Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar

DK Shivakumar

ಕಾಂಗ್ರೆಸ್‌ ‍ಪಕ್ಷದ, ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್‌ ಅವರು ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರದ ಶಾಸಕರು. ಇವರ ಅಭಿಮಾನಿಗಳು ಇವರನ್ನು ಕನಕಪುರ ಬಂಡೆ ಎಂದೇ ಕೊಂಡಾಡುತ್ತಾರೆ. ಸದ್ಯ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿ ಬ್ರ್ಯಾಂಡ್‌ ಬೆಂಗಳೂರು ಕನಸು ಹೊತ್ತು ಬೆಂಗಳೂರಿನ ಅಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 2023ರ ಚುನಾವಣೆಯ ನೇತೃತ್ವ ವಹಿಸಿಕೊಂಡಿದ್ದ ಇವರು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪ್ರಥಮ ಪುತ್ರರಾಗಿ 15ನೇ ಮೇ, 1962ರಂದು ಡಿಕೆಶಿ ಜನಿಸಿದರು. ಇವರು ಬೆಂಗಳೂರಿನ ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ಯುವ ಕಾಂಗ್ರೆಸ್‍ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾದ್ರು.
ಮೇಕೆದಾಟು ಯೋಜನೆಗಾಗಿ 160 ಕಿ.ಮೀ ಪಾದಯಾತ್ರೆ, 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ವಾತಂತ್ರ್ಯ ನಡಿಗೆ, ರಾಹುಲ್ ಗಾಂಧಿ ಅವರ ಜೊತೆ ಭಾರತ್ ಜೋಡೋ ಯಾತ್ರೆ, ನಾ ನಾಯಕಿ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಉತ್ತೇಜನ ನೀಡುವಂತಹ ಯಶಸ್ವಿ ಕಾರ್ಯಕ್ರಮಗಳನ್ನು ಮಾಡಿ ಕಾಂಗ್ರೆಸ್‌ ಪಕ್ಷದ ಕಟ್ಟಾಳುವಾಗಿ ರಾಜ್ಯದಲ್ಲಿ 136 ಸ್ಥಾನಗಳನ್ನು ಪಡೆಯುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.

ಇನ್ನೂ ಹೆಚ್ಚು ಓದಿ

ಡಿಕೆ ಶಿವಕುಮಾರ್​ರನ್ನು ಭೇಟಿಯಾಗಿ ಕುತೂಹಲ ಕೆರಳುವಂತೆ ಮಾಡಿದ ಎಮ್ಮೆಲ್ಸಿ ರಾಜೇಂದ್ರ ರಾಜಣ್ಣ

ಡಿಸಿಎಂ ಶಿವಕುಮಾರ್ ಮನೆಗೆ ಇಂದು ಅನಿರೀಕ್ಷಿತ ಅತಿಥಿಗಳ ದಂಡು. ಮೊದಲು ಬಿಜೆಪಿ ಸಂಸದ ಬಿವೈ ರಾಘವೇಂದ್ರ, ನಂತರ ಬಿಜೆಪಿ ಮಾಜಿ ಸಂಸದ ಜಿಎಂ ಸಿದ್ದೇಶ್ವರ ಮತ್ತು ಕೊನೆಯಲ್ಲಿ ರಾಜೇಂದ್ರ. ಶಿವಕುಮಾರ್ ಮತ್ತು ರಾಜಣ್ಣ ನಡುವೆ ಎಣ್ಣೆ ಸೀಗೆಕಾಯಿ ಸಂಬಂಧ, ಸಹಕಾರ ಸಚಿವ ಕೆಪಿಸಿಸಿ ಅಧ್ಯಕ್ಷನಾಗಲು ಪ್ರಯತ್ನ ಮಾಡುತ್ತಿರುವುದು ಮತ್ತು ಹೆಚ್ಚುವರಿ ಡಿಸಿಎಂಗಳು ಬೇಕು ಅಂತ ಹೇಳಿರೋದು ಶಿವಕುಮಾರ್​​ಗೆ ಸರಿಕಂಡಿಲ್ಲ.

ಶಿವಕುಮಾರ್ ಒಬ್ಬ ಹಿಂದೂ; ನಾಮ, ವಿಭೂತಿ ಹಚ್ಚಿಕೊಳ್ಳುತ್ತಾರೆ, ಮುನಿರತ್ನಗೇನು ತೊಂದರೆ? ರವಿಕುಮಾರ್ ಗಣಿಗ

ಇಂದು ನಗರದಲ್ಲಿ ದಿಢೀರನೆ ಸುದ್ದಿಗೋಷ್ಠಿಯೊಂದನ್ನು ನಡೆಸಿದ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ನಾಯ್ಡು ಡಿಸಿಎಂ ಡಿಕೆ ಶಿವಕುಮರ್ ರನ್ನು ಉಗ್ರವಾಗಿ ಟೀಕಿಸಿದರು. ಅವರನ್ನು ಹಗಲೆಲ್ಲ ಟೀಕಿಸಿದ್ದಕ್ಕೆ ಮುನಿರತ್ನ ಸಾಕಷ್ಟು ಅನುಭವಿಸುತ್ತಿದ್ದಾರೆ, ಅದನ್ನು ಮುಂದುವರಿಸಿದರೆ ಇನ್ನಷ್ಟು ಅನುಭವಿಸುತ್ತಾರೆ ಎಂದು ಶಾಸಕ ರವಿ ಕುಮಾರ್ ಗಣಿಗ ಹೇಳಿದರು.

ಬಿಜೆಪಿ ಭದ್ರಕೋಟೆಯೇ ಡಿಕೆ ಶಿವಕುಮಾರ್ ಟಾರ್ಗೆಟ್: ನೆಲೆ ಇಲ್ಲದಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಸಾಫ್ಟ್​ ಹಿಂದುತ್ವದ ಮಂತ್ರ

ಬಿಜೆಪಿಯ ಭದ್ರಕೋಟೆ ಎನ್ನಲಾದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರಾವಳಿ ಕರ್ನಾಟಕದಲ್ಲಿ ಕಾಂಗ್ರೆಸ್​​ನ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಓಡಾಟ ಹೆಚ್ಚಾಗಿದೆ. ಸಾಫ್ಟ್ ಹಿಂದುತ್ವದ ಮೂಲಕ ಬಿಜೆಪಿಯ ಕೋಟೆ ಬೇಧಿಸಲು ಅವರು ರಣತಂತ್ರ ಹೂಡಿದ್ದಾರೆ ಎನ್ನಲಾಗಿದೆ. ಹಾಗಾದರೆ, ಡಿಸಿಎಂ ಡಿಕೆ ಶಿವಕುಮಾರ್ ಅವರ ಕರಾವಳಿ ಶಿಕಾರಿ ರಹಸ್ಯ ಏನು? ಬಂಡೆ ಹೆಜ್ಜೆಯಲ್ಲಿನ ರಣತಂತ್ರದ ಹೆಗ್ಗುರುತುಗಳು ಹೇಗಿವೆ? ಇಲ್ಲಿದೆ ನೋಡಿ.

ಮಗನ ಮದುವೆ ಆಮಂತ್ರಣ ಪತ್ರಿಕೆ ನೀಡಲು ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಬಿಜೆಪಿ ಸಂಸದ ರಾಘವೇಂದ್ರ

ಚುನಾಯಿತ ಪ್ರತಿನಿಧಿಗಳು ಯಾವ ಪಕ್ಷದವರೇ ಆಗಿರಲಿ, ಶಿವಕುಮಾರ್ ಅವರನ್ನು ಭೇಟಿಯಾಗುವುದರಲ್ಲಿ ತಪ್ಪಿಲ್ಲ, ಅವರು ತಮ್ಮ ತಮ್ಮ ಕ್ಷೇತ್ರಗಳ ಅಭಿವೃದ್ಧಿ ವಿಷಯ ಚರ್ಚಿಸಲು ಶಿವಕುಮಾರ್ ಅವರನ್ನು ಭೇಟಿಯಾಗುತ್ತಾರೆ, ಅವರು ರಾಜ್ಯದ ಉಪ ಮುಖ್ಯಮಂತ್ರಿ ಅನ್ನೋದನ್ನು ಮರೆಯಬಾರದು ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದರು.

ಇತಿಹಾಸದಲ್ಲಿ ಮೊದಲ ಬಾರಿಗೆ ಮಾದಪ್ಪನ ಬೆಟ್ಟದಲ್ಲಿ ಸಂಪುಟ ಸಭೆ: ಹಲವು ನಿರೀಕ್ಷೆ

ಏಪ್ರಿಲ್ 24 ರಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಮೈಸೂರು ವಿಭಾಗದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಸ್ತಾವನೆಗಳು ಚರ್ಚೆಗೆ ಬರಲಿವೆ. ಜಿಲ್ಲೆಯ ಪ್ರವಾಸೋದ್ಯಮ, ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ನಿರೀಕ್ಷಿಸಲಾಗಿದೆ. ಸಭೆಗೆ ಸಂಪೂರ್ಣ ತಯಾರಿ ನಡೆದಿದೆ.

ಸಿದ್ದರಾಮಯ್ಯ ಮತ್ತು ಶಿವಕುಮಾರ್ ದಿಗ್ಗಜರು, ಧೀಮಂತ ನಾಯಕರು ಮತ್ತು ಮಣ್ಣಿನ ಮಕ್ಕಳು: ಸೋಮಶೇಖರ್

ರಾಜಕೀಯವಾಗಿ ಬೆಳೆಯಲು ತನಗೆ ಎಲ್ಲ ರೀತಿಯ ಮತ್ತು ಪ್ರತಿ ಹಂತದಲ್ಲಿ ಸಹಾಯ ಮಾಡಿದ್ದು ಶಿವಕುಮಾರ್, ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅವರು ಅದರ ಅಭಿವೃದ್ಧಿಗೆ ಪಣತೊಟ್ಟು ನಿಂತಿದ್ದಾರೆ, ನಗರದಲ್ಲಿ ವ್ಹೈಟ್ ಟಾಪಿಂಗ್ ಮತ್ತು ಪ್ರಮುಖ ರಸ್ತೆಗಳ ಡಾಂಬರೀಕರಣ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ, ಬೆಂಗಳೂರು ಅಬಿವೃದ್ಧಿಗೆ ಸಿಎಂ 1ಲಕ್ಷ ಕೋಟಿ ರೂ ಬಿಡುಗಡೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಹೇಳಿದರು.

ಆಶ್ಚರ್ಯಕರ ಬೆಳವಣಿಗೆಯೊಂದರಲ್ಲಿ ಶಿವಕುಮಾರ್ ಮನೆಗೆ ಬೋಕೆ ಹಿಡಿದು ಬಂದ ಮುರುಗೇಶ್ ನಿರಾಣಿ

ಮುರುಗೇಶ್ ನಿರಾಣಿ ಮತ್ತು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ಹಾವು-ಮುಂಗುಲಿಯ ಸಂಬಂಧ. ಯತ್ನಾಳ್ ಮತ್ತು ಶಿವಕುಮಾರ್ ನಡುವಿನ ಸಂಬಂಧ ಹೇಗೆ ಅಂತ ಜಗಜ್ಜಾಹೀರು. ದುಶ್ಮನ್ ಕಾ ದುಶ್ಮನ್ ದೋಸ್ತ್ ಅನ್ನೋ ಕಾರಣಕ್ಕೆ ನಿರಾಣಿಯವರು ಶಿವಕುಮಾರ್ ಮನೆಗೆ ಬಂದಿರಲಾರರು, ಯಾಕೆಂದರೆ ಬಿಜೆಪಿ ನಾಯಕರು ಈಗ ಯತ್ನಾಳ್ ಬಗ್ಗೆ ಮಾತು ಕೂಡ ಅಡುತ್ತಿಲ್ಲ.

ಜಾತಿ ಗಣತಿ ವರದಿ ಮೇಲಿನ ಚರ್ಚೆ ಅಪೂರ್ಣ, ಮುಂದಿನ ಸಭೆಯಲ್ಲಿ ತೀರ್ಮಾನ: ಕೆಎನ್ ರಾಜಣ್ಣ

ವರದಿಯ ಬಗ್ಗೆ ಯಾವುದೇ ಸಚಿವ ವಿರೋಧ ವ್ಯಕ್ತಪಡಿಸಿಲ್ಲ, ಅವರಿಗೆ ಇರುವ ಸಂದೇಹಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದ್ದಾರೆ, ಬೇರೆ ಕೆಲವರು ಮತ್ತಷ್ಟು ವಿವರಗಳನ್ನು ಕೇಳಿದ್ದಾರೆ, ವರದಿಯನ್ನು ಅರ್ಥಮಾಡಿಕೊಳ್ಳಲು ಮತ್ತಷ್ಟು ಕಾಲಾವಕಾಶ ಬೇಕು ಅಂತ ಅವರು ಹೇಳಿದ್ದಾರೆ, ಸರಳವಾಗಿ ಹೇಳಬೇಕೆಂದರೆ ಸಭೆಯಲ್ಲಿ ಚರ್ಚೆ ಅಪೂರ್ಣವಾಗಿದೆ ಎಂದು ಸಚಿವ ರಾಜಣ್ಣ ಹೇಳಿದರು

ಒಕ್ಕಲಿಗರಲ್ಲಿ ಬಡವರಿಲ್ವಾ? ಲಿಂಗಾಯತರಲ್ಲಿ ಬಡವರಿಲ್ವಾ: ಜಾತಿ ಗಣತಿ ಚರ್ಚೆ ವೇಳೆ ಏರು ಧ್ವನಿಯಲ್ಲಿ ಪ್ರಶ್ನಿಸಿದ ಡಿಕೆ ಶಿವಕುಮಾರ್

ಜಾತಿ ವರ್ಗೀಕರಣಕ್ಕೆ ಡಿಕೆ ಶಿವಕುಮಾರ್ ಅಸಮಾಧಾನ: ಜಾತಿ ಗಣತಿ ವಿಚಾರವಾಗಿ ಗುರುವಾರ ನಡೆದ ಕರ್ನಾಟಕ ಸಚಿವ ಸಂಪುಟ ವಿಶೇಷ ಸಭೆ ಒಕ್ಕಲಿಗ ಹಾಗೂ ಲಿಂಗಾಯತ ಸಚಿವರ ತೀವ್ರ ವಿರೋಧಕ್ಕೆ ಸಾಕ್ಷಿಯಾಯಿತು. ಇದೇ ವೇಳೆ, ಡಿಸಿಎಂ ಡಿಕೆ ಶಿವಕುಮಾರ್ ಜಾತಿ ವರ್ಗೀಕರಣ ವಿಚಾರವಾಗಿ ಜೋರಾದ ದನಿಯಲ್ಲಿ ಮಾತನಾಡಿದರು.

ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಕೋಲಾಹಲ: ಸಚಿವರ ಏರು ಧ್ವನಿ, ಇಲ್ಲಿದೆ ಇನ್​ಸೈಡ್ ಡಿಟೇಲ್ಸ್

ಇವತ್ತು ಇಡೀ ರಾಜ್ಯದ ಚಿತ್ತ ಸಿಎಂ ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೆಟ್ ಮೇಲೆ ನೆಟ್ಟಿತ್ತು. ಜಾತಿ ಗಣತಿ ವರದಿಯನ್ನ ಅನುಷ್ಠಾನ ಮಾಡೇ ಬಿಡುತ್ತಾರಾ? ಅಥವಾ ತಿರಸ್ಕಾರ ಮಾಡುತ್ತಾರಾ ಎನ್ನುವುದು ಕುತೂಹಲ ಎಲ್ಲರಲ್ಲೂ ಕೆರಳಿತ್ತು. ನಿಗದಿಯಂತೆ ಕ್ಯಾಬಿನೆಟ್ ಸಭೆಯೂ ಆರಂಭವಾಯ್ತು. ಆದ್ರೆ, ಅಲ್ಲಾಗಿದ್ದೇ ಬೇರೆ. ಕ್ಯಾಬಿನೆಟ್​ನಲ್ಲಿ ಯಾವುದೇ ನಿರ್ಧಾರಕ್ಕೆ ಬಾರದೇ ಸಂಪುಟ ಸಭೆಯನ್ನ ಮುಂದೂಡಲಾಗಿದೆ. ಇನ್ನು ಸಚಿವ ಸಂಪುಟ ಸಭೆಯಲ್ಲಿ ನಾನಾ ರೀತಿಯ ಚರ್ಚೆಗಳು ಆಗಿದ್ದು, ಈ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.