AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diesel

Diesel

ಡೀಸಲ್ ಎಂಬುದು ಪೆಟ್ರೋಲ್ ರೀತಿ ಒಂದು ಪೆಟ್ರೋಲಿಯಂ ಉತ್ಪನ್ನ. ಡೀಸಲ್ ಎಂಜಿನ್​ನ ವಾಹನಗಳಿಗೆ ಇದನ್ನು ಇಂಧನವಾಗಿ ಬಳಸಲಾಗುತ್ತದೆ. ಪೆಟ್ರೋಲಿಯಂ ಅಥವಾ ಕಚ್ಛಾ ತೈಲ ಮಾತ್ರವಲ್ಲ, ಬೇರೆ ಮೂಲಗಳಿಂದಲೂ ಡೀಸೆಲ್ ಇಂಧನ ತಯಾರಿಸಬಹುದು. ಸಿಂಥೆಟಿಕ್ ಡೀಸಲ್, ಬಯೋಡೀಸಲ್ ಕೂಡ ಇದೆ. ವೆಜಿಟಬಲ್ ಆಯಿಲ್ ಅಥವಾ ಪ್ರಾಣಿಗಳ ಕೊಬ್ಬಿನಿಂದ ಬಯೋಡೀಸಲ್ ತಯಾರಿಸಬಹುದು. ಪೆಟ್ರೋಲಿಯಂನಿಂದ ತಯಾರಿಸಲಾಗುವ ಡೀಸಲ್ ಅತಿ ಸಾಮಾನ್ಯವಾಗಿ ಬಳಕೆಯಲ್ಲಿ ಇದೆ. ಪೆಟ್ರೋಲ್​ಗೆ ಹೋಲಿಸಿದರೆ ಡೀಸಲ್ ಹೆಚ್ಚು ಮಾಲಿನ್ಯಕಾರಕ ಎನಿಸಿದೆ. ಹೀಗಾಗಿ, ಡೀಸಲ್ ಇಂಧನ ಬಳಕೆಯನ್ನು ವಿವಿಧ ಸರ್ಕಾರಗಳು ಸಾಧ್ಯವಾದಷ್ಟು ನಿರ್ಬಂಧಿಸಲು ಯತ್ನಿಸುತ್ತಿವೆ. ಡೀಸಲ್ ಎಂಜಿನ್​ನ ವಾಹನಗಳ ತಯಾರಿಕೆ ಬಹಳ ಕಡಿಮೆ ಆಗಿದೆ. ಮುಂದಿನ ಕೆಲ ವರ್ಷಗಳಲ್ಲಿ ಡೀಸಲ್ ಮಾತ್ರವಲ್ಲ ಪೆಟ್ರೋಲ್ ಎಂಜಿನ್​ನ ವಾಹನಗಳ ತಯಾರಿಕೆಯೂ ನಿಂತು ಹೋಗಲಿದೆ. ಪರಿಸರ ಮಾಲಿನ್ಯಕ್ಕೆ ಧಕ್ಕೆಯಾಗುವ ಕಾರಣಕ್ಕೆ ಸರ್ಕಾರಗಳು ಈ ಕ್ರಮ ಕೈಗೊಳ್ಳುತ್ತಿವೆ. ಆದಾಗ್ಯೂ ಕೆಲವಾರು ವರ್ಷಗಳ ಕಾಲ ಡೀಸಲ್ ತೈಲ ಹೆಚ್ಚು ಬಳಕೆಯಲ್ಲಿ ಉಳಿಯುತ್ತದೆ. ಅದಕ್ಕೆ ಬೇಡಿಕೆ ಇದ್ದೇ ಇರುತ್ತದೆ.

ಇನ್ನೂ ಹೆಚ್ಚು ಓದಿ

ಒತ್ತಡದ ನಡುವೆಯೂ ಏರದ ಪೆಟ್ರೋಲ್ ಬೆಲೆ; ಪೆಟ್ರೋಲಿಯಂ ಕಂಪನಿಗಳಿಗೆ ಒಂದು ಲೀಟರ್ ಪೆಟ್ರೋಲ್​ಗೆ ಆಗುತ್ತಿರುವ ನಷ್ಟವೆಷ್ಟು ಗೊತ್ತಾ?

Losses for oil marketing companies on petrol and diesel: ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದ್ದರೂ ಭಾರತದಲ್ಲಿ ಪೆಟ್ರೋಲ್, ಡೀಸಲ್ ಬೆಲೆಗಳು ಏರುತ್ತಿಲ್ಲ. ಇದರಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ ನಷ್ಟದ ಹೊರೆ ಹೆಚ್ಚಾಗುತ್ತಿದೆ. ಒಂದು ಲೀಟರ್ ಪೆಟ್ರೋಲ್ ಮಾರಾಟ ಮಾಡಿದರೆ ಈ ಕಂಪನಿಗಳಿಗೆ ಆಗುತ್ತಿರುವ ನಷ್ಟ 18 ರೂ. ಹಾಗೆಯೇ, ಒಂದು ಲೀಟರ್ ಡೀಸಲ್​ಗೆ 35 ರೂ ನಷ್ಟ ಮಾಡಿಕೊಳ್ಳುತ್ತಿವೆ ಈ ಸರ್ಕಾರಿ ಸ್ವಾಮ್ಯದ ಕಂಪನಿಗಳು.

ಸಂಧಾನ ಮುರಿದುಬಿದ್ದ ಬೆನ್ನಲ್ಲೇ ರಾಕೆಟ್​ನಂತೆ ಮೇಲೇರಿದ ತೈಲ ಬೆಲೆ

Global crude oil prices again cross 100 USD per barrel: ಜಾಗತಿಕ ಕಚ್ಛಾ ತೈಲ ಬೆಲೆಗಳು ಬ್ಯಾರಲ್​ಗೆ ಮತ್ತೊಮ್ಮೆ 100 ಡಾಲರ್ ಗಡಿ ದಾಟಿದೆ. ಡಬ್ಲ್ಯುಟಿಐ ಕ್ರೂಡ್ ಫ್ಯೂಚರ್ಸ್​ನಲ್ಲಿ ಬೆಲೆ 104.25 ಡಾಲರ್ ಇದೆ. ಬ್ರೆಟ್ ಕ್ರೂಡ್​ನಲ್ಲಿ ಬೆಲೆ 101 ಡಾಲರ್ ಇದೆ. ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆ ವಿಫಲವಾಗಿರುವುದು, ಹಾಗೂ ಹಾರ್ಮುಜ್ ಜಲಸಂಧಿಯನ್ನು ತಡೆಯುವುದಾಗಿ ಅಮೆರಿಕ ಹೇಳಿದ್ದು ತೈಲ ಬೆಲೆ ಏರಿಕೆಗೆ ಕಾರಣವಾಗಿವೆ.

ಪೆಟ್ರೋಲಿಯಂ ಉತ್ಪನ್ನಗಳ ರಫ್ತು ಸುಂಕದಲ್ಲಿ ಭರ್ಜರಿ ಹೆಚ್ಚಳ; ಡೀಸಲ್​ಗೆ 55.5 ರೂ, ಎಟಿಎಫ್​ಗೆ 42 ರೂ ಸುಂಕ

Export duty on diese and ATF hike to Rs 55.5 and Rs 42 per liter: ಡೀಸಲ್ ಮೇಲಿನ ರಫ್ತು ಸುಂಕವನ್ನು ಲೀಟರ್​ಗೆ 21.5 ರೂ ಇದ್ದದ್ದು 55.5 ರೂಗೆ ಏರಿಸಲಾಗಿದೆ. ಏವಿಯೇಶನ್ ಟರ್ಬೈನ್ ಇಂಧನದ ಮೇಲಿನ ರಫ್ತು ಸುಂಕವನ್ನು 29.5 ರೂನಿಂದ 42 ರೂಗೆ ಹೆಚ್ಚಿಸಲಾಗಿದೆ. ಇತ್ತೀಚೆಗೆ ಪ್ರೀಮಿಯಮ್ ಡೀಸಲ್ ಮೇಲೆ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು ಪರಿಷ್ಕರಿಲಾಗಿತ್ತು.

ಭಾರತಕ್ಕೆ ಪೆಟ್ರೋಲ್, ಡೀಸಲ್ ಸಮಸ್ಯೆ ವಕ್ಕರಿಸಲಿಲ್ಲ ಯಾಕೆ? ಸರ್ಕಾರದ ಈ ಕೆಲ ಕ್ರಮಗಳೇ ಕಾರಣವಾ?

How India handling oil crisis: ಇರಾನ್ ಯುದ್ಧದಿಂದ ಇಡೀ ಜಗತ್ತೇ ತೈಲ ಬಿಕ್ಕಟ್ಟಿಗೆ ನಲುಗಿಹೋದರೂ ಭಾರತ ಇದ್ದುದರಲ್ಲೇ ಪರಿಸ್ಥಿತಿ ನಿಭಾಯಿಸಿದೆ. ಕೋವಿಡ್ ಸಂದರ್ಭದಲ್ಲಿ ತೋರಿದ ಜಾಣ್ಮೆ ಮತ್ತು ಜಾಗ್ರತೆಯನ್ನು ಭಾರತ ಈಗಲೂ ತೋರಿದೆ. ತೈಲ ಪೂರೈಕೆ ಸುಗಮಗೊಳಿಸಲು ಮತ್ತು ಪೆಟ್ರೋಲಿಯಂ ಸಂಗ್ರಹ ಹೆಚ್ಚಿಸಲು ಮತ್ತು ಪರ್ಯಾಯ ಇಂಧನ ವ್ಯವಸ್ಥೆ ಮಾಡಲು ಸರ್ಕಾರ ತೆಗೆದುಕೊಂಡ ಕೆಲ ಕ್ರಮಗಳು ಭಾರತಕ್ಕೆ ನೆರವಾಗಿವೆ.

ಕದನವಿರಾಮ ಬೆನ್ನಲ್ಲೇ ತೈಲ ಬೆಲೆ ಐತಿಹಾಸಿಕ ಕುಸಿತ; ಪೆಟ್ರೋಲ್, ಡೀಸಲ್ ಬೆಲೆಯೂ ಇಳಿಯುತ್ತಾ?

Crude oil prices crashes shortly after US Iran ceasefire announcement: ಇರಾನ್ ಮತ್ತು ಅಮೆರಿಕ ನಡುವೆ ಕದನವಿರಾಮ ಏರ್ಪಟ್ಟ ಬೆನ್ನಲ್ಲೇ ತೈಲ ಮಾರುಕಟ್ಟೆ ಮೇಲಿನ ಒತ್ತಡ ಕಡಿಮೆಗೊಂಡಿದೆ. ಬ್ಯಾರಲ್​ಗೆ 117 ಡಾಲರ್​ಗಿಂತ ಹೆಚ್ಚಿದ್ದ ಕಚ್ಛಾ ತೈಲ ಬೆಲೆ 90 ಡಾಲರ್ ಆಸುಪಾಸಿಗೆ ಬಂದಿದೆ. ಒಂದೇ ದಿನದಲ್ಲಿ 26 ಡಾಲರ್​ಗೂ ಹೆಚ್ಚು ಕುಸಿತ ಕಂಡಿದೆ. ಇದರಿಂದ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳು ತಗ್ಗುತ್ತವಾ?

ಪೆಟ್ರೋಲ್​ಗೆ ಕೇಂದ್ರ, ರಾಜ್ಯ ತೆರಿಗೆಗಳು, ಕಮಿಷನ್​ಗಳೆಷ್ಟು? ಜಿಎಸ್​ಟಿಯಿಂದ ಬೆಲೆ ಕಡಿಮೆ ಆಗುತ್ತಾ?

How GST can reduce petrol, diesel prices in India: ಭಾರತದಲ್ಲಿ ಪೆಟ್ರೋಲ್, ಡೀಸಲ್ ಮೇಲೆ ವಿಪರೀತವಾದ ಟ್ಯಾಕ್ಸ್​ಗಳಿವೆ. ಕೆಲ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆಯಲ್ಲಿ ತೆರಿಗೆಗಳ ಪಾಲೇ ಶೇ. 50ಕ್ಕಿಂತಲೂ ಹೆಚ್ಚಿದೆ. ಕೇಂದ್ರ ವಿಧಿಸುವ ತೆರಿಗೆಗಳಿಗಿಂತ ರಾಜ್ಯಗಳ ತೆರಿಗೆಗಳು ಹೆಚ್ಚಿವೆ. ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್ ಬೆಲೆಯಲ್ಲಿ ಏರಿಳಿತ ಇರುವುದು ಇದೇ ಕಾರಣಕ್ಕೆ.

ಪ್ರೀಮಿಯಮ್ ಪೆಟ್ರೋಲ್, ಡೀಸಲ್ ಬೆಲೆ ಮತ್ತೆ ಏರಿಕೆ; ಲೀಟರ್​ಗೆ 11 ರೂ ದರ ಹೆಚ್ಚಳ

Premium Petrol and diesel rates increased by OMCs: ತೈಲ ಮಾರುಕಟ್ಟೆ ಕಂಪನಿಗಳು ತಮ್ಮ ಪ್ರೀಮಿಯಮ್ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಹೆಚ್ಚಿಸಿವೆ. ಆದರೆ, ಸಾಧಾರಣ ಪೆಟ್ರೋಲ್, ಡೀಸಲ್ ಬೆಲೆಗಳಲ್ಲಿ ಹೆಚ್ಚಳ ಆಗಿಲ್ಲ. ಇಂಡಿಯನ್ ಆಯಿಲ್​ನ ಒಂದು ಲೀಟರ್ ಎಕ್ಸ್​ಪಿ100 ಪೆಟ್ರೋಲ್ ಬೆಲೆ 149 ರೂನಿಂದ 160 ರೂಗೆ ಏರಿದೆ. ಇನ್ನು, ಎಕ್ಸ್​ಟ್ರಾ ಗ್ರೀನ್ ಡೀಸಲ್ ಬೆಲೆ ಲೀಟರ್​ಗೆ ಒಂದೂವರೆ ರೂ ಹೆಚ್ಚಿದೆ.

ಭಾರತದಲ್ಲಿ ಪೆಟ್ರೋಲ್, ಎಲ್​ಪಿಜಿ, ನ್ಯಾಚುರಲ್ ಗ್ಯಾಸ್ ಪೂರೈಕೆ ಹೇಗಿದೆ? ಸರ್ಕಾರದಿಂದ ಮಾಹಿತಿ

Adequate stocks of petrol and diesel available at all Petrol Pumps in country: ಇರಾನ್ ಯುದ್ಧ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಭಾರತದಲ್ಲೂ ತೈಲ ಮತ್ತು ಅನಿಲ ಪೂರೈಕೆ ಬಗ್ಗೆ ಜನರಿಗೆ ಆತಂಕ ಮುಂದುವರಿದಿದೆ. ಆದರೆ, ಸರ್ಕಾರವು ಪೆಟ್ರೋಲ್, ಡೀಸಲ್, ಎಲ್​ಪಿಜಿ, ಎಲ್​ಎನ್​ಜಿ ದಾಸ್ತಾನು ಸಾಕಷ್ಟಿದೆ ಎಂದು ಮತ್ತೊಮ್ಮೆ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದೆ.

ಏಪ್ರಿಲ್ 1ರಿಂದ ಪೆಟ್ರೋಲ್ ರಫ್ತು ನಿಷೇಧಿಸಿದ ರಷ್ಯಾ; ಭಾರತಕ್ಕೇನು ಪರಿಣಾಮ?

Russia thinks of stopping petrol exports from April 1st: ರಷ್ಯಾ ದೇಶವು ಪೆಟ್ರೋಲ್ ರಫ್ತನ್ನು ನಿಷೇಧಿಸಲು ಯೋಜಿಸಿದೆ. ಏಪ್ರಿಲ್ 1ರಿಂದ ಅದು ಹೊರ ದೇಶಗಳಿಗೆ ಪೆಟ್ರೋಲ್ ಪೂರೈಕೆ ನಿಲ್ಲಿಸಬಹುದು. ಆಂತರಿಕವಾಗಿ ಪೆಟ್ರೋಲ್ ಲಭ್ಯತೆ ಖಚಿತಪಡಿಸಿಕೊಳ್ಳಲು ರಷ್ಯಾ ಈ ಕ್ರಮ ತೆಗೆದುಕೊಳ್ಳುತ್ತಿರಬಹುದು. ಆದರೆ, ಪೆಟ್ರೋಲ್ ರಫ್ತು ನಿಷೇಧವಾದರೂ ಕಚ್ಛಾ ತೈಲ ಪೂರೈಕೆ ನಿಲ್ಲದೇ ಹೋಗಬಹುದು.

ಇರಾನ್-ಇಸ್ರೇಲ್- ಅಮೆರಿಕ ನಡುವಿನ ಯುದ್ಧವು ಜಾಗತಿಕ ಬಿಕ್ಕಟ್ಟನ್ನು ಸೃಷ್ಟಿಸುತ್ತಿವೆ: ಪ್ರಧಾನಿ ಮೋದಿ

Mann Ki Baat: ಪ್ರಸ್ತುತ ಇರಾನ್-ಇಸ್ರೇಲ್-ಅಮೆರಿಕ ನಡುವಿನ ಯುದ್ಧವು ಜಾಗತಿಕ ಬಿಕ್ಕಟ್ಟು ಸೃಷ್ಟಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಇಂದು ಮನ್​ ಕಿ ಬಾತ್​ನ 132ನೇ ಸಂಚಿಕೆಯಲ್ಲಿ ಮಾತನಾಡಿದ ಅವರು, ಯುದ್ಧವನ್ನು ಎದುರಿಸುತ್ತಿರುವ ಈ ಪ್ರದೇಶವು ನಮ್ಮ ಇಂಧನ ಅಗತ್ಯಗಳಿಗೆ ಪ್ರಮುಖ ಕೇಂದ್ರವಾಗಿದೆ ಎಂದು ಪ್ರಧಾನಿ ಹೇಳಿದರು. ಇದು ಪೆಟ್ರೋಲ್ ಮತ್ತು ಡೀಸೆಲ್‌ಗೆ ಸಂಬಂಧಿಸಿದಂತೆ ಜಾಗತಿಕ ಬಿಕ್ಕಟ್ಟನ್ನು ಸೃಷ್ಟಿಸುತ್ತಿದೆ.

ಭಾರತಕ್ಕೆ ಶಾಕ್ ನೀಡಲಿದೆಯೇ ರಷ್ಯಾ? ಏಪ್ರಿಲ್ 1 ರಿಂದ ಕಚ್ಚಾ ತೈಲ ರಫ್ತು ಸ್ಥಗಿತ!

ಏಪ್ರಿಲ್ 1 ರಿಂದ ಕಚ್ಚಾ ತೈಲ ರಫ್ತು ಸ್ಥಗಿತಗೊಳಿಸಲು ರಷ್ಯಾ ನಿರ್ಧರಿಸಿದ್ದು, ಇದು ಭಾರತದ ಇಂಧನ ಮಾರುಕಟ್ಟೆ ಮೇಲೆ ಕರಿನೆರಳು ಬೀರುವ ಸಾಧ್ಯತೆ ಇದೆ. ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಪಡೆಯುತ್ತಿದ್ದ ಭಾರತಕ್ಕೆ ರಫ್ತು ಸ್ಥಗಿತದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಭೀತಿ ಎದುರಾಗಿದೆಯೇ? ಈ ಬೆಳವಣಿಗೆಯಿಂದ ಭಾರತಕ್ಕಾಗುವ ಲಾಭ-ನಷ್ಟಗಳೇನು? ಇಲ್ಲಿದೆ ವಿವರ.

ಅಬಕಾರಿ ಸುಂಕ ಕಡಿತದಿಂದ ಸರ್ಕಾರಕ್ಕೆ ಎರಡೇ ವಾರದಲ್ಲಿ 7,000 ಕೋಟಿ ರೂ ಆದಾಯನಷ್ಟದ ಅಂದಾಜು

Govt faces Rs 7,000 revenue loss in 15 days from excise duty cut on Petrol and Diesel: ಇರಾನ್ ಯುದ್ಧದ ಪರಿಣಾಮ ತೈಲಬೆಲೆಗಳು ಬ್ಯಾರಲ್​ಗೆ 100 ಡಾಲರ್​ಗಿಂತಲೂ ಹೆಚ್ಚಿವೆ. ಪೆಟ್ರೋಲ್, ಡೀಸಲ್ ಬೆಲೆ ಅನೇಕ ದೇಶಗಳಲ್ಲಿ ಸಾಕಷ್ಟು ಏರಿವೆ. ಭಾರತದಲ್ಲಿ ಇವುಗಳ ಬೆಲೆ ಏರಿಕೆ ಆಗದಂತೆ ಸರ್ಕಾರ ಕ್ರಮ ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಅಬಕಾರಿ ಸುಂಕವನ್ನು 10 ರೂ ಇಳಿಸಿದೆ. ಈ ಕ್ರಮದಿಂದ ಸರ್ಕಾರಕ್ಕೆ ಭಾರೀ ಆದಾಯನಷ್ಟವಾಗಲಿದೆ.

ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?