AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi

Delhi

ಭಾರತದ ರಾಜಧಾನಿಯಾದ ದೆಹಲಿಯು ಇತಿಹಾಸ, ಸಂಸ್ಕೃತಿ ಮತ್ತು ಆಧುನಿಕತೆಯಿಂದ ಕೂಡಿದ ನಗರವಾಗಿದೆ. ಐತಿಹಾಸಿಕ ಕೆಂಪು ಕೋಟೆ, ಕುತುಬ್ ಮಿನಾರ್ ಮತ್ತು ಇಂಡಿಯಾ ಗೇಟ್‌ನಂತಹ ಪುರಾತನ ಸ್ಮಾರಕಗಳ ಶ್ರೀಮಂತ ವಸ್ತ್ರದೊಂದಿಗೆ ದೆಹಲಿಯು ತನ್ನ ಶತಮಾನಗಳ-ಹಳೆಯ ಪರಂಪರೆಗೆ ಸಾಕ್ಷಿಯಾಗಿದೆ. ಚಾಂದಿನಿ ಚೌಕ್‌ನಂತಹ ನಗರದ ರೋಮಾಂಚಕ ಮಾರುಕಟ್ಟೆಗಳು ವೈವಿಧ್ಯಮಯ ಬೀದಿ ಆಹಾರ, ಜವಳಿ ಮತ್ತು ಸಾಂಪ್ರದಾಯಿಕ ಕರಕುಶಲ ವಸ್ತುಗಳೊಂದಿಗೆ ಸಂವೇದನಾ ಮಿತಿಮೀರಿದ ಹೊರೆಯನ್ನು ನೀಡುತ್ತವೆ.
ರಾಜಕೀಯ ಮತ್ತು ಆರ್ಥಿಕ ಕೇಂದ್ರವಾಗಿ, ದೆಹಲಿಯು ಭಾರತೀಯ ಸರ್ಕಾರದ ಸ್ಥಾನವನ್ನು ಮತ್ತು ಹಲವಾರು ಅಂತರರಾಷ್ಟ್ರೀಯ ರಾಯಭಾರ ಕಚೇರಿಗಳನ್ನು ಹೊಂದಿದೆ. ಇದರ ವಿಸ್ತಾರವಾದ ಮಹಾನಗರವು ಹಳೆಯ ಮತ್ತು ನವದೆಹಲಿ ಎರಡನ್ನೂ ಒಳಗೊಳ್ಳುತ್ತದೆ. ದೆಹಲಿ ಮೆಟ್ರೊ ಐತಿಹಾಸಿಕ ಹೆಗ್ಗುರುತುಗಳನ್ನು ಸಮಕಾಲೀನ ನೆರೆಹೊರೆಗಳೊಂದಿಗೆ ಸಂಪರ್ಕಿಸುತ್ತದೆ.
ವಾಯು ಮಾಲಿನ್ಯದಂತಹ ಸವಾಲುಗಳನ್ನು ಎದುರಿಸುತ್ತಿರುವ ಹೊರತಾಗಿಯೂ, ದೆಹಲಿಯು ಹೊಸತನ ಮತ್ತು ಜಾಗತಿಕ ಪ್ರಭಾವಗಳನ್ನು ಅಳವಡಿಸಿಕೊಂಡು ಕ್ರಿಯಾತ್ಮಕ ನಗರವಾಗಿ ವಿಕಸನಗೊಳ್ಳುತ್ತಲೇ ಇದೆ.

ಇನ್ನೂ ಹೆಚ್ಚು ಓದಿ

ದೆಹಲಿಯಲ್ಲಿ ಜಲಪ್ರಳಯ; 15 ವಿಮಾನಗಳ ಮಾರ್ಗ ಬದಲಾವಣೆ, 250ಕ್ಕೂ ಹೆಚ್ಚು ವಿಮಾನಗಳು ವಿಳಂಬ

ದೆಹಲಿ ಹಾಗೂ ಸುತ್ತಮುತ್ತಲ ಎನ್‌ಸಿಆರ್ (NCR) ಪ್ರದೇಶಗಳಾದ ನೋಯ್ಡಾ, ಘಾಜಿಯಾಬಾದ್, ಗುರುಗ್ರಾಮ ಮತ್ತು ಫರೀದಾಬಾದ್‌ಗಳಲ್ಲಿ ಇಂದು ಭಾರಿ ಮಳೆ ಮತ್ತು ಬಿರುಗಾಳಿ ತೀವ್ರಗೊಂಡಿದೆ. ಭೀಕರ ಮಳೆಯಿಂದಾಗಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರ ವ್ಯತ್ಯಯಗೊಂಡಿದ್ದು, ಒಟ್ಟು 15 ವಿಮಾನಗಳನ್ನು ಇತರೆ ನಗರಗಳಿಗೆ ಮಾರ್ಗ ಬದಲಾಯಿಸಿ ಕಳುಹಿಸಲಾಗಿದೆ. ಇದರಿಂದ ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಾಗಿದ್ದ ಪ್ರಯಾಣಿಕರು ಮತ್ತು ಅಲ್ಲಿಂದ ವಿಮಾನವೇರಲು ಕಾಯುತ್ತಿದ್ದ ಪ್ರಯಾಣಿಕರು ಪರದಾಡುವಂತಾಯಿತು.

ಮಗುವಿಗೆ ಔಷಧಿ ಕೊಡುವ ವಿಚಾರಕ್ಕೆ ಪತ್ನಿಯೊಂದಿಗೆ ಜಗಳ; ದೆಹಲಿಯ ಟೆಕ್ಕಿಯನ್ನು ಹೊಡೆದು ಕೊಂದ ಅತ್ತೆ-ಮಾವಂದಿರು

ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಪತ್ನಿಯ ಕುಟುಂಬದ 6 ಜನರಿಂದ ದೆಹಲಿಯ ಸಾಫ್ಟ್​ವೇರ್ ಇಂಜಿನಿಯರ್ ಒಬ್ಬರು ಭೀಕರವಾಗಿ ಹತ್ಯೆಗೀಡಾಗಿದ್ದಾರೆ. 31 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್‌ ವಿನಯ್ ಗುಪ್ತಾ ತಮ್ಮ ಮನೆಯಲ್ಲಿದ್ದಾಗ ಈ ಮಾರಣಾಂತಿಕ ಹಲ್ಲೆ ನಡೆದಿದೆ. ತಮ್ಮ ಸೊಸೆಯೇ ಈ ಕೊಲೆಯನ್ನು ಸಂಚು ರೂಪಿಸಿ ಮಾಡಿಸಿದ್ದಾಳೆ ಮತ್ತು ಉದ್ದೇಶಪೂರ್ವಕವಾಗಿಯೇ ಮುಂಚಿತವಾಗಿ ಸಿಸಿಟಿವಿಯನ್ನು ಆಫ್ ಮಾಡಿದ್ದಾಳೆ ಎಂದು ಆರೋಪಿಸಿದ ಮೃತ ಟೆಕ್ಕಿಯ ತಾಯಿ, ಆಕೆಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ.

ನೀಟ್ ಪ್ರತಿಭಟನೆ ವೇಳೆ ಪೋಲಿಸ್ ದೌರ್ಜನ್ಯದ ತನಿಖೆ; ಉನ್ನತ ಮಟ್ಟದ ವಿಚಾರಣಾ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್

ದೆಹಲಿಯ ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಪೋಲೀಸರು ಮತ್ತು ಭದ್ರತಾ ಪಡೆಗಳು ನಡೆಸಿದ ದೌರ್ಜನ್ಯದ ಕುರಿತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಇಂದು ಉನ್ನತ ಮಟ್ಟದ ವಿಚಾರಣಾ ಸಮಿತಿಯನ್ನು ರಚಿಸಿದೆ. ಪ್ರತಿಭಟನಾಕಾರರ ವಿರುದ್ಧ ಅತಿಯಾದ ಬಲಪ್ರಯೋಗ ಮಾಡಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಜುಲೈ 20ರಂದು ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು.

ದೆಹಲಿಯ ಸಿಎನ್‌ಜಿ ಪಂಪ್‌ ಸ್ಟೇಷನ್​​ನಲ್ಲಿ ಟ್ರಕ್‌ಗೆ ಗ್ಯಾಸ್ ತುಂಬಿಸುವಾಗ ಭಾರಿ ಸ್ಫೋಟ; 3 ಜನ ಸಾವು, ಮೂವರಿಗೆ ಗಾಯ

ದೆಹಲಿಯಲ್ಲಿ ಇಂದು ಸಿಎನ್‌ಜಿ (CNG) ಗ್ಯಾಸ್ ಪಂಪ್‌ನಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಟಿಕ್ರಿ ಕಲಾನ್ ಮೆಟ್ರೋ ನಿಲ್ದಾಣದ ಬಳಿ ಇರುವ ಸಿಎನ್‌ಜಿ ಪಂಪ್‌ನಲ್ಲಿ ರೀಫಿಲ್ಲಿಂಗ್ ಟ್ರಕ್‌ನಿಂದ ಗ್ಯಾಸ್ ವರ್ಗಾಯಿಸಲಾಗುತ್ತಿದ್ದ ಸಮಯದಲ್ಲಿ ಈ ದುರಂತ ಸಂಭವಿಸಿದೆ. ಮೃತಪಟ್ಟವರಲ್ಲಿ ಒಬ್ಬರನ್ನು ಬಾಬಾ ಹರಿದಾಸ್ ಕಾಲೋನಿಯ ನಿವಾಸಿ 25 ವರ್ಷದ ಮನೀಶ್ ಎಂದು ಗುರುತಿಸಲಾಗಿದೆ. ಸ್ಫೋಟ ಸಂಭವಿಸಿದಾಗ ಅವರು ಬಸ್‌ಗೆ ಸಿಎನ್‌ಜಿ ತುಂಬಿಸುತ್ತಿದ್ದರು ಎನ್ನಲಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಫೋಟದ ನಿಖರವಾದ ಕಾರಣ ಇನ್ನಷ್ಟೇ ಪತ್ತೆಯಾಗಬೇಕಿದೆ.

ಜಂತರ್ ಮಂತರ್ ವಿದ್ಯಾರ್ಥಿ ಪ್ರತಿಭಟನೆ: ಬಲಪ್ರಯೋಗದ ಆರೋಪವನ್ನು ತಳ್ಳಿಹಾಕಿದ ದೆಹಲಿ ಪೊಲೀಸ್

Delhi police rejects claims of using excessive force to stop protestors: ದೆಹಲಿಯ ಸಂಸತ್ ಭವನದ ಬಳಿ ನಡೆದಿದ್ದ ವಿದ್ಯಾರ್ಥಿ ಪ್ರತಿಭಟನೆ ವೇಳೆ, ಪ್ರತಿಭಟನಾಕಾರರ ವಿರುದ್ಧ ಬಲಪ್ರಯೋಗ ಮಾಡಲಾಯಿತು ಎನ್ನುವ ಆರೋಪವನ್ನು ದೆಹಲಿ ಪೊಲೀಸರು ತಳ್ಳಿಹಾಕಿದ್ದಾರೆ. ಕೋರ್ಟ್ ಉಸ್ತುವಾರಿಯಲ್ಲಿ ತನಿಖೆ ಆಗಬೇಕು ಎಂದು ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ಪೊಲೀಸರು ಈ ವಿಚಾರ ತಿಳಿಸಿದ್ದಾರೆ.

ರಾಹುಲ್ ವಿರುದ್ಧ ಅಕ್ರಮ ಆಸ್ತಿ ಪ್ರಕರಣ: ವಿಚಾರಣೆ ಸದ್ಯಕ್ಕೆ ನಿಲ್ಲಿಸುವಂತೆ ಅಲಹಾಬಾದ್ ಹೈಕೋರ್ಟ್​ಗೆ ಸುಪ್ರೀಂ ನಿರ್ದೇಶನ

If case is so serious, why probe agencies are silent, asks Supreme Court on Rahul Gandhi assets case: ರಾಹುಲ್ ಗಾಂಧಿ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ತನಿಖಾ ಸಂಸ್ಥೆಗಳಾದ ಸಿಬಿಐ, ಇಡಿ ಅನ್ನು ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ರಾಹುಲ್ ವಿರುದ್ಧ ವಿಚಾರಣೆ ನಿಲ್ಲಿಸುವಂತೆ ಅಲಹಾಬಾದ್ ಹೈಕೋರ್ಟ್​ಗೆ ನಿರ್ದೇಶನ ನೀಡಿದೆ.

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೆಹಲಿ ವಿಮಾನ ನಿಲ್ದಾಣ, ಹೈಕೋರ್ಟ್, ಕೆಂಪುಕೋಟೆಗೆ ಬಾಂಬ್ ಬೆದರಿಕೆ!

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಸಜ್ಜಾಗುತ್ತಿರುವ ಬೆನ್ನಲ್ಲೇ ಇಂದು (ಶುಕ್ರವಾರ) ದೆಹಲಿ ವಿಮಾನ ನಿಲ್ದಾಣ, ದೆಹಲಿ ಹೈಕೋರ್ಟ್ ಮತ್ತು ಕೆಂಪುಕೋಟೆ ಸೇರಿದಂತೆ ಹಲವು ಪ್ರಮುಖ ಸ್ಥಳಗಳಿಗೆ ಬಾಂಬ್ ಬೆದರಿಕೆಯ ಇಮೇಲ್ ಹಾಗೂ ಕರೆಗಳು ಬಂದಿದ್ದು, ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಆಗಸ್ಟ್ 15ರಂದು ಭಾರಿ ಸ್ಫೋಟ ನಡೆಸುವುದಾಗಿ ಮತ್ತು ದೆಹಲಿಯ ಹಲವು ಸ್ಥಳಗಳನ್ನು ಗುರಿಯಾಗಿಸುವುದಾಗಿ ಬೆದರಿಕೆಯ ಇಮೇಲ್‌ನಲ್ಲಿ ಎಚ್ಚರಿಸಲಾಗಿದೆ. ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಎಲ್ಲಾ ಸ್ಥಳಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದು, ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.

ಫುಕೆಟ್-ದೆಹಲಿ ಏರ್ ಇಂಡಿಯಾ ವಿಮಾನದ ಪೈಲಟ್ ಡ್ರಗ್ಸ್ ಸೇವಿಸಿದ್ದು ದೃಢ; ಸಂಸ್ಥೆಯ ಸಿಇಒಗೆ ಸರ್ಕಾರದಿಂದ ಸಮನ್ಸ್

ಫುಕೆಟ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ವೇಳೆ ದಿಢೀರನೆ ಕುಸಿದು ಹಲವು ಪ್ರಯಾಣಿಕರು ಗಾಯಗೊಳ್ಳಲು ಕಾರಣವಾದ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ನಡೆಸಿದ ಎರಡನೇ ಡೋಪ್ ಪರೀಕ್ಷೆಯಲ್ಲೂ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. ಆಗಸ್ಟ್ 4ರಂದು 137 ಪ್ರಯಾಣಿಕರು ಹಾಗೂ 8 ಸಿಬ್ಬಂದಿಯೊಂದಿಗೆ ಫುಕೆಟ್‌ನಿಂದ ದೆಹಲಿಗೆ ಹೊರಟಿದ್ದ AI-2379 ವಿಮಾನವು ಹಾರಾಟದ ಮಧ್ಯೆ ದಿಢೀರನೆ 300 ಅಡಿ ಕೆಳಗೆ ಕುಸಿದಿತ್ತು. ಈ ವೇಳೆ ಕನಿಷ್ಠ 17 ಪ್ರಯಾಣಿಕರು ಹಾಗೂ ನಾಲ್ವರು ಸಿಬ್ಬಂದಿ ಗಾಯಗೊಂಡಿದ್ದರು.

ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ

ದೆಹಲಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯು ಜಲಪ್ರಳಯದ ವಾತಾವರಣವನ್ನು ಸೃಷ್ಟಿಸಿದೆ. ದಕ್ಷಿಣ ದೆಹಲಿಯ ದೇವ್ಲಿ ಪ್ರದೇಶದಲ್ಲಿ ಭಾರೀ ಮಳೆಗೆ ಪಾರ್ಕಿಂಗ್ ಸ್ಥಳದ ತಡೆಗೋಡೆಯೊಂದು ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಗೋಡೆಯ ಬದಿ ನಿಲ್ಲಿಸಲಾಗಿದ್ದ 8 ಕಾರುಗಳು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ದೇವ್ಲಿ ಪ್ರದೇಶದಲ್ಲಿ ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದಾಗಿ ಪಾರ್ಕಿಂಗ್ ಆವರಣದ ತಡೆಗೋಡೆಯ ತಳಭಾಗ ನೀರು ತುಂಬಿ ದುರ್ಬಲಗೊಂಡಿತ್ತು. ಇಂದು ಮಧ್ಯಾಹ್ನ ಗೋಡೆ ದಿಢೀರನೆ ಕುಸಿದು ಬಿದ್ದು, ಪಕ್ಕದಲ್ಲಿ ಸಾಲಾಗಿ ನಿಲ್ಲಿಸಿದ್ದ ವಾಹನಗಳ ಮೇಲೆ ಬಿದ್ದಿದೆ.

ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು

ನವದೆಹಲಿ, ಆಗಸ್ಟ್ 7: ದೆಹಲಿಯಲ್ಲಿ (Delhi Rains) ಇಂದು ಸುರಿದ ಭಾರೀ ಮಳೆಯಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿವೆ. ಇದು ಜನಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ರಸ್ತೆಯ ತುಂಬ ನಿಂತಿದ್ದ ಮಳೆನೀರಿನಲ್ಲಿ ಹಾರಿದ ಮಕ್ಕಳು ಈಜಾಡಿದ್ದಾರೆ. ಈ ವೀಕೆಂಡ್​​ನಲ್ಲಿ ದೆಹಲಿಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ಜಂತರ್ ಮಂತರ್​ನಲ್ಲಿ ಬಂಗಾಳ ಸಿಎಂ ಮೇಲೆ ದಾಳಿಗೆ ನಡೆದಿತ್ತಾ ಪಿತೂರಿ? ಗರ್ಲ್​ಫ್ರೆಂಡ್​ಳ ಸೋಷಿಯಲ್ ಮೀಡಿಯಾದಿಂದ ಸಂಚು ಬಯಲು

Terror suspect allegedly plotted disturbances at Jantar Mantar: ಪಶ್ಚಿಮ ಬಂಗಾಳದಲ್ಲಿ ಬಂಧಿತನಾಗಿರುವ ವ್ಯಕ್ತಿಯೊಬ್ಬನ ವಿಚಾರಣೆ ವೇಳೆ ಪೊಲೀಸರಿಗೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಪಾಕಿಸ್ತಾನೀ ಹ್ಯಾಂಡ್ಲರ್​ಗಳ ಅಣತಿಯಂತೆ ನಡೆಯುತ್ತಿದ್ದ ಈ ಶಂಕಿತ ಉಗ್ರನು ಜಂತರ್ ಮಂತರ್​ನಲ್ಲಿ ದೊಡ್ಡ ಗಲಭೆ ಸೃಷ್ಟಿಸಲು ಯತ್ನಿಸಿದ್ದನೆನ್ನಲಾಗಿದೆ. ಪೊಲೀಸ್ ವೇಷದಲ್ಲಿ ಜಂತರ್ ಮಂತರ್ ಪ್ರತಿಭಟನೆಗೆ ಹೋಗಿ ಗಲಭೆ ಸೃಷ್ಟಿಸುವ ಸಂಚು ನಡೆದಿತ್ತು.

ಧರ್ಮದ ಹೆಸರಿನಲ್ಲಿ ಕ್ರೂರತೆ; ಅಂಕಿತ್ ಶರ್ಮಾ ಕೊಲೆ ಪ್ರಕರಣದಲ್ಲಿ ಆಪ್ ನಾಯಕ ತಾಹಿರ್ ಹುಸೇನ್​ಗೆ ಜೀವಾವಧಿ ಶಿಕ್ಷೆ

2020ರ ದೆಹಲಿ ದಂಗೆಯ ಸಂದರ್ಭದಲ್ಲಿ ಇಂಟೆಲಿಜೆನ್ಸ್ ಬ್ಯೂರೋ (IB) ಅಧಿಕಾರಿ ಅಂಕಿತ್ ಶರ್ಮಾ ಅವರ ಕೊಲೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (AAP) ಮಾಜಿ ನಾಯಕ ತಾಹಿರ್ ಹುಸೇನ್ ಮತ್ತು ಇತರ ನಾಲ್ವರು ಅಪರಾಧಿಗಳಿಗೆ ದೆಹಲಿ ನ್ಯಾಯಾಲಯ ಇಂದು ಜೀವಾವಧಿ ಶಿಕ್ಷೆ ವಿಧಿಸಿದೆ. ಫೆಬ್ರವರಿ 2020ರಲ್ಲಿ ಈಶಾನ್ಯ ದೆಹಲಿಯ ದಯಾಲ್‌ಪುರ ಪ್ರದೇಶದಲ್ಲಿ ನಡೆದ ಗಲಭೆಯ ವೇಳೆ ಈ ಕೊಲೆ ನಡೆದಿತ್ತು. ಇದನ್ನು "ಅತ್ಯಂತ ಕ್ರೂರತೆಯ ಕೃತ್ಯ" ಎಂದು ದೆಹಲಿ ಕೋರ್ಟ್ ಬಣ್ಣಿಸಿದೆ.