AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diesel

Diesel

ಡೀಸಲ್ ಎಂಬುದು ಪೆಟ್ರೋಲ್ ರೀತಿ ಒಂದು ಪೆಟ್ರೋಲಿಯಂ ಉತ್ಪನ್ನ. ಡೀಸಲ್ ಎಂಜಿನ್​ನ ವಾಹನಗಳಿಗೆ ಇದನ್ನು ಇಂಧನವಾಗಿ ಬಳಸಲಾಗುತ್ತದೆ. ಪೆಟ್ರೋಲಿಯಂ ಅಥವಾ ಕಚ್ಛಾ ತೈಲ ಮಾತ್ರವಲ್ಲ, ಬೇರೆ ಮೂಲಗಳಿಂದಲೂ ಡೀಸೆಲ್ ಇಂಧನ ತಯಾರಿಸಬಹುದು. ಸಿಂಥೆಟಿಕ್ ಡೀಸಲ್, ಬಯೋಡೀಸಲ್ ಕೂಡ ಇದೆ. ವೆಜಿಟಬಲ್ ಆಯಿಲ್ ಅಥವಾ ಪ್ರಾಣಿಗಳ ಕೊಬ್ಬಿನಿಂದ ಬಯೋಡೀಸಲ್ ತಯಾರಿಸಬಹುದು. ಪೆಟ್ರೋಲಿಯಂನಿಂದ ತಯಾರಿಸಲಾಗುವ ಡೀಸಲ್ ಅತಿ ಸಾಮಾನ್ಯವಾಗಿ ಬಳಕೆಯಲ್ಲಿ ಇದೆ. ಪೆಟ್ರೋಲ್​ಗೆ ಹೋಲಿಸಿದರೆ ಡೀಸಲ್ ಹೆಚ್ಚು ಮಾಲಿನ್ಯಕಾರಕ ಎನಿಸಿದೆ. ಹೀಗಾಗಿ, ಡೀಸಲ್ ಇಂಧನ ಬಳಕೆಯನ್ನು ವಿವಿಧ ಸರ್ಕಾರಗಳು ಸಾಧ್ಯವಾದಷ್ಟು ನಿರ್ಬಂಧಿಸಲು ಯತ್ನಿಸುತ್ತಿವೆ. ಡೀಸಲ್ ಎಂಜಿನ್​ನ ವಾಹನಗಳ ತಯಾರಿಕೆ ಬಹಳ ಕಡಿಮೆ ಆಗಿದೆ. ಮುಂದಿನ ಕೆಲ ವರ್ಷಗಳಲ್ಲಿ ಡೀಸಲ್ ಮಾತ್ರವಲ್ಲ ಪೆಟ್ರೋಲ್ ಎಂಜಿನ್​ನ ವಾಹನಗಳ ತಯಾರಿಕೆಯೂ ನಿಂತು ಹೋಗಲಿದೆ. ಪರಿಸರ ಮಾಲಿನ್ಯಕ್ಕೆ ಧಕ್ಕೆಯಾಗುವ ಕಾರಣಕ್ಕೆ ಸರ್ಕಾರಗಳು ಈ ಕ್ರಮ ಕೈಗೊಳ್ಳುತ್ತಿವೆ. ಆದಾಗ್ಯೂ ಕೆಲವಾರು ವರ್ಷಗಳ ಕಾಲ ಡೀಸಲ್ ತೈಲ ಹೆಚ್ಚು ಬಳಕೆಯಲ್ಲಿ ಉಳಿಯುತ್ತದೆ. ಅದಕ್ಕೆ ಬೇಡಿಕೆ ಇದ್ದೇ ಇರುತ್ತದೆ.

ಇನ್ನೂ ಹೆಚ್ಚು ಓದಿ

ಕಚ್ಚಾ ತೈಲ ಬೆಲೆ ಬ್ಯಾರಲ್​ಗೆ 80 ಡಾಲರ್​ಗಿಂತ ಕಡಿಮೆ; ಪೆಟ್ರೋಲ್, ಡೀಸಲ್ ಬೆಲೆ ಕಡಿಮೆಗೊಳ್ಳುತ್ತಾ?

Will Petrol and Diesel see decrease in price as crude oil rates down to below 80$: ಬ್ಯಾರಲ್​ಗೆ 145 ಡಾಲರ್​ವರೆಗೂ ಏರಿದ್ದ ಕಚ್ಚಾ ತೈಲ ಬೆಲೆ ಈಗ 80 ಡಾಲರ್​ಗಿಂತ ಕೆಳಗೆ ಕುಸಿದಿದೆ. ಇದರೊಂದಿಗೆ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಇಳಿಕೆಯಾಗಬಹುದು ಎನ್ನುವ ನಿರೀಕ್ಷೆಗಳು ಹುಟ್ಟಿವೆ. ಹಿಂದಿನ ಸಂದರ್ಭಗಳನ್ನು ಅವಲೋಕಿಸಿದಾಗ ಪೆಟ್ರೋಲ್ ಮತ್ತು ಡೀಸಲ್​ನ ರೀಟೇಲ್ ಮಾರಾಟದಲ್ಲಿ ಬೆಲೆ ಇಳಿಕೆಯಾಗುವ ಸಾಧ್ಯತೆ ಕಡಿಮೆ. ಅದಕ್ಕೇನು ಕಾರಣ ಎನ್ನುವ ವಿವರ ಇಲ್ಲಿದೆ.

ಡೀಸಲ್ ಮತ್ತು ಜೆಟ್ ಇಂಧನದ ಮೇಲಿನ ರಫ್ತು ಸುಂಕ ಹೆಚ್ಚಳ; ಪೆಟ್ರೋಲ್ ರೀಟೇಲ್ ಬೆಲೆ ಮೇಲೆ ಪರಿಣಾಮ ಬೀರುತ್ತಾ?

India Hikes Diesel, ATF Export Duty: ಕೇಂದ್ರ ಸರ್ಕಾರ ಡೀಸೆಲ್ ಮತ್ತು ವಿಮಾನ ಇಂಧನ (ATF) ರಫ್ತು ಸುಂಕವನ್ನು ಹೆಚ್ಚಿಸಿದೆ. ಪೆಟ್ರೋಲ್ ಸುಂಕ ಯಥಾಸ್ಥಿತಿಯಲ್ಲಿದೆ. ಈ ಬದಲಾವಣೆಯಿಂದ ದೇಶೀಯ ಇಂಧನ ಬೆಲೆಗಳ ಮೇಲೆ ಪರಿಣಾಮವಿಲ್ಲ. ಜಾಗತಿಕ ತೈಲ ಬೆಲೆ ಏರಿಳಿತದ ಮಧ್ಯೆ, ತೈಲ ಕಂಪನಿಗಳು ದೇಶೀಯ ಮಾರುಕಟ್ಟೆಗೆ ಆದ್ಯತೆ ನೀಡಲು ಮತ್ತು ಅತಿಯಾದ ಲಾಭ ಗಳಿಸುವುದನ್ನು ತಡೆಯಲು ಸರ್ಕಾರ ಈ ಕ್ರಮ ಕೈಗೊಂಡಿದೆ. ದೇಶದಲ್ಲಿ ಇಂಧನ ಕೊರತೆ ಆಗದಂತೆ ನೋಡಿಕೊಳ್ಳುವುದು ಮುಖ್ಯ ಉದ್ದೇಶ.

ಹಳೆಯ ಕಾರಿಗೆ ಇ20 ಪೆಟ್ರೋಲ್ ಹಾಕಿಸಿದ್ರೆ ಇನ್ಷೂರೆನ್ಸ್ ಸಿಗಲ್ಲವಾ? ವಿಮಾ ಕಂಪನಿ ಹೇಳಿದ್ದಿದು

E20 Fuel Warning: ಹಳೆಯ, E20 ಇಂಧನ ಹೊಂದಿಕೆಯಾಗದ ಕಾರುಗಳಲ್ಲಿ ಇದರ ಬಳಕೆ ವಿಮಾ ಕ್ಲೈಮ್ ತಿರಸ್ಕರಿಸಲು ಕಾರಣವಾಗಬಹುದು. ಎಥೆನಾಲ್‌ನ ನಾಶಕಾರಿ ಗುಣ ಎಂಜಿನ್ ಭಾಗಗಳನ್ನು ಹಾನಿಗೊಳಿಸುತ್ತದೆ, ಇದನ್ನು ಅಸಮರ್ಪಕ ಬಳಕೆ ಎಂದು ಪರಿಗಣಿಸಲಾಗುತ್ತದೆ. ಆರ್ಥಿಕ ನಷ್ಟ ತಪ್ಪಿಸಲು ಮತ್ತು ವಿಮಾ ಮಾನ್ಯತೆ ಕಾಪಾಡಿಕೊಳ್ಳಲು ನಿಮ್ಮ ವಾಹನದ ಹೊಂದಾಣಿಕೆ ಪರಿಶೀಲಿಸಿ.

ಇರಾನ್-ಅಮೆರಿಕ ಒಪ್ಪಂದದ ಎಫೆಕ್ಟ್; ತೈಲ ಬೆಲೆ ಇಳಿಕೆ; ರೂಪಾಯಿಗೆ ಜೀವ; ಚಿನ್ನ, ಷೇರುಗಳ ಜಿಗಿತ

Hormuz Peace Deal Effect: ಇರಾನ್-ಅಮೆರಿಕ ನಡುವಿನ ಹಾರ್ಮುಜ್ ಜಲಸಂಧಿ ಸಂಘರ್ಷ ಅಂತ್ಯಗೊಂಡಿದ್ದು, ಜಾಗತಿಕ ಮಾರುಕಟ್ಟೆಗಳಲ್ಲಿ ಹೊಸ ಭರವಸೆ ಮೂಡಿದೆ. ಕಚ್ಚಾ ತೈಲ ಬೆಲೆ ಕುಸಿದಿದ್ದು, ಭಾರತದ ಹಣದುಬ್ಬರ ಮತ್ತು ಆಮದು ವೆಚ್ಚ ಕಡಿಮೆಯಾಗುವ ನಿರೀಕ್ಷೆಯಿದೆ. ಭಾರತೀಯ ಷೇರು ಮಾರುಕಟ್ಟೆ ಭಾರಿ ಏರಿಕೆ ಕಂಡಿದ್ದು, ರೂಪಾಯಿ ಬಲಗೊಂಡಿದೆ. ಹೂಡಿಕೆದಾರರ ಆತಂಕ ದೂರವಾಗಿ, ಚಿನ್ನದ ಬೆಲೆಯೂ ಏರಿಕೆ ಕಂಡಿದೆ.

ಅಮೆರಿಕ-ಇರಾನ್ ಯುದ್ಧ ಅಂತ್ಯ: ಕಚ್ಚಾ ತೈಲ ಬೆಲೆಯಲ್ಲಿ ಒಂದೇ ದಿನ ಭಾರಿ ಇಳಿಕೆ! ಪೆಟ್ರೋಲ್, ಡೀಸೆಲ್ ದರ ಕಡಿತ ನಿರೀಕ್ಷೆ

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಜಾಗತಿಕ ಕಚ್ಚಾ ತೈಲ ಬೆಲೆ ಕುಸಿದಿದೆ. ಬ್ರೆಂಟ್ ಕ್ರೂಡ್ ಬೆಲೆ 80 ಡಾಲರ್​ಗೆ ಇಳಿದಿದ್ದು, ಒಂದೇ ದಿನದಲ್ಲಿ ಶೇ 4 ಕುಸಿತ ಕಂಡಿದೆ. ಹಾರ್ಮುಝ್ ಜಲಸಂಧಿ ಈಗ ಮುಕ್ತವಾಗಿದ್ದು, ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನ ಬೆಲೆ ಇಳಿಕೆಯಾಗುವ ನಿರೀಕ್ಷೆ ಮೂಡಿದೆ. ಇದರಿಂದ ಜನಸಾಮಾನ್ಯರು ನಿಟ್ಟುಸಿರು ಬಿಡುವಂತಾಗಿದೆ.

ಪೆಟ್ರೋಲ್ ಬೆಲೆ ಇಳಿಯುತ್ತಾ? ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಸುಂಕ ರದ್ದುಗೊಳಿಸಿರುವುದು ಯಾರಿಗೆ ಲಾಭ?

Excise Duty Waived, But Petrol Price Won't Drop Yet: ಕೇಂದ್ರ ಸರ್ಕಾರವು ಹೆಚ್ಚಿನ ಎಥೆನಾಲ್ ಮಿಶ್ರಿತ ಪೆಟ್ರೋಲ್ (E22-E30) ಮೇಲಿನ ಅಬಕಾರಿ ಸುಂಕವನ್ನು ರದ್ದುಗೊಳಿಸಿದೆ. ಆದರೆ, ದೇಶದಲ್ಲಿ ಪ್ರಚಲಿತದಲ್ಲಿರುವ E20 ಪೆಟ್ರೋಲ್ ಗ್ರಾಹಕರಿಗೆ ತಕ್ಷಣಕ್ಕೆ ಬೆಲೆ ಇಳಿಕೆಯಾಗುವುದಿಲ್ಲ. ಈ ನಿರ್ಧಾರವು ಭಾರತದ E30 ಎಥೆನಾಲ್ ಗುರಿಯ ಭಾಗವಾಗಿದೆ. ಇದು ರೈತರ ಆದಾಯ ಹೆಚ್ಚಿಸಲು, ಕಚ್ಚಾ ತೈಲ ಆಮದು ವೆಚ್ಚ ಕಡಿಮೆ ಮಾಡಲು ಮತ್ತು ದೀರ್ಘಾವಧಿಯಲ್ಲಿ ಆರ್ಥಿಕತೆಗೆ ಪ್ರಯೋಜನ ನೀಡಲು ಸಹಾಯಕವಾಗಿದೆ.

ಇಂಧನ ಕ್ರಾಂತಿ: ಹೆಚ್ಚಿನ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಸಂಪೂರ್ಣ ಮನ್ನಾ

ಕೇಂದ್ರ ಸರ್ಕಾರವು ಶೇ.22 ರಿಂದ 30ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ (E22-E30) ಮೇಲಿನ ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ಮನ್ನಾ ಮಾಡಿದೆ. ಇದು ಭಾರತದ ಇಂಧನ ಸ್ವಾವಲಂಬನೆ, ಪರಿಸರ ಸಂರಕ್ಷಣೆ ಮತ್ತು ಕೃಷಿ ವಲಯಕ್ಕೆ ಲಾಭ ತರಲಿದೆ. ಎಥೆನಾಲ್ ಮಿಶ್ರಣದಲ್ಲಿ ದೇಶದ ಅದ್ಭುತ ಪ್ರಗತಿಯನ್ನು ಇದು ಮತ್ತಷ್ಟು ಉತ್ತೇಜಿಸಲಿದೆ.

ಒಮಾನ್-ಭಾರತ ಗ್ಯಾಸ್ ಪೈಪ್​ಲೈನ್ ಪ್ರಾಜೆಕ್ಟ್​ಗೆ ಮರುಜೀವ; ಸಾಧ್ಯತಾ ವರದಿಗೆ ಸರ್ಕಾರ ಆದೇಶ; ಈ ಯೋಜನೆಯಿಂದ ಭಾರತಕ್ಕಿದೆಯಾ ಲಾಭ?

Oman-Gujarat deep-sea gas pipeline project, feasibility study ordered: ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ, ಭಾರತವು ₹40,000 ಕೋಟಿ ವೆಚ್ಚದ 'ಒಮಾನ್-ಗುಜರಾತ್ ಆಳಸಮುದ್ರ ನೈಸರ್ಗಿಕ ಅನಿಲ ಪೈಪ್‌ಲೈನ್' ಯೋಜನೆಗೆ ಮರುಜೀವ ನೀಡಿದೆ. ಇದು ಭಾರತದ ಇಂಧನ ಭದ್ರತೆಯನ್ನು ಹೆಚ್ಚಿಸಿ, ಹಾರ್ಮುಜ್ ಜಲಸಂಧಿ ಮತ್ತು ಪಾಕಿಸ್ತಾನದ ಹಸ್ತಕ್ಷೇಪವನ್ನು ತಪ್ಪಿಸುತ್ತದೆ. ಗೇಲ್, IOCL, EIL ಸಂಸ್ಥೆಗಳಿಗೆ ಸಾಧ್ಯತಾ ವರದಿ ಸಿದ್ಧಪಡಿಸಲು ನಿರ್ದೇಶಿಸಲಾಗಿದ್ದು, ಭಾರತದ 2030ರ ಇಂಧನ ಗುರಿ ತಲುಪಲು ಇದು ನಿರ್ಣಾಯಕವಾಗಿದೆ.

ರಷ್ಯಾದಿಂದ ತೈಲ ಖರೀದಿಸಬೇಡಿ ಎಂದು ಭಾರತಕ್ಕೆ ಯಾರೂ ಹೇಳಿಲ್ಲ; ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

ಇರಾನ್ ಸಂಘರ್ಷದಿಂದಾಗಿ 'ಸ್ಟ್ರೈಟ್ ಆಫ್ ಹಾರ್ಮುಜ್' ಮೂಲಕ ಇಂಧನ ಪೂರೈಕೆಗೆ ಅಡ್ಡಿಯಾಗಿದ್ದರೂ ಸಹ, ಜಾಗತಿಕವಾಗಿ ಗಗನಕ್ಕೇರುತ್ತಿದ್ದ ಇಂಧನ ಬೆಲೆಗಳ ಬಿಸಿಯಿಂದ ಭಾರತೀಯರನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಜಾಗತಿಕ ಮಟ್ಟದಲ್ಲಿ ಭಾರಿ ಏರುಪೇರುಗಳು ಮತ್ತು ಇಂಧನ ಪೂರೈಕೆಯಲ್ಲಿ ಸವಾಲುಗಳು ಎದುರಾಗಿದ್ದಾಗಲೂ ಭಾರತವು ಇಂಧನ ಬೆಲೆಗಳನ್ನು ನಿಯಂತ್ರಣದಲ್ಲಿಡುವಲ್ಲಿ ಯಶಸ್ವಿಯಾಗಿದೆ ಎಂದಿದ್ದಾರೆ. ಸರ್ಕಾರದ ಇಂಧನ ನೀತಿಯಲ್ಲಿ ಗ್ರಾಹಕರ ಹಿತಾಸಕ್ತಿಯೇ ಪ್ರಮುಖ ಕೇಂದ್ರಬಿಂದುವಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೆಲೆ ಏರಿಕೆಯ ಬಿಸಿ: ಗೋಲ್ಡ್ ಸ್ಕೀಮ್ ಗಳಿಂದ ಹಿಂದೆ ಸರಿಯುತ್ತಿರುವ ಸಿಟಿ ಮಂದಿ

ಮಧ್ಯಮ ವರ್ಗದ ಜನರ ಜೀವನವೇ ಹಾಗೆ ಬಂಗಾರ ಇಷ್ಟ ಆದರೂ ಅದನ್ನ ಖರೀದಿ ಮಾಡಲು ಕಷ್ಟ ಪಡಬೇಕಾಗುತ್ತೆ. ಹೀಗಾಗಿ ಒಂದೇ ಸಲ ಅಷ್ಟೊಂದು ಹಣ ನೀಡಿ ಚಿನ್ನ ಖರೀದಿ ಮಾಡೋಕೆ ಆಗೋದಿಲ್ಲ ಅಂತ ಅನೇಕರು ಗೋಲ್ಡ್ ಸ್ಕೀಂಗಳ ಮೂಲಕ ಚಿನ್ನ ಖರೀದಿ ಮಾಡುತ್ತಿದ್ದರು. ಆದ್ರೆ, ಇದೀಗ ಈ ಸ್ಕೀಂಗಳಿಂದಲೂ ಕೂಡ ಜನರು ಹಿಂದೆ ಸರಿಯುವ ಪರಿಸ್ಥಿತಿ ಬಂದಿದ್ದು, ಜನರ ಜೀವನ ಬಲು ಕಷ್ಟ ಎನ್ನುವಂತಾಗಿದೆ. ಯಾಕೆ ಅಂತೀರಾ? ಈ ಕೆಳಗಿನಂತಿದೆ ನೋಡಿ.

ಪೆಟ್ರೋಲ್, ಡೀಸಲ್ ಮೇಲಿನ ರಫ್ತು ಸುಂಕ ತಗ್ಗಿಸಿದ ಸರ್ಕಾರ; ಇಂಧನ ಬೆಲೆ ಕಡಿಮೆಗೊಳ್ಳುತ್ತಾ?

Central govt reduces export tax on petrol, diesel and Jet Fuel: ಕೇಂದ್ರ ಸರ್ಕಾರ ಜೂನ್ 1ಕ್ಕೆ ಜಾರಿಗೆ ಬರುವಂತೆ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ರಫ್ತು ಸುಂಕವನ್ನು ಕಡಿಮೆ ಮಾಡಿದೆ. ಹಣಕಾಸು ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ, ಪೆಟ್ರೋಲ್ ಮೇಲಿನ ರಫ್ತು ಸುಂಕವನ್ನು 3 ರೂನಿಂದ ಒಂದೂವರೆ ರೂಗೆ ಇಳಿಸಲಾಗಿದೆ. ಡೀಸಲ್ ಮೇಲಿನ ರಫ್ತು ಸುಂಕವನ್ನು 16.5 ರೂನಿಂದ 13.5 ರೂಗೆ ತಗ್ಗಿಸಿದೆ. ಎಟಿಎಫ್ ರಫ್ತು ಸುಂಕವೂ ಕಡಿಮೆಗೊಂಡಿದೆ.

ಅಮೆರಿಕದ ಯುದ್ಧವೆಲ್ಲವೂ ತೈಲಕ್ಕಾಗಿಯೇ; ಇವಿ, ಸೋಲಾರ್ ದಾಂಗುಡಿ ಇಟ್ಟರೂ ಆಯಿಲ್​ಗೆ ಯಾಕಿಷ್ಟು ಬೇಡಿಕೆ? ಈ ಕಪ್ಪು ಚಿನ್ನ ಅಂತಿಂಥದ್ದಲ್ಲ

Why Green Energy & EVs Won't End Oil's Demand: ಜಗತ್ತು ಹಸಿರು ಇಂಧನ ಮತ್ತು ಎಲೆಕ್ಟ್ರಿಕ್ ವಾಹನಗಳತ್ತ ಸಾಗುತ್ತಿದ್ದರೂ ಕಚ್ಚಾ ತೈಲದ ಬೇಡಿಕೆ ಮುಂಬರುವ ದಶಕಗಳಲ್ಲಿ ಕಡಿಮೆಯಾಗುವುದಿಲ್ಲ. ಏಕೆಂದರೆ, ತೈಲ ಕೇವಲ ಇಂಧನವಲ್ಲ. ಪ್ಲಾಸ್ಟಿಕ್, ಔಷಧಿಗಳು, ಸೌಂದರ್ಯವರ್ಧಕಗಳು ಸೇರಿದಂತೆ ಸಾವಿರಾರು ದೈನಂದಿನ ವಸ್ತುಗಳ ತಯಾರಿಕೆಗೆ ಪೆಟ್ರೋಕೆಮಿಕಲ್ಸ್‌ಗಳು ಅವಶ್ಯಕ. EV ಯುಗದಲ್ಲೂ ಕೈಗಾರಿಕೆಗಳು ಮತ್ತು ನಮ್ಮ ನಿತ್ಯ ಜೀವನಕ್ಕೆ ತೈಲ ಅನಿವಾರ್ಯ.

ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ