AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diesel

Diesel

ಡೀಸಲ್ ಎಂಬುದು ಪೆಟ್ರೋಲ್ ರೀತಿ ಒಂದು ಪೆಟ್ರೋಲಿಯಂ ಉತ್ಪನ್ನ. ಡೀಸಲ್ ಎಂಜಿನ್​ನ ವಾಹನಗಳಿಗೆ ಇದನ್ನು ಇಂಧನವಾಗಿ ಬಳಸಲಾಗುತ್ತದೆ. ಪೆಟ್ರೋಲಿಯಂ ಅಥವಾ ಕಚ್ಛಾ ತೈಲ ಮಾತ್ರವಲ್ಲ, ಬೇರೆ ಮೂಲಗಳಿಂದಲೂ ಡೀಸೆಲ್ ಇಂಧನ ತಯಾರಿಸಬಹುದು. ಸಿಂಥೆಟಿಕ್ ಡೀಸಲ್, ಬಯೋಡೀಸಲ್ ಕೂಡ ಇದೆ. ವೆಜಿಟಬಲ್ ಆಯಿಲ್ ಅಥವಾ ಪ್ರಾಣಿಗಳ ಕೊಬ್ಬಿನಿಂದ ಬಯೋಡೀಸಲ್ ತಯಾರಿಸಬಹುದು. ಪೆಟ್ರೋಲಿಯಂನಿಂದ ತಯಾರಿಸಲಾಗುವ ಡೀಸಲ್ ಅತಿ ಸಾಮಾನ್ಯವಾಗಿ ಬಳಕೆಯಲ್ಲಿ ಇದೆ. ಪೆಟ್ರೋಲ್​ಗೆ ಹೋಲಿಸಿದರೆ ಡೀಸಲ್ ಹೆಚ್ಚು ಮಾಲಿನ್ಯಕಾರಕ ಎನಿಸಿದೆ. ಹೀಗಾಗಿ, ಡೀಸಲ್ ಇಂಧನ ಬಳಕೆಯನ್ನು ವಿವಿಧ ಸರ್ಕಾರಗಳು ಸಾಧ್ಯವಾದಷ್ಟು ನಿರ್ಬಂಧಿಸಲು ಯತ್ನಿಸುತ್ತಿವೆ. ಡೀಸಲ್ ಎಂಜಿನ್​ನ ವಾಹನಗಳ ತಯಾರಿಕೆ ಬಹಳ ಕಡಿಮೆ ಆಗಿದೆ. ಮುಂದಿನ ಕೆಲ ವರ್ಷಗಳಲ್ಲಿ ಡೀಸಲ್ ಮಾತ್ರವಲ್ಲ ಪೆಟ್ರೋಲ್ ಎಂಜಿನ್​ನ ವಾಹನಗಳ ತಯಾರಿಕೆಯೂ ನಿಂತು ಹೋಗಲಿದೆ. ಪರಿಸರ ಮಾಲಿನ್ಯಕ್ಕೆ ಧಕ್ಕೆಯಾಗುವ ಕಾರಣಕ್ಕೆ ಸರ್ಕಾರಗಳು ಈ ಕ್ರಮ ಕೈಗೊಳ್ಳುತ್ತಿವೆ. ಆದಾಗ್ಯೂ ಕೆಲವಾರು ವರ್ಷಗಳ ಕಾಲ ಡೀಸಲ್ ತೈಲ ಹೆಚ್ಚು ಬಳಕೆಯಲ್ಲಿ ಉಳಿಯುತ್ತದೆ. ಅದಕ್ಕೆ ಬೇಡಿಕೆ ಇದ್ದೇ ಇರುತ್ತದೆ.

ಇನ್ನೂ ಹೆಚ್ಚು ಓದಿ

Fuel Price: ಪೆಟ್ರೋಲ್, ಡೀಸಲ್ ಮೇಲಿನ ಅಬಕಾರಿ ಸುಂಕ 2 ರೂ ಹೆಚ್ಚಳ; ಆದರೆ ಬೆಲೆ ಏರಿಕೆ ಇರಲ್ಲ

Excise duty raised on Petrol and Diesel: ಬೆಲೆ ಏರಿಕೆಯ ಬಿಸಿಯಲ್ಲಿರುವ ಮಧ್ಯಮ ವರ್ಗದವರಿಗೆ ಗಾಯದ ಮೇಲೆ ಬರೆ ಬೀಳುತ್ತಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ಮೇಲಿನ ಅಬಕಾರಿ ಸುಂಕವನ್ನು ಎರಡು ರೂಗಳಷ್ಟು ಹೆಚ್ಚಿಸಿದೆ. ಕರ್ನಾಟಕದ ಜನರಿಗೆ ಡಬಲ್ ಶಾಕ್ ಸಿಕ್ಕಂತಾಗಿದೆ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಡೀಸಲ್ ಮೇಲೆ ಎರಡು ರೂ ಹೆಚ್ಚುವರಿ ತೆರಿಗೆ ಹೇರಿತ್ತು. ಈಗ ಕೇಂದ್ರದಿಂದ ಎರಡು ರೂ ಅಬಕಾರಿ ಸುಂಕ ಹೆಚ್ಚಳ ಆಗಿದೆ.

Lorry Strike: ಮುಂದಿನ ವಾರ ಲಾರಿ ಮುಷ್ಕರ ಬಹುತೇಕ ಫಿಕ್ಸ್, ಡೀಸೆಲ್​​ ದರ ಏರಿಕೆಗೆ ಲಾರಿ ಮಾಲೀಕರ ಆಕ್ರೋಶ

ಕರ್ನಾಟಕ ಲಾರಿ ಮುಷ್ಕರ: ಬೆಲೆ ಏರಿಕೆ ಹೊಡೆತದಿಂದ ಜನ ಕಂಗಾಲಾಗಿದ್ದಾರೆ. ಹಾಲು, ಮೊಸರು ದರ ಏರಿಕೆ ಹಾಗೂ ಕಸ ತೆರಿಗೆ ಇತ್ಯಾದಿಗಳಿಂದ ಕಂಗಟ್ಟಿರುವ ಜನರಿಗೆ ಇದೀಗ ಡೀಸೆಲ್ ಬೆಲೆ ಹೆಚ್ಚಳದ ಬಿಸಿ ಪರೋಕ್ಷವಾಗಿ ತಟ್ಟಲಿದೆ. ಆದರೆ ಲಾರಿ ಮಾಲೀಕರಿಗೆ ನೇರವಾಗಿ ಹೊಡೆತ ಬೀಳಲಿದೆ. ಡಿಸೆಲ್ ದರ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು ಮುಷ್ಕರ ನಡೆಸಲು ಮುಂದಾಗಿದ್ದಾರೆ.

Diesel Price in Karnataka: ಡೀಸೆಲ್​ ಬೆಲೆ ಹೆಚ್ಚಳ: ಕರ್ನಾಟಕದಲ್ಲಿ ಈಗ 1 ಲೀಟರ್​ ಡೀಸೆಲ್​ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಡೀಸೆಲ್ ಬೆಲೆ ಹೆಚ್ಚಳ: ಕರ್ನಾಟಕ ಕಾಂಗ್ರೆಸ್ ಸರ್ಕಾರವು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 2.73 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ಪರಿಣಾಮವಾಗಿ ಡೀಸೆಲ್ ಬೆಲೆ 2 ರೂ.ನಷ್ಟು ಏರಿಕೆಯಾಗಿದೆ. ಹಾಗಾದರೆ, ಕರ್ನಾಟಕದಲ್ಲಿ ಈಗ ಡೀಸೆಲ್ ಬೆಲೆ ಎಷ್ಟಾಗಿದೆ? ನೆರೆ ರಾಜ್ಯಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ.

ಗಮನಿಸಿ: ಏಪ್ರಿಲ್ 1 ರಿಂದ ಈ ವಾಹನಗಳಿಗೆ ಪೆಟ್ರೋಲ್- ಡೀಸೆಲ್ ಸಿಗುವುದಿಲ್ಲ

Delhi Vehicles rules: ಪೆಟ್ರೋಲ್ ಪಂಪ್‌ಗಳಲ್ಲಿ ಅಳವಡಿಸಲಾದ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ANPR) ಕ್ಯಾಮೆರಾಗಳು ವಾಹನಗಳ ವಯಸ್ಸನ್ನು ಸ್ಕ್ಯಾನ್ ಮಾಡುತ್ತವೆ. ಅದರ ವಯಸ್ಸು NGT ನಿಗದಿಪಡಿಸಿದ ವಯಸ್ಸನ್ನು ಮೀರಿದರೆ ಅವರಿಗೆ ತೈಲ ನೀಡಲಾಗುವುದಿಲ್ಲ. ಈ ಕ್ಯಾಮೆರಾಗಳು ರಿಯಲ್ ಟೈಮ್ ನಲ್ಲಿ ನಂಬರ್ ಪ್ಲೇಟ್‌ ಗಳನ್ನು ಓದುವ ಮೂಲಕ ವಾಹನಗಳನ್ನು ಗುರುತಿಸುತ್ತವೆ.

ಕರ್ನಾಟಕದಲ್ಲಿ ಒಂದು ಲೀಟರ್ ಪೆಟ್ರೋಲ್​​ಗೆ ಕೇಂದ್ರ ಮತ್ತು ರಾಜ್ಯದ ತೆರಿಗೆ ಎಷ್ಟು? ತೆರಿಗೆ ಬಿಟ್ಟರೆ ಮೂಲ ಪೆಟ್ರೋಲ್ ಬೆಲೆ ಎಷ್ಟು? ಇಲ್ಲಿದೆ ಡೀಟೇಲ್ಸ್

Taxes on petrol in Karnataka: ಭಾರತದಲ್ಲಿ ಕೇಂದ್ರ ಸರ್ಕಾರದಿಂದ ಅಬಕಾರಿ ಶುಲ್ಕ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ರತೀ ರಾಜ್ಯಗಳಲ್ಲೂ ವ್ಯಾಟ್ ಅಥವಾ ಬೇರೆ ತೆರಿಗೆಗಳು ಜಾರಿಯಲ್ಲಿರುತ್ತವೆ. ದಕ್ಷಿಣ ರಾಜ್ಯಗಳು ಅತಿಹೆಚ್ಚು ತೆರಿಗೆ ವಿಧಿಸುತ್ತವೆ. ಕರ್ನಾಟಕವೂ ಕೂಡ ಹೆಚ್ಚು ತೆರಿಗೆ ವಿಧಿಸುವ ರಾಜ್ಯಗಳಲ್ಲಿ ಒಂದು. ತೆಲಂಗಾಣ ರಾಜ್ಯ ಅತಿಹೆಚ್ಚು ತೆರಿಗೆ ಹೇರುತ್ತದೆ. ಈಶಾನ್ಯ ರಾಜ್ಯಗಳಲ್ಲಿ ಕಡಿಮೆ ತೆರಿಗೆ ಇದೆ.

Petrol Diesel Price On February 28: 74 ಡಾಲರ್​ಗಿಂತಲೂ ಕಡಿಮೆಯಾದ ಕಚ್ಚಾತೈಲ ದರ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತಗಳು ಮುಂದುವರೆದಿವೆ. ಇದರ ಆಧಾರದ ಮೇಲೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರ್ಧರಿಸಲಾಗುತ್ತದೆ. ಆದರೆ, ಬಹಳ ದಿನಗಳಿಂದ ರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ರಾಜ್ಯ ಮಟ್ಟದಲ್ಲಿ ಬೆಲೆಗಳಲ್ಲಿ ಸ್ವಲ್ಪ ಬದಲಾವಣೆಗಳನ್ನು ಕಾಣಬಹುದು. ವಿವಿಧ ಪ್ರದೇಶಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಇಲ್ಲಿದೆ ಮಾಹಿತಿ.

Petrol Diesel Price on January 17: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬದಲಾವಣೆ ಇಲ್ಲ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜನವರಿ 17, ಶುಕ್ರವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ.,ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಅದೇ ಸಮಯದಲ್ಲಿ ಮುಂಬೈನಲ್ಲಿ ಡೀಸೆಲ್ ಬೆಲೆ 92.15 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ. ಇದೆ.

Petrol Diesel Price on January 15: ಕಚ್ಚಾತೈಲ ಬೆಲೆಯಲ್ಲಿ ಏರಿಕೆ, ಭಾರತದಾದ್ಯಂತ ಇಂಧನ ದರ ಎಷ್ಟಿದೆ?

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜನವರಿ 15, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿದ್ದರೂ ಕೂಡ ಇಂಧನ ದರದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

Petrol Diesel Price on January 14: 80 ಡಾಲರ್​ ದಾಟಿದ ಕಚ್ಚಾತೈಲ ದರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜನವರಿ 14, ಮಂಗಳವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.80 ರೂ. ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಏರಿಕೆ ಕಂಡರೂ ಅದರ ಪರಿಣಾಮ ಪೆಟ್ರೋಲ್, ಡೀಸೆಲ್ ಮೇಲಾಗಿಲ್ಲ.

Petrol Diesel Price on January 13: ಕಚ್ಚಾತೈಲ ಬೆಲೆ ಏರಿಕೆ, ಭಾರತದಾದ್ಯಂತ ಇಂಧನ ದರ ಎಷ್ಟಿದೆ?

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜನವರಿ 13, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿದೆ. ಕಚ್ಚಾ ತೈಲ ಏರಿಕೆಯಾಗಿದ್ದರೆ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಮೇಲೂ ಪರಿಣಾಮ ಬೀರಬಹುದು. ಆದಾಗ್ಯೂ, ಜನವರಿ 13, 2025 ಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಲಾಗಿದೆ. ಜನವರಿ 13 ರಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಒಂದೇ ಆಗಿದ್ದು, ಇಲ್ಲಿ ಯಾವುದೇ ಬದಲಾವಣೆ ಇಲ್ಲ.

ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’