Delhi
ಭಾರತದ ರಾಜಧಾನಿಯಾದ ದೆಹಲಿಯು ಇತಿಹಾಸ, ಸಂಸ್ಕೃತಿ ಮತ್ತು ಆಧುನಿಕತೆಯಿಂದ ಕೂಡಿದ ನಗರವಾಗಿದೆ. ಐತಿಹಾಸಿಕ ಕೆಂಪು ಕೋಟೆ, ಕುತುಬ್ ಮಿನಾರ್ ಮತ್ತು ಇಂಡಿಯಾ ಗೇಟ್ನಂತಹ ಪುರಾತನ ಸ್ಮಾರಕಗಳ ಶ್ರೀಮಂತ ವಸ್ತ್ರದೊಂದಿಗೆ ದೆಹಲಿಯು ತನ್ನ ಶತಮಾನಗಳ-ಹಳೆಯ ಪರಂಪರೆಗೆ ಸಾಕ್ಷಿಯಾಗಿದೆ. ಚಾಂದಿನಿ ಚೌಕ್ನಂತಹ ನಗರದ ರೋಮಾಂಚಕ ಮಾರುಕಟ್ಟೆಗಳು ವೈವಿಧ್ಯಮಯ ಬೀದಿ ಆಹಾರ, ಜವಳಿ ಮತ್ತು ಸಾಂಪ್ರದಾಯಿಕ ಕರಕುಶಲ ವಸ್ತುಗಳೊಂದಿಗೆ ಸಂವೇದನಾ ಮಿತಿಮೀರಿದ ಹೊರೆಯನ್ನು ನೀಡುತ್ತವೆ.
ರಾಜಕೀಯ ಮತ್ತು ಆರ್ಥಿಕ ಕೇಂದ್ರವಾಗಿ, ದೆಹಲಿಯು ಭಾರತೀಯ ಸರ್ಕಾರದ ಸ್ಥಾನವನ್ನು ಮತ್ತು ಹಲವಾರು ಅಂತರರಾಷ್ಟ್ರೀಯ ರಾಯಭಾರ ಕಚೇರಿಗಳನ್ನು ಹೊಂದಿದೆ. ಇದರ ವಿಸ್ತಾರವಾದ ಮಹಾನಗರವು ಹಳೆಯ ಮತ್ತು ನವದೆಹಲಿ ಎರಡನ್ನೂ ಒಳಗೊಳ್ಳುತ್ತದೆ. ದೆಹಲಿ ಮೆಟ್ರೊ ಐತಿಹಾಸಿಕ ಹೆಗ್ಗುರುತುಗಳನ್ನು ಸಮಕಾಲೀನ ನೆರೆಹೊರೆಗಳೊಂದಿಗೆ ಸಂಪರ್ಕಿಸುತ್ತದೆ.
ವಾಯು ಮಾಲಿನ್ಯದಂತಹ ಸವಾಲುಗಳನ್ನು ಎದುರಿಸುತ್ತಿರುವ ಹೊರತಾಗಿಯೂ, ದೆಹಲಿಯು ಹೊಸತನ ಮತ್ತು ಜಾಗತಿಕ ಪ್ರಭಾವಗಳನ್ನು ಅಳವಡಿಸಿಕೊಂಡು ಕ್ರಿಯಾತ್ಮಕ ನಗರವಾಗಿ ವಿಕಸನಗೊಳ್ಳುತ್ತಲೇ ಇದೆ.
ದೇಶದ್ರೋಹ ಆರೋಪಿ ಉಮರ್ ಖಾಲೀದ್ಗೆ ನ್ಯೂಯಾರ್ಕ್ ಮೇಯರ್ ಕಾಳಜಿ ಪತ್ರ; 8 ಅಮೆರಿಕನ್ ಜನಪ್ರತಿನಿಧಿಗಳಿಂದಲೂ ಬೆಂಬಲ
Delhi Riots accused Umar Khalid gets some support from US: 2020ರ ದೆಹಲಿ ಹಿಂಸಾಚಾರ ಘಟನೆಗಳಿಗೆ ಸಂಚು ರೂಪಿಸಿದ ಆರೋಪದ ಮೇಲೆ ಬಂಧನದಲ್ಲಿರುವ ಉಮರ್ ಖಾಲೀದ್ಗೆ ಕೆಲ ಅಮೆರಿಕನ್ನರು ಬೆಂಬಲಿಸಿದ್ದಾರೆ. ಎಂಟು ಅಮೆರಿಕನ್ ಜನಪ್ರತಿನಿಧಿಗಳು ಉಮರ್ ಖಾಲೀದ್ ಮತ್ತಿತರರಿಗೆ ಜಾಮೀನು ಕೊಡಬೇಕೆಂದು ಆಗ್ರಹಿಸಿ ಭಾರತೀಯ ರಾಯಭಾರಿಗೆ ಪತ್ರ ಬರೆದಿದ್ದಾರೆ. ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ಅವರು ವೈಯಕ್ತಿಕವಾಗಿ ಉಮರ್ ಖಾಲೀದ್ಗೆ ಬೆಂಬಲ ತೋರಿ ಪತ್ರ ಬರೆದಿದ್ದಾರೆ.
- Vijaya Sarathy SN
- Updated on: Jan 2, 2026
- 11:17 am
ಉನ್ನಾವ್ ಲೈಂಗಿಕ ದೌರ್ಜನ್ಯ ಪ್ರಕರಣ; ಕುಲದೀಪ್ ಸೆಂಗಾರ್ ಜಾಮೀನು ರದ್ದತಿಗೆ ಸುಪ್ರೀಂ ಕೋರ್ಟ್ ತಡೆ
ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಶಾಸಕ ಕುಲದೀಪ್ ಸೆಂಗಾರ್ ಅವರಿಗೆ ನೀಡಲಾಗಿದ್ದ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಅವರ ಜಾಮೀನು ರದ್ದುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದರಿಂದ ಕುಲದೀಪ್ ಸೆಂಗಾರ್ಗೆ ಭಾರೀ ಮುಖಭಂಗವಾಗಿದೆ. ಕುಲದೀಪ್ ಸೆಂಗಾರ್ಗೆ ಪರಿಹಾರ ನೀಡುವ ದೆಹಲಿ ಹೈಕೋರ್ಟ್ನ ನಿರ್ಧಾರಕ್ಕೆ ತಡೆ ನೀಡುವಂತೆ ಕೋರಿ ಸಿಬಿಐ ಶುಕ್ರವಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು.
- Sushma Chakre
- Updated on: Dec 29, 2025
- 5:52 pm
ಅಸ್ತಿತ್ವದಲ್ಲೇ ಇಲ್ಲದ ಅಪಾರ್ಟ್ಮೆಂಟ್ 12 ಕೋಟಿ ರೂ.ಗೆ ಮಾರಾಟ; ದೆಹಲಿಯ 200 ಕೋಟಿ ರೂ. ಆಸ್ತಿ ಹಗರಣ ಬಯಲಾಗಿದ್ದು ಹೇಗೆ?
ಕೆಲವೊಮ್ಮೆ ನಾವು ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಯಾಮಾರಿಸಿ ಪಂಗನಾಮ ಹಾಕುವವರು ಇದ್ದೇ ಇರುತ್ತಾರೆ. ದೆಹಲಿಯಲ್ಲಿ ಅಸ್ತಿತ್ವದಲ್ಲೇ ಇಲ್ಲದ ಅಪಾರ್ಟ್ಮೆಂಟ್ ಒಂದರಲ್ಲಿ ಫ್ಲಾಟ್ ಖರೀದಿ ಮಾಡಲೆಂದು ಒಂದೊಂದು ಫ್ಲಾಟ್ಗೆ 12 ಕೋಟಿ ರೂ. ನೀಡಿದ್ದ ಗ್ರಾಹಕರಿಗೆ ತಮಗೆ ಆಗುತ್ತಿರುವ ಮೋಸದ ಸುಳಿವೇ ಸಿಗಲಿಲ್ಲ. ಗ್ರಾಹಕರೊಬ್ಬರು ಈ ಅಪಾರ್ಟ್ಮೆಂಟ್ಗೆ ಕಳೆದ ವರ್ಷ ಆಗಸ್ಟ್ ಮತ್ತು ಅಕ್ಟೋಬರ್ ನಡುವೆ ಆರ್ಟಿಜಿಎಸ್ ಮೂಲಕ 12 ಕೋಟಿ ರೂ.ಗಳನ್ನು ವರ್ಗಾಯಿಸಿದ್ದಾರೆ ಎಂದು ವರದಿಯಾಗಿದೆ. ಆದರೆ, ಆ ಗ್ರಾಹಕರಿಗೆ ನೀಡಲಾದ ಎಲ್ಲಾ ದಾಖಲೆಗಳು ನಕಲಿ ಎಂದು ಪೊಲೀಸರು ತಿಳಿಸಿದ್ದಾರೆ.
- Sushma Chakre
- Updated on: Dec 29, 2025
- 3:43 pm
12,000 ಕೋಟಿ ರೂ ವೆಚ್ಚದಲ್ಲಿ ಡೆಲ್ಲಿ ಮೆಟ್ರೋ ವಿಸ್ತರಣೆ; ಬರಲಿವೆ 13 ಹೊಸ ನಿಲ್ದಾಣಗಳು; ಸಂಪುಟ ಅನುಮೋದನೆ
Delhi Metro network to be expanded beyond 400km: ಡೆಲ್ಲಿ ಮೆಟ್ರೋ ಐದನೇ ಹಂತದ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ ಕೊಟ್ಟಿದೆ. 12,000 ಕೋಟಿ ರೂ ವೆಚ್ಚದಲ್ಲಿ ಮೆಟ್ರೋ ಜಾಲ ವಿಸ್ತರಣೆಯಾಗಲಿದೆ. ಮೂರು ಕಾರಿಡಾರ್ಗಳಲ್ಲಿ ಒಟ್ಟು 16 ಕಿಮೀಯಷ್ಟು ಜಾಲ ವಿಸ್ತರಣೆ ಆಗುತ್ತದೆ. 3 ಎಲಿವೇಟೆಡ್ ನಿಲ್ದಾಣ ಸೇರಿ 13 ಹೊಸ ಮೆಟ್ರೋ ಸ್ಟೇಷನ್ಗಳು ಸ್ಥಾಪನೆಯಾಗಲಿವೆ.
- Vijaya Sarathy SN
- Updated on: Dec 24, 2025
- 4:47 pm
ದೆಹಲಿಯಲ್ಲಿ ನಾಳೆಯಿಂದ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ, ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ಕಡ್ಡಾಯ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯದ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಖಾಸಗಿ ಕಂಪನಿಗಳು ಮನೆಯಿಂದಲೇ ಕೆಲಸ ಮಾಡಲು ಆದೇಶ ಹೊರಡಿಸಲಾಗಿದೆ. ಈ ಆದೇಶ ಉಲ್ಲಂಘನೆ ಮಾಡಿದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ನಿರಂತರವಾಗಿ ವಾಯು ಮಾಲಿನ್ಯ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೂ ಆನ್ ಲೈನ್ ಮೂಲಕ ತರಗತಿ ನಡೆಸಲು ದೆಹಲಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
- Sushma Chakre
- Updated on: Dec 17, 2025
- 7:37 pm
ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯ; 5ನೇ ತರಗತಿವರೆಗಿನ ಮಕ್ಕಳು ಶಾಲೆಗೆ ಬರುವಂತಿಲ್ಲ
ದೆಹಲಿಯ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಮಾನ್ಯತೆ ಪಡೆದ ಖಾಸಗಿ ಶಾಲೆಗಳಲ್ಲಿ ನರ್ಸರಿಯಿಂದ 5ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ದೈಹಿಕ ತರಗತಿಗಳನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ. ಅವರೆಲ್ಲರಿಗೂ ಆನ್ಲೈನ್ ತರಗತಿಗಳು ಮುಂದುವರಿಯುತ್ತವೆ. ಡಿಸೆಂಬರ್ 13ರಂದು ಶಿಕ್ಷಣ ಇಲಾಖೆ ಹೊರಡಿಸಿದ ನಿರ್ದೇಶನಗಳ ಪ್ರಕಾರ, ಉಳಿದ ಶ್ರೇಣಿಗಳಿಗೆ ತರಗತಿಗಳನ್ನು ಹೈಬ್ರಿಡ್ ಮೋಡ್ನಲ್ಲಿ ನಡೆಸಲಾಗುವುದು.
- Sushma Chakre
- Updated on: Dec 15, 2025
- 10:45 pm
ದೆಹಲಿ ಮಾಲಿನ್ಯದ ಬಗ್ಗೆ ಕಳವಳ; ಇಂಗ್ಲೆಂಡ್, ಕೆನಡಾ, ಸಿಂಗಾಪುರದ ಪ್ರಯಾಣಿಕರಿಗೆ ಅಲರ್ಟ್
ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗಿರುವುದರಿಂದ ಇಂಗ್ಲೆಂಡ್, ಕೆನಡಾ, ಸಿಂಗಾಪುರದ ಪ್ರಯಾಣಿಕರಿಗೆ ಅಲ್ಲಿನ ಸರ್ಕಾರ ದೆಹಲಿಗೆ ತೆರಳುವಾಗ ಎಚ್ಚರ ವಹಿಸುವಂತೆ ಸಲಹೆ ನೀಡಿದೆ. ದೆಹಲಿಯಲ್ಲಿ ಗಾಳಿಯ ಗುಣಮಟ್ಟ (AQI) 500ಕ್ಕೆ ತಲುಪಿದೆ. ಇದು ಭಾರತದಲ್ಲಿ ಮಾತ್ರವಲ್ಲದೆ ಬೇರೆ ದೇಶಗಳಲ್ಲೂ ಕಳವಳ ಮೂಡಿಸಿದೆ. ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯದಿಂದಾಗಿ ಉಸಿರಾಡಲೂ ಕಷ್ಟಪಡುವಂತಾಗಿದೆ.
- Sushma Chakre
- Updated on: Dec 15, 2025
- 3:47 pm
ಅಮೇಜಾನ್ನಿಂದ ಭಾರೀ ಹೂಡಿಕೆ ಘೋಷಣೆ; ಭಾರತದಲ್ಲಿ ಗೂಗಲ್, ಮೈಕ್ರೋಸಾಫ್ಟ್ಗಿಂತ ಎರಡು ಪಟ್ಟು ಹೆಚ್ಚು ಹೂಡಿಕೆ
Amazon commits for 35 billion dollar investment in India: ಜಾಗತಿಕ ಇಕಾಮರ್ಸ್ ದೈತ್ಯ ಅಮೇಜಾನ್ ಭಾರತದಲ್ಲಿ 35 ಬಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ಹೇಳಿದೆ. ಈಗಾಗಲೇ ಇಲ್ಲಿ 40 ಬಿಲಿಯನ್ ಡಾಲರ್ ಹೂಡಿಕೆ ಮಾಡಿದ್ದು, ಹೆಚ್ಚುವರಿಯಾಗಿ ಈ 35 ಬಿಲಿಯನ್ ಡಾಲರ್ ಹಣ ಹಾಕಲಿದೆ. ಮೈಕ್ರೋಸಾಫ್ಟ್ ಮತ್ತು ಗೂಗಲ್ ಕಂಪನಿಗಳಿಗಿಂತ ಅಮೇಜಾನ್ ಎರಡು ಪಟ್ಟು ಹೆಚ್ಚು ಹೂಡಿಕೆ ಮಾಡುತ್ತಿದೆ.
- Vijaya Sarathy SN
- Updated on: Dec 10, 2025
- 3:13 pm
ರಷ್ಯಾದ ಪ್ರವಾಸಿಗರಿಗೆ 30 ದಿನಗಳಲ್ಲಿ ಉಚಿತ ಇ-ವೀಸಾ; ಪುಟಿನ್ ಸಮ್ಮುಖದಲ್ಲಿ ಪ್ರಧಾನಿ ಮೋದಿ ಘೋಷಣೆ
ದ್ವಿಪಕ್ಷೀಯ ಮಾತುಕತೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಲಾಗಿದೆ. ಭಾರತ-ರಷ್ಯಾ ನಡುವೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ರಕ್ಷಣೆ, ವ್ಯಾಪಾರ, ಇಂಧನ ಪೂರೈಕೆ ಸೇರಿದಂತೆ ಹಲವು ಒಪ್ಪಂದವಾಗಿದೆ. ಈ ಬಗ್ಗೆ ಮೋದಿ ಹಾಗೂ ಪುಟಿನ್ ಮಾಹಿತಿ ಹಂಚಿಕೊಂಡಿದ್ದಾರೆ.
- Sushma Chakre
- Updated on: Dec 5, 2025
- 4:14 pm
ಭಾರತಕ್ಕೆ ಪುಟಿನ್ ಭೇಟಿ; ರಷ್ಯಾ ಅಧ್ಯಕ್ಷ 2 ದಿನ ದೆಹಲಿಯಲ್ಲಿ ಏನು ಮಾಡಲಿದ್ದಾರೆ?
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಸಂಜೆ 6.30ಕ್ಕೆ ದೆಹಲಿಗೆ ಆಗಮಿಸಲಿದ್ದಾರೆ. ಪುಟಿನ್ ಅವರ ಜೊತೆಗೆ ಅವರ ನೆಚ್ಚಿನ ಕಾರು ಔರಸ್ ಸೆನಾಟ್ ಲಿಮೋಸುಯಿನ್ ಕೂಡ ಭಾರತಕ್ಕೆ ಬರಲಿದೆ. ಈ ಕಾರನ್ನು ಅತ್ಯಂತ ಸುರಕ್ಷತೆಯ ದೃಷ್ಟಿಯಿಂದ ಐಷಾರಾಮಿಯಾಗಿ ಸಿದ್ಧಪಡಿಸಲಾಗಿದೆ. ಇದು ರಷ್ಯಾದ ಅಧಿಕೃತ ಅಧ್ಯಕ್ಷೀಯ ಸರ್ಕಾರಿ ಕಾರು. ಇದನ್ನು ಹೆಚ್ಚಾಗಿ ರೋಲ್ಸ್ ರಾಯ್ಸ್ಗೆ ಹೋಲಿಸಲಾಗುತ್ತದೆ. ಈ ಕಾರು ಪುಟಿನ್ ಜೊತೆಗೆ ದೆಹಲಿಗೂ ಬರಲಿದೆ. ದೆಹಲಿಯಲ್ಲಿ ಪುಟಿನ್ ಅವರ ವೇಳಾಪಟ್ಟಿ ಹೀಗಿದೆ.
- Sushma Chakre
- Updated on: Dec 4, 2025
- 5:31 pm
ದೆಹಲಿಯಲ್ಲಿ ಇಂದು ಪುಟಿನ್ ತಂಗಲಿರುವ ಹೋಟೆಲ್ ರೂಂ ಬಾಡಿಗೆ ಕೇಳಿದರೆ ಶಾಕ್ ಆಗುತ್ತೀರಿ!
Putin Visit to Delhi: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಭೇಟಿಗಾಗಿ ಇಂದು (ಡಿಸೆಂಬರ್ 4) ನವದೆಹಲಿಗೆ ಆಗಮಿಸಲಿದ್ದಾರೆ. ಈ ಉನ್ನತ ಮಟ್ಟದ ಭೇಟಿಗಾಗಿ ದೆಹಲಿಯ ಐಟಿಸಿ ಮೌರ್ಯದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಹೀಗಾಗಿ, ಈ ಐಷಾರಾಮಿ ಹೋಟೆಲ್ ಮಾಧ್ಯಮ ಮತ್ತು ಭದ್ರತಾ ಸಂಸ್ಥೆಗಳ ಗಮನ ಸೆಳೆಯುತ್ತಿರುವ ಕೇಂದ್ರಬಿಂದುವಾಗಿದೆ. ಈ ಹೋಟೆಲ್ ಈಗ ಬಿಗಿಯಾದ ಕಣ್ಗಾವಲಿನಲ್ಲಿದೆ. ಈ ಹೋಟೆಲ್ನ ಬಹುತೇಕ ಎಲ್ಲಾ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಈ ಹೋಟೆಲ್ನ ರೂಂನ ಬಾಡಿಗೆ ಎಷ್ಟು ಗೊತ್ತಾ?
- Sushma Chakre
- Updated on: Dec 4, 2025
- 4:17 pm
ಚಾಟ್ಜಿಪಿಟಿ ಬಳಸಿ ವಂಚಕನಿಗೇ ಮಂಕುಬೂದಿ ಎರಚಿದ ವ್ಯಕ್ತಿ; ಹೀಗೊಂದು ಮಾದರಿ ಪ್ರಕರಣ
Reddit user shares his experience of stealing from a thief: ಆನ್ಲೈನ್ನಲ್ಲಿ ಆಗಂತುಕರು ವಂಚಿಸಲು ಯತ್ನಿಸುತ್ತಿರುವುದು ಗೊತ್ತಾದಾಗ ಹೆಚ್ಚಿನ ಜನರು ತಪ್ಪಿಸಿಕೊಂಡರೆ ಸಾಕೆಂದು ಸುಮ್ಮನಾಗುತ್ತಾರೆ. ಆದರೆ, ದೆಹಲಿಯ ವ್ಯಕ್ತಿಯೊಬ್ಬರು ವಂಚಕನಿಗೆ ಮಂಕುಬೂದಿ ಯಾಕಿ ದಮ್ಮಯ್ಯ ಎಂದು ಬೇಡಿಕೊಳ್ಳುವಂತೆ ಮಾಡಿದ ಘಟನೆ ಇದೆ. ರೆಡ್ಡಿಟ್ನಲ್ಲಿ ಈ ಅನುಭವ ಹಂಚಿಕೊಂಡಿರುವ ಆ ವ್ಯಕ್ತಿ, ತಾನು ಚಾಟ್ಜಿಪಿಟಿ ಬಳಸಿ ಹೇಗೆ ಯಾಮಾರಿಸಿದೆ ಎಂದು ಘಟನೆ ವಿವರಿಸಿದ್ದಾರೆ. ಬಹಳ ಕುತೂಹಲಕಾರಿಯಾಗಿದೆ ಈ ಘಟನೆ.
- Vijaya Sarathy SN
- Updated on: Dec 4, 2025
- 1:44 pm