AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Capitals

Delhi Capitals

Delhi Capitals

IPL 2027: ಗಂಗೂಲಿ, ಯುವರಾಜ್ ಹೆಗಲಿಗೆ ಕೋಚಿಂಗ್ ನೊಗ!

ಐಪಿಎಲ್ 2027ರ ಮೆಗಾ ಸಮರಕ್ಕೆ ದಿನಗಣನೆ ಆರಂಭವಾಗಿರುವಾಗಲೇ ಡೆಲ್ಲಿ ಕ್ಯಾಪಿಟಲ್ಸ್ ಪಾಳಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ಕಳೆದ ಕೆಲವು ಸೀಸನ್‌ಗಳಿಂದ ಪ್ರಶಸ್ತಿ ಮುಖ ನೋಡದ ಡೆಲ್ಲಿ ತಂಡವನ್ನು ಮತ್ತೆ ಗೆಲುವಿನ ಹಳಿಗೆ ತರಲು ಫ್ರಾಂಚೈಸಿ ಮಾಸ್ಟರ್ ಪ್ಲಾನ್ ರೂಪಿಸಿದೆ. ಇದಕ್ಕೆ ಪೂರಕವೆಂಬಂತೆ, ಬೆಂಗಳೂರಿನಲ್ಲಿ ನಡೆದ ಡಿಸಿ ಟ್ರಯಲ್ಸ್​​ನಲ್ಲಿ  ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಸೌರವ್ ಗಂಗೂಲಿ ಮತ್ತು ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ಕಾಣಿಸಿಕೊಂಡಿದ್ದಾರೆ.

IPL 2027: ಮುಂಬೈ ಯುವ ಪ್ರತಿಭೆಗಳೇ ಟಾರ್ಗೆಟ್: ಡೆಲ್ಲಿ ಕ್ಯಾಪಿಟಲ್ಸ್ ಟ್ರಯಲ್ಸ್ ಶುರು!

IPL 2027: ಐಪಿಎಲ್ 2027ರ ಮೆಗಾ ಹರಾಜಿಗೂ ಮುನ್ನವೇ ಡೆಲ್ಲಿ ಕ್ಯಾಪಿಟಲ್ಸ್ (DC) ಫ್ರಾಂಚೈಸಿ ತನ್ನ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ದೇಶಿ ಕ್ರಿಕೆಟ್‌ನ ಯುವ ಪ್ರತಿಭೆಗಳನ್ನು ಗುರುತಿಸಲು ಬೆಂಗಳೂರಿನಲ್ಲಿ ಇಂದಿನಿಂದ (ಆಗಸ್ಟ್ 3) ವಿಶೇಷ ಆಯ್ಕೆ ಪ್ರಕ್ರಿಯೆ ಆರಂಭಿಸಿದೆ. ಮುಂಬೈನ ಉದಯೋನ್ಮುಖ ಬ್ಯಾಟರ್‌ಗಳಾದ ಆಯುಷ್ ವರ್ತಕ್, ಅಯಾಝ್ ಖಾನ್ ಮತ್ತು ದಿವ್ಯಾಂಶ್ ಸಕ್ಸೇನಾ ಈ ಟ್ರಯಲ್ಸ್‌ನಲ್ಲಿ ಭಾಗವಹಿಸುತ್ತಿರುವ ಪ್ರಮುಖ ಆಟಗಾರರಾಗಿದ್ದಾರೆ.

ಲಕ್ನೋ ಫ್ರಾಂಚೈಸಿಗೆ ಮೂರೇ ಪದಗಳಲ್ಲಿ ವಿದಾಯ ಹೇಳಿದ ರಿಷಭ್ ಪಂತ್..!

Rishabh Pant IPL: 2026ರ ಐಪಿಎಲ್ ನಂತರ ರಿಷಭ್ ಪಂತ್ ಲಕ್ನೋ ಸೂಪರ್ ಜೈಂಟ್ಸ್ ತೊರೆದು ಡೆಲ್ಲಿ ಕ್ಯಾಪಿಟಲ್ಸ್ ಸೇರಿದ್ದಾರೆ. ಈ ಟ್ರೇಡ್‌ನಲ್ಲಿ ಕುಲ್ದೀಪ್ ಯಾದವ್ ಲಕ್ನೋಗೆ ತೆರಳಿದ್ದಾರೆ. ಪಂತ್ ವೇತನ 27 ಕೋಟಿಯಿಂದ 15 ಕೋಟಿಗೆ ಇಳಿದಿದೆ. ನಾಯಕತ್ವ ರಾಜೀನಾಮೆಗೆ ಫ್ರಾಂಚೈಸಿಯೇ ಒತ್ತಡ ಹೇರಿತ್ತು ಎಂಬ ಮಾಹಿತಿ ಬಹಿರಂಗಗೊಂಡಿದೆ. ಪಂತ್ ಕೇವಲ ಮೂರು ಪದಗಳಲ್ಲಿ ಲಕ್ನೋ ತಂಡಕ್ಕೆ ಧನ್ಯವಾದ ಹೇಳಿದ್ದಾರೆ.

IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯುವರಾಜ್ ಸಿಂಗ್ ಕೋಚ್?

Delhi Capitals Shake-up: ಐಪಿಎಲ್ 2026 ರಲ್ಲಿ ಪ್ಲೇಆಫ್‌ಗೆ ಅರ್ಹತೆ ಪಡೆಯದ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ಅಕ್ಷರ್ ಪಟೇಲ್ ಬದಲು ಕನ್ನಡಿಗ ಕೆಎಲ್ ರಾಹುಲ್‌ಗೆ ನಾಯಕತ್ವ ನೀಡುವ ಮತ್ತು ರಿಷಭ್ ಪಂತ್ ಅವರನ್ನು ತಂಡಕ್ಕೆ ಮರಳಿ ಕರೆತರುವ ಮಾತುಕತೆಗಳು ನಡೆಯುತ್ತಿವೆ. ಜೊತೆಗೆ, ಭಾರತದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಡೆಲ್ಲಿ ಕ್ಯಾಪಿಟಲ್ಸ್‌ನ ಸಹಾಯಕ ಕೋಚ್ ಆಗಿ ಸೇರಲಿದ್ದಾರೆ ಎಂದು ವರದಿಯಾಗಿದೆ. ಈ ನಡೆಗಳು ತಂಡಕ್ಕೆ ಹೊಸ ಚೈತನ್ಯ ನೀಡುವ ನಿರೀಕ್ಷೆಯಿದೆ.

IPL 2027: ಮರಳಿ ಡೆಲ್ಲಿಗೆ ರಿಷಭ್ ಪಂತ್, ಲಕ್ನೋ ಸೇರಲಿದ್ದಾರೆ ಕುಲ್ದೀಪ್..!

IPL 2027: 2027ರ ಐಪಿಎಲ್ ಮಾರ್ಚ್ 10ರಿಂದ ಆರಂಭವಾಗಲಿದೆ. ಈ ನಡುವೆ ಇಬ್ಬರು ಸ್ಟಾರ್ ಆಟಗಾರರ ತಂಡ ಬದಲಾವಣೆ ಬಗ್ಗೆ ಭಾರಿ ಚರ್ಚೆ ಶುರುವಾಗಿದೆ. ಲಕ್ನೋ ಸೂಪರ್‌ಜೈಂಟ್ಸ್‌ನ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮರಳುವ ಸಾಧ್ಯತೆ ಇದೆ. ಡೆಲ್ಲಿಯ ಕುಲದೀಪ್ ಯಾದವ್ ಲಕ್ನೋ ಸೇರಬಹುದು. ಕನ್ನಡಿಗ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್‌ನ ನಾಯಕರಾಗುವ ವದಂತಿಗಳೂ ಇವೆ.

IPL 2026: ರಿಷಭ್ ಪಂತ್ ಜೊತೆಗೆ ಈ 4 ತಂಡಗಳ ನಾಯಕರಿಗೂ ಗೇಟ್​ಪಾಸ್ ಖಚಿತ

IPL 2026 Captaincy Shake-Up: ಐಪಿಎಲ್ 2026 ಮುಗಿಯುವುದಕ್ಕೂ ಮುನ್ನವೇ ಲಕ್ನೋ ನಾಯಕತ್ವದಿಂದ ರಿಷಭ್ ಪಂತ್ ಅವರನ್ನು ತೆಗೆದುಹಾಕಲಾಗಿದೆ. ತಂಡದ ಕಳಪೆ ಪ್ರದರ್ಶನವೇ ಇದಕ್ಕೆ ಕಾರಣ. ಪಂತ್ ಜೊತೆಗೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಅಜಿಂಕ್ಯ ರಹಾನೆ ಮತ್ತು ರುತುರಾಜ್ ಗಾಯಕ್ವಾಡ್ ಅವರೂ ನಾಯಕತ್ವ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಇವರೆಲ್ಲರ ವೈಯಕ್ತಿಕ ಮತ್ತು ತಂಡದ ಪ್ರದರ್ಶನ ಕಳಪೆಯಾಗಿದ್ದು, ಮುಂಬರುವ ಆವೃತ್ತಿಗೆ ಹೊಸ ನಾಯಕರ ನೇಮಕವಾಗುವ ಸಾಧ್ಯತೆಗಳಿವೆ.

2 ತಂಡಗಳನ್ನು ಗಂಟು ಮೂಟೆ ಕಟ್ಟುವಂತೆ ಮಾಡಿದ 1 ರನ್, 1 ಅಂಕ..!

IPL 2026 Playoffs: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್​ ಸುತ್ತಿಗೆ 4 ತಂಡಗಳು ಎಂಟ್ರಿ ಕೊಟ್ಟಿವೆ. ಈ ನಾಲ್ಕು ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ತಲಾ 18 ಅಂಕಗಳನ್ನು ಪಡೆದಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ ಕೇವಲ 16 ಅಂಕಗಳಿಸಿ ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ.

DC vs KKR: ಔಪಚಾರಿಕ ಪಂದ್ಯದಲ್ಲಿ ಕೆಕೆಆರ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್

IPL 2026: ಐಪಿಎಲ್ 2026 ರ ಅಂತಿಮ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿ ಭರ್ಜರಿ ಗೆಲುವು ಸಾಧಿಸಿತು. ಕೆಎಲ್ ರಾಹುಲ್ ಅವರ ಆಕರ್ಷಕ ಅರ್ಧಶತಕದ (60 ರನ್) ನೆರವಿನಿಂದ ಡೆಲ್ಲಿ 203 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಕೆಕೆಆರ್, ಅಜಿಂಕ್ಯ ರಹಾನೆ (63 ರನ್) ಅವರ ಉತ್ತಮ ಆಟದ ಹೊರತಾಗಿಯೂ ಮಧ್ಯಮ ಕ್ರಮಾಂಕದ ವೈಫಲ್ಯದಿಂದ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಡೆಲ್ಲಿ ಪಾಯಿಂಟ್ಸ್ ಟೇಬಲ್‌ನಲ್ಲಿ 6ನೇ ಸ್ಥಾನಕ್ಕೇರಿತು.

DC vs RR: ರಾಜಸ್ಥಾನ್ ವಿರುದ್ಧ ಕೊನೆಯ ಓವರ್​ನಲ್ಲಿ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್

DC vs RR Match 62: ಐಪಿಎಲ್ 2026ರ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿ 7ನೇ ಸ್ಥಾನಕ್ಕೇರಿದೆ. ರಾಜಸ್ಥಾನ್ ನೀಡಿದ 194 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ, ಆರಂಭಿಕರಾದ ಅಭಿಷೇಕ್, ರಾಹುಲ್ ಮತ್ತು ನಾಯಕ ಅಕ್ಷರ್ ಪಟೇಲ್ ಅವರ ಬ್ಯಾಟಿಂಗ್ ನೆರವಿನಿಂದ ಸುಲಭವಾಗಿ ಗೆದ್ದು, ರಾಜಸ್ಥಾನ್‌ನ ಪ್ಲೇಆಫ್‌ ಹಾದಿಯನ್ನು ಕಠಿಣಗೊಳಿಸಿತು.

IPL 2026: ಅತಿ ಹೆಚ್ಚು ಸಿಕ್ಸರ್ಸ್​.. ಐಪಿಎಲ್‌ನಲ್ಲಿ ಹೊಸ ದಾಖಲೆ ಬರೆದ ವೈಭವ್

Vaibhav Sooryavanshi Shatters IPL Sixes Record: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ವೈಭವ್ ಸೂರ್ಯವಂಶಿ 21 ಎಸೆತಗಳಲ್ಲಿ 46 ರನ್ ಬಾರಿಸಿ ಮಿಂಚಿದ್ದಾರೆ. ಈ ಮೂಲಕ ಅವರು ಐಪಿಎಲ್‌ನಲ್ಲಿ ಒಂದು ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ನಿರ್ಮಿಸಿದ್ದಾರೆ. ಪ್ರಸ್ತುತ 43 ಸಿಕ್ಸರ್‌ಗಳೊಂದಿಗೆ ಅಭಿಷೇಕ್ ಶರ್ಮಾ (42 ಸಿಕ್ಸರ್‌ಗಳು) ಅವರ ದಾಖಲೆಯನ್ನು ಮುರಿದಿದ್ದಾರೆ. ಈ ಹಿಂದೆ ಅಭಿಷೇಕ್ ಶರ್ಮಾ ವಿರಾಟ್ ಕೊಹ್ಲಿ ದಾಖಲೆ ಮುರಿದಿದ್ದರು. ಅಭಿಷೇಕ್ ಈ ಆವೃತ್ತಿಯಲ್ಲಿ ಮತ್ತೆ ವೈಭವ್ ದಾಖಲೆ ಮುರಿಯುವ ಅವಕಾಶ ಹೊಂದಿದ್ದಾರೆ.

PBKS vs DC: ಸತತ 4ನೇ ಪಂದ್ಯ ಸೋತ ಪಂಜಾಬ್; ಡೆಲ್ಲಿ ಪ್ಲೇಆಫ್ ಕನಸು ಜೀವಂತ

IPL 2026:ಐಪಿಎಲ್ 2026 ರ 55ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. 211 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಡೆಲ್ಲಿ, ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಇತ್ತ ಪಂಜಾಬ್ ಕಿಂಗ್ಸ್ ಸತತ ನಾಲ್ಕನೇ ಸೋಲಿಗೆ ಶರಣಾಗಿದ್ದು, ತಂಡದ ಭವಿಷ್ಯ ಕಠಿಣವಾಗಿದೆ. ಅಕ್ಷರ್ ಪಟೇಲ್, ಶ್ರೇಯಸ್ ಹಾಗೂ ಮಿಲ್ಲರ್ ಅವರ ಜವಾಬ್ದಾರಿಯುತ ಆಟ ಈ ಗೆಲುವಿಗೆ ಕಾರಣವಾಯಿತು.

2026 ರ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ನಾಯಕ ಶ್ರೇಯಸ್ ಅಯ್ಯರ್

Shreyas Iyer's IPL 2026 Heroics: ಐಪಿಎಲ್ 2026ರ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಅರ್ಧಶತಕ ಬಾರಿಸಿದರು. ಅವರ 59 ರನ್‌ಗಳ ಅಜೇಯ ಇನ್ನಿಂಗ್ಸ್ ನೆರವಿನಿಂದ ಪಂಜಾಬ್ 211 ರನ್ ಗಳಿಸಿತು. ಅಯ್ಯರ್ ಈ ಆವೃತ್ತಿಯ 5ನೇ ಅರ್ಧಶತಕ ಬಾರಿಸಿ, ಐಪಿಎಲ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ ಅವರ ಪ್ರಮುಖ ದಾಖಲೆಯನ್ನು ಸರಿಗಟ್ಟಿದರು. ಈ ಮೂಲಕ ಅವರು ಈ ಆವೃತ್ತಿಯ ಅತಿ ಹೆಚ್ಚು ಅರ್ಧಶತಕ ಗಳಿಸಿದ ನಾಯಕರಾದರು.

ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ