Darshan Thoogudeepa
ನಟ ದರ್ಶನ್ ಅವರ ಪೂರ್ಣ ಹೆಸರು ದರ್ಶನ್ ತೂಗುದೀಪ. ಇವರು ಕನ್ನಡ ಚಿತ್ರರಂಗದ ಜನಪ್ರಿಯ ನಟ. 1977ರ ಫೆಬ್ರವರಿ 16ರಂದು ಕರ್ನಾಟಕದ ಮೈಸೂರಿನಲ್ಲಿ ಜನಿಸಿದ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ದರ್ಶನ್ ಅವರ ಚೊಚ್ಚಲ ಸಿನಿಮಾ ‘ಮೆಜೆಸ್ಟಿಕ್’ 2001ರಲ್ಲಿ ಬಿಡುಗಡೆಯಾಗಿತು. ಆ ಮೂಲಕ ಹೀರೋ ಆಗಿ ಅವರು ವೃತ್ತಿಜೀವನ ಆರಂಭಿಸಿದರು. ತಮ್ಮ ಅಭಿನಯದಿಂದ ವ್ಯಾಪಕವಾಗಿ ಮೆಚ್ಚುಗೆ ಪಡೆದ ದರ್ಶನ್ ಅವರು ವಿಶೇಷವಾಗಿ ಆ್ಯಕ್ಷನ್ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರ ಕೆಲವು ಗಮನಾರ್ಹ ಚಲನಚಿತ್ರಗಳಲ್ಲಿ ‘ಕರಿಯ’, ‘ನಮ್ಮ ಪ್ರೀತಿಯ ರಾಮು’, ‘ಸಂಗೊಳ್ಳಿ ರಾಯಣ್ಣ’, ‘ಕಲಾಸಿಪಾಳ್ಯ’, ‘ಅಯ್ಯ’, ‘ನವಗ್ರಹ’, ‘ಯಜಮಾನ’, ‘ರಾಬರ್ಟ್’, ‘ಕಾಟೇರ’ ಮುಂತಾದ ಸಿನಿಮಾಗಳಿವೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ದರ್ಶನ್ ಅವರು ಸಿನಿಮಾ ಮಾತ್ರವಲ್ಲದೇ ಪರೋಪಕಾರಿ, ಸಮಾಜಮುಖಿ ಚಟುವಟಿಕೆಗಳಿಂದಲೂ ಫೇಮಸ್ ಆಗಿದ್ದಾರೆ. ದರ್ಶನ್ ಅವರದ್ದು ಕಲಾವಿದರ ಕುಟುಂಬ. ಅವರ ತಂದೆ ತೂಗುದೀಪ ಶ್ರೀನಿವಾಸ್ ಅವರು ಕನ್ನಡ ಚಿತ್ರರಂಗದಲ್ಲಿ ಖ್ಯಾತ ಖಳನಟ ಆಗಿದ್ದರು. ಅವರ ಸಹೋದರ ದಿನಕರ್ ತೂಗುದೀಪ ನಿರ್ದೇಶಕನಾಗಿ, ನಟನಾಗಿ ಗುರುತಿಸಿಕೊಂಡಿದ್ದಾರೆ.
ವಾರಕ್ಕೊಮ್ಮೆಯೂ ಪವಿತ್ರಾ ಗೌಡಗೆ ಮನೆ ಊಟ ಸಿಗೋದು ಅನುಮಾನ: ಹೆಚ್ಚಿತು ಸಂಕಷ್ಟ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಪವಿತ್ರಾ ಗೌಡ ಅವರು ಮನೆ ಊಟ ಪಡೆಯಲು ಪರದಾಡುತ್ತಿದ್ದಾರೆ. ಜೈಲೂಟದಿಂದ ಆರೋಗ್ಯ ಸಮಸ್ಯೆ ಆಗುತ್ತಿದೆ ಎಂದು ಪವಿತ್ರಾ ಗೌಡ ಅವರು ವಾದ ಮುಂದಿಟ್ಟಿದ್ದರು. ಹಾಗಾಗಿ ವಾರಕೊಮ್ಮೆ ಮನೆ ಊಟ ನೀಡಲು ಕೋರ್ಟ್ ಸೂಚಿಸಿತ್ತು. ಆ ಆದೇಶವನ್ನು ಈಗ ಸರ್ಕಾರ ಪ್ರಶ್ನಿಸಿದೆ.
- Ramesha M
- Updated on: Jan 19, 2026
- 8:38 pm
ಬಿಗ್ ಬಾಸ್ ಮನೆ ಒಳಗೆ ‘ಡೆವಿಲ್’ ಬಗ್ಗೆ ಗಿಲ್ಲಿ ಮಾತಾಡಿದ್ದ: ಅಸಲಿ ವಿಷಯ ತಿಳಿಸಿದ ಸ್ಪಂದನಾ
ಡಿಸೆಂಬರ್ 11ರಂದು ರಿಲೀಸ್ ಆದ ‘ದಿ ಡೆವಿಲ್’ ಸಿನಿಮಾದಲ್ಲಿ ಗಿಲ್ಲಿ ನಟ ಅವರಿಗೂ ಒಂದು ಪಾತ್ರವಿದೆ. ಹಾಗಾಗಿ ಬಿಗ್ ಬಾಸ್ ಮನೆಯ ಒಳಗೆ ಕೂಡ ಗಿಲ್ಲಿ ಅವರು ‘ದಿ ಡೆವಿಲ್’ ಚಿತ್ರದ ಬಗ್ಗೆ ಮಾತನಾಡಿದ್ದರು. ಆ ಬಗ್ಗೆ ಸ್ಪಂದನಾ ಸೋಮಣ್ಣ ಅವರು ‘ಟಿವಿ 9’ ಸಂದರ್ಶನದಲ್ಲಿ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.
- Malatesh Jaggin
- Updated on: Jan 5, 2026
- 5:19 pm
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಮೆಂಟ್ ಹಾಕಿದ್ದ ಇನ್ನಿಬ್ಬರ ಬಂಧನ
ತಮಗೆ ಅಶ್ಲೀಲ ಹಾಗೂ ಅಸಭ್ಯ ಕಮೆಂಟ್ ಮಾಡಿದ್ದವರ ವಿರುದ್ಧ ವಿಜಯಲಕ್ಷ್ಮಿ ದರ್ಶನ್ ಅವರು ದೂರು ನೀಡಿದ್ದರು. ಬೆಂಗಳೂರು ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಈವರೆಗೂ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ನಾಗರಾಜ್ ತಳವಾರ, ಪ್ರಶಾಂತ್ ತಳವಾರ, ನಿತಿನ್, ಚಂದ್ರು ಎಂಬುವವರ ಬಂಧನ ಆಗಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ..
- Rachappaji Naik S
- Updated on: Jan 4, 2026
- 1:54 pm
ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್ ಹಾಕಿದ್ದ ಇಬ್ಬರು ಅರೆಸ್ಟ್; ಬಂಧಿತರು ಯಾರು?
ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣಗಳಲ್ಲಿ ಎದುರಿಸುತ್ತಿರುವ ಅಶ್ಲೀಲ ಕಮೆಂಟ್ಗಳು ಮತ್ತು ಮೆಸೇಜ್ಗಳ ವಿರುದ್ಧ ಈಗ ಸಿಟ್ಟಿಗೆದ್ದಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ನೀಡಿದ ದೂರಿನನ್ವಯ ಇಬ್ಬರನ್ನು ಬಂಧಿಸಲಾಗಿದೆ. ಐಪಿ ಅಡ್ರೆಸ್ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಲಾಗಿದ್ದು, ಇಂತಹ ಸೈಬರ್ ಕಿರುಕುಳಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಸಂದೇಶವನ್ನು ಇದು ನೀಡಿದೆ.
- Rajesh Duggumane
- Updated on: Jan 2, 2026
- 12:29 pm
2025ರಲ್ಲಿ ಕನ್ನಡ ಸಿನಿಮಾಗಳು ಸೋತಿದ್ದೇ ಜಾಸ್ತಿ; ಬುದ್ಧಿ ಕಲಿಯಬೇಕಾಗಿದ್ದು ಯಾರು?
2025ರ ವರ್ಷ ಮುಗಿದಿದೆ. ಈ ವರ್ಷ ಕನ್ನಡ ಚಿತ್ರರಂಗಕ್ಕೆ ಅಷ್ಟೇನೂ ಆಶಾದಾಯಕ ಆಗಿರಲಿಲ್ಲ. ಬೆರಳೆಣಿಕೆಯ ಸಿನಿಮಾಗಳು ಮಾತ್ರ ಗೆದ್ದಿವೆ. ಉಳಿದ ಸಿನಿಮಾಗಳು ಸೋತಿವೆ. ಸ್ಟಾರ್ ಸಿನಿಮಾಗಳು ಕೂಡ ಬಾಕ್ಸ್ ಆಫೀಸ್ನಲ್ಲಿ ನೆಲಕಚ್ಚಿದ ಉದಾಹರಣೆ ಇದೆ. ಈ ಎಲ್ಲ ಸಂಗತಿಗಳಿಂದ ಕನ್ನಡ ಚಿತ್ರರಂಗಕ್ಕೆ ನಷ್ಟ ಆಗಿದೆ.
- Madan Kumar
- Updated on: Dec 31, 2025
- 4:33 pm
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ವಿಜಯಲಕ್ಷ್ಮಿ ದರ್ಶನ್ ಅವರು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ತಮ್ಮ ಕೇಸ್ ಬಗ್ಗೆ ವಿಚಾರಿಸಿದ್ದಾರೆ. ಯಾರನ್ನೂ ಈವರೆಗೆ ಬಂಧಿಸಿಲ್ಲ ಎಂಬುದು ತಿಳಿದು ವಿಜಯಲಕ್ಷ್ಮಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರ ಮಾತಿಗೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
- Madan Kumar
- Updated on: Dec 31, 2025
- 2:26 pm
ವಿಜಯಲಕ್ಷ್ಮಿ ನೀಡಿದ ದೂರಿಗೆ ಪೊಲೀಸರ ನಿರ್ಲಕ್ಷ್ಯ? ದರ್ಶನ್ ಪತ್ನಿ ಅಸಮಾಧಾನ
ಅಶ್ಲೀಲವಾಗಿ ಕಮೆಂಟ್ ಮಾಡಿದವರ ವಿರುದ್ಧ ವಿಜಯಲಕ್ಷ್ಮಿ ದರ್ಶನ್ ಅವರು ಇತ್ತೀಚೆಗೆ ದೂರು ನೀಡಿದ್ದರು. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಯಾರನ್ನೂ ಕೂಡ ಪೊಲೀಸರು ಬಂಧಿಸಿಲ್ಲ. ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿದ ಬಳಿಕ ವಿಜಯಲಕ್ಷ್ಮಿ ದರ್ಶನ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- Madan Kumar
- Updated on: Dec 31, 2025
- 1:14 pm
ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ನಟ ದರ್ಶನ್ ಅವರು ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಅವರ ಪರವಾಗಿ ಪತ್ನಿ ವಿಜಯಲಕ್ಷ್ಮಿ ಅವರು ಕಾನೂನಿನ ಹೋರಾಟ ಮಾಡುತ್ತಿದ್ದಾರೆ. ಇಂದು (ಡಿಸೆಂಬರ್ 31) ವಿಜಯಲಕ್ಷ್ಮಿ ದರ್ಶನ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ್ದಾರೆ.
- Madan Kumar
- Updated on: Dec 31, 2025
- 12:44 pm
ಸಿನಿಮಾ ರಿಲೀಸ್ ಆದ 20 ದಿನಗಳ ಬಳಿಕ ಕೋರ್ಟ್ನಿಂದ ಮಹತ್ವದ ಆದೇಶ ತಂದ ‘ಡೆವಿಲ್’ ತಂಡ
ದರ್ಶನ್ ನಟನೆಯ 'ಡೆವಿಲ್' ಸಿನಿಮಾ ತಂಡವು ಬಿಡುಗಡೆಯಾದ 20 ದಿನಗಳ ನಂತರ ನೆಗೆಟಿವ್ ವಿಮರ್ಶೆ, ಮಾನಹಾನಿ ತಡೆಯಲು ಕೋರ್ಟ್ ಆದೇಶ ತಂದಿದೆ. ಚಿತ್ರದ ಬಗ್ಗೆ ಅಪಪ್ರಚಾರ ಮಾಡುವವರು, ನಕಾರಾತ್ಮಕ ಪೋಸ್ಟ್ಗಳನ್ನು ಹಾಕುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಆದೇಶ ಎಚ್ಚರಿಸಿದೆ. ಇಂತಹ ವಿಷಯಗಳನ್ನು ತಕ್ಷಣ ತೆಗೆದುಹಾಕಲು ಸೂಚಿಸಿದೆ. ಈ ಮೂಲಕ ಚಿತ್ರತಂಡ 'ಡೆವಿಲ್' ಚಿತ್ರಕ್ಕೆ ಉಂಟಾಗಬಹುದಾದ ಹಾನಿಯನ್ನು ತಡೆಯಲು ಮುಂದಾಗಿದೆ.
- Rajesh Duggumane
- Updated on: Dec 31, 2025
- 6:58 am
ಸೋಮವಾರವೂ ‘ಮಾರ್ಕ್’, ‘45’ ಅಬ್ಬರದ ಕಲೆಕ್ಷನ್; ‘ಡೆವಿಲ್’ ಕಥೆ ಏನು?
ಕ್ರಿಸ್ಮಸ್ ಪ್ರಯುಕ್ತ ತೆರೆಕಂಡ 'ಮಾರ್ಕ್' ಹಾಗೂ '45' ಸಿನಿಮಾಗಳು ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿವೆ. ಸಕಾರಾತ್ಮಕ ವಿಮರ್ಶೆ ಪಡೆದ ಈ ಚಿತ್ರಗಳು ಸೋಮವಾರವೂ ಉತ್ತಮ ಗಳಿಕೆ ಕಂಡಿವೆ. ಆದರೆ, ಈ ಎರಡು ಚಿತ್ರಗಳ ಅಬ್ಬರದ ನಡುವೆ 'ಡೆವಿಲ್' ಸಿನಿಮಾ ಗಳಿಕೆ ಕುಗ್ಗಿದ್ದು, ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣುತ್ತಿಲ್ಲ.
- Rajesh Duggumane
- Updated on: Dec 30, 2025
- 6:59 am
‘ಮಾರ್ಕ್’, ‘45’ ರಿಲೀಸ್ ಬಳಿಕ ‘ಡೆವಿಲ್’ ಗಳಿಕೆ ಮಾಡಿದ್ದು ಎಷ್ಟು?
'ಮಾರ್ಕ್' ಹಾಗೂ '45' ಚಿತ್ರಗಳ ಬಿಡುಗಡೆಯ ನಡುವೆಯೂ ದರ್ಶನ್ ಅಭಿನಯದ 'ಡೆವಿಲ್' ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಗಳಿಕೆ ಮಾಡಿದೆ. ಡಿಸೆಂಬರ್ 11ರಂದು ಬಿಡುಗಡೆಯಾದ ಈ ಚಿತ್ರ 15 ದಿನಗಳಲ್ಲಿ 33.83 ಕೋಟಿ ರೂ. ಗ್ರಾಸ್ ಕಲೆಕ್ಷನ್ ಮಾಡಿದ್ದು, ಸ್ಯಾಂಡಲ್ವುಡ್ನಲ್ಲಿ ಸದ್ದು ಮಾಡುತ್ತಿದೆ. ಇದರ ಯಶಸ್ಸು ಚಿತ್ರೋದ್ಯಮಕ್ಕೆ ಖುಷಿ ನೀಡಿದೆ.
- Shreelaxmi H
- Updated on: Dec 26, 2025
- 8:11 am
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಕೆಲವು ಕಿಡಿಗೇಡಿಗಳು ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕುರಿತು ಅಶ್ಲೀಲ ಕಮೆಂಟ್ ಮಾಡುತ್ತಿದ್ದಾರೆ. ಅಂಥವರ ವಿರುದ್ಧ ಈಗಾಗಲೇ ವಿಜಯಲಕ್ಷ್ಮಿ ದರ್ಶನ್ ದೂರು ನೀಡಿದ್ದಾರೆ. ಈ ಎಲ್ಲ ಘಟನೆಗಳ ಬಗ್ಗೆ ನಟ ಶಿವರಾಜ್ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಮಾತನಾಡಿದ ವಿಡಿಯೋ ಇಲ್ಲಿದೆ.
- Mangala RR
- Updated on: Dec 25, 2025
- 8:53 pm