Dasara
ಮೈಸೂರು ದಸರಾ
ನಾಡ ಹಬ್ಬ ಎಂದೇ ಮೈಸೂರು ದಸರಾ ವಿಶ್ವವಿಖ್ಯಾತಿ ಪಡೆದಿದೆ. ವಿಜಯನಗರ ಪರಂಪರೆಯ ಪ್ರತೀಕವಾಗಿದ್ದ ‘ವಿಜಯದಶಮಿ ಆಚರಣೆ’ಯನ್ನು ಮೊದಲ ಬಾರಿಗೆ 1610 ರಲ್ಲಿ ಆಚರಿಸಿದರು ಎಂಬುದು ಇತಿಹಾಸದಲ್ಲಿದೆ. ದಸರಾಗೆ ಇಡೀ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗತ ವೈಭವ ಮರುಕಳಿಸುತ್ತದೆ. ಭವ್ಯ ಅರಮನೆಯ ಮುಂದೆ ರಾಜ ಗಾಂಭೀರ್ಯದಲ್ಲಿ ಸಾಗುವ ಗಜಪಡೆ, ಚಾಮುಂಡಿ ತಾಯಿಯ ಮೆರವಣಿಗೆ ನೋಡಲು ಜನ ದೇಶ-ವಿದೇಶದಿಂದ ಬರುತ್ತಾರೆ.
ಮೈಸೂರು ದಸರಾ ಉತ್ಸವ 10 ದಿನಗಳ ಕಾಲ ನಡೆಯುತ್ತದೆ. ನವರಾತ್ರಿಯ ಸಂದರ್ಭದಲ್ಲಿ 9 ದಿನವೂ ಉತ್ಸವ ನಡೆಯುತ್ತದೆ. 10ನೇ ದಿನ ವಿಜಯ ದಶಮಿಯಂದು ದಸರಾ ಜಂಬೂ ಸವಾರಿ ಆಚರಿಸಲಾಗುತ್ತದೆ. ಇದು ದಸರಾದ ಪ್ರಮುಖ ಆಕರ್ಷಣೆ. ಚಿನ್ನದ ಅಂಬಾರಿಯಲ್ಲಿ ವಿರಾಜಮಾನರಾದ ಚಾಮುಂಡೇಶ್ವರಿಯನ್ನು ಹೊತ್ತು ಸಾಗುವ ಗಜಪಡೆ ನೋಡಲು ಲಕ್ಷಾಂತರ ಮಂದಿ ಸೇರುತ್ತಾರೆ.
ಚಾಮುಂಡೇಶ್ವರಿ ದೇವಿಯ ಪೂಜೆಯೊಂದಿಗೆ ದಸರಾ ಪ್ರಾರಂಭವಾಗುತ್ತದೆ. ಮೈಸೂರಿನ ರಾಜ ಮನೆತನದವರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅರಮನೆಯಲ್ಲಿ ದರ್ಬಾರ್, ಆಯುಧ ಪೂಜೆ ಸೇರಿದಂತೆ ಇತರೆ ಎಲ್ಲಾ ಪೂಜೆಗಳನ್ನು ನೆರವೇರಿಸುತ್ತಾರೆ.
ಮೈಸೂರು ದಸರೆಗೆ ಬಲೂನ್ ಮಾರಲು ಬಂದಿದ್ದ ಬಾಲಕಿ ಅತ್ಯಾಚಾರ ಕೊಲೆ:ಕೀಚಕನಿಗೆ ಪೊಲೀಸ್ ಗುಂಡೇಟು
ಮೈಸೂರು ದಸರಾ ಸಂಭ್ರಮದ ನಡುವೆ ನಡೆದ ಪೈಶಾಚಿಕ ಘಟನೆಗೆ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕುಟುಂಬದ ಜೊತೆ ಮೈಸೂರು ದಸರಾ ಹಬ್ಬದ ವೇಳೆ ಬಲೂನು ಮಾರಾಟ ಮಾಡಲು ಬಂದಿದ್ದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆಯಾಗಿದ್ದು, ಈ ಸಂಬಂಧ ಪೊಲೀಸರು ಸಿಸಿಟಿವಿ ಆಧರಿಸಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ತಪ್ಪಿಸಿಕೊಳ್ಳಲು ಯತ್ನಿಸಿದ ಕೀಚಕನಿಗೆ ಪೊಲೀಸರು ಗುಂಡೇಟು ಕೊಟ್ಟಿದ್ದಾರೆ. ಹಾಗಾದ್ರೆ, ಮುಗ್ಧ ಬಾಲಕಿಯನ್ನು ಕಿತ್ತು ತಿಂದ ಪಾಪಿ ಯಾರು ಎನ್ನುವ ವಿವರ ಇಲ್ಲಿದೆ.
- Ram
- Updated on: Oct 10, 2025
- 4:59 pm
ಮೈಸೂರು ದಸರೆಗೆ ಬಲೂನ್ ಮಾರಲು ಬಂದಿದ್ದ ಬಾಲಕಿ ಶವ ಪತ್ತೆ, ಅತ್ಯಾಚಾರ ಶಂಕೆ
ಮೈಸೂರು ದಸರಾ ಅದ್ಧೂರಿಯಾಗಿ ತರೆಕಂಡಿದೆ. ವಿವಿಧ ವಸ್ತುಪ್ರದರ್ಶನ, ಕಲಾ ತಂಡಗಳ ಮನೋರಂಜನೆ ಕಾರ್ಯಕ್ರಮ, ಕುಸ್ತಿ, ಆಹಾರ ಮೇಳ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಈ ಬಾರಿಯ ಮೈಸೂರು ದಸರಾದಲ್ಲಿ ಆಯೋಜಿಸಲಾಗಿತ್ತು. ಆದ್ರೆ, ಈ ವೇಳೆ ಪೈಶಾಚಿಕ ಕೃತ್ಯವೊಂದು ನಡೆದಿದೆ. ದಸರೆಯಲ್ಲಿ ಬಲೂನ್ ಮಾರಲು ಬಂದಿದ್ದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ.
- Ram
- Updated on: Oct 10, 2025
- 12:02 am
ಮೈಸೂರು ದಸರಾ: ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ
ವಿಶ್ವ ವಿಖ್ಯಾತ ದಸರಾ ಜಂಬೂಸವಾರಿಗೆಂದು ಮೈಸೂರಿಗೆ ಬಂದಿದ್ದ ಗಜಪಡೆ ನಾಡಿನಿಂದ ಕಾಡಿನತ್ತ ಹೊರಟಿದೆ. ಅರಮನೆ ಆವರಣದಲ್ಲಿ ಆನೆಗಳಿಗೆ ಅದ್ಧೂರಿ ಬೀಳ್ಕೊಡುಗೆ ನೀಡಲಾಗಿದ್ದು, ಸಾಂಪ್ರದಾಯಿಕ ಪೂಜೆ ನೆರವೇರಿಸಿ ಕಳುಹಿಸಿಕೊಡಲಾಗಿದೆ. ಇನ್ನು ಕಾಡಿಗೆ ಹೊರಟ ಆನೆಗಳ ಜೊತೆ ಪ್ರವಾಸಿಗರು ಸೆಲ್ಫಿಗೆ ಮುಗಿಬಿದ್ದ ಪ್ರಸಂಗವೂ ನಡೀತು.
- Ram
- Updated on: Oct 5, 2025
- 1:03 pm
ದಸರಾ ಪರೇಡ್ನಲ್ಲಿ ಸಿಎಂ ಸಿದ್ದರಾಮಯ್ಯ ಜತೆ ಸಚಿವ ಮಹದೇವಪ್ಪ ಮೊಮ್ಮಗ: ಕಾಂಗ್ರೆಸ್ ಹೈಕಮಾಂಡ್ ಗರಂ
ನಾಡ ಹಬ್ಬ ದಸರಾ ಸಂಭ್ರಮ ಮುಗಿದಿದೆ. ಆದರೆ ಅದೊಂದು ವಿಷಯ ಬೆಂಗಳೂರು ಅಲ್ಲ, ದೆಹಲಿ ಮಟ್ಟದಲ್ಲೂ ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗುವಂತೆ ಮಾಡಿದೆ. ದಸರಾ ಉತ್ಸವದ ಮೇಲೆ ಕಣ್ಣಿಟ್ಟಿದ ಕಾಂಗ್ರೆಸ್ ಹೈಕಮಾಂಡ್, ಸಿಎಂ ಪರೇಡ್ನಲ್ಲಿ ಕಾಣಿಸಿಕೊಂಡ ಬಾಲಕನ ಬಗ್ಗೆ ಕರ್ನಾಟಕ ಕಾಂಗ್ರೆಸ್ ನಾಯಕರಿಂದ ಮಾಹಿತಿ ಕೇಳಿದೆ.
- Sunil MH
- Updated on: Oct 4, 2025
- 9:49 am
ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರುಪಾಲು
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಆಚೇಪಲ್ಲಿ ಗ್ರಾಮದ ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ಮುಳುಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೂವರ ಪೈಕಿ ಇಬ್ಬರು ಬಾಲಕರ ಈಜಲು ತೆರಳಿದ್ದರು. ಈ ವೇಳೆ ಈಜಲು ಬಾರದೆ ಮುಳುಗುತ್ತಿದ್ದು, ಅವರನ್ನು ರಕ್ಷಿಸಲು ಹೋಗಿದ್ದ ಮತ್ತೊಬ್ಬ ಬಾಲಕ ಕೂಡ ಪ್ರಾಣ ಕಳೆದುಕೊಂಡಿದ್ದಾನೆ.
- Bheemappa Patil
- Updated on: Oct 3, 2025
- 7:09 pm
ಗೋರಖನಾಥ ದೇವಾಲಯದಲ್ಲಿ ವಿಜಯದಶಮಿ ವಿಶೇಷ ಪೂಜೆ ನೆರವೇರಿಸಿದ ಸಿಎಂ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಗೋರಖನಾಥ ದೇವಾಲಯದಲ್ಲಿ ವಿಜಯದಶಮಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ವೇಳೆ ಸಾರ್ವಜನಿಕ ಕಲ್ಯಾಣಕ್ಕಾಗಿ ಪ್ರಾರ್ಥಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಗೋರಖನಾಥ ದೇವಸ್ಥಾನದಲ್ಲಿ ವಿಜಯದಶಮಿ ಸಂದರ್ಭದಲ್ಲಿ ಗೋರಕ್ಷಪೀಠಾಧೀಶ್ವರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶಿವನ ಅವತಾರವಾದ ಮಹಾಯೋಗಿ ಗುರು ಗೋರಖನಾಥರ ವಿಶೇಷ ಪೂಜೆ ಮತ್ತು ಆಚರಣೆಗಳನ್ನು ನೆರವೇರಿಸಿದರು.
- Sushma Chakre
- Updated on: Oct 2, 2025
- 11:22 pm
Mysuru Dasara: ಪಂಜಿನ ಕವಾಯತು ವೀಕ್ಷಿಸಿದ ರಾಜ್ಯಪಾಲ ಗೆಹ್ಲೋಟ್
ಮೈಸೂರು ದಸರಾ ಹಿನ್ನಲೆ ನಗರದ ಬನ್ನಿಮಂಟಪದ ಮೈದಾನದಲ್ಲಿ ನಡೆದ ಪಂಜಿನ ಕವಾಯತನ್ನ ಕರ್ನಾಟಕ ಗವರ್ನರ್ ವೀಕ್ಷಿಸಿದ್ದಾರೆ. ಕಾರ್ಯಕ್ರಮ ನೋಡಲು ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪೊಲೀಸ್ ಬ್ಯಾಂಡ್ ಮೂಲಕ ಸ್ವಾಗತ ಕೋರಲಾಗಿದೆ. ಆಕರ್ಷಕ ಪಂಜಿನ ಕವಾಯತು ನೆರೆದಿದ್ದ ಸಹಸ್ರಾರು ಜನರ ಮನಸೂರೆಗೊಂಡಿದೆ.
- Ram
- Updated on: Oct 2, 2025
- 9:55 pm
ದೆಹಲಿಯಲ್ಲಿ ದುರ್ಗಾ ಪೂಜೆ ವೇಳೆ ಧುನುಚಿ ನಾಚ್ ಪ್ರದರ್ಶಿಸಿದ ಬಿಜೆಪಿ ನಾಯಕಿ ಸ್ಮೃತಿ ಇರಾನಿ
ದುರ್ಗಾ ಪೂಜೆ ಆಚರಣೆಯ ಅಂತಿಮ ದಿನವಾದ ಇಂದು, ನಟಿ-ಬಿಜೆಪಿ ನಾಯಕಿ ಸ್ಮೃತಿ ಇರಾನಿ ಗುರುವಾರ ದೆಹಲಿಯ ಪಂಡಾರ ರಸ್ತೆಯಲ್ಲಿರುವ ಮಂಟಪದಲ್ಲಿ ಸಾಂಪ್ರದಾಯಿಕ 'ಧುನುಚಿ ನಾಚ್' ನಲ್ಲಿ ಭಾಗವಹಿಸಿದರು. ಸದಾಚಾರವಿರುವಲ್ಲಿ ವಿಜಯವಿದೆ! ಸದಾಚಾರ ಮತ್ತು ಸತ್ಯದ ವಿಜಯವನ್ನು ಸಂಕೇತಿಸುವ ವಿಜಯದಶಮಿ ಹಬ್ಬದಂದು ನಿಮ್ಮೆಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳು ಎಂದು ಪೋಸ್ಟ್ ಮಾಡಿದ್ದರು.
- Sushma Chakre
- Updated on: Oct 2, 2025
- 5:24 pm
Video: ಅಮ್ಮನ ಬೆನ್ನೇರಿ ಜಂಬೂ ಸವಾರಿ ವೀಕ್ಷಿಸಿದ ಯುವರಾಜ ಆದ್ಯವೀರ
ಮೈಸೂರು ದಸರಾ ಜಂಬೂ ಸವಾರಿಗೆ ಚಾಲನೆ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಂಸದ ಹಾಗೂ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದ್ದಾರೆ. ಇದಕ್ಕೂ ಮುನ್ನ ಮಹಾರಾಣಿ ತ್ರಿಷಿಕಾ ಅವರು ಕೂಡ ಈ ಜಂಬೂ ಸಾವರಿಯನ್ನು ವೀಕ್ಷಣೆ ಮಾಡಿದ್ದಾರೆ. ಯುವರಾಜ ಆದ್ಯವೀರ ಮಹಾರಾಣಿ ತ್ರಿಷಿಕಾ ಅವರ ಬೆನ್ನೇರಿ ಜಂಬೂ ಸವಾರಿಯನ್ನು ವೀಕ್ಷಣೆ ಮಾಡಿದ್ದಾರೆ.
- Akshay Pallamajalu
- Updated on: Oct 2, 2025
- 5:21 pm
ಮೈಸೂರು ದಸರಾ: ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆ ನಡೆದ ಜಂಬೂಸವಾರಿ ವೇಳೆ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾದ ಚಾಮುಂಡೇಶ್ವರಿಯನ್ನ ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡಿದ್ದಾರೆ. 6ನೇ ಬಾರಿ ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಸಾಗಿದ್ದು, ಕುಮ್ಕಿ ಆನೆಗಳಾದ ಕಾವೇರಿ, ರೂಪಾ ಸಾಥ್ ನೀಡಿವೆ.
- Ram
- Updated on: Oct 2, 2025
- 5:07 pm