಕಿದೆ. ಅಮಾನತುಗೊಂಡಿದ್ದ ಅವರ ಗನ್ ಲೈಸೆನ್ಸ್ಗೆ ಹೈಕೋರ್ಟ್ ಮಾರ್ಚ್ 6ರವರೆಗೆ ಮಧ್ಯಂತರ ತಡೆ ನೀಡಿದೆ. ದರ್ಶನ್ ಪರ ವಕೀಲರ ವಾದ ಪುರಸ್ಕರಿಸಿದ ನ್ಯಾಯಾಲಯದ ಈ ಆದೇಶದಿಂದ ನಟನಿಗೆ ತಾತ್ಕಾಲಿಕ ನಿರಾಳತೆ ಸಿಕ್ಕಂತಾಗಿದೆ, ಆದರೆ ಅವರು ಇನ್ನೂ ಜೈಲಿನಲ್ಲೇ ಇದ್ದಾರೆ.
- Ramesha M
- Updated on: Feb 23, 2026
- 3:10 pm