AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi

Delhi

ಭಾರತದ ರಾಜಧಾನಿಯಾದ ದೆಹಲಿಯು ಇತಿಹಾಸ, ಸಂಸ್ಕೃತಿ ಮತ್ತು ಆಧುನಿಕತೆಯಿಂದ ಕೂಡಿದ ನಗರವಾಗಿದೆ. ಐತಿಹಾಸಿಕ ಕೆಂಪು ಕೋಟೆ, ಕುತುಬ್ ಮಿನಾರ್ ಮತ್ತು ಇಂಡಿಯಾ ಗೇಟ್‌ನಂತಹ ಪುರಾತನ ಸ್ಮಾರಕಗಳ ಶ್ರೀಮಂತ ವಸ್ತ್ರದೊಂದಿಗೆ ದೆಹಲಿಯು ತನ್ನ ಶತಮಾನಗಳ-ಹಳೆಯ ಪರಂಪರೆಗೆ ಸಾಕ್ಷಿಯಾಗಿದೆ. ಚಾಂದಿನಿ ಚೌಕ್‌ನಂತಹ ನಗರದ ರೋಮಾಂಚಕ ಮಾರುಕಟ್ಟೆಗಳು ವೈವಿಧ್ಯಮಯ ಬೀದಿ ಆಹಾರ, ಜವಳಿ ಮತ್ತು ಸಾಂಪ್ರದಾಯಿಕ ಕರಕುಶಲ ವಸ್ತುಗಳೊಂದಿಗೆ ಸಂವೇದನಾ ಮಿತಿಮೀರಿದ ಹೊರೆಯನ್ನು ನೀಡುತ್ತವೆ.
ರಾಜಕೀಯ ಮತ್ತು ಆರ್ಥಿಕ ಕೇಂದ್ರವಾಗಿ, ದೆಹಲಿಯು ಭಾರತೀಯ ಸರ್ಕಾರದ ಸ್ಥಾನವನ್ನು ಮತ್ತು ಹಲವಾರು ಅಂತರರಾಷ್ಟ್ರೀಯ ರಾಯಭಾರ ಕಚೇರಿಗಳನ್ನು ಹೊಂದಿದೆ. ಇದರ ವಿಸ್ತಾರವಾದ ಮಹಾನಗರವು ಹಳೆಯ ಮತ್ತು ನವದೆಹಲಿ ಎರಡನ್ನೂ ಒಳಗೊಳ್ಳುತ್ತದೆ. ದೆಹಲಿ ಮೆಟ್ರೊ ಐತಿಹಾಸಿಕ ಹೆಗ್ಗುರುತುಗಳನ್ನು ಸಮಕಾಲೀನ ನೆರೆಹೊರೆಗಳೊಂದಿಗೆ ಸಂಪರ್ಕಿಸುತ್ತದೆ.
ವಾಯು ಮಾಲಿನ್ಯದಂತಹ ಸವಾಲುಗಳನ್ನು ಎದುರಿಸುತ್ತಿರುವ ಹೊರತಾಗಿಯೂ, ದೆಹಲಿಯು ಹೊಸತನ ಮತ್ತು ಜಾಗತಿಕ ಪ್ರಭಾವಗಳನ್ನು ಅಳವಡಿಸಿಕೊಂಡು ಕ್ರಿಯಾತ್ಮಕ ನಗರವಾಗಿ ವಿಕಸನಗೊಳ್ಳುತ್ತಲೇ ಇದೆ.

ಇನ್ನೂ ಹೆಚ್ಚು ಓದಿ

ಶಿಕ್ಷಣ ಸಚಿವರ ರಾಜೀನಾಮೆ, ಮತ ವಂಚನೆ ಬಗ್ಗೆ ಸುಪ್ರೀಂ ಕೋರ್ಟ್​ಗೆ ಪತ್ರ; ಇಂಡಿಯ ಸಭೆಯ 5 ನಿರ್ಧಾರಗಳಿವು

ಇಂದು ದೆಹಲಿಯಲ್ಲಿ ಇಂಡಿಯ ಒಕ್ಕೂಟದ ಸಭೆ ನಡೆದಿದೆ. ಇಂಡಿಯ ಮೈತ್ರಿಕೂಟದ ಕೆಲವು ಪಾಲುದಾರರ ನಡುವಿನ ಭಿನ್ನಾಭಿಪ್ರಾಯದ ನಡುವೆಯೇ ಸಭೆ ನಡೆದಿದೆ. ತಮಿಳುನಾಡಿನಲ್ಲಿ ಕಾಂಗ್ರೆಸ್ ದ್ರೋಹ ಎಸಗಿದೆ ಎಂದು ಆರೋಪಿಸಿರುವ ಡಿಎಂಕೆ ಈ ಸಭೆಯಿಂದ ಹಿಂದೆ ಸರಿಯಲು ನಿರ್ಧರಿಸಿತ್ತು. ಇಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಅಭಿಷೇಕ್ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ರಾಷ್ಟ್ರೀಯ ಜನತಾ ಪಕ್ಷದ ಮುಖ್ಯಸ್ಥ ತೇಜಸ್ವಿ ಯಾದವ್, ಶಿವಸೇನೆ (ಯುಪಿಡಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಹಲವಾರು ಎಡ ಮತ್ತು ಸಣ್ಣ ಪಕ್ಷಗಳ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದರು. ಈ ಸಭೆಯ ಮುಖ್ಯಾಂಶಗಳು ಇಲ್ಲಿವೆ.

ದಿಲ್ಲಿಯಲ್ಲಿ ಜೂನ್ 8ರಂದು ಜನಬಂಧನ್ ಸಭೆ; 23 ವಿಪಕ್ಷಗಳು ಭಾಗಿ; ಡಿಎಂಕೆ ಔಟ್, ಟಿವಿಕೆ ಇನ್

23 oppostion parties to participate in Janbandhan meeting at Delhi: ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಮೈತ್ರಿಕೂಟ 'ಇಂಡಿಯಾ' (I.N.D.I.A. bloc) ವತಿಯಿಂದ ಜೂನ್ 8ರಂದು ಜನಬಂಧನ್ ಸಭೆ ಆಯೋಜಿಸಲಾಗಿದೆ. ಇದರಲ್ಲಿ 23 ಪಕ್ಷಗಳು ಭಾಗಿಯಾಗಲಿವೆ. ಇಂಡಿಯಾದ ಪ್ರಮುಖ ಭಾಗವಾಗಿದ್ದ ಡಿಎಂಕೆ ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದಿರುವ ಟಿವಿಕೆ ಭಾಗವಹಿಸಲಿದೆ.

ಬಲಿಷ್ಠ ಭಾರತದೊಂದಿಗೆ ಉತ್ತಮ ಸ್ನೇಹ ಸಂಬಂಧ ಬಯಸುತ್ತೇವೆ: ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್

India-Nepal Economic Partnership: ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್ ಭಾರತದೊಂದಿಗೆ ದೃಢ ಆರ್ಥಿಕ ಸಂಬಂಧ ಬಯಸಿದ್ದಾರೆ. ಭಾರತವನ್ನು ತಾಂತ್ರಿಕ ಹಾಗೂ ಆರ್ಥಿಕ ಶಕ್ತಿಯಾಗಿ ಗುರುತಿಸಿ, ನೇಪಾಳದ ಆರ್ಥಿಕ ಪ್ರಗತಿಗಾಗಿ ಸಹಭಾಗಿತ್ವಕ್ಕೆ ಆಹ್ವಾನಿಸಿದ್ದಾರೆ. UPI ತಂತ್ರಜ್ಞಾನ ಬಳಸಿ ಉದ್ಯೋಗ ಸೃಷ್ಟಿ ಮಾಡುವ ಗುರಿ ಹೊಂದಿದ್ದಾರೆ. ಗಡಿ ವಿವಾದಗಳನ್ನು ಮುಕ್ತ ಚರ್ಚೆಯಿಂದ ಬಗೆಹರಿಸಿಕೊಳ್ಳಲು ನೇಪಾಳ ಸಿದ್ಧವಿದೆ ಎಂದು ಅವರು ಸ್ಪಷ್ಟಪಡಿಸಿದರು.

ದೆಹಲಿ ಹೋಟೆಲ್ ದುರಂತ; ಅಕ್ರಮ ಬಾಂಗ್ಲಾದೇಶಿಗರಿಗೆ ನಕಲಿ ಭಾರತೀಯ ದಾಖಲೆ ನೀಡುತ್ತಿದ್ದ ಮಾಲೀಕ!

ದೆಹಲಿಯ ಮಾಳವೀಯ ನಗರದಲ್ಲಿ ಇತ್ತೀಚೆಗೆ ನಡೆದ ಭೀಕರ ಅಗ್ನಿ ದುರಂತದಲ್ಲಿ 21 ಜನ ಸಾವನ್ನಪ್ಪಿದ್ದರು. ಈ ಹೋಟೆಲ್ ಮಾಲೀಕ ಲವ್ಕೇಶ್ ಬಜಾಜ್‌ನ ಹಳೆಯ ಅಪರಾಧದ ವಿವರಗಳು ಹೊರಬಂದಿವೆ. ಬಾಂಗ್ಲಾದೇಶಿ ಪ್ರಜೆಗಳಿಗೆ ನಕಲಿ ಭಾರತೀಯ ದಾಖಲೆಗಳನ್ನು ಒದಗಿಸಿದ ಆರೋಪದ ಮೇಲೆ ಆತನನ್ನು ಕಳೆದ ವರ್ಷವೇ ಬಂಧಿಸಲಾಗಿತ್ತು. ಬಾಂಗ್ಲಾದೇಶಿ ಪ್ರಜೆಗಳಿಗೆ ನಕಲಿ ಭಾರತೀಯ ಪಾಸ್‌ಪೋರ್ಟ್ ಹಾಗೂ ಇತರ ಗುರುತಿನ ಚೀಟಿಗಳನ್ನು ಒದಗಿಸಿ, ಅವರು ಭಾರತದಲ್ಲಿ ಅಕ್ರಮವಾಗಿ ನೆಲೆಸಲು ಸಹಾಯ ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಈತನನ್ನು 2025ರಲ್ಲೇ ಬಂಧಿಸಿದ್ದರು.

ದೆಹಲಿ ಬೆಂಕಿ ದುರಂತ; ಹೋಟೆಲ್ ಮಾಲೀಕ ಬಂಧನ, ನ್ಯಾಯಾಂಗ ತನಿಖೆಗೆ ಆದೇಶ

ದಕ್ಷಿಣ ದೆಹಲಿಯ ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದಲ್ಲಿ ನಡೆದ ಭೀಕರ ಅಗ್ನಿ ಅವಘಡದ ತನಿಖೆಯನ್ನು ಚುರುಕುಗೊಳಿಸಿರುವ ದೆಹಲಿ ಪೊಲೀಸರು, ತಲೆಮರೆಸಿಕೊಂಡಿದ್ದ ಹೋಟೆಲ್ ಮಾಲೀಕ ಲವಕೇಶ್ ಬಜಾಜ್ ಎಂಬುವವರನ್ನು ಬಂಧಿಸಿದ್ದಾರೆ. ಈ ದುರಂತದಲ್ಲಿ 18 ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 21 ಜನರು ಜೀವಂತವಾಗಿ ದಹನವಾಗಿದ್ದರು. ಈ ಪ್ರಕರಣದ ನ್ಯಾಯಾಂಗ ತನಿಖೆಗೂ ಲೆಫ್ಟಿನೆಂಟ್ ಗವರ್ನರ್ ಆದೇಶಿಸಿದ್ದಾರೆ.

ದೆಹಲಿಯ ಬೆಂಕಿ ದುರಂತದಲ್ಲಿ ಬಾಂಗ್ಲಾ, ಅಫ್ಘಾನ್, ಆಫ್ರಿಕಾದ ಪ್ರವಾಸಿಗರೂ ಸಾವು; ಹೋಟೆಲ್ ಮಾಲೀಕ ಪರಾರಿ

ಇಂದು ಬೆಳಿಗ್ಗೆ ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದ 21 ಜನರಲ್ಲಿ ಕನಿಷ್ಠ 18 ಮಂದಿ ವಿದೇಶಿ ಪ್ರಜೆಗಳಾಗಿದ್ದಾರೆ. ಮೂಲಗಳ ಪ್ರಕಾರ, ಮೃತಪಟ್ಟವರನ್ನು ನೈಜೀರಿಯಾ, ಆಫ್ರಿಕಾ, ಮೊಜಾಂಬಿಕ್, ಬಾಂಗ್ಲಾದೇಶ, ಸೊಮಾಲಿಯಾ, ಲೈಬೀರಿಯಾ ಮತ್ತು ಅಫ್ಘಾನಿಸ್ತಾನದ ಪ್ರಜೆಗಳು ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದಲ್ಲಿರುವ ಐದು ಅಂತಸ್ತಿನ ಹೋಟೆಲ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ನಂದಿಸುವಾಗ ಮತ್ತು ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಸುಮಾರು 10 ಪೊಲೀಸ್ ಸಿಬ್ಬಂದಿ ಕೂಡ ಗಾಯಗೊಂಡಿದ್ದಾರೆ.

ದೆಹಲಿ, ಮುಂಬೈ ಸೇರಿ ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ 9 ಮಂದಿ ಶಂಕಿತ ಉಗ್ರರ ಬಂಧನ

ದೆಹಲಿ ಮತ್ತು ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಾಳಿಗೆ ಸಂಚು ರೂಪಿಸಿದ್ದ ಐಸಿಸ್​​ ಸಂಪರ್ಕಿತ 9 ಮಂದಿ ಶಂಕಿತ ಉಗ್ರರನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಬಂಧಿಸಿದೆ. ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದ್ದು, ದೇಶದ ಎಲ್ಲೆಲ್ಲಿ ಇವರ ಜಾಲ ಇದೆ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಬಂಧಿತರ ಪೈಕಿ ಕೆಲ ವಿದೇಶಿ ಪ್ರಜೆಗಳೂ ಇದ್ದಾರೆ ಎನ್ನಲಾಗಿದ್ದು, ಅವರ ಗುರುತು ಹಾಗೂ ರಾಷ್ಟ್ರೀಯತೆಯನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.

ದೆಹಲಿಯಲ್ಲಿ ನಕಲಿ ಕೆವೈಸಿ ಮೂಲಕ ಚಹಾ ವ್ಯಾಪಾರಿಗೆ 90,000 ರೂ. ವಂಚನೆ; ಮೂವರ ಬಂಧನ

ದೆಹಲಿಯಲ್ಲಿ ಚಹಾ ವ್ಯಾಪಾರಿಯೊಬ್ಬರಿಗೆ ಕೆವೈಸಿ (KYC) ಅಪ್‌ಡೇಟ್ ಮಾಡುವ ನೆಪದಲ್ಲಿ 90,000 ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ದೊಡ್ಡ ಮಟ್ಟದ ಅಂತರರಾಜ್ಯ ಸೈಬರ್ ಜಾಲವನ್ನು ಪತ್ತೆಹಚ್ಚಿದ್ದಾರೆ. ವಂಚಕನೊಬ್ಬ ತಾನು ಪ್ರಮುಖ ಡಿಜಿಟಲ್ ಪೇಮೆಂಟ್ ಕಂಪನಿಯೊಂದರ ಉದ್ಯೋಗಿ ಎಂದು ಪರಿಚಯಿಸಿಕೊಂಡು ಚಹಾ ಅಂಗಡಿಗೆ ಬಂದಿದ್ದನು. ವ್ಯಾಪಾರಿಯ ಮೊಬೈಲ್‌ನಲ್ಲಿ ಪೇಮೆಂಟ್ ಆಪ್‌ನ ಸೆಟ್ಟಿಂಗ್ಸ್ ಸರಿಪಡಿಸಿಕೊಡುವ ಮತ್ತು ಕೆವೈಸಿ (KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ನೆಪದಲ್ಲಿ ಆತನ ವಿಶ್ವಾಸ ಗಳಿಸಿದ್ದ.

ಬಲವಂತವಾಗಿ ದೆಹಲಿ ಜಿಮ್ಖಾನಾ ಕ್ಲಬ್​ ಖಾಲಿ ಮಾಡಿಸುವುದಿಲ್ಲ; ಕೋರ್ಟ್​ಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ದೆಹಲಿಯ ಜಿಮ್ಖಾನಾ ಕ್ಲಬ್‌ಗೆ (Delhi Gymkhana Club) ಸದ್ಯಕ್ಕೆ ತಾತ್ಕಾಲಿಕ ಪರಿಹಾರ ಸಿಕ್ಕಿದ್ದು, ಕ್ಲಬ್‌ನ ಜಾಗವನ್ನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ. ಈ ವಿಷಯದಲ್ಲಿ ಸೂಕ್ತ ಕಾನೂನು ಪ್ರಕ್ರಿಯೆಯನ್ನು ಅನುಸರಿಸಲಾಗುವುದು ಎಂದು ಕೇಂದ್ರ ಸರ್ಕಾರ ಇಂದು ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ಕಳೆದ ವಾರವಷ್ಟೇ ಕೇಂದ್ರ ಸರ್ಕಾರವು ಈ ಪ್ರತಿಷ್ಠಿತ ಕ್ಲಬ್‌ಗೆ ಜಾಗ ಖಾಲಿ ಮಾಡುವಂತೆ ನೋಟಿಸ್ ಜಾರಿ ಮಾಡಿತ್ತು. ಲುಟ್ಯೆನ್ಸ್ ದೆಹಲಿಯ ಹೃದಯಭಾಗದಲ್ಲಿರುವ 27 ಎಕರೆ ವಿಸ್ತೀರ್ಣದ ಅತ್ಯಮೂಲ್ಯ ಆಸ್ತಿಯನ್ನು ತನ್ನ ಸುಪರ್ದಿಗೆ ಪಡೆಯಲು ಮುಂದಾಗಿತ್ತು.

ದಿಲ್ಲಿ ಜಿಮ್ಖಾನಾ ಕ್ಲಬ್​ಗೆ ಬೀಗ? ಹೃದಯಭಾಗದಲ್ಲಿ 27 ಎಕರೆಯಲ್ಲಿರವ ಈ ಕ್ಲಬ್ ಸುತ್ತಮುತ್ತಲ ವಿವಾದಗಳೇನು?

Delhi Gymkhana Club controveries: ದೆಹಲಿಯ ಪ್ರತಿಷ್ಠಿತ ಮತ್ತು ಅತ್ಯಂತ ಗಣ್ಯ ವ್ಯಕ್ತಿಗಳ ತಾಣವಾದ 'ದೆಹಲಿ ಜಿಮ್ಖಾನಾ ಕ್ಲಬ್' ಸದ್ಯ ತೀವ್ರ ವಿವಾದಕ್ಕೆ ಸಿಲುಕಿದ್ದು, ಸಂಪೂರ್ಣವಾಗಿ ಮುಚ್ಚಿಹೋಗುವ ಭೀತಿಯಲ್ಲಿದೆ. ಬ್ರಿಟಿಷರ ಕಾಲದ ಈ ಐತಿಹಾಸಿಕ ಕ್ಲಬ್‌ಗೆ ಕೇಂದ್ರ ಸರ್ಕಾರವು ಜೂನ್ 5ರೊಳಗೆ ತನ್ನ ಸಂಪೂರ್ಣ 27.3 ಎಕರೆ ಆವರಣವನ್ನು ಖಾಲಿ ಮಾಡಿ ಸರ್ಕಾರದ ವಶಕ್ಕೆ ನೀಡುವಂತೆ ಆದೇಶ ಜಾರಿ ಮಾಡಿದೆ. ಇದರ ಬೆನ್ನಲ್ಲೇ ಕ್ಲಬ್‌ನ ಸದಸ್ಯರು ಜಂಟಿಯಾಗಿ ಈ ಆದೇಶವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ವಿವಾದ ಈಗ ಕಾನೂನು ಸಮರಕ್ಕೆ ತಿರುಗಿದೆ.

ಅಗ್ಗದ ಇಂಧನ ಮತ್ತು ಸ್ಥಿರ ಪೂರೈಕೆ ಇವತ್ತು ಜಗತ್ತಿಗೆ ಅವಶ್ಯಕ: ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜೈಶಂಕರ್, ರುಬಿಯೋ ಹೇಳಿಕೆ

India-US Strengthen Energy Security: ಭಾರತ-ಅಮೆರಿಕ ಇಂಧನ ಸಹಕಾರವು ಜಾಗತಿಕ ಸವಾಲುಗಳ ಮಧ್ಯೆ ಬಲಗೊಂಡಿದೆ. ಭಾರತದ 140 ಕೋಟಿ ಜನರಿಗೆ ಕೈಗೆಟುಕುವ ಮತ್ತು ಸ್ಥಿರ ಇಂಧನ ಪೂರೈಕೆಯೇ ನಮ್ಮ ಆದ್ಯತೆ ಎಂದು ವಿದೇಶಾಂಗ ಸಚಿವ ಜೈಶಂಕರ್ ತಿಳಿಸಿದರು. ಇಂಧನ ವ್ಯಾಪಾರ ಗಮನಾರ್ಹವಾಗಿ ಹೆಚ್ಚಿದ್ದು, ಪಶ್ಚಿಮ ಏಷ್ಯಾ ಪ್ರಕ್ಷುಬ್ಧತೆಯ ನಡುವೆ ಅಮೆರಿಕದ ಸಹಕಾರ ಭಾರತದ ಇಂಧನ ಭದ್ರತೆಗೆ ಅತ್ಯಗತ್ಯವಾಗಿದೆ.

ದೇಶದ ಅರ್ಧದಷ್ಟು ಜಿಡಿಪಿಗೆ ಹೊಟ್ಟೆ ತುಂಬಿಸುತ್ತಿರೋದು ಕರ್ನಾಟಕ ಸೇರಿ 5 ರಾಜ್ಯಗಳು ಮಾತ್ರ; ಇಲ್ಲಿವೆ ವರದಿಯ ಅಂಶಗಳು

India's Economic Divide: ಭಾರತವು ವಿಶ್ವದ ಅತಿ ವೇಗದ ಆರ್ಥಿಕತೆಗಳಲ್ಲಿ ಒಂದಾಗಿದ್ದರೂ, ರಾಜ್ಯಗಳ ನಡುವೆ ತೀವ್ರ ಅಸಮಾನತೆಗಳಿವೆ. ದೇಶದ ಒಟ್ಟು ಜಿಡಿಪಿಯ ಶೇ. 48ರಷ್ಟು ಪಾಲು ಕೇವಲ ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ 5 ರಾಜ್ಯಗಳಿಂದ ಬರುತ್ತದೆ. ವಿದೇಶಿ ಹೂಡಿಕೆಯಲ್ಲೂ ಇದೇ ಪ್ರವೃತ್ತಿ. ಉತ್ತರ ಪ್ರದೇಶದ ಬೆಳವಣಿಗೆ ಸಕಾರಾತ್ಮಕವಾಗಿದ್ದು, ಆದರೆ ಆದಾಯ, ಉದ್ಯೋಗ ಸೃಷ್ಟಿಯಲ್ಲಿ ಇತರ ರಾಜ್ಯಗಳು ಹಿಂದುಳಿದಿವೆ. ಸಮಗ್ರ ಅಭಿವೃದ್ಧಿಗೆ ಎಲ್ಲ ರಾಜ್ಯಗಳ ಆರ್ಥಿಕ ಬೆಳವಣಿಗೆ ಅನಿವಾರ್ಯ.

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!