Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi

Delhi

ಭಾರತದ ರಾಜಧಾನಿಯಾದ ದೆಹಲಿಯು ಇತಿಹಾಸ, ಸಂಸ್ಕೃತಿ ಮತ್ತು ಆಧುನಿಕತೆಯಿಂದ ಕೂಡಿದ ನಗರವಾಗಿದೆ. ಐತಿಹಾಸಿಕ ಕೆಂಪು ಕೋಟೆ, ಕುತುಬ್ ಮಿನಾರ್ ಮತ್ತು ಇಂಡಿಯಾ ಗೇಟ್‌ನಂತಹ ಪುರಾತನ ಸ್ಮಾರಕಗಳ ಶ್ರೀಮಂತ ವಸ್ತ್ರದೊಂದಿಗೆ ದೆಹಲಿಯು ತನ್ನ ಶತಮಾನಗಳ-ಹಳೆಯ ಪರಂಪರೆಗೆ ಸಾಕ್ಷಿಯಾಗಿದೆ. ಚಾಂದಿನಿ ಚೌಕ್‌ನಂತಹ ನಗರದ ರೋಮಾಂಚಕ ಮಾರುಕಟ್ಟೆಗಳು ವೈವಿಧ್ಯಮಯ ಬೀದಿ ಆಹಾರ, ಜವಳಿ ಮತ್ತು ಸಾಂಪ್ರದಾಯಿಕ ಕರಕುಶಲ ವಸ್ತುಗಳೊಂದಿಗೆ ಸಂವೇದನಾ ಮಿತಿಮೀರಿದ ಹೊರೆಯನ್ನು ನೀಡುತ್ತವೆ.
ರಾಜಕೀಯ ಮತ್ತು ಆರ್ಥಿಕ ಕೇಂದ್ರವಾಗಿ, ದೆಹಲಿಯು ಭಾರತೀಯ ಸರ್ಕಾರದ ಸ್ಥಾನವನ್ನು ಮತ್ತು ಹಲವಾರು ಅಂತರರಾಷ್ಟ್ರೀಯ ರಾಯಭಾರ ಕಚೇರಿಗಳನ್ನು ಹೊಂದಿದೆ. ಇದರ ವಿಸ್ತಾರವಾದ ಮಹಾನಗರವು ಹಳೆಯ ಮತ್ತು ನವದೆಹಲಿ ಎರಡನ್ನೂ ಒಳಗೊಳ್ಳುತ್ತದೆ. ದೆಹಲಿ ಮೆಟ್ರೊ ಐತಿಹಾಸಿಕ ಹೆಗ್ಗುರುತುಗಳನ್ನು ಸಮಕಾಲೀನ ನೆರೆಹೊರೆಗಳೊಂದಿಗೆ ಸಂಪರ್ಕಿಸುತ್ತದೆ.
ವಾಯು ಮಾಲಿನ್ಯದಂತಹ ಸವಾಲುಗಳನ್ನು ಎದುರಿಸುತ್ತಿರುವ ಹೊರತಾಗಿಯೂ, ದೆಹಲಿಯು ಹೊಸತನ ಮತ್ತು ಜಾಗತಿಕ ಪ್ರಭಾವಗಳನ್ನು ಅಳವಡಿಸಿಕೊಂಡು ಕ್ರಿಯಾತ್ಮಕ ನಗರವಾಗಿ ವಿಕಸನಗೊಳ್ಳುತ್ತಲೇ ಇದೆ.

ಇನ್ನೂ ಹೆಚ್ಚು ಓದಿ

ಮನೆಯಲ್ಲಿ ಹಣ ಪತ್ತೆ ಪ್ರಕರಣ; ಯಶವಂತ್ ವರ್ಮಾ ನ್ಯಾಯಾಂಗ ಕರ್ತವ್ಯ ನಿರ್ವಹಿಸದಂತೆ ಹೈಕೋರ್ಟ್ ಆದೇಶ

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಅಕ್ರಮ ಹಣ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ಯಶವಂತ್ ವರ್ಮಾ ಯಾವುದೇ ನ್ಯಾಯಾಂಗ ಕರ್ತವ್ಯಗಳನ್ನು ನಿರ್ವಹಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಬೆಂಕಿ ಅವಘಡ ಉಂಟಾದ ನಂತರ ಅವರ ರೂಂಗಳಲ್ಲಿ ಭಾರೀ ಪ್ರಮಾಣದ ಹಣ ಇರುವುದು ಪತ್ತೆಯಾಗಿತ್ತು. ಈ ಬಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿ ದೂರು ನೀಡಿದ್ದರು.

ಮನೆಯಲ್ಲಿ ಅಕ್ರಮ ಹಣ ಪತ್ತೆ; ನ್ಯಾಯಮೂರ್ತಿ ಯಶವಂತ್ ವರ್ಮಾ ಪ್ರಕರಣದ ತನಿಖೆಗೆ ಸಿಜೆಐ ಸಂಜೀವ್ ಖನ್ನಾ ಆದೇಶ

ದೆಹಲಿಯ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾಗಿದ್ದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ಆರೋಪಗಳ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ 3 ಸದಸ್ಯರ ಸಮಿತಿ ರಚಿಸಿದ್ದಾರೆ. ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ಆರೋಪಗಳ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ಆಂತರಿಕ ತನಿಖೆಯನ್ನು ಪ್ರಾರಂಭಿಸಲು ಆದೇಶಿಸಿದ್ದಾರೆ.

ಮನೆಗೆ ಬೆಂಕಿ ಬಿದ್ದಿದ್ದರಿಂದ ಬಯಲಾಯ್ತು ದೆಹಲಿ ಹೈಕೋರ್ಟ್ ಜಡ್ಜ್ ಅಕ್ರಮ

ದೆಹಲಿ ನ್ಯಾಯಾಧೀಶ ಯಶವಂತ್ ವರ್ಮಾ ಅವರ ಬಂಗಲೆಗೆ ಬೆಂಕಿ ಬಿದ್ದ ಪರಿಣಾಮ ಅವರ ಮನೆಯಲ್ಲಿ ಭಾರಿ ಪ್ರಮಾಣದ ನಗದು ಇರುವುದು ಬೆಳಕಿಗೆ ಬಂದಿದೆ. ಅವರನ್ನು ಇದೀಗ ವರ್ಗಾವಣೆ ಮಾಡಲಾಗಿದೆ. ಈ ಘಟನೆ ಬೆಳಕಿಗೆ ಬಂದ ನಂತರ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸಿನ ಮೇರೆಗೆ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅವರ ಮಾತೃ ನ್ಯಾಯಾಲಯಕ್ಕೆ ವಾಪಾಸ್ ಕಳುಹಿಸಲಾಗಿದೆ. ದೆಹಲಿ ಹೈಕೋರ್ಟ್ ನ್ಯಾಯಾಧೀಶರ ನಿವಾಸದಲ್ಲಿ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ. ನ್ಯಾಯಮೂರ್ತಿ ಯಶವಂತ್ ವರ್ಮಾ ನಿವಾಸದಲ್ಲಿ ನಗದು ಪತ್ತೆಯಾಗಿದೆ.

ಮನೀಷ್ ಸಿಸೋಡಿಯಾ, ಸತ್ಯೇಂದರ್ ಜೈನ್ ವಿರುದ್ಧ ತನಿಖೆಗೆ ರಾಷ್ಟ್ರಪತಿ ಅನುಮತಿ

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮತ್ತು ಸತ್ಯೇಂದರ್ ಜೈನ್ ವಿರುದ್ಧ ಔಪಚಾರಿಕ ತನಿಖೆ ಆರಂಭಿಸಲು ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮತಿ ನೀಡಿದ್ದಾರೆ. ಮನೀಶ್ ಸಿಸೋಡಿಯಾ ಮತ್ತು ಸಚಿವ ಸತ್ಯೇಂದರ್ ಜೈನ್ ವಿರುದ್ಧ ತನಿಖೆಗೆ ಗೃಹ ಸಚಿವಾಲಯವೂ ಅನುಮೋದನೆ ನೀಡಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಇಬ್ಬರ ವಿರುದ್ಧದ ತನಿಖೆಗೆ ಅನುಮೋದನೆ ನೀಡಲಾಗಿದೆ ಎಂದು ಗೃಹ ಸಚಿವಾಲಯ ಇಂದು ಲೆಫ್ಟಿನೆಂಟ್ ಗವರ್ನರ್ ಸಚಿವಾಲಯಕ್ಕೆ ತಿಳಿಸಿದೆ.

ಭಾರತದ ಈ ಡ್ರೋನ್ ಯೋಜನೆ ಮೆಚ್ಚಿದ ಎಂಐಟಿ ಪ್ರೊಫೆಸರ್; ಡ್ರೋನ್ ದೀದಿಯರೊಂದಿಗೆ ಜೆ ಫ್ಲೆಮಿಂಗ್ ಸಂವಾದ

Namo drone didi scheme: ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಅಳವಡಿಕೆ ಹೆಚ್ಚಿಸಲು ಮತ್ತು ಗ್ರಾಮೀಣ ಮಹಿಳೆಯರನ್ನು ಸಬಲೀಕರಣಗೊಳಿಸಲು ಸರ್ಕಾರ ರೂಪಿಸಿದ ನಮೋ ಡ್ರೋನ್ ದೀದಿ ಯೋಜನೆಯನ್ನು ಅಮೆರಿಕದ ಎಂಐಟಿ ಪ್ರೊಫೆಸರ್ ಜೋನೇತನ್ ಫ್ಲೆಮಿಂಗ್ ಮೆಚ್ಚಿಕೊಂಡಿದ್ದಾರೆ. ದೆಹಲಿಯ ಐಸಿಎಆರ್ ಕ್ಯಾಂಪಸ್​ನಲ್ಲಿ ಸ್ವತಃ ಡ್ರೋನ್ ಕಾರ್ಯಾಚರಣೆಯನ್ನು ವೀಕ್ಷಿಸಿದ ಅವರು, ಈ ಯೋಜನೆ ಇತರ ದೇಶಗಳಿಗೂ ಮಾದರಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ತಿಂಗಳಿಂದ ಈ ರಾಜ್ಯದಲ್ಲಿ 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಪೆಟ್ರೋಲ್ ಸಿಗಲ್ಲ!

ದೆಹಲಿಯಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಮಾಲಿನ್ಯವನ್ನು ನಿಯಂತ್ರಿಸಲು ಪ್ರಮುಖ ಹೆಜ್ಜೆಯನ್ನು ಇಡುತ್ತಿರುವ ಬಿಜೆಪಿ ಸರ್ಕಾರ 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಮಾರ್ಚ್ 31ರಿಂದ ಪಂಪ್‌ಗಳಲ್ಲಿ ಪೆಟ್ರೋಲ್ ಸಿಗುವುದಿಲ್ಲ ಎಂದು ಘೋಷಿಸಿದೆ. ಅಂತಹ ವಾಹನಗಳನ್ನು ಗುರುತಿಸಲು ತಂಡವನ್ನು ರಚಿಸಲಾಗುವುದು ಎಂದು ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಹೇಳಿದರು.

ದೆಹಲಿಯ ಸೂಫಿ ಸಂಗೀತ ಉತ್ಸವ ಜಹಾನ್-ಎ-ಖುಸ್ರೌನಲ್ಲಿ ನಾಳೆ ಪ್ರಧಾನಿ ಮೋದಿ ಭಾಗಿ

ಫೆಬ್ರವರಿ 28ರಂದು ನವದೆಹಲಿಯಲ್ಲಿ ನಡೆಯಲಿರುವ ಜಹಾನ್-ಎ-ಖುಸ್ರೌ' ಉತ್ಸವದ 25ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.ಖ್ಯಾತ ಚಲನಚಿತ್ರ ನಿರ್ಮಾಪಕ ಮತ್ತು ನಟ ಮುಜಾಫರ್ ಅಲಿ ಅವರಿಂದ ಆಯೋಜಿಸಲ್ಪಟ್ಟ ಈ 3 ದಿನಗಳ ಉತ್ಸವವು ಫೆಬ್ರವರಿ 28ರಿಂದ ಮಾರ್ಚ್ 2ರವರೆಗೆ ಸುಂದರ್ ನರ್ಸರಿಯಲ್ಲಿ ನಡೆಯಲಿದೆ. ಈ ಉತ್ಸವದ ವಿಶೇಷತೆಯೇನು? ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಅರವಿಂದ್ ಕೇಜ್ರಿವಾಲ್ ರಾಜ್ಯಸಭೆಗೆ ಹೋಗ್ತಾರಾ? ಎಎಪಿ ಹೇಳಿದ್ದೇನು?

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜ್ಯಸಭೆಗೆ ಹೋಗಬಹುದು ಎಂಬ ಊಹಾಪೋಹಗಳನ್ನು ಆಮ್ ಆದ್ಮಿ ಪಕ್ಷ (ಎಎಪಿ) ತಳ್ಳಿಹಾಕಿದೆ. ದೆಹಲಿಯಲ್ಲಿ ಪಕ್ಷದ ಚುನಾವಣಾ ಸೋಲಿನ ನಂತರ ಈ ಊಹಾಪೋಹಗಳು ಪ್ರಾರಂಭವಾದವು. ಪಂಜಾಬ್ ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಈಗಾಗಲೇ ಸಂಜೀವ್ ಅರೋರಾ ಬದಲಿಗೆ ಅರವಿಂದ್ ಕೇಜ್ರಿವಾಲ್ ರಾಜ್ಯಸಭೆಗೆ ಹೋಗುತ್ತಾರೆ ಮತ್ತು ಲುಧಿಯಾನ ಪಶ್ಚಿಮ ಸ್ಥಾನದಿಂದ ಉಪಚುನಾವಣೆಗೆ ಸಂಜೀವ್ ಅರೋರಾ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗುವುದು ಎಂದು ಹೇಳಿದ್ದರು.

ಕರ್ಮ ರಿಟರ್ನ್ಸ್​: ಅಂದು ವಿಜೇಂದ್ರ ಗುಪ್ತಾ, ಇಂದು ಅತಿಶಿ ಸದನದಿಂದ ಹೊರಕ್ಕೆ

ಲೆಫ್ಟಿನೆಂಟ್ ಗರ್ವನರ್ ವಿನಯ್ ಕುಮಾರ್ ಸಕ್ಸೇನಾ ಭಾಷಣ ಮಾಡಲು ಆರಂಭಿಸುತ್ತಿದ್ದಂತೆಯೇ ಆಮ್ ಅದ್ಮಿ ಪಕ್ಷದ ನಾಯಕರು ಘೋಷಣೆಗಳನ್ನು ಕೂಗಲು ಶುರುಮಾಡಿದ್ದರು. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಚಿತ್ರಗಳನ್ನು ತೆಗೆದುಹಾಕುವುದನ್ನು ವಿರೋಧಿಸಿ ಎಎಪಿ ಶಾಸಕರು ಪ್ರತಿಭಟಿಸಿದರು, ನಂತರ ಸ್ಪೀಕರ್ ವಿಜೇಂದ್ರ ಗುಪ್ತಾ ಎಎಪಿ ನಾಯಕರ ವಿರುದ್ಧ ಕ್ರಮ ಕೈಗೊಂಡರು.

Fact Check: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಕತ್ತಿವರಸೆ ಮಾಡುತ್ತಿರುವುದು ನಿಜವೇ?: ವೈರಲ್ ವಿಡಿಯೋದ ಸತ್ಯಾಂಶ ಏನು?

Rekha Guptha Fact Check: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋವನ್ನು ದೆಹಲಿ ಸಿಎಂ ರೇಖಾ ಗುಪ್ತಾ ಅವರ ಹಳೆಯ ವಿಡಿಯೋ ಎಂದು ಅನೇಕ ಬಳಕೆದಾರರು ಹೇಳಿಕೊಂಡು ಹಂಚಿಕೊಳ್ಳುತ್ತಿದ್ದಾರೆ. ಹಾಗಾದರೆ, ಈ ವಿಡಿಯೋದಲ್ಲಿ ಇರುವವರು ನಿಜಕ್ಕೂ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರೆನಾ?. ಇಲ್ಲಿದೆ ನೋಡಿ ಸತ್ಯಾಂಶ.

ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ