
Delhi
ಭಾರತದ ರಾಜಧಾನಿಯಾದ ದೆಹಲಿಯು ಇತಿಹಾಸ, ಸಂಸ್ಕೃತಿ ಮತ್ತು ಆಧುನಿಕತೆಯಿಂದ ಕೂಡಿದ ನಗರವಾಗಿದೆ. ಐತಿಹಾಸಿಕ ಕೆಂಪು ಕೋಟೆ, ಕುತುಬ್ ಮಿನಾರ್ ಮತ್ತು ಇಂಡಿಯಾ ಗೇಟ್ನಂತಹ ಪುರಾತನ ಸ್ಮಾರಕಗಳ ಶ್ರೀಮಂತ ವಸ್ತ್ರದೊಂದಿಗೆ ದೆಹಲಿಯು ತನ್ನ ಶತಮಾನಗಳ-ಹಳೆಯ ಪರಂಪರೆಗೆ ಸಾಕ್ಷಿಯಾಗಿದೆ. ಚಾಂದಿನಿ ಚೌಕ್ನಂತಹ ನಗರದ ರೋಮಾಂಚಕ ಮಾರುಕಟ್ಟೆಗಳು ವೈವಿಧ್ಯಮಯ ಬೀದಿ ಆಹಾರ, ಜವಳಿ ಮತ್ತು ಸಾಂಪ್ರದಾಯಿಕ ಕರಕುಶಲ ವಸ್ತುಗಳೊಂದಿಗೆ ಸಂವೇದನಾ ಮಿತಿಮೀರಿದ ಹೊರೆಯನ್ನು ನೀಡುತ್ತವೆ.
ರಾಜಕೀಯ ಮತ್ತು ಆರ್ಥಿಕ ಕೇಂದ್ರವಾಗಿ, ದೆಹಲಿಯು ಭಾರತೀಯ ಸರ್ಕಾರದ ಸ್ಥಾನವನ್ನು ಮತ್ತು ಹಲವಾರು ಅಂತರರಾಷ್ಟ್ರೀಯ ರಾಯಭಾರ ಕಚೇರಿಗಳನ್ನು ಹೊಂದಿದೆ. ಇದರ ವಿಸ್ತಾರವಾದ ಮಹಾನಗರವು ಹಳೆಯ ಮತ್ತು ನವದೆಹಲಿ ಎರಡನ್ನೂ ಒಳಗೊಳ್ಳುತ್ತದೆ. ದೆಹಲಿ ಮೆಟ್ರೊ ಐತಿಹಾಸಿಕ ಹೆಗ್ಗುರುತುಗಳನ್ನು ಸಮಕಾಲೀನ ನೆರೆಹೊರೆಗಳೊಂದಿಗೆ ಸಂಪರ್ಕಿಸುತ್ತದೆ.
ವಾಯು ಮಾಲಿನ್ಯದಂತಹ ಸವಾಲುಗಳನ್ನು ಎದುರಿಸುತ್ತಿರುವ ಹೊರತಾಗಿಯೂ, ದೆಹಲಿಯು ಹೊಸತನ ಮತ್ತು ಜಾಗತಿಕ ಪ್ರಭಾವಗಳನ್ನು ಅಳವಡಿಸಿಕೊಂಡು ಕ್ರಿಯಾತ್ಮಕ ನಗರವಾಗಿ ವಿಕಸನಗೊಳ್ಳುತ್ತಲೇ ಇದೆ.
ದೆಹಲಿಯಲ್ಲಿ 36 ವರ್ಷದ ಕಾಮುಕನಿಂದ ಹಲವು ಹೆಣ್ಣು ನಾಯಿಗಳ ಮೇಲೆ ಅತ್ಯಾಚಾರ
ದೆಹಲಿಯ ಶಹದಾರಾದಲ್ಲಿ ಹಲವಾರು ಹೆಣ್ಣು ನಾಯಿಗಳ ಮೇಲೆ 'ಅತ್ಯಾಚಾರ' ಮಾಡಿದ ಆರೋಪದ ಮೇಲೆ 36 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ವೈರಲ್ ಆಗಿರುವ ವೀಡಿಯೊವನ್ನು ಪ್ರಾಣಿ ಕಾರ್ಯಕರ್ತರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲಿ ಆ ವ್ಯಕ್ತಿಯನ್ನು ಬಂಧನದಲ್ಲಿಟ್ಟು ಹಲವಾರು ಜನರು ಥಳಿಸುತ್ತಿರುವುದನ್ನು ನೋಡಬಹುದು. ಆತ ಮಾಡಿದ ಕೃತ್ಯಕ್ಕೆ ಜನರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
- Sushma Chakre
- Updated on: Apr 12, 2025
- 8:48 pm
ದೆಹಲಿಯ ಕೆಂಪು ಕೋಟೆ, ಜಾಮಾ ಮಸೀದಿಗೆ ಹುಸಿ ಬಾಂಬ್ ಬೆದರಿಕೆ
ದೆಹಲಿಯಲ್ಲಿರುವ ಕೆಂಪು ಕೋಟೆ, ಜಾಮಾ ಮಸೀದಿಗೆ ಬಾಂಬ್ ಬೆದರಿಕೆ ಬಂದಿದೆ. ಆದರೆ, ಪರಿಶೀಲನೆಯ ಸಮಯದಲ್ಲಿ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕೆಂಪು ಕೋಟೆ ಮತ್ತು ಜಾಮಾ ಮಸೀದಿಯನ್ನು ಗುರಿಯಾಗಿಸಿಕೊಂಡು ಹುಸಿ ಬಾಂಬ್ ಬೆದರಿಕೆ ಬಂದ ಕಾರಣ, ಭದ್ರತಾ ಸಂಸ್ಥೆಗಳು ಇಂದು ಸ್ಥಳಗಳಿಗೆ ಧಾವಿಸಿ ಸಂಪೂರ್ಣ ಪರಿಶೀಲನೆ ನಡೆಸಿವೆ. ಆದರೆ ಅನುಮಾನಾಸ್ಪದ ಏನೂ ಕಂಡುಬಂದಿಲ್ಲ, ಇದು ಹುಸಿ ಕರೆ ಎಂದು ದೆಹಲಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
- Sushma Chakre
- Updated on: Apr 10, 2025
- 6:01 pm
ಯಮುನಾ ಸ್ವಚ್ಛತಾ ಕಾರ್ಯ; ವಜೀರಾಬಾದ್ ಬ್ಯಾರೇಜ್ನಲ್ಲಿ ನದಿ ಭಾಗದ ಚರಂಡಿಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿ ರೇಖಾ ಗುಪ್ತಾ
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ, ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಸಚಿವ ಪರ್ವೇಶ್ ವರ್ಮಾ ವಜೀರಾಬಾದ್ನಲ್ಲಿ ಚರಂಡಿಯನ್ನು ಪರಿಶೀಲಿಸಿದರು. ದೆಹಲಿ ಮುಖ್ಯಮಂತ್ರಿ ಇತರ ಸಚಿವರೊಂದಿಗೆ ಯಮುನಾ ನದಿ ಮತ್ತು ಒಳಚರಂಡಿ ಯೋಜನೆಗಳನ್ನು ಪರಿಶೀಲಿಸಿದರು. ನದಿ ದಂಡೆಯ ಅಭಿವೃದ್ಧಿಗಾಗಿ ಕೆಲಸ ಮಾಡಲು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಲೆಫ್ಟಿನೆಂಟ್ ಗವನರ್ನರ್ ವಿ.ಕೆ. ಸಕ್ಸೇನಾ, ಜಲ ಸಚಿವ ಪರ್ವೇಶ್ ವರ್ಮಾ, ದೆಹಲಿ ಜಲ ಮಂಡಳಿ (ಡಿಜೆಬಿ), ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಇಲಾಖೆಯ ಹಲವಾರು ಅಧಿಕಾರಿಗಳು ಮುಖ್ಯಮಂತ್ರಿಯೊಂದಿಗೆ ಇದ್ದರು.
- Sushma Chakre
- Updated on: Apr 10, 2025
- 4:27 pm
ಅಮೆರಿಕದಿಂದ ಭಾರತಕ್ಕೆ ಬಂದಿಳಿದ ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾ
ಮುಂಬೈ ದಾಳಿಯ ಆರೋಪಿಯಾದ ತಹವ್ವೂರ್ ರಾಣಾ ದೆಹಲಿ ವಿಮಾನ ನಿಲ್ದಾಣವನ್ನು ತಲುಪಿದ್ದಾರೆ. 26/11 ಮುಂಬೈ ಭಯೋತ್ಪಾದಕ ದಾಳಿಯ ಸಹ-ಸಂಚುಕೋರ ತಹವ್ವೂರ್ ರಾಣಾ ಇಂದು (ಏಪ್ರಿಲ್ 10) ಭಾರತಕ್ಕೆ ಬಂದಿಳಿದಿದ್ದಾರೆ. ಬುಧವಾರ ವಿಶೇಷ ವಿಮಾನದಲ್ಲಿ ಬಹು-ಏಜೆನ್ಸಿಗಳ ಭಾರತೀಯ ತಂಡದ ಜೊತೆ ರಾಣಾ ಅಮೆರಿಕದಿಂದ ಹೊರಟಿದ್ದರು. ಆತನನ್ನು ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಭದ್ರತಾ ಕಾರಣಗಳಿಂದಾಗಿ ಆತನನ್ನು ಎನ್ಐಎ ನ್ಯಾಯಾಧೀಶರ ಮುಂದೆ ವರ್ಚುವಲ್ ಆಗಿ, ಆನ್ಲೈನ್ನಲ್ಲಿ ಹಾಜರುಪಡಿಸುವ ನಿರೀಕ್ಷೆಯಿದೆ. ಅದಕ್ಕೂ ಮೊದಲೇ ಅವರ ಆರೋಗ್ಯವನ್ನು ಪರಿಶೀಲಿಸಲಾಗುವುದು.
- Sushma Chakre
- Updated on: Apr 10, 2025
- 3:31 pm
Viral : ಮೆಟ್ರೋದಲ್ಲಿ ಮೊಟ್ಟೆ ಸೇವಿಸಿ ಎಣ್ಣೆ ಪಾರ್ಟಿ ಮಾಡಿದ ಯುವಕ
ದೆಹಲಿ ಮೆಟ್ರೋದಲ್ಲಿ ಪ್ರಯಾಣಿಕರು ಮಾಡುವ ಎಡವಟ್ಟುಗಳು ಒಂದೆರಡಲ್ಲ. ಹೀಗೆ ನಾನಾ ವಿಚಾರಗಳಿಂದಲೇ ಮೆಟ್ರೋ ಸುದ್ದಿಯಾಗುತ್ತಿರುತ್ತದೆ. ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುವಾಗ ಯುವಕನೊಬ್ಬನು ಮೊಟ್ಟೆ ತಿಂದು 'ಮದ್ಯ' ಸೇವಿಸುತ್ತಿರುವ ವೀಡಿಯೋವೊಂದು ವೈರಲ್ ಆಗಿದೆ. ಮೆಟ್ರೋದೊಳಗೆ ಆಹಾರ ಪದಾರ್ಥಗಳ ಸೇವನೆ ಹಾಗೂ ಮದ್ಯ ನಿಷೇಧವಿದ್ದರೂ ಈ ಕೃತ್ಯ ಎಸಗಿರುವುದಕ್ಕೆ ಈ ಯುವಕನ ವಿರುದ್ಧ ದೆಹಲಿ ಪೊಲೀಸರು ಕ್ರಮ ಕೈಗೊಂಡು ಬಂಧಿಸಿದ್ದಾರೆ.
- Sainandha P
- Updated on: Apr 10, 2025
- 12:38 pm
ಬೇರೆ ಮಾಧ್ಯಮಗಳೂ ಇದನ್ನೇ ಅನುಸರಿಸುತ್ತವೆ; ಟಿವಿ9ಗೆ ಪ್ರಧಾನಿ ಮೋದಿ ಶ್ಲಾಘನೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಟಿವಿ9 ನೆಟ್ವರ್ಕ್ನ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ ಜಾಗತಿಕ ಶೃಂಗಸಭೆಯಲ್ಲಿ ಮುಖ್ಯ ಭಾಷಣ ಮಾಡಿದರು. ದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಕಾರ್ಯಕ್ರಮದ ಭಾಷಣದಲ್ಲಿ ಪ್ರಧಾನಿ ಮೋದಿ ಟಿವಿ9 ಅನ್ನು ಶ್ಲಾಘಿಸಿದರು. ಈ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ, ಟಿವಿ9 ಸಕಾರಾತ್ಮಕ ಉಪಕ್ರಮವನ್ನು ತೆಗೆದುಕೊಂಡಿದೆ. ಹೋಟೆಲ್ ಸಂಪ್ರದಾಯವನ್ನು ಮುರಿದು ಇಂತಹ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ನಾನು ಟಿವಿ9 ಅನ್ನು ಅಭಿನಂದಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.
- Sushma Chakre
- Updated on: Mar 28, 2025
- 6:48 pm
ದೆಹಲಿ ಶಾಸಕರಿರಲಿ, ಕೇರಳ ಶಾಸಕರ ಬೇಸಿಕ್ ಸ್ಯಾಲರಿ ಕೇವಲ 2,000 ರೂ; ಬೇರೆ ರಾಜ್ಯಗಳಲ್ಲಿ ಹೇಗಿದೆ ಸಂಬಳ? ಇಲ್ಲಿದೆ ಪಟ್ಟಿ
MLAs' salaries in India: ದೆಹಲಿಯಲ್ಲಿ ಶಾಸಕರಿಗೆ ಸಂಬಳ ಕೇವಲ 90,000 ರೂ ಇದೆ. ಸಂಬಳ ಪರಿಷ್ಕರಣೆಗೆ ಪ್ರಯತ್ನಗಳಾಗುತ್ತಿವೆ. ಆದರೆ, ಕೇರಳ ಶಾಸಕರಿಗೆ ಇನ್ನೂ ಕಡಿಮೆ ಸಂಬಳ ಇದೆ. ಅಲ್ಲಿಯ ಎಂಎಲ್ಎಗಳ ಮೂಲವೇತನ ಕೇವಲ 2,000 ರೂ ಎಂದರೆ ನಂಬಲು ಕಷ್ಟ. ಆದರೂ ನಿಜ. ಶಾಸಕರಿಗೆ ಅತಿಹೆಚ್ಚು ಸಂಬಳ ನೀಡುವ ಟಾಪ್-5 ರಾಜ್ಯಗಳಲ್ಲಿ ಕರ್ನಾಟಕ ಇದೆ.
- Vijaya Sarathy SN
- Updated on: Mar 27, 2025
- 12:10 pm
ರೈತರಿಗಿಂತ ಹೆಚ್ಚಿನ ವಿದ್ಯಾರ್ಥಿಗಳು ಆತ್ಮಹತ್ಯೆ; ಮಾನಸಿಕ ಆರೋಗ್ಯ ಸಮಸ್ಯೆ ಪರಿಹರಿಸಲು ಟಾಸ್ಕ್ ಫೋರ್ಸ್ ರಚಿಸಿದ ಸುಪ್ರೀಂ ಕೋರ್ಟ್
ಕಾಲೇಜು ಕ್ಯಾಂಪಸ್ಗಳಲ್ಲಿ ಜಾತಿ ಆಧಾರಿತ ತಾರತಮ್ಯವು ಸಂವಿಧಾನದ 15ನೇ ವಿಧಿಯ ಸ್ಪಷ್ಟ ಉಲ್ಲಂಘನೆಯಾಗಿದೆ, ಇದು ಇತರ ವಿಷಯಗಳ ಜೊತೆಗೆ ಜಾತಿಯ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುತ್ತದೆ. ಸಂಪೂರ್ಣವಾಗಿ ಅಂಕ ಆಧಾರಿತ ಶಿಕ್ಷಣ ವ್ಯವಸ್ಥೆಯಲ್ಲಿ ಉತ್ತಮ ಪ್ರದರ್ಶನ ನೀಡಲು ನಿರಂತರ ಒತ್ತಡ ಮತ್ತು ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಸೀಮಿತ ಸೀಟುಗಳಿಗಾಗಿ ತೀವ್ರ ಸ್ಪರ್ಧೆಯು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ಭಯಾನಕ ಹೊರೆಯನ್ನು ಹೇರುತ್ತದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ. ವಿದ್ಯಾರ್ಥಿಯು ಮನೆ ಬಿಟ್ಟು ತಮ್ಮ ಕ್ಯಾಂಪಸ್ಗಳಲ್ಲಿ ಅಧ್ಯಯನ ಮಾಡಲು ಬಂದಾಗ ವಿಶ್ವವಿದ್ಯಾಲಯಗಳು ಪೋಷಕರ ಪಾತ್ರವನ್ನು ವಹಿಸಬೇಕು ಎಂದು ನ್ಯಾಯಾಲಯ ಹೇಳಿದೆ.
- Sushma Chakre
- Updated on: Mar 25, 2025
- 5:21 pm
ದೆಹಲಿ ಮೆಟ್ರೋಗೆ 2,929 ಕೋಟಿ ಅನುದಾನ; 1 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ ದೆಹಲಿ ಸಿಎಂ ರೇಖಾ ಗುಪ್ತಾ
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಇಂದು ವಿಧಾನಸಭೆಯಲ್ಲಿ 2025-26ಕ್ಕೆ 1 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ್ದಾರೆ. ದೆಹಲಿಯ ಜನರಿಗೆ ಪ್ರಮುಖ ಘೋಷಣೆಗಳು ಇಲ್ಲಿವೆ. ದೆಹಲಿ ಮೆಟ್ರೋಗೆ ಸಿಎಂ ರೇಖಾ ಗುಪ್ತಾ 2,929 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದಾರೆ, 2026ರಲ್ಲಿ 5,000 ಎಲೆಕ್ಟ್ರಿಕ್ ಬಸ್ಗಳು ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಕಳೆದ ತಿಂಗಳ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ವಿರುದ್ಧ ಪಕ್ಷವು ಜಯಗಳಿಸಿದ ನಂತರ, 26 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಮಂಡಿಸುತ್ತಿರುವ ಮೊದಲ ಬಜೆಟ್ ಇದಾಗಿದೆ.
- Sushma Chakre
- Updated on: Mar 25, 2025
- 4:16 pm
ಗಮನಿಸಿ: ಏಪ್ರಿಲ್ 1 ರಿಂದ ಈ ವಾಹನಗಳಿಗೆ ಪೆಟ್ರೋಲ್- ಡೀಸೆಲ್ ಸಿಗುವುದಿಲ್ಲ
Delhi Vehicles rules: ಪೆಟ್ರೋಲ್ ಪಂಪ್ಗಳಲ್ಲಿ ಅಳವಡಿಸಲಾದ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ANPR) ಕ್ಯಾಮೆರಾಗಳು ವಾಹನಗಳ ವಯಸ್ಸನ್ನು ಸ್ಕ್ಯಾನ್ ಮಾಡುತ್ತವೆ. ಅದರ ವಯಸ್ಸು NGT ನಿಗದಿಪಡಿಸಿದ ವಯಸ್ಸನ್ನು ಮೀರಿದರೆ ಅವರಿಗೆ ತೈಲ ನೀಡಲಾಗುವುದಿಲ್ಲ. ಈ ಕ್ಯಾಮೆರಾಗಳು ರಿಯಲ್ ಟೈಮ್ ನಲ್ಲಿ ನಂಬರ್ ಪ್ಲೇಟ್ ಗಳನ್ನು ಓದುವ ಮೂಲಕ ವಾಹನಗಳನ್ನು ಗುರುತಿಸುತ್ತವೆ.
- Vinay Bhat
- Updated on: Mar 25, 2025
- 12:46 pm