Diabetes

Diabetes

ದೇಹದ ಮೇದೋಜೀರಕ ಗ್ರಂಥಿ ಅಗತ್ಯವಿದ್ದಷ್ಟು ಪ್ರಮಾಣದ ಇನ್ಸುಲಿನ್ ಅನ್ನು ಉತ್ಪಾದಿಸಲು ಅಸಾಧ್ಯವಾದಾಗ, ಇನ್ಸುಲಿನ್ ಕೊರತೆ ಉಂಟಾಗುತ್ತದೆ. ಇದರಿಂದಾಗಿ ರಕ್ತದಲ್ಲಿನ ಗ್ಲೂಕೋಸ್ ಪ್ರಮಾಣವು ಹೆಚ್ಚಾಗಲು ಪ್ರಾರಂಭಿಸುತ್ತದೆ. ಇದನ್ನು ಮಧುಮೇಹ ಎಂದು ಕರೆಯಲಾಗುತ್ತದೆ. ಮಧುಮೇಹ ಎಂಬುದು ಸಂಸ್ಕೃತದ ಮಧು ಅಂದರೆ ಸಿಹಿ ಮೇಹನ ಎಂದರೆ ಮೂತ್ರ, ಈ ಎರಡು ಪದಗಳ ಮೂಲಕ ಬಂದಿದೆ. ಇತ್ತೀಚೆಗೆ ಡಯಾಬಿಟಿಸ್‌ ಸರ್ವೇ ಸಾಮಾನ್ಯ ಕಾಯಿಲೆ. ಮೊದಲು ಸಕ್ಕರೆ ಕಾಯಿಲೆ ಎಂಬುದು ಶ್ರೀಮಂತರಿಗೆ ಮಾತ್ರ ಎನ್ನುವಂತಾಗಿತ್ತು. ಆದರೆ ಇದೀಗಾ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಆವರಿಸಿಬಿಟ್ಟಿದೆ. ಮಧುಮೇಹ ಪ್ರಾರಂಭವಾಗಿರುವ ಲಕ್ಷಣಗಳು ತೋರತೊಡಗಿದರೆ ತಕ್ಷಣವೇ ಗುರುತಿಸಿ ತಜ್ಞರ ಸಲಹೆ ಪಡೆಯುವುದು ಅಗತ್ಯ.

ಇನ್ನೂ ಹೆಚ್ಚು ಓದಿ

Diabetes : ಕುಳ್ಳಗಿರುವವರು ಮಧುಮೇಹದಿಂದ ಬಳಲುವ ಸಾಧ್ಯತೆ ಹೆಚ್ಚು: ಸಂಶೋಧನೆ

ಕಡಿಮೆ ಎತ್ತರ ಅಂದರೆ ಕುಳ್ಳಗೆ ಇರುವ ಜನರಲ್ಲಿ, ಯಕೃತ್ತು ಹೆಚ್ಚು ಕೊಬ್ಬನ್ನು ಸಂಗ್ರಹಿಸುತ್ತದೆ. ಇದರಿಂದ ಹೃದ್ರೋಗ, ಅಧಿಕ ರಕ್ತದೊತ್ತಡ, ಕೊಲೆಸ್ಟ್ರಾಲ್, ದೇಹದಲ್ಲಿ ಊತ ಮತ್ತು ಚಯಾಪಚಯ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇವೆಲ್ಲವೂ ಮಧುಮೇಹಕ್ಕೆ ಸಂಬಂಧಿಸಿದೆ ಎನ್ನುತ್ತಾರೆ ಆರೋಗ್ಯ ತಜ್ಞರು.

Diabetes: ಡಯಾಬಿಟಿಸ್ ಇದ್ದರೆ ಖಾಲಿ ಹೊಟ್ಟೆಯಲ್ಲಿ ನೀವು ಸೇವಿಸಬಾರದ ಕೆಟ್ಟ ಆಹಾರಗಳಿವು

ಬೆಳಗ್ಗೆ ನಾವು ಯಾವ ಆಹಾರ ಸೇವಿಸುತ್ತೇವೆ ಎಂಬುದು ನಮ್ಮ ಆರೋಗ್ಯದ ಮೇಲೆ ಬಹಳ ದೊಡ್ಡ ಪರಿಣಾಮ ಬೀರುತ್ತದೆ. ಹೆಚ್ಚಿನ ಜನರು ಡಯೆಟ್​ಗಾಗಿ ಬೆಳಗಿನ ಉಪಾಹಾರಕ್ಕೆ ಬ್ರೆಡ್ ಅಥವಾ ಟೋಸ್ಟ್ ಮತ್ತು ಹಣ್ಣುಗಳು ಅಥವಾ ಹಣ್ಣಿನ ಜ್ಯೂಸ್ ಸೇವಿಸುತ್ತಾರೆ. ಆದರೆ ಸ್ವಲ್ಪವಾದರೂ ಆರೋಗ್ಯದ ಬಗ್ಗೆ ಕಾಳಜಿ ಇದ್ದರೆ, ತಜ್ಞರ ಪ್ರಕಾರ ಹಣ್ಣುಗಳು ನಮ್ಮ ದಿನವನ್ನು ಪ್ರಾರಂಭಿಸಲು 3 ಕೆಟ್ಟ ಆಹಾರಗಳಲ್ಲಿ ಒಂದಾಗಿದೆ ಎಂದು ನೀವು ತಿಳಿದಿರಬೇಕು.

Diabetes: ಡಯಾಬಿಟಿಸ್ ಅಪಾಯ ಕಡಿಮೆ ಮಾಡಲು ಮೊಸರನ್ನು ಈ ರೀತಿ ಸೇವಿಸಿ

ಮೊಸರು ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ಉಪಯೋಗಿಸುವ ಪದಾರ್ಥ. ಮೊಸರು ನಮ್ಮ ಜೀರ್ಣಕ್ರಿಯೆ, ದೇಹದ ಉರಿಯೂತ ಕಡಿಮೆ ಮಾಡುವ ಸಾಮರ್ಥ್ಯ ಸೇರಿದಂತೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾದ ಪದಾರ್ಥವಾಗಿದೆ. ಮೊಸರು ಹೆಚ್ಚಿನ ಪೌಷ್ಟಿಕಾಂಶದ ಮೌಲ್ಯದ ಉತ್ಪನ್ನವಾಗಿದೆ. ಇದು ಪ್ರೋಟೀನ್‌ಗಳು, ವಿಟಮಿನ್‌ಗಳು ಮತ್ತು ಖನಿಜಗಳು ಮತ್ತು ಪ್ರಯೋಜನಕಾರಿ ಸೂಕ್ಷ್ಮಜೀವಿಗಳಂತಹ ಪೋಷಕಾಂಶಗಳ ಸಮೃದ್ಧ ಮೂಲವಾಗಿದೆ.

Diabetes: ಪುರುಷರ ಕಾಲು, ಪಾದಗಳಲ್ಲಿ ಕಾಣಿಸಿಕೊಳ್ಳುವ ಡಯಾಬಿಟಿಸ್​ನ ಲಕ್ಷಣಗಳಿವು

ಮಧುಮೇಹವು ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ಮಧುಮೇಹದಲ್ಲಿ ಹಲವಾರು ರೂಪಗಳಿವೆ. ಟೈಪ್ 2 ಮಧುಮೇಹ ಅತ್ಯಂತ ಸಾಮಾನ್ಯವಾಗಿದೆ. ಮಧುಮೇಹವು ನಿಮ್ಮ ರಕ್ತದಲ್ಲಿನ ಸಕ್ಕರೆ (ಗ್ಲೂಕೋಸ್) ಮಟ್ಟ ತುಂಬಾ ಹೆಚ್ಚಾದಾಗ ಸಂಭವಿಸುವ ಸಮಸ್ಯೆಯಾಗಿದೆ. ನಿಮ್ಮ ಮೇದೋಜ್ಜೀರಕ ಗ್ರಂಥಿಯು ಸಾಕಷ್ಟು ಇನ್ಸುಲಿನ್ ಅನ್ನು ಉತ್ಪಾದಿಸದಿದ್ದಾಗ ಅಥವಾ ಇನ್ಸುಲಿನ್‌ನ ಪರಿಣಾಮಗಳಿಗೆ ನಿಮ್ಮ ದೇಹವು ಸರಿಯಾಗಿ ಪ್ರತಿಕ್ರಿಯಿಸದಿದ್ದಾಗ ಮಧುಮೇಹ ಉಂಟಾಗುತ್ತದೆ.

ಕಡಿಮೆ ನಿದ್ರೆ ಮಾಡುವುದರಿಂದ ಟೈಪ್ 2 ಡಯಾಬಿಟಿಸ್ ಅಪಾಯ ಹೆಚ್ಚಾಗುತ್ತಾ?

ನಿದ್ರೆ ನಮ್ಮ ದೇಹಕ್ಕೆ ಎಷ್ಟು ಅತ್ಯಗತ್ಯ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಸರಿಯಾಗಿ ನಿದ್ರೆ ಮಾಡದಿದ್ದರೆ ಅದು ನಮ್ಮ ದೇಹದ ಎಲ್ಲ ಅಂಗಗಳ ಕೆಲಸದ ಮೇಲೂ ಪರಿಣಾಮ ಬೀರುತ್ತದೆ. ಇದಕ್ಕೆ ಮಧುಮೇಹ ಕೂಡ ಹೊರತಾಗಿಲ್ಲ. ನಮ್ಮ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಮೇದೋಜ್ಜೀರಕ ಗ್ರಂಥಿಯಿಂದ ಬಿಡುಗಡೆ ಮಾಡುವ 'ಇನ್ಸುಲಿನ್' ಎಂಬ ಹಾರ್ಮೋನ್ ನಿಯಂತ್ರಿಸುತ್ತದೆ. ಮಧುಮೇಹ ಇರುವವರಲ್ಲಿ ಮೇದೋಜ್ಜೀರಕ ಗ್ರಂಥಿಯಿಂದ ಸ್ರವಿಸುವ ಇನ್ಸುಲಿನ್ ಸರಿಯಾದ ಪ್ರಮಾಣದಲ್ಲಿ ಇರುವುದಿಲ್ಲ. ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದನ್ನು ಮಧುಮೇಹ ಎಂದು ಪರಿಗಣಿಸಲಾಗುತ್ತದೆ.

ಕುಟುಂಬದಲ್ಲಿ ಯಾರಿಗಾದರೂ ಮಧುಮೇಹವಿದೆಯೇ?; ನಿಮ್ಮ ಆರೋಗ್ಯದ ಬಗ್ಗೆಯೂ ಎಚ್ಚರವಿರಲಿ

Diabetes: ಮಧುಮೇಹವು ದೀರ್ಘಕಾಲದ ಕಾಯಿಲೆಯಾಗಿದ್ದು, ಮೇದೋಜ್ಜೀರಕ ಗ್ರಂಥಿಯು ಸಾಕಷ್ಟು ಇನ್ಸುಲಿನ್ ಅನ್ನು ಉತ್ಪಾದಿಸದಿದ್ದಾಗ ಅಥವಾ ದೇಹವು ಉತ್ಪಾದಿಸುವ ಇನ್ಸುಲಿನ್ ಅನ್ನು ಪರಿಣಾಮಕಾರಿಯಾಗಿ ಬಳಸಲು ಸಾಧ್ಯವಾಗದೆ ಇದ್ದಾಗ ಡಯಾಬಿಟಿಸ್ ಉಂಟಾಗುತ್ತದೆ. ಇನ್ಸುಲಿನ್ ಎಂಬುದು ನಮ್ಮ ರಕ್ತದಲ್ಲಿನ ಗ್ಲೂಕೋಸ್ ಅನ್ನು ನಿಯಂತ್ರಿಸುವ ಒಂದು ಹಾರ್ಮೋನ್ ಆಗಿದೆ. ಮಧುಮೇಹದ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳಿವೆ.

Strawberries: ಡಯಾಬಿಟಿಸ್ ಇದ್ದರೆ ಸ್ಟ್ರಾಬೆರಿ ಹಣ್ಣು ತಿನ್ನಬಹುದಾ?

Diabetes: ಒಂದು ಕಪ್ ಸ್ಟ್ರಾಬೆರಿ ಹಣ್ಣು ಸುಮಾರು 11 ಗ್ರಾಂ ಕಾರ್ಬೋಹೈಡ್ರೇಟ್‌ಗಳನ್ನು ಹೊಂದಿರುತ್ತದೆ. ಅದರಲ್ಲಿ 2.9 ಗ್ರಾಂ ಆಹಾರದ ಫೈಬರ್ ಇರುತ್ತದೆ. ಆದ್ದರಿಂದ, ಸ್ಟ್ರಾಬೆರಿಗಳನ್ನು ಮಿತವಾಗಿ ಸೇವಿಸುವುದು ಉತ್ತಮ. ಒಂದುವೇಳೆ ನಿಮಗೆ ಮಧುಮೇಹ ಸಮಸ್ಯೆ ಇದ್ದರೆ ಸ್ಟ್ರಾಬೆರಿ ಹಣ್ಣುಗಳನ್ನು ತಿನ್ನಬಹುದಾ? ಈ ಬಗ್ಗೆ ತಜ್ಞರು ಏನು ಹೇಳುತ್ತಾರೆ? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Diabetes: ಮಧುಮೇಹಕ್ಕೂ ಶ್ರವಣ ಸಮಸ್ಯೆಗೂ ಸಂಬಂಧವಿದೆಯೇ?

ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ನಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟಗಳು ನಾನಾ ರೀತಿಯ ಇತರೆ ಆರೋಗ್ಯ ಸಮಸ್ಯೆಗಳನ್ನು ಕೂಡ ಉಂಟುಮಾಡುತ್ತದೆ. ಹೀಗಾಗಿ, ಸಕ್ಕರೆಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಮತ್ತು ಮೊದಲೇ ಸೂಕ್ತವಾಗಿ ಚಿಕಿತ್ಸೆ ಪಡೆಯುವುದು ಅತ್ಯಗತ್ಯ. ಹಾಗಾದರೆ, ಮಧುಮೇಹ ಸಮಸ್ಯೆಯಿಂದ ಶ್ರವಣ ದೋಷ ಕೂಡ ಉಂಟಾಗುತ್ತದೆಯೇ?

World Pulses Day: ಡಯಾಬಿಟಿಕ್ ರೋಗಿಗಳ ಸಕ್ಕರೆ ಮಟ್ಟ ನಿಯಂತ್ರಿಸುವ ಧಾನ್ಯಗಳಿವು

Pulses Health Benefits: ದ್ವಿದಳ ಧಾನ್ಯಗಳು ಆರೋಗ್ಯಕರ ಆಹಾರ ಪದ್ಧತಿಗೆ ಅತ್ಯಗತ್ಯವಾದ ಪದಾರ್ಥಗಳಾಗಿವೆ. ಇವೆಲ್ಲವೂ ನಮ್ಮ ಆರೋಗ್ಯವನ್ನು ಉತ್ತಮವಾಗಿಡಲು ಸಹಾಯ ಮಾಡುತ್ತವೆ. ವಿಶ್ವಸಂಸ್ಥೆಯು 2016 ಅನ್ನು 'ದ್ವಿದಳ ಧಾನ್ಯಗಳ ವರ್ಷ' ಎಂದು ಆಚರಿಸಿತು. ಇಂದು ವಿಶ್ವ ದ್ವಿದಳ ಧಾನ್ಯಗಳ ದಿನ.

ಡಯಾಬಿಟಿಸ್​ಗೂ ತುರಿಕೆಗೂ ಏನು ಸಂಬಂಧ?; ಇದನ್ನು ನಿಯಂತ್ರಿಸೋದು ಹೇಗೆ?

ವ್ಯಕ್ತಿಯ ರಕ್ತದಲ್ಲಿನ ಸಕ್ಕರೆಯ ಮಟ್ಟವು ತುಂಬಾ ಹೆಚ್ಚಾದಾಗ ಮಧುಮೇಹ ಉಂಟಾಗುತ್ತದೆ. ಈ ಆರೋಗ್ಯ ಸಮಸ್ಯೆ ಸಾಮಾನ್ಯವಾಗಿ ದೃಷ್ಟಿ ಸಮಸ್ಯೆಗಳು, ಕಿಡ್ನಿ ವೈಫಲ್ಯ ಮತ್ತು ಹೃದಯಾಘಾತಗಳಿಗೆ ಸಂಬಂಧಿಸಿದೆ. ಮಧುಮೇಹಿಗಳು ತಮ್ಮ ಆಹಾರ, ಜೀವನಕ್ರಮದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ.

‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್