Delhi
ಭಾರತದ ರಾಜಧಾನಿಯಾದ ದೆಹಲಿಯು ಇತಿಹಾಸ, ಸಂಸ್ಕೃತಿ ಮತ್ತು ಆಧುನಿಕತೆಯಿಂದ ಕೂಡಿದ ನಗರವಾಗಿದೆ. ಐತಿಹಾಸಿಕ ಕೆಂಪು ಕೋಟೆ, ಕುತುಬ್ ಮಿನಾರ್ ಮತ್ತು ಇಂಡಿಯಾ ಗೇಟ್ನಂತಹ ಪುರಾತನ ಸ್ಮಾರಕಗಳ ಶ್ರೀಮಂತ ವಸ್ತ್ರದೊಂದಿಗೆ ದೆಹಲಿಯು ತನ್ನ ಶತಮಾನಗಳ-ಹಳೆಯ ಪರಂಪರೆಗೆ ಸಾಕ್ಷಿಯಾಗಿದೆ. ಚಾಂದಿನಿ ಚೌಕ್ನಂತಹ ನಗರದ ರೋಮಾಂಚಕ ಮಾರುಕಟ್ಟೆಗಳು ವೈವಿಧ್ಯಮಯ ಬೀದಿ ಆಹಾರ, ಜವಳಿ ಮತ್ತು ಸಾಂಪ್ರದಾಯಿಕ ಕರಕುಶಲ ವಸ್ತುಗಳೊಂದಿಗೆ ಸಂವೇದನಾ ಮಿತಿಮೀರಿದ ಹೊರೆಯನ್ನು ನೀಡುತ್ತವೆ.
ರಾಜಕೀಯ ಮತ್ತು ಆರ್ಥಿಕ ಕೇಂದ್ರವಾಗಿ, ದೆಹಲಿಯು ಭಾರತೀಯ ಸರ್ಕಾರದ ಸ್ಥಾನವನ್ನು ಮತ್ತು ಹಲವಾರು ಅಂತರರಾಷ್ಟ್ರೀಯ ರಾಯಭಾರ ಕಚೇರಿಗಳನ್ನು ಹೊಂದಿದೆ. ಇದರ ವಿಸ್ತಾರವಾದ ಮಹಾನಗರವು ಹಳೆಯ ಮತ್ತು ನವದೆಹಲಿ ಎರಡನ್ನೂ ಒಳಗೊಳ್ಳುತ್ತದೆ. ದೆಹಲಿ ಮೆಟ್ರೊ ಐತಿಹಾಸಿಕ ಹೆಗ್ಗುರುತುಗಳನ್ನು ಸಮಕಾಲೀನ ನೆರೆಹೊರೆಗಳೊಂದಿಗೆ ಸಂಪರ್ಕಿಸುತ್ತದೆ.
ವಾಯು ಮಾಲಿನ್ಯದಂತಹ ಸವಾಲುಗಳನ್ನು ಎದುರಿಸುತ್ತಿರುವ ಹೊರತಾಗಿಯೂ, ದೆಹಲಿಯು ಹೊಸತನ ಮತ್ತು ಜಾಗತಿಕ ಪ್ರಭಾವಗಳನ್ನು ಅಳವಡಿಸಿಕೊಂಡು ಕ್ರಿಯಾತ್ಮಕ ನಗರವಾಗಿ ವಿಕಸನಗೊಳ್ಳುತ್ತಲೇ ಇದೆ.
Delhi Earthquake: ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಪ್ರಬಲ ಭೂಕಂಪ
Earthquake in North India: ದೆಹಲಿ-ಎನ್ಸಿಆರ್ ಮತ್ತು ಚಂಡೀಗಢ ಸೇರಿದಂತೆ ಉತ್ತರ ಭಾರತದ ಹಲವು ಪ್ರದೇಶಗಳಲ್ಲಿ ಭೂ ಕಂಪನದ ಅನುಭವವಾಗಿದೆ. ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದ್ದರಿಂದ ಜನರು ತಮ್ಮ ಮನೆಗಳು ಮತ್ತು ಕಚೇರಿಗಳನ್ನು ಬಿಟ್ಟು ಹೊರಗೆ ಓಡಿಬಂದಿದ್ದಾರೆ. ದೆಹಲಿಯ ಭೂಕಂಪದ ವಿಡಿಯೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದುವರೆಗೂ ಯಾವುದೇ ಸಾವು-ನೋವಿನ ವರದಿಯಾಗಿಲ್ಲ.
- Sushma Chakre
- Updated on: Apr 3, 2026
- 10:20 pm
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ; ವಿವಾದಕ್ಕೀಡಾಯ್ತು ವಿಡಿಯೋ
ಬಿಜೆಪಿ ನಾಯಕಿ ಮಾಧವಿ ಲತಾ ಕೊಂಪೆಲ್ಲಾ ದೇವಿಯ ಶ್ಲೋಕಗಳನ್ನು ಪಠಿಸುತ್ತಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಾರ್ಥನಾ ಕೋಣೆಯಲ್ಲಿ ಈ ವೀಡಿಯೊವನ್ನು ಚಿತ್ರೀಕರಿಸಲಾಗಿದೆ. ಈ ಕ್ಲಿಪ್ನಲ್ಲಿ, ವಿಮಾನ ನಿಲ್ದಾಣದ ಪ್ರಾರ್ಥನಾ ಸ್ಥಳದೊಳಗೆ ಮಾಧವಿ ಲತಾ "ದುರ್ಗಾ ಸೂಕ್ತಂ"ನ ಶ್ಲೋಕಗಳನ್ನು ಪಠಿಸುತ್ತಿರುವುದನ್ನು ಕಾಣಬಹುದು.
- Sushma Chakre
- Updated on: Mar 25, 2026
- 8:25 pm
WITT Summit 2026: ಸ್ಟಾರ್ಟಪ್ನಲ್ಲಿ ಮೌಲ್ಯ ಮತ್ತು ಮೌಲ್ಯಮಾಪನ ಸಂಬದ್ಧವಾಗಿರಬೇಕು ಎಂದ ತಜ್ಞರು
What India Thinks Today (WITT) Summit 2026: ನವದೆಹಲಿಯ ಅಶೋಕಾ ಹೋಟೆಲ್ನಲ್ಲಿ ಟಿವಿ9 ನೆಟ್ವರ್ಕ್ ಆಯೋಜಿಸಿರುವ ಡಬ್ಲ್ಯುಐಟಿಟಿ ಸಮಿಟ್ 2026 ಕಾರ್ಯಕ್ರಮದಲ್ಲಿ ನಾಲ್ವರು ತಜ್ಞರು ಸ್ಟಾರ್ಟಪ್ಗಳ ಮೌಲ್ಯದ ಬಗ್ಗೆ ಮಾತನಾಡಿದರು. ಸ್ಟಾರ್ಟಪ್ನಲ್ಲಿ ಮೌಲ್ಯ ಮತ್ತು ಮೌಲ್ಯಮಾಪನವು ತಾಳೆಯಾಗಬೇಕು ಎನ್ನುವುದು ಈ ತಜ್ಞರ ಒಮ್ಮತದ ಅನಿಸಿಕೆ.
- Vijaya Sarathy SN
- Updated on: Mar 24, 2026
- 1:39 pm
PM Modi in WITT Summit 2026: ಕಾಂಗ್ರೆಸ್ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ
ಭಾರತ ದೇಶದ ಅತಿದೊಡ್ಡ ಸುದ್ದಿ ಜಾಲವಾದ ಟಿವಿ9 ಆಯೋಜಿಸಿರುವ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ (WITT Summit 2026) ಇಂದು ಆರಂಭವಾಗಿದೆ. ಇಂದು ಮತ್ತು ನಾಳೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಶೃಂಗಸಭೆ ನಡೆಯಲಿದೆ. ಈ ಶೃಂಗಸಭೆಯ ಮೊದಲ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಮುಖ್ಯ ಭಾಷಣ ಮಾಡಿದ್ದಾರೆ. ನಾಳೆಯೂ ಶೃಂಗಸಭೆ ನಡೆಯಲಿದ್ದು, ಅನೇಕ ರಾಜಕಾರಣಿಗಳು, ಉದ್ಯಮಿಗಳು, ಕ್ರೀಡಾಪಟುಗಳು, ಸೆಲಬ್ರಿಟಿಗಳು ಪಾಲ್ಗೊಳ್ಳಲಿದ್ದಾರೆ.
- Sushma Chakre
- Updated on: Mar 23, 2026
- 9:24 pm
ಇಶಾ ಫೌಂಡೇಷನ್, ಸದ್ಗುರು ಕುರಿತ ವಿವಾದಾತ್ಮಕ ವಿಷಯ ಡಿಲೀಟ್ ಮಾಡಿ; ನಕ್ಕೀರನ್ ಮ್ಯಾಗಜಿನ್ಗೆ ಕೋರ್ಟ್ ಆದೇಶ
ದೆಹಲಿ ಹೈಕೋರ್ಟ್ ಇಂದು ತಮಿಳು ಮಾಧ್ಯಮವಾದ ನಕ್ಕೀರನ್ಗೆ ಇಶಾ ಫೌಂಡೇಶನ್ ಮತ್ತು ಸದ್ಗುರುಗಳ ವಿರುದ್ಧದ ಮಾನಹಾನಿಕರ ವಿಷಯವನ್ನು ಡಿಲೀಟ್ ಮಾಡಲು ಆದೇಶಿಸಿದೆ. ಈ ಮೂಲಕ ಸದ್ಗುರು ಮತ್ತು ಇಶಾ ಫೌಂಡೇಶನ್ಗೆ ದೆಹಲಿ ಹೈಕೋರ್ಟ್ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಹೈಕೋರ್ಟ್ನ ಈ ಆದೇಶವನ್ನು ಇಶಾ ಫೌಂಡೇಶನ್ ಸ್ವಾಗತಿಸಿದೆ. ಏನಿದು ಪ್ರಕರಣ? ಎಂಬ ಕುರಿತು ಪೂರ್ತಿ ಮಾಹಿತಿ ಇಲ್ಲಿದೆ.
- Sushma Chakre
- Updated on: Mar 19, 2026
- 5:40 pm
ದೆಹಲಿಯಲ್ಲಿ ಕಟ್ಟಡಕ್ಕೆ ಬೆಂಕಿ; ಮೂರು ಮಕ್ಕಳು ಸೇರಿ ಆರು ಮಂದಿ ಬಲಿ
6 Dead After Massive Fire Breaks Out At Building In Delhi's Palam Area, Several Injured: ರಾಷ್ಟ್ರರಾಜಧಾನಿ ನಗರಿಯಾದ ದೆಹಲಿಯ ಪಲಮ್ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದಕ್ಕೆ ಬೆಂಕಿ ತಗುಲಿದೆ. ಈ ದುರಂತ ಘಟನೆಯಲ್ಲಿ ಮೂವರು ಮಕ್ಕಳು ಸೇರಿ ಆರು ಮಂದಿ ಬಲಿಯಾಗಿದ್ದಾರೆ. ಜಿಲ್ಲಾಡಳಿತ, ಅಗ್ನಿಶಾಮಕ ಇಲಾಖೆ ಮತ್ತು ಪೊಲೀಸರು ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
- Vijaya Sarathy SN
- Updated on: Mar 18, 2026
- 12:07 pm
ಮನೆಯೊಳಗೆ ಅಕ್ಕ-ತಂಗಿಯರ ನಿಗೂಢ ಸಾವು; ಹೆತ್ತಮ್ಮನೇ ಮುಖ್ಯ ಆರೋಪಿ!
ದೆಹಲಿಯ ಮಾಲ್ವಿಯಾ ನಗರದಲ್ಲಿನ ಮನೆಯೊಳಗೆ ಅಕ್ಕ-ತಂಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅವರ ತಾಯಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಟೈಮ್ಸ್ ಆಫ್ ಇಂಡಿಯಾದಲ್ಲಿನ ವರದಿಯ ಪ್ರಕಾರ, ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಕುಟುಂಬದ ಸಂಬಂಧಿಯೊಬ್ಬರು ಪೊಲೀಸರಿಗೆ ಕರೆ ಮಾಡಿದ್ದಾರೆ. ಅವರು ಪದೇ ಪದೇ ಬಾಗಿಲು ಬಡಿದರೂ ಮನೆಯವರು ಬಾಗಿಲು ತೆರೆಯುತ್ತಿಲ್ಲ ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
- Sushma Chakre
- Updated on: Mar 6, 2026
- 4:59 pm
ದೇಶದ 9 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾಜ್ಯಪಾಲರ ಬದಲಾವಣೆ! ಇಲ್ಲಿದೆ ಲಿಸ್ಟ್
ಭಾರತದ ರಾಷ್ಟ್ರಪತಿ ಭವನವು ಶುಕ್ರವಾರ ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾಜ್ಯಪಾಲರು ಹಾಗೂ ಲೆಫ್ಟಿನೆಂಟ್ ಗವರ್ನರ್ಗಳ ಮಹತ್ವದ ನೇಮಕಾತಿ ಮತ್ತು ವರ್ಗಾವಣೆಯನ್ನು ಘೋಷಿಸಿದೆ. ದೆಹಲಿ, ಲಡಾಖ್, ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ 9 ರಾಜ್ಯಗಳಲ್ಲಿ ಈ ಬದಲಾವಣೆ ಮಾಡಲಾಗಿದೆ. ದೆಹಲಿಗೆ ತರಣ್ಜಿತ್ ಸಿಂಗ್ ಸಂಧು, ಲಡಾಖ್ಗೆ ವಿನಯ್ ಕುಮಾರ್ ಸಕ್ಸೇನಾ ಅವರನ್ನು ನೇಮಿಸಲಾಗಿದೆ.
- Bhavana Hegde
- Updated on: Mar 6, 2026
- 7:16 am
ದೆಹಲಿ ಅಬಕಾರಿ ಹಗರಣ; ಕೇಜ್ರಿವಾಲ್ ಬಿಡುಗಡೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ
ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಇಂದು ಮದ್ಯ ಹಗರಣದಲ್ಲಿ ಖುಲಾಸೆಗೊಳಿಸಲಾಗಿದೆ. ದೆಹಲಿಯ ಕೆಳ ನ್ಯಾಯಾಲಯವು ಒಟ್ಟು 23 ಆರೋಪಿಗಳನ್ನು ಖುಲಾಸೆಗೊಳಿಸಿದೆ. ಕೇಜ್ರಿವಾಲ್ ನ್ಯಾಯಾಲಯದ ತೀರ್ಪನ್ನು ಐತಿಹಾಸಿಕ ಎಂದು ಕರೆದಿದ್ದಾರೆ ಮತ್ತು ಬಿಜೆಪಿ ಪಿತೂರಿ ಮಾಡಿದೆ ಎಂದು ಆರೋಪಿಸಿದ್ದಾರೆ. ಇದೆಲ್ಲದರ ನಡುವೆ, ಸಿಬಿಐ ಈಗ ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ನ ಮೊರೆ ಹೋಗಿದೆ.
- Sushma Chakre
- Updated on: Feb 27, 2026
- 6:59 pm
ಆ ತಪ್ಪು ಮಾಡಿದ ನಂತರ ಜಾತಕ ಸರಿಯಿಲ್ಲವೆಂದು ಮದುವೆ ಬೇಡವೆನ್ನುವಂತಿಲ್ಲ; ಹೈಕೋರ್ಟ್ ತೀರ್ಪು
ಗಂಡು-ಹೆಣ್ಣು ಲೈಂಗಿಕ ಸಂಬಂಧ ಹೊಂದಿದ ನಂತರ ಜಾತಕ ಸರಿಯಿಲ್ಲವೆಂಬ ಕಾರಣ ನೀಡಿ ಮದುವೆಯನ್ನು ನಿರಾಕರಿಸುವುದು ಅಪರಾಧ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಇದೇ ಕಾರಣ ನೀಡಿ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ನಿರಾಕರಿಸಲಾಗಿದೆ. ಮಹಿಳೆಯೊಂದಿಗೆ ದೈಹಿಕ ಸಂಬಂಧವನ್ನು ಉಳಿಸಿಕೊಂಡು ನಂತರ ಜಾತಕ ಹೊಂದಾಣಿಕೆಯಿಲ್ಲದ ಕಾರಣ ಮದುವೆಯಿಂದ ಹಿಂದೆ ಸರಿದ ಆರೋಪ ಹೊತ್ತಿರುವ ವ್ಯಕ್ತಿಗೆ ಕೋರ್ಟ್ ಜಾಮೀನು ನಿರಾಕರಿಸಿದೆ.
- Sushma Chakre
- Updated on: Feb 24, 2026
- 8:58 pm
ದೆಹಲಿಯಲ್ಲಿ ಅತಿವೇಗದ ಕಾರು ಡಿಕ್ಕಿಯಾಗಿ 23 ವರ್ಷದ ವ್ಯಕ್ತಿ ಸಾವು; ಅಪಘಾತಕ್ಕೂ ಮೊದಲ ವಿಡಿಯೋ ವೈರಲ್
ದೆಹಲಿಯ ದ್ವಾರಕಾದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು 23 ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಈ ಅಪಘಾತಕ್ಕೂ ಮುನ್ನ ಅತಿವೇಗದಲ್ಲಿ ಚಲಿಸುತ್ತಿದ್ದ ಎಸ್ಯುವಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡ್ರೈವಿಂಗ್ ಲೈಸೆನ್ಸ್ ಇಲ್ಲದ ಅಪ್ರಾಪ್ತ ವಯಸ್ಕನಾದ ಎಸ್ಯುವಿ ಚಾಲಕನನ್ನು ಸ್ಥಳದಲ್ಲೇ ಬಂಧಿಸಿ ಬಾಲ ನ್ಯಾಯ ಮಂಡಳಿಯ (ಜೆಜೆಬಿ) ಮುಂದೆ ಹಾಜರುಪಡಿಸಲಾಗಿದೆ. ಆರಂಭದಲ್ಲಿ ಆತನನ್ನು ವೀಕ್ಷಣಾ ಗೃಹಕ್ಕೆ ಕಳುಹಿಸಲಾಯಿತು. ನಂತರ ಫೆಬ್ರವರಿ 10ರಂದು 10ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು ಮಧ್ಯಂತರ ಜಾಮೀನು ನೀಡಲಾಯಿತು.
- Sushma Chakre
- Updated on: Feb 18, 2026
- 8:32 pm
ಎಐ ಶೃಂಗಸಭೆಯಲ್ಲಿ ಪ್ರದರ್ಶನಕ್ಕಿಟ್ಟಿದ್ದ ವಸ್ತುವೇ ಕಳ್ಳತನ; ಹುಮ್ಮಸ್ಸಿನಲ್ಲಿದ್ದ ಬೆಂಗಳೂರು ಸ್ಟಾರ್ಟಪ್ ಸ್ಥಾಪಕನಿಗೆ ಶಾಕ್
Bengaluru startup's patented AI product stolen at Delhi summit: ಎಐ ಇಂಪ್ಯಾಕ್ಟ್ ಸಮಿಟ್ನಲ್ಲಿ ಎಕ್ಸ್ಪೋಗೆಂದು ತೆಗೆದುಕೊಂಡು ಹೋಗಿದ್ದ ಎಐ ಸಾಧನವೊಂದು ಕಳ್ಳತನವಾದ ಘಟನೆ ನಡೆದಿದೆ. ಬೆಂಗಳೂರಿನ ನಿಯೋಸೇಪಿಯನ್ ಎನ್ನುವ ಕಂಪನಿಯ ಎಐ ದಿರಿಸು ಕಳ್ಳತನವಾಗಿದೆ. ಕಂಪನಿಯ ಸಂಸ್ಥಾಪಕ ಹಾಗು ಸಿಇಒ ಧನಂಜಯ್ ಯಾದವ್ ಈ ಘಟನೆಯನ್ನು ವಿವರಿಸಿ ಟ್ವೀಟ್ ಮಾಡಿ ಬೇಸರ ಹೊರಹಾಕಿದ್ದಾರೆ.
- Vijaya Sarathy SN
- Updated on: Feb 17, 2026
- 5:33 pm