AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diesel

Diesel

ಡೀಸಲ್ ಎಂಬುದು ಪೆಟ್ರೋಲ್ ರೀತಿ ಒಂದು ಪೆಟ್ರೋಲಿಯಂ ಉತ್ಪನ್ನ. ಡೀಸಲ್ ಎಂಜಿನ್​ನ ವಾಹನಗಳಿಗೆ ಇದನ್ನು ಇಂಧನವಾಗಿ ಬಳಸಲಾಗುತ್ತದೆ. ಪೆಟ್ರೋಲಿಯಂ ಅಥವಾ ಕಚ್ಛಾ ತೈಲ ಮಾತ್ರವಲ್ಲ, ಬೇರೆ ಮೂಲಗಳಿಂದಲೂ ಡೀಸೆಲ್ ಇಂಧನ ತಯಾರಿಸಬಹುದು. ಸಿಂಥೆಟಿಕ್ ಡೀಸಲ್, ಬಯೋಡೀಸಲ್ ಕೂಡ ಇದೆ. ವೆಜಿಟಬಲ್ ಆಯಿಲ್ ಅಥವಾ ಪ್ರಾಣಿಗಳ ಕೊಬ್ಬಿನಿಂದ ಬಯೋಡೀಸಲ್ ತಯಾರಿಸಬಹುದು. ಪೆಟ್ರೋಲಿಯಂನಿಂದ ತಯಾರಿಸಲಾಗುವ ಡೀಸಲ್ ಅತಿ ಸಾಮಾನ್ಯವಾಗಿ ಬಳಕೆಯಲ್ಲಿ ಇದೆ. ಪೆಟ್ರೋಲ್​ಗೆ ಹೋಲಿಸಿದರೆ ಡೀಸಲ್ ಹೆಚ್ಚು ಮಾಲಿನ್ಯಕಾರಕ ಎನಿಸಿದೆ. ಹೀಗಾಗಿ, ಡೀಸಲ್ ಇಂಧನ ಬಳಕೆಯನ್ನು ವಿವಿಧ ಸರ್ಕಾರಗಳು ಸಾಧ್ಯವಾದಷ್ಟು ನಿರ್ಬಂಧಿಸಲು ಯತ್ನಿಸುತ್ತಿವೆ. ಡೀಸಲ್ ಎಂಜಿನ್​ನ ವಾಹನಗಳ ತಯಾರಿಕೆ ಬಹಳ ಕಡಿಮೆ ಆಗಿದೆ. ಮುಂದಿನ ಕೆಲ ವರ್ಷಗಳಲ್ಲಿ ಡೀಸಲ್ ಮಾತ್ರವಲ್ಲ ಪೆಟ್ರೋಲ್ ಎಂಜಿನ್​ನ ವಾಹನಗಳ ತಯಾರಿಕೆಯೂ ನಿಂತು ಹೋಗಲಿದೆ. ಪರಿಸರ ಮಾಲಿನ್ಯಕ್ಕೆ ಧಕ್ಕೆಯಾಗುವ ಕಾರಣಕ್ಕೆ ಸರ್ಕಾರಗಳು ಈ ಕ್ರಮ ಕೈಗೊಳ್ಳುತ್ತಿವೆ. ಆದಾಗ್ಯೂ ಕೆಲವಾರು ವರ್ಷಗಳ ಕಾಲ ಡೀಸಲ್ ತೈಲ ಹೆಚ್ಚು ಬಳಕೆಯಲ್ಲಿ ಉಳಿಯುತ್ತದೆ. ಅದಕ್ಕೆ ಬೇಡಿಕೆ ಇದ್ದೇ ಇರುತ್ತದೆ.

ಇನ್ನೂ ಹೆಚ್ಚು ಓದಿ

Petrol Production: 1 ಬ್ಯಾರಲ್ ಕಚ್ಛಾ ತೈಲದಿಂದ ಪೆಟ್ರೋಲ್, ಡೀಸಲ್ ಸೇರಿ ಏನೆಲ್ಲಾ ತಯಾರಿಸಬಹುದು ಗೊತ್ತಾ?

How much petrol can be produced from 1 barrel of crude oil: ಒಂದು ಬ್ಯಾರಲ್ ಎಂದರೆ ಸುಮಾರು 157 ಲೀಟರ್ ಆಗುತ್ತದೆ. ಒಂದು ಬ್ಯಾರಲ್ ಕಚ್ಛಾ ತೈಲದಲ್ಲಿ ಸುಮಾರು 75 ಲೀಟರ್ ಪೆಟ್ರೋಲ್ ತಯಾರಿಕೆ ಸಾಧ್ಯ. ಉಳಿದ ತೈಲವು ವ್ಯರ್ಥವಾಗುವುದಿಲ್ಲ. ನಾನಾ ರೀತಿಯ ಉತ್ಪನ್ನಗಳ ತಯಾರಿಕೆಗೆ ಅದನ್ನು ಬಳಸಲಾಗುತ್ತದೆ. ಪೆಟ್ರೋಲ್, ಡೀಸಲ್, ಕೆರೋಸಿನ್ ಇತ್ಯಾದಿ ಪೆಟ್ರೋಲಿಯಂ ಉತ್ಪನ್ನಗಳಲ್ಲದೇ, ಹಲವು ಪ್ಲಾಸ್ಟಿಕ್ ಹಾಗೂ ಇನ್ನೂ ಇತರ ಉತ್ಪನ್ನಗಳ ತಯಾರಿಕೆಯೂ ಸಾಧ್ಯ.

ಪೆಟ್ರೋಲ್ ಪಡೆಯಲು ಮುಗಿಬಿದ್ದ ಜನರು; ಗಾಬರಿ ಬೇಡ… ಭಾರತದಲ್ಲಿ ಇಂಧನ ಸಾಕಷ್ಟಿದೆ: ಇಂಡಿಯನ್ ಆಯಿಲ್ ಸ್ಪಷ್ಟನೆ

IOCL says fuel available at all outlets: ಪೆಟ್ರೋಲ್, ಎಲ್​​ಪಿಜಿ ಹಾಗೂ ಇತರ ದೈನಂದಿನ ಬಳಕೆಯ ವಸ್ತುಗಳನ್ನು ಖರೀದಿಸಲು ಜನರು ಮುಂದಾಗಿರುವುದು ವರದಿಯಾಗಿದೆ. ಅದರಲ್ಲೂ ಪಂಜಾಬ್​​ನ ಗಡಿಭಾಗದ ಪ್ರದೇಶಗಳಲ್ಲಿ ಪೆಟ್ರೋಲ್ ಮುಂದೆ ಜನರು ಉದ್ದುದ್ದ ಕ್ಯೂ ಇರುವ ಚಿತ್ರಗಳು ವೈರಲ್ ಆಗುತ್ತಿವೆ. ಇಂಡಿಯನ್ ಆಯಿಲ್ ಕಾರ್ಪೊರೇಶನ್ ಸಂಸ್ಥೆ ಎಕ್ಸ್​​​ನಲ್ಲಿ ಪೋಸ್ಟ್​ ಹಾಕಿದ್ದು, ಭಾರತದಲ್ಲಿ ಇಂಧನ ಕೊರತೆ ಇಲ್ಲ. ಎಲ್ಲಾ ಕಡೆ ದೊರಕುತ್ತದೆ ಎಂದು ಸ್ಪಷ್ಟಪಡಿಸಿದೆ.

Fuel Price: ಪೆಟ್ರೋಲ್, ಡೀಸಲ್ ಮೇಲಿನ ಅಬಕಾರಿ ಸುಂಕ 2 ರೂ ಹೆಚ್ಚಳ; ಆದರೆ ಬೆಲೆ ಏರಿಕೆ ಇರಲ್ಲ

Excise duty raised on Petrol and Diesel: ಬೆಲೆ ಏರಿಕೆಯ ಬಿಸಿಯಲ್ಲಿರುವ ಮಧ್ಯಮ ವರ್ಗದವರಿಗೆ ಗಾಯದ ಮೇಲೆ ಬರೆ ಬೀಳುತ್ತಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ಮೇಲಿನ ಅಬಕಾರಿ ಸುಂಕವನ್ನು ಎರಡು ರೂಗಳಷ್ಟು ಹೆಚ್ಚಿಸಿದೆ. ಕರ್ನಾಟಕದ ಜನರಿಗೆ ಡಬಲ್ ಶಾಕ್ ಸಿಕ್ಕಂತಾಗಿದೆ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಡೀಸಲ್ ಮೇಲೆ ಎರಡು ರೂ ಹೆಚ್ಚುವರಿ ತೆರಿಗೆ ಹೇರಿತ್ತು. ಈಗ ಕೇಂದ್ರದಿಂದ ಎರಡು ರೂ ಅಬಕಾರಿ ಸುಂಕ ಹೆಚ್ಚಳ ಆಗಿದೆ.

Lorry Strike: ಮುಂದಿನ ವಾರ ಲಾರಿ ಮುಷ್ಕರ ಬಹುತೇಕ ಫಿಕ್ಸ್, ಡೀಸೆಲ್​​ ದರ ಏರಿಕೆಗೆ ಲಾರಿ ಮಾಲೀಕರ ಆಕ್ರೋಶ

ಕರ್ನಾಟಕ ಲಾರಿ ಮುಷ್ಕರ: ಬೆಲೆ ಏರಿಕೆ ಹೊಡೆತದಿಂದ ಜನ ಕಂಗಾಲಾಗಿದ್ದಾರೆ. ಹಾಲು, ಮೊಸರು ದರ ಏರಿಕೆ ಹಾಗೂ ಕಸ ತೆರಿಗೆ ಇತ್ಯಾದಿಗಳಿಂದ ಕಂಗಟ್ಟಿರುವ ಜನರಿಗೆ ಇದೀಗ ಡೀಸೆಲ್ ಬೆಲೆ ಹೆಚ್ಚಳದ ಬಿಸಿ ಪರೋಕ್ಷವಾಗಿ ತಟ್ಟಲಿದೆ. ಆದರೆ ಲಾರಿ ಮಾಲೀಕರಿಗೆ ನೇರವಾಗಿ ಹೊಡೆತ ಬೀಳಲಿದೆ. ಡಿಸೆಲ್ ದರ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು ಮುಷ್ಕರ ನಡೆಸಲು ಮುಂದಾಗಿದ್ದಾರೆ.

Diesel Price in Karnataka: ಡೀಸೆಲ್​ ಬೆಲೆ ಹೆಚ್ಚಳ: ಕರ್ನಾಟಕದಲ್ಲಿ ಈಗ 1 ಲೀಟರ್​ ಡೀಸೆಲ್​ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಡೀಸೆಲ್ ಬೆಲೆ ಹೆಚ್ಚಳ: ಕರ್ನಾಟಕ ಕಾಂಗ್ರೆಸ್ ಸರ್ಕಾರವು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 2.73 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ಪರಿಣಾಮವಾಗಿ ಡೀಸೆಲ್ ಬೆಲೆ 2 ರೂ.ನಷ್ಟು ಏರಿಕೆಯಾಗಿದೆ. ಹಾಗಾದರೆ, ಕರ್ನಾಟಕದಲ್ಲಿ ಈಗ ಡೀಸೆಲ್ ಬೆಲೆ ಎಷ್ಟಾಗಿದೆ? ನೆರೆ ರಾಜ್ಯಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ.

ಗಮನಿಸಿ: ಏಪ್ರಿಲ್ 1 ರಿಂದ ಈ ವಾಹನಗಳಿಗೆ ಪೆಟ್ರೋಲ್- ಡೀಸೆಲ್ ಸಿಗುವುದಿಲ್ಲ

Delhi Vehicles rules: ಪೆಟ್ರೋಲ್ ಪಂಪ್‌ಗಳಲ್ಲಿ ಅಳವಡಿಸಲಾದ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ANPR) ಕ್ಯಾಮೆರಾಗಳು ವಾಹನಗಳ ವಯಸ್ಸನ್ನು ಸ್ಕ್ಯಾನ್ ಮಾಡುತ್ತವೆ. ಅದರ ವಯಸ್ಸು NGT ನಿಗದಿಪಡಿಸಿದ ವಯಸ್ಸನ್ನು ಮೀರಿದರೆ ಅವರಿಗೆ ತೈಲ ನೀಡಲಾಗುವುದಿಲ್ಲ. ಈ ಕ್ಯಾಮೆರಾಗಳು ರಿಯಲ್ ಟೈಮ್ ನಲ್ಲಿ ನಂಬರ್ ಪ್ಲೇಟ್‌ ಗಳನ್ನು ಓದುವ ಮೂಲಕ ವಾಹನಗಳನ್ನು ಗುರುತಿಸುತ್ತವೆ.

ಕರ್ನಾಟಕದಲ್ಲಿ ಒಂದು ಲೀಟರ್ ಪೆಟ್ರೋಲ್​​ಗೆ ಕೇಂದ್ರ ಮತ್ತು ರಾಜ್ಯದ ತೆರಿಗೆ ಎಷ್ಟು? ತೆರಿಗೆ ಬಿಟ್ಟರೆ ಮೂಲ ಪೆಟ್ರೋಲ್ ಬೆಲೆ ಎಷ್ಟು? ಇಲ್ಲಿದೆ ಡೀಟೇಲ್ಸ್

Taxes on petrol in Karnataka: ಭಾರತದಲ್ಲಿ ಕೇಂದ್ರ ಸರ್ಕಾರದಿಂದ ಅಬಕಾರಿ ಶುಲ್ಕ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ರತೀ ರಾಜ್ಯಗಳಲ್ಲೂ ವ್ಯಾಟ್ ಅಥವಾ ಬೇರೆ ತೆರಿಗೆಗಳು ಜಾರಿಯಲ್ಲಿರುತ್ತವೆ. ದಕ್ಷಿಣ ರಾಜ್ಯಗಳು ಅತಿಹೆಚ್ಚು ತೆರಿಗೆ ವಿಧಿಸುತ್ತವೆ. ಕರ್ನಾಟಕವೂ ಕೂಡ ಹೆಚ್ಚು ತೆರಿಗೆ ವಿಧಿಸುವ ರಾಜ್ಯಗಳಲ್ಲಿ ಒಂದು. ತೆಲಂಗಾಣ ರಾಜ್ಯ ಅತಿಹೆಚ್ಚು ತೆರಿಗೆ ಹೇರುತ್ತದೆ. ಈಶಾನ್ಯ ರಾಜ್ಯಗಳಲ್ಲಿ ಕಡಿಮೆ ತೆರಿಗೆ ಇದೆ.

Petrol Diesel Price On February 28: 74 ಡಾಲರ್​ಗಿಂತಲೂ ಕಡಿಮೆಯಾದ ಕಚ್ಚಾತೈಲ ದರ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತಗಳು ಮುಂದುವರೆದಿವೆ. ಇದರ ಆಧಾರದ ಮೇಲೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರ್ಧರಿಸಲಾಗುತ್ತದೆ. ಆದರೆ, ಬಹಳ ದಿನಗಳಿಂದ ರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ರಾಜ್ಯ ಮಟ್ಟದಲ್ಲಿ ಬೆಲೆಗಳಲ್ಲಿ ಸ್ವಲ್ಪ ಬದಲಾವಣೆಗಳನ್ನು ಕಾಣಬಹುದು. ವಿವಿಧ ಪ್ರದೇಶಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಇಲ್ಲಿದೆ ಮಾಹಿತಿ.

Petrol Diesel Price on January 17: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬದಲಾವಣೆ ಇಲ್ಲ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜನವರಿ 17, ಶುಕ್ರವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ.,ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಅದೇ ಸಮಯದಲ್ಲಿ ಮುಂಬೈನಲ್ಲಿ ಡೀಸೆಲ್ ಬೆಲೆ 92.15 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ. ಇದೆ.

Petrol Diesel Price on January 15: ಕಚ್ಚಾತೈಲ ಬೆಲೆಯಲ್ಲಿ ಏರಿಕೆ, ಭಾರತದಾದ್ಯಂತ ಇಂಧನ ದರ ಎಷ್ಟಿದೆ?

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜನವರಿ 15, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿದ್ದರೂ ಕೂಡ ಇಂಧನ ದರದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ