AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi

Delhi

ಭಾರತದ ರಾಜಧಾನಿಯಾದ ದೆಹಲಿಯು ಇತಿಹಾಸ, ಸಂಸ್ಕೃತಿ ಮತ್ತು ಆಧುನಿಕತೆಯಿಂದ ಕೂಡಿದ ನಗರವಾಗಿದೆ. ಐತಿಹಾಸಿಕ ಕೆಂಪು ಕೋಟೆ, ಕುತುಬ್ ಮಿನಾರ್ ಮತ್ತು ಇಂಡಿಯಾ ಗೇಟ್‌ನಂತಹ ಪುರಾತನ ಸ್ಮಾರಕಗಳ ಶ್ರೀಮಂತ ವಸ್ತ್ರದೊಂದಿಗೆ ದೆಹಲಿಯು ತನ್ನ ಶತಮಾನಗಳ-ಹಳೆಯ ಪರಂಪರೆಗೆ ಸಾಕ್ಷಿಯಾಗಿದೆ. ಚಾಂದಿನಿ ಚೌಕ್‌ನಂತಹ ನಗರದ ರೋಮಾಂಚಕ ಮಾರುಕಟ್ಟೆಗಳು ವೈವಿಧ್ಯಮಯ ಬೀದಿ ಆಹಾರ, ಜವಳಿ ಮತ್ತು ಸಾಂಪ್ರದಾಯಿಕ ಕರಕುಶಲ ವಸ್ತುಗಳೊಂದಿಗೆ ಸಂವೇದನಾ ಮಿತಿಮೀರಿದ ಹೊರೆಯನ್ನು ನೀಡುತ್ತವೆ.
ರಾಜಕೀಯ ಮತ್ತು ಆರ್ಥಿಕ ಕೇಂದ್ರವಾಗಿ, ದೆಹಲಿಯು ಭಾರತೀಯ ಸರ್ಕಾರದ ಸ್ಥಾನವನ್ನು ಮತ್ತು ಹಲವಾರು ಅಂತರರಾಷ್ಟ್ರೀಯ ರಾಯಭಾರ ಕಚೇರಿಗಳನ್ನು ಹೊಂದಿದೆ. ಇದರ ವಿಸ್ತಾರವಾದ ಮಹಾನಗರವು ಹಳೆಯ ಮತ್ತು ನವದೆಹಲಿ ಎರಡನ್ನೂ ಒಳಗೊಳ್ಳುತ್ತದೆ. ದೆಹಲಿ ಮೆಟ್ರೊ ಐತಿಹಾಸಿಕ ಹೆಗ್ಗುರುತುಗಳನ್ನು ಸಮಕಾಲೀನ ನೆರೆಹೊರೆಗಳೊಂದಿಗೆ ಸಂಪರ್ಕಿಸುತ್ತದೆ.
ವಾಯು ಮಾಲಿನ್ಯದಂತಹ ಸವಾಲುಗಳನ್ನು ಎದುರಿಸುತ್ತಿರುವ ಹೊರತಾಗಿಯೂ, ದೆಹಲಿಯು ಹೊಸತನ ಮತ್ತು ಜಾಗತಿಕ ಪ್ರಭಾವಗಳನ್ನು ಅಳವಡಿಸಿಕೊಂಡು ಕ್ರಿಯಾತ್ಮಕ ನಗರವಾಗಿ ವಿಕಸನಗೊಳ್ಳುತ್ತಲೇ ಇದೆ.

ಇನ್ನೂ ಹೆಚ್ಚು ಓದಿ

ಜಂತರ್ ಮಂತರ್​ನಲ್ಲಿ ಬಂಗಾಳ ಸಿಎಂ ಮೇಲೆ ದಾಳಿಗೆ ನಡೆದಿತ್ತಾ ಪಿತೂರಿ? ಗರ್ಲ್​ಫ್ರೆಂಡ್​ಳ ಸೋಷಿಯಲ್ ಮೀಡಿಯಾದಿಂದ ಸಂಚು ಬಯಲು

Terror suspect allegedly plotted disturbances at Jantar Mantar: ಪಶ್ಚಿಮ ಬಂಗಾಳದಲ್ಲಿ ಬಂಧಿತನಾಗಿರುವ ವ್ಯಕ್ತಿಯೊಬ್ಬನ ವಿಚಾರಣೆ ವೇಳೆ ಪೊಲೀಸರಿಗೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಪಾಕಿಸ್ತಾನೀ ಹ್ಯಾಂಡ್ಲರ್​ಗಳ ಅಣತಿಯಂತೆ ನಡೆಯುತ್ತಿದ್ದ ಈ ಶಂಕಿತ ಉಗ್ರನು ಜಂತರ್ ಮಂತರ್​ನಲ್ಲಿ ದೊಡ್ಡ ಗಲಭೆ ಸೃಷ್ಟಿಸಲು ಯತ್ನಿಸಿದ್ದನೆನ್ನಲಾಗಿದೆ. ಪೊಲೀಸ್ ವೇಷದಲ್ಲಿ ಜಂತರ್ ಮಂತರ್ ಪ್ರತಿಭಟನೆಗೆ ಹೋಗಿ ಗಲಭೆ ಸೃಷ್ಟಿಸುವ ಸಂಚು ನಡೆದಿತ್ತು.

ಧರ್ಮದ ಹೆಸರಿನಲ್ಲಿ ಕ್ರೂರತೆ; ಅಂಕಿತ್ ಶರ್ಮಾ ಕೊಲೆ ಪ್ರಕರಣದಲ್ಲಿ ಆಪ್ ನಾಯಕ ತಾಹಿರ್ ಹುಸೇನ್​ಗೆ ಜೀವಾವಧಿ ಶಿಕ್ಷೆ

2020ರ ದೆಹಲಿ ದಂಗೆಯ ಸಂದರ್ಭದಲ್ಲಿ ಇಂಟೆಲಿಜೆನ್ಸ್ ಬ್ಯೂರೋ (IB) ಅಧಿಕಾರಿ ಅಂಕಿತ್ ಶರ್ಮಾ ಅವರ ಕೊಲೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (AAP) ಮಾಜಿ ನಾಯಕ ತಾಹಿರ್ ಹುಸೇನ್ ಮತ್ತು ಇತರ ನಾಲ್ವರು ಅಪರಾಧಿಗಳಿಗೆ ದೆಹಲಿ ನ್ಯಾಯಾಲಯ ಇಂದು ಜೀವಾವಧಿ ಶಿಕ್ಷೆ ವಿಧಿಸಿದೆ. ಫೆಬ್ರವರಿ 2020ರಲ್ಲಿ ಈಶಾನ್ಯ ದೆಹಲಿಯ ದಯಾಲ್‌ಪುರ ಪ್ರದೇಶದಲ್ಲಿ ನಡೆದ ಗಲಭೆಯ ವೇಳೆ ಈ ಕೊಲೆ ನಡೆದಿತ್ತು. ಇದನ್ನು "ಅತ್ಯಂತ ಕ್ರೂರತೆಯ ಕೃತ್ಯ" ಎಂದು ದೆಹಲಿ ಕೋರ್ಟ್ ಬಣ್ಣಿಸಿದೆ.

ವಿದ್ಯಾರ್ಥಿಗಳ ಒತ್ತಾಯಕ್ಕೆ ಮಣಿದ ದೆಹಲಿ ಸರ್ಕಾರ; ಪ್ರತಿಭಟನಾಕಾರರ ಮೇಲಿನ ಕೇಸ್ ಕೈಬಿಡಲು ನಿರ್ಧಾರ

ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ ಜನರ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂದು ದೆಹಲಿ ಸರ್ಕಾರ ಇಂದು ತಿಳಿಸಿದೆ. ಆದರೆ, ಸುಪ್ರೀಂ ಕೋರ್ಟ್ ಆದೇಶದಂತೆ ಅಪರಾಧ ಹಿನ್ನೆಲೆ ಹೊಂದಿರುವ ವ್ಯಕ್ತಿಗಳ ವಿರುದ್ಧದ ಕೇಸುಗಳನ್ನು ಹಿಂಪಡೆಯುವುದಿಲ್ಲ ಎಂದು ಕೂಡ ಸರ್ಕಾರ ಸ್ಪಷ್ಟಪಡಿಸಿದೆ. ಇದರಿಂದಾಗಿ ಸಿಜೆಪಿಯ ಬೇಡಿಕೆ ಈಡೇರಿದಂತಾಗಿದೆ.

ಕೆಲವು ಸಂದರ್ಭಗಳಲ್ಲಿ ಪೆಲೆಟ್ ಗನ್ ಬಳಕೆ ಕಾನೂನುಬದ್ಧ; ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ

ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಯಂತ್ರಿಸುವ ಸಂದರ್ಭಗಳಲ್ಲಿ ಲೋಹದ ಪೆಲೆಟ್ ಗನ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅತ್ಯಂತ ವಿರಳ ಹಾಗೂ ಅನಿವಾರ್ಯ ಪರಿಸ್ಥಿತಿಗಳಲ್ಲಿ ಪೊಲೀಸ್ ಪಡೆಗಳು ಪೆಲೆಟ್ ಗನ್‌ಗಳನ್ನು ಬಳಸಲು ಅನುಮತಿ ನೀಡಬಹುದು ಎಂದು ತಿಳಿಸಿದೆ. ಭದ್ರತಾ ಪಡೆಗಳು ಪೆಲೆಟ್ ಗನ್‌ಗಳನ್ನು ದುರ್ಬಳಕೆ ಮಾಡಿಕೊಂಡಿರುವ ನಿರ್ದಿಷ್ಟ ಘಟನೆಗಳು ಅಥವಾ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅತ್ಯಾಚಾರ, ಕೊಲೆ, ದರೋಡೆ ಮಾಡಿದ್ದ 2873 ಕ್ರಿಮಿನಲ್​ಗಳು ದೆಹಲಿ ಪ್ರತಿಭಟನೆಯಲ್ಲಿ ಭಾಗಿ; ಹೊಸ ತಂತ್ರಜ್ಞಾನದಿಂದ ಪತ್ತೆ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಯಲ್ಲಿ ಕೊಲೆ, ಅತ್ಯಾಚಾರ ಹಾಗೂ ದರೋಡೆಯಂತಹ ಗಂಭೀರ ಅಪರಾಧದ ಮಾಡಿ ಸಿಕ್ಕಿಹಾಕಿಕೊಂಡಿದ್ದ ಸುಮಾರು 2,873 ವ್ಯಕ್ತಿಗಳು ಭಾಗವಹಿಸಿದ್ದು ಪತ್ತೆಯಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. ಮುಖ ಗುರುತಿಸುವ ತಂತ್ರಜ್ಞಾನ (FRS) ಮೂಲಕ ಇವರನ್ನು ಗುರುತಿಸಲಾಗಿದ್ದು, ಜುಲೈ 20ರಂದು ಸಂಭವಿಸಿದ ಹಿಂಸಾಚಾರದಲ್ಲಿ ಇವರ ಪಾತ್ರದ ಕುರಿತು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ.

ಪೊಲೀಸರು ನನ್ನನ್ನು ಅಪಹರಿಸಿ ಮಸ್ಸೂರಿಯಲ್ಲಿ ಬಿಟ್ಟರು; ಜಂತರ್ ಮಂತರ್‌ನಲ್ಲಿ ಆಹಾರ ವಿತರಿಸುತ್ತಿದ್ದ ವ್ಯಕ್ತಿ ಆರೋಪ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರಿಗೆ ಆಹಾರ ವಿತರಿಸುತ್ತಿದ್ದ ಜುನೈದ್ ಎಂಬ ವ್ಯಕ್ತಿಯನ್ನು ಶುಕ್ರವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದು, ಕಣ್ಣಿಗೆ ಬಟ್ಟೆ ಕಟ್ಟಿ ವಿಚಾರಣೆ ನಡೆಸಿದ್ದಲ್ಲದೆ, ಉತ್ತರಾಖಂಡದ ಮುಸ್ಸೂರಿಯಲ್ಲಿ ತಂದು ಬಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ವಿಡಿಯೋವೊಂದರಲ್ಲಿ ಮಾತನಾಡಿರುವ ಜುನೈದ್, ತಾವು ನಾಯಿ ಕಡಿತಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ ಬರುತ್ತಿದ್ದಾಗ, ದೆಹಲಿ ಪೊಲೀಸರು ಎಂದು ಹೇಳಿಕೊಂಡ ವ್ಯಕ್ತಿಗಳು ತಮ್ಮನ್ನು ಮತ್ತು ತಮ್ಮ ಸ್ನೇಹಿತನನ್ನು ತಡೆದರು ಎಂದು ಹೇಳಿದ್ದಾರೆ.

ದೆಹಲಿ ಪೊಲೀಸರಿಂದ ಪಾಕಿಸ್ತಾನ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪೊಲೀಸರು, ಪ್ರತಿಭಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರನ್ನು ದಾರಿ ತಪ್ಪಿಸುವ ಮತ್ತು ಸುಳ್ಳು ಮಾಹಿತಿಯನ್ನು ಹರಡುವ ಹಲವು ಯತ್ನಗಳು ಸಾಮಾಜಿಕ ಜಾಲತಾಣಗಳಲ್ಲಿ ನಡೆದಿವೆ. ಯಾವುದೇ ಪೋಸ್ಟ್‌ಗಳು, ವಿಡಿಯೋಗಳು ಮತ್ತು ಫೋಟೋಗಳನ್ನು ನಂಬುವ ಅಥವಾ ಹಂಚಿಕೊಳ್ಳುವ ಮೊದಲು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಪ್ರತಿಭಟನೆಗೆ ಸಂಬಂಧಿಸಿದಂತೆ ನಕಲಿ ಮತ್ತು ದಾರಿ ತಪ್ಪಿಸುವ ವಿಷಯಗಳನ್ನು ಹರಡುವಲ್ಲಿ ಪಾಕಿಸ್ತಾನ ಮೂಲದ ಹಲವಾರು ಸಾಮಾಜಿಕ ಜಾಲತಾಣ ಖಾತೆಗಳು ಭಾಗಿಯಾಗಿರುವುದು ಕಂಡುಬಂದಿದೆ. ಇಂತಹ 400ಕ್ಕೂ ಹೆಚ್ಚು ಖಾತೆಗಳನ್ನು ಗುರುತಿಸಿ ಬ್ಲಾಕ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರತಿಭಟನೆ ಬಗ್ಗೆ ಸುಳ್ಳು ಸುದ್ದಿ ಪ್ರಸಾರ; ಪಾಕಿಸ್ತಾನ ಮೂಲದ 480 ಖಾತೆಗಳಿಗೆ ದೆಹಲಿ ಪೊಲೀಸ್ ನಿರ್ಬಂಧ

ಸಂಘಟಿತ ರೀತಿಯಲ್ಲಿ ಭಾರತದ ವಿರುದ್ಧ ಸುಳ್ಳು ಸುದ್ದಿ ಹಾಗೂ ತಪ್ಪು ಮಾಹಿತಿಗಳನ್ನು ಹರಡುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಸುಮಾರು 480 ಸಾಮಾಜಿಕ ಜಾಲತಾಣ ಖಾತೆಗಳನ್ನು ಗುರುತಿಸಿ, ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ದೇಶದಲ್ಲಾಗುತ್ತಿರುವ ಪ್ರಸ್ತುತ ವಿದ್ಯಾರ್ಥಿ ಪ್ರತಿಭಟನೆಯ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ವದಂತಿಗಳನ್ನು ಹರಡುತ್ತಿರುವ ಇಂತಹ ವಿದೇಶಿ ಖಾತೆಗಳ ಬಗ್ಗೆ ಜಾಗರೂಕರಾಗಿರುವಂತೆ ದೆಹಲಿ ಪೊಲೀಸರು ವಿದ್ಯಾರ್ಥಿಗಳು ಮತ್ತು ಯುವಜನತೆಯಲ್ಲಿ ಮನವಿ ಮಾಡಿದ್ದಾರೆ.

‘ಯಾವುದೇ ಸ್ಥಳದಲ್ಲಿ, ಯಾವ ಸಮಯದಲ್ಲಾದರೂ ಚರ್ಚೆಗೆ ಸಿದ್ಧ’; 4ನೇ ಬಾರಿ ಸಿಜೆಪಿಗೆ ಕೇಂದ್ರ ಸರ್ಕಾರ ಆಹ್ವಾನ

ಕಾಕ್ರೋಚ್ ಜನತಾ ಪಾರ್ಟಿ (CJP) ಮತ್ತು ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಮಾತುಕತೆಗೆ ಆಹ್ವಾನ ನೀಡಿರುವ ಕೇಂದ್ರ ಸರ್ಕಾರ, ಯಾವುದೇ ಸಮಯದಲ್ಲಿ, ಯಾವುದೇ ಸ್ಥಳದಲ್ಲಿ ಬೇಕಾದರೂ ಚರ್ಚೆ ನಡೆಸಲು ಸಿದ್ಧ ಎಂದು ಪುನರುಚ್ಚರಿಸಿದೆ. ನಿನ್ನೆ ಮಧ್ಯಾಹ್ನದಿಂದ ಚರ್ಚೆಗಾಗಿ ಸರ್ಕಾರ ಈಗಾಗಲೇ 4 ಪ್ರಸ್ತಾವನೆಗಳನ್ನು ಕಳುಹಿಸಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. ಸರ್ಕಾರದ ಪ್ರಸ್ತಾವನೆಗಳ ಕುರಿತು ಮಾತನಾಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಪ್ರತಿಭಟನಾಕಾರರಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ.

ಜಂತರ್ ಮಂತರ್‌ನಲ್ಲಿ ಮತ್ತೆ ಭುಗಿಲೆದ್ದ ಗಲಭೆ; ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ, ಎಸಿಪಿಗಳಿಗೆ ಗಾಯ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರು ಮತ್ತೊಮ್ಮೆ ಗಲಭೆ ಸೃಷ್ಟಿಸಿದ್ದಾರೆ. ಪ್ರತಿಭಟನಾಕಾರರಲ್ಲಿ ದುಷ್ಕರ್ಮಿಗಳು ಆರ್‌ಎಎಫ್ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಇಬ್ಬರು ಎಸಿಪಿಗಳು ಸೇರಿದಂತೆ 5 ಪೊಲೀಸರು ಗಾಯಗೊಂಡಿದ್ದಾರೆ. ಪರಿಸ್ಥಿತಿ ಉದ್ವಿಗ್ನವಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ದೆಹಲಿ ಪೊಲೀಸರ ಪ್ರಕಾರ, ದುಷ್ಕರ್ಮಿಗಳ ದಾಳಿಯಲ್ಲಿ ಇದುವರೆಗೆ 5 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಇದರಲ್ಲಿ ಇಬ್ಬರು ಎಸಿಪಿಗಳು, ಇಬ್ಬರು ಇನ್ಸ್‌ಪೆಕ್ಟರ್‌ಗಳು ಮತ್ತು ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಸೇರಿದ್ದಾರೆ.

ಸಂಧಾನದ ವೇಳೆ ಬೇಡಿಕೆ ಬದಲಾಯಿಸಿದ ರಾಹುಲ್ ಗಾಂಧಿ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಆರೋಪ

ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಬಳಿ ನಡೆದ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಸಂಧಾನಕ್ಕೆ ತೆರಳಿದ್ದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸಂಧಾನದ ಮಾತುಕತೆಯ ಮಧ್ಯದಲ್ಲಿ ರಾಹುಲ್ ಗಾಂಧಿ ತಮ್ಮ ಬೇಡಿಕೆಗಳನ್ನು ಇದ್ದಕ್ಕಿದ್ದಂತೆ ಬದಲಾಯಿಸಿ, ಕೊಟ್ಟ ಮಾತಿನಿಂದ ಹಿಂದೆ ಸರಿದರು ಎಂದು ಸಚಿವರು ಹೇಳಿದ್ದಾರೆ. ಇಂದು ರಾತ್ರಿಯಿಡೀ ಧರಣಿ ನಡೆಸುವುದಾಗಿ ಪಟ್ಟು ಹಿಡಿದಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತಿತರ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಧಾನಿ ನಿವಾಸದ ಬಳಿ ಧರಣಿ ನಡೆಸುತ್ತಿದ್ದ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ 

ಇಂದು ರಾತ್ರಿಯಿಡೀ ಪ್ರಧಾನಿ ನಿವಾಸದ ಹೊರಗೆ ಧರಣಿ ಮುಂದುವರಿಸುವುದಾಗಿ ಕಾಂಗ್ರೆಸ್ ನಾಯಕರು ಘೋಷಿಸಿದ್ದರು. ಆದರೆ, ಇಂದು ಸಂಜೆ ಸುಮಾರು 6.40ರ ವೇಳೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಭದ್ರತಾ ಪಡೆಗಳ ಜೊತೆ ಸ್ಥಳಕ್ಕೆ ಆಗಮಿಸಿದ ದೆಹಲಿ ಪೊಲೀಸರು ಪ್ರತಿಭಟನಾನಿರತರನ್ನು ತೆರವುಗೊಳಿಸಲು ಆರಂಭಿಸಿದರು. ಆದರೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಸ್ತೆಯ ಮೇಲೆಯೇ ಕುಳಿತು, ತಮ್ಮ ಬೇಡಿಕೆಗಳು ಈಡೇರುವವರೆಗೆ ಆ ಜಾಗದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು.

ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು