Dasara
ಮೈಸೂರು ದಸರಾ
ನಾಡ ಹಬ್ಬ ಎಂದೇ ಮೈಸೂರು ದಸರಾ ವಿಶ್ವವಿಖ್ಯಾತಿ ಪಡೆದಿದೆ. ವಿಜಯನಗರ ಪರಂಪರೆಯ ಪ್ರತೀಕವಾಗಿದ್ದ ‘ವಿಜಯದಶಮಿ ಆಚರಣೆ’ಯನ್ನು ಮೊದಲ ಬಾರಿಗೆ 1610 ರಲ್ಲಿ ಆಚರಿಸಿದರು ಎಂಬುದು ಇತಿಹಾಸದಲ್ಲಿದೆ. ದಸರಾಗೆ ಇಡೀ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗತ ವೈಭವ ಮರುಕಳಿಸುತ್ತದೆ. ಭವ್ಯ ಅರಮನೆಯ ಮುಂದೆ ರಾಜ ಗಾಂಭೀರ್ಯದಲ್ಲಿ ಸಾಗುವ ಗಜಪಡೆ, ಚಾಮುಂಡಿ ತಾಯಿಯ ಮೆರವಣಿಗೆ ನೋಡಲು ಜನ ದೇಶ-ವಿದೇಶದಿಂದ ಬರುತ್ತಾರೆ.
ಮೈಸೂರು ದಸರಾ ಉತ್ಸವ 10 ದಿನಗಳ ಕಾಲ ನಡೆಯುತ್ತದೆ. ನವರಾತ್ರಿಯ ಸಂದರ್ಭದಲ್ಲಿ 9 ದಿನವೂ ಉತ್ಸವ ನಡೆಯುತ್ತದೆ. 10ನೇ ದಿನ ವಿಜಯ ದಶಮಿಯಂದು ದಸರಾ ಜಂಬೂ ಸವಾರಿ ಆಚರಿಸಲಾಗುತ್ತದೆ. ಇದು ದಸರಾದ ಪ್ರಮುಖ ಆಕರ್ಷಣೆ. ಚಿನ್ನದ ಅಂಬಾರಿಯಲ್ಲಿ ವಿರಾಜಮಾನರಾದ ಚಾಮುಂಡೇಶ್ವರಿಯನ್ನು ಹೊತ್ತು ಸಾಗುವ ಗಜಪಡೆ ನೋಡಲು ಲಕ್ಷಾಂತರ ಮಂದಿ ಸೇರುತ್ತಾರೆ.
ಚಾಮುಂಡೇಶ್ವರಿ ದೇವಿಯ ಪೂಜೆಯೊಂದಿಗೆ ದಸರಾ ಪ್ರಾರಂಭವಾಗುತ್ತದೆ. ಮೈಸೂರಿನ ರಾಜ ಮನೆತನದವರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅರಮನೆಯಲ್ಲಿ ದರ್ಬಾರ್, ಆಯುಧ ಪೂಜೆ ಸೇರಿದಂತೆ ಇತರೆ ಎಲ್ಲಾ ಪೂಜೆಗಳನ್ನು ನೆರವೇರಿಸುತ್ತಾರೆ.
ಇನ್ನೂ ಹೆಚ್ಚು ಓದಿಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಆಯ್ಕೆ
ಈ ಬಾರಿಯ ಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು (ಸೆಪ್ಟೆಂಬರ್ 04) ಯುವ ದಸರಾ ಸಮಿತಿಯ ಕಾರ್ಯಾಧ್ಯಕ್ಷ ಸೋಮಶೇಖರ್ ನೇತೃತ್ವದ ಸಮಿತಿ ಸದಸ್ಯರು ಚೆನ್ನೈಗೆ ತೆರಳಿ ಪ್ರಭುದೇವ್ ಅವರಿಗೆ ಆಹ್ವಾನ ನೀಡಿದರು. ಯುವ ದಸರಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಯುವ ದಸರಾ ಸಮಿತಿ ಅಧಿಕೃತವಾಗಿ ಆಹ್ವಾನ ನೀಡಿದ್ದು, ಇದಕ್ಕೆ ಪ್ರಭುದೇವ್ ಸಹ ಸಮಿತಿಯ ಆಹ್ವಾನವನ್ನು ಸಂತೋಷದಿಂದ ಸ್ವೀಕರಿಸಿದರು.
- Ram
- Updated on: Sep 4, 2026
- 5:57 pm
ಅಭಿಮಾನಿಗಳ ಒತ್ತಾಸೆಗೆ ಮಣಿದ ಸರ್ಕಾರ: ಮೈಸೂರು ದಸರಾಗೆ ನಿಶಾನೆ ಆನೆಯಾಗಿ ಅಭಿಮನ್ಯು ಆಯ್ಕೆ
ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಆನೆಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಿವೃತ್ತಿ ನೀಡಲಾಗಿದ್ದರೂ, ಅಭಿಮಾನಿಗಳ ಒತ್ತಾಸೆಯಂತೆ 2026ರ ದಸರಾ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಪಾಲ್ಗೊಳ್ಳಲು ಸರ್ಕಾರ ಅವಕಾಶ ನೀಡಿದೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚಿಸಿದ್ದಾರೆ.
- Ram
- Updated on: Sep 4, 2026
- 12:35 pm
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಮೈಸೂರು ದಸರಾ 2026ಕ್ಕೆ ಸಿದ್ಧತೆಗಳು ಆರಂಭವಾಗಿವೆ. ಮಹಾರಾಣಿ ಪ್ರಮೋದಾದೇವಿ ಒಡೆಯರ್ ಅವರು ಪಟ್ಟದ ಆನೆ ಮತ್ತು ನಿಶಾನೆ ಆನೆಯನ್ನು ಆಯ್ಕೆ ಮಾಡಿದ್ದಾರೆ. ಶ್ರೀಕಂಠ ಎರಡನೇ ಬಾರಿಗೆ ಪಟ್ಟದ ಆನೆಯಾಗಿ ಆಯ್ಕೆಯಾಗಿದ್ದು, ಏಕಲವ್ಯ ನಿಶಾನೆ ಆನೆಯಾಗಿ ಸೇವೆ ಸಲ್ಲಿಸಲಿದೆ. ಈ ಸಾಂಪ್ರದಾಯಿಕ ಆನೆಗಳ ಆಯ್ಕೆಯು ದಸರಾ ಮಹೋತ್ಸವದ ಪ್ರಮುಖ ಹಂತವಾಗಿದೆ.
- Ram
- Updated on: Sep 4, 2026
- 11:36 am
ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲ ಸಿಎಂಗಳಿಗೆ ಆಹ್ವಾನ: ಅದ್ಧೂರಿ ಆಚರಣೆಗೆ ಸಿಎಂ ಡಿಕೆಶಿ ಪ್ಲ್ಯಾನ್
ಮೈಸೂರು ದಸರಾವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ಸರ್ಕಾರ ಸಿದ್ಧತೆ ಆರಂಭಿಸಿದೆ. ದಕ್ಷಿಣ ಭಾರತದ ಎಲ್ಲ ಸಿಎಂಗಳಿಗೆ ಆಹ್ವಾನ, ಏರ್ಶೋ, ಡ್ರೋನ್ ಶೋ, ಸೇನಾಪಡೆಗಳ ಭಾಗವಹಿಸುವಿಕೆ ಸೇರಿದಂತೆ ಹಲವು ಹೊಸ ಕಾರ್ಯಕ್ರಮಗಳನ್ನು ಆಯೋಜಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
- Iranna Basava
- Updated on: Sep 4, 2026
- 2:21 pm
ಮೈಸೂರು ದಸರಾ: ಗಜಪಡೆಯ ತೂಕ ಮಾಪನ ಕಾರ್ಯ; ಮೊದಲ ಸ್ಥಾನ ಪಡೆದ ಶ್ರೀಕಂಠ
Mysuru Dasara: ಮೈಸೂರು ದಸರಾ ಮಹೋತ್ಸವಕ್ಕಾಗಿ ಆಗಮಿಸಿರುವ ಮೊದಲ ತಂಡದ ಗಜಪಡೆಯ ತೂಕ ಮಾಪನ ನಡೆದಿದೆ. ಒಟ್ಟು 9 ಆನೆಗಳಲ್ಲಿ 5,790 ಕೆಜಿ ತೂಗುವ ಮೂಲಕ ಶ್ರೀಕಂಠ ಆನೆ ಪ್ರಥಮ ಸ್ಥಾನ ಪಡೆದರೆ, ಏಕಲವ್ಯ ಹಾಗೂ ಧನಂಜಯ ನಂತರದ ಸ್ಥಾನ ಪಡೆದಿವೆ. ಆಗಸ್ಟ್ 26ರಂದು ವೀರನಹೊಸಳ್ಳಿಯಿಂದ ಈ ಗಜಪಡೆಗೆ ಫಲತಾಂಬೂಲ ನೀಡುವ ಮೂಲಕ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಬಳಿಕ ಆಗಸ್ಟ್ 28ರಂದು ದಸರಾ ಜಗಪಡೆಯು ಜಯಮಾರ್ತಾಂಡ ದ್ವಾರ ಮೂಲಕ ಮೈಸೂರು ಅರಮನೆ ಪ್ರವೇಶಿಸಿತ್ತು.
- Ram
- Updated on: Aug 30, 2026
- 2:09 pm
ಮೈಸೂರು: ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಮೈಸೂರು ದಸರಾ 2026ಕ್ಕಾಗಿ ಅರಮನೆಗೆ ಆಗಮಿಸಿದ ಗಜಪಡೆಯ ಶ್ರೀರಾಮ ಆನೆಯು ಜನದಟ್ಟಣೆ ಮತ್ತು ನಾದಸ್ವರದ ಸದ್ದಿಗೆ ಗಾಬರಿಗೊಂಡಿತು. ಅರಮನೆ ಪ್ರವೇಶಿಸುವಾಗ ಬ್ಯಾರಿಕೇಡ್ ಬೀಳಿಸಿ ಆನೆ ಗಾಬರಿಯಾದ ಸಂದರ್ಭದಲ್ಲಿ ಮಾವುತರು ಅದನ್ನು ಯಶಸ್ವಿಯಾಗಿ ನಿಯಂತ್ರಿಸಿದರು. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
- Ram
- Updated on: Aug 28, 2026
- 6:51 pm
ಮೈಸೂರು ದಸರಾ 2026: ಅರಮನೆಗೆ ಬಂದ ಗಜಪಡೆಗೆ ವಿವಿಧ ಕಲಾ ತಂಡಗಳ ಸಮೇತ ಭವ್ಯ ಸ್ವಾಗತ
Mysuru Dasara 2026: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಗಜಪಡೆಗೆ ಅರಮನೆಯಲ್ಲಿ ಭವ್ಯ ಸ್ವಾಗತ ಕೋರಲಾಯಿತು. ಅರಣ್ಯ ಭವನದಿಂದ ಆಗಮಿಸಿದ ಆನೆಗಳಿಗೆ ಸಾಂಪ್ರದಾಯಿಕ ಗಜಪೂಜೆ ನೆರವೇರಿಸಲಾಯಿತು. ಸಚಿವರಾದ ಡಾ. ಯತೀಂದ್ರ ಸಿದ್ಧರಾಮಯ್ಯ ಮತ್ತು ರಾಮಲಿಂಗಾರೆಡ್ಡಿ ಪೂಜೆಯಲ್ಲಿ ಭಾಗವಹಿಸಿ, ದಸರಾ ಮಹೋತ್ಸವದ ಶುಭಾರಂಭಕ್ಕೆ ಚಾಲನೆ ನೀಡಿದರು.
- Ram
- Updated on: Aug 28, 2026
- 11:32 am
Mysore Dasara 2026: ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ಕ್ಕೆ ಗಜಪಡೆ ಇಂದು ಅರಮನೆ ಪ್ರವೇಶಿಸಲಿದೆ. ಇಂದು ಬೆಳಗ್ಗೆ 9.55 ರಿಂದ 10.19ರ ಶುಭ ತುಲಾ ಲಗ್ನದಲ್ಲಿ ಅರಮನೆಗೆ ಆಗಮಿಸುವ ಆನೆಗಳಿಗೆ ಅರಣ್ಯ ಭವನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮೊದಲ ಹಂತದಲ್ಲಿ ಧನಂಜಯ, ಮಹೇಂದ್ರ ಸೇರಿದಂತೆ 9 ಆನೆಗಳು ಅರಮನೆಗೆ ಆಗಮಿಸುತ್ತಿವೆ.
- Ram
- Updated on: Aug 28, 2026
- 9:20 am
ಮೈಸೂರು ದಸರಾ ಗಜಪಯಣಕ್ಕೆ ಅದ್ಧೂರಿ ಚಾಲನೆ: ಅಭಿಮನ್ಯುಗೆ ಭಾವುಕ ಬೀಳ್ಕೊಡುಗೆಯ ಕ್ಷಣಗಳು
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ನಾಗರಹೊಳೆ ಅಭಯಾರಣ್ಯದ ಅಂಚಿನಲ್ಲಿರುವ ವೀರನಹೊಸಹಳ್ಳಿಯಲ್ಲಿ ಸಂಪ್ರದಾಯಬದ್ಧ ಪೂಜೆಯೊಂದಿಗೆ ಗಜಪಯಣಕ್ಕೆ ಚಾಲನೆ ನೀಡಲಾಗಿದೆ. ಇದೇ ವೇಳೆ ಸತತ ಆರು ಬಾರಿ ಚಿನ್ನದ ಅಂಬಾರಿ ಹೊತ್ತು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದ್ದ ಕ್ಯಾಪ್ಟನ್ ಅಭಿಮನ್ಯುವಿಗೆ ಗೌರವಪೂರ್ವಕ ಬೀಳ್ಕೊಡುಗೆ ನೀಡಲಾಯಿತು.
- Ram
- Updated on: Aug 26, 2026
- 8:43 pm
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?: ಇಲ್ಲಿದೆ ಮಾಹಿತಿ
ಮೈಸೂರು ದಸರಾ 2026ಕ್ಕೆ ದಿನಗಣನೆ ಆರಂಭವಾಗಿದೆ. ಸತತ ಆರು ಬಾರಿ ಜಂಬೂ ಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತ ಕ್ಯಾಪ್ಟನ್ ಅಭಿಮನ್ಯು ಆನೆ 60 ವರ್ಷ ತುಂಬಿದ ಕಾರಣ ನಿವೃತ್ತಿ ಹೊಂದಿದ್ದಾನೆ. ಆದರೆ, ಅವನ ದೀರ್ಘಾವಧಿಯ ಸೇವೆ, ಅನುಭವ ಮತ್ತು ಆನೆಗಳನ್ನು ನಿಯಂತ್ರಿಸುವ ಸಾಮರ್ಥ್ಯದ ಕಾರಣ, ದಸರಾದಲ್ಲಿ ನಿಶಾನೆ ಆನೆಯಾಗಿ ಪಾಲ್ಗೊಳ್ಳಲು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.
- Ram
- Updated on: Aug 26, 2026
- 6:09 pm
Mysuru Gaja Payana: ಅಭಿಮನ್ಯುಗೆ ವಿಶ್ರಾಂತಿ; ಈ ಬಾರಿ ಅಂಬಾರಿ ಹೊರುವ ಆನೆ ಯಾವುದು?
ಮೈಸೂರು ದಸರಾ ಗಜಪಯಣ ವೀರಹೊಸನಹಳ್ಳಿಯಿಂದ ಅರಮನೆಗೆ ಆರಂಭವಾಗಿದೆ. ಆರು ಬಾರಿ ಚಾಮುಂಡೇಶ್ವರಿ ಅಂಬಾರಿ ಹೊತ್ತಿದ್ದ ಅಭಿಮನ್ಯು ಆನೆಗೆ ಈ ಬಾರಿ ಬೀಳ್ಕೊಡುಗೆ ನೀಡಲಾಗಿದೆ. ಅಭಿಮನ್ಯು 25 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿದೆ. ಅಂಬಾರಿ ಹೊರಲು ಮುಂದಿನ ಆನೆ ಯಾವುದು ಎಂಬುದು ಇನ್ನೂ ನಿರ್ಧರವಾಗಿಲ್ಲ, ತರಬೇತಿಯ ಬಳಿಕ ಅರಮನೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು.
- Ram
- Updated on: Aug 26, 2026
- 1:00 pm
ಮೈಸೂರು ದಸರಾ 2026: ಗಜಪಡೆಗೆ ವೀರನಹೊಸಳ್ಳಿಯಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯರಿಂದ ಚಾಲನೆ
ಮೈಸೂರು ದಸರಾ 2026ರ ಗಜಪಡೆಗೆ ಹುಣಸೂರಿನ ವೀರನಹೊಸಳ್ಳಿಯಲ್ಲಿ ಚಾಲನೆ ದೊರೆತಿದೆ. ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರು ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಆನೆಗಳ ಪಾದ ತೊಳೆದು ನೈವೇದ್ಯ ಅರ್ಪಿಸಿದರು. ಜನಸಂದಣಿಯ ನಡುವೆಯೂ ಭವ್ಯವಾಗಿ ನಡೆದ ಈ ಕಾರ್ಯಕ್ರಮದಲ್ಲಿ 9 ದಸರಾ ಆನೆಗಳು ಮೈಸೂರಿನತ್ತ ಪಯಣ ಆರಂಭಿಸಿದವು.
- Ram
- Updated on: Aug 26, 2026
- 11:38 am