AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diesel

Diesel

ಡೀಸಲ್ ಎಂಬುದು ಪೆಟ್ರೋಲ್ ರೀತಿ ಒಂದು ಪೆಟ್ರೋಲಿಯಂ ಉತ್ಪನ್ನ. ಡೀಸಲ್ ಎಂಜಿನ್​ನ ವಾಹನಗಳಿಗೆ ಇದನ್ನು ಇಂಧನವಾಗಿ ಬಳಸಲಾಗುತ್ತದೆ. ಪೆಟ್ರೋಲಿಯಂ ಅಥವಾ ಕಚ್ಛಾ ತೈಲ ಮಾತ್ರವಲ್ಲ, ಬೇರೆ ಮೂಲಗಳಿಂದಲೂ ಡೀಸೆಲ್ ಇಂಧನ ತಯಾರಿಸಬಹುದು. ಸಿಂಥೆಟಿಕ್ ಡೀಸಲ್, ಬಯೋಡೀಸಲ್ ಕೂಡ ಇದೆ. ವೆಜಿಟಬಲ್ ಆಯಿಲ್ ಅಥವಾ ಪ್ರಾಣಿಗಳ ಕೊಬ್ಬಿನಿಂದ ಬಯೋಡೀಸಲ್ ತಯಾರಿಸಬಹುದು. ಪೆಟ್ರೋಲಿಯಂನಿಂದ ತಯಾರಿಸಲಾಗುವ ಡೀಸಲ್ ಅತಿ ಸಾಮಾನ್ಯವಾಗಿ ಬಳಕೆಯಲ್ಲಿ ಇದೆ. ಪೆಟ್ರೋಲ್​ಗೆ ಹೋಲಿಸಿದರೆ ಡೀಸಲ್ ಹೆಚ್ಚು ಮಾಲಿನ್ಯಕಾರಕ ಎನಿಸಿದೆ. ಹೀಗಾಗಿ, ಡೀಸಲ್ ಇಂಧನ ಬಳಕೆಯನ್ನು ವಿವಿಧ ಸರ್ಕಾರಗಳು ಸಾಧ್ಯವಾದಷ್ಟು ನಿರ್ಬಂಧಿಸಲು ಯತ್ನಿಸುತ್ತಿವೆ. ಡೀಸಲ್ ಎಂಜಿನ್​ನ ವಾಹನಗಳ ತಯಾರಿಕೆ ಬಹಳ ಕಡಿಮೆ ಆಗಿದೆ. ಮುಂದಿನ ಕೆಲ ವರ್ಷಗಳಲ್ಲಿ ಡೀಸಲ್ ಮಾತ್ರವಲ್ಲ ಪೆಟ್ರೋಲ್ ಎಂಜಿನ್​ನ ವಾಹನಗಳ ತಯಾರಿಕೆಯೂ ನಿಂತು ಹೋಗಲಿದೆ. ಪರಿಸರ ಮಾಲಿನ್ಯಕ್ಕೆ ಧಕ್ಕೆಯಾಗುವ ಕಾರಣಕ್ಕೆ ಸರ್ಕಾರಗಳು ಈ ಕ್ರಮ ಕೈಗೊಳ್ಳುತ್ತಿವೆ. ಆದಾಗ್ಯೂ ಕೆಲವಾರು ವರ್ಷಗಳ ಕಾಲ ಡೀಸಲ್ ತೈಲ ಹೆಚ್ಚು ಬಳಕೆಯಲ್ಲಿ ಉಳಿಯುತ್ತದೆ. ಅದಕ್ಕೆ ಬೇಡಿಕೆ ಇದ್ದೇ ಇರುತ್ತದೆ.

ಇನ್ನೂ ಹೆಚ್ಚು ಓದಿ

ಪೆಟ್ರೋಲ್, ಡೀಸಲ್ ಮೇಲಿನ ರಫ್ತು ಸುಂಕ ತಗ್ಗಿಸಿದ ಸರ್ಕಾರ; ಇಂಧನ ಬೆಲೆ ಕಡಿಮೆಗೊಳ್ಳುತ್ತಾ?

Central govt reduces export tax on petrol, diesel and Jet Fuel: ಕೇಂದ್ರ ಸರ್ಕಾರ ಜೂನ್ 1ಕ್ಕೆ ಜಾರಿಗೆ ಬರುವಂತೆ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ರಫ್ತು ಸುಂಕವನ್ನು ಕಡಿಮೆ ಮಾಡಿದೆ. ಹಣಕಾಸು ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ, ಪೆಟ್ರೋಲ್ ಮೇಲಿನ ರಫ್ತು ಸುಂಕವನ್ನು 3 ರೂನಿಂದ ಒಂದೂವರೆ ರೂಗೆ ಇಳಿಸಲಾಗಿದೆ. ಡೀಸಲ್ ಮೇಲಿನ ರಫ್ತು ಸುಂಕವನ್ನು 16.5 ರೂನಿಂದ 13.5 ರೂಗೆ ತಗ್ಗಿಸಿದೆ. ಎಟಿಎಫ್ ರಫ್ತು ಸುಂಕವೂ ಕಡಿಮೆಗೊಂಡಿದೆ.

ಅಮೆರಿಕದ ಯುದ್ಧವೆಲ್ಲವೂ ತೈಲಕ್ಕಾಗಿಯೇ; ಇವಿ, ಸೋಲಾರ್ ದಾಂಗುಡಿ ಇಟ್ಟರೂ ಆಯಿಲ್​ಗೆ ಯಾಕಿಷ್ಟು ಬೇಡಿಕೆ? ಈ ಕಪ್ಪು ಚಿನ್ನ ಅಂತಿಂಥದ್ದಲ್ಲ

Why Green Energy & EVs Won't End Oil's Demand: ಜಗತ್ತು ಹಸಿರು ಇಂಧನ ಮತ್ತು ಎಲೆಕ್ಟ್ರಿಕ್ ವಾಹನಗಳತ್ತ ಸಾಗುತ್ತಿದ್ದರೂ ಕಚ್ಚಾ ತೈಲದ ಬೇಡಿಕೆ ಮುಂಬರುವ ದಶಕಗಳಲ್ಲಿ ಕಡಿಮೆಯಾಗುವುದಿಲ್ಲ. ಏಕೆಂದರೆ, ತೈಲ ಕೇವಲ ಇಂಧನವಲ್ಲ. ಪ್ಲಾಸ್ಟಿಕ್, ಔಷಧಿಗಳು, ಸೌಂದರ್ಯವರ್ಧಕಗಳು ಸೇರಿದಂತೆ ಸಾವಿರಾರು ದೈನಂದಿನ ವಸ್ತುಗಳ ತಯಾರಿಕೆಗೆ ಪೆಟ್ರೋಕೆಮಿಕಲ್ಸ್‌ಗಳು ಅವಶ್ಯಕ. EV ಯುಗದಲ್ಲೂ ಕೈಗಾರಿಕೆಗಳು ಮತ್ತು ನಮ್ಮ ನಿತ್ಯ ಜೀವನಕ್ಕೆ ತೈಲ ಅನಿವಾರ್ಯ.

ಮೋದಿ ಸರ್ಕಾರ ರಹಸ್ಯವಾಗಿ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ; ಪೆಟ್ರೋಲ್ ಏರಿಕೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಕುರಿತು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಮುಗಿದ ತಕ್ಷಣ ಇಂಧನ ದರಗಳನ್ನು ಹೆಚ್ಚಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಚುನಾವಣೆಯ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪದೇ ಪದೇ ಹೆಚ್ಚಿಸುವ ಮೂಲಕ ಸರ್ಕಾರವು ಗ್ರಾಹಕರ ಮೇಲೆ ಹೊರೆಯನ್ನು ಹೇರುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಚುನಾವಣೆ ಮುಗಿದ ತಕ್ಷಣ ಸರ್ಕಾರವು ಹಣದುಬ್ಬರದ ಹೊರೆಯನ್ನು ಸಾರ್ವಜನಿಕರ ಮೇಲೆ ಹೇರಲು ಪ್ರಾರಂಭಿಸಿದೆ ಮತ್ತು ಸಾರ್ವಜನಿಕ ವಿರೋಧವನ್ನು ತಗ್ಗಿಸಲು ಹಂತ ಹಂತವಾಗಿ ಇಂಧನ ಬೆಲೆಗಳನ್ನು ಹೆಚ್ಚಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಆದ ಪೆಟ್ರೋಲ್ ಬೆಲೆ ಏರಿಕೆ ಬಹಳ ದೊಡ್ಡ ಹೆಚ್ಚಳವಾ? ಇಲ್ಲಿದೆ ವಾಸ್ತವ ಸ್ಥಿತಿ

India's petrol price hike compared to other countries: ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟು ಉದ್ಭವವಾದ ಕಳೆದ ಮೂರು ತಿಂಗಳಲ್ಲಿ ಭಾರತ ಸರ್ಕಾರ ಪೆಟ್ರೋಲ್ ಬೆಲೆಯನ್ನು ಶೇ. 7.7ರಷ್ಟು ಏರಿಸಿದೆ. ಇದೇ ವೇಳೆ, ಜಾಗತಿಕವಾಗಿ ಹೆಚ್ಚಿನ ದೇಶಗಳು ಬಹಳ ದೊಡ್ಡ ಮಟ್ಟದಲ್ಲಿ ಪೆಟ್ರೋಲ್, ಡೀಸಲ್ ಬೆಲೆ ಹೆಚ್ಚಿಸಿವೆ. ಭಾರತದಲ್ಲೂ ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್ ಬೆಲೆಯಲ್ಲಿ ವ್ಯತ್ಯಾಸ ಇದ್ದ, ಇದಕ್ಕೆ ವ್ಯಾಟ್ ಅಂಶ ಕಾರಣ.

ಪೆಟ್ರೋಲ್ ಡೀಸೆಲ್ ಬೆಲೆ ಇನ್ನೂ ಏರಿಕೆಯಾಗುತ್ತಾ? ಇಂಧನ ದರದಲ್ಲಿ ಕೇಂದ್ರ, ರಾಜ್ಯಕ್ಕೆಷ್ಟು ಪಾಲು ಎಂಬ ಮಾಹಿತಿ ಇಲ್ಲಿದೆ

ಕೇವಲ 11 ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ನಾಲ್ಕನೇ ಬಾರಿಗೆ ಏರಿಕೆಯಾಗಿದೆ. ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆ, ರೂಪಾಯಿ ಅಪಮೌಲ್ಯ ಮತ್ತು ಕೇಂದ್ರ-ರಾಜ್ಯ ಸರ್ಕಾರಗಳ ತೆರಿಗೆ ಪಾಲು ಈ ಹೆಚ್ಚಳಕ್ಕೆ ಪ್ರಮುಖ ಕಾರಣ. ತೆರಿಗೆ ಕಡಿತಗೊಳಿಸುವುದು ತಕ್ಷಣದ ಪರಿಹಾರವಾಗಿದ್ದು, ಇಲ್ಲದಿದ್ದರೆ ಅಗತ್ಯ ವಸ್ತುಗಳ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ.

Petrol Diesel Prices Hike: ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಬೆಂಗಳೂರಿನಲ್ಲಿ ಇಂಧನ ದರದ ಚಾರ್ಟ್ ಇಲ್ಲಿದೆ

ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಸತತ ನಾಲ್ಕನೇ ಬಾರಿ ಹೆಚ್ಚಿಸಿದೆ. ಪ್ರತಿ ಲೀಟರ್ ಪೆಟ್ರೋಲ್ ದರ 2.61 ರೂ. ಹಾಗೂ ಡೀಸೆಲ್ ದರ 2.71 ರೂ. ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಪೆಟ್ರೋಲ್ 110.93 ರೂ. ತಲುಪಿದೆ. ಯುದ್ಧದ ಪರಿಣಾಮದಿಂದ ಬೆಲೆ ಏರಿಕೆಯಾಗುತ್ತಿದೆ ಎಂದು ಕೆಲವರು ಸಮರ್ಥಿಸಿದರೆ, ಮಧ್ಯಮ ವರ್ಗದವರು ಜೀವನ ನಿರ್ವಹಣೆ ಕಷ್ಟವೆಂದು ಅಳಲು ತೋಡಿಕೊಂಡಿದ್ದಾರೆ.

Petrol Diesel Price Hike: ಹತ್ತು ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ, ಬೆಂಗಳೂರಲ್ಲಿಎಷ್ಟಿದೆ?

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹತ್ತು ದಿನಗಳಲ್ಲಿ ಮೂರನೇ ಬಾರಿಗೆ ಏರಿಕೆ ಕಂಡಿವೆ. ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆ ಏರಿಕೆ ಮತ್ತು ತೈಲ ಕಂಪನಿಗಳ ನಷ್ಟ ತಗ್ಗಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಹೊಸ ದರಗಳು ಜಾರಿಗೆ ಬಂದಿದ್ದು, ಗ್ರಾಹಕರ ಮೇಲೆ ಮತ್ತಷ್ಟು ಹೊರಬಿದ್ದಿದೆ. ಜಾಗತಿಕ ಮಾರುಕಟ್ಟೆಯ ಏರಿಳಿತವೇ ಪ್ರಮುಖ ಕಾರಣ.

ಪೆಟ್ರೋಲ್ ಬಂಕ್​ಗಳಲ್ಲಿ ಒಬ್ಬ ವ್ಯಕ್ತಿ ಅಥವಾ ವಾಹನಕ್ಕೆ ಎಷ್ಟು ಪೆಟ್ರೋಲ್, ಡೀಸಲ್ ನೀಡಲಾಗುತ್ತದೆ? ಇಲ್ಲಿದೆ ಡೀಟೇಲ್ಸ್

Petrol and Diesel supply at fuel outlets: ಇಂಧನ ಬಿಕ್ಕಟ್ಟು ಇರುವ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸಲ್ ಸಿಗುತ್ತಿಲ್ಲ ಎನ್ನುವ ವದಂತಿ ಎಲ್ಲೆಡೆ ಸುಲಭವಾಗಿ ಹಬ್ಬುತ್ತಿದೆ. ಆದರೆ, ಸದ್ಯ ಅಂಥ ಪರಿಸ್ಥಿತಿ ಉದ್ಭವವಾಗಿಲ್ಲ. ಪೆಟ್ರೋಲ್, ಡೀಸಲ್ ಪೂರೈಕೆ ಸರಾಗವಾಗಿ ಆಗುತ್ತಿದೆ. ಆದರೆ, ಈಗಾಗಲೇ ಅಸ್ತಿತ್ವದಲ್ಲಿರುವ ನಿಯಮಗಳ ಪ್ರಕಾರ, ಪೆಟ್ರೋಲ್ ಮತ್ತು ಡೀಸಲ್ ಖರೀದಿಗೆ ಕೆಲ ಮಿತಿಗಳು, ನಿರ್ಬಂಧಗಳು ಇವೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

ಕರ್ನಾಟಕದಲ್ಲಿ ಪೆಟ್ರೋಲ್-ಡೀಸೆಲ್, ಗ್ಯಾಸ್ ಬಗ್ಗೆ ಎದ್ದಿರುವ ಅಂತೆ ಕಂತೆಗಳಿಗೆ ತೆರೆ

ಇಸ್ರೆಲ್-ಇರಾನ್ ಯುದ್ಧದ ಪರಿಣಾಮ ಭಾತರದಲ್ಲಿ ಪೆಟ್ರೋಲ್, ಡಿಸೇಲ್ ಅಭಾವ ವದಂತಿ ಹಬ್ಬಿದೆ. ಈ ಹಿನ್ನೆಲೆಯಲ್ಲಿ ಇಂಧನ ಸಿಗುತ್ತೋ ಇಲ್ವೋ ಎಂದು ಕೆಲವೆಡೆ ಜನ ಬಂಕ್ ಗಳಿಗೆ ಮುಗಿಬಿದ್ದಿದ್ದು, ಹೆಚ್ಚೆಚ್ಚು ಇಂಧನ ಖರೀದಿಸಿ ಶೇಖರಣೆ ಮಾಡಿಕೊಳ್ಳುತ್ತಿದ್ದಾರೆ. ಈ ಸಂಬಂಧ ಕರ್ನಾಟಕದ ತೈಲ ಉದ್ಯಮದ ರಾಜ್ಯ ಮಟ್ಟದ ಸಂಯೋಜಕ ಪ್ರತಿಕ್ರಿಯಿಸಿದ್ದು, ಎಲ್ಲಾ ಅಂತೆ ಕಂತೆಗಳಿಗೆ ತೆರೆ ಎಳೆದಿದ್ದಾರೆ.

TV9 Kannada News Live: ಬೆಳಗಾವಿ ವಂಚನೆ ಪ್ರಕರಣದಲ್ಲಿ ನೂರಾರು ಕೋಟಿ ಹಣ ಪತ್ತೆ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು

ಬೆಳಗಾವಿಯ 4,500 ಕೋಟಿ ರೂ. ಮಹಾವಂಚನೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ, ಆರೋಪಿಯ 15 ಖಾತೆಗಳನ್ನು ಫ್ರೀಜ್ ಮಾಡಿದೆ. ಇತ್ತ ವಾರದಲ್ಲೇ ಎರಡನೇ ಬಾರಿ ಪೆಟ್ರೋಲ್-ಡೀಸೆಲ್ ದರ ಏರಿಕೆಯಾಗಿದ್ದು ವಾಹನ ಸವಾರರು ಕಂಗಾಲಾಗಿದ್ದಾರೆ. ಮತ್ತೊಂದೆಡೆ ಪಾಕಿಸ್ತಾನದ ಲಾಹೋರ್‌ನಲ್ಲಿ ರಸ್ತೆಗಳಿಗೆ ಹಳೆಯ ಹಿಂದೂ ಮತ್ತು ಸಿಖ್ ಹೆಸರುಗಳನ್ನು ಮರುಸ್ಥಾಪಿಸುವ ಐತಿಹಾಸಿಕ ಬದಲಾವಣೆ ನಡೆದಿದೆ. ಈ ಹೊತ್ತಿನ ಪ್ರಮುಖ ಸುದ್ದಿಗಳ ಸಮಗ್ರ ವರದಿ ಇಲ್ಲಿದೆ.

ಮಂಗಳೂರಿನಲ್ಲಿ ಮಹಾ ಅಚ್ಚರಿ: ಬಾವಿಗಳಲ್ಲಿ ಉಕ್ಕಿ ಬಂತು ಡೀಸೆಲ್, ನೀರು ಕುಡಿಯಲಾಗದೆ ಕಾವೂರು ನಿವಾಸಿಗಳು ಕಂಗಾಲು!

ಮಂಗಳೂರಿನ ಕಾವೂರಿನ ಮೂರು ಮನೆಗಳ ಬಾವಿಗಳಲ್ಲಿ ನೀರಿನ ಜತೆ ಡೀಸೆಲ್ ಉಕ್ಕಿ ಬರುತ್ತಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ನೀರಿನಲ್ಲಿ 28% ಡೀಸೆಲ್ ಇರುವುದು ಪತ್ತೆಯಾಗಿದ್ದು, ಹತ್ತಿರದ ಪೆಟ್ರೋಲ್ ಬಂಕ್‌ನಿಂದ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಬಂಕ್ ಮಾಲೀಕರು ನಿರಾಕರಿಸಿದ್ದಾರೆ. ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

  • Ashok
  • Updated on: May 19, 2026
  • 8:33 am

Petrol Diesel Price Hike: ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ! ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಕಳೆದ ಶುಕ್ರವಾರವಷ್ಟೇ 3 ರೂಪಾಯಿ ಹೆಚ್ಚಳವಾಗಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ, ಇಂದು ಮುಂಜಾನೆ ಮತ್ತೊಮ್ಮೆ ಪ್ರತಿ ಲೀಟರ್‌ಗೆ 90 ಪೈಸೆಯಷ್ಟು ದುಬಾರಿಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಈ ಸರಣಿ ಬೆಲೆ ಏರಿಕೆಯು ಗ್ರಾಹಕರಿಗೆ ದೊಡ್ಡ ಶಾಕ್ ನೀಡಿದ್ದು, ಸಾರ್ವಜನಿಕರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಂತಾಗಿದೆ.

ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​