AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dasara

Dasara

ಮೈಸೂರು ದಸರಾ

ನಾಡ ಹಬ್ಬ ಎಂದೇ ಮೈಸೂರು ದಸರಾ ವಿಶ್ವವಿಖ್ಯಾತಿ ಪಡೆದಿದೆ. ವಿಜಯನಗರ ಪರಂಪರೆಯ ಪ್ರತೀಕವಾಗಿದ್ದ ‘ವಿಜಯದಶಮಿ ಆಚರಣೆ’ಯನ್ನು ಮೊದಲ ಬಾರಿಗೆ 1610 ರಲ್ಲಿ ಆಚರಿಸಿದರು ಎಂಬುದು ಇತಿಹಾಸದಲ್ಲಿದೆ. ದಸರಾಗೆ ಇಡೀ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗತ ವೈಭವ ಮರುಕಳಿಸುತ್ತದೆ. ಭವ್ಯ ಅರಮನೆಯ ಮುಂದೆ ರಾಜ ಗಾಂಭೀರ್ಯದಲ್ಲಿ ಸಾಗುವ ಗಜಪಡೆ, ಚಾಮುಂಡಿ ತಾಯಿಯ ಮೆರವಣಿಗೆ ನೋಡಲು ಜನ ದೇಶ-ವಿದೇಶದಿಂದ ಬರುತ್ತಾರೆ.

ಮೈಸೂರು ದಸರಾ ಉತ್ಸವ 10 ದಿನಗಳ ಕಾಲ ನಡೆಯುತ್ತದೆ. ನವರಾತ್ರಿಯ ಸಂದರ್ಭದಲ್ಲಿ 9 ದಿನವೂ ಉತ್ಸವ ನಡೆಯುತ್ತದೆ. 10ನೇ ದಿನ ವಿಜಯ ದಶಮಿಯಂದು ದಸರಾ ಜಂಬೂ ಸವಾರಿ ಆಚರಿಸಲಾಗುತ್ತದೆ. ಇದು ದಸರಾದ ಪ್ರಮುಖ ಆಕರ್ಷಣೆ. ಚಿನ್ನದ ಅಂಬಾರಿಯಲ್ಲಿ ವಿರಾಜಮಾನರಾದ ಚಾಮುಂಡೇಶ್ವರಿಯನ್ನು ಹೊತ್ತು ಸಾಗುವ ಗಜಪಡೆ ನೋಡಲು ಲಕ್ಷಾಂತರ ಮಂದಿ ಸೇರುತ್ತಾರೆ.

ಚಾಮುಂಡೇಶ್ವರಿ ದೇವಿಯ ಪೂಜೆಯೊಂದಿಗೆ ದಸರಾ ಪ್ರಾರಂಭವಾಗುತ್ತದೆ. ಮೈಸೂರಿನ ರಾಜ ಮನೆತನದವರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅರಮನೆಯಲ್ಲಿ ದರ್ಬಾರ್, ಆಯುಧ ಪೂಜೆ ಸೇರಿದಂತೆ ಇತರೆ ಎಲ್ಲಾ ಪೂಜೆಗಳನ್ನು ನೆರವೇರಿಸುತ್ತಾರೆ.

ಇನ್ನೂ ಹೆಚ್ಚು ಓದಿ

ಈ ಬಾರಿ ಮೈಸೂರು ದಸರಾ ಉದ್ಘಾಟಕರಾಗುತ್ತಾರಾ ಮಾಜಿ ಕ್ರಿಕೆಟರ್​​? ಇಬ್ಬರಲ್ಲಿ ಯಾರು?

Mysuru dasara 2026: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾವನ್ನು 11 ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಅಕ್ಟೋಬರ್ 11ಕ್ಕೆ ಉದ್ಘಾಟನೆ ಹಾಗೂ ಅಕ್ಟೋಬರ್ 21ಕ್ಕೆ ಜಂಬೂ ಸವಾರಿ ನಡೆಯಲಿದೆ. ಮಳೆ ಇಲ್ಲದೇ ಬರಗಾಲವಿದ್ದರೂ ಸಂಪ್ರದಾಯದಂತೆ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ದಸರಾ ಕುರಿತು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯವನರು ಕಾರ್ಯಕಾರಿ ಸಭೆ ನಡೆಸಿದ್ದು, ಕೆಲ ಮಹತ್ವ ತೀರ್ಮಾನಗಳನ್ನು ಕೈಗೊಂಡಿದ್ದಾರೆ.

  • Ram
  • Updated on: Jul 27, 2026
  • 3:32 pm

Protest Against Kambala: ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಪರಿಸರವಾದಿಗಳು, ರೈತ ಸಂಘಟನೆಗಳು ಮತ್ತು ಪ್ರಗತಿಪರ ಸಂಘಟನೆಗಳು ಕಂಬಳ ನಡೆಯುವ ಸ್ಥಳದಲ್ಲೇ ತೀವ್ರ ಪ್ರತಿಭಟನೆ ನಡೆಸಿವೆ. ಪ್ರತಿಭಟನಾಕಾರರು ಕರಾವಳಿ ಭಾಗದಿಂದ 300 ಕಿಲೋಮೀಟರ್ ದೂರದಿಂದ ಕೋಣಗಳನ್ನು ಕರೆತರುವುದು, ಜಾಗವನ್ನು ಹಾಳು ಮಾಡುವುದು ಮತ್ತು ಮರಗಳನ್ನು ಕಡಿಯುವುದು ಪರಿಸರಕ್ಕೆ ಮಾರಕ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಮೈಸೂರು ದಸರಾದಲ್ಲಿ ಕಂಬಳ ಬೇಡ’: ಯಾಕೆಂಬ ಕಾರಣ ನೀಡಿದ ಡಾ. ಶೆಲ್ವಪಿಳ್ಳೈ ಅಯ್ಯಂಗಾರ್!

ಮೈಸೂರು ದಸರಾದಲ್ಲಿ ಕಂಬಳ ಆಚರಣೆಗೆ ಇತಿಹಾಸ ತಜ್ಞ ಡಾ. ಶೆಲ್ವಪಿಳ್ಳೈ ಅಯ್ಯಂಗಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಕಂಬಳ ಕರಾವಳಿಯ ವಿಶಿಷ್ಟ ಕ್ರೀಡೆಯಾಗಿದ್ದು, ಮೈಸೂರು ದಸರಾದ ಪರಂಪರೆಗೆ ಅದು ಅನ್ಯ. ತಮ್ಮ ವೈವಿಧ್ಯತೆಯನ್ನು ಕಾಪಾಡಿಕೊಂಡು, ಆಯಾ ಪ್ರದೇಶದ ಆಚರಣೆಗಳನ್ನು ಆಯಾ ಸ್ಥಳದಲ್ಲೇ ಉತ್ತೇಜಿಸಬೇಕು. ಕರಾವಳಿಗೆ ಕಂಬಳ, ಮೈಸೂರಿಗೆ ದಸರಾ ಸುಂದರ ಎಂದು ಪ್ರತಿಪಾದಿಸಿದ್ದಾರೆ.

  • Ram
  • Updated on: Jul 15, 2026
  • 12:05 pm

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; ಎಫ್‌ಐಆರ್ ದಾಖಲು

ಮೈಸೂರು ದಸರಾ 2026ರಲ್ಲಿ ಕಂಬಳ ಸೇರ್ಪಡೆ ನಿರ್ಧಾರ ಹೊಸ ವಿವಾದಕ್ಕೆ ಕಾರಣವಾಗಿದೆ. ಸಾತಗಳ್ಳಿಯಲ್ಲಿ ಕಂಬಳಕ್ಕಾಗಿ ಮರಗಳನ್ನು ಕಡಿಯುವ ಪ್ರಸ್ತಾಪಕ್ಕೆ ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇದಲ್ಲದೆ, ಅನುಮತಿಯಿಲ್ಲದೆ ಮರ ಕಡಿದ ಆರೋಪದ ಮೇಲೆ ಯುವಜನ ಸಬಲೀಕರಣ ಇಲಾಖೆಯ ಉಪನಿರ್ದೇಶಕರು ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

  • Ram
  • Updated on: Jul 13, 2026
  • 2:54 pm

ದಸರಾ ಆಚರಣೆಗೆ ಸಿದ್ಧತೆ ಆರಂಭಿಸಿದ ಸರ್ಕಾರ: ವಿಜೃಂಭಣೆಯಿಂದ ಆಚರಣೆ ಎಂದ ಸಿಎಂ ಡಿಕೆ ಶಿವಕುಮಾರ್​

Mysuru Dasara 2026: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ದಿನಾಂಕ ಕೂಡ ನಿಗದಿ ಆಗಿದೆ. ನಾಡಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದೆ. ವಿಜೃಂಭಣೆಯಿಂದ ನಾಡಹಬ್ಬ ದಸರಾ ಆಚರಣೆ ಮಾಡುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ.

ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಅ 11ಕ್ಕೆ ಉದ್ಘಾಟನೆ, 21ಕ್ಕೆ ಜಂಬೂಸವಾರಿ

Mysuru Dasara 2026: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ ನಡೆದ ʻನಾಡಹಬ್ಬ ದಸರಾ - 2026ʼ ಆಚರಿಸುವ ಸಂಬಂಧ ಉನ್ನತ ಮಟ್ಟದ ಪೂರ್ವಭಾವಿ ಸಭೆಯಲ್ಲಿ ದಸರಾ ಮಹೋತ್ಸವಕ್ಕೆ ದಿನಾಂಕ ಫಿಕ್ಸ್​​ ಮಾಡಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ದಸರಾ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಗಜಪಡೆಗೆ ಇಸಿಜಿ ಟೆಸ್ಟ್! ಆನೆಗಳ ಆಯ್ಕೆ ಪ್ರಕ್ರಿಯೆ ಶುರು

Mysuru Dasara 2026: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಗಜಪಡೆಯ ಆಯ್ಕೆ ಪ್ರಕ್ರಿಯೆಯನ್ನು ಆರಂಭಿಸಿದೆ. ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ದಸರಾ ಆನೆಗಳ ಹೃದಯದ ಆರೋಗ್ಯ ತಪಾಸಣೆಗಾಗಿ ಇಸಿಜಿ (ECG) ಪರೀಕ್ಷೆ ಹಾಗೂ ಹೆಣ್ಣಾನೆಗಳಿಗೆ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ನಡೆಸಲಾಗುತ್ತಿರುವುದು ಈ ಬಾರಿಯ ವಿಶೇಷವಾಗಿದೆ.

  • Ram
  • Updated on: Jul 7, 2026
  • 11:45 am

ಮೈಸೂರು ದಸರಾ ಅಂಬಾರಿ ಆನೆ ಅಭಿಮನ್ಯುವಿಗೆ ದಂತಭಗ್ನ; ದಸರಾ ಮಹೋತ್ಸವಕ್ಕೆ ಅಡ್ಡಿಯಾಗುತ್ತಾ?

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಬಾರಿ ಆನೆ ಅಭಿಮನ್ಯುವಿನ ಎಡಭಾಗದ ದಂತವು ಮತ್ತಿಗೋಡು ಆನೆ ಶಿಬಿರದಲ್ಲಿ ಮರದ ದಿಮ್ಮಿ ಸಾಗಿಸುವಾಗ ಮುರಿದಿದೆ. ಘಟನೆಯಲ್ಲಿ ಆನೆಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ ಹಾಗೂ ಆರೋಗ್ಯ ಸ್ಥಿರವಾಗಿದೆ ಎಂದು ಪಶುವೈದ್ಯರು ತಿಳಿಸಿದ್ದಾರೆ. ಈ ದಂತ ಭಗ್ನದಿಂದ ಮುಂಬರುವ ಜಂಬೂ ಸವಾರಿಯ ಅಂಬಾರಿ ಹೊರುವ ಕರ್ತವ್ಯಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಅರಣ್ಯ ಇಲಾಖೆ ಸ್ಪಷ್ಟಪಡಿಸಿದೆ.

ಮೈಸೂರು ದಸರೆಗೆ ಬಲೂನ್ ಮಾರಲು ಬಂದಿದ್ದ ಬಾಲಕಿ ಅತ್ಯಾಚಾರ ಕೊಲೆ:ಕೀಚಕನಿಗೆ ಪೊಲೀಸ್ ಗುಂಡೇಟು

ಮೈಸೂರು ದಸರಾ ಸಂಭ್ರಮದ ನಡುವೆ ನಡೆದ ಪೈಶಾಚಿಕ ಘಟನೆಗೆ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕುಟುಂಬದ ಜೊತೆ ಮೈಸೂರು ದಸರಾ ಹಬ್ಬದ ವೇಳೆ ಬಲೂನು ಮಾರಾಟ ಮಾಡಲು ಬಂದಿದ್ದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆಯಾಗಿದ್ದು, ಈ ಸಂಬಂಧ ಪೊಲೀಸರು ಸಿಸಿಟಿವಿ ಆಧರಿಸಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ತಪ್ಪಿಸಿಕೊಳ್ಳಲು ಯತ್ನಿಸಿದ ಕೀಚಕನಿಗೆ ಪೊಲೀಸರು ಗುಂಡೇಟು ಕೊಟ್ಟಿದ್ದಾರೆ. ಹಾಗಾದ್ರೆ, ಮುಗ್ಧ ಬಾಲಕಿಯನ್ನು ಕಿತ್ತು ತಿಂದ ಪಾಪಿ ಯಾರು ಎನ್ನುವ ವಿವರ ಇಲ್ಲಿದೆ.

  • Ram
  • Updated on: Oct 10, 2025
  • 4:59 pm

ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿ ಶವ ಪತ್ತೆ, ಅತ್ಯಾಚಾರ ಶಂಕೆ

ಮೈಸೂರು ದಸರಾ ಅದ್ಧೂರಿಯಾಗಿ ತರೆಕಂಡಿದೆ. ವಿವಿಧ ವಸ್ತುಪ್ರದರ್ಶನ, ಕಲಾ ತಂಡಗಳ ಮನೋರಂಜನೆ ಕಾರ್ಯಕ್ರಮ, ಕುಸ್ತಿ, ಆಹಾರ ಮೇಳ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಈ ಬಾರಿಯ ಮೈಸೂರು ದಸರಾದಲ್ಲಿ ಆಯೋಜಿಸಲಾಗಿತ್ತು. ಆದ್ರೆ, ಈ ವೇಳೆ ಪೈಶಾಚಿಕ ಕೃತ್ಯವೊಂದು ನಡೆದಿದೆ. ದಸರೆಯಲ್ಲಿ ಬಲೂನ್ ಮಾರಲು ಬಂದಿದ್ದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ.

  • Ram
  • Updated on: Oct 10, 2025
  • 12:02 am

ಮೈಸೂರು ದಸರಾ: ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ

ವಿಶ್ವ ವಿಖ್ಯಾತ ದಸರಾ ಜಂಬೂಸವಾರಿಗೆಂದು ಮೈಸೂರಿಗೆ ಬಂದಿದ್ದ ಗಜಪಡೆ ನಾಡಿನಿಂದ ಕಾಡಿನತ್ತ ಹೊರಟಿದೆ. ಅರಮನೆ ಆವರಣದಲ್ಲಿ ಆನೆಗಳಿಗೆ ಅದ್ಧೂರಿ ಬೀಳ್ಕೊಡುಗೆ ನೀಡಲಾಗಿದ್ದು, ಸಾಂಪ್ರದಾಯಿಕ ಪೂಜೆ ನೆರವೇರಿಸಿ ಕಳುಹಿಸಿಕೊಡಲಾಗಿದೆ. ಇನ್ನು ಕಾಡಿಗೆ ಹೊರಟ ಆನೆಗಳ ಜೊತೆ ಪ್ರವಾಸಿಗರು ಸೆಲ್ಫಿಗೆ ಮುಗಿಬಿದ್ದ ಪ್ರಸಂಗವೂ ನಡೀತು.

  • Ram
  • Updated on: Oct 5, 2025
  • 1:03 pm

ದಸರಾ ಪರೇಡ್​ನಲ್ಲಿ ಸಿಎಂ ಸಿದ್ದರಾಮಯ್ಯ ಜತೆ ಸಚಿವ ಮಹದೇವಪ್ಪ ಮೊಮ್ಮಗ: ಕಾಂಗ್ರೆಸ್ ಹೈಕಮಾಂಡ್ ಗರಂ

ನಾಡ ಹಬ್ಬ ದಸರಾ ಸಂಭ್ರಮ ಮುಗಿದಿದೆ. ಆದರೆ ಅದೊಂದು ವಿಷಯ ಬೆಂಗಳೂರು ಅಲ್ಲ, ದೆಹಲಿ ಮಟ್ಟದಲ್ಲೂ ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗುವಂತೆ ಮಾಡಿದೆ. ದಸರಾ ಉತ್ಸವದ ಮೇಲೆ ಕಣ್ಣಿಟ್ಟಿದ ಕಾಂಗ್ರೆಸ್ ಹೈಕಮಾಂಡ್, ಸಿಎಂ ಪರೇಡ್​​ನಲ್ಲಿ ಕಾಣಿಸಿಕೊಂಡ ಬಾಲಕನ ಬಗ್ಗೆ ಕರ್ನಾಟಕ ಕಾಂಗ್ರೆಸ್​​ ನಾಯಕರಿಂದ ಮಾಹಿತಿ ಕೇಳಿದೆ.

  • Sunil MH
  • Updated on: Oct 4, 2025
  • 9:49 am
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ