Delhi
ಭಾರತದ ರಾಜಧಾನಿಯಾದ ದೆಹಲಿಯು ಇತಿಹಾಸ, ಸಂಸ್ಕೃತಿ ಮತ್ತು ಆಧುನಿಕತೆಯಿಂದ ಕೂಡಿದ ನಗರವಾಗಿದೆ. ಐತಿಹಾಸಿಕ ಕೆಂಪು ಕೋಟೆ, ಕುತುಬ್ ಮಿನಾರ್ ಮತ್ತು ಇಂಡಿಯಾ ಗೇಟ್ನಂತಹ ಪುರಾತನ ಸ್ಮಾರಕಗಳ ಶ್ರೀಮಂತ ವಸ್ತ್ರದೊಂದಿಗೆ ದೆಹಲಿಯು ತನ್ನ ಶತಮಾನಗಳ-ಹಳೆಯ ಪರಂಪರೆಗೆ ಸಾಕ್ಷಿಯಾಗಿದೆ. ಚಾಂದಿನಿ ಚೌಕ್ನಂತಹ ನಗರದ ರೋಮಾಂಚಕ ಮಾರುಕಟ್ಟೆಗಳು ವೈವಿಧ್ಯಮಯ ಬೀದಿ ಆಹಾರ, ಜವಳಿ ಮತ್ತು ಸಾಂಪ್ರದಾಯಿಕ ಕರಕುಶಲ ವಸ್ತುಗಳೊಂದಿಗೆ ಸಂವೇದನಾ ಮಿತಿಮೀರಿದ ಹೊರೆಯನ್ನು ನೀಡುತ್ತವೆ.
ರಾಜಕೀಯ ಮತ್ತು ಆರ್ಥಿಕ ಕೇಂದ್ರವಾಗಿ, ದೆಹಲಿಯು ಭಾರತೀಯ ಸರ್ಕಾರದ ಸ್ಥಾನವನ್ನು ಮತ್ತು ಹಲವಾರು ಅಂತರರಾಷ್ಟ್ರೀಯ ರಾಯಭಾರ ಕಚೇರಿಗಳನ್ನು ಹೊಂದಿದೆ. ಇದರ ವಿಸ್ತಾರವಾದ ಮಹಾನಗರವು ಹಳೆಯ ಮತ್ತು ನವದೆಹಲಿ ಎರಡನ್ನೂ ಒಳಗೊಳ್ಳುತ್ತದೆ. ದೆಹಲಿ ಮೆಟ್ರೊ ಐತಿಹಾಸಿಕ ಹೆಗ್ಗುರುತುಗಳನ್ನು ಸಮಕಾಲೀನ ನೆರೆಹೊರೆಗಳೊಂದಿಗೆ ಸಂಪರ್ಕಿಸುತ್ತದೆ.
ವಾಯು ಮಾಲಿನ್ಯದಂತಹ ಸವಾಲುಗಳನ್ನು ಎದುರಿಸುತ್ತಿರುವ ಹೊರತಾಗಿಯೂ, ದೆಹಲಿಯು ಹೊಸತನ ಮತ್ತು ಜಾಗತಿಕ ಪ್ರಭಾವಗಳನ್ನು ಅಳವಡಿಸಿಕೊಂಡು ಕ್ರಿಯಾತ್ಮಕ ನಗರವಾಗಿ ವಿಕಸನಗೊಳ್ಳುತ್ತಲೇ ಇದೆ.
‘ಭಿನ್ನಾಭಿಪ್ರಾಯಗಳು ವಿವಾದವಾಗಬಾರದು’; ಮುರಿದ ಬಾಂಧವ್ಯ ಸರಿಪಡಿಸಲು ಪ್ರಧಾನಿ ಮೋದಿ-ಕ್ಸಿ ಜಿನ್ಪಿಂಗ್ ಸುದೀರ್ಘ ಮಾತುಕತೆ!
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ನವದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಚೀನಾ ಗಣರಾಜ್ಯದ ಅಧ್ಯಕ್ಷರಾದ ಕ್ಸಿ ಜಿನ್ಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. ಆಗಸ್ಟ್ ತಿಂಗಳಲ್ಲಿ ತಿಯಾಂಜಿನ್ನಲ್ಲಿ ನಡೆದ ಕೊನೆಯ ಭೇಟಿಯ ನಂತರ ಭಾರತ-ಚೀನಾ ದ್ವಿಪಕ್ಷೀಯ ಸಂಬಂಧಗಳಲ್ಲಿ ಕಂಡುಬಂದ ನಿರಂತರ ಪ್ರಗತಿಯನ್ನು ಉಭಯ ನಾಯಕರು ಸ್ವಾಗತಿಸಿದರು. ಎರಡೂ ದೇಶಗಳು ತಮ್ಮ ನಂಟನ್ನು ಕಾರ್ಯತಂತ್ರದ ಮತ್ತು ದೀರ್ಘಕಾಲೀನ ದೃಷ್ಟಿಕೋನದಿಂದ ನೋಡಬೇಕು ಎಂದು ಅವರು ಪುನರುಚ್ಚರಿಸಿದರು.
- Sushma Chakre
- Updated on: Sep 12, 2026
- 9:07 pm
24 ಗಂಟೆಗಳ ಭೇಟಿ, 15,000 ಸಿಬ್ಬಂದಿ, ಹೋಟೆಲ್ ಮೇಲೆ ಹಾರಾಟ ನಿಷೇಧ; ಚೀನಾ ಅಧ್ಯಕ್ಷರಿಗಾಗಿ ಭದ್ರತಾ ಕೋಟೆಯಾದ ದೆಹಲಿ!
ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಇಂದು (ಶನಿವಾರ) ನವದೆಹಲಿಗೆ ಆಗಮಿಸಿದ್ದಾರೆ. 7 ವರ್ಷಗಳ ನಂತರ ಕ್ಸಿ ಜಿನ್ಪಿಂಗ್ ಅವರು ಭಾರತಕ್ಕೆ ಭೇಟಿ ನೀಡಿದ್ದು, ಕೇವಲ ಒಂದು ದಿನದ ಪ್ರವಾಸಕ್ಕಾಗಿ ಇಡೀ ದೆಹಲಿಯಲ್ಲಿ ಬೃಹತ್ ಮಟ್ಟದ ಭದ್ರತಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ನೀಡಿರುವ ಭದ್ರತೆಯಂತೆಯೇ ಚೀನಾ ಅಧ್ಯಕ್ಷರಿಗೂ ದೆಹಲಿಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಆ ಬಗ್ಗೆ ಪೂರ್ತಿ ಮಾಹಿತಿ ಇಲ್ಲಿದೆ.
- Sushma Chakre
- Updated on: Sep 12, 2026
- 6:16 pm
ಬ್ರಿಕ್ಸ್ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್; ಚೀನಾ ಅಧ್ಯಕ್ಷರಿಗೆ ವಿಶೇಷತೆ ವಿವರಿಸಿದ ಮೋದಿ
ದೆಹಲಿಯ ಭಾರತ್ ಮಂಟಪದಲ್ಲಿ 18ನೇ ಬ್ರಿಕ್ಸ್ ಶೃಂಗಸಭೆ ಅಧಿಕೃತವಾಗಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಕ್ಸ್ ನಾಯಕರನ್ನು ವೈಯಕ್ತಿಕವಾಗಿ ಸ್ವಾಗತಿಸಿದರು. ತಮಿಳುನಾಡಿನ ರಾಮೇಶ್ವರಂನಲ್ಲಿರುವ ಪ್ರಸಿದ್ಧ ರಾಮನಾಥಸ್ವಾಮಿ ದೇವಾಲಯದ ಹಿನ್ನೆಲೆಯಲ್ಲಿ ಅವರು ವಿಶ್ವದಾದ್ಯಂತದ ನಾಯಕರಿಗೆ ಭವ್ಯ ಸ್ವಾಗತ ನೀಡಿದರು. ತಮಿಳುನಾಡಿನ ರಾಮೇಶ್ವರಂನಲ್ಲಿರುವ ರಾಮನಾಥಸ್ವಾಮಿ ದೇವಾಲಯವನ್ನು ಶಿವನಿಗೆ ಅರ್ಪಿತವಾದ ಅತ್ಯಂತ ಪವಿತ್ರ ಮತ್ತು ಪ್ರಸಿದ್ಧ ಹಿಂದೂ ಯಾತ್ರಾ ಸ್ಥಳವೆಂದು ಪರಿಗಣಿಸಲಾಗಿದೆ. ಇದು ಭಾರತದ 12 ಜ್ಯೋತಿರ್ಲಿಂಗಗಳು ಮತ್ತು ನಾಲ್ಕು ಧಾಮಗಳಲ್ಲಿ ಒಂದಾಗಿದೆ.
- Sushma Chakre
- Updated on: Sep 12, 2026
- 5:18 pm
‘ಬ್ರಿಕ್ಸ್ ಯಾರ ವಿರುದ್ಧದ ಒಕ್ಕೂಟವೂ ಅಲ್ಲ’; ಪಾಶ್ಚಿಮಾತ್ಯ ದೇಶಗಳಿಗೆ ಪ್ರಧಾನಿ ಮೋದಿ ಸಂದೇಶ
ನವದೆಹಲಿಯ 'ಭಾರತ ಮಂಟಪ'ದಲ್ಲಿ ನಡೆಯುತ್ತಿರುವ 18ನೇ ಬ್ರಿಕ್ಸ್ ಶೃಂಗಸಭೆಯ (BRICS) ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿದೇಶಿ ನಿಯೋಗಗಳನ್ನು ಪ್ರೀತಿಯಿಂದ ಸ್ವಾಗತಿಸಿದರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ತಕ್ಷಣದ ಸುಧಾರಣೆಗಳಾಗಬೇಕು ಎಂದು ಅವರು ಇದೇ ವೇಳೆ ಬಲವಾಗಿ ಆಗ್ರಹಿಸಿದರು. ಜಾಗತಿಕ ಅಧಿಕಾರವು ಕೆಲವೇ ದೇಶಗಳ ಕೈಯಲ್ಲಿ ಕೇಂದ್ರೀಕೃತವಾಗಿರುವುದನ್ನು ತಡೆದು, ಪ್ರತಿಯೊಂದು ರಾಷ್ಟ್ರಕ್ಕೂ ಧ್ವನಿ ಎತ್ತುವ ಹಕ್ಕು ಸಿಗುವಂತಹ ವ್ಯವಸ್ಥೆ ನಿರ್ಮಾಣವಾಗಬೇಕು. ಇದಕ್ಕಾಗಿ ಪ್ರಾತಿನಿಧ್ಯ, ಸ್ಪಂದನೆ ಮತ್ತು ನಿಯಮ ರಚನೆ ಎಂಬ 3 ಸಿದ್ಧಾಂತಗಳ ಮೇಲೆ ಗಮನಹರಿಸಬೇಕು ಎಂದು ಮೋದಿ ಹೇಳಿದರು.
- Sushma Chakre
- Updated on: Sep 12, 2026
- 4:16 pm
ಸಿರಿಧಾನ್ಯಗಳಿಂದ ಸಿಹಿ ತಿಂಡಿಗಳವರೆಗೆ; ಬ್ರಿಕ್ಸ್ ಶೃಂಗಸಭೆಯ ಅತಿಥಿಗಳ ಮೆನುವಿನಲ್ಲಿ ಏನಿರಲಿದೆ?
ದೆಹಲಿಯು ಬ್ರಿಕ್ಸ್ ಶೃಂಗಸಭೆಯನ್ನು ಆಯೋಜಿಸುತ್ತಿದೆ. ಪ್ರಪಂಚದಾದ್ಯಂತದ ಹಲವು ರಾಷ್ಟ್ರಗಳ ಮುಖ್ಯಸ್ಥರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅವರನ್ನು "ಅತಿಥಿ ದೇವೋ ಭವ" ಎಂಬ ಭಾರತೀಯ ಸಂಪ್ರದಾಯದ ಪ್ರಕಾರ ಸ್ವಾಗತಿಸಲಾಗುತ್ತದೆ. ದೆಹಲಿಯಲ್ಲಿ ವಿದೇಶಗಳ ಅತಿಥಿಗಳಿಗಾಗಿ ವಿಶೇಷವಾದ ಅಡುಗೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಇದರ ಜೊತೆಗೆ ಭಾರತೀಯ ಸಾಂಪ್ರದಾಯಿಕ ಆಹಾರವನ್ನು ಕೂಡ ಉಣಬಡಿಸಲಾಗುತ್ತದೆ. ದೆಹಲಿಯ ಹಲವಾರು ಪ್ರಮುಖ ಹೋಟೆಲ್ಗಳಲ್ಲಿ ಈ ವಿದೇಶಿ ನಿಯೋಗಗಳಿಗಾಗಿ ವಿಶೇಷ ಸಿದ್ಧತೆಗಳನ್ನು ಮಾಡಲಾಗಿದೆ.
- Sushma Chakre
- Updated on: Sep 11, 2026
- 7:30 pm
ಜಾಗತಿಕವಾಗಿ ವ್ಯಾಪಾರ ಅಡೆತಡೆಗಳು ಹೆಚ್ಚುತ್ತಿರುವ ಹೊತ್ತಲ್ಲಿ ಭಾರತದಿಂದ ಆರ್ಥಿಕ ಬೆಸುಗೆ: ಬ್ರಿಕ್ಸ್ ಬ್ಯುಸಿನೆಸ್ ಫೋರಂನಲ್ಲಿ ಮೋದಿ ಹೇಳಿಕೆ
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 11ರಂದು ಬ್ರಿಕ್ಸ್ ಬ್ಯುಸಿನೆಸ್ ಫೋರಂ ಉದ್ದೇಶಿಸಿ ಮಾತನಾಡಿದರು. ಬ್ರಿಕ್ಸ್ ರಾಷ್ಟ್ರಗಳ ಆರ್ಥಿಕ ಬೆಳವಣಿಗೆಯು ಹೇಗೆ ಜಾಗತಿಕ ಸರಾಸರಿಗಿಂತ ಬಹಳ ಹೆಚ್ಚಿದೆ ಎನ್ನುವುದನ್ನು ತಿಳಿಸಿದರು. ಜಾಗತಿಕ ಪ್ರಕ್ಷುಬ್ದ ಪರಿಸ್ಥಿತಿಯಲ್ಲಿ ಭಾರತ ನಿರ್ವಹಿಸುತ್ತಿರುವ ಪಾತ್ರದ ಮಹತ್ವವನ್ನು ಅವರು ಸಾರಿದರು.
- Vijaya Sarathy SN
- Updated on: Sep 11, 2026
- 7:07 pm
ಬ್ರಿಕ್ಸ್ ಶೃಂಗಸಭೆ ಎಫೆಕ್ಟ್; ದೆಹಲಿಯಲ್ಲಿ ಗಗನಕ್ಕೇರಿದ ಹೋಟೆಲ್ ದರ, ಒಂದು ರಾತ್ರಿಗೆ 2.4 ಲಕ್ಷ ರೂ.!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೆಪ್ಟೆಂಬರ್ 11ರಿಂದ 13ರವರೆಗೆ ನಡೆಯಲಿರುವ ಬ್ರಿಕ್ಸ್ (BRICS) ಶೃಂಗಸಭೆಯ ಸಿದ್ಧತೆ ಭರದಿಂದ ಸಾಗುತ್ತಿದೆ. ಈ ಜಾಗತಿಕ ಕಾರ್ಯಕ್ರಮದ ಪರಿಣಾಮವಾಗಿ ದೆಹಲಿ ಮತ್ತು ಎನ್ಸಿಆರ್ ವಲಯದ ಹೋಟೆಲ್ ಕೊಠಡಿಗಳ ಬಾಡಿಗೆ ದರ ಆಕಾಶಕ್ಕೇರಿದೆ. ವಿದೇಶಿ ನಿಯೋಗಗಳು, ರಾಜತಾಂತ್ರಿಕರು, ಭದ್ರತಾ ಪಡೆಗಳು ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಒಂದೇ ಸಮಯದಲ್ಲಿ ದೆಹಲಿಗೆ ಆಗಮಿಸುತ್ತಿರುವುದರಿಂದ, ಸೆಂಟ್ರಲ್ ದೆಹಲಿಯ ಹೈ-ಎಂಡ್ ಹೋಟೆಲ್ಗಳಲ್ಲಿ ಕೊಠಡಿಗಳ ಬುಕಿಂಗ್ ಸಂಪೂರ್ಣ ಭರ್ತಿಯಾಗಿದೆ.
- Sushma Chakre
- Updated on: Sep 10, 2026
- 8:26 pm
‘ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ’; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಭಾರತದ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಜಗತ್ತಿನಾದ್ಯಂತದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಅಂತಾರಾಷ್ಟ್ರೀಯ ರಾಜಕೀಯ, ಆರ್ಥಿಕತೆ, ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಇಂಧನ ಭದ್ರತೆ, ಆಹಾರ ಭದ್ರತೆ ಮತ್ತು ಇನ್ನೂ ಹೆಚ್ಚಿನ ವಿಷಯಗಳ ಕುರಿತು ನಾಯಕರು ಚರ್ಚೆ ನಡೆಸುವ ನಿರೀಕ್ಷೆಯಿದೆ. ಜಗತ್ತಿನಾದ್ಯಂತ ಬದಲಾಗುತ್ತಿರುವ ರಾಜಕೀಯ ಮತ್ತು ಆರ್ಥಿಕ ಪರಿಸ್ಥಿತಿಗಳ ಸಂದರ್ಭದಲ್ಲಿ ಈ ಸಭೆಯು ಅತ್ಯಂತ ಮಹತ್ವದ್ದಾಗಿದೆ.
- Sushma Chakre
- Updated on: Sep 10, 2026
- 7:38 pm
ಬಯೋಮೆಟ್ರಿಕ್ ಆಧಾರ್ ದೃಢೀಕರಣ ಇಲ್ಲದೆ ಜಿಎಸ್ಟಿ ನೊಂದಣಿಗೆ ಅವಕಾಶ ಇಲ್ಲ: ದೆಹಲಿ ಹೈಕೋರ್ಟ್ ಆದೇಶ
ಬಯೋಮೆಟ್ರಿಕ್ ಆಧಾರಿತವಾದ ಆಧಾರ್ ದೃಢೀಕರಣ ಇಲ್ಲದೇ ಜಿಎಸ್ಟಿ ನೊಂದಣಿಗೆ ಅವಕಾಶ ಕೊಡಬಾರದು ಎಂದು ದೆಹಲಿ ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಧೀಶರಾದ ಅನಿಲ್ ಕ್ಷೇತ್ರಪಾಲ್ ಮತ್ತು ಶೈಲ್ ಜೈನ್ ಅವರಿದ್ದ ದೆಹಲಿ ಹೈಕೋರ್ಟ್ ನ್ಯಾಯಪೀಠ ಈ ತೀರ್ಪು ನೀಡಿದೆ. ಕೋರ್ಟ್ನ ಈ ಆದೇಶವು ದೇಶಾದ್ಯಂತ ಎಲ್ಲಾ ಜಿಎಸ್ಟಿ ಪ್ರಾಧಿಕಾರಗಳಿಗೆ ಅನ್ವಯ ಆಗುತ್ತದೆ.
- Vijaya Sarathy SN
- Updated on: Sep 10, 2026
- 5:52 pm
ಐಆರ್ಸಿಟಿಸಿ ಹಗರಣ; ಲಾಲು ಯಾದವ್ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಲು ದೆಹಲಿ ಕೋರ್ಟ್ ಒಪ್ಪಿಗೆ
ಐಆರ್ಸಿಟಿಸಿ ಹೋಟೆಲ್ಗಳ ಗುತ್ತಿಗೆ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ದೇವಿ, ಮಗ ತೇಜಸ್ವಿ ಪ್ರಸಾದ್ ಯಾದವ್ ಸೇರಿದಂತೆ ಒಟ್ಟು 9 ಆರೋಪಿಗಳ ವಿರುದ್ಧ ಅಧಿಕೃತವಾಗಿ ದೋಷಾರೋಪ ರೂಪಿಸಲು ದೆಹಲಿಯ ರೌಸ್ ಅವೆನ್ಯೂ ವಿಶೇಷ ನ್ಯಾಯಾಲಯ ಆದೇಶಿಸಿದೆ. ದೆಹಲಿ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ತೀರ್ಪು ನೀಡುತ್ತಾ, ಆರೋಪಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲವಾದ ಅನುಮಾನವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
- Sushma Chakre
- Updated on: Sep 10, 2026
- 5:29 pm
ಬ್ರಿಕ್ಸ್ ಶೃಂಗಸಭೆಗೆ ದೆಹಲಿ ಸಜ್ಜು; ಕ್ಸಿ ಜಿನ್ಪಿಂಗ್, ಪುಟಿನ್ಗೆ ಹೇಗಿರಲಿದೆ ಹೋಟೆಲ್ ವ್ಯವಸ್ಥೆ?
ನವದೆಹಲಿಯಲ್ಲಿ ಸೆಪ್ಟೆಂಬರ್ 12ರಿಂದ ಬ್ರಿಕ್ಸ್ ಶೃಂಗಸಭೆ ನಡೆಯಲಿದೆ. ಈ ಶೃಂಗಸಭೆಯಲ್ಲಿ ರಷ್ಯಾ, ಚೀನಾ ಸೇರಿದಂತೆ ಅನೇಕ ರಾಷ್ಟ್ರಗಳ ನಾಯಕರು ಆಗಮಿಸಲಿದ್ದಾರೆ. ಶೃಂಗಸಭೆಗೆ ಇನ್ನೆರಡೇ ದಿನ ಬಾಕಿ ಇರುವುದರಿಂದ ಸಿದ್ಧತೆಗಳು ಕೂಡ ಜೋರಾಗಿಯೇ ನಡೆದಿದೆ. ಬ್ರಿಕ್ಸ್ ಶಂಗಸಭೆಗೂ ಮುನ್ನ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಈ ಶೃಂಗಸಭೆಗಾಗಿ ದೆಹಲಿಯ ಐಷಾರಾಮಿ ಹೋಟೆಲ್ಗಳಲ್ಲಿ ವಿವಿಧ ದೇಶಗಳ ಅಧ್ಯಕ್ಷರು, ಪ್ರಧಾನಿಗಳಿಗಾಗಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಬ್ರಿಕ್ಸ್ ಶೃಂಗಸಭೆಗೆ ಸುಮಾರು 30,000 ಸೆಕ್ಯುರಿಟಿ ಸಿಬ್ಬಂದಿಯನ್ನು ಕೂಡ ನಿಯೋಜಿಸಲಾಗಿದೆ!
- Sushma Chakre
- Updated on: Sep 10, 2026
- 3:23 pm
ಕೆಂಪು ಕೋಟೆ ಸ್ಫೋಟ ಆತ್ಮಾಹುತಿ ಬಾಂಬ್ ದಾಳಿ, ಕಾರಿನಿಂದಲೇ ಐಇಡಿ ಸ್ಫೋಟಿಸಿದ್ದ ಉಮರ್ ನಬಿ; ಎನ್ಐಎ ಚಾರ್ಜ್ಶೀಟ್ನಲ್ಲಿ ಬಹಿರಂಗ
ದೆಹಲಿಯ ಕೆಂಪು ಕೋಟೆ ಸ್ಫೋಟ ಪ್ರಕರಣದ ಚಾರ್ಜ್ಶೀಟ್ನಲ್ಲಿ 13 ಆರೋಪಿಗಳ ಹೆಸರನ್ನು ಒಳಗೊಂಡ ಮಹತ್ವದ ಸಂಗತಿಯನ್ನು ಬಹಿರಂಗಪಡಿಸಿದೆ. ಈ ಸ್ಫೋಟದ ಸೂತ್ರಧಾರ ಡಾ. ಉಮರ್ ನಬಿ ಬಾಂಬ್ ಸ್ಫೋಟಿಸಿಕೊಂಡು ತನ್ನನ್ನು ತಾನು ಸ್ಫೋಟಿಸಿಕೊಂಡಿರುವುದು ದೃಢವಾಗಿದೆ. ಅವರು ಆತ್ಮಾಹುತಿ ಬಾಂಬರ್ ಆಗಿದ್ದರು. ಮೊದಲ ಬಾರಿಗೆ, ಆರೋಪಪಟ್ಟಿಯು ಎಲ್ಲಾ ಉಗ್ರರ ಫೋಟೋಗಳನ್ನು ಬಹಿರಂಗಪಡಿಸಿದೆ. ಇದಲ್ಲದೆ, ಶಾಹೀನ್ ಸಯೀದ್ ಬಳಿ ದೊರೆತ ಪೆನ್ ಡ್ರೈವ್ನಿಂದ 87 ಫೋಟೋಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಭಯೋತ್ಪಾದಕ ಡಾ. ಮುಜಾಮಿಲ್ ಶಕೀಲ್ ಮತ್ತು ಶಾಹೀನ್ ಸಯೀದ್ ಎಕೆ-47, ಪಿಸ್ತೂಲ್ ಮತ್ತು ಮ್ಯಾಗಜೀನ್ ಅನ್ನು ಹೊಂದಿದ್ದರು ಎಂದು ತಿಳಿಸಲಾಗಿದೆ.
- Sushma Chakre
- Updated on: Sep 9, 2026
- 8:31 pm