Diesel
ಡೀಸಲ್ ಎಂಬುದು ಪೆಟ್ರೋಲ್ ರೀತಿ ಒಂದು ಪೆಟ್ರೋಲಿಯಂ ಉತ್ಪನ್ನ. ಡೀಸಲ್ ಎಂಜಿನ್ನ ವಾಹನಗಳಿಗೆ ಇದನ್ನು ಇಂಧನವಾಗಿ ಬಳಸಲಾಗುತ್ತದೆ. ಪೆಟ್ರೋಲಿಯಂ ಅಥವಾ ಕಚ್ಛಾ ತೈಲ ಮಾತ್ರವಲ್ಲ, ಬೇರೆ ಮೂಲಗಳಿಂದಲೂ ಡೀಸೆಲ್ ಇಂಧನ ತಯಾರಿಸಬಹುದು. ಸಿಂಥೆಟಿಕ್ ಡೀಸಲ್, ಬಯೋಡೀಸಲ್ ಕೂಡ ಇದೆ. ವೆಜಿಟಬಲ್ ಆಯಿಲ್ ಅಥವಾ ಪ್ರಾಣಿಗಳ ಕೊಬ್ಬಿನಿಂದ ಬಯೋಡೀಸಲ್ ತಯಾರಿಸಬಹುದು. ಪೆಟ್ರೋಲಿಯಂನಿಂದ ತಯಾರಿಸಲಾಗುವ ಡೀಸಲ್ ಅತಿ ಸಾಮಾನ್ಯವಾಗಿ ಬಳಕೆಯಲ್ಲಿ ಇದೆ. ಪೆಟ್ರೋಲ್ಗೆ ಹೋಲಿಸಿದರೆ ಡೀಸಲ್ ಹೆಚ್ಚು ಮಾಲಿನ್ಯಕಾರಕ ಎನಿಸಿದೆ. ಹೀಗಾಗಿ, ಡೀಸಲ್ ಇಂಧನ ಬಳಕೆಯನ್ನು ವಿವಿಧ ಸರ್ಕಾರಗಳು ಸಾಧ್ಯವಾದಷ್ಟು ನಿರ್ಬಂಧಿಸಲು ಯತ್ನಿಸುತ್ತಿವೆ. ಡೀಸಲ್ ಎಂಜಿನ್ನ ವಾಹನಗಳ ತಯಾರಿಕೆ ಬಹಳ ಕಡಿಮೆ ಆಗಿದೆ. ಮುಂದಿನ ಕೆಲ ವರ್ಷಗಳಲ್ಲಿ ಡೀಸಲ್ ಮಾತ್ರವಲ್ಲ ಪೆಟ್ರೋಲ್ ಎಂಜಿನ್ನ ವಾಹನಗಳ ತಯಾರಿಕೆಯೂ ನಿಂತು ಹೋಗಲಿದೆ. ಪರಿಸರ ಮಾಲಿನ್ಯಕ್ಕೆ ಧಕ್ಕೆಯಾಗುವ ಕಾರಣಕ್ಕೆ ಸರ್ಕಾರಗಳು ಈ ಕ್ರಮ ಕೈಗೊಳ್ಳುತ್ತಿವೆ. ಆದಾಗ್ಯೂ ಕೆಲವಾರು ವರ್ಷಗಳ ಕಾಲ ಡೀಸಲ್ ತೈಲ ಹೆಚ್ಚು ಬಳಕೆಯಲ್ಲಿ ಉಳಿಯುತ್ತದೆ. ಅದಕ್ಕೆ ಬೇಡಿಕೆ ಇದ್ದೇ ಇರುತ್ತದೆ.
ಭಾರತದಲ್ಲಿ ಪೆಟ್ರೋಲ್, ಎಲ್ಪಿಜಿ, ನ್ಯಾಚುರಲ್ ಗ್ಯಾಸ್ ಪೂರೈಕೆ ಹೇಗಿದೆ? ಸರ್ಕಾರದಿಂದ ಮಾಹಿತಿ
Adequate stocks of petrol and diesel available at all Petrol Pumps in country: ಇರಾನ್ ಯುದ್ಧ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಭಾರತದಲ್ಲೂ ತೈಲ ಮತ್ತು ಅನಿಲ ಪೂರೈಕೆ ಬಗ್ಗೆ ಜನರಿಗೆ ಆತಂಕ ಮುಂದುವರಿದಿದೆ. ಆದರೆ, ಸರ್ಕಾರವು ಪೆಟ್ರೋಲ್, ಡೀಸಲ್, ಎಲ್ಪಿಜಿ, ಎಲ್ಎನ್ಜಿ ದಾಸ್ತಾನು ಸಾಕಷ್ಟಿದೆ ಎಂದು ಮತ್ತೊಮ್ಮೆ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದೆ.
- Vijaya Sarathy SN
- Updated on: Mar 29, 2026
- 8:42 pm
ಏಪ್ರಿಲ್ 1ರಿಂದ ಪೆಟ್ರೋಲ್ ರಫ್ತು ನಿಷೇಧಿಸಿದ ರಷ್ಯಾ; ಭಾರತಕ್ಕೇನು ಪರಿಣಾಮ?
Russia thinks of stopping petrol exports from April 1st: ರಷ್ಯಾ ದೇಶವು ಪೆಟ್ರೋಲ್ ರಫ್ತನ್ನು ನಿಷೇಧಿಸಲು ಯೋಜಿಸಿದೆ. ಏಪ್ರಿಲ್ 1ರಿಂದ ಅದು ಹೊರ ದೇಶಗಳಿಗೆ ಪೆಟ್ರೋಲ್ ಪೂರೈಕೆ ನಿಲ್ಲಿಸಬಹುದು. ಆಂತರಿಕವಾಗಿ ಪೆಟ್ರೋಲ್ ಲಭ್ಯತೆ ಖಚಿತಪಡಿಸಿಕೊಳ್ಳಲು ರಷ್ಯಾ ಈ ಕ್ರಮ ತೆಗೆದುಕೊಳ್ಳುತ್ತಿರಬಹುದು. ಆದರೆ, ಪೆಟ್ರೋಲ್ ರಫ್ತು ನಿಷೇಧವಾದರೂ ಕಚ್ಛಾ ತೈಲ ಪೂರೈಕೆ ನಿಲ್ಲದೇ ಹೋಗಬಹುದು.
- Vijaya Sarathy SN
- Updated on: Mar 29, 2026
- 4:28 pm
ಇರಾನ್-ಇಸ್ರೇಲ್- ಅಮೆರಿಕ ನಡುವಿನ ಯುದ್ಧವು ಜಾಗತಿಕ ಬಿಕ್ಕಟ್ಟನ್ನು ಸೃಷ್ಟಿಸುತ್ತಿವೆ: ಪ್ರಧಾನಿ ಮೋದಿ
Mann Ki Baat: ಪ್ರಸ್ತುತ ಇರಾನ್-ಇಸ್ರೇಲ್-ಅಮೆರಿಕ ನಡುವಿನ ಯುದ್ಧವು ಜಾಗತಿಕ ಬಿಕ್ಕಟ್ಟು ಸೃಷ್ಟಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಇಂದು ಮನ್ ಕಿ ಬಾತ್ನ 132ನೇ ಸಂಚಿಕೆಯಲ್ಲಿ ಮಾತನಾಡಿದ ಅವರು, ಯುದ್ಧವನ್ನು ಎದುರಿಸುತ್ತಿರುವ ಈ ಪ್ರದೇಶವು ನಮ್ಮ ಇಂಧನ ಅಗತ್ಯಗಳಿಗೆ ಪ್ರಮುಖ ಕೇಂದ್ರವಾಗಿದೆ ಎಂದು ಪ್ರಧಾನಿ ಹೇಳಿದರು. ಇದು ಪೆಟ್ರೋಲ್ ಮತ್ತು ಡೀಸೆಲ್ಗೆ ಸಂಬಂಧಿಸಿದಂತೆ ಜಾಗತಿಕ ಬಿಕ್ಕಟ್ಟನ್ನು ಸೃಷ್ಟಿಸುತ್ತಿದೆ.
- Nayana Rajeev
- Updated on: Mar 29, 2026
- 11:47 am
ಭಾರತಕ್ಕೆ ಶಾಕ್ ನೀಡಲಿದೆಯೇ ರಷ್ಯಾ? ಏಪ್ರಿಲ್ 1 ರಿಂದ ಕಚ್ಚಾ ತೈಲ ರಫ್ತು ಸ್ಥಗಿತ!
ಏಪ್ರಿಲ್ 1 ರಿಂದ ಕಚ್ಚಾ ತೈಲ ರಫ್ತು ಸ್ಥಗಿತಗೊಳಿಸಲು ರಷ್ಯಾ ನಿರ್ಧರಿಸಿದ್ದು, ಇದು ಭಾರತದ ಇಂಧನ ಮಾರುಕಟ್ಟೆ ಮೇಲೆ ಕರಿನೆರಳು ಬೀರುವ ಸಾಧ್ಯತೆ ಇದೆ. ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಪಡೆಯುತ್ತಿದ್ದ ಭಾರತಕ್ಕೆ ರಫ್ತು ಸ್ಥಗಿತದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಭೀತಿ ಎದುರಾಗಿದೆಯೇ? ಈ ಬೆಳವಣಿಗೆಯಿಂದ ಭಾರತಕ್ಕಾಗುವ ಲಾಭ-ನಷ್ಟಗಳೇನು? ಇಲ್ಲಿದೆ ವಿವರ.
- Ganapathi Sharma
- Updated on: Mar 28, 2026
- 9:46 am
ಅಬಕಾರಿ ಸುಂಕ ಕಡಿತದಿಂದ ಸರ್ಕಾರಕ್ಕೆ ಎರಡೇ ವಾರದಲ್ಲಿ 7,000 ಕೋಟಿ ರೂ ಆದಾಯನಷ್ಟದ ಅಂದಾಜು
Govt faces Rs 7,000 revenue loss in 15 days from excise duty cut on Petrol and Diesel: ಇರಾನ್ ಯುದ್ಧದ ಪರಿಣಾಮ ತೈಲಬೆಲೆಗಳು ಬ್ಯಾರಲ್ಗೆ 100 ಡಾಲರ್ಗಿಂತಲೂ ಹೆಚ್ಚಿವೆ. ಪೆಟ್ರೋಲ್, ಡೀಸಲ್ ಬೆಲೆ ಅನೇಕ ದೇಶಗಳಲ್ಲಿ ಸಾಕಷ್ಟು ಏರಿವೆ. ಭಾರತದಲ್ಲಿ ಇವುಗಳ ಬೆಲೆ ಏರಿಕೆ ಆಗದಂತೆ ಸರ್ಕಾರ ಕ್ರಮ ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಅಬಕಾರಿ ಸುಂಕವನ್ನು 10 ರೂ ಇಳಿಸಿದೆ. ಈ ಕ್ರಮದಿಂದ ಸರ್ಕಾರಕ್ಕೆ ಭಾರೀ ಆದಾಯನಷ್ಟವಾಗಲಿದೆ.
- Vijaya Sarathy SN
- Updated on: Mar 27, 2026
- 7:04 pm
ಅಬಕಾರಿ ಸುಂಕ ಕಡಿಮೆಗೊಂಡರೂ ಪೆಟ್ರೋಲ್, ಡೀಸಲ್ ಬೆಲೆಯಲ್ಲಿ ಆಗಲ್ಲ ಇಳಿಕೆ; ಏನು ಕಾರಣ?
Will Petrol, diesel rates decrease after Rs 10 cut in excise duty: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 10 ರೂನಷ್ಟು ಇಳಿಸಿದೆ. ಈ ಇಳಿಕೆ ಬಳಿಕ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವು 3 ರೂ ಇದೆ. ಡೀಸಲ್ ಮೇಲಿನ ಅಬಕಾರಿ ಸುಂಕವು ಸೊನ್ನೆ ಇದೆ. ಈ ಸುಂಕ ಇಳಿಕೆಯಿಂದ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳು ಇಳಿಯುತ್ತವಾ?
- Vijaya Sarathy SN
- Updated on: Mar 27, 2026
- 2:11 pm
ಇನ್ನು ಡೀಸೆಲ್ಗಿಲ್ಲ ಅಬಕಾರಿ ಸುಂಕ! ಪೆಟ್ರೋಲ್ ಸುಂಕ ಭಾರಿ ಕಡಿತ: ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ
Excise Duty On Petrol, Diesel: ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 10 ರೂಪಾಯಿಗಳಷ್ಟು ಕಡಿತಗೊಳಿಸಿದ್ದು, ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್ಗೆ 3 ರೂಪಾಯಿ ಮತ್ತು ಡೀಸೆಲ್ಗೆ ಶೂನ್ಯಕ್ಕೆ ಇಳಿದಿದೆ. ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧ ಮತ್ತು ಅದರ ಪರಿಣಾಮವಾಗಿ ಟೆಹ್ರಾನ್ ಹಾರ್ಮುಜ್ ಜಲಸಂಧಿಯ ಮೇಲೆ ಹೇರಿದ ದಿಗ್ಬಂಧನದಿಂದ ಉಂಟಾದ ಜಾಗತಿಕ ಇಂಧನ ಬಿಕ್ಕಟ್ಟಿನಿಂದಾಗಿ ಬೆಲೆ ಏರಿಕೆಯಾಗುವ ಭೀತಿಯ ಮಧ್ಯೆ ಈ ಕಡಿತ ಮಾಡಲಾಗಿದೆ.
- Nayana Rajeev
- Updated on: Mar 27, 2026
- 2:05 pm
ಪೆಟ್ರೋಲ್ ಡೀಸೆಲ್ ದರ ಏರಿಕೆ: ನಯಾರಾ ಪೆಟ್ರೋಲ್ ಬಂಕ್ನತ್ತ ಸುಳಿಯದ ವಾಹನ ಸವಾರರು
ರಾಯಚೂರಿನ ನಯಾರಾ ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ದರ 5 ರೂ., ಡೀಸೆಲ್ ದರ 3 ರೂ. ಏರಿಕೆಯಾದ ನಂತರ ಗ್ರಾಹಕರು ಬಂಕ್ನತ್ತ ಸುಳಿಯುತ್ತಿಲ್ಲ. ದರ ಹೆಚ್ಚಳದಿಂದ ತೊಂದರೆಗೊಳಗಾದ ಬೈಕ್ ಸವಾರರು ನಗರದ ಇತರೆ ಬಂಕ್ಗಳತ್ತ ಮುಖ ಮಾಡಿದ್ದಾರೆ. ಕ್ಯಾನ್ಗಳಿಗೆ ಇಂಧನ ಮಾರಾಟ ಮಾಡದಂತೆ ಪೊಲೀಸರ ಸೂಚನೆ ನೀಡಿದ್ದಾರೆ.
- Bhemesh Poojar
- Updated on: Mar 27, 2026
- 8:49 am
ತೈಲ ಪೂರೈಕೆ ಕುರಿತು ಅಭಯ ನೀಡಿ, ವದಂತಿ ಹರಡುವವರಿಗೆ ಎಚ್ಚರಿಕೆ ಕೊಟ್ಟ ಕೇಂದ್ರ ಸರ್ಕಾರ
ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಪೂರೈಕೆ ಸಂಪೂರ್ಣ ಸುರಕ್ಷಿತವಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸಾಕಷ್ಟು ದಾಸ್ತಾನು ಮತ್ತು ನಿಯಂತ್ರಣದಲ್ಲಿರುವ ಪರಿಸ್ಥಿತಿ ಕುರಿತು ಸಚಿವಾಲಯ ಮಾಹಿತಿ ನೀಡಿದೆ. ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದು, ಜನರು ಅಧಿಕೃತ ಮಾಹಿತಿಯನ್ನೇ ನಂಬಬೇಕು ಎಂದು ತಿಳಿಸಿದೆ. ದೇಶದ ಇಂಧನ ಭದ್ರತೆ ಬಲವಾಗಿದ್ದು, ಆತಂಕಪಡುವ ಅಗತ್ಯವಿಲ್ಲ.
- Nayana Rajeev
- Updated on: Mar 26, 2026
- 4:41 pm
Petrol Diesel Prices: ಭಾರತದಲ್ಲಿ ನಯಾರಾ ಪೆಟ್ರೋಲ್ ದರ ಹೆಚ್ಚಳ; ಲೀಟರ್ಗೆ 5 ರೂ ಬೆಲೆ ಏರಿಕೆ
Nayara Energy hikes petrol and diesel prices: ಭಾರತದ ಅತಿದೊಡ್ಡ ಖಾಸಗಿ ಪೆಟ್ರೋಲ್ ರೀಟೇಲ್ ಮಾರಾಟ ಸಂಸ್ಥೆಯಾದ ನಯಾರಾ ಎನರ್ಜಿ ತನ್ನ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಹೆಚ್ಚಿಸಿದೆ. ಪೆಟ್ರೋಲ್ ಬೆಲೆ 5 ರೂ, ಡೀಸಲ್ ಬೆಲೆ 3 ರೂ ಏರಿಸಿದೆ. ಆದರೆ, ಸರ್ಕಾರಿ ಒಎಂಸಿಗಳಾದ ಇಂಡಿಯನ್ ಆಯಿಲ್, ಹೆಚ್ಪಿ, ಬಿಪಿ ಸಂಸ್ಥೆಗಳಿಂದ ಬೆಲೆ ಏರಿಕೆ ಪ್ರಕಟವಾಗಿಲ್ಲ.
- Vijaya Sarathy SN
- Updated on: Mar 26, 2026
- 5:35 pm
ಪೆಟ್ರೋಲ್, ಡೀಸಲ್ ಕೊರತೆ ಇಲ್ಲ, ಗಾಬರಿ ಬೇಡ: ಪೆಟ್ರೋಲಿಯಂ ಕಂಪನಿಗಳಿಂದ ಸ್ಪಷ್ಟನೆ
No fuel shortage in India, clarifies Bharath Petroleum: ದೇಶದಲ್ಲಿ ಕೆಲ ಪ್ರದೇಶಗಳಲ್ಲಿ ಪೆಟ್ರೋಲ್, ಡೀಸಲ್ ಕೊರತೆ ಇದೆ ಎನ್ನುವ ಸುದ್ದಿ ಹರಡಿದೆ. ಇದರಲ್ಲ ಸತ್ಯಾಂಶ ಇಲ್ಲ. ಪೆಟ್ರೋಲ್, ಡೀಸಲ್ ಮತ್ತು ಎಟಿಎಫ್ ಇಂಧನಗಳ ಕೊರತೆ ಇಲ್ಲ ಎಂದು ಭಾರತ್ ಪೆಟ್ರೋಲಿಯಂ ಸಂಸ್ಥೆ ಹೇಳಿದೆ. ಇಂಧನ ದಾಸ್ತಾನು ಸಾಕಷ್ಟಿದೆ. ಯಾರೂ ಕೂಡ ಗಾಬರಿಯಾಗಿ ಅನಗತ್ಯವಾಗಿ ಪೆಟ್ರೋಲ್ ತುಂಬಿಸಿಕೊಳ್ಳದಿರಿ ಎಂದು ಸಂಸ್ಥೆ ಮನವಿ ಮಾಡಿದೆ.
- Vijaya Sarathy SN
- Updated on: Mar 25, 2026
- 12:42 pm
ಗ್ಯಾಸ್ ಟ್ರಬಲ್ ಆಯ್ತು, ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕರ್ನಾಟಕದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಉಂಟಾಗುವ ಭೀತಿ ಎದುರಾಗಿದೆ. ಭಾರತ್ ಪೆಟ್ರೋಲಿಯಂ ಲಿಮಿಟೆಡ್ ಮುಂಗಡ ಹಣ ಪಡೆದರೂ ಇಂಧನ ಪೂರೈಸುತ್ತಿಲ್ಲ ಎಂದು ಅಖಿಲ ಕರ್ನಾಟಕ ಫೆಡರೇಶನ್ ಆಫ್ ಪೆಟ್ರೋಲಿಯಂ ಟ್ರೇಡರ್ಸ್ ಎಚ್ಚರಿಸಿದೆ. ಗ್ರಾಮೀಣ ಭಾಗಗಳಲ್ಲಿ ಆರಂಭವಾಗಿರುವ ಈ ಸಮಸ್ಯೆ ನಗರಗಳಿಗೂ ವಿಸ್ತರಿಸುವ ಸಾಧ್ಯತೆಯಿದ್ದು, ಸಚಿವ ಕೆ.ಹೆಚ್. ಮುನಿಯಪ್ಪ ಅವರ ಮಧ್ಯ ಪ್ರವೇಶಕ್ಕೆ ಮನವಿ ಮಾಡಲಾಗಿದೆ.
- Ganapathi Sharma
- Updated on: Mar 25, 2026
- 11:27 am