Dasara

Dasara

ಮೈಸೂರು ದಸರಾ

ನಾಡ ಹಬ್ಬ ಎಂದೇ ಮೈಸೂರು ದಸರಾ ವಿಶ್ವವಿಖ್ಯಾತಿ ಪಡೆದಿದೆ. ವಿಜಯನಗರ ಪರಂಪರೆಯ ಪ್ರತೀಕವಾಗಿದ್ದ ‘ವಿಜಯದಶಮಿ ಆಚರಣೆ’ಯನ್ನು ಮೊದಲ ಬಾರಿಗೆ 1610 ರಲ್ಲಿ ಆಚರಿಸಿದರು ಎಂಬುದು ಇತಿಹಾಸದಲ್ಲಿದೆ. ದಸರಾಗೆ ಇಡೀ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗತ ವೈಭವ ಮರುಕಳಿಸುತ್ತದೆ. ಭವ್ಯ ಅರಮನೆಯ ಮುಂದೆ ರಾಜ ಗಾಂಭೀರ್ಯದಲ್ಲಿ ಸಾಗುವ ಗಜಪಡೆ, ಚಾಮುಂಡಿ ತಾಯಿಯ ಮೆರವಣಿಗೆ ನೋಡಲು ಜನ ದೇಶ-ವಿದೇಶದಿಂದ ಬರುತ್ತಾರೆ.

ಮೈಸೂರು ದಸರಾ ಉತ್ಸವ 10 ದಿನಗಳ ಕಾಲ ನಡೆಯುತ್ತದೆ. ನವರಾತ್ರಿಯ ಸಂದರ್ಭದಲ್ಲಿ 9 ದಿನವೂ ಉತ್ಸವ ನಡೆಯುತ್ತದೆ. 10ನೇ ದಿನ ವಿಜಯ ದಶಮಿಯಂದು ದಸರಾ ಜಂಬೂ ಸವಾರಿ ಆಚರಿಸಲಾಗುತ್ತದೆ. ಇದು ದಸರಾದ ಪ್ರಮುಖ ಆಕರ್ಷಣೆ. ಚಿನ್ನದ ಅಂಬಾರಿಯಲ್ಲಿ ವಿರಾಜಮಾನರಾದ ಚಾಮುಂಡೇಶ್ವರಿಯನ್ನು ಹೊತ್ತು ಸಾಗುವ ಗಜಪಡೆ ನೋಡಲು ಲಕ್ಷಾಂತರ ಮಂದಿ ಸೇರುತ್ತಾರೆ.

ಚಾಮುಂಡೇಶ್ವರಿ ದೇವಿಯ ಪೂಜೆಯೊಂದಿಗೆ ದಸರಾ ಪ್ರಾರಂಭವಾಗುತ್ತದೆ. ಮೈಸೂರಿನ ರಾಜ ಮನೆತನದವರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅರಮನೆಯಲ್ಲಿ ದರ್ಬಾರ್, ಆಯುಧ ಪೂಜೆ ಸೇರಿದಂತೆ ಇತರೆ ಎಲ್ಲಾ ಪೂಜೆಗಳನ್ನು ನೆರವೇರಿಸುತ್ತಾರೆ.

ಇನ್ನೂ ಹೆಚ್ಚು ಓದಿ

ಮೈಸೂರು ದಸರಾ ಪ್ರಾಯೋಜಕತ್ವದ ಪಟ್ಟಿ‌ ಬಿಡುಗಡೆ: ಜಂಬೂಸವಾರಿ ಪ್ರಾಯೋಜಕತ್ವಕ್ಕೆ 2 ಕೋಟಿ ರೂ ನಿಗದಿ

ಈ ಬಾರಿ ಅದ್ದೂರಿ ದಸರಾ ಆಚರಣೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಹಲವು ಬದಲಾವಣೆಯೊಂದಿಗೆ ಈ ಬಾರಿಯ ದಸರಾ ಹಬ್ಬ ನಡೆಯಲಿದೆ ಎಂದು ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು. ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ‘ದಸರಾ ಪ್ರಾಯೋಜಕರ ಜೊತೆ ಇಂದು ಸಭೆ ನಡೆಸಿದ್ದೇವೆ. ಕಳೆದ ಬಾರಿ ದಸರಾದಲ್ಲಿ 1ಕೋಟಿ 70 ಲಕ್ಷ ಪ್ರಾಯೋಜಕತ್ವ ಬಂದಿತ್ತು. ಹೆಚ್ಚಿನ ಪ್ರಾಯೋಜಕರು ಬಂದರೆ ಕಾರ್ಯಕ್ರಮ ಆಯೋಜನೆ ಸುಲಭ ಎಂದರು.

  • Ram
  • Updated on: Sep 11, 2024
  • 3:54 pm

ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​

ವಿಶ್ವವಿಖ್ಯಾತ ದಸರಾ ಗಜಪಡೆಯ ಮಾವುತರು, ಕಾವಾಡಿಗಳ ಕುಟುಂಬ, ಸಹಾಯಕ ಸಿಬ್ಬಂದಿ ಮತ್ತು ಚಾಲಕರು ಸೇರಿದಂತೆ 60ಕ್ಕೂ ಹೆಚ್ಚು ಜನರಿಗೆ ಹಾಟ್​ಬಾಕ್ಸ್​ ಗಿಫ್ಟ್​ ನೀಡಲಾಯಿತು. ಈ ವೇಳೆ ಡಿಸಿಎಫ್​ ಡಾ. ಪ್ರುಭುಗೌಡ, ಎಸಿಪಿ ಚಂದ್ರಶೇಖರ್, ಆನೆ ವೈದ್ಯ ಡಾ. ಮುಜೀಬ್​ ಮತ್ತು ಆಎಫ್​ಒ ಸಂತೋಷ್​ ವಿವಿಧ ಅಧಿಕಾರಿಗಳು ಇದ್ದರು.

  • Ram
  • Updated on: Sep 10, 2024
  • 12:14 pm

Mysore Dasara 2024: ಮೈಸೂರು ದಸರಾ 2024 ಯಾವಾಗ? ಈ ಬಾರಿಯ ವಿಶೇಷತೆ ಏನು? ಇತಿಹಾಸ ವೈಶಿಷ್ಟ್ಯ & ಕುತೂಹಲಕಾರಿ ಮಾಹಿತಿ ಇಲ್ಲಿದೆ

ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಜಂಬೂ ಸವಾರಿಗೆ ತಾಲೀಮು ಸಹ ನಡೆಯುತ್ತಿದೆ. ಈ ಬಾರಿಯ ನಾಡಹಬ್ಬ ಯಾವಾಗ ಆರಂಭವಾಗಿ ಯಾವಾಗ ಕೊನೆಗೊಳ್ಳಲಿದೆ? ಈ ಬಾರಿಯ ವಿಶೇಷತೆ ಏನು? ನವರಾತ್ರಿ ಸಂದರ್ಭ ನಡೆಯುವ ದಸರಾದ ಇತಿಹಾಸ, ವೈಶಿಷ್ಟ್ಯ ಸೇರಿದಂತೆ ಈ ಬಾರಿಯ ಕಾರ್ಯಕ್ರಮಗಳ ಸಮಗ್ರ ಮಾಹಿತಿ ಇಲ್ಲಿದೆ.

ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ಕ್ಕೆ ಭರ್ಜರಿ ಸಿದ್ದತೆ ನಡೆಯುತ್ತಿದೆ, ಅಭಿಮನ್ಯು ನೇತೃತ್ವದ ಗಜಪಡೆ ಕೂಡ ತಾಲೀಮು ನಡೆಸಿದೆ. ಅದರಂತೆ ಇಂದು(ಶನಿವಾರ) ಮೈಸೂರು ಅರಮನೆ ಆವರಣದಲ್ಲಿ ಗಜಪಡೆಗೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು.

ಮೈಸೂರು ದಸರಾ 2024: 2ನೇ ಹಂತದ ಗಜಪಡೆಯ ತೂಕ ಪರೀಕ್ಷೆ; ಯಾವ ಆನೆ ಎಷ್ಟು ತೂಕ? ಇಲ್ಲಿದೆ ಮಾಹಿತಿ

ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ದಸರಾಗೆ ಕಾಡುಬಿಟ್ಟು ನಾಡಿಗೆ ಬಂದಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಟೀಂ ಭರ್ಜರಿ ತಾಲೀಮು ಮಾಡ್ತೀವೆ. ಅದರಂತೆ ಇಂದು ಎರಡನೇ ಹಂತದ ದಸರಾ ಗಜಪಡೆಯ ತೂಕ ಪರೀಕ್ಷೆ ನಡೆಸಲಾಯಿತು. ಈ ಕುರಿತು ಒಂದು ವರದಿ ಇಲ್ಲಿದೆ.

ಮೈಸೂರು ದಸರಾ: ರಾಜಬೀದಿಗಳಲ್ಲಿ ದಸರಾ ಗಜಪಡೆ ಜಂಬೂ ಸವಾರಿ ತಾಲೀಮು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದ್ದು, ಗಜಪಡೆಯ ತಾಲೀಮು ಭರ್ಜರಿಯಾಗಿಯೇ ನಡೆಯುತ್ತಿದೆ. ಇಂದು ಎರಡನೇ ಹಂತದ ದಸರಾ ಗಜಪಡೆಯ ತೂಕ ಪರೀಕ್ಷೆ ನಡೆಯಲಿದ್ದು, ಈ ಮಧ್ಯೆ ಮೈಸೂರಿನಲ್ಲಿ ರಸ್ತೆಗಳಲ್ಲಿ ಗಜಪಡೆ ಜಂಬೂ ಸವಾರಿ ತಾಲೀಮು ನಡೆಸಿದೆ. ವಿಡಿಯೋ ಇಲ್ಲಿದೆ ನೋಡಿ.

  • Ram
  • Updated on: Sep 6, 2024
  • 10:54 am

Ganesh Chaturthi Special Trains: ಹಬ್ಬಗಳ ಸೀಸನ್​ಗೆ ಬೆಂಗಳೂರಿನಿಂದ ವಿವಿಧೆಡೆಗೆ 22 ವಿಶೇಷ ರೈಲುಗಳು

ಗೌರಿ ಗಣೇಶ ಅಥವಾ ಗಣೇಶ ಚತುರ್ಥಿ ಹಬ್ಬಕ್ಕೆ ಇನ್ನೊಂದೇ ದಿನ ಬಾಕಿ ಇದೆ. ಆ ನಂತರ ಸಾಲು ಹಬ್ಬಗಳು ಬರಲಿವೆ. ದಸರಾ, ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಗಮನದಲ್ಲಿಟ್ಟುಕೊಂಡು ನೈಋತ್ಯ ರೈಲ್ವೆ ಬೆಂಗಳೂರಿನಿಂದ ಕರ್ನಾಟಕದ ವಿವಿಧ ಪ್ರದೇಶಗಳಿಗೆ 22 ವಿಶೇಷ ರೈಲುಗಳನ್ನು ಘೋಷಿಸಿದೆ. ವಿವರ ಇಲ್ಲಿದೆ.

ದಸರಾ ಉದ್ಘಾಟಕರ ಬಗ್ಗೆ ಸಚಿವ ಹೆಚ್​ಸಿ ಮಹದೇವಪ್ಪ ಹೇಳಿದ್ದಿಷ್ಟು?

ಈಗಾಗಲೇ ದಸರಾ ಆಚರಣೆ ಕುರಿತು 19 ದಸರಾ ಉಪ ಸಮಿತಿಗಳ ತಂಡದ ಜತೆ ಸಭೆ ಮಾಡಿದ್ದೇನೆ. ಅದ್ಧೂರಿಯಾಗಿ ದಸರಾ ಆಚರಣೆಗೆ ಬೇಕಾದ ಎಲ್ಲಾ ರೂಪು ರೇಷಗಳ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಮಹದೇವಪ್ಪ ಹೇಳಿದರು.

ಮೈಸೂರು: ದಸರಾ ಆನೆಗಳ ಮಾವುತರ ಮಕ್ಕಳ ಜತೆ ವಾಲಿಬಾಲ್ ಆಡಿದ ಸಚಿವ ಮಹದೇವಪ್ಪ

ಇತಿಹಾಸ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ಗಜಪಡೆಗೂ ತರಬೇತಿ ನೀಡಲಾಗುತ್ತಿದೆ. ಸಚಿವ ಹೆಚ್​ಸಿ ಮಹದೇವಪ್ಪ ದಸರಾ ಸಿದ್ದತಾ ಪರಿಶೀಲನಾ ಸಭೆಗೆ ಬುಧವಾರ ಹಾಜರಾದರು. ಇದಕ್ಕೂ ಮುನ್ನ ಮಾವುತರು ಹಾಗೂ ಕಾವಾಡಿಗಳ ಮಕ್ಕಳ ಜೊತೆ ವಾಲಿಬಾಲ್ ಆಡಿದರು. ವಿಡಿಯೋ ಇಲ್ಲಿದೆ.

  • Ram
  • Updated on: Sep 4, 2024
  • 2:51 pm

ದಸರಾ ಆನೆ ಅಭಿಮನ್ಯುವಿನ ಮಾವುತ ವಸಂತಗೆ ಮುಖ್ಯಮಂತ್ರಿ ಪದಕ

ಅರಣ್ಯ ಇಲಾಖೆಯಲ್ಲಿ ಗಣನೀಯ ಸೇವೆಯನ್ನು ಗುರುತಿಸಿ ದಸರಾ ಆನೆ ಅಭಿಮನ್ಯುವಿನ ಮಾವುತ ಜೆ.ಎಸ್​ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ. ಜೆ. ಎಸ್​. ವಸಂತ್​ ಅವರು ಸುಮಾರು ವರ್ಷಗಳಿಂದ ಆನೆ ಅಭಿಮನ್ಯುವಿನ ಮಾವುತರಾಗಿದ್ದಾರೆ.

  • Ram
  • Updated on: Sep 4, 2024
  • 12:05 pm
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ