AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi

Delhi

ಭಾರತದ ರಾಜಧಾನಿಯಾದ ದೆಹಲಿಯು ಇತಿಹಾಸ, ಸಂಸ್ಕೃತಿ ಮತ್ತು ಆಧುನಿಕತೆಯಿಂದ ಕೂಡಿದ ನಗರವಾಗಿದೆ. ಐತಿಹಾಸಿಕ ಕೆಂಪು ಕೋಟೆ, ಕುತುಬ್ ಮಿನಾರ್ ಮತ್ತು ಇಂಡಿಯಾ ಗೇಟ್‌ನಂತಹ ಪುರಾತನ ಸ್ಮಾರಕಗಳ ಶ್ರೀಮಂತ ವಸ್ತ್ರದೊಂದಿಗೆ ದೆಹಲಿಯು ತನ್ನ ಶತಮಾನಗಳ-ಹಳೆಯ ಪರಂಪರೆಗೆ ಸಾಕ್ಷಿಯಾಗಿದೆ. ಚಾಂದಿನಿ ಚೌಕ್‌ನಂತಹ ನಗರದ ರೋಮಾಂಚಕ ಮಾರುಕಟ್ಟೆಗಳು ವೈವಿಧ್ಯಮಯ ಬೀದಿ ಆಹಾರ, ಜವಳಿ ಮತ್ತು ಸಾಂಪ್ರದಾಯಿಕ ಕರಕುಶಲ ವಸ್ತುಗಳೊಂದಿಗೆ ಸಂವೇದನಾ ಮಿತಿಮೀರಿದ ಹೊರೆಯನ್ನು ನೀಡುತ್ತವೆ.
ರಾಜಕೀಯ ಮತ್ತು ಆರ್ಥಿಕ ಕೇಂದ್ರವಾಗಿ, ದೆಹಲಿಯು ಭಾರತೀಯ ಸರ್ಕಾರದ ಸ್ಥಾನವನ್ನು ಮತ್ತು ಹಲವಾರು ಅಂತರರಾಷ್ಟ್ರೀಯ ರಾಯಭಾರ ಕಚೇರಿಗಳನ್ನು ಹೊಂದಿದೆ. ಇದರ ವಿಸ್ತಾರವಾದ ಮಹಾನಗರವು ಹಳೆಯ ಮತ್ತು ನವದೆಹಲಿ ಎರಡನ್ನೂ ಒಳಗೊಳ್ಳುತ್ತದೆ. ದೆಹಲಿ ಮೆಟ್ರೊ ಐತಿಹಾಸಿಕ ಹೆಗ್ಗುರುತುಗಳನ್ನು ಸಮಕಾಲೀನ ನೆರೆಹೊರೆಗಳೊಂದಿಗೆ ಸಂಪರ್ಕಿಸುತ್ತದೆ.
ವಾಯು ಮಾಲಿನ್ಯದಂತಹ ಸವಾಲುಗಳನ್ನು ಎದುರಿಸುತ್ತಿರುವ ಹೊರತಾಗಿಯೂ, ದೆಹಲಿಯು ಹೊಸತನ ಮತ್ತು ಜಾಗತಿಕ ಪ್ರಭಾವಗಳನ್ನು ಅಳವಡಿಸಿಕೊಂಡು ಕ್ರಿಯಾತ್ಮಕ ನಗರವಾಗಿ ವಿಕಸನಗೊಳ್ಳುತ್ತಲೇ ಇದೆ.

ಇನ್ನೂ ಹೆಚ್ಚು ಓದಿ

ಪಾಕಿಸ್ತಾನದಿಂದ ವಲಸೆ ಬಂದ ದಲಿತ ಹಿಂದೂಗಳಿಗೆ ವಸತಿ ಕಲ್ಪಿಸಿ; ಸುಪ್ರೀಂ ಕೋರ್ಟ್ ಆದೇಶ

ಪಾಕಿಸ್ತಾನ ಮೂಲದ ದಲಿತ ಹಿಂದೂಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ಅವರನ್ನು ಗಡಿಪಾರು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಮೂಲಕ ದೆಹಲಿಯಲ್ಲಿ ಪಾಕ್​ ವಲಸಿಗರ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಪಾಕಿಸ್ತಾನದಿಂದ ಭಾರತಕ್ಕೆ ವಲಸೆ ಬಂದ ದಲಿತ ಹಿಂದೂಗಳಿಗೆ ಪೌರತ್ವ ನೀಡುವುದು ಮಾತ್ರವಲ್ಲದೆ ಅವರಿಗೆ ಗೌರವಯುತವಾಗಿ ಬದುಕಲು ಅವಕಾಶ ಹಾಗೂ ಸೌಲಭ್ಯ ಕಲ್ಪಿಸಬೇಕು ಎಂದು ಸುಪ್ರೀಂ ಕೋರ್ಟ್​ ಸರ್ಕಾರಕ್ಕೆ ಸೂಚನೆ ನೀಡಿದೆ.

ಎಲ್ಲ ಶಾಲೆಗಳಲ್ಲಿ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ ನೀಡುವುದು ಕಡ್ಡಾಯ; ಸುಪ್ರೀಂ ಕೋರ್ಟ್ ಆದೇಶ

ಮುಟ್ಟಿನ ಆರೋಗ್ಯದ ಹಕ್ಕು ಕೂಡ ಮೂಲಭೂತ ಹಕ್ಕಿನ ಭಾಗ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಶಾಲೆಗಳಲ್ಲಿ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ಗಳ ವಿತರಣೆಯನ್ನು ಕಡ್ಡಾಯಗೊಳಿಸಿದೆ. ಋತುಚಕ್ರದ ವೇಳೆ ಅನೈರ್ಮಲ್ಯದ ಕಾರಣದಿಂದ ಅನಾರೋಗ್ಯಕ್ಕೆ ಒಳಗಾಗುವುದನ್ನು ತಡೆಯಲು ಹಾಗೂ ಮುಟ್ಟಿನ ವೇಳೆ ಶಾಲೆಗೆ ಬಾರದಿರುವ ಹೆಣ್ಣುಮಕ್ಕಳ ಸಮಸ್ಯೆಯನ್ನು ದೂರ ಮಾಡಲು ಸುಪ್ರೀಂ ಕೋರ್ಟ್ ಈ ಮೂಲಕ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ಆದೇಶ ಕೇವಲ ಸರ್ಕಾರಿ ಶಾಲೆಗಳಿಗೆ ಮಾತ್ರವಲ್ಲದೆ ಖಾಸಗಿ ಶಾಲೆಗಳಿಗೂ ಅನ್ವಯವಾಗುತ್ತದೆ.

6 ವರ್ಷದ ಹೆಣ್ಣುಮಗು ಮೇಲೆ ಮೂವರು ಬಾಲಕರಿಂದ ಲೈಂಗಿಕ ದೌರ್ಜನ್ಯ!

ದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕೇವಲ 6 ವರ್ಷದ ಪುಟ್ಟ ಮಗುವಿನ ಮೇಲೆ ಅತ್ಯಾಚಾರ ನಡೆಸಲಾಗಿದೆ. ಹಾಗಂತ ಈ ಕೃತ್ಯ ಎಸಗಿದವರು ಯಾರೋ ಕಾಮುಕ ಯುವಕರೂ ಅಲ್ಲ, ಕುಡಿತದ ಅಮಲಿನಲ್ಲಿದ್ದವರೂ ಅಲ್ಲ. ಈ ಅತ್ಯಾಚಾರ ನಡೆಸಿದವರು ಮೂವರು ಅಪ್ರಾಪ್ತ ಬಾಲಕರು ಎಂಬುದು ಆಘಾತಕಾರಿ ಸಂಗತಿ. 13, 14 ಮತ್ತು 15 ವರ್ಷದ ಮೂವರು ಮಕ್ಕಳು 6 ವರ್ಷದ ಮಗುವಿನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದು ತೀವ್ರ ಆಘಾತಕ್ಕೆ ಕಾರಣವಾಗಿದೆ.

ಕೇಂದ್ರ ಬಜೆಟ್ 2026: ಹಲ್ವಾ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿ; ಬಜೆಟ್​ಗೆ ಮುಂಚೆ ನಡೆಯುವ ಇದರ ವಿಶೇಷತೆ ಏನು?

Union Budget 2026, Halwa Ceremony: ಫೆಬ್ರುವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಅದಕ್ಕೂ ಮೊದಲು ಹಲ್ವಾ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಿ ಹಲ್ವಾ ತಯಾರಿಕೆಯಲ್ಲಿ ತೊಡಗಿ, ನಂತರ ಸಿಹಿ ಹಂಚಿದರು. ಬಜೆಟ್​ನ ಅಂತಿಮ ಹಂತದ ಸಿದ್ಧತೆಯನ್ನು ಆರಂಭಿಸುವ ಮುನ್ನ ಹಲ್ವಾ ಕಾರ್ಯಕ್ರಮವನ್ನು ನಡೆಸಲಾಗುತ್ತದೆ.

ಪ್ರಧಾನಿ ಮೋದಿಯ ದೃಷ್ಟಿ ಮತ್ತು ನಿಲುವು ಕಂಡು ಅಚ್ಚರಿಗೊಂಡ ಎಐ ಸ್ಟಾರ್ಟಪ್​ಗಳ ಮುಖ್ಯಸ್ಥರು

PM Modi's AI Vision: ಪ್ರಧಾನಿ ಮೋದಿ ದೆಹಲಿಯಲ್ಲಿ AI ಸ್ಟಾರ್ಟಪ್‌ಗಳೊಂದಿಗೆ ಸಂವಾದ ನಡೆಸಿದರು. ಫೆಬ್ರವರಿಯಲ್ಲಿ ನಡೆಯಲಿರುವ ಇಂಡಿಯಾ AI ಇಂಪ್ಯಾಕ್ಟ್ ಸಮಿಟ್ ಹಿನ್ನೆಲೆಯಲ್ಲಿ ಈ ಸಭೆ ಆಯೋಜಿಸಲಾಗಿತ್ತು. ಭಾರತವನ್ನು ಜಾಗತಿಕ AI ನಾಯಕನನ್ನಾಗಿ ಮಾಡುವ ಪ್ರಧಾನಿಯವರ ದೃಷ್ಟಿಕೋನ, ವಿಶೇಷವಾಗಿ ಫೌಂಡೇಶನ್ ಮಾಡೆಲ್‌ಗಳ ಅಭಿವೃದ್ಧಿ, ಸ್ಟಾರ್ಟಪ್ ಮುಖ್ಯಸ್ಥರನ್ನು ಪ್ರೇರೇಪಿಸಿತು. 'ಭಾರತಕ್ಕೆ ಅನನ್ಯವಾದ ಪರಿಹಾರಗಳನ್ನು ನಿರ್ಮಿಸಬೇಕು' ಎಂಬ ಸಂದೇಶ ಸಭೆಯ ಪ್ರಮುಖಾಂಶವಾಗಿತ್ತು.

ದೇಶದ್ರೋಹ ಆರೋಪಿ ಉಮರ್ ಖಾಲೀದ್​ಗೆ ನ್ಯೂಯಾರ್ಕ್ ಮೇಯರ್ ಕಾಳಜಿ ಪತ್ರ; 8 ಅಮೆರಿಕನ್ ಜನಪ್ರತಿನಿಧಿಗಳಿಂದಲೂ ಬೆಂಬಲ

Delhi Riots accused Umar Khalid gets some support from US: 2020ರ ದೆಹಲಿ ಹಿಂಸಾಚಾರ ಘಟನೆಗಳಿಗೆ ಸಂಚು ರೂಪಿಸಿದ ಆರೋಪದ ಮೇಲೆ ಬಂಧನದಲ್ಲಿರುವ ಉಮರ್ ಖಾಲೀದ್​ಗೆ ಕೆಲ ಅಮೆರಿಕನ್ನರು ಬೆಂಬಲಿಸಿದ್ದಾರೆ. ಎಂಟು ಅಮೆರಿಕನ್ ಜನಪ್ರತಿನಿಧಿಗಳು ಉಮರ್ ಖಾಲೀದ್ ಮತ್ತಿತರರಿಗೆ ಜಾಮೀನು ಕೊಡಬೇಕೆಂದು ಆಗ್ರಹಿಸಿ ಭಾರತೀಯ ರಾಯಭಾರಿಗೆ ಪತ್ರ ಬರೆದಿದ್ದಾರೆ. ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ಅವರು ವೈಯಕ್ತಿಕವಾಗಿ ಉಮರ್ ಖಾಲೀದ್​ಗೆ ಬೆಂಬಲ ತೋರಿ ಪತ್ರ ಬರೆದಿದ್ದಾರೆ.

ಉನ್ನಾವ್ ಲೈಂಗಿಕ ದೌರ್ಜನ್ಯ ಪ್ರಕರಣ; ಕುಲದೀಪ್ ಸೆಂಗಾರ್ ಜಾಮೀನು ರದ್ದತಿಗೆ ಸುಪ್ರೀಂ ಕೋರ್ಟ್ ತಡೆ

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಶಾಸಕ ಕುಲದೀಪ್ ಸೆಂಗಾರ್ ಅವರಿಗೆ ನೀಡಲಾಗಿದ್ದ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಅವರ ಜಾಮೀನು ರದ್ದುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದರಿಂದ ಕುಲದೀಪ್ ಸೆಂಗಾರ್​​ಗೆ ಭಾರೀ ಮುಖಭಂಗವಾಗಿದೆ. ಕುಲದೀಪ್ ಸೆಂಗಾರ್‌ಗೆ ಪರಿಹಾರ ನೀಡುವ ದೆಹಲಿ ಹೈಕೋರ್ಟ್‌ನ ನಿರ್ಧಾರಕ್ಕೆ ತಡೆ ನೀಡುವಂತೆ ಕೋರಿ ಸಿಬಿಐ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ಅಸ್ತಿತ್ವದಲ್ಲೇ ಇಲ್ಲದ ಅಪಾರ್ಟ್​ಮೆಂಟ್ 12 ಕೋಟಿ ರೂ.ಗೆ ಮಾರಾಟ; ದೆಹಲಿಯ 200 ಕೋಟಿ ರೂ. ಆಸ್ತಿ ಹಗರಣ ಬಯಲಾಗಿದ್ದು ಹೇಗೆ?

ಕೆಲವೊಮ್ಮೆ ನಾವು ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಯಾಮಾರಿಸಿ ಪಂಗನಾಮ ಹಾಕುವವರು ಇದ್ದೇ ಇರುತ್ತಾರೆ. ದೆಹಲಿಯಲ್ಲಿ ಅಸ್ತಿತ್ವದಲ್ಲೇ ಇಲ್ಲದ ಅಪಾರ್ಟ್​ಮೆಂಟ್​ ಒಂದರಲ್ಲಿ ಫ್ಲಾಟ್​ ಖರೀದಿ ಮಾಡಲೆಂದು ಒಂದೊಂದು ಫ್ಲಾಟ್​​ಗೆ 12 ಕೋಟಿ ರೂ. ನೀಡಿದ್ದ ಗ್ರಾಹಕರಿಗೆ ತಮಗೆ ಆಗುತ್ತಿರುವ ಮೋಸದ ಸುಳಿವೇ ಸಿಗಲಿಲ್ಲ. ಗ್ರಾಹಕರೊಬ್ಬರು ಈ ಅಪಾರ್ಟ್​​ಮೆಂಟ್​​ಗೆ ಕಳೆದ ವರ್ಷ ಆಗಸ್ಟ್ ಮತ್ತು ಅಕ್ಟೋಬರ್ ನಡುವೆ ಆರ್‌ಟಿಜಿಎಸ್ ಮೂಲಕ 12 ಕೋಟಿ ರೂ.ಗಳನ್ನು ವರ್ಗಾಯಿಸಿದ್ದಾರೆ ಎಂದು ವರದಿಯಾಗಿದೆ. ಆದರೆ, ಆ ಗ್ರಾಹಕರಿಗೆ ನೀಡಲಾದ ಎಲ್ಲಾ ದಾಖಲೆಗಳು ನಕಲಿ ಎಂದು ಪೊಲೀಸರು ತಿಳಿಸಿದ್ದಾರೆ.

12,000 ಕೋಟಿ ರೂ ವೆಚ್ಚದಲ್ಲಿ ಡೆಲ್ಲಿ ಮೆಟ್ರೋ ವಿಸ್ತರಣೆ; ಬರಲಿವೆ 13 ಹೊಸ ನಿಲ್ದಾಣಗಳು; ಸಂಪುಟ ಅನುಮೋದನೆ

Delhi Metro network to be expanded beyond 400km: ಡೆಲ್ಲಿ ಮೆಟ್ರೋ ಐದನೇ ಹಂತದ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ ಕೊಟ್ಟಿದೆ. 12,000 ಕೋಟಿ ರೂ ವೆಚ್ಚದಲ್ಲಿ ಮೆಟ್ರೋ ಜಾಲ ವಿಸ್ತರಣೆಯಾಗಲಿದೆ. ಮೂರು ಕಾರಿಡಾರ್​ಗಳಲ್ಲಿ ಒಟ್ಟು 16 ಕಿಮೀಯಷ್ಟು ಜಾಲ ವಿಸ್ತರಣೆ ಆಗುತ್ತದೆ. 3 ಎಲಿವೇಟೆಡ್ ನಿಲ್ದಾಣ ಸೇರಿ 13 ಹೊಸ ಮೆಟ್ರೋ ಸ್ಟೇಷನ್​ಗಳು ಸ್ಥಾಪನೆಯಾಗಲಿವೆ.

ದೆಹಲಿಯಲ್ಲಿ ನಾಳೆಯಿಂದ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ, ವಿದ್ಯಾರ್ಥಿಗಳಿಗೆ ಆನ್​ಲೈನ್ ತರಗತಿ ಕಡ್ಡಾಯ

ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯದ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಖಾಸಗಿ ಕಂಪನಿಗಳು ಮನೆಯಿಂದಲೇ ಕೆಲಸ ಮಾಡಲು ಆದೇಶ ಹೊರಡಿಸಲಾಗಿದೆ. ಈ ಆದೇಶ ಉಲ್ಲಂಘನೆ ಮಾಡಿದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ನಿರಂತರವಾಗಿ ವಾಯು ಮಾಲಿನ್ಯ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೂ ಆನ್ ಲೈನ್ ಮೂಲಕ ತರಗತಿ ನಡೆಸಲು ದೆಹಲಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯ; 5ನೇ ತರಗತಿವರೆಗಿನ ಮಕ್ಕಳು ಶಾಲೆಗೆ ಬರುವಂತಿಲ್ಲ

ದೆಹಲಿಯ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಮಾನ್ಯತೆ ಪಡೆದ ಖಾಸಗಿ ಶಾಲೆಗಳಲ್ಲಿ ನರ್ಸರಿಯಿಂದ 5ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ದೈಹಿಕ ತರಗತಿಗಳನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ. ಅವರೆಲ್ಲರಿಗೂ ಆನ್‌ಲೈನ್ ತರಗತಿಗಳು ಮುಂದುವರಿಯುತ್ತವೆ. ಡಿಸೆಂಬರ್ 13ರಂದು ಶಿಕ್ಷಣ ಇಲಾಖೆ ಹೊರಡಿಸಿದ ನಿರ್ದೇಶನಗಳ ಪ್ರಕಾರ, ಉಳಿದ ಶ್ರೇಣಿಗಳಿಗೆ ತರಗತಿಗಳನ್ನು ಹೈಬ್ರಿಡ್ ಮೋಡ್‌ನಲ್ಲಿ ನಡೆಸಲಾಗುವುದು.

ದೆಹಲಿ ಮಾಲಿನ್ಯದ ಬಗ್ಗೆ ಕಳವಳ; ಇಂಗ್ಲೆಂಡ್, ಕೆನಡಾ, ಸಿಂಗಾಪುರದ ಪ್ರಯಾಣಿಕರಿಗೆ ಅಲರ್ಟ್

ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗಿರುವುದರಿಂದ ಇಂಗ್ಲೆಂಡ್, ಕೆನಡಾ, ಸಿಂಗಾಪುರದ ಪ್ರಯಾಣಿಕರಿಗೆ ಅಲ್ಲಿನ ಸರ್ಕಾರ ದೆಹಲಿಗೆ ತೆರಳುವಾಗ ಎಚ್ಚರ ವಹಿಸುವಂತೆ ಸಲಹೆ ನೀಡಿದೆ. ದೆಹಲಿಯಲ್ಲಿ ಗಾಳಿಯ ಗುಣಮಟ್ಟ (AQI) 500ಕ್ಕೆ ತಲುಪಿದೆ. ಇದು ಭಾರತದಲ್ಲಿ ಮಾತ್ರವಲ್ಲದೆ ಬೇರೆ ದೇಶಗಳಲ್ಲೂ ಕಳವಳ ಮೂಡಿಸಿದೆ. ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯದಿಂದಾಗಿ ಉಸಿರಾಡಲೂ ಕಷ್ಟಪಡುವಂತಾಗಿದೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್